Connect with us

ದಿನದ ಸುದ್ದಿ

ಜೀವನಾಧಾರ ಮತ್ತು ಉತ್ತಮ ಅವಕಾಶಗಳಿಗಾಗಿ ಚಾಲನಾ ವೃತ್ತಿ; ಮಹಿಳೆಯರನ್ನು ಬೆಂಬಲಿಸುವ ರಾಷ್ಟ್ರೀಯ ಅಭಿಯಾನ

Published

on

ಸುದ್ದಿದಿನ,ಬೆಂಗಳೂರು : ಯುನೈಟೆಡ್ ಕಿಂಗ್ಲಂ (ಯುಕೆ) ಮೂಲದ ಶೆಲ್ ಫೌಂಡೇಶನ್ ಮತ್ತು ಯುಕೆ ಸರ್ಕಾರಗಳ ಸಹಭಾಗಿತ್ವದಲ್ಲಿ ಮೂವಿಂಗ್ ವುಮೆನ್ ಸೋಷಿಯಲ್ ಇನಿಷಿಯೇಟಿವ್ ಫೌಂಡೇಶನ್ (MOWO) “ಮೂವಿಂಗ್ ಬೌಂಡರೀಸ್” ಎಂಬ ಅಭಿಯಾನವನ್ನು ಆರಂಭಿಸಿದೆ.

ಇದು, ಮಹಿಳೆಯರು ಚಾಲನಾ ಕೌಶಲವನ್ನು ಪಡೆದು ವ್ಯವಸ್ಥೆಯಲ್ಲಿನ ಅಡೆತಡೆಯನ್ನು ನಿವಾರಿಸಿಕೊಂಡು ಸಾರಿಗೆ ವ್ಯವಹಾರ ಕ್ಷೇತ್ರದಲ್ಲಿ ಚಾಲನೆಯನ್ನು ವೃತ್ತಿಯನ್ನಾಗಿ ಸ್ವೀಕರಿಸುವುದನ್ನು ಉತ್ತೇಜಿಸುವ ಅಭಿಯಾನವಾಗಿದೆ. ಟ್ಯಾಕ್ಸಿ ಮತ್ತು ಇ-ರಿಕ್ಷಾ ಚಾಲಕರಾಗಿ ಅಥವಾ ಇ-ಕಾಮರ್ಸ್ ಕಂಪನಿಗಳಿಗೆ ಡೆಲಿವರಿ ಏಜೆಂಟ್ಸ್ ಆಗಿ ಕಾರ್ಯನಿರ್ವಹಿಸುವುದಕ್ಕೆ ಪ್ರೇರಣೆ ನೀಡಲಾಗುತ್ತದೆ.

ಈ ಅಭಿಯಾನದಲ್ಲಿ, MOWO ಸಂಸ್ಥಾಪಕರಾದ ಜೈ ಭಾರತಿ ಅವರು ತಮ್ಮ ಮೋಟಾರ್ ಬೈಕ್‌ನಲ್ಲಿ ಭಾರತದಾದ್ಯಂತ ಅಕ್ಟೋಬರ್ 11ರಿಂದ 40 ದಿನಗಳ ಕಾಲ ಪ್ರವಾಸ ಮಾಡಲಿದ್ದಾರೆ. ಈ ಅವಧಿಯಲ್ಲಿ ಅವರು 20 ಕ್ಕೂ ಅಧಿಕ ನಗರಗಳಿಗೆ ಭೇಟಿ ನೀಡಿ ಅಲ್ಲಿ ಮಹಿಳೆಯರು ಚಾಲನಾ ಕೌಶಲ ಅಭಿವೃದ್ಧಿ ಪಡಿಸಿಕೊಳ್ಳುವುದರಿಂದ ಅವರಿಗೆ ಉದ್ಯೋಗಾವಕಾಶ ಹೆಚ್ಚುತ್ತದೆ ಎಂಬ ಅರಿವು ಮೂಡಿಸುವುದು ಮತ್ತು ಚಾಲನಾ ವೃತ್ತಿ ಕಲಿಕೆಗೆ ಉತ್ತೇಜನ ನೀಡುವ ಕೆಲಸ ಮಾಡುತ್ತಾರೆ.

ಅವರು ಈ ಪ್ರವಾಸದ ಅಂಗವಾಗಿ ಇಂದು ಬೆಂಗಳೂರಿಗೆ ತಲುಪಿದ್ದಾರೆ. ಹೈದರಾಬಾದ್‌ನಿಂದ ಅವರ ಪ್ರವಾಸ ಆರಂಭವಾಗಿದ್ದು, ಮುಂದೆ ಚೆನ್ನೈ, ಕೊಚ್ಚಿ, ಗೋವಾ, ಪುಣೆ, ಮುಂಬೈ, ಸೂರತ್, ಅಹಮದಾಬಾದ್, ಉದಯಪುರ್, ಜೈಪುರ, ಅಮೃತಸರ, ಶ್ರೀನಗರ, ನವದೆಹಲಿ, ಲಖನೌ, ಅಲಹಾಬಾದ್, ಪಟನಾ, ಗುವಾಹಟಿ, ಕೋಲ್ಕತ, ರಾಂಚಿ, ಭುವನೇಶ್ವರ ಮತ್ತು ಇತರೆ ನಗರಗಳಿಗೆ ಭೇಟಿ ನೀಡುವವರಿದ್ದಾರೆ.

ಮಹಿಳೆಯರಲ್ಲಿ ಚಾಲನಾ ಶಕ್ತಿ ಮಹತ್ವವನ್ನು ಸಾರುತ್ತ, ಪ್ರಯಾಣದಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುತ್ತ ಅವರು ಸಾಗುತ್ತಿದ್ದಾರೆ. ಅಲ್ಲದೆ, ಮಹಿಳೆಯರು ತಮ್ಮ ಬದುಕಿನ ಎಲ್ಲ ಆಯಾಮಗಳಲ್ಲೂ ತಮ್ಮ ವ್ಯಾಪ್ತಿಯನ್ನು ವಿಸ್ತರಿಸಲು ಸುರಕ್ಷಿತವಾಗಿ ಓಡಿಸುವ ಮತ್ತು ಪ್ರಯಾಣಿಸುವ ಶಕ್ತಿಯನ್ನು ಪಡೆದುಕೊಳ್ಳುವ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸುವುದು ಕೂಡ ಅವರ ಉದ್ದೇಶ, ಡ್ರೈವಿಂಗ್ ಕಲಿಯುವುದು ಮಾತ್ರವಲ್ಲದೆ ಸ್ವಂತ ಇಲೆಕ್ನಿಕ್ ವಾಹನವನ್ನು ಖರೀದಿಸಿ ಅವುಗಳ ಮೂಲಕ ಆದಾಯ ಗಳಿಸುವುದಕ್ಕೆ ಅನುವು ಮಾಡಿಕೊಡುವುದು. ಇಲೆಕ್ನಿಕ್ ವಾಹನಗಳನ್ನು ಬಳಸುವುದರಿಂದಾಗಿ ಕಾರ್ಬನ್ ಹೊರಸೂಸುವಿಕೆ ತಗ್ಗಿಸುವ ಮೂಲಕ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ಸಾಧ್ಯವಾಗಲಿದೆ ಎಂಬ ಆಶಯವನ್ನೂ ಅವರು ಪ್ರಚುರ ಪಡಿಸುತ್ತಿದ್ದಾರೆ.

‘ಇವನ್ ಕಾರ್ಗೊ’ ಎಂಬ ಸಾಮಾಜಿಕ ಉದ್ಯಮವೊಂದು ಇಲೆಕ್ನಿಕ್ ವಾಹನಗಳ ಮಾಲೀಕತ್ವ ಹೊಂದಲು ಮಹಿಳೆಯರಿಗೆ ಬೇಕಾದ ತರಬೇತಿ, ಉದ್ಯೋಗಾವಕಾಶಕ್ಕೆ ಬೇಕಾದ ಕೌಶಲಗಳನ್ನು ಒದಗಿಸುವ ಕೆಲಸ ಮಾಡುತ್ತಿದೆ. ಈ ಸಂಸ್ಥೆ ಕೂಡ ಈ ಅಭಿಯಾನವನ್ನು ಬೆಂಬಲಿಸುತ್ತಿದೆ.

“ಮೂವಿಂಗ್ ಬೌಂಡರೀಸ್’ ಬಗ್ಗೆ ಪ್ರತಿಕ್ರಿಯಿಸಿದ ‘MOWO’ ಸಂಸ್ಥಾಪಕರಾದ ಜೈ ಭಾರತಿ ಅವರು ಹೇಳಿದ್ದಿಷ್ಟು – ಜಗತ್ತಿನಾದ್ಯಂತ ಮಹಿಳೆಯರ ಓಡಾಟದ ಮೇಲೆ ಒಂದಷ್ಟು ನಿಯಮ, ನಿಬಂಧನೆಗಳು ಇವೆ. ಇದೇ ಕಾರಣಕ್ಕೆ ಅವರು ಒಂದು ಉತ್ತಮ ಶಿಕ್ಷಣ ಪಡೆಯುವುದಕ್ಕೋ ಅಥವಾ ಸಂಕೀರ್ಣ ಉದ್ಯೋಗ ಮಾಡುವುದಕ್ಕೋ ಅಥವಾ ಪ್ರಯಾಣ ಸುರಕ್ಷಿತವಲ್ಲ ಎಂಬ ಕಾರಣಕ್ಕೂ ದೀರ್ಘ ದೂರ ಪ್ರಯಾಣಿಸುವುದು ಸಾಧ್ಯವಾಗುತ್ತಿಲ್ಲ.

ಇದರಿಂದಾಗಿ ಅವರಿಗೆ ಬಹಳ ಸೀಮಿತ ಉದ್ಯೋಗಾವಕಾಶವಷ್ಟೇ ಸಿಗುತ್ತಿದೆ. ದೇಶದ ಎಲ್ಲ ವರ್ಗದ ಮಹಿಳೆಯರನ್ನು ಭೇಟಿ ಮಾಡುವುದಕ್ಕೆ ನನ್ನ ಮೋಟಾರ್ ಬೈಕ್‌ನಲ್ಲಿ ಕೈಗೊಳ್ಳುತ್ತಿರುವ ಈ 40 ದಿನಗಳ ಪ್ರವಾಸ ನಿಜಕ್ಕೂ ಖುಷಿ ಮತ್ತು ಉತ್ತಮ ಅನುಭವವನ್ನು ಕೊಡುವಂಥದ್ದು.

ಚಾಲನೆಯನ್ನು ವೃತ್ತಿಯನ್ನಾಗಿ ಸ್ವೀಕರಿಸುವ ಮಹಿಳೆಯರಿಗೆ ಅವರ ಉದ್ಯೋಗ ಮಾಡುವುದಕ್ಕೆ ಉತ್ತೇಜನ ನೀಡುವಂಥದ್ದು ಮತ್ತು ಅದಕ್ಕೆ ಬೇಕಾದ ಕಾರ್ಯಾಗಾರ ಆಯೋಜಿಸುವುದು ಈ ಪ್ರವಾಸದ ಉದ್ದೇಶ, ಚಾಲನೆಯನ್ನು ವೃತ್ತಿಯನ್ನಾಗಿ ಸ್ವೀಕರಿಸುವುದು ಮಹಿಳೆಯರಿಂದಲೂ ಸಾಧ್ಯವಿದೆ ಎಂಬ ವಿಶ್ವಾಸವನ್ನು ಅವರಲ್ಲಿ ಮೂಡಿಸಬೇಕು.

ಸಾರಿಗೆ ಕ್ಷೇತ್ರದಲ್ಲಿ ಮಹಿಳೆಯರಿಗೂ ಅವಕಾಶವಿದ್ದು, ಸುರಕ್ಷಿತ ವಾತಾವರಣವನ್ನು ಸೃಷ್ಟಿಸುವುದು ಮತ್ತು ಅವರು ತಮ್ಮ ಸ್ವಂತ ವಾಹನಗಳನ್ನು ಚಲಾಯಿಸಿಕೊಂಡು ಜೀವನೋಪಾಯವನ್ನು ಕಂಡುಕೊಳ್ಳುವಂತೆ ಮಾಡಬೇಕು. ಪುರುಷ ಪ್ರಧಾನವಾಗಿರುವ ಈ ಕ್ಷೇತ್ರದಲ್ಲಿ ಮಹಿಳೆಯರಿಗೂ ಉದ್ಯೋಗಾವಕಾಶ ಹೆಚ್ಚಿಸುವುದು ಉತ್ತಮ ನಡೆಯಾಗಿದೆ.”

ಪಾಲುದಾರಿಕೆ ಕುರಿತು ಪ್ರತಿಕ್ರಿಯಿಸುತ್ತ ಶಲ್ ಫೌಂಡೇಶನ್‌ನ ಶ್ರೀಮತಿ ಶಿಪ್ರಾ ನಯ್ಯರ್, “ನಾವು ‘ಮೂವಿಂಗ್ ಬೌಂಡರೀಸ್ ಗೆ ಚಾಲನೆ ನೀಡಿದ್ದೇವೆ. ಇದು ಮಹಿಳೆಯರಿಗಾಗಿ ಸುರಕ್ಷಿತ, ಕೈಗೆಟಕುವ ಮತ್ತು ಸ್ವಚ್ಛ ಸಾರಿಗೆಯನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ಈ ಮೂಲಕ ಮಹಿಳೆಯರು ಅವರ ತಮ್ಮ ಬದುಕಿಗೆ ಅಗತ್ಯ ಮೂಲಸೌಕರ್ಯಗಳಾದ ಆರೋಗ್ಯಸೇವೆ, ಶಿಕ್ಷಣ ಮತ್ತು ಉದ್ಯೋಗ ಹೊಂದುವಂತಾಗಬೇಕು.

ಇ-ರಿಕ್ಷಾಗಳು ಮತ್ತು ಡೆಲಿವರಿ ಏಜೆಂಟ್ ಮುಂತಾದ ಕೆಲಸಗಳ ಮೂಲಕ ಸಾರಿಗೆ ಸಂಬಂಧಿತ ವಲಯಗಳಲ್ಲಿ ತಮ್ಮ ವಾಹನಗಳ ಮಾಲೀಕರು, ಉದ್ಯಮಿಗಳಾಗುವುದನ್ನು ಕಲಿಯುವ ಮೂಲಕ ಹೆಚ್ಚಿನ ಮಹಿಳೆಯರು ಈ ಕ್ಷೇತ್ರಕ್ಕೆ ಕಾಲಿರಿಸುವಂತಹ ವಾತಾವರಣವನ್ನು ನಿರ್ಮಿಸುವ ಕಡೆಗೆ ಗಮನಹರಿಸುವುದು. ಮಹಿಳೆಯರು ಹೆಚ್ಚು ಹೆಚ್ಚು ಚಲನಶೀಲರಾಗುವ ನಿಟ್ಟಿನಲ್ಲಿ ಅವರಿಗೆ ನೆರವಾಗುವುದು ಮತ್ತು ಸಮಾನವಾದ ಅವಕಾಶಗಳು ಅವರಿಗೆ ಸಿಗಬೇಕು ಎಂಬುದು ನಮ್ಮ ಮಹತ್ವಾಕಾಂಕ್ಷೆಯಾಗಿದೆ.

ಮುಂದಿನ 5 ವರ್ಷಗಳ ಅವಧಿಯಲ್ಲಿ ಕಡಿಮೆ ಆದಾಯ ಹೊಂದಿರುವ ಮಹಿಳೆಯರನ್ನು ಗುರುತಿಸಿ ಅವರಿಗೆ ತರಬೇತಿ ನೀಡುವ ಮತ್ತು ಉದ್ಯೋಗ ಒದಗಿಸುವ ಇಂತಹ ಉದ್ಯಮಗಳನ್ನು ಇನ್ನಷ್ಟು ಸ್ಥಾಪಿಸುವುದನ್ನು ಬೆಂಬಲಿಸುವ ಕೆಲಸ ಮಾಡುತ್ತೇವೆ. ಇದರಂತೆ 100 ಕ್ಕೂ ಹೆಚ್ಚು ನಗರಗಳಲ್ಲಿ ಮತ್ತು ಗ್ರಾಮಗಳಲ್ಲಿ ಗಣನೀಯವೆನ್ನುವ ಪ್ರಮಾಣದಲ್ಲಿ ಮಹಿಳಾ ಚಾಲಕರು ಸ್ವಂತ ವಾಹನ ಮತ್ತು ಇಲೆಕ್ನಿಕ್ ವಾಹನ ಓಡಿಸುವುದನ್ನು ನಾವು ಕಾಣುವವರಿದ್ದೇವೆ. ಭಾರತದಾದ್ಯಂತ ಇರುವ ಇತರೆ ಮಹಿಳೆಯರಿಗೆ ಇದರಿಂದ ಸುರಕ್ಷಿತ ಸಾರಿಗೆ ಮತ್ತು ಸಂಪರ್ಕವನ್ನು ಇದು ಒದಗಿಸಲಿದೆ.”

ಮಹಿಳೆಯರಿಗಾಗಿ ಉದ್ಯೋಗ ಮತ್ತು ಉದ್ಯಮಶೀಲತೆಯ ಅವಕಾಶಗಳನ್ನು ಉತ್ತೇಜಿಸುವುದು ಶಟ್ ಫೌಂಡೇಶನ್‌ನ ಪ್ರಮುಖ ಗುರಿಯಾಗಿರುತ್ತದೆ. ಯುಕೆ ಸರ್ಕಾರ ಮತ್ತು ಶೆಲ್ ಫೌಂಡೇಶನ್ ಜತೆಯಾಗಿ “POWERED (ಪ್ರೊಮೋಶನ್ ಆಫ್ ವುಮೆನ್ ಇನ್ ಎನರ್ಜಿ ರಿಲೇಟೆಡ್ ಎಂಟರ್‌ಪ್ರೈಸಸ್ ಫಾರ್ ಡೆವಲಪ್‌ಮೆಂಟ್)ಗೆ 2017ರಲ್ಲಿ ಚಾಲನೆ ನೀಡಿದೆ.

ಇದು ಮಹಿಳಾ ಕೇಂದ್ರಿತ ಕಾರ್ಯಕ್ರಮವಾಗಿದ್ದು ಭಾರತದಲ್ಲಿ ಕ್ಲೀನ್ ಎನರ್ಜಿ ಮತ್ತು ಮೊಬಿಲಿಟಿ ವ್ಯಾಲ್ಯೂ ಚೇನ್ ಕ್ಷೇತ್ರದಲ್ಲಿ ಮಹಿಳಾ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶ ಹೊಂದಿದೆ. ಸಾರಿಗೆ ಮತ್ತು ಸರಕು ಸಾಗಣೆ ಕ್ಷೇತ್ರದಲ್ಲಿನ ಉದ್ಯೋಗ ಹೊಂದುವುದಕ್ಕೆ ಅದೇ ರೀತಿ ಸ್ವಂತ ಇಲೆಕ್ನಿಕ್ ವಾಹನಗಳನ್ನು ಹೊಂದಿ ಆದಾಯಗಳಿಸುವುದಕ್ಕೆ POWERED ಪ್ರೋಗ್ರಾಂ ಬೆಂಬಲ ನೀಡುತ್ತದೆ.

ಶಲ್ ಫೌಂಡೇಶನ್ ಪರಿಚಯ

ಶೆಲ್ ಫೌಂಡೇಶನ್ ಎಂಬುದು ಯುಕೆಯಲ್ಲಿ ನೋಂದಾಯಿತ (ನೋಂದಾಯಿತ ದತ್ತಿ ಸಂಖ್ಯೆ: 1080999) ದತ್ತಿ ಸಂಸ್ಥೆಯಾಗಿದೆ. ಕಡಿಮೆ ಆದಾಯ ಹೊಂದಿದ ಸಮುದಾಯದ ಜನರಿಗೆ ಬೆಂಬಲ ನೀಡುತ್ತ ಅವರ ಬಡತನ ಮತ್ತು ಸಂಕಷ್ಟ ನಿವಾರಣೆಗೆ ನೆರವಾವುದಕ್ಕಾಗಿ ಕೆಲಸ ಮಾಡುತ್ತಿದೆ. ವ್ಯಾಪಾರ ಸೃಷ್ಟಿಸಲು ಮತ್ತು ಹೆಚ್ಚಿಸಲು ನಾವು ನೆರವು ನೀಡುತ್ತಿದ್ದು, ವಿಶೇಷವಾಗಿ ಎನರ್ಜಿ ಮತ್ತು ಕೈಗೆಟಕುವ ದರದ ಸಾರಿಗೆ ಅಂದರೆ ಕಾರ್ಯಸಾಧುವಾದ ಯೋಜನೆಗಳಿಗೆ ನೆರವಾಗುತ್ತೇವೆ.

ಭಾರತದಲ್ಲಿ ಯುಕೆ ಸರ್ಕಾರದ ಚಟುವಟಿಕೆ

ಯುಕೆ-ಭಾರತ ಪಾಲುದಾರಿಕೆಯು ಉತ್ತಮ ಕೆಲಸಗಳಿಗೆ ನೆರವಾಗುತ್ತಿದ್ದು, ಹೂಡಿಕೆ ಮತ್ತು ವ್ಯಾಪಾರ ಹೆಚ್ಚಿಸಲು, ಎರಡೂ ರಾಷ್ಟ್ರಗಳಲ್ಲಿ ಉದ್ಯೋಗ ಮತ್ತು ಸಂಪತ್ತು ಹೆಚ್ಚಿಸಲು, ಎರಡೂ ರಾಷ್ಟ್ರಗಳಿಗೂ ಅನ್ವಯಿಸುವ ಜಾಗತಿಕ ವಿಚಾರಗಳು ವಿಶೇಷವಾಗಿ ಬಡತನ, ಹವಾಮಾನ ವೈಪರೀತ್ಯ: ಜ್ಞಾನ ಮತ್ತು ತಂತ್ರಜ್ಞಾನದ ಬಳಕೆಗಳಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿವೆ.

ಮೂವಿಂಗ್ ವುಮೆನ್ ಕುರಿತು (MOWO)

ಕ್ರಾಂತಿಕಾರಿ ಉಪಕ್ರಮವಾಗಿರುವ MOWO ನ ಮೂಲ ಹೈದರಾಬಾದ್, ಇದು ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆ, ಮಹಿಳ ಸ್ವತಂತ್ರಳಾಗಿ ದ್ವಿಚಕ್ರ ಅಥವಾ ತ್ರಿಚಕ್ರ ವಾಹನಗಳ ತರಬೇತಿ ಪಡೆದು ಅವರ ಜೀವನಾಧಾರ ಮತ್ತು ಉದ್ಯೋಗಾವಕಾಶ ಕಂಡುಕೊಳ್ಳಬೇಕು ಎಂಬುದು ಈ ಉಪಕ್ರಮದ ಉದ್ದೇಶ. ಭಾರತದ ಹೈದರಾಬಾದ್‌ನಲ್ಲಿ ಇದ್ದುಕೊಂಡು MOWO ಇದುವರೆಗೆ 10000+ ಮಹಿಳೆಯರನ್ನು ತಲುಪಿದ್ದು, 1500+ ಮಹಿಳೆಯರಿಗೆ ದ್ವಿಚಕ್ರ ವಾಹನ ಚಾಲನೆ ತರಬೇತಿ ನೀಡಿ, ಚಾಲನಾ ಪರವಾನಗಿ ಒದಗಿಸಿದೆ. ಕೆಲವರಿಗೆ ಲಾಜಿಸ್ಟಿಕ್ಸ್ ಕ್ಷೇತ್ರದಲ್ಲಿ ಉದ್ಯೋಗವನ್ನೂ ಕೊಟ್ಟಿದೆ.

ಇವೆನ್ ಕಾರ್ಗೋ ಪರಿಚಯ

ಇವೆನ್ ಕಾರ್ಗೊ – ಇದು ಭಾರತದ ಮೊಟ್ಟ ಮೊದಲ ಮಹಿಳೆಯರೇ ನಡೆಸುವ ಲಾಜಿಸ್ಟಿಕ್ಸ್ ಡೆಲಿವರಿ ಕಂಪನಿಯಾಗಿದ್ದು, ಮಹಿಳೆಯರಿಗೆ ಮೊಬಿಲಿಟಿ ಮತ್ತು ಲಾಜಿಸ್ಟಿಕ್ಸ್ ನಲ್ಲಿ ತರಬೇತಿ ನೀಡಿ ಅವರನ್ನು ಡೆಲಿವರಿ ಏಜೆಂಟ್‌ಗಳಾಗಿ ಉದ್ಯೋಗಕ್ಕೂ ಸೇರಿಸುತ್ತಿದೆ. ಜೀವನಾಧಾರವನ್ನೂ ಖಾತರಿಪಡಿಸುತ್ತಿದ್ದು, ಸುಸ್ಥಿರ ಮತ್ತು ಸಮಾನ ಚಾಲನಾವಕಾಶ ಮತ್ತು ಗೌರವದಿಂದ ಬದುಕಲು ಬೇಕಾದ ಅವಕಾಶವನ್ನು ಒದಗಿಸುತ್ತಿದೆ.

ಇದು ಮಹಿಳಾ ಕೇಂದ್ರಿತ ತರಬೇತಿ, ಸಾಮಾಜಿಕ ಮತ್ತು ಹಣಕಾಸಿನ ನೆರವನ್ನೂ ಕೊಡುತ್ತಿದೆ. ಡೆಲಿವರಿ ಅಸೋಸಿಯೇಟ್ ಆಗಿ ಕೆಲಸ ಮಾಡುವುದಕ್ಕೆ ಇಲೆಕ್ಕಿಕ ಬೈಕ್ ಖರೀದಿಸುವುದಕ್ಕೂ ಅವರು ನೆರವು ನೀಡುತ್ತಿದ್ದು, ಪ್ರಮುಖ ಇ-ಕಾಮರ್ಸ್ ಕಂಪನಿಗಳು ಸೇರಿ ಅನೇಕ ಕಂಪನಿಗಳ ಜತೆಗೆ ಪಾಲುದಾರಿಕೆ ಹೊಂದಿದ್ದಾರೆ. 2016 ರಿಂದೀಚೆಗೆ ಇವನ್ ಲೈವಿಹುಡ್ಸ್ 500 ಮಹಿಳೆಯರಿಗೆ ತರಬೇತಿ ನೀಡಿದೆ ಮತ್ತು 250 ಮಹಿಳೆಯರನ್ನು ಡೆಲಿವರಿ ಅಸೋಸಿಯೇಟ್ಸ್ ಆಗಿ ಕೆಲಸಕ್ಕೆ ಸೇರಿಸಿದೆ. ಇವರು ಈಗ ಭಾರತದ ಏಳು ವಿಭಿನ್ನ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending