Connect with us

ದಿನದ ಸುದ್ದಿ

ನಗರ ದೇವತೆ ದುಗ್ಗಮ್ಮ ಹಾಗೂ ಚೌಡೇಶ್ವರಿ ಜಾತ್ರೆಗಳ ನಾಗರೀಕ ಸೌಹಾರ್ದ ಸಭೆ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ನಗರ ದೇವತೆ ದುಗ್ಗಮ್ಮ ಜಾತ್ರೆ, ವಿನೋಬ ನಗರದ ಚೌಡೇಶ್ವರಿ ಜಾತ್ರೆ ಹಾಗೂ ಹೋಳಿ ಹಬ್ಬಗಳನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸುವ ಮೂಲಕ ಹಬ್ಬಗಳ ಹೆಸರಿನಲ್ಲಿ ನಡೆಯುವ ಕೆಲ ಮೂಢನಂಬಿಕೆಗಳನ್ನ ಧಿಕ್ಕರಿಸುವ ಮೂಲಕ ಹೊಸತನಕ್ಕೆ ಹೊಂದಿಕೊಳ್ಳೋಣ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರ ಹಾಗೂ ಉಚ್ಚ ನ್ಯಾಯಾಲಯದ ಆದೇಶದಂತೆ ಪ್ರಾಣಿಬಲಿ ನಿಷೇಧವಿದ್ದು ದೇವಸ್ಥಾನದ ಆವರಣ ಹಾಗೂ ಸುತ್ತಲಿನ ಐದು ನೂರು ಮೀಟರ್ ಆವರಣದಲ್ಲಿ ಯಾವುದೇ ಪ್ರಾಣಿಬಲಿ ಮಾಡುವುದು ಬೇಡ, ಸಂಪ್ರದಾಯದಂತೆ ಕೋಣನ ರಕ್ತವನ್ನು ಸಿರಂಜ್ ಮೂಲಕ ತೆಗೆದು ದೇವರಿಗೆ ಅರ್ಪಿಸೋಣವೆಂದರು. ಇದರೊಂದಿಗೆ ಬೇವಿನುಡಿಗೆಯ ಸೇವೆ ಕೂಡ ನಿಷೇಧವಿದ್ದು ಬೇವಿನ ಎಸಳನ್ನು ದೇವಿಗೆ ಅರ್ಪಿಸುವ ಮೂಲಕ ಹರಕೆ ತೀರಿಸಿ ಎಂದರು.

Read also: Happy Diwali images

ಪ್ರಾಣಿಬಲಿ ನಿಷೇಧ ಕಾಯಿದೆಯು ಅತ್ಯಂತ ಕಠಿಣವಾಗಿದ್ದು, ಯಾರಾದರು ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ, ಕೆಲ ಸಂದರ್ಭಗಳಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ, ಅಂತಹದಕ್ಕೆ ಯಾರೂ ಅವಕಾಶ ಮಾಡಿಕೊಡಬಾರದು ಇದರಿಂದ ದೇವಸ್ಥಾನದ ಆಡಳಿತ ಮಂಡಳಿಗೂ ತೊಂದರೆಯಾಗುತ್ತದೆ. ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ಜಾತ್ರಾ ಯಶಸ್ಸಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದೆಂದರು.

ಮಹಾನಗರ ಪಾಲಿಕೆ ಮಹಾಪೌರರಾದ ಜಯಮ್ಮ ಗೋಪಿನಾಯ್ಕ ಮಾತನಾಡಿ ಜಾತ್ರೆಗಳು ಸುಗಮವಾಗಿ ನಡೆಯಲು ಪಾಲಿಕೆ ವತಿಯಿಂದ ಎಲ್ಲಾ ನೆರವು ನೀಡಲಾಗುವುದು, ಎಲ್ಲರೂ ಪರಸ್ಪರ ಸಹಕರಿಸಿ ಜಾತ್ರೆಗಳು ಅದ್ದೂರಿಯಾಗಿ ನಡೆಯುವಂತೆ ನೋಡಿಕೊಳ್ಳೋಣವೆಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಮಾತನಾಡಿ ಎರಡೂ ಜಾತ್ರಾ ಮಹೋತ್ಸವಗಳು ಯಶಸ್ವಿಯಾಗಿ ಜರುಗಲಿ, ಟ್ರಾಪಿಕ್ ಸಮಸ್ಯೆಯಾಗದಂತೆ ಹಾಗೂ ಪಾರ್ಕಿಂಗ್ ಸಂಭಂಧಿಸಿದಂತೆ ಎಲ್ಲಾ ತಯಾರಿ ಮಾಡಿಕೊಳ್ಳಲಾಗುವುದು. ಎಲ್ಲಾ ಕಡೆ ಮಾರ್ಗ ಫಲಕಗಳನ್ನು ಹಾಕಲಾಗುವುದು, ಸಾಕಷ್ಟು ಕಸದ ರಾಶಿ ಬೀಳುವುದರಿಂದ ದೇವಸ್ಥಾನದ ಆಡಳಿತ ಮಂಡಳಿಯವರು ಎಲ್ಲಾ ಕಡೆ ಕಸದ ಬುಟ್ಟಿಗಳನ್ನಿಡಲಿ, ರಸ್ತೆಗಳು ಕಿರಿದಾಗಿದ್ದು ವ್ಯಾಪಾರಿಗಳು ಹೆಚ್ಚು ರಸ್ಥೆ ಮೇಲೆ ಅಂಗಡಿಗಳನ್ನು ಇಡುವುದನ್ನು ತಡೆಯಬೇಕು ಹಾಗೂ 280 ಸಿಸಿಟಿವಿ ಕ್ಯಾಮರಾಗಳನ್ನು ಹಾಕಲಾಗುವುದು ಮತ್ತು ಡ್ರೋಣ್ ಕ್ಯಾಮರಾಗಳು ಕಣ್ಗಾವಲುಇರಲಿವೆ, ದೇವಸ್ಥಾನದ ವತಿಯಿಂದ ಹೆಚ್ಚು ಸ್ವಯಂ ಸೇವಕರನ್ನು ನೀಡಿ ಹಾಗು ಅವರಿಗೆ ಐ.ಡಿ ಕಾರ್ಡ್‍ಗಳನ್ನು ನೀಡಿ ಎಂದರು.

ಸಭೆಯಲ್ಲಿ

ಮುಖಂಡರಾದ ಚನ್ನಬಸಪ್ಪ ಗೌಡ್ರು ಮಾತನಾಡಿ ಜಾತ್ರೆಗೆ ಜಿಲ್ಲಾಡಳಿತ ಸಂಪೂರ್ಣವಾಗಿ ಸಹಕಾರ ನೀಡಿದ್ದು, ಕೊರೋನಾ ಮಾರ್ಗಸೂಚಿಗಳಂತೆ ಜಾತ್ರೆ ಆಚರಿಸೋಣ, ಹೊರ ಜಿಲ್ಲೆ, ರಾಜ್ಯಗಳಿಂದ ಭಕ್ತರು ಆಗಮಿಸಲಿದ್ದು ಅವರಿಗೆ ಎಲ್ಲಾ ವ್ಯವಸ್ಥಗಳನ್ನು ಮಾಡಿಕೊಡಬೇಕೆಂದರು, ಮಹಾನಗರ ಪಾಲಿಕೆ ಕಟ್ಟಡಗಳಿಗೆ ಸುಣ್ಣ ಬಣ್ಣ, ಉತ್ತಮ ರಸ್ಥೆ, ನೀರಿನ ವ್ಯವಸ್ಥೆ ಮಾಡಲಿ ಎಂದರು.

ಮುಖಂಡರಾದ ಶ್ರೀನಿವಾಸ್ ದಾಸ ಕರಿಯಪ್ಪ ಮಾತನಾಡಿ ಜಿಲ್ಲಾಡಳಿತದ ಆದೇಶದಂತೆ ಜಾತ್ರೆ ಮಾಡಲು ನಮ್ಮ ಸಮ್ಮತಿ ಇದೆ, ಜಾತ್ರೆ ಯಶಸ್ಸಿನಲ್ಲಿ ಪಾಲಿಕೆಯ ಪಾತ್ರ ಬಹಳಷ್ಟಿದೆ ಎಂದರು.

ಮುಖಂಡರಾದ ಸಾದಿಕ್ ಪೈಲ್ವಾನ್ ಮಾತನಾಡಿ ದಾವಣಗೆರೆಯಲ್ಲಿ ಯಾವುದೇ ಹಬ್ಬ ಜಾತ್ರೆಗಳು ಸೌಹಾರ್ದತೆಯಿಂದ ನಡೆಯುತ್ತವೆ,ನಮ್ಮಸಂಪೂರ್ಣ ಸಹಕಾರ ಇರಲಿದೆ ಎಂದರು.

ದೂಡ ಮಾಜಿ ಅಧ್ಯಕ್ಷರಾದ ಯಶವಂತ ರಾವ್ ಜಾಧವ್ ಮಾತನಾಡಿ,ಎಲ್ಲಾ ಕೋಮಿನವರೂ ಅತ್ಯಂತ ಅನ್ಯೋನ್ಯವಾಗಿ ಜಾತ್ರೆ ಆಚರಿಸುತ್ತೇವೆ, ಆದರೂ ಎಲ್ಲಾ ಕೋಮಿನಲ್ಲೂ ಕಿಡಿಗೇಡಿಗಳಿರುತ್ತಾರೆ ಅಂತಹವರಿಗೆ ಎಚ್ಚರಿಕೆ ನೀಡಿ ಎಂದರು.
ಮುಖಂಡರಾದ ಸೈಯದ್ ಚಾರ್ಲಿ ಮಾತನಾಡಿ ಎಲ್ಲಾ ಧರ್ಮದ ಹಬ್ಬಗಳೂ ಸೌಹಾರ್ದತೆಯಿಂದ ನಡೆಯಲಿ ಎಂದರು.ದೂಡ ಮಾಜಿ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್ ಮಾತನಾಡಿ,ಕುರಿ ಕಾಳಗವನ್ನು ನಿಗದಿತ ದೇವರಾಜ ಅರಸು ಬಡಾವಣೆಯಲ್ಲಿಯೇ ನಡೆಸಲು ಅವಕಾಶ ನೀಡಿ ಎಂದರು.

ಮುಖಂಡರುಗಳಾದ, ಅವರಗೆರೆ ಉಮೇಶ್, ಹೆಚ್. ಮಲ್ಲೇಶ್,ಅಮಾನಲ್ಲಾ ಕಾನ್, ಹೆಗ್ಗೆರೆ ರಂಗಪ್ಪ ಮಾತನಾಡಿದರು.

ಸಭೆಯಲ್ಲಿ ಉಪ ಮಹಾಪೌರರಾದ ಗಾಯತ್ರಿ ಬಾಯಿ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಡಿಹೆಚ್‍ಒ ನಾಗರಾಜು, ಡಾ. ಚಂದ್ರಶೇಖರ್ ಸುಂಕದ್, ಪೊಲೀಸ್ ಅಧಿಕಾರಿಗಳು ವಿವಿಧ ಸಮಾಜದ ಮುಖಂಡರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending