ಸಿನಿ ಸುದ್ದಿ
ದುನಿಯಾ ವಿಜಿ ‘ಖೈದಿ ನಂಬರ್ 9035’..!: ಈ ದಿನದ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ ಓದಿ
ಸುದ್ದಿದಿನ, ಬೆಂಗಳೂರು : ಪರಪ್ಪನ ಆಗ್ರಹಾರ ಜೈಲಿನಲ್ಲಿ ದುನಿಯಾ ವಿಜಿಗೆ ನಂಬರ್ ಖೈದಿ ನಂಬರ್ ಕೊಡಲಾಗಿದೆ. ಜೈಲು ಅಧಿಕಾರಿಗಳಿಂದ ವಿಜಿಗೆ ವಿಚಾರಣಾಧೀನ ಖೈದಿ ಸಂಖ್ಯೆ ಮಂಜೂರು ಮಾಡಿದ್ದಾರೆ. ದುನಿಯಾ ವಿಜಿಗೆ 9035, ಪ್ರಸಾದ್ 9036, ಮಣಿ 9037, ಪ್ರಸಾದ್ 9038. ನಾಲ್ವರು ಆರೋಪಿಗಳಿಗೆ UTP (ಯು.ಟಿ.ಪಿ : ಅಂಡರ್ ಟ್ರಯಲ್ ಪ್ರಿಸನರ್) ಸಂಖ್ಯೆ ನೀಡಿದ ಜೈಲು ಆಧಿಕಾರಿಗಳು.
ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ದುನಿಯಾ ವಿಜಯ್ ಕೋರ್ಟ್ ಮೊರೆ ಹೋಗುದ್ದಾರೆ. 8ನೇ ACMM ಕೋರ್ಟ್ಗೆ ಜಾಮೀನು ಕೋರಿ ಅರ್ಜಿಸಲ್ಲಿಸಿದ್ದಾರೆ. A1 ಪ್ರಸಾದ್, A2 ದುನಿಯಾ ವಿಜಯ್, A3 ಮಣಿ ಇಂದ ಅರ್ಜಿ ಸಲ್ಲಿಸಲಾಗಿದ್ದು, ಮೂವರು ಆರೋಪಿಗಳ ಪರ ವಕೀಲ ಶಿವಕುಮಾರ್ ವಕಾಲತ್ತು ನಡೆಸಲಿದ್ದಾರೆ. ನ್ಯಾ.ಮಹೇಶ್ ಬಾಬು ರಿಂದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆಗೆ ಬಂದ 3 ಆರೋಪಿಗಳಿಗೆ ಜಾಮೀನು ಅರ್ಜಿ
ನೀಡದಂತೆ ವಾದ ಮಂಡಿಸಲಾಯ್ತು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಿರುವ ಸರ್ಕಾರಿ ಅಭಿಯೋಜಕರು.
ದುನಿಯಾ ವಿಜಯ್ ಪತ್ನಿಯರ ಬಡಿದಾಟ ಪ್ರಕರಣ
ಇಬ್ಬರು ಪತ್ನಿಯರ ಹೇಳಿಕೆ ದಾಖಲಿಸಿರುವ ಪೊಲೀಸರು, ಕೀರ್ತಿ ಮನೆಯಲ್ಲಿ ನೆನ್ನೆ ನಡೆದಿದ್ದ ಪತ್ನಿಯರಿಬ್ಬರ ಬಡಿದಾಟ, ಪರಸ್ಪರ ತಳ್ಳಾಡಿ, ಬಡಿದಾಡಿಕೊಂಡು,ಕೈ ಗಳಿಂದ ಹಲ್ಲೆ ಮಾಡಿಕೊಂಡು ಜಗಳ. ದುನಿಯಾ ವಿಜಯ್ ತಂದೆ-ತಾಯಿ ಇಬ್ಬರಿಂದಲೂ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು. ಕೀರ್ತಿ ಮತ್ತು ನಾಗರತ್ನ ಗಲಾಟೆಗೆ ಕಾರಣವೇನು ಎಂಬ ಅಂಶಗಳ ಕುರಿತ ಪೊಲೀಸರಿಗೆ ವಿವರಣೆ ಪಡೆಯಲಾಗಿದೆ. ಘಟನೆ ಸಂಪೂರ್ಣ ಚಿತ್ರಣ ಪೊಲೀಸರಿಗೆ ವಿವರಿಸಿರುವ ವಿಜಯ್ ಪೋಷಕರು. ವಿಜಯ್ ಮಕ್ಕಳ ಹೇಳಿಕೆ ದಾಖಲಿಸಲು ಪೊಲೀಸರ ನಿರ್ಧಾರ ಮಾಡಿದ್ದಾರೆ.
ಘಟನೆ ನಡೆದ ವೇಳೆ ಮನೆಯಲ್ಲಿ ಪ್ರತ್ಯಕ್ಷ ದರ್ಶಿಗಳಾಗಿದ್ದ ಮೂವರು ಮಕ್ಕಳ ಹೇಳಿಕೆಯನ್ನು ಸಂಜೆ ದಾಖಲಿಸಲು ನಿರ್ಧರಿಸಿರುವ ಗಿರಿನಗರ ಪೊಲೀಸರು.
ಪರಂ ಮೊರೆ ಹೋದ ಪಾನಿಪೂರಿಕಿಟ್ಟಿ
ಗೃಹಸಚಿವ ಜಿ. ಪರಮೇಶ್ವರ್ ಮೊರೆ ಹೋದ ಪಾನಿಪುರಿ ಕಿಟ್ಟಿಯು ದುನಿಯಾ ವಿಜಿ ಪ್ರಕರಣವನ್ನು ಸರ್ಕಾರಿ ವಿಶೇಷ ಅಭಿಯೋಜ ಕಾರಗಿ ಶ್ಯಾಂಮ್ ಸುಂದರ್ ಅವರನ್ನು ನೇಮಿಸುವಂತೆ ಮನವಿ ಮಾಡಿದ್ದಾರೆ. ಶ್ಯಾಂಮ್ ಸುಂದರ್ ವಿದ್ವತ್ ಪ್ರಕರಣವನ್ನು ತುಂಬಾ ಚೆನ್ನಾಗಿ ಹ್ಯಾಂಡಲ್ ಮಾಡಿದ್ರು,ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುವಂತೆ ನೋಡಿಕೊಂಡಿದ್ರು, ಹೀಗಾಗಿ ಅವರನ್ನೆ ನೇಮಕ ಮಾಡಬೇಕೆಂದು ಗೃಹಸಚಿವರ ಬಳಿ ಮನವಿ ಮಾಡಿದ್ದಾರೆ ಕಿಟ್ಟಿ.
ವಿಜಿ ಪತ್ನಿ ನಾಗರತ್ನ ಹೀಗಂದ್ರು
ಪಾನಿಪುರಿ ಕಿಟ್ಟಿ ಒಳ್ಳೆ ಮನುಷ್ಯ. ವಿಜಯ್ ಜೊತೆ ತುಂಬಾ ಚೆನ್ನಾಗೆ ಇದ್ರು. ಪಾನಿಪುರಿ ಕಿಟ್ಟಿ ಅವರ ಮನೆಯಿಂದ ಊಟ ತಂದು ವಿಜಯ್ ಗೆ ಕೊಟ್ತೀದ್ರು. ನನ್ನ ಗಂಡನ ಜೊತೆ ತುಂಬಾ ಚೆನ್ನಾಗಿದ್ರು. ನಮ್ಮ ಮನೆಗೆ ಬಂದು ಹೋಗುತ್ತಿದ್ದರು. ಯಾಕೆ ಗಲಾಟೆ ಆಯಿತು ಅನ್ನೋದು ಗೊತ್ತಿಲ್ಲ ವಿಜಿ ಪತ್ನಿ ನಾಗರತ್ನ ಹೇಳಿಕೆ ನೀಡಿದ್ದಾರೆ. ದುನಿಯಾ ವಿಜಯ್ ತಂದೆ ಅವರೇ ನನ್ನ ಬಗ್ಗೆ ತಪ್ಪು ಮಾಹಿತಿ ನೀಡ್ತೀದ್ದಾರೆ. ನಾಗರತ್ನಗೆ ಆಸ್ತಿ ಕೊಟ್ಟಿದೇವೆ ಅಂತಾ ಹೇಳಿಕೊಂಡು ಓಡಾಡ್ತೀದ್ದಾರೆ. ಅವರೇ ಹಾದಿ ತಪ್ಪಿಸುತ್ತಿದ್ದಾರೆ ಎಂದಿದ್ದಾರೆ. ವಿಜಿ ಎರಡನೇ ಹೆಂಡ್ತಿ ಮೇಲೆ ದೂರು ನೀಡಿದ್ದ ನಾಗರತ್ನ . ನಿನ್ನೆ ದುನಿಯಾ ವಿಜಯ್ ಗಲಾಟೆ ವಿಚಾರ ಟಿವಿಯಲ್ಲಿ ನೋಡ್ದೆ. ಮಗಾ ಸಾಮ್ರಾಟ್ ಕೂಡಾ ವಿಜಯ್ ಜೊತೆ ಇದ್ರು ಅಂತಾ ನೋಡ್ದೆ. ಅದ್ಕೆ ಗಾಬರಿಯಾಗಿ ಕೀರ್ತಿ ಗೌಡ ಮನೆಗೆ ಹೋದೆ.ಯಾಕೆ ನನ್ನ ಮಗನನ್ನ ಅಷ್ಟೋತ್ತಿಗೆ ಕಳುಹಿಸಿದ್ರೆ ಅಂತಾ ಕೇಳ್ದೆ. ಆಗ ನಮ್ಮ ಮಾವಾ,ಅತ್ತೆ ಕೀರ್ತಿ ಗೌಡಗೆ ಸರ್ಫೋರ್ಟ್ ಮಾಡಿದ್ರು. ನಂತ್ರ ಮಾತಿಗೆ ಮಾತು ಬೆಳೆದು ಗಲಾಟೆ ಆಯಿತು, ಹೊಡೆದಾಟ ಆಯಿತು. ನಂತ್ರ ಪೊಲೀಸ್ ಠಾಣೆಗೆ ಕಂಪ್ಲೇಟ್ ಕೊಟ್ಟೆ.
ದುನಿಯಾ ವಿಜಯ್ ಗೆ ಬುದ್ಧಿ ಹೇಳೋರು ಯಾರು ಇಲ್ಲ
ಕಳೆದ ಎರಡು ವರ್ಷದಿಂದ ವಿಜಿ ಜೈಲು,ಪೊಲೀಸ್ ಠಾಣೆಗೆ ಹೋಗ್ತಾನೆ ಇದ್ದಾರೆ. ನಾನ್ ಬುದ್ಧಿ ಹೇಳೋಕೆ ಹೋದೆ ನನ್ನನ್ನ ದೂರ ಮಾಡಿದ್ರು. ಈಗ ಅವರು ದುಡ್ಡಿಗಾಗಿ ಬಂದವಳ ಜೊತೆ ಇದ್ದಾರೆ. ಅವ್ಳು ಸ್ವಲ್ಪ ದಿನ ಇರ್ತಾಳೆ ಆಮೇಲೆ ಹೋಗ್ತಾಳೆ. ಅವ್ರೆಲ್ಲ ದುಡ್ಡಿಗೆ ಬರೋರು. ಈಗ ಇವ್ರು ಜೈಲಿಗೆ ಹೋಗಿದ್ದಾರೆ, ನನ್ನ ಮಕ್ಕಳ ಗತಿ ಏನು. ಕೀರ್ತಿ ಗೌಡದು ದಾರಿದ್ರ ಕಾಲು.ಅವಳು ಕಾಲು ಇಟ್ಟಿದೆ ತಡ ವಿಜಯ್ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ನಾನ್ ಇದಿದ್ರೆ ಸುಮ್ಮನೆ ಇರ್ತಿದ್ನಾ..? ಈಗ ವಿಜಯ್ ಜೈಲಿಗೆ ಹೋಗೋಕ್ಕೆ ಕೀರ್ತಿ ಗೌಡನೇ ಕಾರಣ.
ಪಾನಿಪುರಿ ಕಿಟ್ಟಿ ಹೇಳಿಕೆ
ಮಾರುತಿ ಗೌಡ ಆರೋಗ್ಯ ಇನ್ನು ಚೇತರಿಕೆಯಾಗಿಲ್ಲ. ಎರಡಗಡೆ ಕಣ್ಣು ಸರಿಯಾಗಿ ಕಾಣುತ್ತಿಲ್ಲ ಎನ್ನುತ್ತಿದ್ದಾನೆ ಮಾರುತಿ ಗೌಡ. ರಾತ್ರಿಯೆಲ್ಲಾ ಕತ್ತು ತುಂಬಾ ನೋವು ಎನ್ನುತ್ತಿದ್ದ. ಏನು ತಿಂದರು ಮಾರುತಿ ಗೌಡ ವಾಂತಿ ಮಾಡಿಕೊಳ್ಳುತ್ತಿದ್ದಾನೆ. ಬಾಯಿಗೆ 14 ಹೊಲಿಗೆ ಹಾಕಿದ್ರು ಊತ ಕಡಿಮೆಯಾಗಿಲ್ಲ. ಮಾರುತಿ ಬಾಯಿ ಹಾಗೂ ತುಟಿ ಮತ್ತಷ್ಟು ಊತುಕೊಂಡಂತಿದೆ. ಸಿಟಿ ಸ್ಕ್ಯಾನ್ ರಿಪೋರ್ಟ್ ಗಾಗಿ ಕಾಯುತ್ತಿದ್ದೇವೆ. 9 ಗಂಟೆಗೆ ಸಿಟಿ ಸ್ಕ್ಯಾನ್ ರಿಪೋರ್ಟ್ ಬಂದಿರಬೇಕು.ನಾವು ಡಿಸಿಎಂ ಭೇಟಿ ಗೆ ಬಂದಿದ್ದೇವೆ. ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಮಾರುತಿಗೌಡ ಎಂದು ಪಾನಿಪುರಿ ಕಿಟ್ಟಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಸಿನಿ ಸುದ್ದಿ
ಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್ಡೇ; 53ನೇ ವಸಂತದಲ್ಲಿ ಸುದೀಪ್ ಸಿನಿಮಾ ಸರ್ಪ್ರೈಸ್ಗೆ ಕೌಂಟ್ಡೌನ್!
ಸುದ್ದಿದಿನ,ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಇಂದು, ಸೆಪ್ಟೆಂಬರ್ 2, ವಿಶೇಷ ದಿನ. 53ನೇ ವಸಂತಕ್ಕೆ ಕಾಲಿಡುತ್ತಿರುವ ಸುದೀಪ್, ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಸೆ.2ರಂದು ಮನೆ ಬಳಿ ಅಭಿಮಾನಿಗಳು ಯಾರೂ ಬರಬಾರದು ಎಂದು ಸುದೀಪ್ ಈಗಾಗಲೇ ಮನವಿ ಮಾಡಿದ್ದರು. ಹೀಗಾಗಿ ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದ ಕಿಚ್ಚನ ಬರ್ತ್ಡೇ ಈ ಬಾರಿ ವಿಭಿನ್ನವಾಗಿದೆ.
ಆದರೆ, ಅಭಿಮಾನಿಗಳಿಗೆ ನಿರಾಸೆಯಾಗದಂತೆ ಸಿನಿಮಾ ವಿಚಾರದಲ್ಲಿ ಭರ್ಜರಿ ಸರ್ಪ್ರೈಸ್ ಸಿಗುವ ನಿರೀಕ್ಷೆ ಮೂಡಿದೆ. ಹುಟ್ಟುಹಬ್ಬದ ಸಂದರ್ಭದಲ್ಲೇ ಕಿಚ್ಚನ ಮುಂಬರುವ ಸಿನಿಮಾಗಳ ಕುರಿತು ಮಹತ್ವದ ಅಪ್ಡೇಟ್ಗಳು ಹೊರಬರುವ ಸಾಧ್ಯತೆ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
http://Visit : www.suddidina.com
53ನೇ ವಸಂತ, 30 ವರ್ಷದ ಸಿನಿ ಪಯಣ
ಕಿಚ್ಚ ಸುದೀಪ್ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು ಮತ್ತು ತಮಿಳು ಚಿತ್ರರಂಗದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು, 1997ರಲ್ಲಿ ಬಿಡುಗಡೆಯಾದ ‘ತಾಯವ್ವ’ ಚಿತ್ರದ ಮೂಲಕ ಸಿನಿಮಾ ಪಯಣ ಆರಂಭಿಸಿದ್ದರು. ಇದೀಗ ಚಿತ್ರರಂಗದಲ್ಲಿ ಮೂರು ದಶಕಗಳ ಪಯಣ ಪೂರ್ಣಗೊಳಿಸಿರುವುದು ಈ ಹುಟ್ಟುಹಬ್ಬದ ಮತ್ತೊಂದು ವಿಶೇಷ.
ನಟನೆಯ ಜೊತೆಗೆ ನಿರ್ದೇಶನ, ನಿರ್ಮಾಣ ಹಾಗೂ ಕಿರುತೆರೆಯಲ್ಲಿಯೂ ಸುದೀಪ್ ತಮ್ಮದೇ ಗುರುತು ಮೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕರಾಗಿ ಸತತವಾಗಿ ಮುಂದುವರಿದಿರುವುದು ಅವರ ಜನಪ್ರಿಯತೆಗೆ ಮತ್ತೊಂದು ಸಾಕ್ಷಿಯಾಗಿದೆ.
View this post on Instagram
‘ಬಿಲ್ಲ ರಂಗ ಭಾಷಾ’ ಮೇಲೆ ಹೆಚ್ಚಿದ ನಿರೀಕ್ಷೆ
‘ವಿಕ್ರಾಂತ್ ರೋಣ’ ಬಳಿಕ ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಸುದೀಪ್ ಮತ್ತೊಮ್ಮೆ ‘ಬಿಲ್ಲ ರಂಗ ಭಾಷಾ’ ಮೂಲಕ ಒಂದಾಗಿದ್ದಾರೆ. ಈಗಾಗಲೇ ಚಿತ್ರದ ಲುಕ್ ಅಭಿಮಾನಿಗಳ ಗಮನ ಸೆಳೆದಿದ್ದು, ಮಾಸ್ ಅವತಾರದಲ್ಲಿ ಕಿಚ್ಚ ಕಾಣಿಸಿಕೊಂಡಿರುವುದು ನಿರೀಕ್ಷೆ ಹೆಚ್ಚಿಸಿದೆ.
ಚಿತ್ರದ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಕೂಡ ಉತ್ಸಾಹ ವ್ಯಕ್ತಪಡಿಸಿದ್ದು, ಸುದೀಪ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಸಿನಿಮಾಗೆ ಸಂಬಂಧಿಸಿದ ಹೊಸ ಅಪ್ಡೇಟ್ ಸಿಗುವ ಸಾಧ್ಯತೆ ಇದೆ. ಸಿನಿಮಾ 2027ರಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ.
4 ಸಿನಿಮಾಗಳ ಸದ್ದು?
2024ರಲ್ಲಿ ‘ಮ್ಯಾಕ್ಸ್’ ಬಿಡುಗಡೆಯಾದ ಬಳಿಕ ಸುದೀಪ್ ಅವರ ಹೊಸ ಸಿನಿಮಾ ತೆರೆಗೆ ಬಂದಿಲ್ಲ. ಇದೀಗ ಒಂದೇ ಬಾರಿ ನಾಲ್ಕು ಸಿನಿಮಾಗಳ ಕುರಿತಂತೆ ಘೋಷಣೆ ಅಥವಾ ಅಪ್ಡೇಟ್ ಸಿಗಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಈ ಮೂಲಕ ಬರ್ತ್ಡೇ ಸಂಭ್ರಮದಿಂದ ದೂರವಿದ್ದರೂ, ಸಿನಿಮಾ ಸುದ್ದಿಗಳ ಮೂಲಕ ಕಿಚ್ಚ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಲಿದ್ದಾರೆ.
ಸೆ.6ಕ್ಕೆ ಮತ್ತೆ ಟಿವಿ ಪರದೆ ಮೇಲೆ ಕಿಚ್ಚ
ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಕಿಚ್ಚನ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ ಗ್ರ್ಯಾಂಡ್ ಪ್ರೀಮಿಯರ್ ಸೆಪ್ಟೆಂಬರ್ 6ರಂದು ನಡೆಯಲಿದ್ದು, ಮತ್ತೊಮ್ಮೆ ಸುದೀಪ್ ನಿರೂಪಕರಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಹೀಗಾಗಿ 53ನೇ ಹುಟ್ಟುಹಬ್ಬ, 30 ವರ್ಷದ ಸಿನಿ ಪಯಣ, ಹೊಸ ಸಿನಿಮಾಗಳ ನಿರೀಕ್ಷೆ ಹಾಗೂ ‘ಬಿಗ್ ಬಾಸ್’ ಎಂಟ್ರಿ—ಈ ಬಾರಿ ಕಿಚ್ಚನ ಬರ್ತ್ಡೇಗೆ ವಿಶೇಷ ಅರ್ಥ ಸಿಕ್ಕಿದೆ.

ದಿನದ ಸುದ್ದಿ
Bigg Boss Kannada 13: ಹೊಸ ಥೀಮ್, ಹೊಸ ಸ್ಪರ್ಧಿಗಳು, 24×7 ಲೈವ್; ಕಿಚ್ಚ ಸುದೀಪ್ ಸಾರಥ್ಯದ ಬಿಗ್ಬಾಸ್ ಕನ್ನಡ 13ರ ವಿಶೇಷತೆಗಳೇನು?
ಸುದ್ದಿದಿನ,ಬೆಂಗಳೂರು: ಅಂತೂ ಇಂತೂ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ **‘ಬಿಗ್ಬಾಸ್ ಕನ್ನಡ ಸೀಸನ್ 13’**ಗೆ ಅಧಿಕೃತ ಚಾಲನೆ ಸಿಗುವ ಸಮಯ ಬಂದಿದೆ. ಈಗಾಗಲೇ ‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಕುತೂಹಲ ಹೆಚ್ಚಿಸಿರುವ ಕಾರ್ಯಕ್ರಮದ ಟಿವಿ ಸೀಸನ್ ಸೆಪ್ಟೆಂಬರ್ 6ರಿಂದ ಆರಂಭವಾಗಲಿದೆ. ಹೊಸ ಸೀಸನ್ನಲ್ಲಿ ಮನೆ, ಥೀಮ್, ಸ್ಪರ್ಧಿಗಳ ಆಯ್ಕೆ ಹಾಗೂ ವೀಕ್ಷಣಾ ಅನುಭವದಲ್ಲೂ ಹಲವು ವಿಶೇಷತೆಗಳನ್ನು ಪರಿಚಯಿಸಲಾಗುತ್ತಿದೆ.
ಕಳೆದ 12 ಸೀಸನ್ಗಳಂತೆ ಈ ಬಾರಿಯೂ ಕಿಚ್ಚ ಸುದೀಪ್ ಕಾರ್ಯಕ್ರಮದ ನಿರೂಪಕರಾಗಿ ಮುಂದುವರಿಯಲಿದ್ದಾರೆ. ಸತತ 13 ಸೀಸನ್ಗಳನ್ನು ನಿರೂಪಣೆ ಮಾಡುತ್ತಿರುವುದು ಬಿಗ್ಬಾಸ್ ಇತಿಹಾಸದಲ್ಲೇ ಗಮನಾರ್ಹ ದಾಖಲೆಯಾಗಿದೆ.
ಹೈಲೈಟ್ಸ್: ಸೆಪ್ಟೆಂಬರ್ 6ರಿಂದ ಬಿಗ್ಬಾಸ್ ಹವಾ |
|
http://Visit : www.suddidina.com
ಈ ಬಾರಿ ‘Flight’ ಥೀಮ್ ಏಕೆ ವಿಶೇಷ?
ಕಳೆದ ಸೀಸನ್ನಲ್ಲಿ ವೀಕ್ಷಕರು ಅರಮನೆ ಮಾದರಿಯ ಬಿಗ್ಬಾಸ್ ಮನೆಯನ್ನು ಕಂಡಿದ್ದರು. ಆದರೆ ಈ ಬಾರಿ ಇಡೀ ಕಾರ್ಯಕ್ರಮದ ಕಲ್ಪನೆಯೇ ಬದಲಾಗಿದೆ. ‘Flight’ ಥೀಮ್ ಆಧಾರಿತವಾಗಿ ಸೀಸನ್ 13 ರೂಪಿಸಲಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋದಲ್ಲೂ ಇದರ ಝಲಕ್ ಕಾಣಿಸಿಕೊಂಡಿದೆ.
ವಿಶೇಷವೆಂದರೆ ಫ್ಲೈಟ್ ಥೀಮ್ ಕೇವಲ ಪ್ರೋಮೋಗೆ ಸೀಮಿತವಾಗಿಲ್ಲ. ಬಿಗ್ಬಾಸ್ ಮನೆಯ ವಿನ್ಯಾಸದಲ್ಲೂ ಇದೇ ಪರಿಕಲ್ಪನೆಯನ್ನು ಬಳಸಲಾಗಿದೆ. ಹೀಗಾಗಿ ಈ ಬಾರಿ ಮನೆ ಹೇಗೆ ಕಾಣಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಸೆಲೆಬ್ರಿಟಿಗಳ ಜತೆಗೆ ಕಾಮನ್ ಮ್ಯಾನ್ ಎಂಟ್ರಿ
ಬಿಗ್ಬಾಸ್ ಕನ್ನಡದ ಪ್ರತಿ ಸೀಸನ್ನಲ್ಲೂ ಸ್ಪರ್ಧಿಗಳ ಆಯ್ಕೆ ಪ್ರಮುಖ ಆಕರ್ಷಣೆಯಾಗಿರುತ್ತದೆ. ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಜನರಿಗೂ ಅವಕಾಶ ಕಲ್ಪಿಸಲಾಗುತ್ತಿದೆ.
‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಆಯ್ಕೆಯಾಗುವ ಮೂವರು ಸಾಮಾನ್ಯ ಸ್ಪರ್ಧಿಗಳು ಸೀಸನ್ 13ರ ಮನೆಗೆ ಪ್ರವೇಶಿಸಲಿದ್ದಾರೆ. ಇದರಿಂದ ಮನೆಯಲ್ಲಿ ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳ ನಡುವಿನ ಸಂವಹನ, ಅಭಿಪ್ರಾಯ ಭೇದ ಹಾಗೂ ಹೊಸ ರೀತಿಯ ಸ್ಪರ್ಧೆ ಮೂಡುವ ನಿರೀಕ್ಷೆಯಿದೆ.
ಮನೆಯ ಪ್ರತಿಕ್ಷಣವೂ 24×7 ಲೈವ್
ಈ ಬಾರಿ ವೀಕ್ಷಕರಿಗೆ ಮತ್ತೊಂದು ದೊಡ್ಡ ಸೌಲಭ್ಯ ಸಿಗಲಿದೆ. ಟಿವಿ ಎಪಿಸೋಡ್ಗಳಿಗೆ ಮಾತ್ರ ಸೀಮಿತವಾಗದೆ, ಜಿಯೋಹಾಟ್ಸ್ಟಾರ್ನಲ್ಲಿ ಬಿಗ್ಬಾಸ್ ಮನೆಯ 24×7 ಲೈವ್ ವೀಕ್ಷಣೆ ಲಭ್ಯವಿರಲಿದೆ.
ಅಂದರೆ ದಿನದ ಎಪಿಸೋಡ್ನಲ್ಲಿ ಪ್ರಸಾರವಾಗದ ಮನೆಯೊಳಗಿನ ಹಲವು ಬೆಳವಣಿಗೆಗಳನ್ನೂ ವೀಕ್ಷಕರು ಗಮನಿಸಬಹುದು. ಸ್ಪರ್ಧಿಗಳ ನಡುವಿನ ಮಾತುಕತೆ, ಚಟುವಟಿಕೆಗಳು ಹಾಗೂ ಅನಿರೀಕ್ಷಿತ ಘಟನೆಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶ ಸಿಗಲಿದೆ.
ಪ್ರಸಾರದ ಸಮಯವೂ ಫಿಕ್ಸ್
ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಪ್ರಸಾರವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಹೊಸ ಸಂಚಿಕೆಗಳು ಪ್ರಸಾರವಾಗಲಿವೆ.
ಇನ್ನು ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ನಡೆಸಿಕೊಡುವ ಶನಿವಾರ ಮತ್ತು ಭಾನುವಾರದ ವಿಶೇಷ ಸಂಚಿಕೆಗಳು ರಾತ್ರಿ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿವೆ.
ಬಿಗ್ಬಾಸ್ ಪ್ರಯಾಣ ಯಾವ ದಿಕ್ಕಿಗೆ?
ಫ್ಲೈಟ್ ಥೀಮ್, ಹೊಸ ಮುಖಗಳು, ಸಾಮಾನ್ಯ ಸ್ಪರ್ಧಿಗಳ ಪ್ರವೇಶ ಮತ್ತು 24×7 ಲೈವ್ ವೀಕ್ಷಣೆಯೊಂದಿಗೆ ಸೀಸನ್ 13 ಕುತೂಹಲ ಮೂಡಿಸಿದೆ. ಈ ‘ಫ್ಲೈಟ್’ನಲ್ಲಿ ಯಾರು ಟೇಕಾಫ್ ಆಗುತ್ತಾರೆ, ಯಾರು ಮಧ್ಯದಲ್ಲೇ ಎಲಿಮಿನೇಟ್ ಆಗುತ್ತಾರೆ ಮತ್ತು ಕೊನೆಯವರೆಗೂ ಯಾರು ಪ್ರಯಾಣ ಮುಂದುವರಿಸುತ್ತಾರೆ ಎಂಬುದೇ ಮುಂದಿನ ದಿನಗಳ ಪ್ರಮುಖ ಪ್ರಶ್ನೆ.

ದಿನದ ಸುದ್ದಿ
Bigg Boss Agniparikshé: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಿಂದ ಕುಮಾರಿ ಎಕ್ಸಿಟ್; ಆಟ ಮುಗಿದರೂ ಭವಿಷ್ಯಕ್ಕೆ ಸಿಕ್ಕಿತು ದೊಡ್ಡ ಗಿಫ್ಟ್
ಸುದ್ದಿದಿನ,ಬೆಂಗಳೂರು: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ರಿಯಾಲಿಟಿ ಶೋನಲ್ಲಿ ತಮ್ಮ ಸರಳತೆ, ಮುಗ್ಧತೆ ಹಾಗೂ ಸಹಜ ವರ್ತನೆಯಿಂದ ವೀಕ್ಷಕರ ಗಮನ ಸೆಳೆದಿದ್ದ ನಂಜನಗೂಡಿನ ಕುಮಾರಿ ಇದೀಗ ಅನಾರೋಗ್ಯದ ಕಾರಣದಿಂದ ಕಾರ್ಯಕ್ರಮದಿಂದ ಅರ್ಧಕ್ಕೆ ನಿರ್ಗಮಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಿ, ವೈದ್ಯರ ಸಲಹೆಯಂತೆ ಆಟವನ್ನು ಮುಂದುವರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶೋನಿಂದ ಹೊರಬಂದಿದ್ದಾರೆ.
ಕಳೆದ ಕೆಲವು ಸಂಚಿಕೆಗಳಲ್ಲಿ ಕುಮಾರಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ವೀಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಅವರು ಯಾಕೆ ಕಾರ್ಯಕ್ರಮದಲ್ಲಿ ಕಾಣಿಸುತ್ತಿಲ್ಲ ಎಂಬ ಪ್ರಶ್ನೆಯೂ ಚರ್ಚೆಗೆ ಬಂದಿತ್ತು. ಇದೇ ಸಂದರ್ಭದಲ್ಲಿ ಮತ್ತೊಬ್ಬ ಸ್ಪರ್ಧಿ ಪೂರ್ಣಿಮಾ, ತಮ್ಮನ್ನು ಕಳುಹಿಸಿ ಕುಮಾರಿಯನ್ನು ಕರೆತರಲಾಗುತ್ತಿದೆ ಎಂದು ಆರೋಪಿಸಿದ್ದರು. ಇದೀಗ ಕುಮಾರಿ ಶೋನಿಂದ ದೂರ ಉಳಿದಿರುವ ನಿಜವಾದ ಕಾರಣ ಅನಾರೋಗ್ಯ ಎಂಬುದು ಸ್ಪಷ್ಟವಾಗಿದೆ.
http://Visit : www.suddidina.com
ಆಟ ಅರ್ಧಕ್ಕೆ ನಿಂತರೂ ಸಿಕ್ಕಿತು ₹5 ಲಕ್ಷ!
ಕುಮಾರಿಯ ಬಿಗ್ ಬಾಸ್ ಪಯಣ ಅರ್ಧಕ್ಕೆ ಅಂತ್ಯಗೊಂಡಿದ್ದರೂ, ಕಾರ್ಯಕ್ರಮದ ವೇದಿಕೆ ಅವರಿಗೆ ನಿರೀಕ್ಷೆಗೂ ಮೀರಿದ ನೆರವು ನೀಡಿದೆ. ಕಾರ್ಯಕ್ರಮದ ಪ್ರಾಯೋಜಕರಾದ ಇಕೋ ಪ್ಲ್ಯಾನೆಟ್ ಎಲಿವೇಟರ್ ಸಂಸ್ಥೆ ಕುಮಾರಿಗೆ ಬರೋಬ್ಬರಿ ₹5 ಲಕ್ಷ ನಗದು ನೆರವು ನೀಡಿದೆ.
ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಕುಮಾರಿಗೆ ಈ ಹಣ ದೊಡ್ಡ ಆರ್ಥಿಕ ಆಸರೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಕುಟುಂಬದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಚಿಕಿತ್ಸೆಗೆ ಈ ಹಣ ನೆರವಾಗಬಹುದು ಎಂಬ ನಿರೀಕ್ಷೆಯೂ ಇದೆ.
ಶಿಕ್ಷಣದ ಬಳಿಕ ಉದ್ಯೋಗಕ್ಕೂ ಭರವಸೆ
₹5 ಲಕ್ಷ ನೆರವಿನ ಜತೆಗೆ ಕುಮಾರಿಗೆ ಮತ್ತೊಂದು ಮಹತ್ವದ ಅವಕಾಶವನ್ನು ಸಂಸ್ಥೆ ಘೋಷಿಸಿದೆ. ಅವರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ ಬಳಿಕ ಕರ್ನಾಟಕದಲ್ಲಿರುವ ಸಂಸ್ಥೆಯ ಯಾವುದೇ ಶಾಖೆಯಲ್ಲಿ ಅಥವಾ ದುಬೈನಲ್ಲಿರುವ ಶಾಖೆಯಲ್ಲಿ ಉದ್ಯೋಗ ಪಡೆಯುವ ಅವಕಾಶ ನೀಡಲಾಗಿದೆ.
ಇದು ಕುಮಾರಿಯ ಭವಿಷ್ಯಕ್ಕೆ ಹೊಸ ದಿಕ್ಕು ನೀಡುವ ಘೋಷಣೆಯಾಗಿದೆ. ರಿಯಾಲಿಟಿ ಶೋನಿಂದ ಸಿಕ್ಕ ಜನಪ್ರಿಯತೆಯ ಜತೆಗೆ ಇದೀಗ ಶಿಕ್ಷಣ ಮತ್ತು ಉದ್ಯೋಗದ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆ ಇಡುವ ಅವಕಾಶವೂ ದೊರೆತಿದೆ.
ಭಾವುಕ ವಿದಾಯ, ಹೊಸ ಬದುಕಿನ ಭರವಸೆ
ಹಳ್ಳಿಯಿಂದ ಬಂದ ಕುಮಾರಿಗೆ ಬೆಂಗಳೂರನ್ನು ನೋಡುವ ಅವಕಾಶದಿಂದ ಹಿಡಿದು ದೊಡ್ಡ ರಿಯಾಲಿಟಿ ಶೋ ವೇದಿಕೆಯಲ್ಲಿ ಸ್ಪರ್ಧಿಸುವವರೆಗೆ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಹಲವು ಹೊಸ ಅನುಭವಗಳನ್ನು ನೀಡಿದೆ. ಶೋನಿಂದ ನಿರ್ಗಮಿಸುವ ಸಂದರ್ಭದಲ್ಲಿ ಕುಮಾರಿ ಸೇರಿದಂತೆ ಇತರ ಸ್ಪರ್ಧಿಗಳು ಭಾವುಕರಾದರು.
ಸ್ಪರ್ಧೆಯಲ್ಲಿ ಮುಂದುವರಿಯಲು ಸಾಧ್ಯವಾಗದ ನೋವಿನ ನಡುವೆಯೂ, ಇಷ್ಟು ದೊಡ್ಡ ವೇದಿಕೆಯಲ್ಲಿ ಅವಕಾಶ ಸಿಕ್ಕಿದ್ದಕ್ಕೆ ಕುಮಾರಿ ಸಂತಸ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯದಿಂದಾಗಿ ಅವರ ಆಟ ಅಂತ್ಯಗೊಂಡಿದ್ದರೂ, ₹5 ಲಕ್ಷ ನೆರವು ಮತ್ತು ಭವಿಷ್ಯದ ಉದ್ಯೋಗದ ಭರವಸೆ ಕುಮಾರಿಯ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ಕಾರಣವಾಗುವ ಸಾಧ್ಯತೆಯಿದೆ.
ಹೀಗಾಗಿ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ಕುಮಾರಿಯ ಆಟ ಅರ್ಧಕ್ಕೆ ನಿಂತಿದ್ದರೂ, ಕಾರ್ಯಕ್ರಮದ ವೇದಿಕೆಯಿಂದ ಸಿಕ್ಕ ಬೆಂಬಲ ಅವರ ಮುಂದಿನ ಬದುಕಿಗೆ ಮಹತ್ವದ ತಿರುವು ನೀಡಿದೆ.

-
ದಿನದ ಸುದ್ದಿ3 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ3 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ3 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ3 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ3 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ3 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ3 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ3 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್


