ದಿನದ ಸುದ್ದಿ
ವಿದೇಶದಲ್ಲಿ ವಿದ್ಯಾಭ್ಯಾಸ | ಪರಿಶಿಷ್ಟ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಸದ್ಬಳಕೆ | ಉತ್ತರ ಪ್ರದೇಶಕ್ಕೆ ಮೊದಲ ಸ್ಥಾನ
ಸುದ್ದಿದಿನ ಡೆಸ್ಕ್ | ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಪರಿಶಿಷ್ಟ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಪಡೆದುಕೊಳ್ಳುವ ಉತ್ತರ ಪ್ರದೇಶ ಮುಂದಿದ್ದು, ಕರ್ನಾಟಕ, ದೆಹಲಿ ರಾಜ್ಯಗಳು ನಂತರ ಸ್ಥಾನ ಪಡೆದುಕೊಂಡಿವೆ.
ಉತ್ತರ ಪ್ರದೇಶದ 14 ವಿದ್ಯಾರ್ಥಿಗಳು 2017-2018.ನೇ ಸಾಲಿನ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪಡೆದುಕೊಳ್ಳುವ ಮೂಲಕ ದೇಶದ ಹೆಚ್ಚಿನ ಲಾಭ ಪಡೆದ ರಾಜ್ಯವಾಗಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆಯ ಸಚಿವ ವಿಜಯ್ ಸಂಪ್ಲಾ ರಾಜ್ಯಸಭಾದಲ್ಲಿ ತಿಳಿಸಿದ್ದಾರೆ.
ಕೇಂದ್ರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದೇಶದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ನೀಡುತ್ತದೆ. ಈ ಸೌಲಭ್ಯ ಪಡೆದ ರಾಜ್ಯಗಳಲ್ಲಿ ಉತ್ತರ ಪ್ರದೇಶ ಪ್ರಥಮ ಸ್ಥಾನ ಪಡೆದಿದ್ದರೆ, ದೆಹಲಿ ಮತ್ತು ಕರ್ನಾಟಕ ನಂತರ ಸ್ಥಾನ (9ವಿದ್ಯಾರ್ಥಿ ವೇತನ) ಪಡೆದಿವೆ. ಮಧ್ಯ ಪ್ರದೇಶ, ಮಹಾರಾಷ್ಟ್ರ ತಲಾ ೯ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಪಡೆದಿದ್ದಾರೆ. ಆದರೆ, ಅಚ್ಚರಿ ವಿಷಯವೇನೆಂದರೆ, ತ್ರಿಪುರ, ಜಾರ್ಖಾಂಡ್, ಜಮ್ಮು ಕಾಶ್ಮೀರ, ಬಿಹಾರ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಈ ಸೌಲಭ್ಯ ಸಿಕ್ಕಿಲ್ಲ.
ಇಂಜಿನಿಯರಿಂಗ್, ಮೆಡಿಕಲ್, ವಿಜ್ಞಾನ, ಮ್ಯಾನೇಜ್ಮೆಂಟ್, ಪ್ಯುರ್ ಸೈನ್ಸ್, ಅಗ್ರಿಕಲ್ಚರಲ್ ಸೈನ್ಸ್ ಸೇರಿದಂತೆ ನಿಗದಿ ವಿವಿಧ ಕೋರ್ಸುಗಳಿಗೆ ಈ ಯೋಜನೆಯಡಿ 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಇದರಲ್ಲಿ ಟ್ಯುಷನ್ ಫೀ, ತಿಂಗಳ ನಿರ್ವಹಣೆ ವೆಚ್ಚ, ಪ್ಯಾಸೇಜ್ ವೀಸಾ ಫೀ, ಇನ್ಸುರೆನ್ಸ್ ಪ್ರೀಮಿಯಂ, ಆನ್ಯುಲ್ ಕಾಂಟಿಜೆನ್ಸಿ ಅಲೋಯೆನ್ಸ್, ಇನ್ಸಿಡೆಂಟಲ್ ಜರ್ನಿ ಅಲೋಯೆನ್ಸ್ ಒಳಗೊಂಡಿದೆ. ಒಂದು ಕುಟುಂಬದಲ್ಲಿ ಇಬ್ಬರಿಗೆ ಮಾತ್ರ ಈ ಸೌಲಭ್ಯ ಸಿಗುತ್ತದೆ.
ಸದ್ಯಕ್ಕೆ ಈ ಯೋಜನೆಯಲ್ಲಿ ರಾಜ್ಯವಾರು ಮೀಸಲಾತಿ ಇಲ್ಲ. ಅರ್ಜಿ ಆಹ್ವಾನ ಕುರಿತು ವರ್ಷದಲ್ಲಿ ಎರಡು ಬಾರಿ ಜಾಹೀರಾತು ನೀಡಲಾಗುತ್ತದೆ.
2017-18ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನ ನೀಡಿದ ಪಟ್ಟಿ
- ಉತ್ತರ ಪ್ರದೇಶ -14
- ದೆಹಲಿ -10
- ಕರ್ನಾಟಕ -10
- ಮಹಾರಾಷ್ಟ್ರ -9
- ಮಧ್ಯ ಪ್ರದೇಶ -9
- ಪಂಜಾಬ್ -7
- ತೆಲಂಗಾಣದ -6
- ತಮಿಳುನಾಡು -6
- ಆಂಧ್ರಪ್ರದೇಶ -6
- ಪಶ್ಚಿಮ ಬಂಗಾಳ -4
- ಒರಿಸ್ಸಾ -3
- ಮಣಿಪುರ -2
- ಚತ್ತೀಸಗಡ -1
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ