Connect with us

ದಿನದ ಸುದ್ದಿ

ಶಿಕ್ಷಣ ಇಲಾಖೆ ದಿವಾಳಿ ; ಅಪ್ರಯೋಜಕ ಶಿಕ್ಷಣ ಸಚಿವರಿಂದ ಶಿಕ್ಷಣ ಕ್ಷೇತ್ರ ಅಧ್ವಾನ : ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ

Published

on

ಸುದ್ದಿದಿನ ಡೆಸ್ಕ್ : ದೇಶಕ್ಕೆ ಮಾದರಿಯಾಗಬೇಕಿದ್ದ ರಾಜ್ಯದ ಶಿಕ್ಷಣ ಇಲಾಖೆಯನ್ನ ವಿವಾದಿತ ಕೇಂದ್ರವನ್ನಾಗಿಸಿದ ಕೀರ್ತಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಗೆ ಸಲ್ಲಬೇಕು. ಪಠ್ಯ ಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಅಪಮಾನ ಮಾಡಿ ದೇಶದ ಎದುರು ಮಾನ ಕಳೆಯುವಂತೆ ಮಾಡಿದ್ದು ಸಾಲದಾಗಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಇಲ್ಲಿಯವರೆಗೂ ಪರಿಷ್ಕರಣೆಯ ಬಗ್ಗೆ ಬಂದಿರುವ ಆಕ್ಷೇಪಗಳಿಗೆ ಉತ್ತರ ನೀಡುವ ಎದೆಗಾರಿಕೆಯೂ ಇಲ್ಲ. ದಿನಕ್ಕೊಂದು ಅವಾಂತರಗಳು, ಹಗರಣಗಳು ಧಾರಾವಾಹಿಯಂತೆ ಇಲಾಖೆಯಲ್ಲಿ ಕಂತುಗಳಲ್ಲಿ ಬರುತ್ತಿವೆ. ಈಗ ಇಡೀ ಇಲಾಖೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ತಂದು ನಿಲ್ಲಿಸಿದ್ದಾರೆ. ಇಂತಹ ಅಪ್ರಯೋಜಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಂದ ಇಡೀ ಶಿಕ್ಷಣ ಇಲಾಖೆ ಅಧ್ವಾನದ ಕೂಪವಾಗಿದೆ.

ಶಾಲೆಗಳು ಪ್ರಾರಂಭವಾಗುವ ಮುನ್ನ ಪೂರ್ವಯೋಜಿತ ತಯಾರಿಗಳೊಂದಿಗೆ ಪ್ರಾರಂಭಿಸಲಾಗುತ್ತೆ. ಶಾಲೆಗಳಿಗೆ ಪಠ್ಯಪುಸ್ತಕ ಸರಬರಾಜು, ಶಿಥಿಲಗೊಂಡಿರುವ ಕೊಠಡಿಗಳ ದುರಸ್ಥಿಗೆ ಹಣ ಬಿಡುಗಡೆ, ಶಾಲಾ ಮಕ್ಕಳಿಗೆ ಶೂಗಳನ್ನ ನೀಡುವುದು ಸೇರಿದಂತೆ ಮೂಲ ಸೌಕರ್ಯಗಳ ತಯಾರಿಗಳೊಂದಿಗೆ ಪ್ರಾರಂಭ ಮಾಡಲಾಗುತ್ತೆ. ಆದ್ರೆ ಶಿಕ್ಷಣ ಇಲಾಖೆ ಹಾಗೂ ಸಚಿವರು ಕೇವಲ ಪಠ್ಯ ಪರಿಷ್ಕರಣೆ ನೆಪದಲ್ಲಿಯೇ ಕಾಲ ಕಳೆಯುತ್ತಿವೆ ಎಂದು ಕಿಡಿಕಾರಿದ್ದಾರೆ.

ಶಾಲೆಗಳು ಪ್ರಾರಂಭವಾಗಿ ಒಂದುವರೆ ತಿಂಗಳುಗಳು ಕಳೆಯುತ್ತಿವೆ. ಇಲ್ಲಿವರೆಗೂ ಪಠ್ಯ ಪುಸ್ತಕಗಳನ್ನ ಶಾಲೆಗಳಿಗೆ ತಲುಪಿಸಿಲ್ಲ ಎಂಬ ದೂರುಗಳು ಬರುತ್ತಿವೆ. ಇನ್ನೊಂದೆಡೆ ಪಠ್ಯ ಪರಿಷ್ಕರಣೆ ನೆಪದಲ್ಲಿ ಆಗಿರುವ ಪ್ರಮಾದಗಳಿಗೆ ತೇಪೆ ಹಚ್ಚಿ, ಮರು ಮುದ್ರಣ ಮಾಡಿಸುತ್ತೇವೆಂದು ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಈಗಾಗಲೇ ಕೆಲವು ಶಾಲೆಗಳಿಗೆ ತಲುಪಿರುವ ಪಠ್ಯ ಪುಸ್ತಕಗಳ ಕತೆಗಳೇನು? ಹೊಸದಾಗಿ ಮುದ್ರಣವಾಗುವ ಪುಸ್ತಕಗಳನ್ನ ಸರಬರಾಜು ಯಾವಾಗ ಮಾಡಲಾಗುತ್ತೆ? ಮುದ್ರಣ-ಮರು ಮುದ್ರಣದ ಹೆಸರಿನಲ್ಲಿ ನೂರಾರು ಕೋಟಿ ಖರ್ಚು ಮಾಡಿ ಜನರ ತೆರಿಗೆ ಹಣವನ್ನ ದುರಪಯೋಗ ಮಾಡುತ್ತಿರುವುದು ಯಾಕೆ? ಒಬ್ಬ ಟ್ರೋಲರ್ ಅಂತಹ ಅವಿವೇಕಿ ಮಾಡಿದ ತಪ್ಪಿಗೆ ಜನರ ಹಣ ಪೋಲು ಮಾಡುತ್ತಿದೆ ಈ ಸರ್ಕಾರ.

ರಾಜ್ಯದಲ್ಲಿ 75,675 ಶಾಲೆಗಳ ಕೊಠಡಿಗಳನ್ನ ದುರಸ್ಥಿ ಮಾಡಬೇಕಾಗಿದ್ದು, 2,682 ಕೋಟಿ ಹಣ ವ್ಯಯ ಮಾಡಬೇಕಿದೆ ಎಂದು ಶಿಕ್ಷಣ ಇಲಾಖೆ ಕ್ರಿಯಾ ಯೋಜನೆ ತಯಾರಿಸಿ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಪ್ರಸ್ತಾಪನೆ ಸಲ್ಲಿಸಿದೆ. ಸಾವಿರಾರು ಶಾಲೆಗಳು ಶಿಥಿಲಗೊಂಡಿರುವ ಮಾಹಿತಿ ಮೊದಲೇ ಇದ್ದರು ಶಿಕ್ಷಣ ಇಲಾಖೆ ಶಾಲೆಗಳು ಪ್ರಾರಂಭವಾಗುವ ಮುನ್ನವೇ ಎಚ್ಚೆತ್ತುಕೊಂಡು ಕ್ರಿಯಾ ಯೋಜನೆ ಯಾಕೆ ರೂಪಿಸಲಿಲ್ಲ? 40% ಕಮಿಷನ್ ವ್ಯವಹಾರದ ಮಾತುಕತೆ ಇನ್ನೂ ಮುಗಿದಿರಲಿಲ್ವಾ? ಶಿಕ್ಷಣ ಸಚಿವರು ಟ್ರೋಲರ್ ನ ಸಮರ್ಥನೆಯಲ್ಲೇ ಕಾಲ ದೂಡಿದ್ರಾ? ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರಿಂದ ಹಾಗೂ ಕೆಲವು ಅಧಿಕಾರಿಗಳಿಂದ ವಿದ್ಯಾರ್ಥಿಗಳು ಜೀವ ಕೈಯಲ್ಲಿ ಬಿಗಿ ಹಿಡಿದು ಅಭ್ಯಾಸ ಮಾಡುವಂತಾಗಿದೆ.

ಮಳೆಗಾಲ ಪ್ರಾರಂಭವಾಗಿರುವುದರಿಂದ ದುರಸ್ಥಿ ಇರುವ ಶಾಲೆಗಳ ಪರಿಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ. ಶಾಲೆಗಳ ಕೊಠಡಿಗಳು ಯಾವಾಗ ತಲೆಯ ಮೇಲೆ ಹೊತ್ತು ಬೀಳುತ್ತವೆ ಎಂದು ಶಾಲೆಯ ಮಕ್ಕಳು ಭಯಭೀತರಾಗಿದ್ದಾರೆ. ಇಂತಹ ದಯನೀಯ ಸ್ಥಿತಿಗೆ ಶಿಕ್ಷಣ ಇಲಾಖೆಯನ್ನ ದೂಡಲಾಗಿದೆ. ಕೂಡಲೇ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ತ್ವರಿತವಾಗಿ ಶಾಲೆಗಳಿಗೆ ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುತ್ತೇನೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಭಾಗ್ಯ ಜಾರಿಗೆ ತಂದಿತ್ತು. ಯೋಜನೆಯಿಂದ 60 ರಿಂದ 70 ಲಕ್ಷ ವಿದ್ಯಾರ್ಥಿಗಳು ಫಲಾನುಭವಿಯಾಗಿದ್ದರು. ಖಾಸಗೀ ಶಾಲೆಯ ಮಕ್ಕಳ ಹಾಗೆಯೇ ಸರ್ಕಾರಿ ಶಾಲೆಯಲ್ಲಿ ಕಲಿಯುವ ಲಕ್ಷಾಂತರ ಮಕ್ಕಳು ಕೂಡ ಶೂ ಧರಿಸಿಕೊಂಡೆ ಶಾಲೆಗೆ ಬರುತ್ತಿದ್ದರು. ಆದ್ರೆ ಈ ಸರ್ಕಾರ ಬಡವರ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಕೊಡಿಸದೇ ಇರೋವಷ್ಟು ದಾರಿದ್ರ್ಯ ಬಂದಿದೆ.

2019-20ನೇ ಸಾಲಿನ ಕೊನೆದಾಗಿ ಸರ್ಕಾರ ಈ ಯೋಜನೆಗೆ ಹಣ ಬಿಡುಗಡೆ ಮಾಡಿದ್ದು ಬಿಟ್ಟರೇ, 2020-21, 2021-22 ಮತ್ತು ಈ ವರ್ಷ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಭಾಗ್ಯಕ್ಕೆ ಹಣವೇ ಮೀಸಲಿಟ್ಟಿಲ್ಲ. ಕನಿಷ್ಠ ಅದರ ಬಗ್ಗೆ ಇಲ್ಲಿವರೆಗೆ ಚರ್ಚೆಯೂ ನಡೆಸಿಲ್ಲ, ಶಿಕ್ಷಣ ಇಲಾಖೆ ಈ ಮಟ್ಟದ ಆರ್ಥಿಕ ದಿವಾಳಿತನ ಎದುರಿಸುತ್ತಿದ್ಯಾ? ರಾಷ್ಟ್ರೋತ್ತನ ಶಾಲೆಗಳಿಗೆ ವಿಶೇಷ ಒತ್ತು ನೀಡಿ ಪಠ್ಯ ಪುಸ್ತಕ ಖರೀದಿಗೆ,ಮೂಲ ಸೌಲಭ್ಯಗಳಿಗೆ ನೂರಾರು ಕೋಟಿ ಶೀಘ್ರವಾಗಿ ಬಿಡುಗಡೆ ಮಾಡುವ ಸರ್ಕಾರ ಬಡ ಮಕ್ಕಳ ಮೇಲೆ ಯಾಕೆ ಇಷ್ಟು ತಾತ್ಸರ? ಕೇವಲ ಸಂಘಪರಿವಾರವನ್ನ ಒಲೈಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿದೆ.

ಬಡ ಮಕ್ಕಳಿಗೆ ಶೂ ಕೊಡಲು ಯೋಗ್ಯತೆ ಇಲ್ಲದ ಮಂತ್ರಿಗಳು ಅಪ್ರಯೋಜಕರು. ದಿನಾಲೂ ಶಿಕ್ಷಣ ಇಲಾಖೆಯನ್ನ ವಿವಾದಿತ ಕೇಂದ್ರವನ್ನಾಗಿ ಮಾಡಿದ್ದಾರೆ. ಶಿಕ್ಷಣ ಇಲಾಖೆಯನ್ನ ನಿಭಾಯಿಸಲು ಶಕ್ತರಲ್ಲದ ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆ ನೀಡಿಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending