ದಿನದ ಸುದ್ದಿ
ಮಹಿಳಾ ಸಬಲೀಕರಣಕ್ಕೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಅತ್ಯಗತ್ಯ : ರಾಷ್ಟ್ರಪತಿ ರಾಮನಾಥ್ ಕೋವಿಂದ್
ಸುದ್ದಿದಿನ ಡೆಸ್ಕ್ : ಮಹಿಳಾ ಸಬಲೀಕರಣಕ್ಕಾಗಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಅತ್ಯಗತ್ಯ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿಳಿಸಿದ್ದಾರೆ.
ಐಜ್ವಾಲ್ನಲ್ಲಿ ಗುರುವಾರ ಮಿಜೋರಾಂ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದಲ್ಲಿ ಭಾಷಣ ಮಾಡಿದ ರಾಷ್ಟ್ರಪತಿ ದೇಶದಲ್ಲೇ ಮಿಜೋರಾಂ 2 ನೇ ಅತಿಹೆಚ್ಚು ಸಾಕ್ಷರತಾ ಪ್ರಮಾಣ ಹೊಂದಿದ್ದು, ವಿವಿಧ ವಲಯಗಳಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಶ್ಲಾಘಿಸಿದರು.
ವಿಶ್ವವಿದ್ಯಾಲಯ ಪ್ರದಾನ ಮಾಡಿರುವ 38ಚಿನ್ನದ ಪದಕಗಳ ಪೈಕಿ23 ಅನ್ನು ವಿದ್ಯಾರ್ಥಿನಿಯರೇ ಪಡೆದಿದ್ದು, ಮಹಿಳೆಯರಿಗೆ ಅವಕಾಶ ನೀಡಿದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿದೆ ಎಂದು ರಾಷ್ಟ್ರಪತಿ ತಿಳಿಸಿದರು.
ವಿಶ್ವವಿದ್ಯಾಲಯಗಳಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಚಟುವಟಿಕೆ ಅಳವಡಿಸಲಾಗುತ್ತಿದ್ದು, ಮಿಜೋರಾಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ನಾವಿನ್ಯತಾ ಮತ್ತು ಸೃಜನಶೀಲ ಪರಿಕಲ್ಪನೆಗಳಿಗೆ ಉತ್ತೇಜನ ನೀಡಲು ತಂತ್ರಜ್ಞಾನ ಇನ್ಕ್ಯುಬೇಶನ್ ಕೇಂದ್ರ ಸ್ಥಾಪಿಸಿರುವುದು ಸ್ವಾಗತಾರ್ಹ ಎಂದು ರಾಷ್ಟ್ರಪತಿ ತಿಳಿಸಿದರು.
I compliment the people of Mizoram along with the people of Sikkim and Tripura for generating the least plastic waste as per a study by NITI Aayog. This is a good example of responsible consumption and production. pic.twitter.com/1BojHElyCD
— President of India (@rashtrapatibhvn) May 5, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಡಿಯೋ | ಕೆಡಿ ಸೆಟ್ಟಲ್ಲಿ ಜೋಗಿ ಪ್ರೇಮ್ ಗೆ ಶಿಲ್ಪಾ ಶೆಟ್ಟಿ ಮಾಡಿದ್ದೇನು..?
ಸುದ್ದಿದಿನ ಡೆಸ್ಕ್ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಶೋ ಮ್ಯಾನ್ ಪ್ರೇಮ್ ಕತ್ತು ಹಿಸುಕಿ ಕೇಕೆ ಹೊಡೆದಿರೋ ಘಟನೆ ನಡೆದಿದೆ. ಕೆಡಿ ಸಿನಿಮಾದ ಮೂಲಕ ಕನ್ನಡಕ್ಕೆ ಕಂಬ್ಯಾಕ್ ಮಾಡಿರೋ ಬಾಲಿವುಡ್ ಚೆಲುವೆ ಶಿಲ್ಪಾ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು.
ಕೊನೆಯ ದಿನ ಕಾವೇರಿ ನದಿ ತೀರದಲ್ಲಿ ಕೆಡಿ ಚಿತ್ರೀಕರಣ ನಡೆದಿದ್ದು,ಸತ್ಯವತಿ ಉರುಫ್ ಶಿಲ್ಪಾ ಶೆಟ್ಟಿ ಪೋರ್ಷನ್ ಶೂಟಿಂಗ್ ಕಂಪ್ಲೀಟ್ ಆಗಿದೆ. ತಮ್ಮ ಭಾಗದ ಚಿತ್ರೀಕರಣ ಮುಗಿದಿದ್ದೇ ತಡ ಪ್ಯಾಕಪ್ ಪ್ಯಾಕಪ್ ಅಂತ ಶಿಲ್ಪಾ ಕುಣಿದಾಡಿದ್ದಾರೆ. ಇದೇ ವೇಳೆ ತಮಾಷೆ ಮಾಡುತ್ತಾ ಶೋ ಮ್ಯಾನ್ ಪ್ರೇಮ್ ಕತ್ತು ಹಿಸುಕಿ ಇವರಿಗೆ ಹಸಿವೇ ಆಗಲ್ಲ ಅನ್ಸುತ್ತೆ. ವಿತೌಟ್ ಬ್ರೇಕ್ ಕೆಲಸ ಮಾಡ್ತಾರೆ ಅದಕ್ಕೆ ಪ್ರತಿಫಲವಾಗಿ ಸಿನಿಮಾ ಅದ್ಭುತವಾಗಿ ಬಂದಿದೆ ಎಂದಿದ್ದಾರೆ.
ಜೋಗಿ ಪ್ರೇಮ್ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದಿರೋ ಶಿಲ್ಪಾ ಶೆಟ್ಟಿ, ಪ್ರೇಮ್ ಕಲ್ಪನೆಯಲ್ಲಿ ಅರಳಿರೋ ಸತ್ಯವತಿ ಪಾತ್ರ ನಂಗೆ ಬಹಳ ಹಿಡಿಸಿದೆ, ಕೆಡಿ ಮೇಲೆ ನಿರೀಕ್ಷೆ ಹೆಚ್ಚಿದೆ ಎಂತಲೂ ತಿಳಿಸಿದ್ದಾರೆ. ಇಡೀ ಕೆಡಿ ಟೀಮ್ ಜೊತೆ ಸಂತೋಷವಾಗಿ ಕಾಲ ಕಳೆದು ಮುಂಬೈಗೆ ವಾಪಾಸ್ ಆಗಿದ್ದಾರೆ. ಅಂದ್ಹಾಗೇ, ಕೊನೆಯ ದಿನ ಶೂಟಿಂಗ್ ಸೆಟ್ನಲ್ಲಿ ನಡೆದ ತರ್ಲೆ ತಮಾಷೆಯನ್ನ ವಿಡಿಯೋ ಮೂಲಕ ನಟಿ ಶಿಲ್ಪಾ ಶೆಟ್ಟಿ ತಮ್ಮ ಸೋಷಿಯಲ್ ಸೈಟ್ನಲ್ಲಿ ಹಂಚಿಕೊಂಡಿದ್ದಾರೆ.
ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ; ವಿಡಿಯೋ ನೋಡಿ
https://www.instagram.com/reel/C7l1UEfNIvA/?igsh=bDQ5NDVhMHpxYWc3
ಶಿಲ್ಪಾ ಶೆಟ್ಟಿ ಇತ್ತೀಚೆಗೆ ‘ಕೆಡಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ನಂಜನಗೂಡಿನ ನಂಜುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರಿಗೆ ಪ್ರಾರ್ಥನೆ ಸಲ್ಲಿಸಿ, ದೇವಾಲಯದ ಆವರಣದಲ್ಲಿ ಕುಳಿತು ಅವರು ಧ್ಯಾನ ಮಾಡಿದ್ದರು. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದವು.
ಇದೀಗ ಕೆಡಿ ಕೊನೆಯ ದಿನದ ಶೂಟಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ‘ಪ್ರೀತ್ಸೋದ್ ತಪ್ಪಾ’, ‘ಆಟೋ ಶಂಕರ್’, ‘ಒಂದಾಗೋಣ ಬಾ’ ಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದ ಮಂಗಳೂರು ಚೆಲುವೆ ಇದೀಗ ಕೆಡಿ ಮೂಲಕ ಮತ್ತೊಮ್ಮೆ ಸ್ಯಾಂಡಲ್ವುಡ್ಗೆ ರೀಎಂಟ್ರಿ ಕೊಟ್ಟಿದ್ದಾರೆ.
19 ವರ್ಷಗಳ ನಂತರ ಮತ್ತೊಮ್ಮೆ ಕರುನಾಡಲ್ಲಿ ದಿಬ್ಬಣ ಹೊರಡಲಿದ್ದಾರೆ. ಕೆಜಿಎಫ್ ನಂತರ ಅಧೀರ ಸಂಜಯ್ ದತ್ತ್ ಮತ್ತೆ ಕನ್ನಡಕ್ಕೆ ಮರಳಿದ್ದಾರೆ.ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಜೂನ್. 1 ರಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಸುದ್ದಿದಿನ,ದಾವಣಗೆರೆ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಕೆರಿಯರ್ ಗೈಡ್ನೆಸ್, ಹೈಯರ್ ಎಜುಕೇಶನ್ ಮತ್ತು ಕೆರಿಯರ್ ಅಪಾರ್ಚುನಿಟಿಸ್ಗಾಗಿ ಜೂನ್ 1 ಮತ್ತು 3 ರಂದು ಎರಡು ದಿನಗಳ ಕಾರ್ಯಗಾರವನ್ನು ಆನ್ಲೈನ್ ವೆಮಿನಾರ್ ಮೂಲಕ ಆಯೋಜಿಸಲಾಗಿದೆ.
ಜೂನ್.1 ರಂದು ವೆಮಿನಾರ್ ನಂ. 25208106583 ಅಂಡ್ ಪಾಸ್ ವಾರ್ಡ್ qsSKG4Dsh84 ಮತ್ತು ಜೂನ್ 3 ರಂದು ವೆಮಿನಾರ್ ನಂ.25259292738 ಅಂಡ್ ಪಾಸ್ ವಾರ್ಡ್ upW2Vtrxh22 ಇದರೊಂದಿಗೆ ಪದವಿ ಪೂರ್ವ ವಿದ್ಯಾರ್ಥಿಗಳು ಭಾಗವಹಿಸಿ ಉನ್ನತ ವ್ಯಾಸಂಗ ಮತ್ತು ಉತ್ತಮ ಉದ್ಯೋಗಕ್ಕೆ ವಿವರವಾದ ಮಾಹಿತಿಯನ್ನು ಪಡೆಯಬಹುದು.
ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ನಾಲ್ಕು ವಿಜ್ಞಾನಿಗಳು ಮೂಲ ವಿಜ್ಞಾನ, ಕೃಷಿ, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವ್ಯಾಸಂಗದ ಬಗ್ಗೆ ಸಲಹೆಗಳನ್ನು ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಉಮೇಶ ಘಾಟಗೆ – 9743084194 & ಚಂದ್ರಶೇಖರಮೂರ್ತಿ – 9686449019 ಅಥವಾ ವೆಬ್ ಸೈಟ್; www.kstacademy.in ವೀಕ್ಷಿಸಬಹುದಾಗಿದೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ
ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿರುತ್ತದೆ.
ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಚಲಾಯಿಸಲಿರುವ ಮತದಾರರಿಗೆ ಮತದಾನದ ದಿನವಾದ ಜೂನ್ 3 ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.
ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಗುರುತಿನ ಚೀಟಿ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.
ಪೂರಕ ದಾಖಲಾತಿ
ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ಕಾರ್ಡ್, ಇಂಡಿಯಾನ್ ಪಾಸ್ ಪೋರ್ಟ್, ಕೇಂದ್ರ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಮನೆಗಳಿಂದ ಅದರ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಕಾರ್ಡ್, ಸಂಸದರು, ಶಾಸಕರು, ಎಂಎಲ್ಸಿಗಳಿಗೆ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಕಾರ್ಡ್ಗಳು, ಇದರಲ್ಲಿ ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದು, ವಿಶ್ವವಿದ್ಯಾಲಯವು ನೀಡಿದ ಪದವಿ, ಡಿಪ್ಲೋಮಾ ಮೂಲ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕನ್ಯೂನತೆಯ ಪ್ರಮಾಣ ಪತ್ರ, ವಿಶಿಷ್ಟ ಅಂಗವೈಕಲ್ಯ ಕಾರ್ಡ್(UDID) ಮೂಲಕ ಮತದಾನ ಮಾಡಬಹುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ವಿಶ್ವವಿದ್ಯಾಲಯದ ವಿರುದ್ಧ ನಡೆಸಿದ ಎರಡು ಧರಣಿಗಳು
-
ದಿನದ ಸುದ್ದಿ6 days ago
ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!
-
ದಿನದ ಸುದ್ದಿ6 days ago
ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ
-
ದಿನದ ಸುದ್ದಿ6 days ago
ಕವಿತೆ | ಒಂದು ಕಪ್ ಕಾಫಿ
-
ದಿನದ ಸುದ್ದಿ6 days ago
ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ
-
ದಿನದ ಸುದ್ದಿ2 days ago
ಚನ್ನಗಿರಿ | ರಕ್ತದಾನ ಶಿಬಿರ
-
ಕ್ರೀಡೆ6 days ago
ಬೆಳಗಿನ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ3 days ago
ಹಂಪಿಯಲ್ಲಿ ಎಂಟು ಐತಿಹಾಸಿಕ ಬಾವಿಗಳು ಪತ್ತೆ