ದಿನದ ಸುದ್ದಿ
ಸಂಧಿವಾತ ಕೀಲುನೋವಿಗೆ ಪರಿಣಾಮಕಾರಿ ಚಿಕಿತ್ಸೆ
ಇಂದಿನ ಆಧುನಿಕ ಮನುಷ್ಯನಿಗೆ ಒಂದಲ್ಲ ಒಂದು ರೀತಿಯ ರೋಗಗಳು ಕಾಡುತ್ತಲೇ ಇವೆ. ಇಂದು ನಮ್ಮ ದೇಶದಲ್ಲಿ ಅಲೋಪತಿ, ಆಯುರ್ವೇದ, ಹೋಮಿಯೋಪತಿ, ಯುನಾನಿ ಹೀಗೆ ಅನೇಕ ಚಿಕಿತ್ಸಾ ಪದ್ದತಿಗಳು ಜಾರಿಯಲ್ಲಿವೆ.
ಯಾವ ಚಿಕಿತ್ಸೆ ಪಡೆದರೆ ಸಂಪೂರ್ಣ ವಾಸಿಯಾಗುತ್ತದೆ? ಯಾವ ಚಿಕಿತ್ಸೆ ಶ್ರೇಷ್ಟ? ಯಾವ ಔಷಧಿ ಶ್ರೇಷ್ಣ? ಎಂದು ಯಾವ ರೋಗಿಗೂ ಸ್ಪಷ್ಟವಾಗಿ ಗೊತ್ತಿಲ್ಲ. ಇದರಿಂದ ಜನರಲ್ಲಿ ಅನೇಕ ಗೊಂದಲಗಳುಂಟಾಗುತ್ತಿವೆ. ಅನೇಕರು ತಮ್ಮ ಒಂದೇ ಕಾಯಿಲೆಗೆ ವೈದ್ಯರಿಂದ ವೈದ್ಯರಲ್ಲಿಗೆ ಅಲೆದಾಡುತ್ತಿರುತ್ತಾರೆ. ಅಲೋಪತಿ ಔಷಧಿ ಪಡೆದು ಗುಣಮುಖವಾಗದಿದ್ದರೆ, ಆಯುರ್ವೇದ ವೈದ್ಯರಲ್ಲಿ ಓಡುತ್ತಾರೆ. ಅಲ್ಲಿ ಗುಣಮುಖವಾಗದಿದ್ದರೆ ಯುನಾನಿ, ನಾಟಿ ವೈದ್ಯರನ್ನು ಕಾಣಲು ಓಡುತ್ತಾರೆ. ವೈದ್ಯರಿಂದ ವೈದ್ಯರಲ್ಲಿಗೆ ಅಲೆದು, ಅವರು ಕೊಡುವ ವಿವಿಧ ಔಷಧಿಗಳನ್ನು ಸೇವಿಸುತ್ತಾ, ವಿವಿಧ ಔಷಧಿಗಳ ಅಡ್ಡಪರಿಣಾಮದಿಂದ ದೇಹದ ಅನೇಕ ಅಂಗಗಳು ಡ್ಯಾಮೇಜ್ ಆಗಿ ಗುಣಪಡಿಸಲಾಗದಂತಹ ಸ್ಥಿತಿಗೆ ರೋಗಿ ತಲುಪುತ್ತಿದ್ದಾನೆ.
ಹೀಗಾಗಿಯೇ ನಮ್ಮ ದೇಶದಲ್ಲಿ ಬಿಪಿ, ಶುಗರ್, ಕೀಲು ನೋವಿನಿಂದ ಬಳಲುತ್ತಿರುವ ರೋಗಿಗಳು ಪ್ರತಿ ಮನೆಯಲ್ಲಿ ಒಬ್ಬರು ಇಬ್ಬರು ಕಾಣಸಿಗುತ್ತಾರೆ ಮತ್ತು ಈ ಸಂಖ್ಯೆ ಪ್ರತೀ ವರ್ಷ ಹೆಚ್ಚಳವಾಗುತ್ತಿದೆ. ಇದಕ್ಕೆ ಕಾರಣ ಹುಡುಕಿದಾಗ ವೈದ್ಯರಲ್ಲಿ ದೋಷವಿಲ್ಲ. ವೈದ್ಯ ಪದ್ಧತಿಯಲ್ಲಿ ದೋಷವಿಲ್ಲ. ಒಬ್ಬ ರೋಗಿ ಅಲೋಪತಿಯಲ್ಲಿ ಸಂಪೂರ್ಣ ಗುಣಮುಖ ಹೊಂದಿದರೆ, ಮತ್ತೊಬ್ಬರು ಆಯುರ್ವೇದದಲ್ಲಿ ಗುಣಮುಖ ಹೊಂದಿರುತ್ತಾರೆ. ಇನ್ನೂ ಕೆಲವರು ನಾಟಿ ಔಷಧಿಯಿಂದ ಗುಣಮುಖ ಹೊಂದುತ್ತಾರೆ. ಅಲೋಪತಿಯಲ್ಲಿ, ಆಯುರ್ವೇದಲ್ಲಿ ಇತರೆ ಯಾವುದೇ ವೈದ್ಯ ಪದ್ಧತಿಯಲ್ಲಿ ದೋಷವಿಲ್ಲ. ದೋಷವಿರುವುದು ಜನರ ಆಹಾರ ಕ್ರಮದಲ್ಲಿ ಮತ್ತು ಜೀವನ ಶೈಲಿಯಲ್ಲಿ. ಆಹಾರ ಕ್ರಮ ಮತ್ತು ಜೀವನ ಶೈಲಿಯನ್ನು ಅರಿತು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಯಾವುದೇ ವೈದ್ಯ, ಪದ್ಧತಿ ಅನುಸರಿಸಿದರೂ ಕಾಯಿಲೆ ವಾಸಿಯಾಗುವುದು 100% ಸತ್ಯ.
ಇಂದು ಬಿಪಿ ಶುಗರ್ನಂತೆ ಬಹಳಷ್ಟು ಜನರು ಸಂಧಿವಾತದ ತೊಂದರೆಯಿಂದ ಬಳಲುತ್ತಿದ್ದಾರೆ. ಪ್ರತಿಯೊಂದು ಮನೆಯಲ್ಲೂ ಕಾಲುನೋವು, ಮೈ ಕೈ ನೋವು ಬೆನ್ನು ನೋವು ಎಂದು ಬಳಲುತ್ತಿರುತ್ತಾರೆ. ಅದರಲ್ಲೂ ಮಹಿಳೆಯರೇ ಹೆಚ್ಚಾಗಿ ಈ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ಪುರುಷರಲ್ಲೂ 30 ವರ್ಷ ವಯಸ್ಸಿನ ನಂತರ ಸಂಧಿವಾತದಿಂದ ಬಳಲುವವರು ಹೆಚ್ಚಾಗುತ್ತಿದ್ದಾರೆ. ಕುಳಿತುಕೊಳ್ಳಲು, ಮೇಲೇಳಲು, ನಡೆದಾಡಲು, ಮೆಟ್ಟಿಲು ಹತ್ತಲು ತುಂಬಾ ಕಷ್ಟವನ್ನನುಭವಿಸುತ್ತಿದ್ದಾರೆ.
ಸಂಧಿವಾತ ಎಂದರೇನು?
ನಮ್ಮ ಶರೀರದಲ್ಲಿ ನೋವು ಬರಲು ಪ್ರಮುಖ ಕಾರಣ ಅಧಿಕ ವಾತ ಅಥವಾ ವಾಯು. ನಾವು ಒಂದೇ ಬಾರಿಗೆ ಅತಿ ಆಹಾರ ಸೇವಿಸಿದಾಗ, ಹಸಿವೆಯಾಗದೆ ಆಹಾರ ಸೇವಿಸಿದಾಗ, ಪದೇ ಪದೇ ಆಹಾರ ಸೇವಿಸಿದಾಗ ಮತ್ತು ಎಣ್ಣೆಯಲ್ಲಿ ಕರಿದ ಉರಿದ ಆಹಾರ ಸೇವಿಸಿದಾಗ ಆಹಾರ ಸರಿಯಾಗಿ ಜೀರ್ಣವಾಗದೆ ಹೊಟ್ಟೆಯಲ್ಲಿ ಕೊಳೆಯಲು ಪ್ರಾರಂಭವಾಗುತ್ತದೆ. ಈ ಕೊಳೆತ ಆಹಾರ ಸಣ್ಣ ಕರುಳು ದೊಡ್ಡ ಕರುಳಿನಲ್ಲಿ ಗಟ್ಟಿಯಾಗಿ ಕುಳಿತು ಸಮಯಕ್ಕೆ ಸರಿಯಾಗಿ ವಿಸರ್ಜನೆ ಆಗದೆ ವಾತ ಅಥವಾ ವಾಯು ಹೆಚ್ಚಳವಾಗುತ್ತದೆ. ಈ ಹೆಚ್ಚಾದ ವಾತವು ಶರೀರದ ಮೂಳೆಗಳ ಸಂಧಿಗಳಲ್ಲಿ ಸಂಗ್ರಹಗೊಗೊಂಡು ಅಲ್ಲಿನ ಮೃದುವಾದ ನೀರಿನಂಶ ಇರುವ ಭಾಗವನ್ನು ಒಣಗಿಸುತ್ತದೆ. ಇದರಿಂದ ಪ್ರಮುಖವಾಗಿ ಕೈ ಕಾಲು ಬೆರಳುಗಳ ಸಂಧಿಗಳಲ್ಲಿ ನೋವು ಹೆಚ್ಚಾಗಿ, ವ್ಯಕ್ತಿ ನಡೆಯಲು, ನಿಲ್ಲಲು, ಕುಳಿತುಕೊಳ್ಳಲು, ಮೆಟ್ಟಿಲು ಹತ್ತಲು, ದಿನನಿತ್ಯದ ಕೆಲಸಗಳನ್ನು ಮಾಡಲು ಅಸಮರ್ಥನಾಗುತ್ತಾನೆ. ಈ ರೀತಿ ವಾತ ಹೆಚ್ಚಳದಿಂದ ಶರೀರದ ಕೀಲುಗಳ ಸಂಧಿಗಳಲ್ಲಿ ನೋವು ಬರುತ್ತಿದ್ದಲ್ಲಿ ಅದನ್ನು ಸಂಧಿವಾತ, ವಾತರೋಗ, ಕೀಲು ನೋವು ಎಂದು ವಿವಿಧ ಹೆಸರುಗಳಿಂದ ಕರೆಯುತ್ತೇವೆ. ವಾತರೋಗದಲ್ಲಿ ನೂರಕ್ಕೂ ಹೆಚ್ಚು ವಿಧಗಳಿವೆ. ಅವುಗಳಲ್ಲಿ ಪ್ರಮುಖವಾಗಿ ಆಸ್ಟಿಯೋ ಆರ್ಥರೈಟಿಸ್, ರುಮಟಾಯ್ಡ್ ಆರ್ಥರೈಟಿಸ್ ಅತಿ ಹೆಚ್ಚು ಜನರಲ್ಲಿ ಕಾಣಿಸಿಕೊಳ್ಳುತ್ತಿದೆ.
ಸಂಧಿವಾತಕ್ಕೆ ಪ್ರಾಕೃತಿ ಚಿಕಿತ್ಸೆ
ನಮ್ಮ ಶರೀರದ ಎಲ್ಲಾ ನೋವುಗಳಿಗೂ ವಾತ ಅಥವಾ ವಾಯು ಪ್ರಮುಖ ಕಾರಣವಾಗಿದೆ. ಹಾಗೆಯೇ ಸಂಧಿವಾತದ ಎಲ್ಲಾ ವಿವಿಧ ರೀತಿಯ ಕಾಯಿಲೆಗಳಿಗೂ ಒಂದೇ ರೀತಿಯ ಎಲ್ಲರು ಸರಳವಾಗಿ ಅನುಸರಿಸುವಂತಹ ಆಹಾರ ಪದ್ಧತಿ ಮತ್ತು ಜೀವನ ಶೈಲಿ ಮತ್ತು ಸೂಕ್ತ ಚಿಕಿತ್ಸಾ ಪದ್ದತಿಯನ್ನು ಅನುಸರಿಸಬಹುದಾಗಿದೆ. ಈ ಚಿಕಿತ್ಸಾ ಪದ್ದತಿಯನ್ನು ಅನುಸರಿಸುವ ಮೂಲಕ ನಿಮ್ಮ ಸಂಧಿವಾತ ರೋಗವನ್ನು ಶೇ.100 ರಷ್ಟು ನಿಯಂತ್ರಣಕ್ಕೆ ತರಬಹುದಾಗಿದೆ. ಆ ಮೂಲಕ ಸಾಮಾನ್ಯ ಜೀವನ ನಡೆಸಲು ನಿಮಗೆ ಸಾಧ್ಯವಾಗುತ್ತದೆ. ಸಂಪೂರ್ಣ ಆರೋಗ್ಯಕರ ಜೀವನ ನಡೆಸಬಹುದಾಗಿದೆ.
ಸಂಧಿವಾತಕ್ಕೆ ಅನುಸರಿಸಬೇಕಾದ ಆಹಾರ ಕ್ರಮ
• ಪ್ರತೀ ಬಾರಿ ಬಿಸಿ ಇರುವ ತಾಜಾ ಆಹಾರವನ್ನು ಸೇವಿಸಬೇಕು.
• ಯೂರಿಕ್ ಆಸಿಡ್ ಹೆಚ್ಚಿಸುವ ಆಹಾರವನ್ನು ಸಂಪೂರ್ಣ ಬಿಡಬೇಕು. ಮಾಂಸಹಾರ, ಬೇಕರಿ ಉತ್ಪನ್ನಗಳು, ಪ್ರೊಸೆಸ್ಡ್ ಪ್ಯಾಕ್ಡ್ ಫುಡ್, ಮಸಾಲೆ ಪದಾರ್ಥಗಳು, ಟೀ ಕಾಫಿ, ಸಕ್ಕರೆ, ಸಿಹಿ ಪದಾರ್ಥಗಳು, ದ್ವಿದಳ ಧಾನ್ಯಗಳು, ಮೈದಾ, ಎಣ್ಣೆಯಲ್ಲಿ ಕರಿದ ಹುರಿದ ಎಲ್ಲಾ ಆಹಾರಗಳು ಶರೀರದಲ್ಲಿ ಯೂರಿಕ್ ಆಸಿಡ್ ಹೆಚ್ಚಿಸುತ್ತವೆ.
• ಅತೀ ಹುಳಿಯಾಗಿರುವ ಯಾವುದೇ ಆಹಾರ ಮತ್ತು ಹಣ್ಣುಗಳನ್ನು ಸೇವಿಸಬಾರದು.
• ಪೊಟ್ಯಾಷಿಯಂ ಅಧಿಕವಿರುವ ಆಹಾರ ಸೇವಿಸಬಾರದು. ಅಧಿಕ ಪೊಟ್ಯಾಸಿಯಮ್ನಿಂದ ರಕ್ತದಲ್ಲಿ ಕಲ್ಮಷ ಹೆಚ್ಚಳವಾಗುತ್ತದೆ. ಅಧಿಕ ಪೊಟ್ಯಾಸಿಯಮ್ ಇರುವ ಬಾಳೆಹಣ್ಣು, ಎಳೆನೀರು, ಕಿತ್ತಳೆ ಹಣ್ಣು, ಗೆಣಸು, ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಪಾಲಕ್, ಟೊಮೇಟೊ, ಬೆಂಡೆಕಾಯಿ, ಬದನೆಕಾಯಿ, ಇವುಗಳನ್ನು ಬಿಟ್ಟು ಉಳಿದ ಎಲ್ಲಾ ತರಕಾರಿಗಳನ್ನು ಮಿತ ಪ್ರಮಾಣದಲ್ಲಿ ಸೇವಿಸಬಹುದು.. ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲೂ ಅಧಿಕ ಪೊಟ್ಯಾಸಿಯಮ್ ಇರುತ್ತದೆ. ಮಿತ ಪ್ರಮಾಣದಲ್ಲಿ ಸೇವಿಸಬಹುದು.
• ಗೋದಿಯಿಂದ ತಯಾರಿಸಿದ ಚಪಾತಿ ಮತ್ತು ಉಪ್ಪಿಟ್ಟನ್ನು ಮಿತವಾಗಿ ಸೇವಿಸಬೇಕು. ಗೋಧಿಯಲ್ಲಿ ಗ್ಲುಟೆನ್ ಇರುತ್ತದೆ. ಕೆಲವರಿಗೆ ಗ್ಲುಟೆನ್ ಉಳ್ಳ ಆಹಾರಗಳು ಅಲರ್ಜಿಯನ್ನುಂಟು ಮಾಡುತ್ತವೆ. ಗ್ಲುಟೆನ್ ತಿಂದರೆ ಕೆಲವರಿಗೆ ಆರೋಗ್ಯ ಸಮಸ್ಯೆಗಳು ಕಾಡುತ್ತವೆ.
• ಹಣ್ಣು ತರಕಾರಿ ಸೊಪ್ಪುಗಳನ್ನು ಹೆಚ್ಚಾಗಿ ಸೇವಿಸಬೇಕು. ಹಸಿ ತರಕಾರಿ ಅಜೀರ್ಣವನ್ನುಂಟುಮಾಡುತ್ತವೆ. ಬೇಯಿಸಿ ರುಚಿಕರವಾದ ಪಲ್ಯ ಸಾಂಬಾರ್ ಮಾಡಿ ಸೇವಿಸಬಹುದು..
• ವಾತ ಹೆಚ್ಚಿಸುವ ಬೇಳೆ ಕಾಳು ಮತ್ತು ಸಿರಿಧಾನ್ಯಗಳನ್ನು ಸಂಪೂರ್ಣ ಬಿಡಬೇಕು. ತೊಗರಿ ಬೇಳೆ, ಕಡಲೆ ಬೇಳೆ, ಹೆಸರುಬೇಳೆ, ಬಟಾಣಿ, ಶೇಂಗ ಇತ್ಯಾದಿ ಧಾನ್ಯಗಳೆಲ್ಲವೂ ವಾತ ಅಥವಾ ವಾಯು ಪ್ರಕೋಪವನ್ನುಂಟು ಮಾಡುತ್ತವೆ.
ಸಂಧಿವಾತ ಕಾಯಿಲೆ ಇರುವವರಿಗಾಗಿ ವಿಶೇಷ 5 ಜೀವನ ಸೂತ್ರಗಳು
• ಹಸಿವಾದಾಗ ಮಾತ್ರ ಊಟ ಮಾಡಬೇಕು.
• ಪ್ರತಿ ದಿನ ಎರಡು ಬಾರಿ ಮಾತ್ರ ಊಟ ಮಾಡಬೇಕು. ಒಂದು ಒಂದು ಊಟವನ್ನು ತ್ಯಾಜಿಸಿ ಉಪವಾಸ ಮಾಡಬೇಕು.
• ಪ್ರತಿದಿನ 30 ನಿಮಿಷ ಸೂರ್ಯನ ಬಿಸಿಲಲ್ಲಿ ಕುಳಿತುಕೊಳ್ಳಬೇಕು.
• ಪ್ರತಿದಿನ 20 ನಿಮಿಷ ವಾಕಿಂಗ್ ಮಾಡಬೇಕು.
• ಪ್ರತಿ ದಿನ ಸೂರ್ಯೋದಯಕ್ಕಿಂತ ಮುಂಚೆ ಏಳಬೇಕು.
ಸಂಧಿವಾತ ಕೀಲುನೋವಿಗೆ ಅತ್ಯಂತ ಶ್ರೇಷ್ಠ ಪರಿಣಾಮಕಾರಿ ಔಷಧ Stomach Kare ಮತ್ತು Othro Care!
ನಿಮ್ಮ ಸಂಧಿವಾತ ಕೀಲುನೋವು ಯಾವುದೇ ಹಂತದಲ್ಲಿರಲಿ. ಮೇಲಿನ ಆಹಾರ ಪದ್ಧತಿಯೊಂದಿಗೆ ಅಲ್ಪ ಪ್ರಮಾಣದಲ್ಲಿ ಪರಿಣಾಮಕಾರಿ ಔಷದ ಸೇವಿಸಿದಲ್ಲಿ ಕೆಲವೇ ದಿನಗಳಲ್ಲಿ ನಿಮ್ಮ ಸಂಧಿವಾತ ಕೀಲುನೋವು ನಿಯಂತ್ರಣಕ್ಕೆ ಬರುತ್ತದೆ. ನಿಮ್ಮ ಸಂಧಿವಾತ ಕೀಲುನೋವಿಗೆ Stomach Kare ಮತ್ತು Othro Care ಎಂಬ ಔಷಧವು ರಾಮಬಾಣದಂತೆ ಕೆಲಸ ಮಾಡುತ್ತದೆ. ಇದರ ಕ್ರಮಬದ್ಧ ಸೇವನೆಯಿಂದ ಕೆಲವೇ ದಿನಗಳಲ್ಲಿ ನಿಮ್ಮ ಸಂಧಿವಾತ ಕೀಲುನೋವು ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಮಾತ್ರವಲ್ಲ. ಇತರೆ ಕಾಯಿಲೆಗಳಾದ ಗ್ಯಾಸ್, ಅಸಿಡಿಟಿ, ಮಲಬದ್ಧತೆ, ಅಲ್ಸರ್, ಹೈಬಿಪಿ, ಹೃದಯ ರೋಗ, ಚರ್ಮರೋಗ, ಕಿಡ್ನಿ ಲಿವರ್ ಕಾಯಿಲೆಗಳಲ್ಲೂ ಈ ಔಷಧ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಔಷಧವನ್ನು ಭೂಲೋಕದ ಸಂಜೀವಿನಿ ಎಂದೇ ಹೇಳಬಹುದು.(ಬರಹ – ಸೂರ್ಯಕಾಂತ ಸಜ್ಜನ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ
ಸುದ್ದಿದಿನ,ದಾವಣಗೆರೆ:ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ ಸೋಮವಾರ ಸಂಜೆ ಜರುಗಿತು.
ಡಾ; ಶಾಮನೂರು ಶಿವಶಂಕರಪ್ಪನವರಿಗೆ 95 ವರ್ಷವಾಗಿದ್ದು ವಯೋಸಹಜ ಅನಾರೋಗ್ಯದಿಂದ ಡಿಸೆಂಬರ್ 14 ರಂದು ನಿಧನ ಹೊಂದಿದ್ದರು. 6 ಭಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ಸುಧೀರ್ಘ ರಾಜಕೀಯ ಸೇವೆಯಲ್ಲಿದ್ದ ಇವರು ರಾಜ್ಯ ಸೇರಿದಂತೆ ದಾವಣಗೆರೆಗೆ ಹೊಸ ರೂಪಕೊಟ್ಟಿದ್ದರು.
ಸೋಮವಾರ ಬೆಳಗ್ಗೆ 7.30 ಗಂಟೆಯಿಂದ ಪಾರ್ಥಿವ ಶರೀರಕ್ಕೆ ಸ್ವಗೃಹದಲ್ಲಿ ಕುಟುಂಬಸ್ಥರ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ವಿಧಿ ವಿಧಾನಗಳು ನಡೆದು, ಮಧ್ಯಾಹ್ನದಿಂದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ಅಂತಿಮ ದರ್ಶನ ಪಡೆದರು.
ಮಧ್ಯಾಹ್ನ 3.30 ರಿಂದ ಹೈಸ್ಕೂಲ್ ಮೈದಾನದಿಂದ ಹೊರಟು ಹಳೇ ದಾವಣಗೆರೆ ಮಂಡಿಪೇಟೆ, ಕಾಯಿಪೇಟೆ, ಅರಳಿವೃತ್ತದ ಮೂಲಕ ಕಲ್ಲೇಶ್ವರ ಮಿಲ್ಗೆ ಪಾರ್ಥಿವ ಶರೀರ ತಲುಪಿತು. ಸಂಜೆ 4.30 ರಿಂದ ಅಂತಿಮ ವಿಧಿ ವಿಧಾನಗಳು ನಡೆದವು.
ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಉಪ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು, ಇಂಧನ ಸಚಿವರಾದ ಕೆ.ಜೆ.ಜಾರ್ಜ್ರವರು, ಸಮಾಜ ಕಲ್ಯಾಣ ಸಚಿವರಾದ ಡಾ; ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ.ಎಸ್.ಪಾಟೀಲ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಸೇರಿದಂತೆ ಶಾಸಕರು ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.
ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಪಾರ್ಥಿವ ಶರೀರಕ್ಕೆ ಹೊದಿಸಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿ ಅಂತಿಮವಾಗಿ ಶೋಕ ವ್ಯಕ್ತಪಡಿಸಲಾಯಿತು. ರಾಷ್ಟ್ರಧ್ವಜವನ್ನು ಅವರ ಪುತ್ರರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ಪೂಜೆ, ವಿಧಿ, ವಿಧಾನಗಳೊಂದಿಗೆ ಪಾರ್ಥಿವ ಶರೀರವನ್ನು ಐಕ್ಯ ಮಂಟಪದಲ್ಲಿ ಇಡಲಾಯಿತು.
ಡಾ; ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸೊಸೆ ಹಾಗೂ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಇನ್ನಿಬ್ಬರು ಪುತ್ರರಾದ ಎಸ್.ಎಸ್.ಬಕ್ಕೇಶ್, ಎಸ್.ಎಸ್.ಗಣೇಶ್ ಸೇರಿದಂತೆ ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಸ್.ಆರ್.ಬೊಮ್ಮಾಯಿ, ಗೃಹ ಸಚಿವರಾದ ಜಿ.ಪರಮೇಶ್ವರ್, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಬಿ.ಜೆ.ಪಿ.ಪಕ್ಷದ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಅಂತಿಮ ದರ್ಶನ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ6 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ4 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
-
ದಿನದ ಸುದ್ದಿ5 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ5 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ1 day agoಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ

