ದಿನದ ಸುದ್ದಿ
ಸಂಧಿವಾತ ಕೀಲುನೋವಿಗೆ ಪರಿಣಾಮಕಾರಿ ಚಿಕಿತ್ಸೆ
ಇಂದಿನ ಆಧುನಿಕ ಮನುಷ್ಯನಿಗೆ ಒಂದಲ್ಲ ಒಂದು ರೀತಿಯ ರೋಗಗಳು ಕಾಡುತ್ತಲೇ ಇವೆ. ಇಂದು ನಮ್ಮ ದೇಶದಲ್ಲಿ ಅಲೋಪತಿ, ಆಯುರ್ವೇದ, ಹೋಮಿಯೋಪತಿ, ಯುನಾನಿ ಹೀಗೆ ಅನೇಕ ಚಿಕಿತ್ಸಾ ಪದ್ದತಿಗಳು ಜಾರಿಯಲ್ಲಿವೆ.
ಯಾವ ಚಿಕಿತ್ಸೆ ಪಡೆದರೆ ಸಂಪೂರ್ಣ ವಾಸಿಯಾಗುತ್ತದೆ? ಯಾವ ಚಿಕಿತ್ಸೆ ಶ್ರೇಷ್ಟ? ಯಾವ ಔಷಧಿ ಶ್ರೇಷ್ಣ? ಎಂದು ಯಾವ ರೋಗಿಗೂ ಸ್ಪಷ್ಟವಾಗಿ ಗೊತ್ತಿಲ್ಲ. ಇದರಿಂದ ಜನರಲ್ಲಿ ಅನೇಕ ಗೊಂದಲಗಳುಂಟಾಗುತ್ತಿವೆ. ಅನೇಕರು ತಮ್ಮ ಒಂದೇ ಕಾಯಿಲೆಗೆ ವೈದ್ಯರಿಂದ ವೈದ್ಯರಲ್ಲಿಗೆ ಅಲೆದಾಡುತ್ತಿರುತ್ತಾರೆ. ಅಲೋಪತಿ ಔಷಧಿ ಪಡೆದು ಗುಣಮುಖವಾಗದಿದ್ದರೆ, ಆಯುರ್ವೇದ ವೈದ್ಯರಲ್ಲಿ ಓಡುತ್ತಾರೆ. ಅಲ್ಲಿ ಗುಣಮುಖವಾಗದಿದ್ದರೆ ಯುನಾನಿ, ನಾಟಿ ವೈದ್ಯರನ್ನು ಕಾಣಲು ಓಡುತ್ತಾರೆ. ವೈದ್ಯರಿಂದ ವೈದ್ಯರಲ್ಲಿಗೆ ಅಲೆದು, ಅವರು ಕೊಡುವ ವಿವಿಧ ಔಷಧಿಗಳನ್ನು ಸೇವಿಸುತ್ತಾ, ವಿವಿಧ ಔಷಧಿಗಳ ಅಡ್ಡಪರಿಣಾಮದಿಂದ ದೇಹದ ಅನೇಕ ಅಂಗಗಳು ಡ್ಯಾಮೇಜ್ ಆಗಿ ಗುಣಪಡಿಸಲಾಗದಂತಹ ಸ್ಥಿತಿಗೆ ರೋಗಿ ತಲುಪುತ್ತಿದ್ದಾನೆ.
ಹೀಗಾಗಿಯೇ ನಮ್ಮ ದೇಶದಲ್ಲಿ ಬಿಪಿ, ಶುಗರ್, ಕೀಲು ನೋವಿನಿಂದ ಬಳಲುತ್ತಿರುವ ರೋಗಿಗಳು ಪ್ರತಿ ಮನೆಯಲ್ಲಿ ಒಬ್ಬರು ಇಬ್ಬರು ಕಾಣಸಿಗುತ್ತಾರೆ ಮತ್ತು ಈ ಸಂಖ್ಯೆ ಪ್ರತೀ ವರ್ಷ ಹೆಚ್ಚಳವಾಗುತ್ತಿದೆ. ಇದಕ್ಕೆ ಕಾರಣ ಹುಡುಕಿದಾಗ ವೈದ್ಯರಲ್ಲಿ ದೋಷವಿಲ್ಲ. ವೈದ್ಯ ಪದ್ಧತಿಯಲ್ಲಿ ದೋಷವಿಲ್ಲ. ಒಬ್ಬ ರೋಗಿ ಅಲೋಪತಿಯಲ್ಲಿ ಸಂಪೂರ್ಣ ಗುಣಮುಖ ಹೊಂದಿದರೆ, ಮತ್ತೊಬ್ಬರು ಆಯುರ್ವೇದದಲ್ಲಿ ಗುಣಮುಖ ಹೊಂದಿರುತ್ತಾರೆ. ಇನ್ನೂ ಕೆಲವರು ನಾಟಿ ಔಷಧಿಯಿಂದ ಗುಣಮುಖ ಹೊಂದುತ್ತಾರೆ. ಅಲೋಪತಿಯಲ್ಲಿ, ಆಯುರ್ವೇದಲ್ಲಿ ಇತರೆ ಯಾವುದೇ ವೈದ್ಯ ಪದ್ಧತಿಯಲ್ಲಿ ದೋಷವಿಲ್ಲ. ದೋಷವಿರುವುದು ಜನರ ಆಹಾರ ಕ್ರಮದಲ್ಲಿ ಮತ್ತು ಜೀವನ ಶೈಲಿಯಲ್ಲಿ. ಆಹಾರ ಕ್ರಮ ಮತ್ತು ಜೀವನ ಶೈಲಿಯನ್ನು ಅರಿತು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಯಾವುದೇ ವೈದ್ಯ, ಪದ್ಧತಿ ಅನುಸರಿಸಿದರೂ ಕಾಯಿಲೆ ವಾಸಿಯಾಗುವುದು 100% ಸತ್ಯ.
ಇಂದು ಬಿಪಿ ಶುಗರ್ನಂತೆ ಬಹಳಷ್ಟು ಜನರು ಸಂಧಿವಾತದ ತೊಂದರೆಯಿಂದ ಬಳಲುತ್ತಿದ್ದಾರೆ. ಪ್ರತಿಯೊಂದು ಮನೆಯಲ್ಲೂ ಕಾಲುನೋವು, ಮೈ ಕೈ ನೋವು ಬೆನ್ನು ನೋವು ಎಂದು ಬಳಲುತ್ತಿರುತ್ತಾರೆ. ಅದರಲ್ಲೂ ಮಹಿಳೆಯರೇ ಹೆಚ್ಚಾಗಿ ಈ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ಪುರುಷರಲ್ಲೂ 30 ವರ್ಷ ವಯಸ್ಸಿನ ನಂತರ ಸಂಧಿವಾತದಿಂದ ಬಳಲುವವರು ಹೆಚ್ಚಾಗುತ್ತಿದ್ದಾರೆ. ಕುಳಿತುಕೊಳ್ಳಲು, ಮೇಲೇಳಲು, ನಡೆದಾಡಲು, ಮೆಟ್ಟಿಲು ಹತ್ತಲು ತುಂಬಾ ಕಷ್ಟವನ್ನನುಭವಿಸುತ್ತಿದ್ದಾರೆ.
ಸಂಧಿವಾತ ಎಂದರೇನು?
ನಮ್ಮ ಶರೀರದಲ್ಲಿ ನೋವು ಬರಲು ಪ್ರಮುಖ ಕಾರಣ ಅಧಿಕ ವಾತ ಅಥವಾ ವಾಯು. ನಾವು ಒಂದೇ ಬಾರಿಗೆ ಅತಿ ಆಹಾರ ಸೇವಿಸಿದಾಗ, ಹಸಿವೆಯಾಗದೆ ಆಹಾರ ಸೇವಿಸಿದಾಗ, ಪದೇ ಪದೇ ಆಹಾರ ಸೇವಿಸಿದಾಗ ಮತ್ತು ಎಣ್ಣೆಯಲ್ಲಿ ಕರಿದ ಉರಿದ ಆಹಾರ ಸೇವಿಸಿದಾಗ ಆಹಾರ ಸರಿಯಾಗಿ ಜೀರ್ಣವಾಗದೆ ಹೊಟ್ಟೆಯಲ್ಲಿ ಕೊಳೆಯಲು ಪ್ರಾರಂಭವಾಗುತ್ತದೆ. ಈ ಕೊಳೆತ ಆಹಾರ ಸಣ್ಣ ಕರುಳು ದೊಡ್ಡ ಕರುಳಿನಲ್ಲಿ ಗಟ್ಟಿಯಾಗಿ ಕುಳಿತು ಸಮಯಕ್ಕೆ ಸರಿಯಾಗಿ ವಿಸರ್ಜನೆ ಆಗದೆ ವಾತ ಅಥವಾ ವಾಯು ಹೆಚ್ಚಳವಾಗುತ್ತದೆ. ಈ ಹೆಚ್ಚಾದ ವಾತವು ಶರೀರದ ಮೂಳೆಗಳ ಸಂಧಿಗಳಲ್ಲಿ ಸಂಗ್ರಹಗೊಗೊಂಡು ಅಲ್ಲಿನ ಮೃದುವಾದ ನೀರಿನಂಶ ಇರುವ ಭಾಗವನ್ನು ಒಣಗಿಸುತ್ತದೆ. ಇದರಿಂದ ಪ್ರಮುಖವಾಗಿ ಕೈ ಕಾಲು ಬೆರಳುಗಳ ಸಂಧಿಗಳಲ್ಲಿ ನೋವು ಹೆಚ್ಚಾಗಿ, ವ್ಯಕ್ತಿ ನಡೆಯಲು, ನಿಲ್ಲಲು, ಕುಳಿತುಕೊಳ್ಳಲು, ಮೆಟ್ಟಿಲು ಹತ್ತಲು, ದಿನನಿತ್ಯದ ಕೆಲಸಗಳನ್ನು ಮಾಡಲು ಅಸಮರ್ಥನಾಗುತ್ತಾನೆ. ಈ ರೀತಿ ವಾತ ಹೆಚ್ಚಳದಿಂದ ಶರೀರದ ಕೀಲುಗಳ ಸಂಧಿಗಳಲ್ಲಿ ನೋವು ಬರುತ್ತಿದ್ದಲ್ಲಿ ಅದನ್ನು ಸಂಧಿವಾತ, ವಾತರೋಗ, ಕೀಲು ನೋವು ಎಂದು ವಿವಿಧ ಹೆಸರುಗಳಿಂದ ಕರೆಯುತ್ತೇವೆ. ವಾತರೋಗದಲ್ಲಿ ನೂರಕ್ಕೂ ಹೆಚ್ಚು ವಿಧಗಳಿವೆ. ಅವುಗಳಲ್ಲಿ ಪ್ರಮುಖವಾಗಿ ಆಸ್ಟಿಯೋ ಆರ್ಥರೈಟಿಸ್, ರುಮಟಾಯ್ಡ್ ಆರ್ಥರೈಟಿಸ್ ಅತಿ ಹೆಚ್ಚು ಜನರಲ್ಲಿ ಕಾಣಿಸಿಕೊಳ್ಳುತ್ತಿದೆ.
ಸಂಧಿವಾತಕ್ಕೆ ಪ್ರಾಕೃತಿ ಚಿಕಿತ್ಸೆ
ನಮ್ಮ ಶರೀರದ ಎಲ್ಲಾ ನೋವುಗಳಿಗೂ ವಾತ ಅಥವಾ ವಾಯು ಪ್ರಮುಖ ಕಾರಣವಾಗಿದೆ. ಹಾಗೆಯೇ ಸಂಧಿವಾತದ ಎಲ್ಲಾ ವಿವಿಧ ರೀತಿಯ ಕಾಯಿಲೆಗಳಿಗೂ ಒಂದೇ ರೀತಿಯ ಎಲ್ಲರು ಸರಳವಾಗಿ ಅನುಸರಿಸುವಂತಹ ಆಹಾರ ಪದ್ಧತಿ ಮತ್ತು ಜೀವನ ಶೈಲಿ ಮತ್ತು ಸೂಕ್ತ ಚಿಕಿತ್ಸಾ ಪದ್ದತಿಯನ್ನು ಅನುಸರಿಸಬಹುದಾಗಿದೆ. ಈ ಚಿಕಿತ್ಸಾ ಪದ್ದತಿಯನ್ನು ಅನುಸರಿಸುವ ಮೂಲಕ ನಿಮ್ಮ ಸಂಧಿವಾತ ರೋಗವನ್ನು ಶೇ.100 ರಷ್ಟು ನಿಯಂತ್ರಣಕ್ಕೆ ತರಬಹುದಾಗಿದೆ. ಆ ಮೂಲಕ ಸಾಮಾನ್ಯ ಜೀವನ ನಡೆಸಲು ನಿಮಗೆ ಸಾಧ್ಯವಾಗುತ್ತದೆ. ಸಂಪೂರ್ಣ ಆರೋಗ್ಯಕರ ಜೀವನ ನಡೆಸಬಹುದಾಗಿದೆ.
ಸಂಧಿವಾತಕ್ಕೆ ಅನುಸರಿಸಬೇಕಾದ ಆಹಾರ ಕ್ರಮ
• ಪ್ರತೀ ಬಾರಿ ಬಿಸಿ ಇರುವ ತಾಜಾ ಆಹಾರವನ್ನು ಸೇವಿಸಬೇಕು.
• ಯೂರಿಕ್ ಆಸಿಡ್ ಹೆಚ್ಚಿಸುವ ಆಹಾರವನ್ನು ಸಂಪೂರ್ಣ ಬಿಡಬೇಕು. ಮಾಂಸಹಾರ, ಬೇಕರಿ ಉತ್ಪನ್ನಗಳು, ಪ್ರೊಸೆಸ್ಡ್ ಪ್ಯಾಕ್ಡ್ ಫುಡ್, ಮಸಾಲೆ ಪದಾರ್ಥಗಳು, ಟೀ ಕಾಫಿ, ಸಕ್ಕರೆ, ಸಿಹಿ ಪದಾರ್ಥಗಳು, ದ್ವಿದಳ ಧಾನ್ಯಗಳು, ಮೈದಾ, ಎಣ್ಣೆಯಲ್ಲಿ ಕರಿದ ಹುರಿದ ಎಲ್ಲಾ ಆಹಾರಗಳು ಶರೀರದಲ್ಲಿ ಯೂರಿಕ್ ಆಸಿಡ್ ಹೆಚ್ಚಿಸುತ್ತವೆ.
• ಅತೀ ಹುಳಿಯಾಗಿರುವ ಯಾವುದೇ ಆಹಾರ ಮತ್ತು ಹಣ್ಣುಗಳನ್ನು ಸೇವಿಸಬಾರದು.
• ಪೊಟ್ಯಾಷಿಯಂ ಅಧಿಕವಿರುವ ಆಹಾರ ಸೇವಿಸಬಾರದು. ಅಧಿಕ ಪೊಟ್ಯಾಸಿಯಮ್ನಿಂದ ರಕ್ತದಲ್ಲಿ ಕಲ್ಮಷ ಹೆಚ್ಚಳವಾಗುತ್ತದೆ. ಅಧಿಕ ಪೊಟ್ಯಾಸಿಯಮ್ ಇರುವ ಬಾಳೆಹಣ್ಣು, ಎಳೆನೀರು, ಕಿತ್ತಳೆ ಹಣ್ಣು, ಗೆಣಸು, ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಪಾಲಕ್, ಟೊಮೇಟೊ, ಬೆಂಡೆಕಾಯಿ, ಬದನೆಕಾಯಿ, ಇವುಗಳನ್ನು ಬಿಟ್ಟು ಉಳಿದ ಎಲ್ಲಾ ತರಕಾರಿಗಳನ್ನು ಮಿತ ಪ್ರಮಾಣದಲ್ಲಿ ಸೇವಿಸಬಹುದು.. ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲೂ ಅಧಿಕ ಪೊಟ್ಯಾಸಿಯಮ್ ಇರುತ್ತದೆ. ಮಿತ ಪ್ರಮಾಣದಲ್ಲಿ ಸೇವಿಸಬಹುದು.
• ಗೋದಿಯಿಂದ ತಯಾರಿಸಿದ ಚಪಾತಿ ಮತ್ತು ಉಪ್ಪಿಟ್ಟನ್ನು ಮಿತವಾಗಿ ಸೇವಿಸಬೇಕು. ಗೋಧಿಯಲ್ಲಿ ಗ್ಲುಟೆನ್ ಇರುತ್ತದೆ. ಕೆಲವರಿಗೆ ಗ್ಲುಟೆನ್ ಉಳ್ಳ ಆಹಾರಗಳು ಅಲರ್ಜಿಯನ್ನುಂಟು ಮಾಡುತ್ತವೆ. ಗ್ಲುಟೆನ್ ತಿಂದರೆ ಕೆಲವರಿಗೆ ಆರೋಗ್ಯ ಸಮಸ್ಯೆಗಳು ಕಾಡುತ್ತವೆ.
• ಹಣ್ಣು ತರಕಾರಿ ಸೊಪ್ಪುಗಳನ್ನು ಹೆಚ್ಚಾಗಿ ಸೇವಿಸಬೇಕು. ಹಸಿ ತರಕಾರಿ ಅಜೀರ್ಣವನ್ನುಂಟುಮಾಡುತ್ತವೆ. ಬೇಯಿಸಿ ರುಚಿಕರವಾದ ಪಲ್ಯ ಸಾಂಬಾರ್ ಮಾಡಿ ಸೇವಿಸಬಹುದು..
• ವಾತ ಹೆಚ್ಚಿಸುವ ಬೇಳೆ ಕಾಳು ಮತ್ತು ಸಿರಿಧಾನ್ಯಗಳನ್ನು ಸಂಪೂರ್ಣ ಬಿಡಬೇಕು. ತೊಗರಿ ಬೇಳೆ, ಕಡಲೆ ಬೇಳೆ, ಹೆಸರುಬೇಳೆ, ಬಟಾಣಿ, ಶೇಂಗ ಇತ್ಯಾದಿ ಧಾನ್ಯಗಳೆಲ್ಲವೂ ವಾತ ಅಥವಾ ವಾಯು ಪ್ರಕೋಪವನ್ನುಂಟು ಮಾಡುತ್ತವೆ.
ಸಂಧಿವಾತ ಕಾಯಿಲೆ ಇರುವವರಿಗಾಗಿ ವಿಶೇಷ 5 ಜೀವನ ಸೂತ್ರಗಳು
• ಹಸಿವಾದಾಗ ಮಾತ್ರ ಊಟ ಮಾಡಬೇಕು.
• ಪ್ರತಿ ದಿನ ಎರಡು ಬಾರಿ ಮಾತ್ರ ಊಟ ಮಾಡಬೇಕು. ಒಂದು ಒಂದು ಊಟವನ್ನು ತ್ಯಾಜಿಸಿ ಉಪವಾಸ ಮಾಡಬೇಕು.
• ಪ್ರತಿದಿನ 30 ನಿಮಿಷ ಸೂರ್ಯನ ಬಿಸಿಲಲ್ಲಿ ಕುಳಿತುಕೊಳ್ಳಬೇಕು.
• ಪ್ರತಿದಿನ 20 ನಿಮಿಷ ವಾಕಿಂಗ್ ಮಾಡಬೇಕು.
• ಪ್ರತಿ ದಿನ ಸೂರ್ಯೋದಯಕ್ಕಿಂತ ಮುಂಚೆ ಏಳಬೇಕು.
ಸಂಧಿವಾತ ಕೀಲುನೋವಿಗೆ ಅತ್ಯಂತ ಶ್ರೇಷ್ಠ ಪರಿಣಾಮಕಾರಿ ಔಷಧ Stomach Kare ಮತ್ತು Othro Care!
ನಿಮ್ಮ ಸಂಧಿವಾತ ಕೀಲುನೋವು ಯಾವುದೇ ಹಂತದಲ್ಲಿರಲಿ. ಮೇಲಿನ ಆಹಾರ ಪದ್ಧತಿಯೊಂದಿಗೆ ಅಲ್ಪ ಪ್ರಮಾಣದಲ್ಲಿ ಪರಿಣಾಮಕಾರಿ ಔಷದ ಸೇವಿಸಿದಲ್ಲಿ ಕೆಲವೇ ದಿನಗಳಲ್ಲಿ ನಿಮ್ಮ ಸಂಧಿವಾತ ಕೀಲುನೋವು ನಿಯಂತ್ರಣಕ್ಕೆ ಬರುತ್ತದೆ. ನಿಮ್ಮ ಸಂಧಿವಾತ ಕೀಲುನೋವಿಗೆ Stomach Kare ಮತ್ತು Othro Care ಎಂಬ ಔಷಧವು ರಾಮಬಾಣದಂತೆ ಕೆಲಸ ಮಾಡುತ್ತದೆ. ಇದರ ಕ್ರಮಬದ್ಧ ಸೇವನೆಯಿಂದ ಕೆಲವೇ ದಿನಗಳಲ್ಲಿ ನಿಮ್ಮ ಸಂಧಿವಾತ ಕೀಲುನೋವು ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಮಾತ್ರವಲ್ಲ. ಇತರೆ ಕಾಯಿಲೆಗಳಾದ ಗ್ಯಾಸ್, ಅಸಿಡಿಟಿ, ಮಲಬದ್ಧತೆ, ಅಲ್ಸರ್, ಹೈಬಿಪಿ, ಹೃದಯ ರೋಗ, ಚರ್ಮರೋಗ, ಕಿಡ್ನಿ ಲಿವರ್ ಕಾಯಿಲೆಗಳಲ್ಲೂ ಈ ಔಷಧ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಔಷಧವನ್ನು ಭೂಲೋಕದ ಸಂಜೀವಿನಿ ಎಂದೇ ಹೇಳಬಹುದು.(ಬರಹ – ಸೂರ್ಯಕಾಂತ ಸಜ್ಜನ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

