Connect with us

ದಿನದ ಸುದ್ದಿ

ಸಂಧಿವಾತ ಕೀಲುನೋವಿಗೆ ಪರಿಣಾಮಕಾರಿ ಚಿಕಿತ್ಸೆ

Published

on

ಇಂದಿನ ಆಧುನಿಕ ಮನುಷ್ಯನಿಗೆ ಒಂದಲ್ಲ ಒಂದು ರೀತಿಯ ರೋಗಗಳು ಕಾಡುತ್ತಲೇ ಇವೆ. ಇಂದು ನಮ್ಮ ದೇಶದಲ್ಲಿ ಅಲೋಪತಿ, ಆಯುರ್ವೇದ, ಹೋಮಿಯೋಪತಿ, ಯುನಾನಿ ಹೀಗೆ ಅನೇಕ ಚಿಕಿತ್ಸಾ ಪದ್ದತಿಗಳು ಜಾರಿಯಲ್ಲಿವೆ.

ಯಾವ ಚಿಕಿತ್ಸೆ ಪಡೆದರೆ ಸಂಪೂರ್ಣ ವಾಸಿಯಾಗುತ್ತದೆ? ಯಾವ ಚಿಕಿತ್ಸೆ ಶ್ರೇಷ್ಟ? ಯಾವ ಔಷಧಿ ಶ್ರೇಷ್ಣ? ಎಂದು ಯಾವ ರೋಗಿಗೂ ಸ್ಪಷ್ಟವಾಗಿ ಗೊತ್ತಿಲ್ಲ. ಇದರಿಂದ ಜನರಲ್ಲಿ ಅನೇಕ ಗೊಂದಲಗಳುಂಟಾಗುತ್ತಿವೆ. ಅನೇಕರು ತಮ್ಮ ಒಂದೇ ಕಾಯಿಲೆಗೆ ವೈದ್ಯರಿಂದ ವೈದ್ಯರಲ್ಲಿಗೆ ಅಲೆದಾಡುತ್ತಿರುತ್ತಾರೆ. ಅಲೋಪತಿ ಔಷಧಿ ಪಡೆದು ಗುಣಮುಖವಾಗದಿದ್ದರೆ, ಆಯುರ್ವೇದ ವೈದ್ಯರಲ್ಲಿ ಓಡುತ್ತಾರೆ. ಅಲ್ಲಿ ಗುಣಮುಖವಾಗದಿದ್ದರೆ ಯುನಾನಿ, ನಾಟಿ ವೈದ್ಯರನ್ನು ಕಾಣಲು ಓಡುತ್ತಾರೆ. ವೈದ್ಯರಿಂದ ವೈದ್ಯರಲ್ಲಿಗೆ ಅಲೆದು, ಅವರು ಕೊಡುವ ವಿವಿಧ ಔಷಧಿಗಳನ್ನು ಸೇವಿಸುತ್ತಾ, ವಿವಿಧ ಔಷಧಿಗಳ ಅಡ್ಡಪರಿಣಾಮದಿಂದ ದೇಹದ ಅನೇಕ ಅಂಗಗಳು ಡ್ಯಾಮೇಜ್ ಆಗಿ ಗುಣಪಡಿಸಲಾಗದಂತಹ ಸ್ಥಿತಿಗೆ ರೋಗಿ ತಲುಪುತ್ತಿದ್ದಾನೆ.

ಹೀಗಾಗಿಯೇ ನಮ್ಮ ದೇಶದಲ್ಲಿ ಬಿಪಿ, ಶುಗರ್, ಕೀಲು ನೋವಿನಿಂದ ಬಳಲುತ್ತಿರುವ ರೋಗಿಗಳು ಪ್ರತಿ ಮನೆಯಲ್ಲಿ ಒಬ್ಬರು ಇಬ್ಬರು ಕಾಣಸಿಗುತ್ತಾರೆ ಮತ್ತು ಈ ಸಂಖ್ಯೆ ಪ್ರತೀ ವರ್ಷ ಹೆಚ್ಚಳವಾಗುತ್ತಿದೆ. ಇದಕ್ಕೆ ಕಾರಣ ಹುಡುಕಿದಾಗ ವೈದ್ಯರಲ್ಲಿ ದೋಷವಿಲ್ಲ. ವೈದ್ಯ ಪದ್ಧತಿಯಲ್ಲಿ ದೋಷವಿಲ್ಲ. ಒಬ್ಬ ರೋಗಿ ಅಲೋಪತಿಯಲ್ಲಿ ಸಂಪೂರ್ಣ ಗುಣಮುಖ ಹೊಂದಿದರೆ, ಮತ್ತೊಬ್ಬರು ಆಯುರ್ವೇದದಲ್ಲಿ ಗುಣಮುಖ ಹೊಂದಿರುತ್ತಾರೆ. ಇನ್ನೂ ಕೆಲವರು ನಾಟಿ ಔಷಧಿಯಿಂದ ಗುಣಮುಖ ಹೊಂದುತ್ತಾರೆ. ಅಲೋಪತಿಯಲ್ಲಿ, ಆಯುರ್ವೇದಲ್ಲಿ ಇತರೆ ಯಾವುದೇ ವೈದ್ಯ ಪದ್ಧತಿಯಲ್ಲಿ ದೋಷವಿಲ್ಲ. ದೋಷವಿರುವುದು ಜನರ ಆಹಾರ ಕ್ರಮದಲ್ಲಿ ಮತ್ತು ಜೀವನ ಶೈಲಿಯಲ್ಲಿ. ಆಹಾರ ಕ್ರಮ ಮತ್ತು ಜೀವನ ಶೈಲಿಯನ್ನು ಅರಿತು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಯಾವುದೇ ವೈದ್ಯ, ಪದ್ಧತಿ ಅನುಸರಿಸಿದರೂ ಕಾಯಿಲೆ ವಾಸಿಯಾಗುವುದು 100% ಸತ್ಯ.

ಇಂದು ಬಿಪಿ ಶುಗರ್ನಂತೆ ಬಹಳಷ್ಟು ಜನರು ಸಂಧಿವಾತದ ತೊಂದರೆಯಿಂದ ಬಳಲುತ್ತಿದ್ದಾರೆ. ಪ್ರತಿಯೊಂದು ಮನೆಯಲ್ಲೂ ಕಾಲುನೋವು, ಮೈ ಕೈ ನೋವು ಬೆನ್ನು ನೋವು ಎಂದು ಬಳಲುತ್ತಿರುತ್ತಾರೆ. ಅದರಲ್ಲೂ ಮಹಿಳೆಯರೇ ಹೆಚ್ಚಾಗಿ ಈ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ಪುರುಷರಲ್ಲೂ 30 ವರ್ಷ ವಯಸ್ಸಿನ ನಂತರ ಸಂಧಿವಾತದಿಂದ ಬಳಲುವವರು ಹೆಚ್ಚಾಗುತ್ತಿದ್ದಾರೆ. ಕುಳಿತುಕೊಳ್ಳಲು, ಮೇಲೇಳಲು, ನಡೆದಾಡಲು, ಮೆಟ್ಟಿಲು ಹತ್ತಲು ತುಂಬಾ ಕಷ್ಟವನ್ನನುಭವಿಸುತ್ತಿದ್ದಾರೆ.

ಸಂಧಿವಾತ ಎಂದರೇನು?

ನಮ್ಮ ಶರೀರದಲ್ಲಿ ನೋವು ಬರಲು ಪ್ರಮುಖ ಕಾರಣ ಅಧಿಕ ವಾತ ಅಥವಾ ವಾಯು. ನಾವು ಒಂದೇ ಬಾರಿಗೆ ಅತಿ ಆಹಾರ ಸೇವಿಸಿದಾಗ, ಹಸಿವೆಯಾಗದೆ ಆಹಾರ ಸೇವಿಸಿದಾಗ, ಪದೇ ಪದೇ ಆಹಾರ ಸೇವಿಸಿದಾಗ ಮತ್ತು ಎಣ್ಣೆಯಲ್ಲಿ ಕರಿದ ಉರಿದ ಆಹಾರ ಸೇವಿಸಿದಾಗ ಆಹಾರ ಸರಿಯಾಗಿ ಜೀರ್ಣವಾಗದೆ ಹೊಟ್ಟೆಯಲ್ಲಿ ಕೊಳೆಯಲು ಪ್ರಾರಂಭವಾಗುತ್ತದೆ. ಈ ಕೊಳೆತ ಆಹಾರ ಸಣ್ಣ ಕರುಳು ದೊಡ್ಡ ಕರುಳಿನಲ್ಲಿ ಗಟ್ಟಿಯಾಗಿ ಕುಳಿತು ಸಮಯಕ್ಕೆ ಸರಿಯಾಗಿ ವಿಸರ್ಜನೆ ಆಗದೆ ವಾತ ಅಥವಾ ವಾಯು ಹೆಚ್ಚಳವಾಗುತ್ತದೆ. ಈ ಹೆಚ್ಚಾದ ವಾತವು ಶರೀರದ ಮೂಳೆಗಳ ಸಂಧಿಗಳಲ್ಲಿ ಸಂಗ್ರಹಗೊಗೊಂಡು ಅಲ್ಲಿನ ಮೃದುವಾದ ನೀರಿನಂಶ ಇರುವ ಭಾಗವನ್ನು ಒಣಗಿಸುತ್ತದೆ. ಇದರಿಂದ ಪ್ರಮುಖವಾಗಿ ಕೈ ಕಾಲು ಬೆರಳುಗಳ ಸಂಧಿಗಳಲ್ಲಿ ನೋವು ಹೆಚ್ಚಾಗಿ, ವ್ಯಕ್ತಿ ನಡೆಯಲು, ನಿಲ್ಲಲು, ಕುಳಿತುಕೊಳ್ಳಲು, ಮೆಟ್ಟಿಲು ಹತ್ತಲು, ದಿನನಿತ್ಯದ ಕೆಲಸಗಳನ್ನು ಮಾಡಲು ಅಸಮರ್ಥನಾಗುತ್ತಾನೆ. ಈ ರೀತಿ ವಾತ ಹೆಚ್ಚಳದಿಂದ ಶರೀರದ ಕೀಲುಗಳ ಸಂಧಿಗಳಲ್ಲಿ ನೋವು ಬರುತ್ತಿದ್ದಲ್ಲಿ ಅದನ್ನು ಸಂಧಿವಾತ, ವಾತರೋಗ, ಕೀಲು ನೋವು ಎಂದು ವಿವಿಧ ಹೆಸರುಗಳಿಂದ ಕರೆಯುತ್ತೇವೆ. ವಾತರೋಗದಲ್ಲಿ ನೂರಕ್ಕೂ ಹೆಚ್ಚು ವಿಧಗಳಿವೆ. ಅವುಗಳಲ್ಲಿ ಪ್ರಮುಖವಾಗಿ ಆಸ್ಟಿಯೋ ಆರ್ಥರೈಟಿಸ್, ರುಮಟಾಯ್ಡ್ ಆರ್ಥರೈಟಿಸ್ ಅತಿ ಹೆಚ್ಚು ಜನರಲ್ಲಿ ಕಾಣಿಸಿಕೊಳ್ಳುತ್ತಿದೆ.

ಸಂಧಿವಾತಕ್ಕೆ ಪ್ರಾಕೃತಿ ಚಿಕಿತ್ಸೆ

ನಮ್ಮ ಶರೀರದ ಎಲ್ಲಾ ನೋವುಗಳಿಗೂ ವಾತ ಅಥವಾ ವಾಯು ಪ್ರಮುಖ ಕಾರಣವಾಗಿದೆ. ಹಾಗೆಯೇ ಸಂಧಿವಾತದ ಎಲ್ಲಾ ವಿವಿಧ ರೀತಿಯ ಕಾಯಿಲೆಗಳಿಗೂ ಒಂದೇ ರೀತಿಯ ಎಲ್ಲರು ಸರಳವಾಗಿ ಅನುಸರಿಸುವಂತಹ ಆಹಾರ ಪದ್ಧತಿ ಮತ್ತು ಜೀವನ ಶೈಲಿ ಮತ್ತು ಸೂಕ್ತ ಚಿಕಿತ್ಸಾ ಪದ್ದತಿಯನ್ನು ಅನುಸರಿಸಬಹುದಾಗಿದೆ. ಈ ಚಿಕಿತ್ಸಾ ಪದ್ದತಿಯನ್ನು ಅನುಸರಿಸುವ ಮೂಲಕ ನಿಮ್ಮ ಸಂಧಿವಾತ ರೋಗವನ್ನು ಶೇ.100 ರಷ್ಟು ನಿಯಂತ್ರಣಕ್ಕೆ ತರಬಹುದಾಗಿದೆ. ಆ ಮೂಲಕ ಸಾಮಾನ್ಯ ಜೀವನ ನಡೆಸಲು ನಿಮಗೆ ಸಾಧ್ಯವಾಗುತ್ತದೆ. ಸಂಪೂರ್ಣ ಆರೋಗ್ಯಕರ ಜೀವನ ನಡೆಸಬಹುದಾಗಿದೆ.

ಸಂಧಿವಾತಕ್ಕೆ ಅನುಸರಿಸಬೇಕಾದ ಆಹಾರ ಕ್ರಮ

• ಪ್ರತೀ ಬಾರಿ ಬಿಸಿ ಇರುವ ತಾಜಾ ಆಹಾರವನ್ನು ಸೇವಿಸಬೇಕು.
• ಯೂರಿಕ್ ಆಸಿಡ್ ಹೆಚ್ಚಿಸುವ ಆಹಾರವನ್ನು ಸಂಪೂರ್ಣ ಬಿಡಬೇಕು. ಮಾಂಸಹಾರ, ಬೇಕರಿ ಉತ್ಪನ್ನಗಳು, ಪ್ರೊಸೆಸ್ಡ್ ಪ್ಯಾಕ್ಡ್ ಫುಡ್, ಮಸಾಲೆ ಪದಾರ್ಥಗಳು, ಟೀ ಕಾಫಿ, ಸಕ್ಕರೆ, ಸಿಹಿ ಪದಾರ್ಥಗಳು, ದ್ವಿದಳ ಧಾನ್ಯಗಳು, ಮೈದಾ, ಎಣ್ಣೆಯಲ್ಲಿ ಕರಿದ ಹುರಿದ ಎಲ್ಲಾ ಆಹಾರಗಳು ಶರೀರದಲ್ಲಿ ಯೂರಿಕ್ ಆಸಿಡ್ ಹೆಚ್ಚಿಸುತ್ತವೆ.
• ಅತೀ ಹುಳಿಯಾಗಿರುವ ಯಾವುದೇ ಆಹಾರ ಮತ್ತು ಹಣ್ಣುಗಳನ್ನು ಸೇವಿಸಬಾರದು.
• ಪೊಟ್ಯಾಷಿಯಂ ಅಧಿಕವಿರುವ ಆಹಾರ ಸೇವಿಸಬಾರದು. ಅಧಿಕ ಪೊಟ್ಯಾಸಿಯಮ್ನಿಂದ ರಕ್ತದಲ್ಲಿ ಕಲ್ಮಷ ಹೆಚ್ಚಳವಾಗುತ್ತದೆ. ಅಧಿಕ ಪೊಟ್ಯಾಸಿಯಮ್ ಇರುವ ಬಾಳೆಹಣ್ಣು, ಎಳೆನೀರು, ಕಿತ್ತಳೆ ಹಣ್ಣು, ಗೆಣಸು, ಕ್ಯಾರೆಟ್, ಮೂಲಂಗಿ, ಬೀಟ್ರೂಟ್, ಪಾಲಕ್, ಟೊಮೇಟೊ, ಬೆಂಡೆಕಾಯಿ, ಬದನೆಕಾಯಿ, ಇವುಗಳನ್ನು ಬಿಟ್ಟು ಉಳಿದ ಎಲ್ಲಾ ತರಕಾರಿಗಳನ್ನು ಮಿತ ಪ್ರಮಾಣದಲ್ಲಿ ಸೇವಿಸಬಹುದು.. ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲೂ ಅಧಿಕ ಪೊಟ್ಯಾಸಿಯಮ್ ಇರುತ್ತದೆ. ಮಿತ ಪ್ರಮಾಣದಲ್ಲಿ ಸೇವಿಸಬಹುದು.
• ಗೋದಿಯಿಂದ ತಯಾರಿಸಿದ ಚಪಾತಿ ಮತ್ತು ಉಪ್ಪಿಟ್ಟನ್ನು ಮಿತವಾಗಿ ಸೇವಿಸಬೇಕು. ಗೋಧಿಯಲ್ಲಿ ಗ್ಲುಟೆನ್ ಇರುತ್ತದೆ. ಕೆಲವರಿಗೆ ಗ್ಲುಟೆನ್ ಉಳ್ಳ ಆಹಾರಗಳು ಅಲರ್ಜಿಯನ್ನುಂಟು ಮಾಡುತ್ತವೆ. ಗ್ಲುಟೆನ್ ತಿಂದರೆ ಕೆಲವರಿಗೆ ಆರೋಗ್ಯ ಸಮಸ್ಯೆಗಳು ಕಾಡುತ್ತವೆ.
• ಹಣ್ಣು ತರಕಾರಿ ಸೊಪ್ಪುಗಳನ್ನು ಹೆಚ್ಚಾಗಿ ಸೇವಿಸಬೇಕು. ಹಸಿ ತರಕಾರಿ ಅಜೀರ್ಣವನ್ನುಂಟುಮಾಡುತ್ತವೆ. ಬೇಯಿಸಿ ರುಚಿಕರವಾದ ಪಲ್ಯ ಸಾಂಬಾರ್ ಮಾಡಿ ಸೇವಿಸಬಹುದು..
• ವಾತ ಹೆಚ್ಚಿಸುವ ಬೇಳೆ ಕಾಳು ಮತ್ತು ಸಿರಿಧಾನ್ಯಗಳನ್ನು ಸಂಪೂರ್ಣ ಬಿಡಬೇಕು. ತೊಗರಿ ಬೇಳೆ, ಕಡಲೆ ಬೇಳೆ, ಹೆಸರುಬೇಳೆ, ಬಟಾಣಿ, ಶೇಂಗ ಇತ್ಯಾದಿ ಧಾನ್ಯಗಳೆಲ್ಲವೂ ವಾತ ಅಥವಾ ವಾಯು ಪ್ರಕೋಪವನ್ನುಂಟು ಮಾಡುತ್ತವೆ.

ಸಂಧಿವಾತ ಕಾಯಿಲೆ ಇರುವವರಿಗಾಗಿ ವಿಶೇಷ 5 ಜೀವನ ಸೂತ್ರಗಳು

• ಹಸಿವಾದಾಗ ಮಾತ್ರ ಊಟ ಮಾಡಬೇಕು.
• ಪ್ರತಿ ದಿನ ಎರಡು ಬಾರಿ ಮಾತ್ರ ಊಟ ಮಾಡಬೇಕು. ಒಂದು ಒಂದು ಊಟವನ್ನು ತ್ಯಾಜಿಸಿ ಉಪವಾಸ ಮಾಡಬೇಕು.
• ಪ್ರತಿದಿನ 30 ನಿಮಿಷ ಸೂರ್ಯನ ಬಿಸಿಲಲ್ಲಿ ಕುಳಿತುಕೊಳ್ಳಬೇಕು.
• ಪ್ರತಿದಿನ 20 ನಿಮಿಷ ವಾಕಿಂಗ್ ಮಾಡಬೇಕು.
• ಪ್ರತಿ ದಿನ ಸೂರ್ಯೋದಯಕ್ಕಿಂತ ಮುಂಚೆ ಏಳಬೇಕು.

ಸಂಧಿವಾತ ಕೀಲುನೋವಿಗೆ ಅತ್ಯಂತ ಶ್ರೇಷ್ಠ ಪರಿಣಾಮಕಾರಿ ಔಷಧ Stomach Kare ಮತ್ತು Othro Care!

ನಿಮ್ಮ ಸಂಧಿವಾತ ಕೀಲುನೋವು ಯಾವುದೇ ಹಂತದಲ್ಲಿರಲಿ. ಮೇಲಿನ ಆಹಾರ ಪದ್ಧತಿಯೊಂದಿಗೆ ಅಲ್ಪ ಪ್ರಮಾಣದಲ್ಲಿ ಪರಿಣಾಮಕಾರಿ ಔಷದ ಸೇವಿಸಿದಲ್ಲಿ ಕೆಲವೇ ದಿನಗಳಲ್ಲಿ ನಿಮ್ಮ ಸಂಧಿವಾತ ಕೀಲುನೋವು ನಿಯಂತ್ರಣಕ್ಕೆ ಬರುತ್ತದೆ. ನಿಮ್ಮ ಸಂಧಿವಾತ ಕೀಲುನೋವಿಗೆ Stomach Kare ಮತ್ತು Othro Care ಎಂಬ ಔಷಧವು ರಾಮಬಾಣದಂತೆ ಕೆಲಸ ಮಾಡುತ್ತದೆ. ಇದರ ಕ್ರಮಬದ್ಧ ಸೇವನೆಯಿಂದ ಕೆಲವೇ ದಿನಗಳಲ್ಲಿ ನಿಮ್ಮ ಸಂಧಿವಾತ ಕೀಲುನೋವು ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಮಾತ್ರವಲ್ಲ. ಇತರೆ ಕಾಯಿಲೆಗಳಾದ ಗ್ಯಾಸ್, ಅಸಿಡಿಟಿ, ಮಲಬದ್ಧತೆ, ಅಲ್ಸರ್, ಹೈಬಿಪಿ, ಹೃದಯ ರೋಗ, ಚರ್ಮರೋಗ, ಕಿಡ್ನಿ ಲಿವರ್ ಕಾಯಿಲೆಗಳಲ್ಲೂ ಈ ಔಷಧ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಔಷಧವನ್ನು ಭೂಲೋಕದ ಸಂಜೀವಿನಿ ಎಂದೇ ಹೇಳಬಹುದು.(ಬರಹ – ಸೂರ್ಯಕಾಂತ ಸಜ್ಜನ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending