Connect with us

ದಿನದ ಸುದ್ದಿ

ಉದ್ಯೋಗಾವಕಾಶ ಹೆಚ್ಚಿಸಲು ದಾವಣಗೆರೆಗೆ ಐಟಿ ಕಂಪನಿ ಕರೆತರಲು ಪ್ರಯತ್ನ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಸ್ವಾತಂತ್ರ್ಯವು ನಮ್ಮ ಹೊಣೆಗಾರಿಕೆ, ದೇಶದ ಏಕತೆ, ಶಾಂತಿ, ಪ್ರಗತಿ ಜೊತೆಗೆ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಮತ್ತು ಕ್ರೀಡೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ವಿಶ್ವದ ಗಮನ ಸೆಳೆಯುತ್ತಿದ್ದೇವೆ. ಆದರೆ, ಭ್ರಷ್ಟಾಚಾರ, ಅಸಮಾನತೆ, ಪರಿಸರ ಮಾಲಿನ್ಯ, ನಿರುದ್ಯೋಗ ಮುಂತಾದ ಸವಾಲುಗಳನ್ನು ನಿವಾರಿಸಲು ಎಲ್ಲರೂ ಒಟ್ಟಾಗಿ ಶ್ರಮಿಸುವುದು ಇಂದಿನ ಅಗತ್ಯವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.

ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 79 ನೇ ಸ್ವಾತಂತ್ರ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ತಮ್ಮ ಸ್ವಾತಂತ್ರ್ಯೋತ್ಸವ ಸಂದೇಶದಲ್ಲಿ ಮಾತನಾಡಿದರು.

ಅನೇಕ ಹೋರಾಟಗಾರರ ತ್ಯಾಗ, ಶೌರ್ಯ ಮತ್ತು ದೃಢಸಂಕಲ್ಪದ ಫಲವಾಗಿ, ನಮ್ಮ ದೇಶವು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಿಯಾಯಿತು. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾμï ಚಂದ್ರ ಬೋಸ್, ಭಗತ್ ಸಿಂಗ್, ಸರೋಜಿನಿ ನಾಯ್ಡು, ಲಾಲಾ ಲಜಪತ್ ರಾಯ್, ಟಿಪ್ಪು ಸುಲ್ತಾನ್, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಅನೇಕ ಹೋರಾಟಗಾರರ ಅಮರ ತ್ಯಾಗವನ್ನು ನೆನಪಿಸಿಕೊಳ್ಳಬೇಕು.

ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ದಾವಣಗೆರೆಯ ಹಳ್ಳೂರು ನಾಗಪ್ಪ, ಅಕ್ಕಸಾಲೆ ವಿರೂಪಾಕ್ಷಪ್ಪ, ಬಿದಿರಕುಂದಿ ನಿಂಗಪ್ಪ, ಹಮಾಲಿ ತಿಮ್ಮಣ್ಣ, ಹದಡಿ ನಿಂಗಪ್ಪ, ಮಾಗಾನಹಳ್ಳಿ ಹನುಮಂತಪ್ಪ ಇವರುಗಳು ಅಂದು ಬ್ರಿಟೀಷರ ಗುಂಡಿಗೆ ಪ್ರಾಣಾರ್ಪಣೆ ಮಾಡಿ ಹುತಾತ್ಮರಾಗಿದ್ದನ್ನು ನಾವಿಂದು ನೆನಪಿಸಿಕೊಳ್ಳುತ್ತಾ, ಅವರಿಗೂ ಸಹ ನಾವೆಲ್ಲರೂ ಗೌರವ ನಮನಗಳನ್ನು ಸಲ್ಲಿಸುವ ಜೊತೆಗೆ ನಮ್ಮ ಸಂಸ್ಕøತಿ, ಭಾμÉ, ಪರಂಪರೆಗಳನ್ನು ಕಾಪಾಡಿಕೊಂಡು, ನವೀನತೆ ಮತ್ತು ಅಭಿವೃದ್ಧಿಯತ್ತ ಸಾಗೋಣ ಎಂದರು.

ನಮ್ಮ ಸರ್ಕಾರ ಅಧಿಕಾರವಹಿಸಿಕೊಂಡ ನಂತರ ಆರ್ಥಿಕವಾಗಿ ಬಸವಳೆದು ಹೋಗಿದ್ದ ರಾಜ್ಯದ ಜನತೆಗೆ ಆರ್ಥಿಕ ಶಕ್ತಿಯನ್ನು ತುಂಬಬೇಕೆಂಬ ಉದ್ದೇಶದಿಂದ ನುಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದೆ. ಇದಕ್ಕಾಗಿ ರೂ.2346 ಕೋಟಿಯಷ್ಟು ಹಣವನ್ನು ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ ಜಿಲ್ಲೆಯ ಜನರಿಗಾಗಿ ಖರ್ಚು ಮಾಡಲಾಗಿದೆ ಎಂದರು.

ಈ ವರ್ಷ ಮುಂಗಾರು ಮಳೆ ಬಹಳ ಆಶಾದಾಯಕವಾಗಿದೆ. ರೈತರಿಗೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಮಾಡಲಾಗಿದೆ. ಈ ವರ್ಷ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಮೂಲಕ ಜಿಲ್ಲೆಯ ತೋಟಗಾರಿಕೆ ಅಭಿವೃದ್ದಿಗೆ ರೂ.49.98 ಕೋಟಿ ಅನುದಾನ ನೀಡಲಾಗಿದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಶೇ 90 ರಷ್ಟು ಸಹಾಯಧನವನ್ನು ಒದಗಿಸುವುದರ ಜೊತೆಗೆ 7 ವರ್ಷಗಳ ಹಿಂದೆ ಹನಿ ನೀರಾವರಿಗೆ ಸಹಾಯಧನ ಪಡೆದಿದ್ದಲ್ಲಿ ಅದೇ ಸರ್ವೆ ನಂಬರ್ ಗೆ ಸಹಾಯಧನ ನೀಡಲು ಅವಕಾಶ ಕಲ್ಪಿಸಲಾಗಿದೆ. ಮತ್ತು ರಾಜ್ಯದ ಜೇನುತುಪ್ಪಕ್ಕೆ “ಝೇಂಕಾರ” ಹೆಸರಿನ ಬ್ರ್ಯಾಂಡ್ ನೀಡಲಾಗಿದೆ.

ಕಂದಾಯ ಇಲಾಖೆಯಿಂದ ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಿ 25581 ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವ ಸಂಕಲ್ಪ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ 2.11 ಲಕ್ಷ ಕಡತಗಳನ್ನು ಡಿಟಿಟಲೀಕರಣ ಮಾಡಿ 32302 ಪುಟಗಳ ದಾಖಲೆ ವಿತರಿಸಿ ರಾಜ್ಯದಲ್ಲಿಯೇ ದಾವಣಗೆರೆ ಮೊದಲ ಸ್ಥಾನದಲ್ಲಿದೆ.

ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ 100 ಗ್ರಾಮಗಳಲ್ಲಿ 24 ಗಂಟೆ ನೀರು ಪೂರೈಕೆ ಮಾಡಲು ಉದ್ದೇಶಿಸಿ ಈಗಾಗಲೇ 50 ಗ್ರಾಮಗಳಲ್ಲಿ 24*7 ನೀರು ಪೂರೈಸಲಾಗುತ್ತಿದೆ. ಜಿಲ್ಲೆಯಲ್ಲಿ 1771 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದ 407 ಕೇಂದ್ರಗಳಿಗೆ ನಿವೇಶನ ಒದಗಿಸಿ ಮುಂದಿನ ದಿನಗಳಲ್ಲಿ ಬಾಡಿಗೆ ಮುಕ್ತ ಅಂಗನವಾಡಿ ಕೇಂದ್ರಗಳ ಜಿಲ್ಲೆ ಎಂದು ಘೋಷಣೆ ಮಾಡಲಾಗುತ್ತದೆ.

ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ

ಚಿಗಟೇರಿ ಆಸ್ಪತ್ರೆಯಲ್ಲಿ 400 ಹಾಸಿಗೆಯ ಕಟ್ಟಡ ನಿರ್ಮಿಸಲು ರೂ.260 ಕೋಟಿಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಿ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮತ್ತು ಎಸ್.ಎಸ್.ಎಲ್.ಸಿ. ಫಲಿತಾಂಶ ಮತ್ತು ಪಿಯುಸಿ ಫಲಿತಾಂಶ ಸುಧಾರಣೆಗೆ ಕಲಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತ್ತು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಬಡವರಿಗೆ ಅನುಕೂಲ ಕಲ್ಪಿಸಲು ಸಂಕಲ್ಪ ಕೇಂದ್ರವನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ದಾವಣಗೆರೆಗೆ ಸಾಫ್ಟ್‍ವೇರ್ ಕಂಪನಿಗಳನ್ನು ಆಹ್ವಾನಿಸಿ ಉದ್ಯೋಗ ನೀಡಲು ವಿಷನ್ ಗ್ರೂಪ್ ರಚಿಸಿ ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.

ಮಹಾನಗರ ಪಾಲಿಕೆಯಿಂದ ಪಿ.ಬಿ.ರಸ್ತೆಯಿಂದ ಬಸಾಪುರ ರಸ್ತೆವರೆಗೆ ರಾಜಕಾಲುವೆ ಎತ್ತರಿಸುವುದು ಮತ್ತು ರಿಂಗ್ ರಸ್ತೆ ಕಾಮಗಾರಿಯನ್ನು ರೂ.129 ಕೋಟಿ ಮೊತ್ತದಲ್ಲಿ ನಿರ್ಮಿಸಲು ಟೆಂಡರ್ ಹಂತದಲ್ಲಿದೆ. ಜಲಸಿರಿ ಯೋಜನೆಯಡಿ 24*7 ನೀರು ಪೂರೈಕೆಯನ್ನು ಈಗಾಗಲೇ 32 ವಲಯಗಳಲ್ಲಿ ಮಾಡಲಾಗುತ್ತಿದೆ. ತಿಂಗಳಾಂತ್ಯಕ್ಕೆ ಉಳಿದ 18 ವಲಯಗಳಲ್ಲಿ ನಿರಂತರ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ ಎಂದರು.

ಆಕರ್ಷಕ ಪಥ ಸಂಚಲನ

ಸ್ವಾತಂತ್ರ್ಯ ದಿನಾಚರಣೆಯ ಪಥ ಸಂಚಲನದಲ್ಲಿ ಪ್ರಶಾಂತ್ ಅವರು ಕವಾಯತು ಪಥ ಸಂಚಾಲಕರಾಗಿ ಕಾರ್ಯನಿರ್ವಹಿಸಿದರು. 30 ವಿವಿಧ ಘಟಕಗಳು ಭಾಗವಹಿಸಿದ್ದವು ಅದರಲ್ಲಿ ಸಶಸ್ತ್ರ ಮೀಸಲು ಪಡೆ, ನಗರ ಉಪವಿಭಾಗ ಪೊಲೀಸ್ ತಂಡ, ಸಿವಿಲ್ ಪೆÇಲೀಸ್, ಗೃಹ ರಕ್ಷಕದಳ, ಅರಣ್ಯ ಇಲಾಖೆ ತಂಡ, ಅಗ್ನಿ ಶಾಮಕ ದಳ, ಗೃಹರಕ್ಷಕ ಮಹಿಳಾ ದಳ, ಕಂದಾಯ ಇಲಾಖೆ, ಮಹಾನಗರ ಪಾಲಿಕೆ, ಕಂದಾಯ, ಡಿಆರ್‍ಎಮ್, ಜಿಎಫ್‍ಜಿ ಕಾಲೇಜ್, ಎವಿಕೆ, ಸಿದ್ದಗಂಗಾ ಶಾಲೆ ಸೇರಿದಂತೆ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳ ತಂಡ, ಪೊಲೀಸ್ ಬ್ಯಾಂಡ್ ತಂಡದಿಂದ ಆಕರ್ಷಕ ಪಥ ಸಂಚಲನ ನಡೆಸಲಾಯಿತು.

ಪಥ ಸಂಚಲನದಲ್ಲಿ ಭಾಗವಹಿಸಿದ ಎಸ್.ಎಸ್.ಎನ್‍ಪಿಎಸ್ ಶಾಲೆ ಉತ್ತಮ ಸಮವಸ್ತ್ರ ವಿಜೇತ ಶಾಲೆಯಾಗಿ ಗುರುತಿಸಿಲಾಯಿತು. ಈ ಬಾರಿಯ ಪಥ ಸಂಚಲನದಲ್ಲಿ ಮಹಾನಗರ ಪಾಲಿಕೆ, ಕಂದಾಯ ಇಲಾಖೆ ಮತ್ತು ಪಿ.ಎಸ್.ಇ.ಎಂ.ಆರ್ ತೋಳಹುಣಸೆ ಪೈಪ್ ಬ್ಯಾಂಡ್ ಜೂನಿಯರ್ ತಂಡಗಳು ವಿಶೇಷ ತಂಡಗಳಾಗಿ ಭಾಗವಹಿಸಿದ್ದವು.

ವಿದ್ಯಾರ್ಥಿಗಳಿಂದ ಆಕರ್ಷಕ ದೇಶಭಕ್ತಿ ಗೀತೆಗಳ ನೃತ್ಯ ರೂಪಕ

ವಿಶ್ವಚೇತನ ಶಾಲೆಯಿಂದ ಹಿಂದೂಸ್ತಾನ್ ನೃತ್ಯವನ್ನು, ಲಲಿತಾ ಇಂಟರ್ ನ್ಯಾಷನಲ್ ಶಾಲೆಯಿಂದ ಇವರಿಂದ ಗಾಂಧಿ ಗೋಖಲೆ ಶಾಂತಿ ಇಂಡಿಯಾ, ಗೋಲ್ಡನ್ ಪಬ್ಲಿಕ್ ಶಾಲೆಯಿಂದ ಸಂಕೋಲೆಯಿಂದ ಸ್ವಾತಂತ್ರ್ಯದೆಡೆಗೆ ರೂಪಕ ಪ್ರದರ್ಶನವನ್ನು ಸಾವಿರಾರು ವಿದ್ಯಾರ್ಥಿಗಳಿಂದ ಪ್ರದರ್ಶನ ಮಾಡಲ್ಪಟ್ಟಿತು.ಹಾಗೂ ಪಿಎಸ್‍ಎಸ್‍ಎಂಆರ್ ಶಾಲೆಯ ಮಕ್ಕಳು ವಿಶೇಷ ಬ್ಯಾಂಡ್ ವಾದ್ಯವನ್ನು ಪ್ರಸ್ತುತಪಡಿಸಿದರು.

ಬಹುಮಾನ ಪಡೆದಂತಹ ಶಾಲೆಗಳ ವಿವರ

ಗೋಲ್ಡನ್ ಪಬ್ಲಿಕ್ ಶಾಲೆ ಪ್ರಥಮ ಬಹುಮಾನ, ವಿಶ್ವಚೇತನ ಶಾಲೆ ದ್ವಿತೀಯ ಬಹುಮಾನ, ಲಲಿತಾ ಇಂಟರ್ ನ್ಯಾಷನಲ್ ಶಾಲೆ ತೃತೀಯ ಬಹುಮಾನ ಪಡೆಯಲಾಯಿತು. ಹಾಗೂ ಪಿಎಸ್‍ಎಸ್‍ಎಂಆರ್ ಶಾಲೆಯ ಮಕ್ಕಳು ವಿಶೇಷ ಬ್ಯಾಂಡ್ ವಾದ್ಯವನ್ನು ನುಡಿಸಿದ ಪುಟಾಣಿಗಳಿಗೆ ವಿಶೇಷ ಬಹುಮಾನ ನೀಡಲಾಯಿತು.

ಡ್ರೋನ್ ಮೂಲಕ ರೈತರು ತಮ್ಮ ವಿವಿಧ ಬೆಳೆಗಳಿಗೆ ನ್ಯಾನೋ ಗೊಬ್ಬರ, ಔಷಧಿ ಸಿಂಪಡಿಸಲು ಸರಳ ಮತ್ತು ಕಡಿಮೆ ವೆಚ್ಚದಲ್ಲಿ ಬಳಕೆ ಮಾಡುವ ಬಗ್ಗೆ ಇಂಜಿನಿಯರ್ ಹೇಮಂತ್ ಡ್ರೋನ್ ಪ್ರದರ್ಶನ ಮಾಡಿದರು.

ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಪೊಲೀಸ್ ಮಹಾನಿರೀಕ್ಷಕರಾದ ಡಾ; ರವಿಕಾಂತೇಗೌಡ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ದೂಡಾ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಶಾಮನೂರು ಟಿ.ಬಸವರಾಜ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending