Connect with us

ಕ್ರೀಡೆ

ಈ ಕ್ಷಣದ ಪ್ರಮುಖ ಸುದ್ದಿಗಳು

Published

on

ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ)

  1. ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ ನೀರು ಸರಬರಾಜು ಇಲಾಖೆಯ ಇಂಜಿನಿಯರ್‌ಗಳು ಕಟ್ಟೆಚ್ಚರ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
  2. ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ತೆರಿಗೆ ಏರಿಕೆ ಹಾಗೂ ಇತರ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಬೆಂಗಳೂರಿನಲ್ಲಿಂದು ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿತು. ಪಕ್ಷದ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾದಲ್ಲಿ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
  3. ಪ್ರತಿಯೊಂದು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸದಿದ್ದರೆ ವಾಹನಗಳ ಸವಾರರುಗಳ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
  4. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ. ಪ್ರಧಾನಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶಕ್ಕಾಗಿ ಅಪ್ರತಿಮ ಸೇವೆಯನ್ನು ಸಲ್ಲಿಸುತ್ತಿದ್ದು, ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
  5. ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದ ಕಳ್ಳಬಟ್ಟಿ ಸರಾಯಿ ದುರಂತದಲ್ಲಿ 33 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಬಟ್ಟಿ ಸರಾಯಿ ಸೇವಿಸಿ ಅಸ್ವಸ್ಥರಾಗಿದ್ದ ಜನರನ್ನು ಕಲ್ಲಕುರಿಚಿ, ಸೆಲಂ ಮತ್ತು ಪುದುಚೇರಿಯ ಜೆಐಪಿಎಂಇಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
  6. ಕೇಂದ್ರ ಸರ್ಕಾರದ ಆದೇಶದಂತೆ 2019ರ ಏಪ್ರಿಲ್‌ಗಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ದಾವಣಗೆರೆ | ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ; ರಾಜ್ಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:2024 -25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಮಹಿಳಾ ಸೇವಾ ಸಮಾಜದ ಟಿ.ಎಂ. ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ಣಿಮ ಎಂ ರವರು ಜಿಲ್ಲಾಮಟ್ಟದ ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜು ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು.

ದೈಹಿಕ ಶಿಕ್ಷಕರಾದ ಎಂ ಎನ್ ಮರಳ ಸಿದ್ದಪ್ಪರವರ ಮಾರ್ಗದರ್ಶನದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

Olympic Games Paris 2024 | ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ; ಇಲ್ಲಿದೆ ಇಂದಿನ ಆಟಗಳ ಸಂಪೂರ್ಣ ಮಾಹಿತಿ

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನವಾದ ಇಂದು ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ಸ್ ಪಂದ್ಯದಲ್ಲಿ ಮನು ಭಾಕರ್ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ.

ಈ ಮೂಲಕ ಅವರು, ಒಲಿಂಪಿಕ್ಸ್ನ ಮಹಿಳೆಯರ ಶೂಟಿಂಗ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಫೈನಲ್ ಪಂದ್ಯದಲ್ಲಿ ಹೆಚ್ಚಿನ ಕಾಲ 2ನೇ ಸ್ಥಾನದಲ್ಲಿದ್ದು, ಬೆಳ್ಳಿ ಗೆಲ್ಲುವ ಸನಿಹದಲ್ಲಿದ್ದ ಅವರನ್ನು ಕೊನೆ ಕ್ಷಣದಲ್ಲಿ ಕೊರಿಯಾದ ಕಿಮ್‌ಯೆಜಿ ಹಿಂದಿಕ್ಕಿದರು. ಫೈನಲ್ಸ್ನಲ್ಲಿ ಮನುಬಾಕರ್ 221.7 ಅಂಕಗಳ ಮೂಲಕ ಕಂಚು ಪದಕ ಗೆದ್ದರೆ ದಕ್ಷಿಣ ಕೊರಿಯಾದ ಕಿಮ್‌ಯೆಜಿ 241.3 ಅಂಕಗಳ ಮೂಲಕ ಬೆಳ್ಳಿ ಹಾಗೂ ಅದೇ ರಾಷ್ಟ್ರದ ಒಹ್ ಯೆ ಜಿನ್, ದಾಖಲೆಯ 243.2 ಅಂಕಗಳ ಮೂಲಕ ಸ್ವರ್ಣ ಪದಕ ತಮ್ಮದಾಗಿಸಿಕೊಂಡರು. ಮನು ಭಾಕರ್ ಅವರ ಈ ಸಾಧನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಅವರ ಈ ಸಾಧನೆಯ ಕುರಿತು ಭಾರತಕ್ಕೆ ಹೆಮ್ಮೆಯಿದ್ದು, ಅವರು ಅನೇಕ ಕ್ರೀಡಾಪಟುಗಳು ಹಾಗೂ ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿದಾಯಕರಾಗಿದ್ದಾರೆ ಎಂದು ರಾಷ್ಟ್ರಪತಿಯವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮನು ಭಾಕರ್ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಭಾರತಕ್ಕೆ ಇದು ಐತಿಹಾಸಿಕ ಪದಕವಾಗಿದೆ. ಮಹಿಳಾ ಶೂಟಿಂಗ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂಡುಕೊಟ್ಟಿರುವುದರಿAದ ಇದೊಂದು ಅಸಾಮಾನ್ಯ ಹಾಗೂ ವಿಶೇಷ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ.

ಇಂದು ನಡೆದ ಪುರುಷರ 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತದ ಅರ್ಜುನ್ ಬಬೂಟ 630.1 ಅಂಕಗಳೊAದಿಗೆ 7ನೇ ಸ್ಥಾನಗಳಿಸಿ ಫೈನಲ್ ಪ್ರವೇಶಿಸಿದ್ದಾರೆ. ಹಾಗೆಯೇ ಮಹಿಳೆಯರ 10 ಮೀಟರ್ ಏರ್ ರೈಫಲ್‌ನಲ್ಲಿ ರಮಿತಾ ಜಿಂದಾಲ್ ಫೈನಲ್ ಪ್ರವೇಶಿಸಿದ್ದಾರೆ. ರಮಿತಾ ಜಿಂದಾಲ್, 631.5 ಅಂಕಗಳೊAದಿಗೆ 5ನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಮತ್ತೊರ್ವ ಮಹಿಳಾ ಶೂಟರ್ ಎಲವೆನಿಲ್ ವಲರಿವನ್ 630.7 ಅಂಕಗಳೊAದಿಗೆ 10ನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಲು ವಿಫಲರಾದರು.

ಇಂದು ನಡೆದ ಮಹಿಳೆಯರ ಬ್ಯಾಡ್ಮಿಂಟನ್‌ನ ಸಿಂಗಲ್ಸ್ ವಿಭಾಗದ ತಮ್ಮ ಮೊದಲ ಪಂದ್ಯದಲ್ಲಿ 2 ಒಲಿಂಪಿಕ್ ಪದಕ ವಿಜೇತೆ ಭಾರತದ ಪಿ.ವಿ. ಸಿಂಧೂ, ಮಾಲ್ಡೀವ್ಸ್ನ ಫಾತಿಮತ್ ನಬಾಹ ಅಬ್ದುಲ್ ರಜಾಕ್ ಅವರನ್ನು 21-9, 21-6 ಅಂಕಗಳ ಅಂತರದಲ್ಲಿ ಮಣಿಸಿ ಶುಭಾರಂಭ ಕಂಡಿದ್ದಾರೆ. ಟೆಬಲ್ ಟೆನಿಸ್‌ನ 64ರ ಸುತ್ತಿನಲ್ಲಿ ಭಾರತದ ಶ್ರೀಜಾ ಅಕುಲಾ, ಸ್ವೀಡನ್‌ನ ಕ್ರಿಸ್ಟಿನಾ ಕಾಲ್ಬರ್ಗ್ ವಿರುದ್ಧ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ಅರ್ಹತೆ ಪಡೆದರು.

ಮಹಿಳಾ ಬಿಲ್ಲುಗಾರಿಕೆಯಲ್ಲಿ ದೀಪಿಕಾ ಕುಮಾರಿ, ಅಂಕಿತಾ ಭಕತ್ ಹಾಗೂ ಭಜನ್ ಕೌರ್ ಈ ಮೂವರನ್ನೊಳಗೊಂಡ ಭಾರತೀಯ ತಂಡ ಕ್ವಾಟರ್ ಫೈನಲ್‌ನಲ್ಲಿ ನೆದರ್‌ಲ್ಯಾಂಡ್ ತಂಡದ ವಿರುದ್ಧ 0-6 ಅಂಕಗಳಿಂದ ಪರಾಭವಗೊಂಡಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಎಚ್.ಎಸ್. ಪ್ರಣೋಯ್, ಜರ್ಮನಿಯ ಫೇಬಿಯನ್ ರೋತ್ ವಿರುದ್ಧ ಹೋರಾಟ ನಡೆಸಲಿದ್ದಾರೆ.

ಪುರುಷರ ಡಬಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಭಾರತದ ಅನುಭವಿ ಆಟಗಾರರಾದ ರೋಹನ್ ಬೋಪಣ್ಣ ಹಾಗೂ ಶ್ರೀರಾಂ ಬಾಲಾಜಿ ಜೋಡಿ ಫ್ರಾನ್ಸ್ನ ಗೇಲ್ ಮೋನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್ ವ್ಯಾಸೆಲಿನ್ ಜೋಡಿ ವಿರುದ್ಧ ಸೆಣಸಲಿದೆ. ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟಿನ್ನಿಸ್ ಪಂದ್ಯದ ಮಹಿಳಾ ಸಿಂಗಲ್ಸ್ನಲ್ಲಿ ಭಾರತದ ಶ್ರೀಜಾ ಅಕುಲಾ ಹಾಗೂ ಮಹಿಳಾ ಬಾಕ್ಸಿಂಗ್‌ನ 50 ಕೆಜಿ ವಿಭಾಗದಲ್ಲಿ ನಿಕತ್ ಝರೀನ್ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.

https://x.com/siddaramaiah/status/1817536595970650154?t=otcDD00kQUBeN84H7DvrEA&s=19

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending