ದಿನದ ಸುದ್ದಿ
ಲೋಕಸಭಾ ಚುನಾವಣೆ ದಾವಣಗೆರೆ : ಮತದಾನ ಸಿಬ್ಬಂದಿಗಳಿಗೆ ಎರಡನೇ ಹಂತದ ತರಬೇತಿಯಲ್ಲಿ ನಡೆದಿದ್ದೇನು.!?
ಸುದ್ದಿದಿನ,ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು ಅಣಕು ಮತದಾನವನ್ನು ಸಮಯಕ್ಕೆ ಸರಿಯಾಗಿ ಆರಂಭಿಸಿ ನಂತರ ಮಾಕ್ ಪೋಲ್ ಕ್ಲಿಯರ್ ಮಾಡಿ ಕ್ಲೊಸ್ ಬಟನ್ ಒತ್ತುವ ಮೂಲಕ ವಾಸ್ತವ ಮತದಾನ ಆರಂಭಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರದ ಮತದಾನ ಸಿಬ್ಬಂದಿಗಳಿಗೆ ಏರ್ಪಡಿಸಲಾದ ಎರಡನೇ ಹಂತದ ತರಬೇತಿಯಲ್ಲಿ ಭಾಗವಹಿಸಿ ಮಾತನಾಡಿದರು. ಅಣಕು ಮತದಾನ ಕ್ರಿಯರ್ ಮಾಡದಿದ್ದಲ್ಲಿ ಎಣಿಕೆ ಮಾಡುವಾಗ ಸಮಸ್ಯೆಯಾಗಲಿದೆ. ಆದ್ದರಿಂದ ಎಲ್ಲರೂ ಸಿಆರ್ಸಿ ಮಾಡಿದ ಬಗ್ಗೆ ಖಾತರಿ ನಂತರ ಮತದಾನ ಆರಂಭಿಸುವುದನ್ನು ಮರೆಯಬಾರದು. ಅಣಕು ನಂತರ ಸಿ-ಕ್ಲೋಸ್, ಆರ್-ರಿಸಲ್ಟ್, ಸಿ-ಕ್ಲಿಯರ್ ಇದನ್ನು ಎಲ್ಲಾ ಮತದಾನ ಸಿಬ್ಬಂದಿಗಳು ನೆನಪಿನಲ್ಲಿಟ್ಟುಕೊಳ್ಳಬೇಕು. ಮತದಾನ ದಿನ ಯಾವುದೇ ಹಂತದ ಪ್ರಕ್ರಿಯೆಗಳನ್ನು ಮರೆಯದೇ ಮತಗಟ್ಟೆ ಮಾರ್ಗದರ್ಶಿ ನಿಯಮಗಳನ್ನು ತಿಳಿದುಕೊಂಡು ಕರ್ತವ್ಯ ನಿರ್ವಹಿಸಬೇಕು, ಇಲ್ಲವಾದಲ್ಲಿ ಅಂತಹ ಅಧಿಕಾರಿಗಳು, ಸಿಬ್ಬಂದಿಗಳು ಶಿಸ್ತುಕ್ರಮದ ಜೊತೆಗೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದರು.
ಚುನಾವಣಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಾರ್ಗದರ್ಶನಕ್ಕಾಗಿ ಸೆಕ್ಟರ್ ಅಧಿಕಾರಿಗಳು ಇರುತ್ತಾರೆ. ಅದೇ ರೀತಿ ಪ್ರತಿ ಮತಗಟ್ಟೆಯಲ್ಲಿ ಮತದಾನವಾದ ಬಗ್ಗೆ ಮಾಹಿತಿ ನೀಡಲು ತಂಡವನ್ನು ನೇಮಕ ಮಾಡಲಿದ್ದು ಕರಾರುವಕ್ಕಾಗಿ ಮತದಾನದ ಅಂಕಿ ಅಂಶಗಳನ್ನು ನೀಡಬೇಕಾಗುತ್ತದೆ ಎಂದರು.
ಹರಿಹರ, ಹರಪನಹಳ್ಳಿಗೆ ಅಪರ ಜಿಲ್ಲಾಧಿಕಾರಿ ಭೇಟಿ
ಹರಿಹರದ ಸೆಂಟ್ ಮೇರಿಸ್ ಕಾನ್ವೆಂಟ್ ಸ್ಕೂಲ್ನಲ್ಲಿ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ನಡೆದ ಎರಡನೇ ಹಂತದ ತರಬೇತಿಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿಯವರು ಭೇಟಿ ನೀಡಿ ಮತದಾನ ದಿನ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ, ಮತದಾನ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದರು. ಮತ್ತು ಹರಪನಹಳ್ಳಿ ಕ್ಷೇತ್ರದಲ್ಲಿ ನಡೆದ ಸೆಕ್ಟರ್ ಅಧಿಕಾರಿಗಳಿಗೆ ನೀಡಲಾದ ತರಬೇತಿಯಲ್ಲಿ ಭಾಗಿಯಾಗಿ ಸೆಕ್ಟರ್ ಅಧಿಕಾರಿಗಳ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.
ಮತಗಟ್ಟೆ ತಂಡ ಸಿದ್ದ
ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ 1693 ಮತಗಟ್ಟೆಗಳು ಸೇರಿದಂತೆ ವಿಜಯನಗರ ಜಿಲ್ಲೆ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ 253 ಮತಗಟ್ಟೆಗಳು ಸೇರಿ 1946 ಮತಗಟ್ಟೆಗಳು ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರಲಿವೆ. ಎರಡನೇ ತರಬೇತಿಯಲ್ಲಿ ಕ್ಷೇತ್ರವಾರು ಪ್ರತಿ ಮತಗಟ್ಟೆಗೆ 4 ಜನರ ತಂಡ ಸಿದ್ದವಾಗಿದ್ದು ಮೇ 6 ರಂದು ಮಸ್ಟರಿಂಗ್ ಕೇಂದ್ರದಲ್ಲಿ ಯಾವ ಮತಗಟ್ಟೆಗೆ ಈ ತಂಡ ನಿಯೋಜಿತವಾಗುತ್ತದೆ ಎಂದು ಅಂದು ತಿಳಿಯಲಿದೆ.
ವಿಧಾನಸಭಾ ಕ್ಷೇತ್ರವಾರು ನೇಮಕವಾಗಿರುವ ಅಧಿಕಾರಿ, ಸಿಬ್ಬಂದಿಗಳು; ಜಗಳೂರು ಕ್ಷೇತ್ರಕ್ಕೆ ಮತಗಟ್ಟೆ ಅಧ್ಯಕ್ಷಾಧಿಕಾರಿ, ಸಹಾಯಕ ಅಧ್ಯಕ್ಷಾಧಿಕಾರಿ, ಮತದಾನ ಸಿಬ್ಬಂದಿಗಳು ಸೇರಿ 1212, ಹರಿಹರ 1048, ದಾವಣಗೆರೆ ಉತ್ತರ 1128, ದಕ್ಷಿಣ 996, ಮಾಯಕೊಂಡ 1104, ಚನ್ನಗಿರಿ 1172 ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರಕ್ಕೆ 1124 ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.
ತರಬೇತಿ ನಡೆದ ಸ್ಥಳಗಳು
ಜಗಳೂರು ಸರ್ಕಾರಿ ಪದವಿ ಪೂರ್ವ ಕಾಲೇಜು, ಹರಿಹರ ಸೆಂಟ್ ಮೇರಿಸ್ ಕಾನ್ವೆಂಟ್ ಸ್ಕೂಲ್, ಹರಪನಹಳ್ಳಿ ರಸ್ತೆ, ಹರಿಹರ, ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಿದ್ದಗಂಗಾ ವಿದ್ಯಾಸಂಸ್ಥೆ, ಸಿದ್ದರಾಮೇಶ್ವರ ಬಡಾವಣೆ, ಮಾಯಕೊಂಡ ತರಳಬಾಳು ವಿದ್ಯಾಸಂಸ್ಥೆ, ಅನುಭವ ಮಂಟಪ, ಹದಡಿ ರಸ್ತೆ, ಚನ್ನಗಿರಿ ಶ್ರೀಶ್ರೀಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಹೊನ್ನಾಳಿಯಲ್ಲಿ ಶ್ರೀಮತಿ ಗಂಗಮ್ಮ ಶ್ರೀ ವೀರಭದ್ರಶಾಸ್ತ್ರಿ ಕೈಗಾರಿಕಾ ತರಬೇತಿ ಕೇಂದ್ರ, ಹಿರೇಕಲ್ಮಠ ಇಲ್ಲಿ ತರಬೇತಿ ನಡೆಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
-
ದಿನದ ಸುದ್ದಿ1 day agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ4 days agoಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ

