Connect with us

ದಿನದ ಸುದ್ದಿ

ಆಲಮಟ್ಟಿ ಜಲಾಶಯದ ಎತ್ತರ 524ಮೀಟರ್‌ಗೆ ವಿಸ್ತರಣೆ : ಸಿಎಂ ಬೊಮ್ಮಾಯಿ

Published

on

ಆಲಮಟ್ಟಿ ಜಲಾಶಯ

ಸುದ್ದಿದಿನ ಡೆಸ್ಕ್ : ಆಲಮಟ್ಟಿ ಜಲಾಶಯ ಎತ್ತರವನ್ನು 524 ಮೀಟರ್‌ಗೆ ಎತ್ತರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರಿನಲ್ಲಿ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಹಣ ಒದಗಿಸಲಾಗುವುದು. ಅಗತ್ಯ ಗ್ರಾಮಗಳನ್ನು ಪುನಶ್ಚೇತನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಸಂಸದ ರಮೇಶ್ ಜಿಗಜಿಣಗಿ ಮಾತನಾಡಿ, ಈ ಭಾಗದ ಜನತೆಗೆ ಹೆಚ್ಚಿನ ನೀರಾವರಿ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಅನೇಕ ಶಾಸಕರು ಭಾಗಿಯಾಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ವಿದ್ಯಾಸಿರಿ’ ಯೋಜನೆಯಡಿ ವಿದ್ಯಾರ್ಥಿ ವೇತನ ಪರಿಷ್ಕರಣೆಗೆ ಒತ್ತು : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಬೆಂಗಳೂರಿನ ಕೆಂಗೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಕಲಿದೇವ ಸಮುದಾಯ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾರ್ಪಣೆಗೊಳಿಸಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಸಮುದಾಯಗಳ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೆ ನೀಡುವ ಮೊತ್ತವನ್ನು ಒಂದೂವರೆಯಿಂದ ಎರಡು ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:

ಮಡಿವಾಳ ಸಮುದಾಯದ ಪ್ರಗತಿ ಸರ್ಕಾರ ಬದ್ಧವಾಗಿದ್ದು, ಈ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಎಲ್ಲ ಪ್ರಯತ್ನ ಮಾಡಲಾಗುವುದು. 12ನೇ ಶತಮಾನದಲ್ಲಿ ಮಡಿವಾಳ ಮಾಚಿದೇವರು, ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಟ ಮಾಡಿದ್ದರು ಎಂದು ಹೇಳಿದರು.

ಈ ವೇಳೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ಎಸ್.ಟಿ. ಸೋಮಶೇಖರ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ

Published

on

ಸುದ್ದಿದಿನ,ಚನ್ನಗಿರಿ:ಇತ್ತೀಚಿಗೆ ತಾವರೆಕೆರೆಯಲ್ಲಿ ನಡೆದ ಘಟನೆ ಕಾನೂನು ಬಾಹಿರವಾಗಿದ್ದು, ಮುಖಂಡರುಗಳು ತಮ್ಮ ಗ್ರಾಮ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ಯಾವುದೇ ಘಟನೆ ನಡೆದಿದ್ದರೆ ಕಾನೂನಿನ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕೇ ವಿನಃ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ ನೀಡಿದರು.

ತಾವರೆಕೆರೆ ಗ್ರಾಮದಲ್ಲಿ ಮುಸ್ಲಿಂ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಚಿತ್ರ ಹರಿದಾಡುತ್ತಿರುವ ವಿಚಾರವಾಗಿ ಚನ್ನಗಿರಿ ಪೊಲೀಸ್ ಠಾಣೆ ಹಾಗೂ ಸಂತೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಟೌನ್ ಹಾಗೂ ಗ್ರಾಮಗಳ ಮುಸ್ಲೀಂ ಮುಖಂಡರುಗಳನ್ನು ಉದ್ದೇಶಿಸಿ ಗುರುವಾರ (ಏ.17ರಂದು) ಪಟ್ಟಣದ ತಾಲ್ಲೂಕು ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆವಹಿಸಿ ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಅವರು ಮಾತನಾಡಿದರು.

ಇದನ್ನೂ ಓದಿ :

ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೇ 112 ಗೆ ಕರೆ ಮಾಡಿ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮದ ಬಗ್ಗೆ / ವ್ಯಕ್ತಿಗಳ ಬಗ್ಗೆ ಪ್ರಚೋಧನಕಾರಿ ಹೇಳಿಕೆಗಳಾಗಲಿ, ಭಾಷಣವನ್ನಾಗಲಿ ಪೋಸ್ಟ್ ಮಾಡದಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ, ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾರು ಸಹಕಾರಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಚನ್ನಗಿರಿ ಪೊಲೀಸ್ ಠಾಣೆ, ಪೊಲೀಸ್ ನಿರೀಕ್ಷಕರಾದ ಶ್ರೀ ರವೀಶ್, ಸಂತೇಬೆನ್ನೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಲಿಂಗನಗೌಡ ನೆಗಳೂರು ರವರು, ಸರ್ದಾರ್ ಅಹಮ್ಮದ್, ಪುರಸಭೆ ಸದಸ್ಯರಾದ ಗೌಸ್ ಪೀರ್, ತನ್ವೀರ್, ನಲ್ಲೂರು ತಾಲ್ಲೂಕು ಪಂಚಾಯ್ತಿಯ ಮಾಜಿ ಸದಸ್ಯರಾದ ಉಸ್ಮಾನ್ ಷರೀಪ್, ಚನ್ನಗಿರಿ ತಾಲ್ಲೂಕು ಮುಸ್ಲೀಂ ಸಮಾಜದ ಅಧ್ಯಕ್ಷ ಹೊನ್ನೆಬಾಗಿ ಜಬೀವುಲ್ಲಾ ಸೇರಿದಂತೆ ಚನ್ನಗಿರಿ/ಸಂತೇಬೆನ್ನೂರು ಠಾಣಾ ವ್ಯಾಪ್ತಿಯ ಚನ್ನಗಿರಿ ಟೌನ್, ಅಗರಬನ್ನಿಹಟ್ಟಿ, ನಲ್ಲೂರು, ಹೊನ್ನೇಬಾಗಿ, ತಾವರಕೆರೆ, ಸಂತೇಬೆನ್ನೂರು, ಕೆರೆಬಿಳಚಿ ಸೇರಿದಂತೆ ಇತರೆ ಗ್ರಾಮಗಳ ಮುಸ್ಲಿಂ ಮುಖಂಡರುಗಳು ಮತ್ತು ಮಸೀದಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಮೌಲಾನಾ ಅಜಾದ್ ಮಾದರಿ ಶಾಲೆಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಪ್ರವೇಶಕ್ಕಾಗಿ ಲಭ್ಯವಿರುತ್ತದೆ. ಮತ್ತು ಶೇ.50% ರಷ್ಟು ಹೆಣ್ಣು ಮಕ್ಕಳಿಗೆ ಸ್ಥಾನಗಳನ್ನು ಮೀಸಲಿರಿಸಲಾಗಿದೆ.

ಅಲ್ಪಸಂಖ್ಯಾತರ ಅಭ್ಯರ್ಥಿಗಳು ಮೇ.10 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ವೆಬ್ ಸೈಟ್ https://sevasindhuservices.karnataka.gov.in/ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending