Connect with us

ರಾಜಕೀಯ

ನೌಕರರು, ನಾಯಕರು ಮತ್ತು ಆಡಳಿತ

Published

on

ತ್ತೀಚೆಗೆ ನಡೆದ ಸಾಹಿತ್ಯೋತ್ಸವವೊಂದರ ಗೋಷ್ಠಿಯಲ್ಲಿ ಇಬ್ಬರು ಭಾಷಣಕಾರರು ಕಾರ್ಯಾಂಗದ ಅನುಷ್ಠಾನ ಬದ್ಧತೆಯ ಕೊರತೆಯ ಕಾರಣಕ್ಕಾಗಿ ಈ ದೇಶದಲ್ಲಿ ನಾಯಕರ ಸುಧಾರಣೆಯ ಕನಸುಗಳು ಸಾಕಾರಗೊಳ್ಳುತ್ತಿಲ್ಲ ಎಂಬ ತಕರಾರು ಎತ್ತಿದರು. ಅಷ್ಟೇ ಅಲ್ಲ, ಅವರು ಇನ್ನೂ ಸ್ಪಷ್ಟವಾಗಿ ಕಾರ್ಯಾಂಗದ ವೈಖರಿಯ ಮೇಲೆ ಅತ್ಯಂತ ಸರಳೀಕೃತವಾದ ತಾರ್ಕಿಕವಲ್ಲದ ಜಾಳುಜಾಳಾದ ಹೇಳಿಕೆಯನ್ನು ತೇಲಿಬಿಟ್ಟರು. ಜನಸಾಮಾನ್ಯನ ಪ್ರಾಮಾಣಿಕತೆಯ ಕಾರಣಕ್ಕಾಗಿ ಸಂದಾಯವಾಗುತ್ತಿರುವ ತೆರಿಗೆಯ ಹಣಕ್ಕೆ ಪ್ರತಿಯಾಗಿ ಕಾರ್ಯಾಂಗವು ಕೇವಲ ನೋವು, ಹತಾಶೆಗಳನ್ನಷ್ಟೇ ನೀಡುತ್ತಿದೆಯೇ ಹೊರತು ತಕ್ಕುದಾದ ಫಲಶೃತಿಗಳನ್ನಲ್ಲ ಎಂದು ಹೇಳಿ ಚಪ್ಪಾಳೆ ಗಿಟ್ಟಿಸಿಕೊಂಡರು. ಆದರೆ, ಈ ಹೇಳಿಕೆಯಲ್ಲಿರುವ ಪೂರ್ವಗ್ರಹಪೀಡಿತ ದೃಷ್ಟಿಕೋನದ ಅಪಾಯಕಾರಿ ಸ್ವರೂಪ ಅಲ್ಲಿದ್ದವರ್ಯಾರ ಗಮನಕ್ಕೆ ಬರಲೇ ಇಲ್ಲ. ಹಾಗೆ ಬರದ ಹಾಗೆ ಅವರಿಬ್ಬರ ಭಾಷಿಕ ಪ್ರೌಢಿಮೆಯು ತನ್ನ ಚಾಣಾಕ್ಷತೆಯನ್ನು ಮೆರೆದಿತ್ತು. “ಸುಧಾರಣೆಯ ಹೆಜ್ಜೆಗಳು ಎಲ್ಲ ಕಾಲದ ನಾಯಕರ ಆಳ್ವಿಕೆಯ ವೇಳೆ ಕಾಣಿಸಿಕೊಳ್ಳುತ್ತವೆ. ಆದರೆ, ಸುಧಾರಣೆಯ ನೀತಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾದ ಕಾರ್ಯಾಂಗ ನಿರ್ಲಿಪ್ತವಾಗಿರುವುದರಿಂದಲೇ ಅನೇಕ ಸಮಸ್ಯೆಗಳಿವೆ” ಎಂದು ತೀರ್ಪು ನೀಡಿಬಿಟ್ಟರು.ಸಂಕೀರ್ಣ ವಾಸ್ತವಾಂಶಗಳುಈ ಹೇಳಿಕೆಯನ್ನು ಯಥಾವತ್ತಾಗಿ ಮುಗ್ಧವಾಗಿ ಸ್ವೀಕರಿಸಿದರೆ ಸಮಸ್ಯೆಯ ಸಂಕೀರ್ಣತೆಯ ಹಿಂದಿನ ವಾಸ್ತವಾಂಶಗಳು ಗಮನಕ್ಕೇ ಬರುವುದಿಲ್ಲ. ಗಮನಕ್ಕೆ ತಂದುಕೊಂಡರೂ ನಾಯಕರೆಡೆಗಿನ ಭಾವನಾತ್ಮಕ ಅಭಿಮಾನದ ಪ್ರಭಾವಳಿ ಅಂಥ ಸಾಧ್ಯತೆಯನ್ನು ಆ ಕ್ಷಣಕ್ಕೇ ಮೊಟಕುಗೊಳಿಸಿಬಿಡುತ್ತದೆ. ಇದನ್ನು ಇನ್ನಷ್ಟು ಸ್ಪಷ್ಟವಾಗಿಸಿಕೊಳ್ಳಬಹುದಾದರೆ, ಈ ಹೇಳಿಕೆಯ ಮೊನಚಾದ ದಾಳಿ ಸರ್ಕಾರಿ ನೌಕರರ ಮೇಲೆಯೇ ನಡೆದಿತ್ತು. ಟೀಕೆ, ಅಸಮಾಧಾನ, ಆಕ್ರೋಶ, ವ್ಯಂಗ್ಯ, ಹಾಸ್ಯ, ಅಪಹಾಸ್ಯ ಸೇರಿದಂತೆ ನಿಂದನೆಯ ನಾನಾ ಬಗೆಗಳಿಗೆ ಈಡಾಗುತ್ತಲೇ ನಿರಂತರವಾಗಿ ಸವಾಲುಗಳನ್ನು ನೌಕರವರ್ಗ ಎದುರಿಸುತ್ತಲೇ ಇದೆ. ಭ್ರಷ್ಟಾಚಾರ ಮತ್ತು ವಿಳಂಬನೀತಿ ಎಂಬ ಎರಡು ನಕಾರಾತ್ಮಕ ಸಂಗತಿಗಳು ನೌಕರರ ನಿಜವಾದ ಶಕ್ತಿಯನ್ನು ಹಿನ್ನೆಲೆಗೆ ಸರಿಸಿವೆ.

Rajadharma a column by Dr.N k padmanabh

ಶಾಸಕಾಂಗವು ಶಾಸನಗಳನ್ನು ರೂಪಿಸುವ ಹೊಣೆಗಾರಿಕೆ ನಿಭಾಯಿಸುತ್ತದೆ. ಅವುಗಳನ್ನು ಜಾರಿಗೆ ತರುವ ಜವಾಬ್ದಾರಿ ಕಾರ್ಯಾಂಗದ್ದು. ಅಂದರೆ ಉನ್ನತ ಹಂತದಿಂದ ಹಿಡಿದು ಕೆಳಹಂತದವರೆಗಿನ ಆಡಳಿತಾತ್ಮಕ ಪ್ರಕ್ರಿಯೆಯು ಕಾರ್ಯಾಂಗವನ್ನು ಪ್ರತಿನಿಧಿಸುವ ನೌಕರರಿಂದಲೇ ಏರ್ಪಡುತ್ತದೆ. ಹೀಗೆ ಏರ್ಪಡುವ ಕಾಲಕ್ಕೇ ಬದಲಾವಣೆಯು ಕಾಣಿಸಿಕೊಳ್ಳುತ್ತಿರುತ್ತದೆ. ಈ ಬದಲಾವಣೆಯು ಆಯಾ ದೇಶಗಳ ನಾಯಕರು, ರಾಜಕಾರಣ ಮತ್ತು ಜನರ ಬೌದ್ಧಿಕ ವಿವೇಚನೆಗೆ ತಕ್ಕಂತೆಯೇ ನಡೆಯುತ್ತದೆ. ಈ ವಿವೇಚನೆ ಇಲ್ಲದಿದ್ದಾಗ ನಾಯಕರು ಕಾಣಿಸಿಕೊಳ್ಳುವುದಿಲ್ಲ. ನಾಯಕರೇ ಇಲ್ಲವೆಂದ ಮೇಲೆ ರಾಜಕಾರಣವು ಒಂದು ನಿರ್ದಿಷ್ಟ ಗೊತ್ತುಗುರಿಯಿಲ್ಲದೆ ತನ್ನ ನಕಾರಾತ್ಮಕ ಶಕ್ತಿಯನ್ನು ವಿಸ್ತರಿಸಿಕೊಳ್ಳುತ್ತದೆ.ಸ್ಥಾಯಿಯಾದ ಯಥಾಸ್ಥಿತಿವಾದ
ಈ ಹಂತದಲ್ಲಿಯೇ ಸಮಾಜದಲ್ಲಿ ಬದಲಾವಣೆಯ ಬದಲು ಯಥಾಸ್ಥಿತಿಯು ಸ್ಥಾಯಿಯಾಗಿಬಿಡುತ್ತದೆ. ಬದಲಾವಣೆಯ ಗಮ್ಯವನ್ನು ಮುಖ್ಯವಾಗಿಸಿಕೊಂಡ ಪ್ರಜಾಪ್ರಭುತ್ವದ ಮೌಲ್ಯಗಳು ಅರ್ಥ ಕಳೆದುಕೊಳ್ಳುತ್ತವೆ. ಸಂವಿಧಾನದ ನಮ್ಯತೆಯ ಗುಣಲಕ್ಷಣವನ್ನು ಹದಗೆಡಿಸುವ ಹುನ್ನಾರಗಳು ನಡೆದುಬಿಡುತ್ತವೆ. ಅನಿವಾರ್ಯವಾಗಿ ಆಗಲೇಬೇಕಾದ ಬದಲಾವಣೆಯ ಪ್ರಯತ್ನಗಳು ನಿಂತುಬಿಡುವುದು ಇಂಥ ಹುನ್ನಾರಗಳ ಕಾರಣಕ್ಕಾಗಿಯೇ. ಸರ್ಕಾರಿ ನೌಕರರೆಂಬ ಜೀವಿಗಳು ಸಂಕಟ-ಸಂಕೀರ್ಣತೆಯ ನಡುವೆ ಕಾರ್ಯನಿರ್ವಹಿಸುವ ಮುಜುಗರದ ಅನುಭವಗಳೊಂದಿಗಿರಬೇಕಾಗುತ್ತದೆ. ಶಾಸಕಾಂಗವೇ ನೀತಿಗಳನ್ನು ನಿರೂಪಿಸುವ ಸಂವಿಧಾನಾತ್ಮಕ ಸಂಸ್ಥೆಯಾಗಿರುವುದರಿಂದ ಬದಲಾವಣೆಯ ಚಿಂತನೆಯು ಅಲ್ಲಿಂದಲೇ ಶುರುವಾಗಬೇಕಾಗುತ್ತದೆ. ಆದರೆ ಈ ದೇಶದಲ್ಲಿ ಹಾಗಾಗುತ್ತಿಲ್ಲ. ಈಗಾಗಲೇ ಇರುವ ನೀತಿಗಳ ಜಾಗದಲ್ಲಿ ಹೊಸದಾದುವುಗಳನ್ನು ಪ್ರತಿಷ್ಠಾಪಿಸುವ ಪ್ರಯತ್ನಗಳೇ ಆಗುತ್ತಿಲ್ಲ. ಹಳೆಯ ನೀತಿಗಳಿದ್ದರೆ ಭ್ರಷ್ಟಾಚಾರದ ಸ್ವಹಿತಾಸಕ್ತ ಉದ್ದೇಶ ಈಡೇರುತ್ತದೆ. ಹೊಸ ನೀತಿಗಳು ಬಂದರೆ ತಮ್ಮ ಅಸ್ತಿತ್ವಕ್ಕೇ ಕೊಡಲಿಪೆಟ್ಟು ಬೀಳುತ್ತದೆ ಎಂದುಕೊಳ್ಳುವ ನಾಯಕರಲ್ಲದ ರಾಜಕಾರಣಿಗಳು ತಮ್ಮ ತಮ್ಮ ಪಕ್ಷಗಳ ಸಾಂಸ್ಥಿಕ ಶ್ರೇಷ್ಠತೆಯನ್ನು ಮೊಟಕುಗೊಳಿಸಿಕೊಳ್ಳುವ ಹಾಗೆಯೇ ವರ್ತಿಸುತ್ತಾರೆ. ಯಥಾಸ್ಥಿತಿವಾದವನ್ನು ಉಳಿಸಿ ಅದರ ಮೇಲೆ ತಮ್ಮ ಅಸ್ತಿತ್ವವವನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಹಂಬಲಗಳನ್ನೇ ಕಾಡಿಸಿಕೊಳ್ಳುತ್ತಾರೆ.ಉದ್ದೇಶಪೂರ್ವಕ ಹುನ್ನಾರ
ಅವರು ಜನರಿಗೆ ಬಹುಕಾಲದವರೆಗೆ ಅನುಕೂಲ ಒದಗಿಸಿಕೊಡುವ ಶಾಶ್ವತವಾದ ಯೋಜನೆಗಳನ್ನು ರೂಪಿಸುವ ಬದಲು ಬರೀ ಜನರ ತಾತ್ಪೂರ್ತಿಕ ಆಸೆಗಳನ್ನು ಈಡೇರಿಸುವಂಥ ಜನಪ್ರಿಯ ನೀತಿಗಳನ್ನು ರಚಿಸುತ್ತಾರೆ. ಅವುಗಳು ಅಂಗೀಕೃತವಾಗುವಂತೆಯೂ ನೋಡಿಕೊಳ್ಳುತ್ತಾರೆ. ಮತಗಳಿಕೆಯ ಲೆಕ್ಕಾಚಾರದ ಉದ್ದೇಶಗಳನ್ನೇ ಮುಖ್ಯವಾಗಿಸಿಕೊಂಡು ಯಶಸ್ವಿಯಾಗುತ್ತಾರೆ. ಜನಪ್ರಿಯ ಯೋಜನೆಗಳ ಅನುಷ್ಠಾನದಲ್ಲಿ ನೌಕರರು ಕಾರ್ಯನಿರ್ವಹಿಸಿದರೂ ಅದರ ಕ್ರೆಡಿಟ್ ಅವರಿಗೆ ಹೋಗುವುದಿಲ್ಲ. ನಾಯಕರೆನಿಸಿಕೊಂಡವರ ಪಾಲಾಗುತ್ತದೆ. ಅವರು ದೂರದೃಷ್ಟಿಯ ಚಿಂತನೆಗಳನ್ನು ಉದ್ದೇಶಪೂರ್ವಕವಾಗಿ ಹತ್ತಿಕ್ಕಿಬಿಡುತ್ತಾರೆ. ಜನಪ್ರಿಯ ಯೋಜನೆಗಳಿಗೆ ಯಶಸ್ಸು ದೊರಕಿದರೆ ಅದರ ಲಾಭವನ್ನು ತಾವು ಪಡೆಯುತ್ತಾರೆ. ಟೀಕೆಗೀಡಾದರೆ ವೈಫಲ್ಯಕ್ಕೆ ಸರ್ಕಾರಿ ನೌಕರರೆಡೆಗೆ ಬೊಟ್ಟು ಮಾಡುತ್ತಾರೆ.

ಹಿಂದೊಮ್ಮೆ ಬ್ರಿಟಿಷ್ ಹಿಡಿತಕ್ಕೊಳಗಾಗಿದ್ದ ಈ ದೇಶದಲ್ಲಿ ಅದರ ಆಡಳಿತಾತ್ಮಕ ಪಳೆಯುಳಿಕೆಯ ಹಲವು ವಿಧಾನಗಳು ಈಗಲೂ ಅನುಸರಿಸಲ್ಪಡುತ್ತಿವೆ. ಏಣಿಶ್ರೇಣಿ ವ್ಯವಸ್ಥೆಯ ವಿವಿಧ ಹಂತಗಳು ಉನ್ನತ ಅಧಿಕಾರಿಗಳ ಪ್ರತಿಷ್ಠೆಯ ಹಂಗುಗಳ ಚೌಕಟ್ಟುಗಳಡಿ ನಲುಗುತ್ತಿವೆ. ರಾಜಕಾರಣಿ ಮತ್ತು ಉನ್ನತ ಹಂತದ ಅಧಿಕಾರಿಗಳ ನಡುವಿನ ಅಸಂಬದ್ಧ ಮೈತ್ರಿಯ ನಡೆಗಳು ಆಡಳಿತವನ್ನು ಸುಧಾರಿಸುವ ಬದಲು ಅದರ ಒಟ್ಟು ಶಕ್ತಿಯನ್ನು ಕಳೆದಿಡುತ್ತಿವೆ.ಸಮಗ್ರ ಒಳಗೊಳ್ಳುವಿಕೆಯ ಕೊರತೆ ಉನ್ನತಾಧಿಕಾರ ಕೇಂದ್ರದ ನಂತರದ ಹಂತಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಆದೇಶಗಳನ್ನು ಪಾಲಿಸುವುದಕ್ಕಷ್ಟೇ ಸೀಮಿತವಾಗುಳಿಯುವ ಅನಿವಾರ್ಯತೆ ಎದುರಿಸುತ್ತಾರೆ. ಅವರನ್ನು ಒಳಗೊಳ್ಳುವಂಥ ಆಡಳಿತಾತ್ಮಕ ಕ್ರಮಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಲಾಗುತ್ತದೆ. ಒಂದು ವೇಳೆ ಎಲ್ಲ ಹಂತಗಳ ಸರ್ಕಾರಿ ನೌಕರರನ್ನು ಒಳಗೊಳ್ಳುವಂಥ ಆಡಳಿತಾತ್ಮಕ ಪ್ರಕ್ರಿಯೆಯು ಏರ್ಪಟ್ಟಿದ್ದಿದ್ದರೆ ಸರ್ಕಾರದ ಕಾರ್ಯವೈಖರಿ ಖಾಸಗಿ ವಲಯಕ್ಕಿಂತ ಭಿನ್ನ ಎಂದೆನ್ನಿಸಿಕೊಳ್ಳುತ್ತಿತ್ತು. ಆದರೆ, ಹಾಗಾಗಲಿಲ್ಲ. ಆಡಳಿತದ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಶೋಷಣೆಗೊಳಗಾಗುತ್ತಲೇ ಹೋದರು. ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಅಷ್ಟೇನೂ ಸರಿಯಲ್ಲ ಎಂಬ ಸಾರ್ವತ್ರಿಕ ಅಭಿಪ್ರಾಯ, ಟೀಕೆಗಳಿಗೆ ಗುರಿಯಾಗಬೇಕಾಯಿತು.ಹೀಗಳೆಯುವ ಉಡಾಫೆಯ ವ್ಯಂಗ್ಯಕ್ಕೀಡಾದ ನೌಕರರು ಇಷ್ಟೇ ಅಲ್ಲದೇ, ಪ್ರತಿ ಸಲ ವೇತನ ಹೆಚ್ಚಳದ ವರದಿಗಳು ಮುಖಪುಟದ ಆದ್ಯತೆಯೊಂದಿಗೆ ಪ್ರಕಟವಾದಾಗಲಂತೂ ಇವರಿಗೇಕೆ ಸಂಬಳ ಹೆಚ್ಚಿಸಬೇಕು ಎಂಬ ಸರಳೀಕೃತವಾದ ಪ್ರಶ್ನೆಗಳನ್ನು ಅವರು ಎದುರಿಸುತ್ತಲೇ ಇದ್ದಾರೆ. ವೇತನ ಹೆಚ್ಚಳ ಆಯಾ ಕಾಲದ ಆರ್ಥಿಕ ಅವಶ್ಯಕತೆಗಳಿಗೆ ಅನುಗುಣವಾಗಿ ನಡೆಯುತ್ತದೆ. ಇದು ಅತ್ಯಂತ ಸಹಜವಾದ ಆಡಳಿತಾತ್ಮಕ ಪ್ರಕ್ರಿಯೆ. ಇದು ಸಾಧ್ಯವಾಗುವುದಕ್ಕೂ ನೌಕರರು ಬಹುದಿನಗಳ ಕಾಲ ಕಾಯಬೇಕಾಗುತ್ತದೆ. ಆಡಳಿತದ ಚುಕ್ಕಾಣಿ ಹಿಡಿದವರಿಗೆ ಮತ್ತೆ ಮತ್ತೆ ನೆನಪಿಸಬೇಕಾಗುತ್ತದೆ. ಬೇಡಿಕೆ ಮುಂದಿಡಬೇಕಾಗುತ್ತದೆ. ಸರ್ಕಾರದ ನೇತೃತ್ವ ವಹಿಸಿದವರು ರಾಜಕೀಯ ಲೆಕ್ಕಾಚಾರದೊಂದಿಗೇ ಉನ್ನತಾಧಿಕಾರಿಗಳ ಜೊತೆಗೆ ಚರ್ಚಿಸಿ ವೇತನ ಹೆಚ್ಚಳದ ಘೋಷಣೆ ಮಾಡುತ್ತಾರೆ. ಕೊನೆಗೂ ಸರ್ಕಾರ ಸ್ಪಂದಿಸಿತು ಎಂಬ ಕೃತಾರ್ಥ ಭಾವ ನೌಕರರದ್ದಾಗುತ್ತದೆ. ಆದರೆ, ಇದಕ್ಕೆ ಸಂಬಂಧಿಸಿದ ಸುದ್ದಿ ಪ್ರಚುರವಾದಾಗ ಸರ್ಕಾರಿ ನೌಕರರನ್ನು ಹೀಗಳೆಯುವ ಉಡಾಫೆಯ ವ್ಯಂಗ್ಯದ ತಿವಿತಗಳಿಗೆ ಈಡಾಗಬೇಕಾಗುತ್ತದೆ. ಹೀಗಾಗಿಯೇ ನೌಕರರು ಒಂದು ಬಗೆಯ ಅಸಮಾಧಾನ, ಅತೃಪ್ತಿಯೊಂದಿಗೇ ಕಾರ್ಯನಿರ್ವಹಿಸಬೇಕಾಗುತ್ತದೆ. ಇದು ಇಲಾಖಾವಾರು ಕಾರ್ಯವೈಖರಿಯ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕೆ ಕಾರಣ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಅಡಗಿರುವ ಹತ್ತುಹಲವು ಲೋಪದೋಷಗಳು.
ಅತಾರ್ಕಿಕ ಟೀಕೆಗಳು
ಈ ಹಂತದಲ್ಲಿಯೇ ಸರ್ಕಾರಿ ಕೆಲಸ ಮತ್ತು ಸರ್ಕಾರಿ ನೌಕರರು ಸರಳೀಕೃತವಾದ, ಅತಾರ್ಕಿಕ ಟೀಕೆಗಳಿಗೆ ತುತ್ತಾಗಬೇಕಾಯಿತು. ಕ್ಲೀಷೆ ಎನ್ನಿಸುವಷ್ಟರ ಮಟ್ಟಿಗೆ ಟೀಕೆಗೆ ಒಳಗಾದ, ವ್ಯಂಗ್ಯಕ್ಕೆ ತುತ್ತಾದ ಒಂದು ಜನಜನಿತ ಉಲ್ಲೇಖವೆಂದರೆ ‘ಸರ್ಕಾರಿ ಕೆಲಸ ದೇವರ ಕೆಲಸ’. ಇದನ್ನು ತಪ್ಪಾಗಿ ಅರ್ಥೈಸಲಾಗಿದೆ. ತಪ್ಪಾಗಿ ಗ್ರಹಿಸಲಾಗಿದೆ. ಸರ್ಕಾರದ ಕೆಲಸ ದೇವರದ್ದಾಗಿರುವುದರಿಂದ ಮನುಷ್ಯರಿಗೆ ಅಲ್ಲಿ ನಿರ್ವಹಿಸಲು ಕೆಲಸವೇ ಇರುವುದಿಲ್ಲ, ಹಾಗಾಗಿಯೇ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ನಿರೀಕ್ಷಿತ ರೀತಿಯಲ್ಲಿ ಕೆಲಸಗಳಾಗುವುದಿಲ್ಲ ಎಂಬ ಉಲ್ಲೇಖಗಳು ವ್ಯಂಗ್ಯಾತ್ಮಕವಾಗಿಯೇ ವ್ಯಕ್ತವಾಗುತ್ತವೆ.

ಈ ಉಲ್ಲೇಖವನ್ನು ಹೀಗೆ ತಪ್ಪಾಗಿ ಅರ್ಥೈಸಿಕೊಳ್ಳುವುದಕ್ಕಿಂತ ಅದರ ಹಿಂದಿನ ಉದ್ದೇಶವನ್ನು ಸ್ಪಷ್ಟಪಡಿಸಿಕೊಳ್ಳಬೇಕಾಗಿದೆ. ನೌಕರರೊಳಗೆ ನೈತಿಕ ಶ್ರದ್ಧೆಯನ್ನು ರೂಪಿಸುವ ಒತ್ತಾಸೆಯೊಂದಿಗೆ ಸರ್ಕಾರದ ಕೆಲಸವನ್ನು ದೇವರ ಕೆಲಸಕ್ಕೆ ಹೋಲಿಸಿ ವ್ಯಾಖ್ಯಾನಿಸಿರಬಹುದು. ದೇವರ ಕೆಲಸವೆಂದರೆ ನೌಕರರೊಳಗೆ ಶ್ರದ್ಧೆ ಹುಟ್ಟಿಕೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿ ಅಂಥದ್ದೊಂದು ವ್ಯಾಖ್ಯಾನ ಹುಟ್ಟಿಕೊಂಡಿರಬಹುದು. ಆದರೆ, ಹಾಗಾಗಲಿಲ್ಲ. ಬದಲಾಗಿ ಸರ್ಕಾರಿ ನೌಕರರು ಕೆಲಸ ಮಾಡದೇ ಇದ್ದರೂ ನಡೆಯುತ್ತದೆ ಎಂಬ ಮನೋಭಾವದೊಂದಿಗೆ ಈ ಉದ್ಧರಣ ತಳುಕುಹಾಕಿಕೊಂಡಿತು. ಈ ಉದ್ಧರಣಕ್ಕಿಂತ ಮುಖ್ಯವೆನ್ನಿಸುವ ಉದಾತ್ತವಾದುದು ‘ಕಾಯಕವೇ ಕೈಲಾಸ’ ಪರಿಕಲ್ಪನೆ. ನಿರ್ವಹಿಸಬೇಕಾದ ಕೆಲಸವನ್ನು ಕೈಲಾಸಕ್ಕೆ ಸಮೀಕರಿಸಿ ನೋಡುವ ಈ ದೃಷ್ಟಿಕೋನವನ್ನು ಆಧರಿಸಿ ಸರ್ಕಾರಿ ಆಡಳಿತ ಮರುರೂಪುಗೊಂಡರೆ ಬೆಳವಣಿಗೆಯ ಪ್ರಕ್ರಿಯೆಗೆ ಹೊಸ ಆಯಾಮ ದೊರಕುತ್ತದೆ.
ಸೀಮಿತ ಗ್ರಹಿಕೆಯ ಮಿತಿಗಳು
ಭಾರತದಲ್ಲಿ ಸಾರ್ವಜನಿಕ ಆಡಳಿತದ ಪರಿಕಲ್ಪನೆಯು ಚಲನೆಯ ಸಂಕೇತವಾಗಿ ಚಾಲ್ತಿಗೆ ಬರಲೇ ಇಲ್ಲ. ಅದು ಕೇವಲ ಸರ್ಕಾರದ ಕೆಲಸ ಎಂಬರ್ಥದ ಸೀಮಿತ ಗ್ರಹಿಕೆಯೇ ಆದ್ಯತೆ ಪಡೆದು ಉನ್ನತ ಹಂತದ ನಾಯಕರೆನ್ನಿಸಿಕೊಂಡವರು ಅದಕ್ಕನುಗುಣವಾಗಿಯೇ ಆಡಳಿತವನ್ನು ವ್ಯಾಖ್ಯಾನಿಸಿಕೊಂಡರು. ಬದಲಾವಣೆ, ಬೆಳವಣಿಗೆ, ಪ್ರಗತಿ, ಅಭಿವೃದ್ಧಿ ಎಂಬ ಪದಗಳೊಂದಿಗೆ ಆಡಳಿತವನ್ನು ಜೋಡಿಸಿ ಮಾತನಾಡುವ ಜಾಣ್ಮೆಯನ್ನು ರೂಢಿಸಿಕೊಂಡರೇ ಹೊರತು ಅದನ್ನು ದೇಶ ಮತ್ತು ಜನತೆಯ ಉಜ್ವಲ ಭವಿಷ್ಯವನ್ನು ಸಾಧ್ಯವಾಗಿಸುವ ಸಂಕಲ್ಪಕ್ಕೆ ಸಂಯೋಜಿಸುವುದರ ಕಡೆಗೆ ಗಮನವನ್ನೇ ಹರಿಸಲಿಲ್ಲ. ಪ್ರಧಾನಿ ಮತ್ತು ಮುಖ್ಯಮಂತ್ರಿ ಹುದ್ದೆಗಳನ್ನು ಅಲಂಕರಿಸಿದ ಕೆಲವರು ಈ ಕುರಿತು ಯೋಚಿಸಿ ಯೋಜಿಸಿದರೂ ಆಡಳಿತಾತ್ಮಕ ಕಾರ್ಯಾನುಷ್ಠಾನ ಸಾಧ್ಯವಾಗಲಿಲ್ಲ. ಭಿನ್ನವಾಗಿ ಯೋಚಿಸುವ ನಾಯಕರು ಉನ್ನತ ಹುದ್ದೆಗಳನ್ನು ಅಲಂಕರಿಸಿದಾಗಲೂ ಇದೇ ಸಮಸ್ಯೆ ಮುಂದುವರೆಯಿತು. ಹೀಗೆ ಆಲೋಚಿಸುವ ನಾಯಕರಿದ್ದಾಗ ಉನ್ನತ ಹಂತಗಳ ಅಧಿಕಾರಿವರ್ಗ ಹಾಗೆ ಯೋಚಿಸಲಿಲ್ಲ. ಹಾಗೆ ಯೋಚಿಸುವ ಅಧಿಕಾರಿ ವರ್ಗ ಉನ್ನತ ಹಂತಗಳಲಿದ್ದಾಗ ಸ್ಪಂದಿಸುವ ಗುಣದ ದಾರ್ಶನಿಕ ನಾಯಕತ್ವದ ಕೊರತೆ ಕಾಡಿತು.
ಅಗಾಧ ಶ್ರಮದ ಅಪವ್ಯಯ
ಇಂಥ ಸಂಕೀರ್ಣತೆಯ ಮಧ್ಯೆಯೇ ಸರ್ಕಾರಿ ನೌಕರರು ಕಾರ್ಯನಿರ್ವಹಿಸಬೇಕಾಯಿತು. ಜನಹಿತದ ಪ್ರಶ್ನೆಗಳನ್ನು ಕಾಡಿಸಿಕೊಂಡು ಕಾರ್ಯನಿರ್ವಹಿಸುವ ಸಾಮೂಹಿಕ ಹೊಣೆಗಾರಿಕೆಯ ಪ್ರಜ್ಞೆ ಇದ್ದರೂ ಅದು ಪ್ರಯೋಗಕ್ಕೊಳಪಡಲಿಲ್ಲ.ಪ್ರಯೋಗಕ್ಕೊಳಪಡದಂತೆ ಅಡತಡೆಗಳನ್ನು ಉಂಟುಮಾಡುವ ಸಂಕುಚಿತ ರಾಜಕಾರಣ ಚಿಗುರೊಡೆಯಿತು. ಅದನ್ನು ರಾಜಕೀಯ ಪಕ್ಷಗಳು ಅತ್ಯಂತ ಚಾಣಾಕ್ಷಯುತವಾಗಿ ಪೋಷಿಸಿದವು. ನೌಕರರ ಅಗಾಧ ಶ್ರಮದ ಅಪವ್ಯಯ ಇಲ್ಲಿಂದಲೇ ಆರಂಭವಾಯಿತು. ನಾವಿನ್ನೂ ಜನರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿಸುವುದರ ಕಡೆಗೇ ಶ್ರಮವನ್ನು ವ್ಯಯಿಸುತ್ತಿದ್ದೇವೆ ಎಂಬ ಟೀಕೆ ತಾರ್ಕಿಕವೆನ್ನಿಸತೊಡಗಿತು. ಇದನ್ನು ಅಲ್ಲಗಳೆಯುವ ಆಡಳಿತಾತ್ಮಕ ದಿಟ್ಟಹೆಜ್ಜೆಗಳು ನಾಯಕರೆನ್ನಿಸಿಕೊಂಡವರಿಂದಾಗಲೀ, ಕಾರ್ಯಾಂಗದ ರಚನಾತ್ಮಕತೆಯನ್ನು ವಿಸ್ತರಿಸುವ ಹೊಣೆಗಾರಿಕೆಯುಳ್ಳ ಉನ್ನತ ಹಂತದ ಅಧಿಕಾರಿ ವರ್ಗದಿಂದಾಗಲೀ ವ್ಯಕ್ತವಾಗಲಿಲ್ಲ. ರಾಜಕಾರಣಿಗಳ ಅಪ್ರಬುದ್ಧತೆ ಆಡಳಿತವನ್ನು ಸಡಿಲಗೊಳಿಸಿತು. ಉನ್ನತಾಧಿಕಾರಿ ವರ್ಗದ್ದು ಕೇವಲ ಮೂಕಪ್ರೇಕ್ಷಕ ಪಾತ್ರವಾಯಿತು. ಆಡಳಿತದ ಅನುಕೂಲಕ್ಕಾಗಿ ರೂಪುಗೊಂಡಿದ್ದ ಏಣಿಶ್ರೇಣಿ ವ್ಯವಸ್ಥೆ ಪ್ರತಿಷ್ಠೆಯ ಚೌಕಟ್ಟಿನೊಳಗೆ ಬಂಧಿಯಾಯಿತು. ದರ್ಪ, ದರ್ಬಾರು, ನಿಂದನೆ, ಕಿರುಕುಳ ಮತ್ತು ಶೋಷಣೆಗಳ ನಡುವೆ ಕೆಲಸ ಮಾಡುವ ಅನಿವಾರ್ಯತೆ ನಂತರದ ಆಡಳಿತಾತ್ಮಕ ಹಂತಗಳ ನೌಕರರಿಗೆ ಎದುರಾಯಿತು.

ಆಕ್ರಾಮಕ ನೀತಿಗಳ ಸವಾರಿ ಸರ್ಕಾರಿ ನೌಕರರು ಮತ್ತು ಅವರ ನೌಕರಿಯನ್ನು ಅಪವ್ಯಾಖ್ಯಾನಿಸಿ ಅವರ ಅಸ್ತಿತ್ವವನ್ನು ನಗಣ್ಯವಾಗಿಸಿ ಅಪವ್ಯಾಖ್ಯಾನಕ್ಕೆ ಒಳಪಡಿಸುವ ಹುನ್ನಾರ ರಾಜಕಾರಣ ಮತ್ತು ಆಡಳಿತಾತ್ಮಕ ಉನ್ನತ ಹಂತಗಳಿಂದಲೇ ಶುರುವಾಯಿತು. ಈ ಅಪವ್ಯಾಖ್ಯಾನ ಸರ್ಕಾರಿ ವಲಯವನ್ನು ನೆಗೆಟಿವ್ ಆಗಿ ನೋಡುವುದಕ್ಕೆ ಪ್ರಚೋದಿಸಿತು. ಆಡಳಿತವನ್ನು ಯಂತ್ರವನ್ನಾಗಿ ತಪ್ಪಾಗಿ ಬಿಂಬಿಸಿತು. ನೌಕರರನ್ನು ದುಡಿಯುವ ಯಂತ್ರಗಳನ್ನಾಗಿ ನೋಡುವ ವಿಚಿತ್ರ ವಾತಾವರಣ ಸೃಷ್ಟಿಯಾಯಿತು. ನೌಕರರು ಯಂತ್ರಗಳಲ್ಲ ಎಂಬುದನ್ನು ಮನದಟ್ಟು ಮಾಡಿಕೊಳ್ಳುವ ಹೊತ್ತಿಗೆ ಕಾಲ ಮಿಂಚಿತ್ತು. ತೊಂಭತ್ತರ ದಶಕದ ಆಕ್ರಾಮಕ ನೀತಿಗಳ ಸವಾರಿ ಆರಂಭವಾಗಿತ್ತು. ಬೃಹತ್ ಕಂಪನಿಗಳ ವಾಣಿಜ್ಯಿಕ ಕೌಶಲ್ಯಗಳು ಶ್ರೇಷ್ಠ ಎಂದೆನ್ನಿಸಿ ನಮ್ಮದೇ ಸರ್ಕಾರದ ವಿವಿಧ ಹಂತಗಳು ಪೇಲವ ಎನ್ನಿಸತೊಡಗಿದವು. ಇಡೀ ಸಾರ್ವಜನಿಕ ಆಡಳಿತ ಟೊಳ್ಳು ಎಂಬ ಭಾವನೆಯನ್ನು ಉದ್ದೇಶಪೂರ್ವಕವಾಗಿ ಬಿತ್ತಲಾಯಿತು.
ಆದ್ಯತಾವಲಯಗಳೆಡೆಗೆ ನಿರ್ಲಕ್ಷ್ಯ
ಆದರೆ, ಸ್ವಾತಂತ್ರ್ಯಾನಂತರ ಇಡೀ ದೇಶ ಆಡಳಿತಾತ್ಮಕವಾಗಿ ಮಹತ್ವದ್ದನ್ನು ಸಾಧಿಸಬೇಕಾಗಿತ್ತು. ಆಡಳಿತವನ್ನು ಸಂಪನ್ಮೂಲ ಕೇಂದ್ರವಾಗಿಸುವ ದಾರ್ಶನಿಕತೆಯ ವ್ಯಕ್ತವಾಗಬೇಕಾಗಿತ್ತು. ಅಂಥ ದಾರ್ಶನಿಕತೆಯನ್ನು ನಿರೂಪಿಸುವ ನಾಯಕರ ಸಂಖ್ಯೆ ಹೆಚ್ಚಾಗಬೇಕಾಗಿತ್ತು. ನೌಕರರನ್ನು ಮಕ್ಕಳಂತೆ ನೋಡುವ ತಾಯಿಯ ಅಂತಃಕರಣ ಉನ್ನತ ಹಂತದ ನಾಯಕತ್ವ ಮತ್ತು ಅತ್ಯುನ್ನತ ಹಂತದ ಅಧಿಕಾರ ವಲಯದಿಂದ ಅಭಿವ್ಯಕ್ತಗೊಳ್ಳಬೇಕಿತ್ತು. ಅಂಥ ಉದಾತ್ತತೆಯ ಬದಲು ಆಡಳಿತ ಸುಧಾರಣೆಯ ನೆಪದಲ್ಲಿ ನೌಕರರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಲಾಯಿತು. ಪ್ರಯೋಜನವಾದಿ ವಾಣಿಜ್ಯಿಕ ಲಾಭದ ಉದ್ಯಮದ ವ್ಯಾಪ್ತಿಗೆ ಸರ್ಕಾರಿ ವ್ಯವಸ್ಥೆಯನ್ನು ತರಲಾಯಿತು. ನೌಕರರ ಸಂಖ್ಯೆ ತಗ್ಗಿಸುವ ಯೋಚನೆ, ಪಿಂಚಣಿ ಸೌಲಭ್ಯ ನಿರಾಕರಣೆ, ಖಾಸಗಿಯವರೊಂದಿಗೆ ಗುರುತಿಸಿಕೊಳ್ಳುವ ಪ್ರಯೋಜನವಾದಿ ಹಂಬಲ, ನೇಮಕಾತಿ, ಬಡ್ತಿ ಮತ್ತಿತರ ಸಂಗತಿಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟುಗಳು ನಿರಂತರವಾದವು. ಈ ಬಿಕ್ಕಟ್ಟುಗಳು ಬಿಗಡಾಯಿಸಿದಾಗ ಯಥಾಸ್ಥಿತಿವಾದದ ಹ್ಯಾಂಗ್ ಓವರ್‍ಗೆ ಆಡಳಿತ ಮತ್ತು ನಾಯಕತ್ವ ಈಡಾಗಬೇಕಾಯಿತು. ಸಾಮಾಜಿಕತೆ, ಶಿಕ್ಷಣ, ಆರೋಗ್ಯ, ಮಾನವ ಸಂಪನ್ಮೂಲ ಸೇರಿದಂತೆ ಮಹತ್ವದ ಆದ್ಯತಾ ವಲಯಗಳು ನಿರ್ಲಕ್ಷ್ಯಕ್ಕೆ ತುತ್ತಾದವು.

ಆಶಾವಾದದ ಮಾರ್ಗ ಹಾಗಾದರೆ, ಸರ್ಕಾರಿ ನೌಕರರೂ ಸೇರಿದಂತೆ ವಿವಿಧ ವಲಯಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರೋಪಾಯಗಳೇ ಇಲ್ಲವೇ? ಹಾಗೆ ನಿರಾಸೆಗೊಳ್ಳಬೇಕಿಲ್ಲ. ಬಲದಾವಣೆಯು ಮೇಲುಹಂತದಿಂದ ಕೆಳಹಂತದವರೆಗೆ ಪ್ರವಹಿಸುವಂಥ ಪ್ರಕ್ರಿಯೆ ತೀವ್ರಗೊಳ್ಳಬೇಕು. ರಾಜಕಾರಣಿಗಳು ದಾರ್ಶನಿಕ ನಾಯಕರಾಗಿ ಮಾರ್ಪಾಡಾಗಬೇಕು. ವಿವಿಧ ವಲಯಗಳನ್ನು ಪ್ರತಿನಿಧಿಸಿ ಮಹತ್ವದ್ದನ್ನು ಸಾಧಿಸುವಂಥ ಮಹತ್ವಾಕಾಂಕ್ಷೆಯೊಂದಿಗೆ ರಾಜಕಾರಣವನ್ನು ಜನಮುಖಿಯಾಗಿಸಬೇಕು. ಕಾರ್ಯಾಂಗದ ಚಲನಶೀಲತೆಯನ್ನು ತೀವ್ರಗೊಳಿಸುವ ಸಂಕಲ್ಪದೊಂದಿಗೆ ಶಾಸಕಾಂಗ ಹೆಜ್ಜೆಯಿರಿಸಬೇಕು. ಆ ಮೂಲಕ ತನ್ನ ಶಕ್ತಿಯನ್ನು ಮರುರೂಪಿಸಿಕೊಳ್ಳಬೇಕು. ಅಂಥ ಶಕ್ತಿಯನ್ನು ವಿಸ್ತರಿಸಲು ಸಾಧ್ಯವಾಗಿಸುವಂತೆ ಸಾರ್ವಜನಿಕ ಆಡಳಿತಾಂಗವನ್ನು ಪ್ರತಿನಿಧಿಸುವ ಉನ್ನತ ಮತ್ತು ತದನಂತರದ ಹಂತಗಳ ಅಧಿಕಾರಿಗಳು ನೋಡಿಕೊಳ್ಳಬೇಕು. ಸರ್ಕಾರಿ ನೌಕರರರ ಸಂಪನ್ಮೂಲ ಸಾಮಥ್ರ್ಯವನ್ನು ವಿಸ್ತರಿಸಬೇಕು. ಅವರ ಹಿತಾಸಕ್ತಿಗಳನ್ನು ರಕ್ಷಿಸುತ್ತಲೇ ಸಾರ್ವಜನಿಕ ಆಡಳಿತವನ್ನು ಪುನಃಶ್ಚೇತನಗೊಳಿಸಿ ಪ್ರಜಾಪ್ರಭುತ್ವದ ಸದಾಶಯಗಳ ಸಾಕಾರಕ್ಕೆ ಶ್ರಮಿಸಬೇಕು. ಆ ಮೂಲಕ ಸಾರ್ವಜನಿಕ ವಲಯದ ಅಸ್ತಿತ್ವವನ್ನು ಉಳಿಸಿಕೊಂಡು ಅಪ್ಪಟ ದೇಶಿ ಪ್ರಜ್ಞೆಯ ಆಧಾರದಲ್ಲಿ ಭಾರತದ ಭವಿಷ್ಯವನ್ನು ಉಜ್ವಲಗೊಳಿಸುವ ನಡೆಗಳು ಪುನರಾವರ್ತಿತವಾಗಬೇಕು.

                                        -ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading
Advertisement

Title

ದಿನದ ಸುದ್ದಿ19 hours ago

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು...

ದಿನದ ಸುದ್ದಿ20 hours ago

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ...

ದಿನದ ಸುದ್ದಿ20 hours ago

ಡಾಲಿಯ ಕನಸು ಒಂದೇ ಹೀರೋ ಆಗೋದು

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು! ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು...

ದಿನದ ಸುದ್ದಿ2 days ago

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ...

ದಿನದ ಸುದ್ದಿ2 days ago

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ...

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
ದಿನದ ಸುದ್ದಿ2 days ago

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್ 658 OMR ಕಾರ್ಬನ್...

ದಿನದ ಸುದ್ದಿ2 days ago

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌! ಮಂಜುನಾಥನ...

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ ₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ದಿನದ ಸುದ್ದಿ2 days ago

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ ನಿವೇಶನ 13...

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
ದಿನದ ಸುದ್ದಿ2 days ago

ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ...

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ!
ದಿನದ ಸುದ್ದಿ2 days ago

ಆನ್‌ಲೈನ್‌ನಲ್ಲಿ ಮಾರಾಟವಾಗ್ತಿತ್ತು ‘ವಿಷದ ಹಣ್ಣು’! ಇ-ಕಾಮರ್ಸ್‌ ದೈತ್ಯರಿಗೆ ನೋಟಿಸ್‌

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಆನ್‌ಲೈನ್‌ನಲ್ಲಿ ‘ವಿಷದ ಹಣ್ಣು’ ಮಾರಾಟ ಅಮೆಜಾನ್‌, ಫ್ಲಿಪ್‌ಕಾರ್ಟ್‌, ಮಿನಿಟ್ಸ್‌ಗೆ ಸರ್ಕಾರದೊಂದ ನೋಟಿಸ್‌ ಈ ಹಣ್ಣು ಖರೀದಿಸಿದ್ರೆ ಅಪಾಯ,...

Trending