Connect with us

ರಾಜಕೀಯ

ನೌಕರರು, ನಾಯಕರು ಮತ್ತು ಆಡಳಿತ

Published

on

ತ್ತೀಚೆಗೆ ನಡೆದ ಸಾಹಿತ್ಯೋತ್ಸವವೊಂದರ ಗೋಷ್ಠಿಯಲ್ಲಿ ಇಬ್ಬರು ಭಾಷಣಕಾರರು ಕಾರ್ಯಾಂಗದ ಅನುಷ್ಠಾನ ಬದ್ಧತೆಯ ಕೊರತೆಯ ಕಾರಣಕ್ಕಾಗಿ ಈ ದೇಶದಲ್ಲಿ ನಾಯಕರ ಸುಧಾರಣೆಯ ಕನಸುಗಳು ಸಾಕಾರಗೊಳ್ಳುತ್ತಿಲ್ಲ ಎಂಬ ತಕರಾರು ಎತ್ತಿದರು. ಅಷ್ಟೇ ಅಲ್ಲ, ಅವರು ಇನ್ನೂ ಸ್ಪಷ್ಟವಾಗಿ ಕಾರ್ಯಾಂಗದ ವೈಖರಿಯ ಮೇಲೆ ಅತ್ಯಂತ ಸರಳೀಕೃತವಾದ ತಾರ್ಕಿಕವಲ್ಲದ ಜಾಳುಜಾಳಾದ ಹೇಳಿಕೆಯನ್ನು ತೇಲಿಬಿಟ್ಟರು. ಜನಸಾಮಾನ್ಯನ ಪ್ರಾಮಾಣಿಕತೆಯ ಕಾರಣಕ್ಕಾಗಿ ಸಂದಾಯವಾಗುತ್ತಿರುವ ತೆರಿಗೆಯ ಹಣಕ್ಕೆ ಪ್ರತಿಯಾಗಿ ಕಾರ್ಯಾಂಗವು ಕೇವಲ ನೋವು, ಹತಾಶೆಗಳನ್ನಷ್ಟೇ ನೀಡುತ್ತಿದೆಯೇ ಹೊರತು ತಕ್ಕುದಾದ ಫಲಶೃತಿಗಳನ್ನಲ್ಲ ಎಂದು ಹೇಳಿ ಚಪ್ಪಾಳೆ ಗಿಟ್ಟಿಸಿಕೊಂಡರು. ಆದರೆ, ಈ ಹೇಳಿಕೆಯಲ್ಲಿರುವ ಪೂರ್ವಗ್ರಹಪೀಡಿತ ದೃಷ್ಟಿಕೋನದ ಅಪಾಯಕಾರಿ ಸ್ವರೂಪ ಅಲ್ಲಿದ್ದವರ್ಯಾರ ಗಮನಕ್ಕೆ ಬರಲೇ ಇಲ್ಲ. ಹಾಗೆ ಬರದ ಹಾಗೆ ಅವರಿಬ್ಬರ ಭಾಷಿಕ ಪ್ರೌಢಿಮೆಯು ತನ್ನ ಚಾಣಾಕ್ಷತೆಯನ್ನು ಮೆರೆದಿತ್ತು. “ಸುಧಾರಣೆಯ ಹೆಜ್ಜೆಗಳು ಎಲ್ಲ ಕಾಲದ ನಾಯಕರ ಆಳ್ವಿಕೆಯ ವೇಳೆ ಕಾಣಿಸಿಕೊಳ್ಳುತ್ತವೆ. ಆದರೆ, ಸುಧಾರಣೆಯ ನೀತಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾದ ಕಾರ್ಯಾಂಗ ನಿರ್ಲಿಪ್ತವಾಗಿರುವುದರಿಂದಲೇ ಅನೇಕ ಸಮಸ್ಯೆಗಳಿವೆ” ಎಂದು ತೀರ್ಪು ನೀಡಿಬಿಟ್ಟರು.ಸಂಕೀರ್ಣ ವಾಸ್ತವಾಂಶಗಳುಈ ಹೇಳಿಕೆಯನ್ನು ಯಥಾವತ್ತಾಗಿ ಮುಗ್ಧವಾಗಿ ಸ್ವೀಕರಿಸಿದರೆ ಸಮಸ್ಯೆಯ ಸಂಕೀರ್ಣತೆಯ ಹಿಂದಿನ ವಾಸ್ತವಾಂಶಗಳು ಗಮನಕ್ಕೇ ಬರುವುದಿಲ್ಲ. ಗಮನಕ್ಕೆ ತಂದುಕೊಂಡರೂ ನಾಯಕರೆಡೆಗಿನ ಭಾವನಾತ್ಮಕ ಅಭಿಮಾನದ ಪ್ರಭಾವಳಿ ಅಂಥ ಸಾಧ್ಯತೆಯನ್ನು ಆ ಕ್ಷಣಕ್ಕೇ ಮೊಟಕುಗೊಳಿಸಿಬಿಡುತ್ತದೆ. ಇದನ್ನು ಇನ್ನಷ್ಟು ಸ್ಪಷ್ಟವಾಗಿಸಿಕೊಳ್ಳಬಹುದಾದರೆ, ಈ ಹೇಳಿಕೆಯ ಮೊನಚಾದ ದಾಳಿ ಸರ್ಕಾರಿ ನೌಕರರ ಮೇಲೆಯೇ ನಡೆದಿತ್ತು. ಟೀಕೆ, ಅಸಮಾಧಾನ, ಆಕ್ರೋಶ, ವ್ಯಂಗ್ಯ, ಹಾಸ್ಯ, ಅಪಹಾಸ್ಯ ಸೇರಿದಂತೆ ನಿಂದನೆಯ ನಾನಾ ಬಗೆಗಳಿಗೆ ಈಡಾಗುತ್ತಲೇ ನಿರಂತರವಾಗಿ ಸವಾಲುಗಳನ್ನು ನೌಕರವರ್ಗ ಎದುರಿಸುತ್ತಲೇ ಇದೆ. ಭ್ರಷ್ಟಾಚಾರ ಮತ್ತು ವಿಳಂಬನೀತಿ ಎಂಬ ಎರಡು ನಕಾರಾತ್ಮಕ ಸಂಗತಿಗಳು ನೌಕರರ ನಿಜವಾದ ಶಕ್ತಿಯನ್ನು ಹಿನ್ನೆಲೆಗೆ ಸರಿಸಿವೆ.

Rajadharma a column by Dr.N k padmanabh

ಶಾಸಕಾಂಗವು ಶಾಸನಗಳನ್ನು ರೂಪಿಸುವ ಹೊಣೆಗಾರಿಕೆ ನಿಭಾಯಿಸುತ್ತದೆ. ಅವುಗಳನ್ನು ಜಾರಿಗೆ ತರುವ ಜವಾಬ್ದಾರಿ ಕಾರ್ಯಾಂಗದ್ದು. ಅಂದರೆ ಉನ್ನತ ಹಂತದಿಂದ ಹಿಡಿದು ಕೆಳಹಂತದವರೆಗಿನ ಆಡಳಿತಾತ್ಮಕ ಪ್ರಕ್ರಿಯೆಯು ಕಾರ್ಯಾಂಗವನ್ನು ಪ್ರತಿನಿಧಿಸುವ ನೌಕರರಿಂದಲೇ ಏರ್ಪಡುತ್ತದೆ. ಹೀಗೆ ಏರ್ಪಡುವ ಕಾಲಕ್ಕೇ ಬದಲಾವಣೆಯು ಕಾಣಿಸಿಕೊಳ್ಳುತ್ತಿರುತ್ತದೆ. ಈ ಬದಲಾವಣೆಯು ಆಯಾ ದೇಶಗಳ ನಾಯಕರು, ರಾಜಕಾರಣ ಮತ್ತು ಜನರ ಬೌದ್ಧಿಕ ವಿವೇಚನೆಗೆ ತಕ್ಕಂತೆಯೇ ನಡೆಯುತ್ತದೆ. ಈ ವಿವೇಚನೆ ಇಲ್ಲದಿದ್ದಾಗ ನಾಯಕರು ಕಾಣಿಸಿಕೊಳ್ಳುವುದಿಲ್ಲ. ನಾಯಕರೇ ಇಲ್ಲವೆಂದ ಮೇಲೆ ರಾಜಕಾರಣವು ಒಂದು ನಿರ್ದಿಷ್ಟ ಗೊತ್ತುಗುರಿಯಿಲ್ಲದೆ ತನ್ನ ನಕಾರಾತ್ಮಕ ಶಕ್ತಿಯನ್ನು ವಿಸ್ತರಿಸಿಕೊಳ್ಳುತ್ತದೆ.ಸ್ಥಾಯಿಯಾದ ಯಥಾಸ್ಥಿತಿವಾದ
ಈ ಹಂತದಲ್ಲಿಯೇ ಸಮಾಜದಲ್ಲಿ ಬದಲಾವಣೆಯ ಬದಲು ಯಥಾಸ್ಥಿತಿಯು ಸ್ಥಾಯಿಯಾಗಿಬಿಡುತ್ತದೆ. ಬದಲಾವಣೆಯ ಗಮ್ಯವನ್ನು ಮುಖ್ಯವಾಗಿಸಿಕೊಂಡ ಪ್ರಜಾಪ್ರಭುತ್ವದ ಮೌಲ್ಯಗಳು ಅರ್ಥ ಕಳೆದುಕೊಳ್ಳುತ್ತವೆ. ಸಂವಿಧಾನದ ನಮ್ಯತೆಯ ಗುಣಲಕ್ಷಣವನ್ನು ಹದಗೆಡಿಸುವ ಹುನ್ನಾರಗಳು ನಡೆದುಬಿಡುತ್ತವೆ. ಅನಿವಾರ್ಯವಾಗಿ ಆಗಲೇಬೇಕಾದ ಬದಲಾವಣೆಯ ಪ್ರಯತ್ನಗಳು ನಿಂತುಬಿಡುವುದು ಇಂಥ ಹುನ್ನಾರಗಳ ಕಾರಣಕ್ಕಾಗಿಯೇ. ಸರ್ಕಾರಿ ನೌಕರರೆಂಬ ಜೀವಿಗಳು ಸಂಕಟ-ಸಂಕೀರ್ಣತೆಯ ನಡುವೆ ಕಾರ್ಯನಿರ್ವಹಿಸುವ ಮುಜುಗರದ ಅನುಭವಗಳೊಂದಿಗಿರಬೇಕಾಗುತ್ತದೆ. ಶಾಸಕಾಂಗವೇ ನೀತಿಗಳನ್ನು ನಿರೂಪಿಸುವ ಸಂವಿಧಾನಾತ್ಮಕ ಸಂಸ್ಥೆಯಾಗಿರುವುದರಿಂದ ಬದಲಾವಣೆಯ ಚಿಂತನೆಯು ಅಲ್ಲಿಂದಲೇ ಶುರುವಾಗಬೇಕಾಗುತ್ತದೆ. ಆದರೆ ಈ ದೇಶದಲ್ಲಿ ಹಾಗಾಗುತ್ತಿಲ್ಲ. ಈಗಾಗಲೇ ಇರುವ ನೀತಿಗಳ ಜಾಗದಲ್ಲಿ ಹೊಸದಾದುವುಗಳನ್ನು ಪ್ರತಿಷ್ಠಾಪಿಸುವ ಪ್ರಯತ್ನಗಳೇ ಆಗುತ್ತಿಲ್ಲ. ಹಳೆಯ ನೀತಿಗಳಿದ್ದರೆ ಭ್ರಷ್ಟಾಚಾರದ ಸ್ವಹಿತಾಸಕ್ತ ಉದ್ದೇಶ ಈಡೇರುತ್ತದೆ. ಹೊಸ ನೀತಿಗಳು ಬಂದರೆ ತಮ್ಮ ಅಸ್ತಿತ್ವಕ್ಕೇ ಕೊಡಲಿಪೆಟ್ಟು ಬೀಳುತ್ತದೆ ಎಂದುಕೊಳ್ಳುವ ನಾಯಕರಲ್ಲದ ರಾಜಕಾರಣಿಗಳು ತಮ್ಮ ತಮ್ಮ ಪಕ್ಷಗಳ ಸಾಂಸ್ಥಿಕ ಶ್ರೇಷ್ಠತೆಯನ್ನು ಮೊಟಕುಗೊಳಿಸಿಕೊಳ್ಳುವ ಹಾಗೆಯೇ ವರ್ತಿಸುತ್ತಾರೆ. ಯಥಾಸ್ಥಿತಿವಾದವನ್ನು ಉಳಿಸಿ ಅದರ ಮೇಲೆ ತಮ್ಮ ಅಸ್ತಿತ್ವವವನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಹಂಬಲಗಳನ್ನೇ ಕಾಡಿಸಿಕೊಳ್ಳುತ್ತಾರೆ.ಉದ್ದೇಶಪೂರ್ವಕ ಹುನ್ನಾರ
ಅವರು ಜನರಿಗೆ ಬಹುಕಾಲದವರೆಗೆ ಅನುಕೂಲ ಒದಗಿಸಿಕೊಡುವ ಶಾಶ್ವತವಾದ ಯೋಜನೆಗಳನ್ನು ರೂಪಿಸುವ ಬದಲು ಬರೀ ಜನರ ತಾತ್ಪೂರ್ತಿಕ ಆಸೆಗಳನ್ನು ಈಡೇರಿಸುವಂಥ ಜನಪ್ರಿಯ ನೀತಿಗಳನ್ನು ರಚಿಸುತ್ತಾರೆ. ಅವುಗಳು ಅಂಗೀಕೃತವಾಗುವಂತೆಯೂ ನೋಡಿಕೊಳ್ಳುತ್ತಾರೆ. ಮತಗಳಿಕೆಯ ಲೆಕ್ಕಾಚಾರದ ಉದ್ದೇಶಗಳನ್ನೇ ಮುಖ್ಯವಾಗಿಸಿಕೊಂಡು ಯಶಸ್ವಿಯಾಗುತ್ತಾರೆ. ಜನಪ್ರಿಯ ಯೋಜನೆಗಳ ಅನುಷ್ಠಾನದಲ್ಲಿ ನೌಕರರು ಕಾರ್ಯನಿರ್ವಹಿಸಿದರೂ ಅದರ ಕ್ರೆಡಿಟ್ ಅವರಿಗೆ ಹೋಗುವುದಿಲ್ಲ. ನಾಯಕರೆನಿಸಿಕೊಂಡವರ ಪಾಲಾಗುತ್ತದೆ. ಅವರು ದೂರದೃಷ್ಟಿಯ ಚಿಂತನೆಗಳನ್ನು ಉದ್ದೇಶಪೂರ್ವಕವಾಗಿ ಹತ್ತಿಕ್ಕಿಬಿಡುತ್ತಾರೆ. ಜನಪ್ರಿಯ ಯೋಜನೆಗಳಿಗೆ ಯಶಸ್ಸು ದೊರಕಿದರೆ ಅದರ ಲಾಭವನ್ನು ತಾವು ಪಡೆಯುತ್ತಾರೆ. ಟೀಕೆಗೀಡಾದರೆ ವೈಫಲ್ಯಕ್ಕೆ ಸರ್ಕಾರಿ ನೌಕರರೆಡೆಗೆ ಬೊಟ್ಟು ಮಾಡುತ್ತಾರೆ.

ಹಿಂದೊಮ್ಮೆ ಬ್ರಿಟಿಷ್ ಹಿಡಿತಕ್ಕೊಳಗಾಗಿದ್ದ ಈ ದೇಶದಲ್ಲಿ ಅದರ ಆಡಳಿತಾತ್ಮಕ ಪಳೆಯುಳಿಕೆಯ ಹಲವು ವಿಧಾನಗಳು ಈಗಲೂ ಅನುಸರಿಸಲ್ಪಡುತ್ತಿವೆ. ಏಣಿಶ್ರೇಣಿ ವ್ಯವಸ್ಥೆಯ ವಿವಿಧ ಹಂತಗಳು ಉನ್ನತ ಅಧಿಕಾರಿಗಳ ಪ್ರತಿಷ್ಠೆಯ ಹಂಗುಗಳ ಚೌಕಟ್ಟುಗಳಡಿ ನಲುಗುತ್ತಿವೆ. ರಾಜಕಾರಣಿ ಮತ್ತು ಉನ್ನತ ಹಂತದ ಅಧಿಕಾರಿಗಳ ನಡುವಿನ ಅಸಂಬದ್ಧ ಮೈತ್ರಿಯ ನಡೆಗಳು ಆಡಳಿತವನ್ನು ಸುಧಾರಿಸುವ ಬದಲು ಅದರ ಒಟ್ಟು ಶಕ್ತಿಯನ್ನು ಕಳೆದಿಡುತ್ತಿವೆ.ಸಮಗ್ರ ಒಳಗೊಳ್ಳುವಿಕೆಯ ಕೊರತೆ ಉನ್ನತಾಧಿಕಾರ ಕೇಂದ್ರದ ನಂತರದ ಹಂತಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಆದೇಶಗಳನ್ನು ಪಾಲಿಸುವುದಕ್ಕಷ್ಟೇ ಸೀಮಿತವಾಗುಳಿಯುವ ಅನಿವಾರ್ಯತೆ ಎದುರಿಸುತ್ತಾರೆ. ಅವರನ್ನು ಒಳಗೊಳ್ಳುವಂಥ ಆಡಳಿತಾತ್ಮಕ ಕ್ರಮಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಲಾಗುತ್ತದೆ. ಒಂದು ವೇಳೆ ಎಲ್ಲ ಹಂತಗಳ ಸರ್ಕಾರಿ ನೌಕರರನ್ನು ಒಳಗೊಳ್ಳುವಂಥ ಆಡಳಿತಾತ್ಮಕ ಪ್ರಕ್ರಿಯೆಯು ಏರ್ಪಟ್ಟಿದ್ದಿದ್ದರೆ ಸರ್ಕಾರದ ಕಾರ್ಯವೈಖರಿ ಖಾಸಗಿ ವಲಯಕ್ಕಿಂತ ಭಿನ್ನ ಎಂದೆನ್ನಿಸಿಕೊಳ್ಳುತ್ತಿತ್ತು. ಆದರೆ, ಹಾಗಾಗಲಿಲ್ಲ. ಆಡಳಿತದ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಶೋಷಣೆಗೊಳಗಾಗುತ್ತಲೇ ಹೋದರು. ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಅಷ್ಟೇನೂ ಸರಿಯಲ್ಲ ಎಂಬ ಸಾರ್ವತ್ರಿಕ ಅಭಿಪ್ರಾಯ, ಟೀಕೆಗಳಿಗೆ ಗುರಿಯಾಗಬೇಕಾಯಿತು.ಹೀಗಳೆಯುವ ಉಡಾಫೆಯ ವ್ಯಂಗ್ಯಕ್ಕೀಡಾದ ನೌಕರರು ಇಷ್ಟೇ ಅಲ್ಲದೇ, ಪ್ರತಿ ಸಲ ವೇತನ ಹೆಚ್ಚಳದ ವರದಿಗಳು ಮುಖಪುಟದ ಆದ್ಯತೆಯೊಂದಿಗೆ ಪ್ರಕಟವಾದಾಗಲಂತೂ ಇವರಿಗೇಕೆ ಸಂಬಳ ಹೆಚ್ಚಿಸಬೇಕು ಎಂಬ ಸರಳೀಕೃತವಾದ ಪ್ರಶ್ನೆಗಳನ್ನು ಅವರು ಎದುರಿಸುತ್ತಲೇ ಇದ್ದಾರೆ. ವೇತನ ಹೆಚ್ಚಳ ಆಯಾ ಕಾಲದ ಆರ್ಥಿಕ ಅವಶ್ಯಕತೆಗಳಿಗೆ ಅನುಗುಣವಾಗಿ ನಡೆಯುತ್ತದೆ. ಇದು ಅತ್ಯಂತ ಸಹಜವಾದ ಆಡಳಿತಾತ್ಮಕ ಪ್ರಕ್ರಿಯೆ. ಇದು ಸಾಧ್ಯವಾಗುವುದಕ್ಕೂ ನೌಕರರು ಬಹುದಿನಗಳ ಕಾಲ ಕಾಯಬೇಕಾಗುತ್ತದೆ. ಆಡಳಿತದ ಚುಕ್ಕಾಣಿ ಹಿಡಿದವರಿಗೆ ಮತ್ತೆ ಮತ್ತೆ ನೆನಪಿಸಬೇಕಾಗುತ್ತದೆ. ಬೇಡಿಕೆ ಮುಂದಿಡಬೇಕಾಗುತ್ತದೆ. ಸರ್ಕಾರದ ನೇತೃತ್ವ ವಹಿಸಿದವರು ರಾಜಕೀಯ ಲೆಕ್ಕಾಚಾರದೊಂದಿಗೇ ಉನ್ನತಾಧಿಕಾರಿಗಳ ಜೊತೆಗೆ ಚರ್ಚಿಸಿ ವೇತನ ಹೆಚ್ಚಳದ ಘೋಷಣೆ ಮಾಡುತ್ತಾರೆ. ಕೊನೆಗೂ ಸರ್ಕಾರ ಸ್ಪಂದಿಸಿತು ಎಂಬ ಕೃತಾರ್ಥ ಭಾವ ನೌಕರರದ್ದಾಗುತ್ತದೆ. ಆದರೆ, ಇದಕ್ಕೆ ಸಂಬಂಧಿಸಿದ ಸುದ್ದಿ ಪ್ರಚುರವಾದಾಗ ಸರ್ಕಾರಿ ನೌಕರರನ್ನು ಹೀಗಳೆಯುವ ಉಡಾಫೆಯ ವ್ಯಂಗ್ಯದ ತಿವಿತಗಳಿಗೆ ಈಡಾಗಬೇಕಾಗುತ್ತದೆ. ಹೀಗಾಗಿಯೇ ನೌಕರರು ಒಂದು ಬಗೆಯ ಅಸಮಾಧಾನ, ಅತೃಪ್ತಿಯೊಂದಿಗೇ ಕಾರ್ಯನಿರ್ವಹಿಸಬೇಕಾಗುತ್ತದೆ. ಇದು ಇಲಾಖಾವಾರು ಕಾರ್ಯವೈಖರಿಯ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕೆ ಕಾರಣ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಅಡಗಿರುವ ಹತ್ತುಹಲವು ಲೋಪದೋಷಗಳು.
ಅತಾರ್ಕಿಕ ಟೀಕೆಗಳು
ಈ ಹಂತದಲ್ಲಿಯೇ ಸರ್ಕಾರಿ ಕೆಲಸ ಮತ್ತು ಸರ್ಕಾರಿ ನೌಕರರು ಸರಳೀಕೃತವಾದ, ಅತಾರ್ಕಿಕ ಟೀಕೆಗಳಿಗೆ ತುತ್ತಾಗಬೇಕಾಯಿತು. ಕ್ಲೀಷೆ ಎನ್ನಿಸುವಷ್ಟರ ಮಟ್ಟಿಗೆ ಟೀಕೆಗೆ ಒಳಗಾದ, ವ್ಯಂಗ್ಯಕ್ಕೆ ತುತ್ತಾದ ಒಂದು ಜನಜನಿತ ಉಲ್ಲೇಖವೆಂದರೆ ‘ಸರ್ಕಾರಿ ಕೆಲಸ ದೇವರ ಕೆಲಸ’. ಇದನ್ನು ತಪ್ಪಾಗಿ ಅರ್ಥೈಸಲಾಗಿದೆ. ತಪ್ಪಾಗಿ ಗ್ರಹಿಸಲಾಗಿದೆ. ಸರ್ಕಾರದ ಕೆಲಸ ದೇವರದ್ದಾಗಿರುವುದರಿಂದ ಮನುಷ್ಯರಿಗೆ ಅಲ್ಲಿ ನಿರ್ವಹಿಸಲು ಕೆಲಸವೇ ಇರುವುದಿಲ್ಲ, ಹಾಗಾಗಿಯೇ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ನಿರೀಕ್ಷಿತ ರೀತಿಯಲ್ಲಿ ಕೆಲಸಗಳಾಗುವುದಿಲ್ಲ ಎಂಬ ಉಲ್ಲೇಖಗಳು ವ್ಯಂಗ್ಯಾತ್ಮಕವಾಗಿಯೇ ವ್ಯಕ್ತವಾಗುತ್ತವೆ.

ಈ ಉಲ್ಲೇಖವನ್ನು ಹೀಗೆ ತಪ್ಪಾಗಿ ಅರ್ಥೈಸಿಕೊಳ್ಳುವುದಕ್ಕಿಂತ ಅದರ ಹಿಂದಿನ ಉದ್ದೇಶವನ್ನು ಸ್ಪಷ್ಟಪಡಿಸಿಕೊಳ್ಳಬೇಕಾಗಿದೆ. ನೌಕರರೊಳಗೆ ನೈತಿಕ ಶ್ರದ್ಧೆಯನ್ನು ರೂಪಿಸುವ ಒತ್ತಾಸೆಯೊಂದಿಗೆ ಸರ್ಕಾರದ ಕೆಲಸವನ್ನು ದೇವರ ಕೆಲಸಕ್ಕೆ ಹೋಲಿಸಿ ವ್ಯಾಖ್ಯಾನಿಸಿರಬಹುದು. ದೇವರ ಕೆಲಸವೆಂದರೆ ನೌಕರರೊಳಗೆ ಶ್ರದ್ಧೆ ಹುಟ್ಟಿಕೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿ ಅಂಥದ್ದೊಂದು ವ್ಯಾಖ್ಯಾನ ಹುಟ್ಟಿಕೊಂಡಿರಬಹುದು. ಆದರೆ, ಹಾಗಾಗಲಿಲ್ಲ. ಬದಲಾಗಿ ಸರ್ಕಾರಿ ನೌಕರರು ಕೆಲಸ ಮಾಡದೇ ಇದ್ದರೂ ನಡೆಯುತ್ತದೆ ಎಂಬ ಮನೋಭಾವದೊಂದಿಗೆ ಈ ಉದ್ಧರಣ ತಳುಕುಹಾಕಿಕೊಂಡಿತು. ಈ ಉದ್ಧರಣಕ್ಕಿಂತ ಮುಖ್ಯವೆನ್ನಿಸುವ ಉದಾತ್ತವಾದುದು ‘ಕಾಯಕವೇ ಕೈಲಾಸ’ ಪರಿಕಲ್ಪನೆ. ನಿರ್ವಹಿಸಬೇಕಾದ ಕೆಲಸವನ್ನು ಕೈಲಾಸಕ್ಕೆ ಸಮೀಕರಿಸಿ ನೋಡುವ ಈ ದೃಷ್ಟಿಕೋನವನ್ನು ಆಧರಿಸಿ ಸರ್ಕಾರಿ ಆಡಳಿತ ಮರುರೂಪುಗೊಂಡರೆ ಬೆಳವಣಿಗೆಯ ಪ್ರಕ್ರಿಯೆಗೆ ಹೊಸ ಆಯಾಮ ದೊರಕುತ್ತದೆ.
ಸೀಮಿತ ಗ್ರಹಿಕೆಯ ಮಿತಿಗಳು
ಭಾರತದಲ್ಲಿ ಸಾರ್ವಜನಿಕ ಆಡಳಿತದ ಪರಿಕಲ್ಪನೆಯು ಚಲನೆಯ ಸಂಕೇತವಾಗಿ ಚಾಲ್ತಿಗೆ ಬರಲೇ ಇಲ್ಲ. ಅದು ಕೇವಲ ಸರ್ಕಾರದ ಕೆಲಸ ಎಂಬರ್ಥದ ಸೀಮಿತ ಗ್ರಹಿಕೆಯೇ ಆದ್ಯತೆ ಪಡೆದು ಉನ್ನತ ಹಂತದ ನಾಯಕರೆನ್ನಿಸಿಕೊಂಡವರು ಅದಕ್ಕನುಗುಣವಾಗಿಯೇ ಆಡಳಿತವನ್ನು ವ್ಯಾಖ್ಯಾನಿಸಿಕೊಂಡರು. ಬದಲಾವಣೆ, ಬೆಳವಣಿಗೆ, ಪ್ರಗತಿ, ಅಭಿವೃದ್ಧಿ ಎಂಬ ಪದಗಳೊಂದಿಗೆ ಆಡಳಿತವನ್ನು ಜೋಡಿಸಿ ಮಾತನಾಡುವ ಜಾಣ್ಮೆಯನ್ನು ರೂಢಿಸಿಕೊಂಡರೇ ಹೊರತು ಅದನ್ನು ದೇಶ ಮತ್ತು ಜನತೆಯ ಉಜ್ವಲ ಭವಿಷ್ಯವನ್ನು ಸಾಧ್ಯವಾಗಿಸುವ ಸಂಕಲ್ಪಕ್ಕೆ ಸಂಯೋಜಿಸುವುದರ ಕಡೆಗೆ ಗಮನವನ್ನೇ ಹರಿಸಲಿಲ್ಲ. ಪ್ರಧಾನಿ ಮತ್ತು ಮುಖ್ಯಮಂತ್ರಿ ಹುದ್ದೆಗಳನ್ನು ಅಲಂಕರಿಸಿದ ಕೆಲವರು ಈ ಕುರಿತು ಯೋಚಿಸಿ ಯೋಜಿಸಿದರೂ ಆಡಳಿತಾತ್ಮಕ ಕಾರ್ಯಾನುಷ್ಠಾನ ಸಾಧ್ಯವಾಗಲಿಲ್ಲ. ಭಿನ್ನವಾಗಿ ಯೋಚಿಸುವ ನಾಯಕರು ಉನ್ನತ ಹುದ್ದೆಗಳನ್ನು ಅಲಂಕರಿಸಿದಾಗಲೂ ಇದೇ ಸಮಸ್ಯೆ ಮುಂದುವರೆಯಿತು. ಹೀಗೆ ಆಲೋಚಿಸುವ ನಾಯಕರಿದ್ದಾಗ ಉನ್ನತ ಹಂತಗಳ ಅಧಿಕಾರಿವರ್ಗ ಹಾಗೆ ಯೋಚಿಸಲಿಲ್ಲ. ಹಾಗೆ ಯೋಚಿಸುವ ಅಧಿಕಾರಿ ವರ್ಗ ಉನ್ನತ ಹಂತಗಳಲಿದ್ದಾಗ ಸ್ಪಂದಿಸುವ ಗುಣದ ದಾರ್ಶನಿಕ ನಾಯಕತ್ವದ ಕೊರತೆ ಕಾಡಿತು.
ಅಗಾಧ ಶ್ರಮದ ಅಪವ್ಯಯ
ಇಂಥ ಸಂಕೀರ್ಣತೆಯ ಮಧ್ಯೆಯೇ ಸರ್ಕಾರಿ ನೌಕರರು ಕಾರ್ಯನಿರ್ವಹಿಸಬೇಕಾಯಿತು. ಜನಹಿತದ ಪ್ರಶ್ನೆಗಳನ್ನು ಕಾಡಿಸಿಕೊಂಡು ಕಾರ್ಯನಿರ್ವಹಿಸುವ ಸಾಮೂಹಿಕ ಹೊಣೆಗಾರಿಕೆಯ ಪ್ರಜ್ಞೆ ಇದ್ದರೂ ಅದು ಪ್ರಯೋಗಕ್ಕೊಳಪಡಲಿಲ್ಲ.ಪ್ರಯೋಗಕ್ಕೊಳಪಡದಂತೆ ಅಡತಡೆಗಳನ್ನು ಉಂಟುಮಾಡುವ ಸಂಕುಚಿತ ರಾಜಕಾರಣ ಚಿಗುರೊಡೆಯಿತು. ಅದನ್ನು ರಾಜಕೀಯ ಪಕ್ಷಗಳು ಅತ್ಯಂತ ಚಾಣಾಕ್ಷಯುತವಾಗಿ ಪೋಷಿಸಿದವು. ನೌಕರರ ಅಗಾಧ ಶ್ರಮದ ಅಪವ್ಯಯ ಇಲ್ಲಿಂದಲೇ ಆರಂಭವಾಯಿತು. ನಾವಿನ್ನೂ ಜನರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿಸುವುದರ ಕಡೆಗೇ ಶ್ರಮವನ್ನು ವ್ಯಯಿಸುತ್ತಿದ್ದೇವೆ ಎಂಬ ಟೀಕೆ ತಾರ್ಕಿಕವೆನ್ನಿಸತೊಡಗಿತು. ಇದನ್ನು ಅಲ್ಲಗಳೆಯುವ ಆಡಳಿತಾತ್ಮಕ ದಿಟ್ಟಹೆಜ್ಜೆಗಳು ನಾಯಕರೆನ್ನಿಸಿಕೊಂಡವರಿಂದಾಗಲೀ, ಕಾರ್ಯಾಂಗದ ರಚನಾತ್ಮಕತೆಯನ್ನು ವಿಸ್ತರಿಸುವ ಹೊಣೆಗಾರಿಕೆಯುಳ್ಳ ಉನ್ನತ ಹಂತದ ಅಧಿಕಾರಿ ವರ್ಗದಿಂದಾಗಲೀ ವ್ಯಕ್ತವಾಗಲಿಲ್ಲ. ರಾಜಕಾರಣಿಗಳ ಅಪ್ರಬುದ್ಧತೆ ಆಡಳಿತವನ್ನು ಸಡಿಲಗೊಳಿಸಿತು. ಉನ್ನತಾಧಿಕಾರಿ ವರ್ಗದ್ದು ಕೇವಲ ಮೂಕಪ್ರೇಕ್ಷಕ ಪಾತ್ರವಾಯಿತು. ಆಡಳಿತದ ಅನುಕೂಲಕ್ಕಾಗಿ ರೂಪುಗೊಂಡಿದ್ದ ಏಣಿಶ್ರೇಣಿ ವ್ಯವಸ್ಥೆ ಪ್ರತಿಷ್ಠೆಯ ಚೌಕಟ್ಟಿನೊಳಗೆ ಬಂಧಿಯಾಯಿತು. ದರ್ಪ, ದರ್ಬಾರು, ನಿಂದನೆ, ಕಿರುಕುಳ ಮತ್ತು ಶೋಷಣೆಗಳ ನಡುವೆ ಕೆಲಸ ಮಾಡುವ ಅನಿವಾರ್ಯತೆ ನಂತರದ ಆಡಳಿತಾತ್ಮಕ ಹಂತಗಳ ನೌಕರರಿಗೆ ಎದುರಾಯಿತು.

ಆಕ್ರಾಮಕ ನೀತಿಗಳ ಸವಾರಿ ಸರ್ಕಾರಿ ನೌಕರರು ಮತ್ತು ಅವರ ನೌಕರಿಯನ್ನು ಅಪವ್ಯಾಖ್ಯಾನಿಸಿ ಅವರ ಅಸ್ತಿತ್ವವನ್ನು ನಗಣ್ಯವಾಗಿಸಿ ಅಪವ್ಯಾಖ್ಯಾನಕ್ಕೆ ಒಳಪಡಿಸುವ ಹುನ್ನಾರ ರಾಜಕಾರಣ ಮತ್ತು ಆಡಳಿತಾತ್ಮಕ ಉನ್ನತ ಹಂತಗಳಿಂದಲೇ ಶುರುವಾಯಿತು. ಈ ಅಪವ್ಯಾಖ್ಯಾನ ಸರ್ಕಾರಿ ವಲಯವನ್ನು ನೆಗೆಟಿವ್ ಆಗಿ ನೋಡುವುದಕ್ಕೆ ಪ್ರಚೋದಿಸಿತು. ಆಡಳಿತವನ್ನು ಯಂತ್ರವನ್ನಾಗಿ ತಪ್ಪಾಗಿ ಬಿಂಬಿಸಿತು. ನೌಕರರನ್ನು ದುಡಿಯುವ ಯಂತ್ರಗಳನ್ನಾಗಿ ನೋಡುವ ವಿಚಿತ್ರ ವಾತಾವರಣ ಸೃಷ್ಟಿಯಾಯಿತು. ನೌಕರರು ಯಂತ್ರಗಳಲ್ಲ ಎಂಬುದನ್ನು ಮನದಟ್ಟು ಮಾಡಿಕೊಳ್ಳುವ ಹೊತ್ತಿಗೆ ಕಾಲ ಮಿಂಚಿತ್ತು. ತೊಂಭತ್ತರ ದಶಕದ ಆಕ್ರಾಮಕ ನೀತಿಗಳ ಸವಾರಿ ಆರಂಭವಾಗಿತ್ತು. ಬೃಹತ್ ಕಂಪನಿಗಳ ವಾಣಿಜ್ಯಿಕ ಕೌಶಲ್ಯಗಳು ಶ್ರೇಷ್ಠ ಎಂದೆನ್ನಿಸಿ ನಮ್ಮದೇ ಸರ್ಕಾರದ ವಿವಿಧ ಹಂತಗಳು ಪೇಲವ ಎನ್ನಿಸತೊಡಗಿದವು. ಇಡೀ ಸಾರ್ವಜನಿಕ ಆಡಳಿತ ಟೊಳ್ಳು ಎಂಬ ಭಾವನೆಯನ್ನು ಉದ್ದೇಶಪೂರ್ವಕವಾಗಿ ಬಿತ್ತಲಾಯಿತು.
ಆದ್ಯತಾವಲಯಗಳೆಡೆಗೆ ನಿರ್ಲಕ್ಷ್ಯ
ಆದರೆ, ಸ್ವಾತಂತ್ರ್ಯಾನಂತರ ಇಡೀ ದೇಶ ಆಡಳಿತಾತ್ಮಕವಾಗಿ ಮಹತ್ವದ್ದನ್ನು ಸಾಧಿಸಬೇಕಾಗಿತ್ತು. ಆಡಳಿತವನ್ನು ಸಂಪನ್ಮೂಲ ಕೇಂದ್ರವಾಗಿಸುವ ದಾರ್ಶನಿಕತೆಯ ವ್ಯಕ್ತವಾಗಬೇಕಾಗಿತ್ತು. ಅಂಥ ದಾರ್ಶನಿಕತೆಯನ್ನು ನಿರೂಪಿಸುವ ನಾಯಕರ ಸಂಖ್ಯೆ ಹೆಚ್ಚಾಗಬೇಕಾಗಿತ್ತು. ನೌಕರರನ್ನು ಮಕ್ಕಳಂತೆ ನೋಡುವ ತಾಯಿಯ ಅಂತಃಕರಣ ಉನ್ನತ ಹಂತದ ನಾಯಕತ್ವ ಮತ್ತು ಅತ್ಯುನ್ನತ ಹಂತದ ಅಧಿಕಾರ ವಲಯದಿಂದ ಅಭಿವ್ಯಕ್ತಗೊಳ್ಳಬೇಕಿತ್ತು. ಅಂಥ ಉದಾತ್ತತೆಯ ಬದಲು ಆಡಳಿತ ಸುಧಾರಣೆಯ ನೆಪದಲ್ಲಿ ನೌಕರರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಲಾಯಿತು. ಪ್ರಯೋಜನವಾದಿ ವಾಣಿಜ್ಯಿಕ ಲಾಭದ ಉದ್ಯಮದ ವ್ಯಾಪ್ತಿಗೆ ಸರ್ಕಾರಿ ವ್ಯವಸ್ಥೆಯನ್ನು ತರಲಾಯಿತು. ನೌಕರರ ಸಂಖ್ಯೆ ತಗ್ಗಿಸುವ ಯೋಚನೆ, ಪಿಂಚಣಿ ಸೌಲಭ್ಯ ನಿರಾಕರಣೆ, ಖಾಸಗಿಯವರೊಂದಿಗೆ ಗುರುತಿಸಿಕೊಳ್ಳುವ ಪ್ರಯೋಜನವಾದಿ ಹಂಬಲ, ನೇಮಕಾತಿ, ಬಡ್ತಿ ಮತ್ತಿತರ ಸಂಗತಿಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟುಗಳು ನಿರಂತರವಾದವು. ಈ ಬಿಕ್ಕಟ್ಟುಗಳು ಬಿಗಡಾಯಿಸಿದಾಗ ಯಥಾಸ್ಥಿತಿವಾದದ ಹ್ಯಾಂಗ್ ಓವರ್‍ಗೆ ಆಡಳಿತ ಮತ್ತು ನಾಯಕತ್ವ ಈಡಾಗಬೇಕಾಯಿತು. ಸಾಮಾಜಿಕತೆ, ಶಿಕ್ಷಣ, ಆರೋಗ್ಯ, ಮಾನವ ಸಂಪನ್ಮೂಲ ಸೇರಿದಂತೆ ಮಹತ್ವದ ಆದ್ಯತಾ ವಲಯಗಳು ನಿರ್ಲಕ್ಷ್ಯಕ್ಕೆ ತುತ್ತಾದವು.

ಆಶಾವಾದದ ಮಾರ್ಗ ಹಾಗಾದರೆ, ಸರ್ಕಾರಿ ನೌಕರರೂ ಸೇರಿದಂತೆ ವಿವಿಧ ವಲಯಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರೋಪಾಯಗಳೇ ಇಲ್ಲವೇ? ಹಾಗೆ ನಿರಾಸೆಗೊಳ್ಳಬೇಕಿಲ್ಲ. ಬಲದಾವಣೆಯು ಮೇಲುಹಂತದಿಂದ ಕೆಳಹಂತದವರೆಗೆ ಪ್ರವಹಿಸುವಂಥ ಪ್ರಕ್ರಿಯೆ ತೀವ್ರಗೊಳ್ಳಬೇಕು. ರಾಜಕಾರಣಿಗಳು ದಾರ್ಶನಿಕ ನಾಯಕರಾಗಿ ಮಾರ್ಪಾಡಾಗಬೇಕು. ವಿವಿಧ ವಲಯಗಳನ್ನು ಪ್ರತಿನಿಧಿಸಿ ಮಹತ್ವದ್ದನ್ನು ಸಾಧಿಸುವಂಥ ಮಹತ್ವಾಕಾಂಕ್ಷೆಯೊಂದಿಗೆ ರಾಜಕಾರಣವನ್ನು ಜನಮುಖಿಯಾಗಿಸಬೇಕು. ಕಾರ್ಯಾಂಗದ ಚಲನಶೀಲತೆಯನ್ನು ತೀವ್ರಗೊಳಿಸುವ ಸಂಕಲ್ಪದೊಂದಿಗೆ ಶಾಸಕಾಂಗ ಹೆಜ್ಜೆಯಿರಿಸಬೇಕು. ಆ ಮೂಲಕ ತನ್ನ ಶಕ್ತಿಯನ್ನು ಮರುರೂಪಿಸಿಕೊಳ್ಳಬೇಕು. ಅಂಥ ಶಕ್ತಿಯನ್ನು ವಿಸ್ತರಿಸಲು ಸಾಧ್ಯವಾಗಿಸುವಂತೆ ಸಾರ್ವಜನಿಕ ಆಡಳಿತಾಂಗವನ್ನು ಪ್ರತಿನಿಧಿಸುವ ಉನ್ನತ ಮತ್ತು ತದನಂತರದ ಹಂತಗಳ ಅಧಿಕಾರಿಗಳು ನೋಡಿಕೊಳ್ಳಬೇಕು. ಸರ್ಕಾರಿ ನೌಕರರರ ಸಂಪನ್ಮೂಲ ಸಾಮಥ್ರ್ಯವನ್ನು ವಿಸ್ತರಿಸಬೇಕು. ಅವರ ಹಿತಾಸಕ್ತಿಗಳನ್ನು ರಕ್ಷಿಸುತ್ತಲೇ ಸಾರ್ವಜನಿಕ ಆಡಳಿತವನ್ನು ಪುನಃಶ್ಚೇತನಗೊಳಿಸಿ ಪ್ರಜಾಪ್ರಭುತ್ವದ ಸದಾಶಯಗಳ ಸಾಕಾರಕ್ಕೆ ಶ್ರಮಿಸಬೇಕು. ಆ ಮೂಲಕ ಸಾರ್ವಜನಿಕ ವಲಯದ ಅಸ್ತಿತ್ವವನ್ನು ಉಳಿಸಿಕೊಂಡು ಅಪ್ಪಟ ದೇಶಿ ಪ್ರಜ್ಞೆಯ ಆಧಾರದಲ್ಲಿ ಭಾರತದ ಭವಿಷ್ಯವನ್ನು ಉಜ್ವಲಗೊಳಿಸುವ ನಡೆಗಳು ಪುನರಾವರ್ತಿತವಾಗಬೇಕು.

                                        -ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಬ್ಯಾಂಕ್ ದರೋಡೆ ಹೆಚ್ಚಳ ; ಭದ್ರತಾ ಮಾನದಂಡಗಳನ್ನು ಬ್ಯಾಂಕ್‍ಗಳು ಪಾಲನೆ ಮಾಡುವುದು ಕಡ್ಡಾಯ : ಎಸ್ಪಿ ಉಮಾ ಪ್ರಶಾಂತ್ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಬ್ಯಾಂಕ್‍ಗಳ ದರೋಡೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಭದ್ರತಾ ಮಾನದಂಡದ ಜೊತೆಗೆ ಸಿಬ್ಬಂದಿಗಳ ಮಾಹಿತಿ ಸಂಗ್ರಹದಲ್ಲಿ ನಿರ್ಲಕ್ಷ್ಯತೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾ ಪೋಲಿಸ್ ಕಛೇರಿಯಲ್ಲಿ ಜಿಲ್ಲಾ ಮಟ್ಟದ ಬ್ಯಾಂಕಗಳ ಭದ್ರತೆಗಾಗಿ ಬ್ಯಾಂಕಿನ ಎಲ್ಲಾ ವ್ಯವಸ್ಥಾಪಕರುಗಳಿಗೆ ಆಯೋಜಿಸಲಾಗಿದ್ದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬ್ಯಾಂಕಿನ ವ್ಯವಸ್ಥಾಪಕರುಗಳು ಬ್ಯಾಂಕ್‍ಗೆ ಬೇಕಾದ ಹೈಸೆಕ್ಯೂರಿಟಿ ಸಿಸಿ ಕ್ಯಾಮೆರಾಗಳ ಜೊತೆಗೆ ಅಲರಾಮ್‍ಗಳನ್ನು ಅಳವಡಿಸಿಕೊಳ್ಳಬೇಕು. ಬ್ಯಾಂಕ್‍ನ ಸೆಕ್ಯುರಿಟಿ ಸಿಬ್ಬಂದಿಯ ಮಾಹಿತಿ ಸಂಗ್ರಹದ ಜೊತೆಗೆ ಹತ್ತಿರದ ಪೊಲೀಸ್ ಠಾಣೆಯೊಂದಿಗೆ ಸೆಕ್ಯುರಿಟಿ ಕುರಿತು ಚರ್ಚಿಸಬೇಕಾಗುತ್ತದೆ ಎಂದರು.

ಬ್ಯಾಂಕ್‍ನ ಒಳಗೆ ಸ್ಟ್ರಾಂಗ್ ರೂಂ ಡಿಜಿಲಾಕರ್, ಸ್ಟ್ರೋಕ್ ಡಿಟೆಕ್ಟರ್ಗಗಳು, ಹೀಟ್ ಡಿಟೆಕ್ಟರ್‍ಗಳು, ಬ್ಯಾಂಕುಗಳ ಬಳಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಬಂದಲ್ಲಿ ಅಂತಹವರ ಮಾಹಿತಿಯನ್ನು ಪೋಲೀಸ್ ಠಾಣೆಗಳಿಗೆ ನೀಡುವಂತೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಿಳಿಸಿ ಸ್ಟ್ರಾಂಗ್ ರೂಮ್‍ಗೆ ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರತಿದಿನ ಭೇಟಿ ನೀಡುವ ನಮೂನೆಯಲ್ಲಿ ದಾಖಲು ಮಾಡಬೇಕು. ಬ್ಯಾಂಕ್‍ಗಳಿಗೆ ಪ್ರತಿದಿನ ಬೀಟ್ ಪೋಲೀಸರು ಭೇಟಿ ನೀಡುವ ಬಗ್ಗೆ ಇ-ಬೀಟ್ ವ್ಯವಸ್ಥೆ ಮಾಡುವುದು. ಪ್ರತಿ ಬೀಟ್ ಸಿಬ್ಬಂದಿಗಳು ಭೇಟಿ ನೀಡುತ್ತಿರುವ ಬಗ್ಗೆ ರಾತ್ರಿ ಗಸ್ತಿನ ಉಸ್ತುವಾರಿ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲನೆ ಮಾಡಲು ಸೂಚನೆ ನೀಡಿದರು.

ಜಿಲ್ಲಾ ಕಂಟ್ರೋಲ್ ರೂಂನವರು ಪ್ರತಿದಿನ ಬ್ಯಾಂಕ್‍ಗಳಿಗೆ ಬೀಟ್ ಸಿಬ್ಬಂದಿಗಳು ಹಾಗೂ ರಾತ್ರಿ ಗಸ್ತಿನ ಅಧಿಕಾರಿಗಳು ಭೇಟಿ ನೀಡುತ್ತಿರುವ ಬಗ್ಗೆ ಕಡ್ಡಾಯವಾಗಿ ಮಾಹಿತಿ ಪಡೆದು ನಮೂದು ಮಾಡುವುದು. ಹೊರವಲಯಗಳಲ್ಲಿರುವ ಬ್ಯಾಂಕ್‍ಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕೆಂದು ಸೂಚನೆ ನೀಡಿದರು.

ಠಾಣಾ ವ್ಯಾಪ್ತಿಯ ಪಿಐ ಮತ್ತು ಪಿಎಸ್‍ಐ ರವರು ಸೆಕ್ಯೂರಿಟಿ ಆಡಿಟ್ ವರದಿಯನ್ನು ಕಡ್ಡಾಯವಾಗಿ ಪಡೆದು ಜಿಲ್ಲಾ ಪೆÇಲೀಸ್ ಕಚೇರಿಗೆ ಕಳುಹಿಸಿಕೊಡಬೇಕು. ಬ್ಯಾಂಕುಗಳ ಒಳಭಾಗ ಮತ್ತು ಹೊರಭಾಗದಲ್ಲಿ, ಎಟಿಎಂ ಇರುವ ಕಡೆಗಳಲ್ಲಿ ಕಡ್ಡಾಯವಾಗಿ ಮೋಷನ್ ಸಿಸಿ ಟಿವಿಗಳನ್ನು ಅಳವಡಿಸಿ ಈ ಛಾಯಾಚಿತ್ರ ಮತ್ತು ರೆಕಾಡಿರ್ಂಗ್‍ನ್ನು ಡ್ರೈವ್‍ನಲ್ಲಿ ಸೇವ್ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಮಹಾಪೌರರಾದ ಚಮನ್‍ಸಾಬ್ ಕೆ, ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪ ಪೊಲೀಸ್ ಅಧೀಕ್ಷಕರಾದ ಮಂಜುನಾಥ್, ಎಎಸ್‍ಪಿ ಸ್ಯಾಮ್ ವರ್ಗೀಸ್ ಮತ್ತು ವಿವಿಧ ಬ್ಯಾಂಕ್‍ಗಳ ವ್ಯವಸ್ಥಾಪಕರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್

Published

on

ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ಸೋಲಾರ್ ಘಟಕದ ಕಾಮಗಾರಿ ಪರಿಶೀಲಿಸಿದ ಅವರು, ಜಿಲ್ಲೆಯ ಆರೂ ತಾಲೂಕುಗಳಲ್ಲಿ ಒಂಬತ್ತು ಸೋಲಾರ್ ಘಟಕಗಳು ಸ್ಥಾಪನೆಯಾಗಲಿದ್ದು ಇದರಿಂದ ಅರವತ್ತೆರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.

ಇಂಧನ ಇಲಾಖೆಯು ರಾಜ್ಯಾದ್ಯಂತ 154 ಸೋಲಾರ್ ಘಟಕಗಳನ್ನು ಸ್ಥಾಪಿಸಿ 1 ಸಾವಿರದ 81 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಸ್ವಾವಲಂಬನೆ ಸಾಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

ಇನ್ನೊಂದೆಡೆ ತುಮಕೂರಿನ ಸಿರಾ ತಾಲ್ಲೂಕಿನ ಚೆಂಗಾವರದಲ್ಲಿ ಪಿ.ಎಂ.ಕುಸುಮ್ ಯೋಜನೆಯಡಿ ನಿರ್ಮಿಸಿರುವ ಸೋಲಾರ್ ಪಾರ್ಕ್ ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ

Published

on

ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಆದೇಶಿಸಿದ್ದಾರೆ.

ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.

ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ10 hours ago

ಬ್ಯಾಂಕ್ ದರೋಡೆ ಹೆಚ್ಚಳ ; ಭದ್ರತಾ ಮಾನದಂಡಗಳನ್ನು ಬ್ಯಾಂಕ್‍ಗಳು ಪಾಲನೆ ಮಾಡುವುದು ಕಡ್ಡಾಯ : ಎಸ್ಪಿ ಉಮಾ ಪ್ರಶಾಂತ್ ಸೂಚನೆ

ಸುದ್ದಿದಿನ,ದಾವಣಗೆರೆ:ಬ್ಯಾಂಕ್‍ಗಳ ದರೋಡೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಭದ್ರತಾ ಮಾನದಂಡದ ಜೊತೆಗೆ ಸಿಬ್ಬಂದಿಗಳ ಮಾಹಿತಿ ಸಂಗ್ರಹದಲ್ಲಿ ನಿರ್ಲಕ್ಷ್ಯತೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು....

ದಿನದ ಸುದ್ದಿ2 days ago

ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ನಿಂದ ವಿದ್ಯಾರ್ಥಿ ವೇತನ ವಿತರಣೆ

ಸುದ್ದಿದಿನ,ದಾವಣಗೆರೆ:ಗುರಿ ಸಾಧಿಸಲು ಕಾರಣಗಳು ನೆಪವಾಗಬಾರದು. ಗುರಿಯನ್ನು ಬೆನ್ನು ಹತ್ತಿ ಗುರಿಮುಟ್ಟುವ ಕಡೆ ಗಮನ ಹರಿಸಿದರೆ ಯಶಸ್ಸು ತಾನಾಗಿ ದೊರೆಯುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್...

ಅಂತರಂಗ2 days ago

ದಾವಣಗೆರೆ| ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ : ಜಾನಪದರನ್ನು ಅನಕ್ಷರಸ್ಥರೆನ್ನುವುದು ತಪ್ಪು : ಸಾಹಿತಿ ಕೃಷ್ಣಮೂರ್ತಿ ಹನೂರು

ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ...

ದಿನದ ಸುದ್ದಿ1 week ago

ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ

ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ...

ದಿನದ ಸುದ್ದಿ1 week ago

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ

ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...

ದಿನದ ಸುದ್ದಿ2 weeks ago

ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ

ಸುದ್ದಿದಿನ,ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಜನವರಿ 11...

ದಿನದ ಸುದ್ದಿ2 weeks ago

ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವಮಾನವ ದಿನಾಚರಣೆ’

ಸುದ್ದಿದಿನ,ಸಂತೇಬೆನ್ನೂರು:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ ಸೋಮವಾರ ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸಲಾಗಿತ್ತು. ಜಗತ್ತಿಗೆ ವಿಶ್ವಮಾನವತೆಯ ಸಂದೇಶವನ್ನು ಸಾರಿದ ಜಗದ ಕವಿ...

ದಿನದ ಸುದ್ದಿ2 weeks ago

ವಿಜಯನಗರ | ನಿಲ್ಲದ ಅಕ್ರಮ ಕಲ್ಲು ಗಣಿಗಾರಿಕೆ ; ಕಣ್ಣುಮುಚ್ಚಿಕುಳಿತ ಅಧಿಕಾರಿಗಳು

ವಿಶೇಷ ವರದಿ | ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ವಿಜಯನಗರ:ತಾಲೂಕಿನ ಬುಕ್ಕಸಾಗರದಲ್ಲಿ ಅಕ್ರಮ ಗಣಿಗಾರಿಕೆ, ಹಲವು ವರ್ಷಗಳಿಂದ ನಿರಂತರವಾಗಿ ಬುಕ್ಕಸಾಗರ, ವೆಂಕಟಾಪುರ, ವೆಂಕಟಾಪುರ ಕ್ಯಾಂಪ್ , ರಾಮಸಾಗರದಲ್ಲಿ...

ದಿನದ ಸುದ್ದಿ3 weeks ago

ಹಂಪಿ ಮೃಗಾಲಯದಲ್ಲಿ ಸೂಕ್ತ ನಿರ್ವಹಣೆ ಮತ್ತು ಮೂಲಸೌಕರ್ಯಗಳದ್ದೇ ಕೊರತೆ : ಪ್ರವಾಸಿಗರ ಆರೋಪ

ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ: ಉತ್ತರ ಕರ್ನಾಟಕದ ಏಕೈಕ ಸಫಾರಿ ಮೃಗಾಲಯ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್(ಹಂಪಿ ಜೂ) ಆಗಿದ್ದು, ಇಲ್ಲಿ...

ದಿನದ ಸುದ್ದಿ3 weeks ago

2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ ; ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ,ಬೆಂಗಳೂರು:ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ...

Trending