Connect with us

ಭಾವ ಭೈರಾಗಿ

ಕವಿತೆ | ಏನಾಗಿ ಹುಟ್ಟಲಿ ಈ ಜಗದೊಳಗೆ

Published

on

 

  • ನಂದಕಲಾ

ನಿಸರ್ಗದ ಮಡಿಲಲ್ಲಿ ಉದಯಿಸಿದೆ
ಫಲನೀಡುವ ಮರವಾಗಿ ಜನಿಸಿದೆ
ನರಮಾನವರ ಕಣ್ಣು ನನ್ನ ಮೇಲೆ ಬಿದ್ದಿದೆ
ಅವನ ಕೊಡಲಿ ಏಟು ನನ್ನ ಎದೆಯ ಸೀಳಿದೆ.

ಕಾನನದ ವಾಸಿಯಾಗಿ ಉದಯಿಸಿದೆ
ಕಾಡು ಪ್ರಾಣಿಯ ಸಂಕುಲದಲ್ಲಿ ಜನಿಸಿದೆ
ನನ್ನ ದೇಹದ ಮಾಂಸ ಮಾನವನ ಬಾಯಿ ರುಚಿಯಾಗಿದೆ
ಅವನು ಗುರಿಹಿಟ್ಟು ಬಿಟ್ಟ ಬಾಣ ,ಮದ್ದು ,ಗುಂಡು ನನ್ನತ್ತ ದಾವಿಸಿದೆ.

ಅಬ್ಬ ಎಷ್ಟು ಸುಂದರ ಎಂಬುವಂತೆ ಎದ್ದು ನಿಂತೆ
ಗುಡ್ಡ ,ಬೆಟ್ಟ ,ಪರ್ವತವಾಗಿ ತೋರುವಂತೆ
ದುಷ್ಟ ಮಾನವನಿಗೆ ನನ್ನ ಒಡಲಾಳದ
ಸಂಪತ್ತು ಎಲ್ಲಾ ಬೇಕಂತೆ
ಅವನಿಟ್ಟ ಸಿಡಿಮದ್ದಿಗೆ ಜೀವನ ಚಿದ್ರವಾಗಿ ಹರಡಿದೆ ಚಲ್ಲಾಪಿಲ್ಲಿಯಂತೆ.

ಪ್ರಾಣಿ ಬೇಡ ,ಪಕ್ಷಿ ಬೇಡ ,ಗಿಡ ಮರ ಬೇಡ ,
ಬೆಟ್ಟ ಗುಡ್ಡವು ಬೇಡೆಂದು
ಮಾನವನಾಗಿಯೇ ಜನಿಸೋಣವೆಂದು ಬಂದೆ
ಕಂಡೆ ಅವನ ಜಾತಿ , ಧರ್ಮ ಯುದ್ದಗಳ ಕಂತೆ
ಈ ಜಗದೊಳು ಏನಾಗಿ ಹುಟ್ಟಲಿ ಎಂಬುದು
ಒಂದು ದೊಡ್ಡ ಚಿಂತೆ
ಇನ್ನು ಹಾಗೆ ಉಳಿದಿದೆ ಅದೊಂದು ಪ್ರಶ್ನೆಯಂತೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಕವಿತೆ | ಮೌನಾಮೃತ

Published

on

~ ತಾರಾ ಸಂತೋಷ್ ಮೇರವಾಡೆ (ಕಾವ್ಯಾಗ್ನಿ), ಗಂಗಾವತಿ

ದೆಷ್ಟೋ ಬಗೆಹರಿಯದ
ಸಮಸ್ಯೆಗಳಿಗೆ
ಮೌನಾಮೃತವ
ಸಿಂಪಡಿಸಿ ಸುಮ್ಮನಾಗಿಬಿಡು.

ಅರ್ಥವಿರದ
ವ್ಯರ್ಥ ವಾಗ್ವಾದಗಳಿಗೆ
ಮೌನದ ಪೂರ್ಣವಿರಾಮವನಿಟ್ಟು
ಹೊರಟುಬಿಡು.

ಮಾತಾಡಿ
ಕಿರುಚಾಡಿ
ರಮಟರಾಡಿ ಮಾಡುವ ಬದಲು
ಒಂದರೆಗಳಿಗೆ
ಮೌನದ ಮೊರೆಹೋಗಿ ನೋಡು.

ಅದೆಷ್ಟೋ ಮುಗಿಯದ
ಮನದ ತೊಳಲಾಟಗಳಿಗೆ
ಮೌನವೆಂಬ ಉತ್ತರವುಂಟು
ಅದನ್ನಪ್ಪಿ ಮನಕ್ಕೊಂದಿಷ್ಟು
ಶಾಂತಿಯ ನೀಡಿ ನಕ್ಕುಬಿಡು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ಅವ ಸುಡುತ್ತಾನೆ

Published

on

~ ಶೃತಿ ಮಧುಸೂದನ (ರುದ್ರಾಗ್ನಿ)

ಅವ ಸುಡುತ್ತಾನೆ…
ಅವ ಸಂಪ್ರದಾದಯವ
ಸೆರಗ ನನಗುಡಿಸಿ
ನಗುತ್ತಾನೆ…

ಅವ ಅತ್ತಿಂದತ್ತ
ಅಲೆದಾಡುವ
ಮುಂಗುರುಳ
ಮುದ್ದಿಸಿ ಮಡಿ
ಮಡಿಕೆಯ ನಿವಾಳಿಸಿ
ನಿಟ್ಟುಸಿರ ಬಿಟ್ಟ
ಬಸವನಂತೆ…
ನೆತ್ತಿ ಮೇಲಣ
ಮದ್ದೇರಿ ಮೆರೆವ
ಮುದ್ದಣನ
ಕರಿಯಂತೆ…

ಕಣ್ಣು ಕುಕ್ಕುವ
ಕೊರತೆಗಳ
ಬದಿಗಿಟ್ಟು
ಬೈತಲೆಯ
ಬಿಂದಿಯ
ಬೆವರೊಳಗಣ
ಕಾವ್ಯ ಕುಂಕುಮದಂತೆ…

ಅವ… ಅವ ಕವಿ
ಎಂಬುವ ಕಾಡಿಗೆಗೆ
ತನ್ನ ಕಪ್ಪೆಂದುಕೊಂಡು
ನನ್ನಿಂದ ದೂರ ಸರಿದವ…
ಹಾಲ್ಬೆಳಕ
ಹಠವಾದಿ
ಹೆಣ್ಣಿನ ಮುಂದೆ
ಹಮ್ಮು ಬಿಟ್ಟು
ಹಿಂದಿರುಗುವ
ಇರಾದೆ ಇಲ್ಲದೇ
ನಡೆದು ಹೋದವ…

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಅನ್ನಕ್ಕೆ ಯಾವ ಧರ್ಮ..? ಮತ್ತು ಇತರೆ ಕವಿತೆಗಳು

Published

on

~ವಿಜಯ್ ನವಿಲೇಹಾಳು

ನನ್ನ ಮನವ, ಹಸಿದ ತೋಳಗಳಂತೆ ಕಿತ್ತು ತಿಂದು ಅದೆಷ್ಟೋ ದಿನಗಳಿಂದ ಎದೆನಡುಗಿಸುತ್ತ ರಣಕೇಕೆ ಹಾಕುತ್ತಿರುವ ನೋವಿನ ಪದಗಳನು ಜೋಡಿಸುತ್ತಿರುವೆ ಅಷ್ಟೇ

ಮಾರಮ್ಮನ ಜಾತ್ರೆಯ ಪ್ರಸಾದ,
ಮೊಹರಮ್ ನ ಚೋಂಗಿ ಕೂಡಿ ಉಂಡು
ಅಡುಗೆ ರುಚಿಯೂ; ಮಾಯಾ ದೀವಿಗೆಯನು
ತಿಕ್ಕಿದಾಗ ಬರುವ ಜೀನಿಯಂತೆ ಅದ್ಭುತ ವಾಗಿತ್ತು

ಪಂಕ್ತಿಯಲ್ಲಿ ಹಿಂದುವೋ, ಮುಸಲ್ಮಾನನೋ, ಕ್ರಿಶ್ಚಿಯನ್ನನೋ, ಯಾರಾದರೇನು? ಅನ್ನಕ್ಕೆ ಯಾವ ಧರ್ಮ ?

ಈಗ ಅಲ್ಲೆಲ್ಲೊ ಯಾರೋ ಕೆಲವರು ಜಾತಿ ಧರ್ಮದ ವಿಷವನು ಹನಿ ಹನಿ ಉಣಬಡಿಸಿ ಊರಿಗೂರಿಗೆ ದ್ವೇಷದ ನಶೆಯೇರಿಸಿದ್ದಾರೆ

ಈಗೀಗ ಅವರ ಹಸಿವು ನೀಗುತ್ತಿರುವುದು ಕ್ರೌರ್ಯದ ಕತ್ತಿಯಿಂದ ಜಿನಿಗುತ್ತಿರುವ ರಕ್ತದಿಂದ

ನಾನೆಂದು ಕವಿತೆ ಬರೆದವನಲ್ಲ ಎದೆಯೊಳಗಿನ ನೋವಿನ ಪದಗಳನು ಜೋಡಿಸುತ್ತಿರುವೆ ಅಷ್ಟೇ.

ಇತರೆ ಕವಿತೆಗಳು

೧..
ಅವಳ ಮಾತುಗಳು ಅಲ್ಪ ಪ್ರಾಣಗಳಂತೆ
ಕಿವಿಗಳಿಗೆ ನಾಟುತ್ತವೆ
ಅವಳ ಮೌನ ಮಹಾ ಪ್ರಾಣಗಳಂತೆ
ಸೀದ ಹೃದಯಕ್ಕೆ ಅಪ್ಪಳಿಸುತ್ತವೆ
ಅವಳ ಮಾತು ಮತ್ತು ಮೌನದ ಕೊನೆಯಲಿ
ನಾನು ಅನುನಾಸಿಕದಂತೆ.
೨..
ಮಡಿವಂತಿಕೆಯೇ ಶ್ರೇಷ್ಟ ಮೈಲಿಗೆಯು ಅನಿಷ್ಟ ಅಂದುಕೊಂಡಿದ್ದರೆ ಊರಾಚೆಗಿನ ಕಲ್ಲು ಬಂಡೆ ವಿಗ್ರಹವಾಗುತ್ತಿರಲಿಲ್ಲ.
೩..
ಅವಳು ಅಣು ಅಣುವಾಗಿ ಹೃದಯದ
ಆಳವನು ಸೇರಿಕೊಂಡು ಬೇರು ಬಿಟ್ಟಳು
ಅವಳ ಒಲವಿನ ಆಕ್ರಮಣಕೆ
ನಾ ಮರುಮಾತುಗಳಾಡದೆ ಹೆಪ್ಪುಗಟ್ಟಿದೆ. (ಕವಿ:ವಿಜಯ್ ನವಿಲೇಹಾಳು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending