ಲೈಫ್ ಸ್ಟೈಲ್
ಪರಿಸರ ಪಾಠ
ಅಂದು ಮುಂಜಾನೆ ಬೇಗನೆ ಎದ್ದು , ಪರಿಸರ ಅಧ್ಯಯನ ಶಿಬಿರಕ್ಕೆ ಹೋಗಲು ತಯಾರಾದೆ.ಕಳೆದ ಶೈಕ್ಷಣಿಕ ಸಾಲಿನಲ್ಲಿ ನಮ್ಮ ಕಾಲೇಜಿನ ವತಿಯಿಂದ ನಮ್ಮನ್ನು ಬಂಡಿಪುರ ಅರಣ್ಯಕ್ಕೆ ಕರೆದೊಯ್ದಿದ್ದರು . ಈ ಭಾರಿ ಭದ್ರಾ ಅಭಯಾರಣ್ಯಕ್ಕೆ ಹೊರಟಿದ್ದೆವು. ಅಂದು ಮಂಜಿನ ಬೆಳಗ್ಗೆ ಸುಮಾರು ಒಂದು ತಾಸು ನಗರದ ಬೀದಿ ಬೀದಿಗಳಲ್ಲಿ ನನ್ನ ಸ್ನೇಹಿತರು ತಂಗಿದ್ದ ತಾಣವನ್ನೇ ಹುಡುಕಿದೆ. ಹಲವು ಕಟ್ಟಡಗಳ ನಡುವೆ ಅವರಿದ್ದ ಕಟ್ಟಡ ಮರೆಯಾಗಿತ್ತು.
ಹೇಗೋ ನಮ್ಮ ವಿಭಾಗದ ಮೇಷ್ಟ್ರಿಗೆ ಕರೆ ಮಾಡಿ ಶಿಬಿರಕ್ಕೆ ಹೋಗಲೆಂದು ಹೊರಟ್ಟಿದ್ದ ಬಸ್ ಬಳಿ ತಲುಪಿದೆ. ಸಮಯ ಐದಕ್ಕೆ ಸರಿಯಾಗಿ ಹಾಸನದಿಂದ ಭದ್ರಾ ಅಭಯಾರಣ್ಯಕ್ಕೆ ನಮ್ಮ ಬಂಡಿ ಸಾಗಿತು. ಇನ್ನು ಚಂದಿರ ಸರಿದಿರದ ಕಾರಣ ನಾವೆಲ್ಲರೂ ನಿದ್ದೆಗೆ ಜಾರಿದೆವು. ದಾರಿ ಹರಿದಂತೆ ಪಯಣದ ಹುಮ್ಮಸ್ಸಿಗಾಗಿ ಡಿ.ಜೆ. ಹಾಡಿಗೆ ಹೆಜ್ಜೆ ಹಾಕ ತೊಡಗಿದೆವು., ಸಮಯ-ಹಾದಿ ಕಳದದ್ದೆ ತಿಳಿಯಲಿಲ್ಲ….!ಸುಮಾರು ಒಂಬತ್ತು ಮೂವತಕ್ಕೆ ಸರಿಯಾಗಿ ಲಕ್ಕವಳ್ಳಿ ತಲುಪಿದೆವು .
ಅರಣ್ಯಕ್ಕೆ ಹೋದಾಕ್ಷಣ ನಮ್ಮೊಳಗೆ ಮೌನ ಆವರಿಸಿತು. ಪರಿಸರದ ಬಗ್ಗೆ , ಕುತೂಹಲ , ಏಕಾಗ್ರತೆ ಹೆಚ್ಚಾಯಿತು, ನಾವೆಲ್ಲರೂ ನಮ್ಮ ಜಂಗಮವಾಣಿಗಳನ್ನು ಬಂದ್ ಮಾಡಿ ಶಿಬಿರದ ಉದ್ಘಾಟನಾ ಕಾರ್ಯಕ್ರದಲ್ಲಿ ಭಾಗಿಯಾದೆವು . ಕೇವಲ ನಾಲ್ಕು ಗೋಡೆಗಳ ಮಧ್ಯೆ ಕಲಿಯುವುದು ಸರ್ವೆ ಸಾಮಾನ್ಯ ಅದೇ ನೈಜ್ಯ ಶಾಲೆಯಾದ ಪರಿಸರದೊಂದಿಗೆ ಕಲಿಯುವುದು ಸಾಕಷ್ಟಿದೆ ಎಂಬುದು ನನಗರಿವಾಯಿತು. ಅಲ್ಲಿನ ಸ್ಥಳೀಯ ಪರಿಸರ ತಜ್ಞರೊಬ್ಬರು ಶಿಬಿರವನ್ನು ಉದ್ಘಾಟಿಸಿ ಭದ್ರಾ ಅಭಯಾರಣ್ಯದಲ್ಲಿರುವ ಸಸ್ಯ ಸಂಕುಲದ ಬಗ್ಗೆ ಪರಿಚಯಿಸಿದರು. ವಿಧ ವಿಧ ಬಗೆಯ ಕೀಟ , ಪ್ರಾಣಿ , ಪಕ್ಷಿ , ಹೂಗಳ ಬಗ್ಗೆ ಮಾಹಿತಿ ನೀಡಿದರು. ಬರೀ ಪಠ್ಯಕ್ರಮಕ್ಕೆ ಸೀಮಿತವಾಗಿ ಕಲಿತುತ್ತಿರುವ ನಮಗೆ ಪಠ್ಯೇತ್ತರ ಪಾಠಗಳನ್ನು ಆಲಿಸುವುದು ಬಹಳ ಹಿತಕರವೆನ್ನಿಸಿತು.
ನಂತರ ಅರಣ್ಯದ ವೈಶಿಷ್ಟ್ಯತೆಯ ಕುರಿತು ವಿಡಿಯೋ ತೋರಿಸುತ್ತಾ ಸಿಗ್ನೇಚರ್ ಎಂಬ ಜೇಡರ ಹುಳಿವಿನ ಬಗ್ಗೆ ವಿವರಿಸಿದರು. ಈ ಜೇಡ ಬಲೆಯಲ್ಲಿ ಒಂದು ರೀತಿಯ ಬಿಳಿ ಗೆರೆ ಹೆಣೆದಿರುತ್ತದೆ ಎಂದು ತಿಳಿಸಿದರು. ಅದಾದ ಮೇಲೆ ಹೀಗೆ ಸಫಾರಿ ಹೋಗಲು ಹೊರಡುವ ಮುನ್ನ ಅತ್ತಿತ್ತ ಸುತ್ತಾಡುತ್ತಾ ಇದ್ದಾಗ ಅಲ್ಲಿಯೇ ಲೈಟು ಕಂಬಕ್ಕೆ ಬಲೆಯೊಂದು ಹೆಣೆದಿತ್ತು . ಅದು ತಜ್ಞರು ವಿವರಿಸಿದ ಸಿಗ್ನೇಚರ್ ಜೇಡ ಒಂದು ರೀತಿಯ ಅಪರೂಪದ ಕೀಟವಾಗಿತ್ತು.ಅದರ ವೈಶಿಷ್ಟ್ಯತೆ ಹಾಗು ಕುಶಲತೆಯನ್ನು ಕಂಡು ಅಚ್ಚರಿಯಾಯಿತು.
ನಮ್ಮನ್ನು ಸಫಾರಿ ಕರೆದುಕೊಂಡು ಹೋದರು. ಸಫಾರಿಯಲ್ಲಿ ಮೊದಮೊದಲು ಖಾಲಿ ಕಾಡು ಕಾಣಿಸಿತಾದರೂ ಮುಂದೆ ದಾರಿ ಸವೆದಂತೆ ಲಂಗೂರ್, ಸಾಂಬಾರ್, ಕಾಡು ಎಮ್ಮೆ- ಕೋಣ , ಗುಳ್ಳೇ ನರಿ , ವಿಶಿಷ್ಟ ಕೆಂಪು ಬಾಲದ ಅಳಿಲು , ಉಲಿವ ನವಿಲು , ಉಡ, ಕಾಡು ಹಂದಿ ಎಲ್ಲವೂ ನೋಡಲು ಸಿಕ್ಕವು. ಆ ರಾತ್ರಿ ಸಫಾರಿಯಿಂದ ವಾಪ್ಪಸ್ಸಾದಾಗ ಮೇಷ್ಟ್ರು ಹೇಳಿದ ಮಾತಿನಂತೆ ಇಡೀ ರಾತ್ರಿ ಅನುಭವ ಲೇಖನ ವನ್ನು ಬರೆಯುತ್ತಿದ್ದವು.ಅಲ್ಲಿನ ಚಳಿಗೆ ನಿದ್ದೆಗೆ ಜಾರಿದ್ದೆ ಅರಿವಾಗಲಿಲ್ಲ. ಬೆಳಗಾದಾಗ ಭದ್ರಾ ನದಿಯ ಹಿನ್ನೋಟ ನಮ್ಮೆಲ್ಲರ ಕಣ್ ಸೆಳೆಯಿತು . ಬಂದ್ ಮಾಡಿದ್ದ ಮೊಬೈಲ್ ಗಳ ತೆಗೆದುಕೊಂಡು ಸುಂದರ ಪಟಗಳ ತೆಗೆಯುವಲ್ಲಿ-ತೆಗೆದುಕೊಳ್ಲುವಲ್ಲಿ ನಿರತರಾದೆವು . ಮುಂದೆ ನಮ್ಮ ಪಯಣ ಹತ್ತಿರದ ಸಕ್ಕರೆಬೈಲು ಆನೆ ಶಿಬಿರಕ್ಕೆ ಭೇಟಿ ನೀಡಿದೆವು . ಅಲ್ಲಿ ಆನೆಗಳಿಗೆ ತಾಲೀಮು ಮಾಡುತ್ತಿದ್ದದ್ದನ್ನು ಹತ್ತಿರದಿಂದ ಗಮನಿಸಿದೆವು.
ಮಾವುತರ ಆದೇಶದಂತೆ ಆನೆಗಳು ಶಿಸ್ತು ಭದ್ದವಾಗಿ ವರ್ತಿಸುತ್ತಿದ್ದವು, ಮಕ್ಕಳಂತೆ ಚೆಂಡಾಟ ಆಡುತ್ತಾ, ಪ್ರವಾಸಿಗರಿಗೆ ಸೊಂಡಿಲಲ್ಲಿ ನಮಿಸುತ್ತಾ ಲವಲವಿಕೆಯಿಂದ ಇದ್ದವು. ಮನುಷ್ಯನ ದುರಾಸೆಯಿಂದಾಗಿಯೇ ಎಷ್ಟೋ ಕಾಡು ನಾಶವಾಗುತ್ತದೆ. ಪ್ರಾಣಿಗಳು ನಾಡಿಗೆ ಬಂದು ದಾಳಿ ಮಾಡಲು ಕೆಲವೊಮ್ಮೆ ಮಾನವನೇ ಕಾರಣಕರ್ತರಾಗಿದ್ದಾನೆ. ಇಂತಹ ವಿಚಾರಗಳನ್ನು ನಾವೂ ಪರಿಸರದೊಳಗೆ ಪರಿಸರ ಜೀವಿಯಾದಾಗ ಮಾತ್ರ ಅರಿವಾಗುತ್ತದೆ ಹೊರತು ಕಾಂಕ್ರೀಟ್ ಕಾಡೊಳಗೆ ಬಾವಿ ಕಪ್ಪೆಗಳಂತೆ ಇದ್ದರೆ ಪ್ರಕೃತಿಯ ಬಗ್ಗೆ ಕಿಂಚಿತ್ತು ತಿಳಿಯಲಾಗುವುದಿಲ್ಲ.
ಸಕ್ಕರೆಬೈಲಿನಲ್ಲಿ ಸಂವೇದನೀಯ ವಿಚಾರಗಳು ಮಸ್ತಕದಲ್ಲಿ ಮೂಡಿದವು. ಮಧ್ಯಾಹ್ನ ನಮ್ಮ ನಾಡಿನ ಹೆಮ್ಮೆಯ ಕವಿ ಮನೆಗೆ (ಕುಪ್ಪಳಿಯ ಕವಿಶೈಲಕ್ಕೆ) ಭೇಟಿ ನೀಡಿದೆವು . ಮನೆಯಲ್ಲಿ ಹೆಜ್ಜೆ ಹಾಕುತ್ತಾ ಹೋದಂತೆ ಪುರಾತನ ಬದುಕಿನ ಶೈಲಿಯ ಬಗ್ಗೆ ಕುತೂಹಲ ಮೂಡಿತು. ಹೇಮಾವತಿ ಅಮ್ಮನವರ ಅಡುಗೆ ಮನೆಯ ಸಾಮಗ್ರಿಗಳನ್ನು ಕಂಡು ಅವರು ಪಡುತ್ತಿದ್ದ ಶ್ರಮ ಕಾಯಕ ಕಣ್ಮುಂದೆ ಗೋಚರಿಸಿತು. ಅಂದಿನ ಬದುಕಿನ ಶೈಲಿ , ಸಂಸ್ಕøತಿಯನ್ನು ಗಮನಿಸಿ ಕನಿಷ್ಟ ಪದ್ಧತಿ, ಬದುಕಿನ ಅಚ್ಚುಕಟ್ಟುತನವನ್ನು ಅಳವಡಿಸಿಕೊಳ್ಳಬೇಕಿನಿಸಿತು. ನಂತರ ಪ್ರವಾಸಿಗರ ಅನಿಸಿಕೆ ಪುಸ್ತಕದಲ್ಲಿ ಕವಿಮನೆ ನನ್ನ ಕನಸು ಎಂದು ಬರೆದೆ. ತೇಜಸ್ವಿಯವರ ಸಮಾಧಿಯ ಬಳಿ ಹೋಗುವ ಮುನ್ನ ಕವಿ ಶೈಲದ ಗುಡ್ಡದಲ್ಲಿ ಕುಳಿತು ಕುವೆಂಪುರವರ ಒಂದೆರಡು ಭಾವಗೀತೆಗಳನ್ನು ಧ್ಯಾನಸ್ತಳಾಗಿ ಹಾಡಿದೆ. ಮನಸ್ಸಿಗೆ ನೆಮ್ಮದಿಯಾಯಿತು, ಮನ ನಿರಾಳವಾಯಿತು.
ತೇಜಸ್ವಿಯವರು ಗತಿಸಿದ ದಿನ ನಾನು ಚಿಕ್ಕವಳಿದ್ದೆ ನನ್ನಪ್ಪ(ಎನ್ಕೆ),ಅಪ್ಪನ ಸ್ನೇಹಿತರಾದ ಎಸ್. ಗಂಗಾಧರಯ್ಯ ಮತ್ತು ಇನ್ನಿತ್ತರ ಜೊತೆ ಅವರ ಕೊನೆ ಭಾರಿ ನೋಡಲು ಹೋಗಿದ್ದೆವು . ಅದು ಮುಸುಕು ಮುಸುಕು ನೆನಪು ಅದಾದ ಬಳಿಕ ಅವರ ಸಮಾಧಿಯ ನೋಡುವ ಅವಕಾಶ ಒದಗಿರಲಿಲ್ಲ…..ಜಾತಿ – ಧರ್ಮವ ಮೀರಿದ ಮನುಜರಾಗಿದ್ದ ತೇಜಸ್ವಿಯವರು ಪ್ರಕೃತಿಯ ಒಡಲಿನಲ್ಲಿ ದೀರ್ಘಕಾಲ ವಿಶ್ರಮಿಸುತ್ತಿರುವುದ ಕಂಡ ಒಂದು ರೀತಿಯ ಸಾತ್ವಿಕ ಭಾವ ಮೂಡಿತು. ಬದುಕಿದರೆ
ಕುವೆಂಪು,ತೇಜಸ್ವಿಯವರಂತೆ ಆದರ್ಶ ಬದುಕನ್ನು ಜೀವಿಸಬೇಕೆಂದು ನಿರ್ಧರಿಸಿದೆ.ಮಾನವ ನಿರ್ಮಿತ ಕಟ್ಟುಪಾಡುಗಳನ್ನು ಮೀರಿ ನಿಷ್ಕಲ್ಮಶ ಮನಸ್ಸಿನಿಂದ ಇರುವ ಕಾಲ ಒಳಿತು ಮಾಡುವತ್ತ ಸಾಗೋಣ ಎನಿಸಿತು.
-ಸಂಘಮಿತ್ರೆ ಹೆಚ್.ಎಸ್.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243




