ಲೈಫ್ ಸ್ಟೈಲ್
ಪರಿಸರ ಪಾಠ

ಅಂದು ಮುಂಜಾನೆ ಬೇಗನೆ ಎದ್ದು , ಪರಿಸರ ಅಧ್ಯಯನ ಶಿಬಿರಕ್ಕೆ ಹೋಗಲು ತಯಾರಾದೆ.ಕಳೆದ ಶೈಕ್ಷಣಿಕ ಸಾಲಿನಲ್ಲಿ ನಮ್ಮ ಕಾಲೇಜಿನ ವತಿಯಿಂದ ನಮ್ಮನ್ನು ಬಂಡಿಪುರ ಅರಣ್ಯಕ್ಕೆ ಕರೆದೊಯ್ದಿದ್ದರು . ಈ ಭಾರಿ ಭದ್ರಾ ಅಭಯಾರಣ್ಯಕ್ಕೆ ಹೊರಟಿದ್ದೆವು. ಅಂದು ಮಂಜಿನ ಬೆಳಗ್ಗೆ ಸುಮಾರು ಒಂದು ತಾಸು ನಗರದ ಬೀದಿ ಬೀದಿಗಳಲ್ಲಿ ನನ್ನ ಸ್ನೇಹಿತರು ತಂಗಿದ್ದ ತಾಣವನ್ನೇ ಹುಡುಕಿದೆ. ಹಲವು ಕಟ್ಟಡಗಳ ನಡುವೆ ಅವರಿದ್ದ ಕಟ್ಟಡ ಮರೆಯಾಗಿತ್ತು.
ಹೇಗೋ ನಮ್ಮ ವಿಭಾಗದ ಮೇಷ್ಟ್ರಿಗೆ ಕರೆ ಮಾಡಿ ಶಿಬಿರಕ್ಕೆ ಹೋಗಲೆಂದು ಹೊರಟ್ಟಿದ್ದ ಬಸ್ ಬಳಿ ತಲುಪಿದೆ. ಸಮಯ ಐದಕ್ಕೆ ಸರಿಯಾಗಿ ಹಾಸನದಿಂದ ಭದ್ರಾ ಅಭಯಾರಣ್ಯಕ್ಕೆ ನಮ್ಮ ಬಂಡಿ ಸಾಗಿತು. ಇನ್ನು ಚಂದಿರ ಸರಿದಿರದ ಕಾರಣ ನಾವೆಲ್ಲರೂ ನಿದ್ದೆಗೆ ಜಾರಿದೆವು. ದಾರಿ ಹರಿದಂತೆ ಪಯಣದ ಹುಮ್ಮಸ್ಸಿಗಾಗಿ ಡಿ.ಜೆ. ಹಾಡಿಗೆ ಹೆಜ್ಜೆ ಹಾಕ ತೊಡಗಿದೆವು., ಸಮಯ-ಹಾದಿ ಕಳದದ್ದೆ ತಿಳಿಯಲಿಲ್ಲ….!ಸುಮಾರು ಒಂಬತ್ತು ಮೂವತಕ್ಕೆ ಸರಿಯಾಗಿ ಲಕ್ಕವಳ್ಳಿ ತಲುಪಿದೆವು .
ಅರಣ್ಯಕ್ಕೆ ಹೋದಾಕ್ಷಣ ನಮ್ಮೊಳಗೆ ಮೌನ ಆವರಿಸಿತು. ಪರಿಸರದ ಬಗ್ಗೆ , ಕುತೂಹಲ , ಏಕಾಗ್ರತೆ ಹೆಚ್ಚಾಯಿತು, ನಾವೆಲ್ಲರೂ ನಮ್ಮ ಜಂಗಮವಾಣಿಗಳನ್ನು ಬಂದ್ ಮಾಡಿ ಶಿಬಿರದ ಉದ್ಘಾಟನಾ ಕಾರ್ಯಕ್ರದಲ್ಲಿ ಭಾಗಿಯಾದೆವು . ಕೇವಲ ನಾಲ್ಕು ಗೋಡೆಗಳ ಮಧ್ಯೆ ಕಲಿಯುವುದು ಸರ್ವೆ ಸಾಮಾನ್ಯ ಅದೇ ನೈಜ್ಯ ಶಾಲೆಯಾದ ಪರಿಸರದೊಂದಿಗೆ ಕಲಿಯುವುದು ಸಾಕಷ್ಟಿದೆ ಎಂಬುದು ನನಗರಿವಾಯಿತು. ಅಲ್ಲಿನ ಸ್ಥಳೀಯ ಪರಿಸರ ತಜ್ಞರೊಬ್ಬರು ಶಿಬಿರವನ್ನು ಉದ್ಘಾಟಿಸಿ ಭದ್ರಾ ಅಭಯಾರಣ್ಯದಲ್ಲಿರುವ ಸಸ್ಯ ಸಂಕುಲದ ಬಗ್ಗೆ ಪರಿಚಯಿಸಿದರು. ವಿಧ ವಿಧ ಬಗೆಯ ಕೀಟ , ಪ್ರಾಣಿ , ಪಕ್ಷಿ , ಹೂಗಳ ಬಗ್ಗೆ ಮಾಹಿತಿ ನೀಡಿದರು. ಬರೀ ಪಠ್ಯಕ್ರಮಕ್ಕೆ ಸೀಮಿತವಾಗಿ ಕಲಿತುತ್ತಿರುವ ನಮಗೆ ಪಠ್ಯೇತ್ತರ ಪಾಠಗಳನ್ನು ಆಲಿಸುವುದು ಬಹಳ ಹಿತಕರವೆನ್ನಿಸಿತು.
ನಂತರ ಅರಣ್ಯದ ವೈಶಿಷ್ಟ್ಯತೆಯ ಕುರಿತು ವಿಡಿಯೋ ತೋರಿಸುತ್ತಾ ಸಿಗ್ನೇಚರ್ ಎಂಬ ಜೇಡರ ಹುಳಿವಿನ ಬಗ್ಗೆ ವಿವರಿಸಿದರು. ಈ ಜೇಡ ಬಲೆಯಲ್ಲಿ ಒಂದು ರೀತಿಯ ಬಿಳಿ ಗೆರೆ ಹೆಣೆದಿರುತ್ತದೆ ಎಂದು ತಿಳಿಸಿದರು. ಅದಾದ ಮೇಲೆ ಹೀಗೆ ಸಫಾರಿ ಹೋಗಲು ಹೊರಡುವ ಮುನ್ನ ಅತ್ತಿತ್ತ ಸುತ್ತಾಡುತ್ತಾ ಇದ್ದಾಗ ಅಲ್ಲಿಯೇ ಲೈಟು ಕಂಬಕ್ಕೆ ಬಲೆಯೊಂದು ಹೆಣೆದಿತ್ತು . ಅದು ತಜ್ಞರು ವಿವರಿಸಿದ ಸಿಗ್ನೇಚರ್ ಜೇಡ ಒಂದು ರೀತಿಯ ಅಪರೂಪದ ಕೀಟವಾಗಿತ್ತು.ಅದರ ವೈಶಿಷ್ಟ್ಯತೆ ಹಾಗು ಕುಶಲತೆಯನ್ನು ಕಂಡು ಅಚ್ಚರಿಯಾಯಿತು.
ನಮ್ಮನ್ನು ಸಫಾರಿ ಕರೆದುಕೊಂಡು ಹೋದರು. ಸಫಾರಿಯಲ್ಲಿ ಮೊದಮೊದಲು ಖಾಲಿ ಕಾಡು ಕಾಣಿಸಿತಾದರೂ ಮುಂದೆ ದಾರಿ ಸವೆದಂತೆ ಲಂಗೂರ್, ಸಾಂಬಾರ್, ಕಾಡು ಎಮ್ಮೆ- ಕೋಣ , ಗುಳ್ಳೇ ನರಿ , ವಿಶಿಷ್ಟ ಕೆಂಪು ಬಾಲದ ಅಳಿಲು , ಉಲಿವ ನವಿಲು , ಉಡ, ಕಾಡು ಹಂದಿ ಎಲ್ಲವೂ ನೋಡಲು ಸಿಕ್ಕವು. ಆ ರಾತ್ರಿ ಸಫಾರಿಯಿಂದ ವಾಪ್ಪಸ್ಸಾದಾಗ ಮೇಷ್ಟ್ರು ಹೇಳಿದ ಮಾತಿನಂತೆ ಇಡೀ ರಾತ್ರಿ ಅನುಭವ ಲೇಖನ ವನ್ನು ಬರೆಯುತ್ತಿದ್ದವು.ಅಲ್ಲಿನ ಚಳಿಗೆ ನಿದ್ದೆಗೆ ಜಾರಿದ್ದೆ ಅರಿವಾಗಲಿಲ್ಲ. ಬೆಳಗಾದಾಗ ಭದ್ರಾ ನದಿಯ ಹಿನ್ನೋಟ ನಮ್ಮೆಲ್ಲರ ಕಣ್ ಸೆಳೆಯಿತು . ಬಂದ್ ಮಾಡಿದ್ದ ಮೊಬೈಲ್ ಗಳ ತೆಗೆದುಕೊಂಡು ಸುಂದರ ಪಟಗಳ ತೆಗೆಯುವಲ್ಲಿ-ತೆಗೆದುಕೊಳ್ಲುವಲ್ಲಿ ನಿರತರಾದೆವು . ಮುಂದೆ ನಮ್ಮ ಪಯಣ ಹತ್ತಿರದ ಸಕ್ಕರೆಬೈಲು ಆನೆ ಶಿಬಿರಕ್ಕೆ ಭೇಟಿ ನೀಡಿದೆವು . ಅಲ್ಲಿ ಆನೆಗಳಿಗೆ ತಾಲೀಮು ಮಾಡುತ್ತಿದ್ದದ್ದನ್ನು ಹತ್ತಿರದಿಂದ ಗಮನಿಸಿದೆವು.
ಮಾವುತರ ಆದೇಶದಂತೆ ಆನೆಗಳು ಶಿಸ್ತು ಭದ್ದವಾಗಿ ವರ್ತಿಸುತ್ತಿದ್ದವು, ಮಕ್ಕಳಂತೆ ಚೆಂಡಾಟ ಆಡುತ್ತಾ, ಪ್ರವಾಸಿಗರಿಗೆ ಸೊಂಡಿಲಲ್ಲಿ ನಮಿಸುತ್ತಾ ಲವಲವಿಕೆಯಿಂದ ಇದ್ದವು. ಮನುಷ್ಯನ ದುರಾಸೆಯಿಂದಾಗಿಯೇ ಎಷ್ಟೋ ಕಾಡು ನಾಶವಾಗುತ್ತದೆ. ಪ್ರಾಣಿಗಳು ನಾಡಿಗೆ ಬಂದು ದಾಳಿ ಮಾಡಲು ಕೆಲವೊಮ್ಮೆ ಮಾನವನೇ ಕಾರಣಕರ್ತರಾಗಿದ್ದಾನೆ. ಇಂತಹ ವಿಚಾರಗಳನ್ನು ನಾವೂ ಪರಿಸರದೊಳಗೆ ಪರಿಸರ ಜೀವಿಯಾದಾಗ ಮಾತ್ರ ಅರಿವಾಗುತ್ತದೆ ಹೊರತು ಕಾಂಕ್ರೀಟ್ ಕಾಡೊಳಗೆ ಬಾವಿ ಕಪ್ಪೆಗಳಂತೆ ಇದ್ದರೆ ಪ್ರಕೃತಿಯ ಬಗ್ಗೆ ಕಿಂಚಿತ್ತು ತಿಳಿಯಲಾಗುವುದಿಲ್ಲ.
ಸಕ್ಕರೆಬೈಲಿನಲ್ಲಿ ಸಂವೇದನೀಯ ವಿಚಾರಗಳು ಮಸ್ತಕದಲ್ಲಿ ಮೂಡಿದವು. ಮಧ್ಯಾಹ್ನ ನಮ್ಮ ನಾಡಿನ ಹೆಮ್ಮೆಯ ಕವಿ ಮನೆಗೆ (ಕುಪ್ಪಳಿಯ ಕವಿಶೈಲಕ್ಕೆ) ಭೇಟಿ ನೀಡಿದೆವು . ಮನೆಯಲ್ಲಿ ಹೆಜ್ಜೆ ಹಾಕುತ್ತಾ ಹೋದಂತೆ ಪುರಾತನ ಬದುಕಿನ ಶೈಲಿಯ ಬಗ್ಗೆ ಕುತೂಹಲ ಮೂಡಿತು. ಹೇಮಾವತಿ ಅಮ್ಮನವರ ಅಡುಗೆ ಮನೆಯ ಸಾಮಗ್ರಿಗಳನ್ನು ಕಂಡು ಅವರು ಪಡುತ್ತಿದ್ದ ಶ್ರಮ ಕಾಯಕ ಕಣ್ಮುಂದೆ ಗೋಚರಿಸಿತು. ಅಂದಿನ ಬದುಕಿನ ಶೈಲಿ , ಸಂಸ್ಕøತಿಯನ್ನು ಗಮನಿಸಿ ಕನಿಷ್ಟ ಪದ್ಧತಿ, ಬದುಕಿನ ಅಚ್ಚುಕಟ್ಟುತನವನ್ನು ಅಳವಡಿಸಿಕೊಳ್ಳಬೇಕಿನಿಸಿತು. ನಂತರ ಪ್ರವಾಸಿಗರ ಅನಿಸಿಕೆ ಪುಸ್ತಕದಲ್ಲಿ ಕವಿಮನೆ ನನ್ನ ಕನಸು ಎಂದು ಬರೆದೆ. ತೇಜಸ್ವಿಯವರ ಸಮಾಧಿಯ ಬಳಿ ಹೋಗುವ ಮುನ್ನ ಕವಿ ಶೈಲದ ಗುಡ್ಡದಲ್ಲಿ ಕುಳಿತು ಕುವೆಂಪುರವರ ಒಂದೆರಡು ಭಾವಗೀತೆಗಳನ್ನು ಧ್ಯಾನಸ್ತಳಾಗಿ ಹಾಡಿದೆ. ಮನಸ್ಸಿಗೆ ನೆಮ್ಮದಿಯಾಯಿತು, ಮನ ನಿರಾಳವಾಯಿತು.
ತೇಜಸ್ವಿಯವರು ಗತಿಸಿದ ದಿನ ನಾನು ಚಿಕ್ಕವಳಿದ್ದೆ ನನ್ನಪ್ಪ(ಎನ್ಕೆ),ಅಪ್ಪನ ಸ್ನೇಹಿತರಾದ ಎಸ್. ಗಂಗಾಧರಯ್ಯ ಮತ್ತು ಇನ್ನಿತ್ತರ ಜೊತೆ ಅವರ ಕೊನೆ ಭಾರಿ ನೋಡಲು ಹೋಗಿದ್ದೆವು . ಅದು ಮುಸುಕು ಮುಸುಕು ನೆನಪು ಅದಾದ ಬಳಿಕ ಅವರ ಸಮಾಧಿಯ ನೋಡುವ ಅವಕಾಶ ಒದಗಿರಲಿಲ್ಲ…..ಜಾತಿ – ಧರ್ಮವ ಮೀರಿದ ಮನುಜರಾಗಿದ್ದ ತೇಜಸ್ವಿಯವರು ಪ್ರಕೃತಿಯ ಒಡಲಿನಲ್ಲಿ ದೀರ್ಘಕಾಲ ವಿಶ್ರಮಿಸುತ್ತಿರುವುದ ಕಂಡ ಒಂದು ರೀತಿಯ ಸಾತ್ವಿಕ ಭಾವ ಮೂಡಿತು. ಬದುಕಿದರೆ
ಕುವೆಂಪು,ತೇಜಸ್ವಿಯವರಂತೆ ಆದರ್ಶ ಬದುಕನ್ನು ಜೀವಿಸಬೇಕೆಂದು ನಿರ್ಧರಿಸಿದೆ.ಮಾನವ ನಿರ್ಮಿತ ಕಟ್ಟುಪಾಡುಗಳನ್ನು ಮೀರಿ ನಿಷ್ಕಲ್ಮಶ ಮನಸ್ಸಿನಿಂದ ಇರುವ ಕಾಲ ಒಳಿತು ಮಾಡುವತ್ತ ಸಾಗೋಣ ಎನಿಸಿತು.
-ಸಂಘಮಿತ್ರೆ ಹೆಚ್.ಎಸ್.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ3 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ2 days ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ3 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್
-
ದಿನದ ಸುದ್ದಿ2 days ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ11 hours ago
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ