ಲೈಫ್ ಸ್ಟೈಲ್
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ
- ಬಸವರಾಜ.ಹೆಚ್,ಪತ್ರಿಕೋದ್ಯಮ ವಿದ್ಯಾರ್ಥಿ, ಧಾರವಾಡ
ನಮಗೆಲ್ಲರಿಗೂ ತಿಳಿದಿರುವ ಹಾಗೆ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಶಾಲಾ, ಕಾಲೇಜುಗಳಲ್ಲಿ & ಅನೇಕ ಇಲಾಖೆಗಳಲ್ಲಿ ಹಾಗೂ ಸಂಘ -ಸಂಸ್ಥೆಗಳಲ್ಲಿ ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸುವುದರಿಂದ ಜನರಿಗೆ ಪರಿಸರದ ಕಾಳಜಿ ಜೊತೆಗೆ ಅವರಿಗೆ ಪರಿಸರದ ಮಹತ್ವ ಸಾರುವ ಹಾಗೂ ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಇದನ್ನು 1974 ರಲ್ಲಿ ವಿಶ್ವಸಂಸ್ಥೆಯು ಸ್ಥಾಪಿಸಿತು.
ನಮ್ಮ ಪೂರ್ವಜರು ಪ್ರಕೃತಿಯ ಜೊತೆಗೆ ಬದುಕಿದವರು, ವಿದ್ಯೆಯಲ್ಲಿ ಹಿಂದಿದ್ದರೂ ಪರಿಸರದ ಬಗ್ಗೆ ಕಾಳಜಿ ಹೊಂದಿದ್ದರು ಆದರೆ ನಾಗರೀಕತೆ ಬೆಳದಂತೆ ಇಂದಿನ ದಿನಮಾನದಲ್ಲಿ ಪ್ರಕೃತಿಯ ಹೋಮವೇ ನೆಡೆಯುತ್ತಿದೆ. ಪರಿಸರದ ಕಾಳಜಿ ಯಾರಿಗೂ ಇಲ್ಲದಂತಾಗುತ್ತದೆ. ಪ್ರತಿವರ್ಷ ಜೂನ್ 5 ರಂದು ನಾವೆಷ್ಟು ಪರಿಸರವನ್ನು ಹಾಳುಮಾಡಿದ್ದೇವೆ ಎಂಬುವುದು ಲೆಕ್ಕ ಹಾಕುವಂತಾಗಿದೆ.ಪ್ರಸ್ತುತ ಜಗತ್ತಿನಲ್ಲಿ
ವಿಶ್ವ ಪರಿಸರ ದಿನವನ್ನು ಏಕೆ ಆಚರಿಸಲಾಗುತ್ತದೆ?ಎಂಬುವ ಪ್ರಶ್ನೆ ಎಲ್ಲರಲ್ಲೂ ಸಮಾನ್ಯವಾಗಿ ಮೂಡಿಬಂದಿರುವುದಾಗಿದೆ.
ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯವಾದ ಕೊಡುಗೆಯನ್ನು ಈ ಪ್ರಕೃತಿ ಕೊಟ್ಟಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಗಿಡ – ಮರಗಳು, ಕಾಡುಗಳು, ಸಾಗರಗಳು ಮುಂತಾದವುಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ. ನಾವು ಅವಲಂಬಿತಾರಾಗಿರುವ ಈ ಪರಿಸರ ಯುಗ-ಯುಗಗಳವರೆಗೂ ಹೀಗೆಯೇ ಉಳಿಯಬೇಕಿದೆ. ಪರಿಸರವನ್ನು ಈಗಿನ ಕಾಲದಲ್ಲಿ ಉಳಿಸಿಕೊಂಡು ಹೋಗುವುದು ಕಷ್ಟವಾಗಿದೆ.
ಅದು ಹೇಗೆ ಎಂದರೆ ನಾವು ಮಾಡುತ್ತಿರುವ ಅರಣ್ಯನಾಶ, ಗಣಿಗಾರಿಕೆ, ಕೈಗಾರಿಕರಣ ಇವುಗಳೆಲ್ಲವೂ ಸೇರಿದಂತೆ ಮಾನವನ ಮೂರ್ಖ ಪ್ರಯತ್ನದಿಂದ ಹಲವಾರು ಚಟುವಟಿಕೆಗಳಿಂದ ಇಂದು ಪರಿಸರಕ್ಕೆ ಧಕ್ಕೆಯನ್ನು ಉಂಟುಮಾಡಿದೆ.ಮಾನವನ ಚಟುವಟಿಕೆಗಳಿಂದ ಪರಿಸರಕ್ಕೆ ಹಾನಿಯಾಗದಂತೆ ಮಾಡಲು ಜಗತ್ತಿನ ಎಲ್ಲಾ ದೇಶಗಳಲ್ಲಿ ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ. ಭೂಮಿ ಎಂಬ ಈ ಗೃಹದಲ್ಲಿ ನಾವು ಬದುಕಲು ನಮಗೆ ಸಹಾಯ ಮಾಡುವ ಮೂಲಕ ಪರಿಸರ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಪ್ರಕೃತಿ ಮಾತೆಯು ನಮಗೆ ಈ ಸುಂದರವಾದ ವಾತಾವರಣವನ್ನು ನಮಗೆ ನೀಡಿದ್ದು ಇದು ನಮ್ಮ ಜೀವನವನ್ನು ಸುಸ್ಥಿರಗೊಳಿಸುತ್ತದೆ.
ಪರಿಸರವಿಲ್ಲದೆ ಈ ಭೂಮಿ ಮೇಲೆ ಯಾವ ಜೀವಿಯೂ ಬದುಕುಳಿಯಲು ಅಸಾಧ್ಯವಾಗಿದೆ. ಈ ಭೂಮಿಯ ಮೇಲೆ ಅದೆಷ್ಟೋ ಮಾನವ ನಿರ್ಮಿತ ಚಟುವಟಿಕೆಗಳು ನೆಡೆಯುತ್ತಿರುವುದು ಪ್ರಕೃತಿಯ ಅಸಮತೋಲನಕ್ಕೆ ಕಾರಣವಾಗುತ್ತದೆ ಮತ್ತು ಅದು ಇಡಿ ಪರಿಸರದಲ್ಲಿ ಮತ್ತಷ್ಟು ಗೊಂದಲವನ್ನು ಉಂಟುಮಾಡುತ್ತಿದೆ. ಆದುದ್ದರಿಂದ ಪರಿಸರದ ಬಗ್ಗೆ ಕಾಳಜಿವಹಿಸುವುದು ಮತ್ತು ಅಗತ್ಯಕ್ಕೆತಕಂತೆ ಸರಳವಾಗಿ ಜೀವಿಸುವುದು ಕೂಡ ಅವಶ್ಯಕವಾಗಿದೆ. ಈ ಗೃಹದಲ್ಲಿ ಎಲ್ಲಾ ಪರಿಸರ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ನಾವಿರುವ ಭೂಮಿಯನ್ನು ನಿಜವಾಗಿಯೂ ಸುಂದರವಾಗಿಸಲು ಸಹಾಯ ಮಾಡುವ ಕ್ರಮಗಳನ್ನು ನಿರ್ವಹಿಸಲು ವಿವಿಧ ಯೋಜನೆಗಳು ಹಾಗೂ ಕಾರ್ಯಸೂಚಿಗಳನ್ನು ಕಾರ್ಯಗತಗೊಳಿಸುವ ಉದ್ದೇಶದಿಂದ ವಿಶ್ವಪರಿಸರ ದಿನವನ್ನು ಆಚರಿಸಲಾಗುತ್ತದೆ.
ಈ ದಿನದ ಪ್ರಾಥಮಿಕ ಉದ್ದೇಶವೆಂದರೆ ಜಗತ್ತಿನ ಎಲ್ಲಾ ಜನರನ್ನು ಒಗ್ಗೂಡಿಸುವುದು ಮತ್ತು ಪರಿಸರ ಶೋಷಣೆಯಿಂದಾಗಿ ನಾವು ಎದುರಿಸುತ್ತಿರುವ ಹವಮಾನ ಬದಲಾವಣೆಗಳ ಬಗ್ಗೆ ಅರಿವು ಮೂಡಿಸುವುದು, ಪರಿಸರ ಸಂರಕ್ಷಣೆಗೆ ಯುವಕರನ್ನು ಉತ್ತೇಜಿಸುವ ಸಲುವಾಗಿ ಈ ದಿನವನ್ನು ವಿಶ್ವ ಪರಿಸರ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಡುತ್ತದೆ ವಿವಿಧ ಪರಿಸರ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಉತ್ತಮ ಭವಿಷ್ಯಕ್ಕಾಗಿ ನಮ್ಮ ಪರಿಸರವನ್ನು ನಾವು ಎದುರಿಸುತ್ತಿರುವ ಹವಮಾನ ಬದಲಾವಣೆಗಳ ಬಗ್ಗೆ ಅರಿವು ಮೂಡಿಸುವುದು, ಪರಿಸರ ಸಂರಕ್ಷಣೆಗೆ ಯುವಕರನ್ನು ಉತ್ತೇಜಿಸುವ ಸಲುವಾಗಿ ಈ ದಿನವನ್ನು ವಿಶ್ವ ಪರಿಸರ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಡುತ್ತದೆ ವಿವಿಧ ಪರಿಸರ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಉತ್ತಮ ಭವಿಷ್ಯಕ್ಕಾಗಿ ನಮ್ಮ ಪರಿಸರವನ್ನು ನಾವು ಎದುರಿಸುತ್ತಿರುವ ಹವಮಾನ ಬದಲಾವಣೆಗಳ ಬಗ್ಗೆ ಅರಿವು ಮೂಡಿಸುವುದು, ಪರಿಸರ ಸಂರಕ್ಷಣೆಗೆ ಯುವಕರನ್ನು ಉತ್ತೇಜಿಸುವ ಸಲುವಾಗಿ ಈ ದಿನವನ್ನು ವಿಶ್ವ ಪರಿಸರ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಡುತ್ತದೆ ವಿವಿಧ ಪರಿಸರ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಉತ್ತಮ ಭವಿಷ್ಯಕ್ಕಾಗಿ ನಮ್ಮ ಪರಿಸರವನ್ನು ರಕ್ಷಿಸುವುದು ವಿಶ್ವ ಪರಿಸರ ದಿನದ ಮುಖ್ಯ ಉದ್ದೇಶವಾಗಿದೆ. ಪರಿಸರದಲ್ಲಿನ ಬದಲಾವಣೆಗಳಿಂದ ನಮ್ಮ ಪರಿಸರ ಹೇಗೆ ಕ್ಷಿಣಿಸುತ್ತದೆ ಮತ್ತು ಮತ್ತು ಅದನ್ನು ರಕ್ಷಿಸಲು ಇರುವಂತಹ ಕ್ರಮಗಳನ್ನು ಇಂದಿನ ದಿನಮಾನದಲ್ಲಿ ನಾವು ತಿಳಿದುಕೊಂಡು ಬೆಳೆಸಿಕೊಂಡು ಹೋಗುವುದು ನಮ್ಮ ಆದ್ಯ ಕರ್ತವ್ಯ ಆಗಿದೆ.
ಮಾಲಿನ್ಯ ಅಥವಾ ನೈಸರ್ಗಿಕ ಸಂಪನ್ಮೂಲಗಳ ಕೊರತೆಯಿಂದ ಮುಕ್ತವಾದ ನೈಸರ್ಗಿಕ ಮತ್ತು ಸುಂದರವಾದ ಜಗತ್ತನ್ನು ಸೃಷ್ಟಿಸುವುದು ವಿಶ್ವ ಪರಿಸರ ದಿನದ ಸಂಪೂರ್ಣ ಆಲೋಚನೆ ನಮ್ಮೆಲ್ಲರದಾಗಿದೆ. ಪ್ಲಾಸ್ಟಿಕ್ ಅನ್ನು ನಿಷೇಧಿಸುವುದು ಮತ್ತು ಅದನ್ನು ಮರುಬಳಕೆ ಮಾಡುವುದು ನೀರನ್ನು ಉಳಿಸುವುದು, ಹೆಚ್ಚು ಗಿಡಗಳನ್ನು ನೆಡುವುದು, ವನ್ಯಜೀವಿಗಳು ಮತ್ತು ಪ್ರಾಣಿಗಳನ್ನು ಉಳಿಸುವುದು. ಇವೆಲ್ಲಾ ನಮ್ಮನ್ನು ಉತ್ತಮ ಪರಿಸರಕ್ಕೆ ಕರೆದ್ಯೋಯುವ ಕೆಲವು ಹಂತಾಗಳಾಗಿವೆ.
ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಲು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಎಲ್ಲವೂ ಒಂದು ದಿನ ಕ್ಷಿಣಿಸುತ್ತದೆ. ಇದರಿಂದ ಶುದ್ಧ ನೀರು, ಶುದ್ಧ ಗಾಳಿ ಎಂದಿಗೂ ನಮಗೆ ಉಳಿಯುವುದಿಲ್ಲ ನಮ್ಮ ತಾಯಿಯ ಸ್ವಭಾವವನ್ನು ಉಳಿಸುವುದು ಮತ್ತು ಅದನ್ನು ಮಾಲಿನ್ಯಗೊಳಿಸದಿರುವುದು ಹಾಗೂ ಇತರ ಅಪಾಯಗಳಿಂದ ರಕ್ಷಿಸುವುದು ನಮ್ಮ ಜವಾಬ್ದಾರಿ ಆಗಿದೆ. ಇದು ಉತ್ತಮ ಮಾರ್ಗಕ್ಕೆ ಕರಿದ್ಯೋಯುತ್ತದೆ.
ಪ್ರತಿಯೊಬ್ಬರೂ ಪರಿಸರದ ಮಹತ್ವ ಮತ್ತು ಹಾನಿಯ ನಷ್ಟವನ್ನು ಮನದಟ್ಟು ಮಾಡಿ ಮುಂದಿನ ದಿನಗಳಲ್ಲಿ ಪರಿಸರದ ಅಭಿವೃದ್ಧಿಯ ಲೆಕ್ಕಾಚಾರ ಮಾಡುವಂತಾದರೆ ಪರಿಸರ ದಿನಕ್ಕೆ ಮಹತ್ವ ಬಂದಂತಾಗುತ್ತದೆ. ಸೂಕ್ತವಾದ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಈ ಭೂಮಿಯನ್ನು ರಕ್ಷಣೆ ಮಾಡಬೇಕಾಗಿದೆ. ಪ್ರತಿಯೊಬ್ಬರೂ ನಮ್ಮ ಸುತ್ತ-ಮುತ್ತ ಗಿಡ ನೆಟ್ಟು ಬೆಳೆಸೋಣ. ಆಗ ಇಡಿ ನಾಡೆ ಹಸಿರಾಗಿ ಇರುವುದು.
(ಬಸವರಾಜ.ಹೆಚ್ ಪತ್ರಿಕೋದ್ಯಮ ವಿದ್ಯಾರ್ಥಿ ಧಾರವಾಡ.8951228607)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ1 hour agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ



