ದಿನದ ಸುದ್ದಿ
ದೇಶದಲ್ಲಿಎಂಎಸ್ ಎಂಇ ವಲಯ ಉತ್ತೇಜಿಸಲು ಸರ್ಕಾರದ ನೀತಿಯಲ್ಲಿ ಅಗತ್ಯ ಬದಲಾವಣೆ : ಪ್ರಧಾನಿ ಮೋದಿ
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು-ಎಂಎಸ್ಎಂಇ ವಲಯವನ್ನು ಉತ್ತೇಜಿಸಲು ಸರ್ಕಾರ ತನ್ನ ನೀತಿಯಲ್ಲಿ ಅಗತ್ಯ ಬದಲಾವಣೆ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಉದ್ಯಮಿ ಭಾರತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ 8 ವರ್ಷಗಳಲ್ಲಿ ಈ ವಲಯವನ್ನು ಬಲಪಡಿಸಲು ಬಜೆಟ್ ಅನುದಾನವನ್ನು ಶೇಕಡ ೬೫೦ರಷ್ಟು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಭಾರತದ ಆರ್ಥಿಕತೆಯ ಬಹುತೇಕ ಮೂರನೇ ಒಂದರಷ್ಟು ಪ್ರಮಾಣ ಎಂಎಸ್ಎಂಇ ವಲಯದ್ದಾಗಿದೆ ಮತ್ತು ಭಾರತದ ಪ್ರಗತಿಯ ಪಯಣದಲ್ಲಿ ಈ ವಲಯ ಅತ್ಯಂತ ಪ್ರಮುಖ ಪಾತ್ರವಹಿಸಿದೆ ಎಂದು ಹೇಳಿದರು.
ಎಂಎಸ್ಎಂಇ ಎಂದರೆ ಸರ್ಕಾರದ ಅರ್ಥದಲ್ಲಿ ಸೂಕ್ಷ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಗರಿಷ್ಠ ಬೆಂಬಲ ನೀಡುವುದಾಗಿದೆ ಮತ್ತು 50 ಸಾವಿರ ಕೋಟಿ ರೂಪಾಯಿಗಳಷ್ಟು ಸ್ವಾವಲಂಭಿ ನಿಧಿಯನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರಕ್ಕೆ ಸಾಮಗ್ರಿಗಳನ್ನು ಪೂರೈಸಲು ಎಂಎಸ್ಎಂಇಗಳು ಜಿಇಎಂ ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕೆಂದು ಅವರು ಕರೆ ನೀಡಿದರು.
200 ಕೋಟಿ ರೂಪಾಯಿವರೆಗಿನ ಆದೇಶಗಳಿಗೆ ಜಾಗತಿಕ ಟೆಂಡರ್ ಕರೆಯುವ ಅಗತ್ಯವಿಲ್ಲ. ಈ ಮೊತ್ತದ ಯೋಜನೆಗಳನ್ನು ಎಂಎಸ್ಎಂಇ ಗಳಿಗೆ ಮೀಸಲಿಡಲು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಧಾನಿ ಹೇಳಿದರು.
From easy access to credit and better markets, the NDA Government is committed to help the MSME sector in every possible way. pic.twitter.com/tkG85Tbal5
— Narendra Modi (@narendramodi) June 30, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
-
ಅಂಕಣ2 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ5 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ21 hours agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ4 hours agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ1 hour agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ಕ್ರೀಡೆ5 hours agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

