ದಿನದ ಸುದ್ದಿ
ಮಾವು ಮತ್ತು ಗೇರು ಬೆಳೆಗಾರರಿಗೆ ಅಗತ್ಯ ಸಲಹೆಗಳು
ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ತೋಟಗಾರಿಕೆ ಇಲಾಖೆಯು ಮಾವಿನಲ್ಲಿ ಜಿಗಿಹುಳುಗಳು ಮತ್ತು ಗೇರು ಬೆಳೆಯಲ್ಲಿ ಟೀ ಸೊಳ್ಳೆ ಕೀಟಗಳ ಭಾದೆಗಳನ್ನು ತಡೆಗಟ್ಟಲು ಸೂಕ್ತ ಮುನ್ನೆಚರಿಕೆ ಕ್ರಮಗಳನ್ನು ವಹಿಸುವಂತೆ ರೈತರಿಗೆ ಸೂಚನೆ ನೀಡಿದೆ.
ಮಾವಿನಲ್ಲಿ ಜಿಗಿಹುಳುಗಳು ಮತ್ತು ಗೇರು ಬೆಳೆಯಲ್ಲಿ ಟೀ ಸೊಳ್ಳೆ ಕೀಟಗಳು ಮೃದು ಭಾಗಗಳಾದ ಚಿಗುರು ಮತ್ತು ಹೂ ಗೊಂಚಲುಗಳನ್ನು ಚೂಪಾದ ಕೊಂಬಿನಿದ ಚುಚ್ಚಿ ರಸ ಹೀರುವುದರಿಂದ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ 25 ರಿಂದ 75 ರಷ್ಟು ಫಸಲು ನಷ್ಟವಾಗುವುದು. ಆದ್ದರಿಂದ ರೈತರು ಈ ಹಂತದಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರಿಂದ ಮುಂದೆ ಆಗಬಹುದಾದ ಹಾನಿಗಳನ್ನು ತಡೆಗಟ್ಟಬಹುದು ಎಂದು ತೋಟಗಾರಿಕಾ ಉಪನಿರ್ದೇಶಕರು ತಿಳಿಸಿರುತ್ತಾರೆ.
ಮಾವು ಮತ್ತು ಗೇರು ಗಿಡಗಳಲ್ಲಿ ಕಂಡುಬರುವ ಒಣಗಿದ ರೆಂಬೆ ಕೊಂಬೆಗಳನ್ನು ಕತ್ತರಿಸಿ ತೆಗೆಯಬೇಕು. ಕತ್ತರಿಸಿದ ಗಿಡದ ಭಾಗಕ್ಕೆ ಬೋರ್ಡೋ ಅಥವಾ ಕಾಪರ್ ಆಕ್ಸಿ ಕ್ಲೋರೈಡ್ ದ್ರಾವಣ ಹಚ್ಚಬೇಕು. ಬುಡದ ಸುತ್ತಲೂ ಉಳುಮೆ ಮಾಡಿ, ಮಣ್ಣನ್ನು ಸಡಿಲಗೊಳಿಸಬೇಕು. ಗೇರು ಬೆಳೆಗೆ ಇಂದಿನಿಂದ ನೀರಾವರಿ ಪ್ರಾರಂಭಿಸಿಸಬಹುದು. ಆದರೆ ಮಾವಿನ ಬೆಳೆಗೆ ಸಣ್ಣ ಮಿಡಿಗಾಯಿ ಬರುವ ಹಂತದವರೆಗೂ ನೀರಾವರಿ ಪ್ರಾರಂಭಿಸಬಾರದು.
ಮಾವಿನಲ್ಲಿ ಹೂ ಮೊಗ್ಗು ಹೊರಟ ನಂತರ ಹೂ ಮೊಗ್ಗು ಮತ್ತು ಚಿಗುರು ತಿನ್ನುವ ಕೀಟಗಳ ನಿಯಂತ್ರಣಕ್ಕೆ ಡೈಮಿಥೋಯೇಟ್ 1.7 ಮಿಲೀ. ಅಥವಾ ಕ್ಲೋರೋಪೈರಿಫಸ್ 2 ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಇದರ ಜೊತೆಗೆ ಐ.ಐ.ಹೆಚ್.ಆರ್ ಮ್ಯಾಂಗೋ ಸ್ಪೆಷಲ್ 5 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.
ಜಿಗಿ ಹುಳು ಮತ್ತು ಬೂದಿ ರೋಗದ ನಿಯಂತ್ರಣಕ್ಕೆ ಡೆಕಾಮೆಥ್ರಿನ್ 1 ಮಿ.ಲೀ. ಆಥವಾ ಇಮಿಡಾಕ್ಲೋಪ್ರಿಡ್ 3 ಮಿ.ಲೀ. ಅಥವಾ 0.5 ಮಿ.ಲೀ ಸೈಪರ್ ಮೆಥ್ರಿನ್ ಇವುಗಳಲ್ಲಿ ಯಾವುದಾದರೂ ಒಂದು ಕೀಟನಾಶಕದ ಜೊತೆಗೆ ಕಾರ್ಬೆಂಡೆಜಿಯಂ 1 ಗ್ರಾಂ ಅಥವಾ ಮ್ಯಾಂಕೊಜೆಬ್ 2 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ 25-30 ದಿನಗಳಿಗೊಮ್ಮೆ ಅವಶ್ಯಕತೆಗನುಗಣವಾಗಿ ಸಿಂಪಡಿಬೇಕು.
ಗೋಡಂಬಿ ಬೆಳೆಯಲ್ಲಿ ಟೀ ಸೊಳ್ಳೆ ಮತ್ತು ಚಿಗುರು ತಿನ್ನುವ ಕೀಟಗಳ ನಿಯಂತ್ರಣಕ್ಕೆ ಡೈಮಿಥೋಯೇಟ್ 1.75 ಮಿ.ಲೀ ಅಥವಾ ಲ್ಯಾಂಬ್ಡಸೈಲೋಥ್ರಿನ್ 1 ಮಿ.ಲೀ. ಆಥವಾ ಕ್ಲೋರೋಪೈರಿಪಾಸ್ 50 ಇ.ಸಿ. 1.5 ಮಿ .ಲೀ ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಡಿಸಬೇಕು.
ರೈತರು ಈ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದರಿಂದ ಮಾವು ಮತ್ತು ಗೇರು ಬೆಳೆಗಳ ಉತ್ತಮ ನಿರ್ವಹಣೆ ಮಾಡಬಹುದಾಗಿರುತ್ತದೆ.
ವಿಷೇಶ ಸೂಚನೆ
ಔಷಧ ಸಿಂಪರಣೆಯನ್ನು ಹೂ ಬಿಡುವ ಮೊದಲು ಹಾಗೂ ಕಾಯಿ ಕಟ್ಟಿದ ಸಮಯದಲ್ಲಿ ಮಾಡಬೇಕು. ಯಾವುದೇ ಕಾರಣಕ್ಕೂ ಹೂ ಬಿಟ್ಟ ಸಮಯದಲ್ಲಿ ಸಿಂಪರಣೆ ಮಾಡಬಾರದು, ಗಿಡಗಳು ಹೂ ಬಿಟ್ಟ ಸಮಯದಲ್ಲಿ ಸಿಂಪರಣೆ ಮಾಡುವುದರಿಂದ ಪರಾಗಸ್ಪರ್ಶ ಕ್ರಿಯೆಗೆಂದು ಬರುವ ಜೇನುನೊಣಗಳಿಗೆ ಹಾನಿಯುಂಟಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


