ರಾಜಕೀಯ
‘ಗೋದ್ರಾ ಹತ್ಯಾಕಾಂಡ’ ದಲ್ಲಿ ಸಾವಿರಾರು ಅಮಾಯಕರ ಸಾವಿಗೆ ಮೋದಿ ಕಾರಣರಲ್ಲವೇ? : ಸಿದ್ದರಾಮಯ್ಯ
ಸುದ್ದಿದಿನ, ಹಾವೇರಿ : ಗೋದ್ರಾ ಹತ್ಯಾಕಾಂಡದಲ್ಲಿನ ಸಾವಿರಾರು ಅಮಾಯಕರ ಸಾವಿಗೆ ಅಂದು ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಕಾರಣರಲ್ಲವೇ? ನಾನು ಮುಖ್ಯಮಂತ್ರಿಯಾಗಿ ಧರ್ಮ-ಜಾತಿಗಳ ಬೇಧವಿಲ್ಲದೆ ಅನ್ನಭಾಗ್ಯ, ವಿದ್ಯಾಸಿರಿ, ಮೈತ್ರಿ, ಮನಸ್ವಿನಿ, ಕೃಷಿಭಾಗ್ಯ, ಸಾಲಮನ್ನಾ, ಶೂಭಾಗ್ಯ ಯೋಜನೆ ನೀಡಿದ್ದೆ. ಹಾಗಾದರೆ ನಿಜವಾದ ‘ಸಬ್ ಕ ಸಾಥ್ ಸಬ್ ಕ ವಿಕಾಸ್’ ಯಾರದ್ದು? ಎಂದು ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹರಿಹಾಯ್ದರು.
ಹಾವೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಆರ್.ಪಾಟೀಲ್ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಆಯೋಜಿಸಿದ್ದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ಪಾಕಿಸ್ಥಾನದ ಮೇಲೆ ಯುದ್ಧ ಮಾಡಿ 1 ಲಕ್ಷ ಪಾಕ್ ಸೈನಿಕರನ್ನು ಸೆರೆಹಿಡಿದು, ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಿದರು. ಬಿಜೆಪಿಯವರೇ ಆದ ಅಟಲ್ ಬಿಹಾರ್ ವಾಜಪೇಯಿಯವರು ಇಂದಿರಾ ಗಾಂಧಿಯವರನ್ನು ದುರ್ಗೆ ಎಂದು ಹೊಗಳಿದ್ದರು. ಆದರೆ ಇದನ್ನು ಅವರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಬಳಕೆ ಮಾಡಿಕೊಂಡಿರಲಿಲ್ಲ ಎಂದರು.
ಈಶ್ವರಪ್ಪನವರು ಮುಸ್ಲಿಮರ ಮತ ಬಿಜೆಪಿಗೆ ಬೇಡವೇ ಬೇಡ ಎನ್ನುವ ಜೊತೆಗೆ, ಮುಸ್ಲಿಮರಿಗೆ ಬಿಜೆಪಿಯ ಟಿಕೆಟ್ ಬೇಕಾದರೆ ತಮ್ಮ ಕಚೇರಿಯ ಕಸ ಗುಡಿಸಲಿ ಎಂದು ಇಡೀ ಸಮುದಾಯವನ್ನೇ ಅವಮಾನಿಸಿದ್ದಾರೆ. ತೋರುಗಾಣಿಕೆಗೆ ಸರ್ವ ಧರ್ಮವನ್ನು ಗೌರವಿಸುವ ಬಿಜೆಪಿಯ ಮುಖವಾಡದ ಹಿಂದೆ ಅಲ್ಪಸಂಖ್ಯಾತ ವಿರೋಧಿ ಕರಾಳ ಮುಖವಿದೆ ಎಂದು ಕಿಡಿಕಾರಿದರು.
ಬಿಜೆಪಿ 28 ಲೋಕಸಭಾ ಕ್ಷೇತ್ರಗಳಲ್ಲಿ ಕೇವಲ ಒಂದೇ ಒಂದು ಸ್ಥಾನವನ್ನು ಸಹ ಹಿಂದುಳಿದ ವರ್ಗದವರಿಗೆ ನೀಡಿಲ್ಲ. ಇದರಿಂದ ಆ ವರ್ಗದ ಜನರಿಗೆ ಬಿಜೆಪಿ ಅನ್ಯಾಯ ಮಾಡಿದ ಹಾಗಲ್ಲವೇ? ಚುನಾವಣೆ ಸಮಯದಲ್ಲಿ ಜಾತಿ ರಾಜಕಾರಣ ಮಾಡುವ ಈಶ್ವರಪ್ಪ ನಿಜವಾಗಿ ಹಿಂದುಳಿದ ಜಾತಿಗೆ ಸೇರಿದವರಾಗಿದ್ದರೆ ಬಿಜೆಪಿಗೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.
ಬಿಜೆಪಿಗೆ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರು, ಶೋಷಿತ ವರ್ಗದ ಜನರನ್ನು ಕಂಡರೆ ಆಗಲ್ಲ. ಇವರೆಲ್ಲರನ್ನೂ ಅಭಿವೃದ್ಧಿಯಿಂದ ಹೊರಗಿಟ್ಟು ದೇಶ ಉದ್ಧಾರ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿಯವರ ನಿಜವಾದ ವಿಕಾಸ ಬಡವರನ್ನು ತಲುಪದೆ ಅಂಬಾನಿಯಿಂದ ಶುರುವಾಗಿ ಅದಾನಿಗೆ ಕೊನೆಯಾಗುತ್ತಿದೆ ಎಂದು ವ್ಯಂಗ್ಯವಾಡಿದರು.
ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಈಶ್ವರಪ್ಪ ಇವರೆಲ್ಲ ಹೆಸರಿಗೆ ಮಾತ್ರ ಚೌಕಿದಾರರು. ಯಾರು ದೇಶದ ಮೇಲಿನ ಅಭಿಮಾನದಿಂದ ಮೋದಿಯನ್ನು ವಿರೋಧಿಸುತ್ತಾರೋ, ಯಾರು ಪ್ರಜಾಪ್ರಭುತ್ವದ ಉಳಿವಿಗಾಗಿ ಮೋದಿಯನ್ನು ವಿರೋಧಿಸುತ್ತಾರೋ ಅವರು ನಿಜವಾದ ಚೌಕಿದಾರರು. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವವರು ನಿಜವಾದ ದೇಶದ್ರೋಹಿಗಳು ಎಂದು ಕೆಂಡಾಮಂಡಲವಾದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದೆ, ಅದೇ ರೀತಿ ರಾಹುಲ್ ಗಾಂಧಿ ಅವರು ದೇಶದ 25 ಕೋಟಿ ಜನರನ್ನು ಬಡತನದ ಬೇಗುದಿಯಿಂದ ಹೊರತರಲು ‘ನ್ಯಾಯ’ (ಬಡವರಿಗೆ ಪ್ರತಿ ವರ್ಷ ರೂ.72 ಸಾವಿರ ಸಹಾಯಧನ) ಯೋಜನೆ ಜಾರಿಗೆ ತರಲು ಉದ್ದೇಶಿಸಿದ್ದಾರೆ. ಅವರ ಈ ಉದ್ದೇಶಕ್ಕೆ ಬೆಂಬಲಿಸಲು ಕಾಂಗ್ರೆಸ್ ಗೆ ಮತ ನೀಡಿ. pic.twitter.com/pmPLGVTgs1
— Siddaramaiah (@siddaramaiah) April 3, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ಕೆ ಹೊಸಳ್ಳಿ ಗ್ರಾಮದ ಶಾಲೆ ಎದುರೇ ಕೆರೆ ; ಸಾವಿನ ಸನಿಹ ಮಕ್ಕಳ ಕಲಿಕೆ : ಕಾಂಪೌಂಡ್ ನಿರ್ಮಿಸಲು ಗ್ರಾಮಸ್ಥರ ಮನವಿಗೆ ಕಿವಿಗೊಡದ ಅಧಿಕಾರಿಗಳು
ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆ ಹೊಸಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಡೆಗೋಡೆ (ಕಾಂಪೌಂಡ್) ಕಾಣದೇ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರತಿ ದಿನವೂ ಅಪಾಯದ ನಡುವೆಯೇ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಆಟ-ಪಾಠ ಕಾಣುವಂತಾಗಿದೆ ಎಂಬ ಆರೋಪದ ಜೊತೆಗೆ ಕಾಳಜಿಯ ಒತ್ತಾಯ ಕೇಳಿ ಬರುತ್ತಿದೆ.
ಶಾಲೆಯ ಎದುರೇ ಕೆರೆ ಮತ್ತು ಗ್ರಾಮದ ಸಂಪರ್ಕಿಸುವ ರಸ್ತೆ ಜೊತೆಗೆ ವಿದ್ಯುತ್ ಸಂಪರ್ಕವುಳ್ಳ ಟ್ರ್ಯಾನ್ಫರ್ಮರ್ ಹಾಗೂ ಬೋರ್ವೆಲ್ ಇದೆ. ಅಲ್ಲದೇ ತೆರೆದ ಒಳಚರಂಡಿ ಸಹ ಇದೆ. ಹೀಗೆ ಅಪಾಯಕ್ಕೆ ಕಾದು ಕುಳಿತು ಜೀವ ಬಲಿ ಪಡೆಯುವಂತಹ ಪರಿಸ್ಥಿತಿ ಇದ್ದು, ಶಾಲೆಗೆ ತಡೆಗೋಡೆ ಇಲ್ಲದೇ ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಂತಾಗಿ 20 ರಿಂದ 30 ವಿದ್ಯಾರ್ಥಿಗಳ ಜೀವದ ಪ್ರಶ್ನೆಯಾಗಿ ಉಳಿದಿದೆ.
ಹೀಗೆ ವಿದ್ಯಾರ್ಥಿಗಳು ಆಟದ ವೇಳೆಯಲ್ಲಾಗಲೀ ಅಥವಾ ಶಾಲೆಗೆ ಬರುವಾಗ, ಮನೆಗೆ ಹೋಗುವಾಗ ಈ ಯಾವುದಾದರೂ ಅಪಾಯಕ್ಕೆ ಸಿಲುಕಿದರೆ ಅಮೂಲ್ಯ ಜೀವ ಬಲಿಯಾಗಲಿದೆ. ಅಕ್ಷರ ಜ್ಞಾನ ಪಡೆಯಲು ಬರುವ ವಿದ್ಯಾರ್ಥಿಗಳಿಗೆ ಶಾಲೆಯೇ ಭವಿಷ್ಯ ಕಟ್ಟಿಕೊಡುವ ಬದಲು ಜೀವ ಬಲಿಪಡೆಯುವ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕೆ ಹೊಸದಾಗಿ ನಿರ್ಮಾಣವಾಗಬೇಕಿರುವ ಶಾಲಾ ಕಾಂಪೌಂಡ್ 4 ವರ್ಷಗಳೇ ಕಳೆದರೂ ನಿರ್ಮಾಣ ಕಾಣದಂತಾಗಿದೆ ಎಂಬುದು ಈ ಶಾಲೆಯ ಕೆಲ ಹಳೇ ವಿದ್ಯಾರ್ಥಿಗಳ ಮುತುವರ್ಜಿಯಾಗಿದೆ.
ಈ ಶಾಲೆಗೆ ಹಿಂದೆ ಶಾಲಾ ಕಾಂಪೌಂಡ್ ದುರಸ್ತಿಯಲ್ಲಿದ್ದ ಕಾರಣ ಹೊಸ ಕಾಂಪೌಂಡ್ ನಿರ್ಮಾಣಕ್ಕಾಗಿ 2021-22ರ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ -2005 ರ ಮಹಾತ್ಮ ಗಾಂಧಿ ನರೇಗಾ ಕಾಮಗಾರಿಯಡಿ 4 ಲಕ್ಷ ರೂ. ಮಂಜೂರು ಆಗಿತ್ತು. ಸುಮಾರು ನಾಲ್ಕು ವರ್ಷಗಳೇ ಕಳೆದರೂ ಇನ್ನೂ ಈ ಶಾಲೆಗೆ ಕಾಂಪೌಂಡ್ ಮರೀಚಿಕೆಯಾಗಿದೆ ಎನ್ನುತ್ತಾರೆ ಹಳೇ ವಿದ್ಯಾರ್ಥಿ ಮಂಜುನಾಥ್ ಆರ್.
“ರಸ್ತೆಯ ಸಂಪರ್ಕಕ್ಕೆ ಹತ್ತಿರವಾಗಿದ್ದು, ಮಕ್ಕಳಿಗೆ ಅಪಘಾತ ಆಗುವ ಸಂದರ್ಭ ಇದೆ ಮತ್ತು ಶಾಲೆಯ ಮುಂಭಾಗದಲ್ಲಿ ಗ್ರಾಮದ ಕೆರೆ ಇದ್ದು ಕೆರೆವು ಸಂಪೂರ್ಣವಾಗಿ ನೀರಿನಿಂದ ತುಂಬಿದೆ ಇದರಿಂದ ಮಕ್ಕಳ ಜೀವಕ್ಕೆ ತೊಂದರೆ ಆಗುವ ಸಂಭವ ಸಹ ಇದೆ. ಈ ಎಲ್ಲ ತೊಂದರೆಗಳಿಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ನಿರ್ಲಕ್ಷತನ ಎಂದು ಹೇಳಬಹುದು. ಶಾಸಕರು ಸಹ ಇದರ ಬಗ್ಗೆ ಹೆಚ್ಚಿನ ಗಮನವಹಿಸಬೇಕಾಗಿದೆ.”
|ಹಳೇ ವಿದ್ಯಾರ್ಥಿ ಮಂಜುನಾಥ್
“ಶಾಲೆಯ ಕಾಂಪೌಂಡ್ ನಿರ್ಮಾಣ ವಿಚಾರವಾಗಿ ನಾನೂ ಸಹ ಪಿಡಿಓಗೆ ಸಾಕಷ್ಟು ಮನವಿ ಸಾಕಾಗಿದೆ. ಯಾವುದೇ ಸರಿಯಾದ ಸ್ಪಂದನೆ ಇಲ್ಲ. ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಹಿಂದೆ ಅಡೆ-ತಡೆಯೂ ಉಂಟಾಯಿತು. ಹೀಗಾಗಿ ನರೇಗಾ ಯೋಜನೆಯ ಕಾರ್ಮಿಕರು ನಿರ್ಮಾಣಕ್ಕೆ ಮುಂದಾಗದಂತಾಯಿತು. ಶಾಲೆಗೆ ಕಾಂಪೌಂಡ್ ಇಲ್ಲದೇ ಅಪಾಯದ ವಾತಾವರಣವಿರುವ ಕಾರಣ ಯಾವುದೇ ಪಠ್ಯೇತರ ಚಟುವಟಿಕೆಗಳು ನಡೆಸಲು ಆಗುತ್ತಿಲ್ಲ. ಮಕ್ಕಳ ಜೀವವನ್ನು ನಾನು ಕಾವಲುಗಾರನಾಗಿ ಕಾಯುತ್ತಿದ್ದೇನೆ. ಶಾಲೆಗೆ ಕಾಂಪೌಂಡ್ ಇಲ್ಲದೇ ತೆರೆದ ಪ್ರದೇಶವಾಗಿರುವ ಕಾರಣ ಮದ್ಯ ವ್ಯಸನಿಗಳ ತಾಣವಾಗಿದ್ದು, ದಿನವೂ ಮದ್ಯದ ಬಾಟಲ್, ಪೌಚ್ಗಳ ಸ್ವಚ್ಚಗೊಳಿಸಿ ಶಾಲೆಯೊಳಗೆ ಕರ್ತವ್ಯಕ್ಕೆ ತೆರಳುವಂತಾಗಿದೆ.”
| ಜಯರಾಜ್, ಮುಖ್ಯೋಪಾದ್ಯಾಯರು
“ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ
ನರೇಗಾ ಯೋಜನೆಯಡಿಯ ಈ ಕಾಮಗಾರಿ ಕೈಗೊಳ್ಳಲು ಉದ್ಯೋಗ ಖಾತ್ರಿ ಕಾರ್ಡ್ವುಳ್ಳ ಕಾರ್ಮಿಕರು ಮುಂದಾಗುತ್ತಿಲ್ಲ. ಕಾಂಪೌಂಡ್ ನಿರ್ಮಾಣದಲ್ಲಿ ತಡವಾಗುತ್ತಿರುವುದಾಗಲೀ, ಅಡೆ-ತಡೆ ಬಗ್ಗೆಯಾಗಲೀ ನನಗೆ ಯಾವುದೇ ಮಾಹಿತಿ ಇಲ್ಲ. ಇದೀಗ ಶಾಲೆಯ ಹಳೇ ವಿದ್ಯಾರ್ಥಿಗಳು ಸಹಕಾರ ನೀಡಲು ಮುಂದಾಗಿದ್ದು, ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ ಬರಲಿದೆ”
| ರಶ್ಮಿ, ಪ್ರಭಾರ ಪಿಡಿಓ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಹಾಗೂ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಡಾ.ಕೆ.ಎ.ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಡಾ.ಕೆ.ಎ.ಓಬಳಪ್ಪ ಇವರು ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ಅಧಿಸೂಚನೆ ಹೊರಡಿಸಿರುವ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನಕ್ಕೂ ಹಾಜರಾಗಿರುತ್ತಾರೆ. ಆದರೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಮಾಹಿತಿಹಕ್ಕು ಅಡಿಯಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದೃಢೀಕರಿಸಿ ನೀಡುವಂತೆ ಕೋರಿದಾಗಲೂ ಮಾಹಿತಿ ನೀಡದೆ ನಿರಾಕರಿಸಿರುತ್ತಾರೆ. ಯು.ಜಿ.ಸಿ ನಿಯಮಾವಳಿ ಪ್ರಕಾರ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸದೆ ವಿಷಯವಾರು ಮತ್ತು ಮೀಸಲಾತಿವಾರು 1:10, 1:15 ಅನುಪಾತದವರೆಗೂ ಮನಸ್ಸಿಚ್ಚೆಯಂತೆ ಸಂದರ್ಶನಕ್ಕೆ ಆಹ್ವಾನ ನೀಡಿ, ಕಾನೂನುಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಹೀಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವರೆಗೂ ಈ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ನಿಯಮಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ6 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ6 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ3 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ5 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

