Connect with us

ದಿನದ ಸುದ್ದಿ

ಒಳಮೀಸಲಾತಿ ಜಾರಿಗೆ ಚಾಲನೆ ; ಜಾತಿಗಣತಿ ವರದಿ ವಿರೋಧಕ್ಕೆ ಬೇಡ ಮನ್ನಣೆ : ಮಾಜಿ ಸಚಿವ ಎಚ್.ಆಂಜನೇಯ

Published

on

ಸುದ್ದಿದಿನ,ದಾವಣಗೆರೆ:ಅಸ್ಪೃಶ್ಯತೆ ನೋವು, ಸೌಲಭ್ಯಗಳ ಮರಿಚೀಕೆ, ಕೈಗೆಟುಕದ ಮೀಸಲಾತಿ ಹೀಗೆ ಅನೇಕ ಸಮಸ್ಯೆಗಳ ಸುಳಿಗೆ ಸಿಲುಕಿದ್ದ ಮಾದಿಗ ಮತ್ತು ಸಹೋದರ ಜಾತಿಗಳಿಗೆ ಒಳಮೀಸಲಾತಿ ವರವಾಗಿ ಪರಿಣಮಿಸಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ನಗರದಲ್ಲಿ ಶುಕ್ರವಾರ ಜಿಲ್ಲಾ ವರದಿಗಾರರ ಕೂಟದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಶಕಗಳ ಹೋರಾಟದ ಫಲ ಹಾಗೂ ಎಲ್ಲ ಪಕ್ಷಗಳ ಸರ್ಕಾರಗಳ ಸಹಕಾರ-ಬದ್ಧತೆ ಕಾರಣಕ್ಕೆ ಪರಿಶಿಷ್ಟ ಜಾತಿ ಗುಂಪಿನಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಸಂದರ್ಭ ಎದುರಾಗಿದೆ. ಅದರಲ್ಲೂ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂಬ ಸುಪ್ರೀಂ ಕೋರ್ಟ್ ತೀರ್ಪು ಮಾದಿಗ ಸಮುದಾಯದ ಸಮಗ್ರ ಪ್ರಗತಿಗೆ ರಹದಾರಿ ಆಗಿದೆ ಎಂದರು.

ಈಗ ಕೋರ್ಟ್ ತೀರ್ಪು ಬಳಿಕ ರಾಜ್ಯ ಸರ್ಕಾರದ ಅಂಗಳಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ಅಧಿಕಾರದ ಚೆಂಡು ಬಂದಿದೆ.ಅದರಲ್ಲೂ ಅಹಿಂದ ನಾಯಕ, ಸಾಮಾಜಿಕ ನ್ಯಾಯದ ಹರಿಕಾರವೆಂಬ ಹೆಗ್ಗಳಿಕೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯದಲ್ಲಿ ದಿಟ್ಟ ನಿರ್ಧಾರ ಕೈಗೊಂಡು ಒಳಮೀಸಲಾತಿ ಜಾರಿಗೊಳಿಸಿ, ದಲಿತರ ಕಣ್ಮಣಿ ಆಗುವ ಅವಕಾಶ ನೀಡಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಈ ವಿಷಯದಲ್ಲಿ ಯಾರ ಒತ್ತಡಕ್ಕೂ ಮಣಿಯದೆ ಒಳಮೀಸಲಾತಿ ಜಾರಿಗೊಳಿಸುವ ನಿರ್ಣಯ ಕೈಗೊಂಡಿದ್ದು, ಅದರ ಮೊದಲ ಹೆಜ್ಜೆಯಾಗಿ ದತ್ತಾಂಶ (ಎಂಪಿರಿಕಲ್ ಡಾಟ) ಸಂಗ್ರಹಕ್ಕೆ ಆಯೋಗ ರಚಿಸಿ, ಅಧ್ಯಕ್ಷರನ್ನಾಗಿ ನ್ಯಾ.ನಾಗಮೋಹನ್ ದಾಸ್ ಅವರನ್ನು ನೇಮಕ ಮಾಡಿರುವುದು ಪರಿಶಿಷ್ಟ ಸಮುದಾಯದಲ್ಲಿ ಆಶಾಕಿರಣ ಮೂಡಿಸಿದೆ ಎಂದು ಹೇಳಿದರು.

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಹೋರಾಟದ ಪರಿಣಾಮ ಈ ಹಿಂದೆ ರಚನೆಗೊಂಡಿದ್ದ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಎಸ್ಸಿಗೆ 15ರಿಂದ 17, ಎಸ್ಟಿಗೆ 3ರಿಂದ ಶೇ.7 ಒಟ್ಟು 18ರಿಂದ ಶೇ.24ಕ್ಕೆ ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ ಏರಿಕೆಗೊಂಡಿತು. ಆದ್ದರಿಂದ ಸಾಮಾಜಿಕ, ಜಾತಿ ವ್ಯವಸ್ಥೆ, ಹಿಂದುಳಿದ ವರ್ಗದ ಜನರ ಕುರಿತು ಹೆಚ್ಚು ಕಾಳಜಿ ಹೊಂದಿರುವ ನಾಗಮೋಹನ್ ದಾಸ್ ನೇಮಕ ಅತ್ಯಂತ ಉತ್ತಮ ನಿರ್ಧಾರವಾಗಿದೆ ಎಂದರು.

ರಾಜ್ಯದ ಎಲ್ಲೆಡೆಯೂ ಮಾದಿಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಕೆಲವು ಜಿಲ್ಲೆಗಳಲ್ಲಿ ಮಾದಿಗ ಹಾಗೂ ಛಲವಾದಿ ಸಮುದಾಯದವರು ಆದಿಕರ್ನಾಟಕ ಎಂದು ಗುರುತಿಸಿಕೊಂಡಿದ್ದು, ಗೊಂದಲ ಉಂಟು ಮಾಡಿದೆ. ಆದ್ದರಿಂದ ನಾಗಮೋಹನ್‌ದಾಸ್ ಅವರು ಈ ವಿಷಯದಲ್ಲಿ ಆಳವಾದ ಅಧ್ಯಯನ ನಡೆಸಿ, ಮಾದಿಗ ಮತ್ತು ಅದರ ಉಪ ಜಾತಿಗಳನ್ನು ಗುರುತಿಸುವ ಕೆಲಸ ಮಾಡುವ ಮೂಲಕ ನೊಂದ ಜನರಿಗೆ ನ್ಯಾಯ ಒದಗಿಸುವ ವಿಶ್ವಾಸ ಇದೆ ಎಂದು ಹೇಳಿದರು.

2011ರಲ್ಲಿ ಕೇಂದ್ರ ಸರ್ಕಾರ ನಡೆಸಿದ ಜನಗಣತಿ ಅಂಕಿ ಅಂಶ ಹಾಗೂ ಎಲ್.ಜಿ.ಹಾವನೂರು, ನ್ಯಾ.ಸದಾಶಿವ, ಕಾಂತರಾಜ್ ಆಯೋಗದ ವರದಿಗಳನ್ನು ಅಧ್ಯಯನ ನಡೆಸಿದರೆ ದತ್ತಾಂಶ ಮಾಹಿತಿ ದೊರೆಯಲಿದೆ. ಜತೆಗೆ ಒಳಮೀಸಲಾತಿ ಜಾರಿಗೆ ಇರುವ ಸಣ್ಣಪುಟ್ಟ ಅಡ್ಡಿಗಳನ್ನು ತಕ್ಷಣ ನಿವಾರಿಸಬಹುದು ಎಂದರು.

ಬ್ರಿಟಿಷರ ಕಾಲದಲ್ಲಿ ಆಗಿದ್ದ ಹಾಗೂ 100 ವರ್ಷದ ನಂತರ ಸ್ವತಂತ್ರ ಭಾರತದಲ್ಲಿಯೇ ಮೊದಲ ಬಾರಿಗೆ ಸಿದ್ದರಾಮಯ್ಯ ಸರ್ಕಾರ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ನಿರ್ಧಾರ ಅಂದು ಸಮಾಜ ಕಲ್ಯಾಣ ಸಚಿವನಾಗಿದ್ದ ಸಂದರ್ಭ ನಾನು ಹೆಚ್ಚು ಕಾಳಜಿಯಿಂದ ವರದಿ ತಯಾರಿಸಲಾಗಿತ್ತು. ಇದು ದೇಶದಲ್ಲಿಯೇ ಐತಿಹಾಸಿಕ ನಿರ್ಧಾರವಾಗಿದೆ ಎಂದರು.

ಈ ನಿಟ್ಟಿನಲ್ಲಿ ಕಾಂತರಾಜ್ ಆಯೋಗ ನಡೆಸಿದ ಸಮೀಕ್ಷೆಯಲ್ಲಿ 1 ಲಕ್ಷದ 50 ಸಾವಿರ ಶಿಕ್ಷಕರು ಪಾಲ್ಗೊಂಡಿದ್ದು, ತಹಸೀಲ್ದಾರ್, ಜಿಲ್ಲಾಧಿಕಾರಿಗಳು, ಅನೇಕ ಐಎಎಸ್ ಅಧಿಕಾರಿಗಳು ಮೇಲುಸ್ತುವಾರಿ ವಹಿಸಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ಅಂದಾಜು 180 ಕೋಟಿ ರೂ. ವೆಚ್ಚ ಮಾಡಿ ಅತ್ಯಂತ ವೈಜ್ಞಾನಿಕವಾಗಿ ವರದಿ ಸಿದ್ದಪಡಿಸಿದೆ. ಪ್ರತಿ ಮನೆ ಮನೆಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಸಂಗ್ರಹಿಸಿದೆ.

ಈ ವರದಿ ಎಲ್ಲ ವರ್ಗದಲ್ಲಿನ ನೊಂದ ಜನರಿಗೆ ಸರ್ಕಾರದ ಸೌಲಭ್ಯವನ್ನು ತಲುಪಿಸಲು ಬುನಾದಿ ಆಗಲಿದೆ. ಅದರಲ್ಲೂ ಅನೇಕ ಯೋಜನೆಗಳನ್ನು ಸರ್ಕಾರ ರೂಪಿಸಲು ಸಹಕಾರಿ ಆಗಲಿದೆ. ಮೀಸಲಾತಿ, ಸೌಲಭ್ಯ ಹಂಚಿಕೆ ವೇಳೆ ಯಾವ ಆಧಾರದ ಮೇಲೆ ಇದನ್ನು ಜಾರಿಗೊಳಿಸಿದ್ದೀರಾ, ನಿಮ್ಮಲ್ಲಿ ಏನಾದ್ರೂ ಅಂಕಿ-ಅAಶಗಳು ಇವೆಯೇ ಎಂದು ಪದೇ ಪದೆ ಕೋರ್ಟ್ ಪ್ರಶ್ನೇಗೆ ಕಾಂತರಾಜ್ ಆಯೋಗದ ವರದಿ ಉತ್ತರವಾಗಲಿದೆ ಎಂದರು.

ಕಾಂತರಾಜ್ ಆಯೋಗ ಅತ್ಯಂತ ವೈಜ್ಞಾನಿಕವಾಗಿ ತಯಾರಿಸಿರುವ ವರದಿ ಕುರಿತು ಯಾವುದೇ ರೀತಿ ಟೀಕೆ, ಆರೋಪ, ಬೆದರಿಕೆ, ವಿರೋಧ ವ್ಯಕ್ತವಾದರೂ ಸಿದ್ದರಾಮಯ್ಯ ಜಗ್ಗಬಾರದು. ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿ, ಚರ್ಚಿಸಿ ವರದಿಯನ್ನು ಬಹಿರಂಗಪಡಿಮಂಡಿಸಬೇಕು. ಬಳಿಕ ಸಣ್ಣಪುಟ್ಟ ಲೋಪಗಳಿದ್ದರೆ ಸರಿಪಡಿಸಬಹುದು. ಈ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ನೂರಾರು ವರ್ಷಗಳಿಂದಲೂ ಸಾಮಾಜಿಕ ನ್ಯಾಯ ಕಲ್ಪಿಸುವ ಸಂದರ್ಭ ಆಡಳಿತದ ವಿರುದ್ಧ ಕೆಲವರು ತಿರುಗಿಬಿದ್ದಿದ್ದಾರೆ. ಸಾಹು ಮಹಾರಾಜ್, ನಾಲ್ವಡಿ ಕೃಷ್ಣರಾಜ ಒಡೆಯರ್, ವಿ.ಪಿ.ಸಿಂಗ್, ದೇವರಾಜ ಅರಸು ಸೇರಿ ಅನೇಕರ ಕಾಲದಲ್ಲಿ ನೊಂದ ಜನರಿಗೆ ಮೀಸಲಾತಿ ಕೊಡಲು ಅಡ್ಡಿಗಳು ಎದುರಾಗಿವೆ. ಆದರೂ ಅವರು ಯಾವುದೇ ಒತ್ತಡ, ಪ್ರತಿಭಟನೆಗಳಿಗೆ ಬೆದರದೆ ಹಕ್ಕು ಕಲ್ಪಿಸಿದ್ದಾರೆ ಎಂದರು.

ಅದೇ ಹಾದಿಯಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯ ಸಾಗುತ್ತಾರೆಂಬ ವಿಶ್ವಾಸ ಇದೆ. ಈಗಾಗಲೇ ಹಲವರು ಬಾರಿ ಅವರು ತಮ್ಮ ಮಾತು, ನಡೆ ಮೂಲಕ ದೃಢಪಡಿಸಿದ್ದು, ನಾನೇ ಒಳಮೀಸಲಾತಿ ಜಾರಿಗೊಳಿಸುವುದು ಹಾಗೂ ಯಾವುದೇ ಟೀಕೆ ಬಂದರೂ ಜಾತಿಗಣತಿ ವರದಿ ಜಾರಿ ಸಿದ್ಧವೆಂಬ ಹೇಳಿಕೆ ಎಲ್ಲ ವರ್ಗದ ಜನರಲ್ಲಿ ಅದಮ್ಯ ವಿಶ್ವಾಸ ಮೂಡಿಸಿದೆ. ಜತೆಗೆ ಒಳಮೀಸಲಾತಿ ಜಾರಿಗೆ ನ್ಯಾ.ನಾಗಮೋಹನ್ ದಾಸ್ ಅವರನ್ನು ನೇಮಕ ಮಾಡಿರುವುದು ಅತ್ಯಂತ ಗಟ್ಟಿ ನಿರ್ಧಾರವಾಗಿದೆ ಎಂದರು.

ವಿರೋಧ ಮಾಡುವವರು ಕಾರಣ ಕೊಡಬೇಕು

ಅನಗತ್ಯವಾಗಿ ಟೀಕೆ, ಆರೋಪ ಮಾಡುವುದು ಸರಿಯಲ್ಲ. ಸರ್ಕಾರದ ಅಡಿಯಲ್ಲಿ ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು, ಶಿಕ್ಷಕರು, ಜಿಲ್ಲಾಧಿಕಾರಿಗಳು, ತಹಸೀಲ್ದಾರ್‌ಗಳು ಸೇರಿ ಅನೇಕರು ಕಾರ್ಯನಿರ್ವಹಿಸಿದ್ದಾರೆ. ಅವರ ಶ್ರಮವನ್ನು ಗೌರವಿಸಬೇಕು ಎಂದು ಎಚ್.ಆಂಜನೇಯ ಒತ್ತಾಯಿಸಿದರು.

ವರದಿ ಬಹಿರಂಗಗೊಂಡ ಬಳಿಕ ವಿರೋಧ ಮಾಡುವವರು ತಪ್ಪುಗಳನ್ನು ಗುರುತಿಸಿ ಹೇಳಲಿ. ಇಂತಹ ಪ್ರದೇಶದಲ್ಲಿ ಸರ್ವೇ ಆಗಿಲ್ಲ ಎಂದು ಹೇಳಲಿ. ಆಗ ಅದು ಸತ್ಯವೇ ಅಗಿದ್ದರೇ ಆ ಪ್ರದೇಶದಲ್ಲಿ ಮರು ಸಮೀಕ್ಷೆ ನಡೆಸಲು ಸರ್ಕಾರಕ್ಕೆ ಒತ್ತಡ ಹಾಕೋಣಾ. ಈ ಸಂಬಂಧ ನಾವೆಲ್ಲರೂ ಬೆಂಬಲವಾಗಿ ನಿಲ್ಲುತ್ತೇವೆ ಎಂದರು.

ವರದಿ ಬಹಿರಂಗಕ್ಕೆ ಮುನ್ನವೇ ಅನಗತ್ಯವಾಗಿ ವಿರೋಧ ಮಾಡಿದರೇ ನಾವು ಸಹಿಸುವುದಿಲ್ಲ. ಅತ್ಯಂತ ವೈಜ್ಞಾನಿಕವಾಗಿ ತಯಾರಿಸಿರುವ ವರದಿ ಸ್ವೀಕಾರ, ಮಂಡನೆ, ಬಹಿರಂಗೊಳಿಸುವುದು ತುರ್ತು ಅಗತ್ಯವಿದೆ. ಅದರಲ್ಲೂ ಈ ವಿಷಯದಲ್ಲಿ ಕೋರ್ಟ್ ಕೇಳುತ್ತಿದ್ದ ಅನೇಕ ಪ್ರಶ್ನೇಗಳಿಗೆ ಉತ್ತರ ಕಂಡುಕೊಳ್ಳಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಮಹಾನಗರಪಾಲಿಕೆ ಮಾಜಿ ಸದಸ್ಯ ಎಸ್.ಮಲ್ಲಿಕಾರ್ಜುನ್, ದಲಿತ ಮುಖಂಡ ಹೀರಣ್ಣಯ್ಯ, ಅಂಜಿನಪ್ಪ ಮತ್ತಿತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.

ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

Trending