Connect with us

ಸಿನಿ ಸುದ್ದಿ

EXCLUSIVE INTERVIEW | ‘ಶಬ್ಧ ಗಾರುಡಿಗ ಟಗರು ಮಾಸ್ತಿ’ ಮನದಾಳ

Published

on

” ಚಿಟ್ಟೆ…ಅಂಕಲ್ ನಾ ಹೊಡಿತೀನಿ…ಹೇ ಬಿಡು ಸುಬ್ಬಿ…ಬೆಳಗ್ಗೆ ಹಾಲು ತುಪ್ಪ ಬಿಡೋದ್ರೊಳಗೆ ಅಂಕಲ್ ನಾ ಹೊಡಿತೀನಿ; ಅಂಕಲ್ ನಾ ಹೊಡಿತೀನಿ”. ” ನಿಂದು ಒಂದ್ ಜನ್ಮ, ನಿಮ್ಗೂ ಒಂದ್ ಜನ್ಮದಿನ ಬೇರೆ ಕೇಡು”. ” ಮೀಸೆ, ಗಡ್ಡ, ಬಿಟ್ಟೋರ್ನೆಲ್ಲ ಗಂಡ್ಸು ಅನ್ನೋದಾದ್ರೆ ಕರಡಿ ಎಲ್ಲಕ್ಕಿಂತ ದೊಡ್ ಗಂಡ್ಸು”. ” ನಾವು ಮ್ಯಾಚ್ನಲ್ಲಿ ಸೋಲಲ್ಲ, ಅಕಸ್ಮಾತ್ ಸೋತ್ರೂ..ಮ್ಯಾನ್ ಆಫ್ ದಿ ಮ್ಯಾಚ್ ನಮ್ದೆ”. ಸುಕ್ಕಾ ಸೂರಿಯವರ ‘ಟಗರು’ ಸಿನೆಮಾದ ಇಂಥ ಸಂಭಾಷಣೆಯ ಜಂಗಮ ಭಾವ, ನೋಡುಗನ ಎದೆಯಲ್ಲಿ ಸ್ಥಾವರಗೊಳ್ಳುವಂತೆ ಮಾಡಿ, ತಮ್ಮ ರೋಚಕ, ರಂಜನೀಯ, ಕಿಲಾಡಿತನದ ಮಾತುಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದಾರೆ ಸಂಭಾಷಣಾಕಾರ ಮಂಜು ಮಾಸ್ತಿ. ಇವರು ಮಾಸ್ತಿ ಎಂತಲೇ ಚಂದನವನದಲ್ಲಿ ಚಿರಪರಿಚಿತ.

‘ಶಬ್ದದೊಳಗೆ ನಿಶ್ಯಬ್ದ ; ನಿಶ್ಯಬ್ದದೊಳಗೆ ಶಬ್ದ’ ಹುಡುಕುತ್ತಾ..ಕತೆಗಾರನಾಗಿ, ಸಂಭಾಷಣಾಕಾರನಾಗಿ, ನಟನಾಗಿ, ಒಬ್ಬ ಒಳ್ಳೆಯ ಓದುಗನಾಗಿ ಎಲ್ಲರ ಚಿತ್ತ ತನ್ನತ್ತ ಹೇಗೆ ಸೆಳೆಯ ಬೇಕು ಎಂಬ ಚಾಲಾಕಿತನದ ಶಬ್ದಮಾಂತ್ರಿಕ ಮಾಸ್ತಿ ಅವರು, ನಿಜಕ್ಕೂ ಒಬ್ಬ ಬರಹಗಾರ ತಮ್ಮ ಬರವಣಿಗೆಯನ್ನ ಪಾಲಿಶ್ ಮಾಡಿಕೊಳ್ಳ ಬೇಕಾದಾಗ, ತಾನು ಬದುಕುತ್ತಿರುವ ಸಮಾಜದೊಟ್ಟಿಗೆ ಹೇಗೆಲ್ಲಾ ಸಂಪರ್ಕವಿಟ್ಟುಕೊಳ್ಳಬೇಕು, ದೈನಂದಿನ ಜೀವನದ ಸಂಗತಿಗಳನ್ನು ತನ್ನ ಕುತೂಹಲದ ಕಣ್ಣಿನ್ನಿಂದ ಹೇಗೆಲ್ಲಾ ನೋಡ ಬಹುದು ಎಂಬುದಕ್ಕೆ ಟಗರು ಸಿನೆಮಾದ ಸಂಭಾಷಣೆಯೇ ಸಾಕ್ಷಿ. ಶಬ್ದಗಾರುಡಿಗ ನಂತೆ ಕಾಣುವ ಈ ಮಾಸ್ತಿ ನಿಜಕ್ಕೂ ಕನ್ನಡದ ಆಸ್ತಿಯೇ. ಏಕೆಂದರೆ ಇವರೊಳಗಿರುವ ಒಬ್ಬ ಸಹೃದಯನೇ ಇವರನ್ನ ಬೆಳೆಸಿದೆ, ಮುಂದೆಯೂ ಬೆಳೆಸುತ್ತದೆ ಎಂಬುದು ನಮ್ಮ ಮನದ‌ ಸೂಕ್ಷ ಗ್ರಹಿಸಿದ್ದು. ಇಂತಹ ಒಬ್ಬ ‘ಸೂಕ್ಷ್ಮಜ್ಞ’ನೊಂದಿಗೆ ಸುದ್ದಿದಿನ ತನ್ನ ಮಾತು-ಕತೆಯಲ್ಲಿ ಮಾತನಾಡಿಸಿದಾಗ ಅವರು ಎದೆ ತುಂಬಿ ಮಾತನಾಡಿದ್ದಾರೆ‌. ಅದರ ಅಕ್ಷರ ರೂಪ‌ ಇಲ್ಲಿದೆ.

ಟಗರು ಮಾಸ್ತಿ ಮನದಾಳ

ಬಾಲ್ಯದಿಂದಲೂ ಸಾಹಿತ್ಯದ ಓದು, ಬರವಣಿಗೆಯಲ್ಲಿ ತೊಡಗಿಸಿಕೊಂಡು,‌ಬರವಣಿಗೆಯಲ್ಲಿಯೇ ಬದುಕು ಕಾಣಬೇಕು ಎಂಬ ಕನಸಿದ್ದರೂ ಅದು ಅಸಾಧ್ಯವೇನೋ ಎಂಬ ಅಪನಂಬಿಕೆ ನನ್ನನ್ನು ಕಾಡಿದ್ದು ಸತ್ಯ. ಆದರೆ ಸಿನೆಮಾರಂಗಕ್ಕೆ ಬಂದಮೇಲೆ ಬರಹಗಾರನಿಗಿರುವ ಶಕ್ತಿ ಎಂಥದ್ದು ಅನ್ನೋದು ನನಗೆ ಮನವರಿಕೆಯಾಗಿದೆ. ಅದರಲ್ಲೂ ಸೂರಿ ಸರ್ ‘ಟಗರು’ ಸಿನೆಮಾ ನನ್ನನ್ನು ಈ ಮಟ್ಟಿಗೆ ಗುರುತಿಸುವಂತೆ ಮಾಡಿದ ಮೇಲಂತೂ ಬರವಣಿಗೆಯೇ ನನ್ನ ಜೀವಾಳ,ಜೀವನ ಆಗಿಬಿಟ್ಟಿದೆ.

ಅಂದಹಾಗೆ ನಾನು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕೆ.ಉಪ್ಪಾರಹಳ್ಳಿ ಎಂಬ ಗ್ರಾಮದವನು. ನಮ್ಮದು ಮಿಡಲ್ ಕ್ಲಾಸ್ ಫ್ಯಾಮಿಲಿ. ತುಂಬಾ ಕಷ್ಟಗಳ ಜೊತೆಗೆ ಬೆಳೆದವನು. ಆ ಕಷ್ಟಗಳನ್ನೇ ನನ್ನ ಜೀವನೋತ್ಸಾಹವಾಗಿ ಪ್ರೀತಿಯಿಂದ ಬದುಕುತ್ತಾ ಬಂದೆ. ನನ್ನ ಕಡು ಕಷ್ಟಗಳೇ ನನ್ನ ಒಬ್ಬ ಬರಹಗಾರನಾಗಿ ಮಾಡಿದವು ಅಂದ್ರೆ ತಪ್ಪಾಗಲಾರದು. ನನ್ನ ಆ ದಿನಗಳ ‘ನೆನಪಿನ ಬುತ್ತಿ’ ಯನ್ನೇ ಬರವಣಿಯ ಮೂಲವಾಗಿಸಿಕೊಂಡು ಬರೆಯಲು ಹೊರಟೆ. ಪ್ರೈಮರಿ ಶಾಲೆಯಿಂದಲೂ ನಾನು ಬಾಲಮಿತ್ರ, ಚಂದಮಾಮ, ಕಾಮಿಕ್ಸ್ ಬುಕ್, ಜನಪದ ಕತೆಗಳು, ಪಂಚತಂತ್ರ ಕತೆಗಳನ್ನು ನಾನು ಅಚ್ಚುಕಟ್ಟಾಗಿ ಓದಿಕೊಂಡು ಬಂದೆ. ಆ ಕತೆಗಳ ಮೂಲ ಆಶಯ ‘ನೀತಿ’ ಹೇಳುವುದೇ ಆಗಿದ್ದರಿಂದ ಅವು ನನ್ನನ್ನು ಆವಾಹಿಸಿಕೊಂಡು ಬಿಟ್ಟವು. ಹಾಗೇ ಶಾಲೆಯಲ್ಲಿ ಮೇಷ್ಟ್ರುಗಳು ಹೇಳುತ್ತಿದ್ದ ಕತೆಗಳು ನನ್ನನ್ನ ತುಂಬಾ ಕಾಡಿದವು. ನಮ್ಮ ಮೇಷ್ಟುಗಳು ತುಂಬಾ ವಿಶಿಷ್ಟವಾಗಿ ಕತೆಹೇಳುವ ಪರಿಯೇ ನನ್ನ ಕುತೂಹಲವನ್ನು ಕೆರಳಿಸುತ್ತಿದ್ದವು.ನಾನು ಕತೆಗಳನ್ನು ಮಂತ್ರ ಮುಗ್ಧನಾಗಿ ಕೇಳುತ್ತಿದ್ದೆ.

ನಮ್ಮ ಮನೆಯಲ್ಲಿ‌ ಆಗಾಗ ನಮಗೆ ಕಾಸುಕೊಟ್ಟು ಟೆಂಟ್ ಗಳಲ್ಲಿ‌ ಸಿನೆಮಾ ನೋಡಲು ಕಳುಹಿಸುತ್ತಿದ್ದರು. ಟೆಂಟ್ ಒಳಗೆ ಕೂತು ನೋಡುವ ಸಿನೆಮಾಗಳು ನನಗೆ ಮಾಯಾಲೋಕದಂತೆ ಭಾಸವಾಗುತ್ತಿತ್ತು. ಸಿನೆಮಾ ನೋಡಿ ಬಂದಾಗಿನ ಖುಷಿ ಹೇಳಲು ನನಗೆ ಪದಗಳೇ ಸಾಲುತ್ತಿರಲಿಲ್ಲ. ಅಷ್ಟೊಂದು ಆಳವಾಗಿ ಇಳಿದು ಹೋಗಿಬಿಡ್ತಾಇದ್ದೆ ಸಿನೆಮಾಗಳನ್ನ‌ ನೋಡಿ. ಈಗ ವಿದೇಶಕ್ಕೆ ಹೋಗಿಬಂದಾಗ ಆಗುವಂತಹ ಖುಷಿ , ಆಗ ಸಿನೆಮಾ ನೋಡಿದಾಗ ಆಗ್ತಾ ಇತ್ತು. ಸಿನೆಮಾ ಪರದೆಯೊಳಗೆ ಕಾಣುವ ದೃಶ್ಯಗಳು ನನ್ನನ್ನ ಮೈಮರೆಸುತ್ತಿದ್ದವು. ಆಗ ಅಂಥಹ ಸಿನೆಮಾಗಳು ಬರ್ತಾ ಇದ್ವು ಬಿಡಿ (ಈಗಲೂ ಬರ್ತಾ ಇದಾವೆ) . ಹೀಗೆ ಸಿನೆಮಾಗಳು ನನ್ನ ಕಾಡಿದ್ದರಿಂದ ಸಿನೆಮಾವನ್ನ ಆರಾಧಿಸುತ್ತಾ ಬಂದೆ. ಕೆಲವು ನನ್ನ ಸ್ನೇಹಿತರು ಸಿನೆಮಾ‌ ನೋಡಿ ಬಂದು ಅಭಿನಯದ ಮೂಲಕ ರೋಚಕವಾಗಿ ಸಿನೆಮಾ‌ ಕತೆ ಹೇಳ್ತಾ ಇದ್ರು, ಅವರು ಹೇಳೋ ಕತೆಗಳನ್ನ ತದೇಕ ಚಿತ್ತದಿಂದ ಕೇಳ್ತಾ, ನೋಡ್ತಾ ಇದ್ದೆ. ಈ ಸಂಗತಿಗಳೂ ಕೂಡಾ ನನ್ನ ಸಿನೆಮಾ ಮೇಲಿನ ಪ್ರೀತಿಯನ್ನ ಹೆಚ್ಚಿಸ್ತಾ ಬಂದ್ವು. ಜೊತೆಗೆ ಅಪರೂಪಕ್ಕೊಮ್ಮೆ ನನಗೆ ಮನೇಲಿ ಹೊಸ ಪುಸ್ತಕ ಕೊಡಿಸ್ತಾ ಇದ್ರು, ನಾನು ಆ ಪುಸ್ತಕದ ಪುಟಗಳನ್ನ ತಿರುವಿಹಾಕಿ ಹಾಳೆಗಳ ವಾಸನೆಯನ್ನ ಗ್ರಹಿಸ್ತಾ ಇದ್ದೆ. ಬಹುಶಃ ಹಾಳೆಗಳ ಅಕ್ಷರದ ಇಂಕು ಹಾಗೂ ಹಾಳೆಗಳ ಪರಿಮಳವೇ ಕತೆಗಳನ್ನ ಓದಿ ಆಸ್ವಾದಿಸುವ ಹುಚ್ಚು ಬಿಡಿಸಿ ಬಿಟ್ಟವು. ಒಟ್ಟಾರೆ ಕನ್ನಡ ಮೀಡಿಯಂ, ಸರ್ಕಾರಿ ಶಾಲೆಗಳೇ ನನ್ನ ಬರವಣಿಗೆಯ ಶಕ್ತಿ ಎಂದರೆ ಅತಿಶಯೋಕ್ತಿಯಾಗಲಾರದು.

ನಮ್ಮ ಊರಿಗೆ ತೆಲುಗು ಭಾಷೆಯ ಪ್ರಭಾವ ಹೆಚ್ಚು, ನಾನು ಅದರ ಪ್ರಭಾವಕ್ಕೆ ಬಲಿಯಾಗಲಿಲ್ಲ. ತೆಲುಗು ಸಿನೆಮಾಗಳು ತುಂಬಾ ಪ್ರದರ್ಶನ ಕಾಣ್ತಾಇದ್ವು ಆಗ. ತೆಲುಗಿನ ಹಲವು ಸಿನೆಮಾಗಳು ಕ್ರೈಂ ಮತ್ತು ಸೆಕ್ಸ್ ಅನ್ನ ವೈಭವೀಕರಿಸಿ ಸಹಜತೆಯೇ ಕಾಣೆಯಾಗಿದ್ದುದರಿಂದ ನಾನು ಅಂಥಹ ಸಿನೆಮಾಗಳನ್ನು ವಿರೋಧಿಸುತ್ತಾ ಬಂದೆ. ತೆಲುಗಿನ ಅಂತಹ ಸಿನೆಮಾಗಳು ಕನ್ನಡ ಸಿನೆಮಾಗಳ‌ ಮೇಲೂ ಪ್ರಭಾವ ಬೀರಿದವು. ಆದರೆ ಅವ್ಯಾವೂ ಅಷ್ಟು ಹಿಟ್ ಆಗಲಿಲ್ಲ, ಜನರು ಅಂಥಹ ಸಿನೆಮಾಗಳನ್ನ ತಿರಸ್ಕರಿಸಿದ್ರೂ ಕೂಡಾ. ಏಕಂದ್ರೆ ಅವು ನಮ್ಮ ಕನ್ನಡದ ನೆಲಕ್ಕೆ ಒಗ್ಗುವಂತವಲ್ಲ. ನಮ್ಮ ನೆಲದಗುಣವಿರುವ ಕನ್ನಡ ಸಿನೆಮಾಗಳು ಅಮ್ಮ ಮಾಡಿದ ಅಡುಗೆ ತರ, ತುಂಬಾ ರುಚಿ ಹಾಗೂ ದೇಹಕ್ಕೆ ಒಳ್ಳೆಯದು.ಹಾಗಾಗಿ ಕನ್ನಡ ಸಿನೆಮಾರಂಗಕ್ಕೆ ಹೇಗಾದ್ರೂ ಬರಬೇಕು ಅನ್ನೋತುಡಿತ ನನ್ನಲ್ಲಿ ಹೆಚ್ಚಾಗ್ತಾ ಬಂತು. ನನಗೆ ಸಿನೆಮಾದ ಹಿನ್ನೆಲೆಯಿಲ್ಲದಿದ್ದರೂ ನನಗೆ ಸಿನೆಮಾ ಮೇಲಿರುವ ಪ್ರೀತಿಯೇ ನನ್ನ ಸಿನೆಮಾ ಹಿನ್ನೆಲೆ.

ನನ್ನ ಸಿನೆಮಾ ಎಂಟ್ರಿ

ಸಿನೆಮಾದಲ್ಲಿ ಹೇಗಾದರೂ ಕೆಲಸ ಮಾಡ್ಬೇಕು ಅನ್ನೋ ಹಂಬಲದಿಂದ ತುಂಬಾ ಸೈಕಲ್ ಹೊಡೆದೆ. ಆದ್ರೆ ಯಾವ ಅವಕಾಶಗಳೂ ನನಗೆ ದಕ್ಕಲಿಲ್ಲ. ಆದ್ರೆ ಒಮ್ಮೆ ನಮ್ಮ ಮನೆಯ ಹತ್ತಿರದಲ್ಲಿ ತುಷಾರ್ ರಂಗನಾಥ್ (ಗುಲಾಮ, ಕಂಠೀರವ ಸಿನೆಮಾ ನಿರ್ದೇಶಕ) ಸಿನೆಮಾದಲ್ಲಿ ಕೆಲಸ ಮಾಡ್ತಾರೆ ಅಂತ ಗೊತ್ತಿತ್ತು. ಅವರನ್ನ ಹೇಗೋ ಕಷ್ಟಪಟ್ಟು ಪರಿಚಯ ಮಾಡ್ಕೊಂಡೆ. ಈ ಸಮಯದಲ್ಲಿ ಅವರು ಸಾಧುಕೂಕಿಲಾ ನಿರ್ದೇಶನದ, ದರ್ಶನ್ ಅಭಿನಯದ ‘ಸುಂಟರಗಾಳಿ’ ಸಿನೆಮಾಗೆ ಸಹ ನಿರ್ದೇಶಕ ನಾಗಿ ಕೆಲಸ ಮಾಡ್ತಿದ್ರು. ಈ ಸಿನೆಮಾ ‘ಚಿತ್ರಕತೆ’ ಯ ಬಗ್ಗೆ ಚರ್ಚೆ ಮಾಡೋದಿಕ್ಕಾಗಿ ನನ್ನ ಕರ್ಕೊಂಡ್ ಹೋದ್ರು. ಸುಂಟರಗಾಳಿ ಸಿನೆಮಾದಲ್ಲಿ ದರ್ಶನ್ ಅವರು ಹೇಗೆ ಎಂಟ್ರಿ ಆಗ್ಬೇಕು ಅನ್ನೋ ದೃಶ್ಯದ ಬಗ್ಗೆ ಚರ್ಚೆ ನಡೀತಾ ಇತ್ತು, ಆಗ ನನಗೆ ತೋಚಿದ, ಪಕ್ಕಾ ಮಾಸ್ ಆಗಿ ಇರೋ ಒಂದ್ ದೃಶ್ಯಾನ ವಿವರಿಸ್ತಾ ಹೋದೇ, ಆಗ ಎಲ್ರೂ ಖುಷಿಯಿಂದ ಒಪ್ಪೊಂಡ್ರು. ಅವತ್ತೇ ನನ್ನ ಸಿನೆಮಾದ ಎಂಟ್ರಿಯೂ ಆಗೋಯ್ತು. ತುಂಬಾನೆ ಖುಷಿಕೊಡೋ ಸಂಗತಿ ನನಗದು.

ಸೂರಿ – ಭಟ್ಟರ ಸಹವಾಸ

ಸುಂಟರಗಾಳಿ‌ ಸಿನೆಮಾಗೆ ಸೂರಿ ಸರ್ ಕೂಡ ಸಹ ನಿರ್ದೇಶಕರಾಗಿ ಕೆಲಸ ಮಾಡ್ತಿದ್ರು. ತುಷಾರ್ ರಂಗನಾಥ್ ಕಡೆಯಿಂದ ಅವರ ಪರಿಚಯವಾಯ್ತು. ನಂತರ ಅದೇ ಸಮಯದಲ್ಲಿ ಸೂರಿ ಸರ್ ಹಾಗೂ ಯೋಗರಾಜ್ ಭಟ್ ಸರ್ ಬಿ.ಸುರೇಶ್ ಅವರ ನಿರ್ದೇಶನದ ‘ಸಾಧನೆ’ ಎಂಬ ಧಾರಾವಾಹಿಯಲ್ಲಿ ಕೆಲಸ ಮಾಡ್ತಿದ್ರು. ಸಾಧನೆ ಧಾರಾವಾಹಿಯ ಸೆಟ್ ಗೆ ನನ್ನನ್ನೂ ಕೂಡ ಕರೆದುಕೊಂಡು ಹೋಗ್ತಾದ್ರು ತುಷಾರ್ ರಂಗನಾಥ್. ಆಗ ಅವರ ಜೊತೆ ಸಿನೆಮಾಗೆ ಸಂಭಂದಿಸಿದ ವಿಷಯಗಳನ್ನ ಚರ್ಚೆ ಮಾಡ್ತಾ ಅವರೊಳಗೆ ನನ್ನೊಬ್ಬನನ್ನಾಗಿ ಮಾಡ್ಕೊಂಡ್ರು ಸೂರಿ ಸರ್ ಹಾಗೂ ಭಟ್ ಸರ್. ಹಾಗೇ ಇನ್ನೊಂದ್ ವಿಷಯ ಹೇಳಲೇ ಬೇಕು ನಾನು. ಮುಂಗಾರು ಮಳೆ ಸಿನೆಮಾ ಮಾಡಿ‌ ಭಟ್ ಸರ್ ಒಂದ್ ಟ್ರೆಂಡ್ ಸೆಟ್ ಮಾಡಿದ್ರು,ಹಾಗೆ ಸಿನೆಮಾ ಒಳ್ಳೆಯ ಲಾಭವನ್ನ ನಿರ್ಮಾಪಕರಿಗೆ ತಂದು ಕೊಡ್ತು. ಆಗ ಇನ್ಫೋಸಿಸ್ ನ ನಾರಾಯಾಣ ಮೂರ್ತಿಯವರು ಭಟ್ ಸರ್ ಅವರನ್ನ ಕರೆಸಿ ಹೇಳಿದ್ರಂತೆ, ” ಕನ್ನಡ‌‌ದಲ್ಲಿ‌ ಇಂತಹ ಒಂದು ಒಳ್ಳೆಯ ಸಿನೆಮಾ ಕೋಟಿಗಟ್ಟಲೆ ಹಣ ಮಾಡೋದು ಅಂದ್ರೆ ಸುಮ್ನೆ ಮಾತಲ್ಲ, ನಾವು ಏನೆಲ್ಲಾ ಮಾಡ್ತೀವಿ‌, ಅದ್ರೆ ಒಂದ್ ಸಿನೆಮಾ ಮಾಡಿ ನೀವು ಎಲ್ಲರೀತಿಯಿಂದಲೂ ಯಶಸ್ಸುಗಳಿಸಿದರ ಬಗ್ಗೆ ತುಂಬಾ ಹೆಮ್ಮೆ‌ಯಿಂದ ಹೇಳಿದ್ರಂತೆ, ಅಂತಹ ಭಟ್ ಸರ್ ಗೆ ನಾನು ಕತೆ ಹೇಳಿದ್ದು ತುಂಬಾ ಖುಷಿಕೊಡ್ತು. ಅದೇ ಕನ್ನಡಕ್ಕಿರುವ ತಾಕತ್ತು ಅಂತಾನೂ ನಂಗೆ ಅರಿವಾಯ್ತು.

ಕತೆಗಾರನಾಗಿ

ನಾನು ಒಂದಷ್ಟು ಕತೆಗಳನ್ನ ಬರೆದೆ. ಅದರಲ್ಲಿ‌ ಬಾಲ್ ಪೆನ್ ಅನ್ನೋ ಕತೆಯನ್ನ ಪತ್ರಕರ್ತ ರವಿಬೆಳೆಗೆರೆಯವರು ಕೇಳಿ ತುಂಬಾ ಇಷ್ಟ ಪಟ್ರು. ನಂತರ ಅವರ ಮಗಳು, ನಟ ಶ್ರೀನಗರ‌ ಕಿಟ್ಟಿ ಅವರ ಪತ್ನಿ ಭಾವನಾ ಬೆಳಗೆರೆಯವರು ನಿರ್ಮಾಣ ಮಾಡಿದ್ರು. ಸಿನೆಮಾಗೆ ಒಳ್ಳೆಯ ಹೆಸರೂ ಬಂತು. ಹಾಗೆ ತುಂಬಾ ಕತೆಗಳನ್ನ ಬರೆದೆ. ಸಿನೆಮಾಗೆ ಆಗದೇ ಇರೋ‌ ಕತೆಗಳು ಇವೆ. ಅವನ್ನೆಲ್ಲಾ ಸೇರಿಸಿ ಒಂದು ಪುಸ್ತಕ ಮಾಡುವ ಯೋಚನೆಯೂ ಇದೆ. ಸಿನೆಮಾ ಬರವಣಿಗೆಯಲ್ಲಿ ಸಧ್ಯಕ್ಕೆ ಹೆಚ್ಚು ತೊಡಗಿಸಿಕೊಂಡಿರೋದ್ರಿಂದ ಪುಸ್ತಕ ಬರೋದು ಸ್ವಲ್ಪ‌ ತಡವಾಗಬಹುದು.

ಸಂಭಾಷಣಾಕಾರನಾಗಿ

ಸೂರಿ ಸರ್ ನಿರ್ದೇಶನದ ಜಂಗ್ಲಿ, ಜಾಕಿ, ಕೆಂಡಸಂಪಿಗೆ ಸಿನೆಮಾಗಳ‌ ಕತೆ, ಚಿತ್ರಕತೆ ಸಂಭಾಷಣೆಯ ಚರ್ಚೆಗಳಲ್ಲಿ ನನ್ನನ್ನೂ ತೊಡಗಿಸಿಕೊಂಡರು. ನಂತರ ಕಡ್ಡಿ ಪುಡಿ ಸಿನೆಮಾಗೆ ನಾನು ಮತ್ತು ಸೂರಿ ಸರ್ ಸಂಭಾಷಣೆ ಬರೆದ್ವಿ. ಕಡ್ಡಿಪುಡಿ ಸಿನೆಮಾದಲ್ಲಿನ ಸಂಭಾಷಣೆ ಸೂರಿ ಸರ್ ಕೈಚಳಕವೇ ಹೆಚ್ಚು, ಆದ್ರೂ ನನಗೂ ಕ್ರೆಡಿಟ್ ಕೊಟ್ರು ಸೂರಿ ಸರ್. ನಂತರ, ಕಾಲೇಜ್ ಕುಮಾರ್ ಎಂಬ ಸಿನೆಮಾಗೆ ಸಂಭಾಷಣೆ ಬರೆದೆ. ನಂತರ ‘ಟಗರು’ ಸಿನೆಮಾಗೆ ಸಂಭಾಷಣೆ ಬರೆಯುವ ಜವಾಬ್ದಾರಿಯನ್ನ ಕೊಟ್ರು ಸೂರಿ ಸರ್. ಅವರು ನನ್ನ ಮೇಲಿಟ್ಟು ಹೊರಿಸಿದ ಜವಾಬ್ದಾರಿಯನ್ನ ಸ್ಬಲ್ಪ ಮಟ್ಟಿಗೆ ನಿಭಾಯಿಸಿದ್ದೇನೆ ಅನ್ಸುತ್ತೆ. ಯಾಕಂದ್ರೆ ಸೂರಿ ಸರ್ ನನ್ನಿಂದ ಅಷ್ಟು ಕೆಲಸ ತೆಗೆಸಿದ್ರು ಅಂತ ಹೇಳೋಕೆ ನಂಗೆ ಹೆಮ್ಮೆ ಆಗುತ್ತೆ. ಹಾಗೇ ಸೂರಿ ಸರ್ ಮುಂದಿನ ಸಿನೆಮಾ ,’ಪಾಪ್ ಕಾರ್ನ್ ಮಂಕಿ ಟೈಗರ್’ ಸಿನೆಮಾಗೆ ಸಂಭಾಷಣೆ ಬರೆಯೋಕೆ ಮತ್ತೆ ಅವಕಾಶ ಮಾಡಿಕೊಟ್ಟಿದ್ದಾರೆ. ಟಗರು ಸಿನೆಮಾ ನೋಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗುತ್ತಿರುವ ‘ಭೈರವ ಗೀತಾ’ ಸಿನೆಮಾಗೆ ಸಂಭಾಷಣೆ (ಕನ್ನಡ ಅವತರಿಣಿಕೆಗೆ) ಬರಯೋದಿಕ್ಕೆ ಅವಕಾಶ ಸಿಕ್ಕಿದೆ. ಅವಕಾಶ ಸಿಕ್ಕಿದ್ದರಲ್ಲಿ ನಟ ಧನಂಜಯ್ ಪಾತ್ರವೂ ದೊಡ್ಡದಿದೆ. ಧನಂಜಯ್ ಗೆ ಒಂದು ಸಲಾಮ್ ಹೇಳಲು ಈ ಸಮಯದಲ್ಲಿ‌ ಇಷ್ಟ ಪಡ್ತೇನೆ. ಇತ್ತೀಚಿಗೆ ಬಿಡುಗಡೆಯಾದ ‘ ಕಟ್ಟುಕತೆ’ ಸಿನೆಮಾಗೂ ಸಂಭಾಷಣೆ ಬರೆದಿದ್ದೇನೆ. ಹಾಗೆ ನೀನಾಸಂ‌ ಸತೀಶ್ ಅಭಿನಯದ ಅಯ್ಯೋಗ್ಯ ಸಿನೆಮಾ, ದುನಿಯಾ ವಿಜಯ್ ಅವರ ಕುಸ್ತಿ, ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ತಂಗಿ ಮಗನ ‘ಅಖಿಲ್’ ಎಂಬ ಸಿನೆಮಾಕ್ಕೆ ಸಂಭಾಷಣೆ ಬರೆದಿದ್ದೇನೆ. ಸಿನೆಮಾ‌‌ ನಿರ್ದೇಶನ ಮಾಡೋ ಆಸೆ ಇದೆ ಬರವಣಿಗೆಯ ಒತ್ತಡದಲ್ಲಿ ಅದು ಸಾಧ್ಯ ಆಗ್ತಾ ಇಲ್ಲ. ಮುಂದೊಂದು ದಿನ ನಿರ್ದೇಶಕನಾಗಿ ನಿಮ್ಮ ಮುಂದೆ ಬರ್ತೇನೆ.

ನಟನಾಗಿ

ನಾನು ಕೆಲಸ ಮಾಡಿರೋ‌ ಸಿನೆಮಾಗಳಲ್ಲೇ ಚಿಕ್ಕ- ಪುಟ್ಟ ಪಾತ್ರಗಳನ್ನ ಮಾಡ್ತಾ ಬಂದಿದೀನಿ. ಕಡ್ಡಿಪುಡಿ, ಕೆಂಡಸಂಪಿಗೆ, ಹಾಗೇ ಯೋಗರಾಜ್ ಭಟ್ ನಿರ್ದೇಶನ ‘ಪಂಚತಂತ್ರ’ ಸಿನೆಮಾದಲ್ಲೂ ಅಭಿನಯಿಸಿದ್ದೇನೆ.

ನನ್ನಿಷ್ಟದ‌ ಸಿನೆಮಾ-ನಿರ್ದೇಶಕ-ಸಂಭಾಷಣಾಕಾರ

ನನಗೆ ವೈಯಕ್ತಿಕವಾಗಿ ಇಷ್ಟವಾಗುವ ಸಿನೆಮಾಗಳು ತುಂಬಾ ಇದಾವೆ. ಅದ್ರಲ್ಲಿ ಇತ್ತೀಚೆಗೆ ಕೆಲವು ವರ್ಷಗಳ ಹಿಂದೆ ತೆರೆಕಂಡು ಜನಮಾನಸದಲ್ಲಿ ಉಳಿದ, ಎದ್ದೇಳು ಮಂಜುನಾಥ ಹಾಗೂ ತಿಥಿ ಸಿನೆಮಾ. ನನಗೆ ಕೆಲಸ ಕಲಿಸಿಕೊಟ್ಟ ಸೂರಿ ಸರ್ ಹಾಗೂ ಯೋಗರಾಜ್ ಭಟ್ ಸರ್, ಅವರಿಬ್ಬರೂ ನನ್ನ ಗುರು ಸಮಾನರು. ಸೂರಿ ಸರ್ ಇಂದ ಶಿಸ್ತು, ಭಟ್ ಸರ್ ಇಂದ ಶ್ರದ್ಧೆ ಕಲಿತೆ. ಹಾಗೇ ತೆಲುಗು‌ ಸಿನೆಮಾ‌ ಸಂಭಾಷಣಾಕಾರರಾದ ತ್ರಿವಿಕ್ರಮ್ ಶ್ರೀನಿವಾಸ್ ಮತ್ತು ಕನ್ನಡದಲ್ಲಿ‌ ಪ್ರಶಾಂತ್ ರಾಜಪ್ಪ ನನಗೆ ತುಂಬಾ ಕಾಡಿರೋ ಸಂಭಾಷಣಾಕಾರರು.

ಕನ್ನಡದಲ್ಲಿ‌ ತುಂಬಾ ಒಳ್ಳೆಯ ಕತೆಗಳು ಇದಾವೆ. ಕತೆಗಾರರೂ ಇದ್ದಾರೆ. ಅವರನ್ನ ಗುರುತಿಸಿ ಒಂದು ಅವಕಾಶಮಾಡಿಕೊಟ್ಟರೆ ನಮ್ಮ ಕನ್ನಡ ಸಿನೆಮಾರಂಗ ಇನ್ನೂ ಎತ್ತರಕ್ಕೆ ಬೆಳೆಯುವುದರಲ್ಲಿ ಸಂಶಯವೇ ಇಲ್ಲ.

ಕನ್ನಡವೇ ಸತ್ಯ ; ಕನ್ನಡವೇ ನಿತ್ಯ
ಇಂತಿ‌ ನಿಮ್ಮ ಮಾಸ್ತಿ

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ1 day ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ2 days ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ2 days ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ3 days ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

ದಿನದ ಸುದ್ದಿ4 days ago

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...

ದಿನದ ಸುದ್ದಿ5 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ5 days ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ7 days ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ1 week ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

Trending