Connect with us

ಸಿನಿ ಸುದ್ದಿ

EXCLUSIVE INTERVIEW | ‘ಶಬ್ಧ ಗಾರುಡಿಗ ಟಗರು ಮಾಸ್ತಿ’ ಮನದಾಳ

Published

on

” ಚಿಟ್ಟೆ…ಅಂಕಲ್ ನಾ ಹೊಡಿತೀನಿ…ಹೇ ಬಿಡು ಸುಬ್ಬಿ…ಬೆಳಗ್ಗೆ ಹಾಲು ತುಪ್ಪ ಬಿಡೋದ್ರೊಳಗೆ ಅಂಕಲ್ ನಾ ಹೊಡಿತೀನಿ; ಅಂಕಲ್ ನಾ ಹೊಡಿತೀನಿ”. ” ನಿಂದು ಒಂದ್ ಜನ್ಮ, ನಿಮ್ಗೂ ಒಂದ್ ಜನ್ಮದಿನ ಬೇರೆ ಕೇಡು”. ” ಮೀಸೆ, ಗಡ್ಡ, ಬಿಟ್ಟೋರ್ನೆಲ್ಲ ಗಂಡ್ಸು ಅನ್ನೋದಾದ್ರೆ ಕರಡಿ ಎಲ್ಲಕ್ಕಿಂತ ದೊಡ್ ಗಂಡ್ಸು”. ” ನಾವು ಮ್ಯಾಚ್ನಲ್ಲಿ ಸೋಲಲ್ಲ, ಅಕಸ್ಮಾತ್ ಸೋತ್ರೂ..ಮ್ಯಾನ್ ಆಫ್ ದಿ ಮ್ಯಾಚ್ ನಮ್ದೆ”. ಸುಕ್ಕಾ ಸೂರಿಯವರ ‘ಟಗರು’ ಸಿನೆಮಾದ ಇಂಥ ಸಂಭಾಷಣೆಯ ಜಂಗಮ ಭಾವ, ನೋಡುಗನ ಎದೆಯಲ್ಲಿ ಸ್ಥಾವರಗೊಳ್ಳುವಂತೆ ಮಾಡಿ, ತಮ್ಮ ರೋಚಕ, ರಂಜನೀಯ, ಕಿಲಾಡಿತನದ ಮಾತುಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದಾರೆ ಸಂಭಾಷಣಾಕಾರ ಮಂಜು ಮಾಸ್ತಿ. ಇವರು ಮಾಸ್ತಿ ಎಂತಲೇ ಚಂದನವನದಲ್ಲಿ ಚಿರಪರಿಚಿತ.

‘ಶಬ್ದದೊಳಗೆ ನಿಶ್ಯಬ್ದ ; ನಿಶ್ಯಬ್ದದೊಳಗೆ ಶಬ್ದ’ ಹುಡುಕುತ್ತಾ..ಕತೆಗಾರನಾಗಿ, ಸಂಭಾಷಣಾಕಾರನಾಗಿ, ನಟನಾಗಿ, ಒಬ್ಬ ಒಳ್ಳೆಯ ಓದುಗನಾಗಿ ಎಲ್ಲರ ಚಿತ್ತ ತನ್ನತ್ತ ಹೇಗೆ ಸೆಳೆಯ ಬೇಕು ಎಂಬ ಚಾಲಾಕಿತನದ ಶಬ್ದಮಾಂತ್ರಿಕ ಮಾಸ್ತಿ ಅವರು, ನಿಜಕ್ಕೂ ಒಬ್ಬ ಬರಹಗಾರ ತಮ್ಮ ಬರವಣಿಗೆಯನ್ನ ಪಾಲಿಶ್ ಮಾಡಿಕೊಳ್ಳ ಬೇಕಾದಾಗ, ತಾನು ಬದುಕುತ್ತಿರುವ ಸಮಾಜದೊಟ್ಟಿಗೆ ಹೇಗೆಲ್ಲಾ ಸಂಪರ್ಕವಿಟ್ಟುಕೊಳ್ಳಬೇಕು, ದೈನಂದಿನ ಜೀವನದ ಸಂಗತಿಗಳನ್ನು ತನ್ನ ಕುತೂಹಲದ ಕಣ್ಣಿನ್ನಿಂದ ಹೇಗೆಲ್ಲಾ ನೋಡ ಬಹುದು ಎಂಬುದಕ್ಕೆ ಟಗರು ಸಿನೆಮಾದ ಸಂಭಾಷಣೆಯೇ ಸಾಕ್ಷಿ. ಶಬ್ದಗಾರುಡಿಗ ನಂತೆ ಕಾಣುವ ಈ ಮಾಸ್ತಿ ನಿಜಕ್ಕೂ ಕನ್ನಡದ ಆಸ್ತಿಯೇ. ಏಕೆಂದರೆ ಇವರೊಳಗಿರುವ ಒಬ್ಬ ಸಹೃದಯನೇ ಇವರನ್ನ ಬೆಳೆಸಿದೆ, ಮುಂದೆಯೂ ಬೆಳೆಸುತ್ತದೆ ಎಂಬುದು ನಮ್ಮ ಮನದ‌ ಸೂಕ್ಷ ಗ್ರಹಿಸಿದ್ದು. ಇಂತಹ ಒಬ್ಬ ‘ಸೂಕ್ಷ್ಮಜ್ಞ’ನೊಂದಿಗೆ ಸುದ್ದಿದಿನ ತನ್ನ ಮಾತು-ಕತೆಯಲ್ಲಿ ಮಾತನಾಡಿಸಿದಾಗ ಅವರು ಎದೆ ತುಂಬಿ ಮಾತನಾಡಿದ್ದಾರೆ‌. ಅದರ ಅಕ್ಷರ ರೂಪ‌ ಇಲ್ಲಿದೆ.

ಟಗರು ಮಾಸ್ತಿ ಮನದಾಳ

ಬಾಲ್ಯದಿಂದಲೂ ಸಾಹಿತ್ಯದ ಓದು, ಬರವಣಿಗೆಯಲ್ಲಿ ತೊಡಗಿಸಿಕೊಂಡು,‌ಬರವಣಿಗೆಯಲ್ಲಿಯೇ ಬದುಕು ಕಾಣಬೇಕು ಎಂಬ ಕನಸಿದ್ದರೂ ಅದು ಅಸಾಧ್ಯವೇನೋ ಎಂಬ ಅಪನಂಬಿಕೆ ನನ್ನನ್ನು ಕಾಡಿದ್ದು ಸತ್ಯ. ಆದರೆ ಸಿನೆಮಾರಂಗಕ್ಕೆ ಬಂದಮೇಲೆ ಬರಹಗಾರನಿಗಿರುವ ಶಕ್ತಿ ಎಂಥದ್ದು ಅನ್ನೋದು ನನಗೆ ಮನವರಿಕೆಯಾಗಿದೆ. ಅದರಲ್ಲೂ ಸೂರಿ ಸರ್ ‘ಟಗರು’ ಸಿನೆಮಾ ನನ್ನನ್ನು ಈ ಮಟ್ಟಿಗೆ ಗುರುತಿಸುವಂತೆ ಮಾಡಿದ ಮೇಲಂತೂ ಬರವಣಿಗೆಯೇ ನನ್ನ ಜೀವಾಳ,ಜೀವನ ಆಗಿಬಿಟ್ಟಿದೆ.

ಅಂದಹಾಗೆ ನಾನು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕೆ.ಉಪ್ಪಾರಹಳ್ಳಿ ಎಂಬ ಗ್ರಾಮದವನು. ನಮ್ಮದು ಮಿಡಲ್ ಕ್ಲಾಸ್ ಫ್ಯಾಮಿಲಿ. ತುಂಬಾ ಕಷ್ಟಗಳ ಜೊತೆಗೆ ಬೆಳೆದವನು. ಆ ಕಷ್ಟಗಳನ್ನೇ ನನ್ನ ಜೀವನೋತ್ಸಾಹವಾಗಿ ಪ್ರೀತಿಯಿಂದ ಬದುಕುತ್ತಾ ಬಂದೆ. ನನ್ನ ಕಡು ಕಷ್ಟಗಳೇ ನನ್ನ ಒಬ್ಬ ಬರಹಗಾರನಾಗಿ ಮಾಡಿದವು ಅಂದ್ರೆ ತಪ್ಪಾಗಲಾರದು. ನನ್ನ ಆ ದಿನಗಳ ‘ನೆನಪಿನ ಬುತ್ತಿ’ ಯನ್ನೇ ಬರವಣಿಯ ಮೂಲವಾಗಿಸಿಕೊಂಡು ಬರೆಯಲು ಹೊರಟೆ. ಪ್ರೈಮರಿ ಶಾಲೆಯಿಂದಲೂ ನಾನು ಬಾಲಮಿತ್ರ, ಚಂದಮಾಮ, ಕಾಮಿಕ್ಸ್ ಬುಕ್, ಜನಪದ ಕತೆಗಳು, ಪಂಚತಂತ್ರ ಕತೆಗಳನ್ನು ನಾನು ಅಚ್ಚುಕಟ್ಟಾಗಿ ಓದಿಕೊಂಡು ಬಂದೆ. ಆ ಕತೆಗಳ ಮೂಲ ಆಶಯ ‘ನೀತಿ’ ಹೇಳುವುದೇ ಆಗಿದ್ದರಿಂದ ಅವು ನನ್ನನ್ನು ಆವಾಹಿಸಿಕೊಂಡು ಬಿಟ್ಟವು. ಹಾಗೇ ಶಾಲೆಯಲ್ಲಿ ಮೇಷ್ಟ್ರುಗಳು ಹೇಳುತ್ತಿದ್ದ ಕತೆಗಳು ನನ್ನನ್ನ ತುಂಬಾ ಕಾಡಿದವು. ನಮ್ಮ ಮೇಷ್ಟುಗಳು ತುಂಬಾ ವಿಶಿಷ್ಟವಾಗಿ ಕತೆಹೇಳುವ ಪರಿಯೇ ನನ್ನ ಕುತೂಹಲವನ್ನು ಕೆರಳಿಸುತ್ತಿದ್ದವು.ನಾನು ಕತೆಗಳನ್ನು ಮಂತ್ರ ಮುಗ್ಧನಾಗಿ ಕೇಳುತ್ತಿದ್ದೆ.

ನಮ್ಮ ಮನೆಯಲ್ಲಿ‌ ಆಗಾಗ ನಮಗೆ ಕಾಸುಕೊಟ್ಟು ಟೆಂಟ್ ಗಳಲ್ಲಿ‌ ಸಿನೆಮಾ ನೋಡಲು ಕಳುಹಿಸುತ್ತಿದ್ದರು. ಟೆಂಟ್ ಒಳಗೆ ಕೂತು ನೋಡುವ ಸಿನೆಮಾಗಳು ನನಗೆ ಮಾಯಾಲೋಕದಂತೆ ಭಾಸವಾಗುತ್ತಿತ್ತು. ಸಿನೆಮಾ ನೋಡಿ ಬಂದಾಗಿನ ಖುಷಿ ಹೇಳಲು ನನಗೆ ಪದಗಳೇ ಸಾಲುತ್ತಿರಲಿಲ್ಲ. ಅಷ್ಟೊಂದು ಆಳವಾಗಿ ಇಳಿದು ಹೋಗಿಬಿಡ್ತಾಇದ್ದೆ ಸಿನೆಮಾಗಳನ್ನ‌ ನೋಡಿ. ಈಗ ವಿದೇಶಕ್ಕೆ ಹೋಗಿಬಂದಾಗ ಆಗುವಂತಹ ಖುಷಿ , ಆಗ ಸಿನೆಮಾ ನೋಡಿದಾಗ ಆಗ್ತಾ ಇತ್ತು. ಸಿನೆಮಾ ಪರದೆಯೊಳಗೆ ಕಾಣುವ ದೃಶ್ಯಗಳು ನನ್ನನ್ನ ಮೈಮರೆಸುತ್ತಿದ್ದವು. ಆಗ ಅಂಥಹ ಸಿನೆಮಾಗಳು ಬರ್ತಾ ಇದ್ವು ಬಿಡಿ (ಈಗಲೂ ಬರ್ತಾ ಇದಾವೆ) . ಹೀಗೆ ಸಿನೆಮಾಗಳು ನನ್ನ ಕಾಡಿದ್ದರಿಂದ ಸಿನೆಮಾವನ್ನ ಆರಾಧಿಸುತ್ತಾ ಬಂದೆ. ಕೆಲವು ನನ್ನ ಸ್ನೇಹಿತರು ಸಿನೆಮಾ‌ ನೋಡಿ ಬಂದು ಅಭಿನಯದ ಮೂಲಕ ರೋಚಕವಾಗಿ ಸಿನೆಮಾ‌ ಕತೆ ಹೇಳ್ತಾ ಇದ್ರು, ಅವರು ಹೇಳೋ ಕತೆಗಳನ್ನ ತದೇಕ ಚಿತ್ತದಿಂದ ಕೇಳ್ತಾ, ನೋಡ್ತಾ ಇದ್ದೆ. ಈ ಸಂಗತಿಗಳೂ ಕೂಡಾ ನನ್ನ ಸಿನೆಮಾ ಮೇಲಿನ ಪ್ರೀತಿಯನ್ನ ಹೆಚ್ಚಿಸ್ತಾ ಬಂದ್ವು. ಜೊತೆಗೆ ಅಪರೂಪಕ್ಕೊಮ್ಮೆ ನನಗೆ ಮನೇಲಿ ಹೊಸ ಪುಸ್ತಕ ಕೊಡಿಸ್ತಾ ಇದ್ರು, ನಾನು ಆ ಪುಸ್ತಕದ ಪುಟಗಳನ್ನ ತಿರುವಿಹಾಕಿ ಹಾಳೆಗಳ ವಾಸನೆಯನ್ನ ಗ್ರಹಿಸ್ತಾ ಇದ್ದೆ. ಬಹುಶಃ ಹಾಳೆಗಳ ಅಕ್ಷರದ ಇಂಕು ಹಾಗೂ ಹಾಳೆಗಳ ಪರಿಮಳವೇ ಕತೆಗಳನ್ನ ಓದಿ ಆಸ್ವಾದಿಸುವ ಹುಚ್ಚು ಬಿಡಿಸಿ ಬಿಟ್ಟವು. ಒಟ್ಟಾರೆ ಕನ್ನಡ ಮೀಡಿಯಂ, ಸರ್ಕಾರಿ ಶಾಲೆಗಳೇ ನನ್ನ ಬರವಣಿಗೆಯ ಶಕ್ತಿ ಎಂದರೆ ಅತಿಶಯೋಕ್ತಿಯಾಗಲಾರದು.

ನಮ್ಮ ಊರಿಗೆ ತೆಲುಗು ಭಾಷೆಯ ಪ್ರಭಾವ ಹೆಚ್ಚು, ನಾನು ಅದರ ಪ್ರಭಾವಕ್ಕೆ ಬಲಿಯಾಗಲಿಲ್ಲ. ತೆಲುಗು ಸಿನೆಮಾಗಳು ತುಂಬಾ ಪ್ರದರ್ಶನ ಕಾಣ್ತಾಇದ್ವು ಆಗ. ತೆಲುಗಿನ ಹಲವು ಸಿನೆಮಾಗಳು ಕ್ರೈಂ ಮತ್ತು ಸೆಕ್ಸ್ ಅನ್ನ ವೈಭವೀಕರಿಸಿ ಸಹಜತೆಯೇ ಕಾಣೆಯಾಗಿದ್ದುದರಿಂದ ನಾನು ಅಂಥಹ ಸಿನೆಮಾಗಳನ್ನು ವಿರೋಧಿಸುತ್ತಾ ಬಂದೆ. ತೆಲುಗಿನ ಅಂತಹ ಸಿನೆಮಾಗಳು ಕನ್ನಡ ಸಿನೆಮಾಗಳ‌ ಮೇಲೂ ಪ್ರಭಾವ ಬೀರಿದವು. ಆದರೆ ಅವ್ಯಾವೂ ಅಷ್ಟು ಹಿಟ್ ಆಗಲಿಲ್ಲ, ಜನರು ಅಂಥಹ ಸಿನೆಮಾಗಳನ್ನ ತಿರಸ್ಕರಿಸಿದ್ರೂ ಕೂಡಾ. ಏಕಂದ್ರೆ ಅವು ನಮ್ಮ ಕನ್ನಡದ ನೆಲಕ್ಕೆ ಒಗ್ಗುವಂತವಲ್ಲ. ನಮ್ಮ ನೆಲದಗುಣವಿರುವ ಕನ್ನಡ ಸಿನೆಮಾಗಳು ಅಮ್ಮ ಮಾಡಿದ ಅಡುಗೆ ತರ, ತುಂಬಾ ರುಚಿ ಹಾಗೂ ದೇಹಕ್ಕೆ ಒಳ್ಳೆಯದು.ಹಾಗಾಗಿ ಕನ್ನಡ ಸಿನೆಮಾರಂಗಕ್ಕೆ ಹೇಗಾದ್ರೂ ಬರಬೇಕು ಅನ್ನೋತುಡಿತ ನನ್ನಲ್ಲಿ ಹೆಚ್ಚಾಗ್ತಾ ಬಂತು. ನನಗೆ ಸಿನೆಮಾದ ಹಿನ್ನೆಲೆಯಿಲ್ಲದಿದ್ದರೂ ನನಗೆ ಸಿನೆಮಾ ಮೇಲಿರುವ ಪ್ರೀತಿಯೇ ನನ್ನ ಸಿನೆಮಾ ಹಿನ್ನೆಲೆ.

ನನ್ನ ಸಿನೆಮಾ ಎಂಟ್ರಿ

ಸಿನೆಮಾದಲ್ಲಿ ಹೇಗಾದರೂ ಕೆಲಸ ಮಾಡ್ಬೇಕು ಅನ್ನೋ ಹಂಬಲದಿಂದ ತುಂಬಾ ಸೈಕಲ್ ಹೊಡೆದೆ. ಆದ್ರೆ ಯಾವ ಅವಕಾಶಗಳೂ ನನಗೆ ದಕ್ಕಲಿಲ್ಲ. ಆದ್ರೆ ಒಮ್ಮೆ ನಮ್ಮ ಮನೆಯ ಹತ್ತಿರದಲ್ಲಿ ತುಷಾರ್ ರಂಗನಾಥ್ (ಗುಲಾಮ, ಕಂಠೀರವ ಸಿನೆಮಾ ನಿರ್ದೇಶಕ) ಸಿನೆಮಾದಲ್ಲಿ ಕೆಲಸ ಮಾಡ್ತಾರೆ ಅಂತ ಗೊತ್ತಿತ್ತು. ಅವರನ್ನ ಹೇಗೋ ಕಷ್ಟಪಟ್ಟು ಪರಿಚಯ ಮಾಡ್ಕೊಂಡೆ. ಈ ಸಮಯದಲ್ಲಿ ಅವರು ಸಾಧುಕೂಕಿಲಾ ನಿರ್ದೇಶನದ, ದರ್ಶನ್ ಅಭಿನಯದ ‘ಸುಂಟರಗಾಳಿ’ ಸಿನೆಮಾಗೆ ಸಹ ನಿರ್ದೇಶಕ ನಾಗಿ ಕೆಲಸ ಮಾಡ್ತಿದ್ರು. ಈ ಸಿನೆಮಾ ‘ಚಿತ್ರಕತೆ’ ಯ ಬಗ್ಗೆ ಚರ್ಚೆ ಮಾಡೋದಿಕ್ಕಾಗಿ ನನ್ನ ಕರ್ಕೊಂಡ್ ಹೋದ್ರು. ಸುಂಟರಗಾಳಿ ಸಿನೆಮಾದಲ್ಲಿ ದರ್ಶನ್ ಅವರು ಹೇಗೆ ಎಂಟ್ರಿ ಆಗ್ಬೇಕು ಅನ್ನೋ ದೃಶ್ಯದ ಬಗ್ಗೆ ಚರ್ಚೆ ನಡೀತಾ ಇತ್ತು, ಆಗ ನನಗೆ ತೋಚಿದ, ಪಕ್ಕಾ ಮಾಸ್ ಆಗಿ ಇರೋ ಒಂದ್ ದೃಶ್ಯಾನ ವಿವರಿಸ್ತಾ ಹೋದೇ, ಆಗ ಎಲ್ರೂ ಖುಷಿಯಿಂದ ಒಪ್ಪೊಂಡ್ರು. ಅವತ್ತೇ ನನ್ನ ಸಿನೆಮಾದ ಎಂಟ್ರಿಯೂ ಆಗೋಯ್ತು. ತುಂಬಾನೆ ಖುಷಿಕೊಡೋ ಸಂಗತಿ ನನಗದು.

ಸೂರಿ – ಭಟ್ಟರ ಸಹವಾಸ

ಸುಂಟರಗಾಳಿ‌ ಸಿನೆಮಾಗೆ ಸೂರಿ ಸರ್ ಕೂಡ ಸಹ ನಿರ್ದೇಶಕರಾಗಿ ಕೆಲಸ ಮಾಡ್ತಿದ್ರು. ತುಷಾರ್ ರಂಗನಾಥ್ ಕಡೆಯಿಂದ ಅವರ ಪರಿಚಯವಾಯ್ತು. ನಂತರ ಅದೇ ಸಮಯದಲ್ಲಿ ಸೂರಿ ಸರ್ ಹಾಗೂ ಯೋಗರಾಜ್ ಭಟ್ ಸರ್ ಬಿ.ಸುರೇಶ್ ಅವರ ನಿರ್ದೇಶನದ ‘ಸಾಧನೆ’ ಎಂಬ ಧಾರಾವಾಹಿಯಲ್ಲಿ ಕೆಲಸ ಮಾಡ್ತಿದ್ರು. ಸಾಧನೆ ಧಾರಾವಾಹಿಯ ಸೆಟ್ ಗೆ ನನ್ನನ್ನೂ ಕೂಡ ಕರೆದುಕೊಂಡು ಹೋಗ್ತಾದ್ರು ತುಷಾರ್ ರಂಗನಾಥ್. ಆಗ ಅವರ ಜೊತೆ ಸಿನೆಮಾಗೆ ಸಂಭಂದಿಸಿದ ವಿಷಯಗಳನ್ನ ಚರ್ಚೆ ಮಾಡ್ತಾ ಅವರೊಳಗೆ ನನ್ನೊಬ್ಬನನ್ನಾಗಿ ಮಾಡ್ಕೊಂಡ್ರು ಸೂರಿ ಸರ್ ಹಾಗೂ ಭಟ್ ಸರ್. ಹಾಗೇ ಇನ್ನೊಂದ್ ವಿಷಯ ಹೇಳಲೇ ಬೇಕು ನಾನು. ಮುಂಗಾರು ಮಳೆ ಸಿನೆಮಾ ಮಾಡಿ‌ ಭಟ್ ಸರ್ ಒಂದ್ ಟ್ರೆಂಡ್ ಸೆಟ್ ಮಾಡಿದ್ರು,ಹಾಗೆ ಸಿನೆಮಾ ಒಳ್ಳೆಯ ಲಾಭವನ್ನ ನಿರ್ಮಾಪಕರಿಗೆ ತಂದು ಕೊಡ್ತು. ಆಗ ಇನ್ಫೋಸಿಸ್ ನ ನಾರಾಯಾಣ ಮೂರ್ತಿಯವರು ಭಟ್ ಸರ್ ಅವರನ್ನ ಕರೆಸಿ ಹೇಳಿದ್ರಂತೆ, ” ಕನ್ನಡ‌‌ದಲ್ಲಿ‌ ಇಂತಹ ಒಂದು ಒಳ್ಳೆಯ ಸಿನೆಮಾ ಕೋಟಿಗಟ್ಟಲೆ ಹಣ ಮಾಡೋದು ಅಂದ್ರೆ ಸುಮ್ನೆ ಮಾತಲ್ಲ, ನಾವು ಏನೆಲ್ಲಾ ಮಾಡ್ತೀವಿ‌, ಅದ್ರೆ ಒಂದ್ ಸಿನೆಮಾ ಮಾಡಿ ನೀವು ಎಲ್ಲರೀತಿಯಿಂದಲೂ ಯಶಸ್ಸುಗಳಿಸಿದರ ಬಗ್ಗೆ ತುಂಬಾ ಹೆಮ್ಮೆ‌ಯಿಂದ ಹೇಳಿದ್ರಂತೆ, ಅಂತಹ ಭಟ್ ಸರ್ ಗೆ ನಾನು ಕತೆ ಹೇಳಿದ್ದು ತುಂಬಾ ಖುಷಿಕೊಡ್ತು. ಅದೇ ಕನ್ನಡಕ್ಕಿರುವ ತಾಕತ್ತು ಅಂತಾನೂ ನಂಗೆ ಅರಿವಾಯ್ತು.

ಕತೆಗಾರನಾಗಿ

ನಾನು ಒಂದಷ್ಟು ಕತೆಗಳನ್ನ ಬರೆದೆ. ಅದರಲ್ಲಿ‌ ಬಾಲ್ ಪೆನ್ ಅನ್ನೋ ಕತೆಯನ್ನ ಪತ್ರಕರ್ತ ರವಿಬೆಳೆಗೆರೆಯವರು ಕೇಳಿ ತುಂಬಾ ಇಷ್ಟ ಪಟ್ರು. ನಂತರ ಅವರ ಮಗಳು, ನಟ ಶ್ರೀನಗರ‌ ಕಿಟ್ಟಿ ಅವರ ಪತ್ನಿ ಭಾವನಾ ಬೆಳಗೆರೆಯವರು ನಿರ್ಮಾಣ ಮಾಡಿದ್ರು. ಸಿನೆಮಾಗೆ ಒಳ್ಳೆಯ ಹೆಸರೂ ಬಂತು. ಹಾಗೆ ತುಂಬಾ ಕತೆಗಳನ್ನ ಬರೆದೆ. ಸಿನೆಮಾಗೆ ಆಗದೇ ಇರೋ‌ ಕತೆಗಳು ಇವೆ. ಅವನ್ನೆಲ್ಲಾ ಸೇರಿಸಿ ಒಂದು ಪುಸ್ತಕ ಮಾಡುವ ಯೋಚನೆಯೂ ಇದೆ. ಸಿನೆಮಾ ಬರವಣಿಗೆಯಲ್ಲಿ ಸಧ್ಯಕ್ಕೆ ಹೆಚ್ಚು ತೊಡಗಿಸಿಕೊಂಡಿರೋದ್ರಿಂದ ಪುಸ್ತಕ ಬರೋದು ಸ್ವಲ್ಪ‌ ತಡವಾಗಬಹುದು.

ಸಂಭಾಷಣಾಕಾರನಾಗಿ

ಸೂರಿ ಸರ್ ನಿರ್ದೇಶನದ ಜಂಗ್ಲಿ, ಜಾಕಿ, ಕೆಂಡಸಂಪಿಗೆ ಸಿನೆಮಾಗಳ‌ ಕತೆ, ಚಿತ್ರಕತೆ ಸಂಭಾಷಣೆಯ ಚರ್ಚೆಗಳಲ್ಲಿ ನನ್ನನ್ನೂ ತೊಡಗಿಸಿಕೊಂಡರು. ನಂತರ ಕಡ್ಡಿ ಪುಡಿ ಸಿನೆಮಾಗೆ ನಾನು ಮತ್ತು ಸೂರಿ ಸರ್ ಸಂಭಾಷಣೆ ಬರೆದ್ವಿ. ಕಡ್ಡಿಪುಡಿ ಸಿನೆಮಾದಲ್ಲಿನ ಸಂಭಾಷಣೆ ಸೂರಿ ಸರ್ ಕೈಚಳಕವೇ ಹೆಚ್ಚು, ಆದ್ರೂ ನನಗೂ ಕ್ರೆಡಿಟ್ ಕೊಟ್ರು ಸೂರಿ ಸರ್. ನಂತರ, ಕಾಲೇಜ್ ಕುಮಾರ್ ಎಂಬ ಸಿನೆಮಾಗೆ ಸಂಭಾಷಣೆ ಬರೆದೆ. ನಂತರ ‘ಟಗರು’ ಸಿನೆಮಾಗೆ ಸಂಭಾಷಣೆ ಬರೆಯುವ ಜವಾಬ್ದಾರಿಯನ್ನ ಕೊಟ್ರು ಸೂರಿ ಸರ್. ಅವರು ನನ್ನ ಮೇಲಿಟ್ಟು ಹೊರಿಸಿದ ಜವಾಬ್ದಾರಿಯನ್ನ ಸ್ಬಲ್ಪ ಮಟ್ಟಿಗೆ ನಿಭಾಯಿಸಿದ್ದೇನೆ ಅನ್ಸುತ್ತೆ. ಯಾಕಂದ್ರೆ ಸೂರಿ ಸರ್ ನನ್ನಿಂದ ಅಷ್ಟು ಕೆಲಸ ತೆಗೆಸಿದ್ರು ಅಂತ ಹೇಳೋಕೆ ನಂಗೆ ಹೆಮ್ಮೆ ಆಗುತ್ತೆ. ಹಾಗೇ ಸೂರಿ ಸರ್ ಮುಂದಿನ ಸಿನೆಮಾ ,’ಪಾಪ್ ಕಾರ್ನ್ ಮಂಕಿ ಟೈಗರ್’ ಸಿನೆಮಾಗೆ ಸಂಭಾಷಣೆ ಬರೆಯೋಕೆ ಮತ್ತೆ ಅವಕಾಶ ಮಾಡಿಕೊಟ್ಟಿದ್ದಾರೆ. ಟಗರು ಸಿನೆಮಾ ನೋಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗುತ್ತಿರುವ ‘ಭೈರವ ಗೀತಾ’ ಸಿನೆಮಾಗೆ ಸಂಭಾಷಣೆ (ಕನ್ನಡ ಅವತರಿಣಿಕೆಗೆ) ಬರಯೋದಿಕ್ಕೆ ಅವಕಾಶ ಸಿಕ್ಕಿದೆ. ಅವಕಾಶ ಸಿಕ್ಕಿದ್ದರಲ್ಲಿ ನಟ ಧನಂಜಯ್ ಪಾತ್ರವೂ ದೊಡ್ಡದಿದೆ. ಧನಂಜಯ್ ಗೆ ಒಂದು ಸಲಾಮ್ ಹೇಳಲು ಈ ಸಮಯದಲ್ಲಿ‌ ಇಷ್ಟ ಪಡ್ತೇನೆ. ಇತ್ತೀಚಿಗೆ ಬಿಡುಗಡೆಯಾದ ‘ ಕಟ್ಟುಕತೆ’ ಸಿನೆಮಾಗೂ ಸಂಭಾಷಣೆ ಬರೆದಿದ್ದೇನೆ. ಹಾಗೆ ನೀನಾಸಂ‌ ಸತೀಶ್ ಅಭಿನಯದ ಅಯ್ಯೋಗ್ಯ ಸಿನೆಮಾ, ದುನಿಯಾ ವಿಜಯ್ ಅವರ ಕುಸ್ತಿ, ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ತಂಗಿ ಮಗನ ‘ಅಖಿಲ್’ ಎಂಬ ಸಿನೆಮಾಕ್ಕೆ ಸಂಭಾಷಣೆ ಬರೆದಿದ್ದೇನೆ. ಸಿನೆಮಾ‌‌ ನಿರ್ದೇಶನ ಮಾಡೋ ಆಸೆ ಇದೆ ಬರವಣಿಗೆಯ ಒತ್ತಡದಲ್ಲಿ ಅದು ಸಾಧ್ಯ ಆಗ್ತಾ ಇಲ್ಲ. ಮುಂದೊಂದು ದಿನ ನಿರ್ದೇಶಕನಾಗಿ ನಿಮ್ಮ ಮುಂದೆ ಬರ್ತೇನೆ.

ನಟನಾಗಿ

ನಾನು ಕೆಲಸ ಮಾಡಿರೋ‌ ಸಿನೆಮಾಗಳಲ್ಲೇ ಚಿಕ್ಕ- ಪುಟ್ಟ ಪಾತ್ರಗಳನ್ನ ಮಾಡ್ತಾ ಬಂದಿದೀನಿ. ಕಡ್ಡಿಪುಡಿ, ಕೆಂಡಸಂಪಿಗೆ, ಹಾಗೇ ಯೋಗರಾಜ್ ಭಟ್ ನಿರ್ದೇಶನ ‘ಪಂಚತಂತ್ರ’ ಸಿನೆಮಾದಲ್ಲೂ ಅಭಿನಯಿಸಿದ್ದೇನೆ.

ನನ್ನಿಷ್ಟದ‌ ಸಿನೆಮಾ-ನಿರ್ದೇಶಕ-ಸಂಭಾಷಣಾಕಾರ

ನನಗೆ ವೈಯಕ್ತಿಕವಾಗಿ ಇಷ್ಟವಾಗುವ ಸಿನೆಮಾಗಳು ತುಂಬಾ ಇದಾವೆ. ಅದ್ರಲ್ಲಿ ಇತ್ತೀಚೆಗೆ ಕೆಲವು ವರ್ಷಗಳ ಹಿಂದೆ ತೆರೆಕಂಡು ಜನಮಾನಸದಲ್ಲಿ ಉಳಿದ, ಎದ್ದೇಳು ಮಂಜುನಾಥ ಹಾಗೂ ತಿಥಿ ಸಿನೆಮಾ. ನನಗೆ ಕೆಲಸ ಕಲಿಸಿಕೊಟ್ಟ ಸೂರಿ ಸರ್ ಹಾಗೂ ಯೋಗರಾಜ್ ಭಟ್ ಸರ್, ಅವರಿಬ್ಬರೂ ನನ್ನ ಗುರು ಸಮಾನರು. ಸೂರಿ ಸರ್ ಇಂದ ಶಿಸ್ತು, ಭಟ್ ಸರ್ ಇಂದ ಶ್ರದ್ಧೆ ಕಲಿತೆ. ಹಾಗೇ ತೆಲುಗು‌ ಸಿನೆಮಾ‌ ಸಂಭಾಷಣಾಕಾರರಾದ ತ್ರಿವಿಕ್ರಮ್ ಶ್ರೀನಿವಾಸ್ ಮತ್ತು ಕನ್ನಡದಲ್ಲಿ‌ ಪ್ರಶಾಂತ್ ರಾಜಪ್ಪ ನನಗೆ ತುಂಬಾ ಕಾಡಿರೋ ಸಂಭಾಷಣಾಕಾರರು.

ಕನ್ನಡದಲ್ಲಿ‌ ತುಂಬಾ ಒಳ್ಳೆಯ ಕತೆಗಳು ಇದಾವೆ. ಕತೆಗಾರರೂ ಇದ್ದಾರೆ. ಅವರನ್ನ ಗುರುತಿಸಿ ಒಂದು ಅವಕಾಶಮಾಡಿಕೊಟ್ಟರೆ ನಮ್ಮ ಕನ್ನಡ ಸಿನೆಮಾರಂಗ ಇನ್ನೂ ಎತ್ತರಕ್ಕೆ ಬೆಳೆಯುವುದರಲ್ಲಿ ಸಂಶಯವೇ ಇಲ್ಲ.

ಕನ್ನಡವೇ ಸತ್ಯ ; ಕನ್ನಡವೇ ನಿತ್ಯ
ಇಂತಿ‌ ನಿಮ್ಮ ಮಾಸ್ತಿ

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ

ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ...

ದಿನದ ಸುದ್ದಿ4 days ago

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ

ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...

ದಿನದ ಸುದ್ದಿ6 days ago

ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ

ಸುದ್ದಿದಿನ,ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಜನವರಿ 11...

ದಿನದ ಸುದ್ದಿ1 week ago

ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವಮಾನವ ದಿನಾಚರಣೆ’

ಸುದ್ದಿದಿನ,ಸಂತೇಬೆನ್ನೂರು:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ ಸೋಮವಾರ ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸಲಾಗಿತ್ತು. ಜಗತ್ತಿಗೆ ವಿಶ್ವಮಾನವತೆಯ ಸಂದೇಶವನ್ನು ಸಾರಿದ ಜಗದ ಕವಿ...

ದಿನದ ಸುದ್ದಿ1 week ago

ವಿಜಯನಗರ | ನಿಲ್ಲದ ಅಕ್ರಮ ಕಲ್ಲು ಗಣಿಗಾರಿಕೆ ; ಕಣ್ಣುಮುಚ್ಚಿಕುಳಿತ ಅಧಿಕಾರಿಗಳು

ವಿಶೇಷ ವರದಿ | ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ವಿಜಯನಗರ:ತಾಲೂಕಿನ ಬುಕ್ಕಸಾಗರದಲ್ಲಿ ಅಕ್ರಮ ಗಣಿಗಾರಿಕೆ, ಹಲವು ವರ್ಷಗಳಿಂದ ನಿರಂತರವಾಗಿ ಬುಕ್ಕಸಾಗರ, ವೆಂಕಟಾಪುರ, ವೆಂಕಟಾಪುರ ಕ್ಯಾಂಪ್ , ರಾಮಸಾಗರದಲ್ಲಿ...

ದಿನದ ಸುದ್ದಿ2 weeks ago

ಹಂಪಿ ಮೃಗಾಲಯದಲ್ಲಿ ಸೂಕ್ತ ನಿರ್ವಹಣೆ ಮತ್ತು ಮೂಲಸೌಕರ್ಯಗಳದ್ದೇ ಕೊರತೆ : ಪ್ರವಾಸಿಗರ ಆರೋಪ

ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ: ಉತ್ತರ ಕರ್ನಾಟಕದ ಏಕೈಕ ಸಫಾರಿ ಮೃಗಾಲಯ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್(ಹಂಪಿ ಜೂ) ಆಗಿದ್ದು, ಇಲ್ಲಿ...

ದಿನದ ಸುದ್ದಿ2 weeks ago

2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ ; ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ,ಬೆಂಗಳೂರು:ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ...

ದಿನದ ಸುದ್ದಿ2 weeks ago

ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್

ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ...

ದಿನದ ಸುದ್ದಿ3 weeks ago

ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ 5 ದಿನಗಳ ವೃತ್ತಿ ನಾಟಕ ರಚನಾ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರದ ನಂತರ...

ದಿನದ ಸುದ್ದಿ4 weeks ago

ವಿದ್ಯಾರ್ಥಿಗಳಿಗೆ ಡಿಜಿಟಲ್ ಕೌಶಲ್ಯ ಅಗತ್ಯ : ಡಾ. ವೆಂಕಟೇಶ್ ಬಾಬು

ಸುದ್ದಿದಿನ,ಚನ್ನಗಿರಿ:ವಿದ್ಯಾರ್ಥಿಗಳು ಇಂದಿನ ಯುಗಕ್ಕೆ ಅಗತ್ಯವಿರುವ ಎಲ್ಲಾ ಜೀವನ ಹಾಗೂ ತಂತ್ರಜ್ಞಾನ, ವಿಶೇಷವಾಗಿ ಡಿಜಿಟಲ್ ಕೌಶಲ್ಯಗಳನ್ನು ಅರಿತಿರಬೇಕು ಎಂದು ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಅವರು ತಿಳಿಸಿದರು. ಬುಧವಾರ...

Trending