Connect with us

ದಿನದ ಸುದ್ದಿ

ದಾವಣಗೆರೆ ದುಗ್ಗಮ್ಮನ ದೇವಸ್ಥಾನದ ಬಳಿ ಸ್ಪೋಟಕ ಪತ್ತೆ ; ಪ್ರಕರಣ ದಾಖಲು : ಎಸ್ ಪಿ ಹನುಮಂತರಾಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ : ಪಿಪಿಟಿ ಪ್ರದರ್ಶನದ ಮೂಲಕ ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರಿಗೆ ಎಕ್ಸ್‍ಪ್ಲೋಸಿವ್ ಕಾಯ್ದೆ, ಸಬ್ಸ್‍ಟೆನ್ಸ್ ಕಾಯ್ದೆ ಹಾಗೂ ಎಕ್ಸ್‍ಪ್ಲೋಸಿವ್ ರೂಲ್ಸ್ 2008 ರ ಬಗ್ಗೆ ವಿವರವಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ತಿಳಿಸಿದರು.

ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಕಲ್ಲುಗಣಿ ಸುರಕ್ಷತೆ ಮತ್ತು ಅನಧಿಕೃತ ಗಣಿಗಾರಿಕೆ ತಡೆ ಮಾಸಿಕ ಸಪ್ತಾಹದ ಅಂಗವಾಗಿ ಬುಧವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆ ವತಿಯಿಂದ ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಮಾಲೀಕರು ಕಡ್ಡಾಯವಾಗಿ ಅನುಸರಿಸಬೇಕಾದ ಸುರಕ್ಷತಾ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದ ಅವರು ಶಿವಮೊಗ್ಗದ ಹುಣಸೋಡಿನಲ್ಲಿ ಸ್ಫೋಟ ಸಂಭವಿಸಲು ಕಾರಣ ಇದ್ಯಾವ ನಿಯಮಗಳನ್ನು ಪಾಲಿಸದೇ ಇರುವುದಾಗಿದ್ದು, ಸ್ಪೋಟಕಗಳ ಬಳಕೆಯಲ್ಲಿ ನಿರ್ಲಕ್ಷ್ಯದಿಂದಾಗಿ ಸಾವುನೋವಿಗೆ ಕಾರಣವಾಗಿದ್ದು, ಈ ಪ್ರಕರಣದ ಕುರಿತು ತನಿಖೆ ಜಾರಿಯಲ್ಲಿದೆ ಎಂದರು.

ದಾವಣಗೆರೆ ನಗರದಲ್ಲಿಯೇ ದುಗ್ಗಮ್ಮನ ಜಾತ್ರೆ ತರುವಾಯ ದೇವಸ್ಥಾನದ ಸುಮಾರು 300 ಮೀಟರ್ ಅಂತರದಲ್ಲಿ ಹಂಚಿನ ಗೋದಾಮುವೊಂದರಲ್ಲಿ ದೊಡ್ಡ ಪ್ರಮಾಣದ ಸ್ಪೋಟಕವನ್ನು ಸಂಗ್ರಹಿಸಿರುವುದನ್ನು ಪತ್ತೆ ಹಚ್ಚಿ ಸೀಜ್ ಮಾಡಿ ಪ್ರಕರಣ ದಾಖಲಿಸಲಾಗಿದೆ. ಹಾಗೂ ಆಜಾದ್ ನಗರದ ಕಟ್ಟಡದ ಬೇಸ್‍ಮೆಂಟ್‍ನಲ್ಲಿ ಸಂಗ್ರಹಿಸಿಡಲಾಗಿದ್ದ ಸ್ಪೋಟಕವನ್ನು ಸೀಜ್ ಮಾಡಿ ಸಂಬಂಧಿಸಿದವರನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಲೈಸೆನ್ಸ್‍ನ್ನು ಕೂಡ ನಿಯಮಾನುಸಾರ ನಿಲಂಬನೆಯಲ್ಲಿಡಲಾಗಿದೆ.

ಕಾಡಜ್ಜಿ ಬಳಿ ಕೂಡ ಸ್ಪೋಟಕ ಸೀಜ್ ಮಾಡಿ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ ಎಂದ ಅವರು ಸ್ಪೋಟಕಗಳ ಬಗ್ಗೆ ಅತಿ ಜಾಗರೂಕರಾಗಿ ನಿಯಮ ಪಾಲಿಸದಿದ್ದರೆ ಅವಘಡಕ್ಕೆ ಕಾರಣರಾಗುತ್ತೀರೆಂದು ಎಚ್ಚರಿಕೆ ನೀಡಿದರು.

ರೈತ ಮುಖಂಡರಾದ ಬಲ್ಲೂರು ರವಿಕುಮಾರ್ ಮಾತನಾಡಿ ಕ್ರಷರ್‍ಗಳಿಂದ ಬರುವ ಗಾಡಿಗಳು ಅತೀ ತೂಕ ಹೊತ್ತು ಓಡಾಡುತ್ತಿದ್ದು, ಇದರಿಂದ ಗ್ರಾಮೀಣ ರಸ್ತೆಗಳು ಹಾಳಾಗುತ್ತಿವೆ. ಈ ಬಗ್ಗೆ ಕ್ರಮ ವಹಿಸುವಂತೆ ಮನವಿ ಮಾಡಿದರು.

ಎಸ್‍ಪಿಯವರು ಪ್ರತಿಕ್ರಿಯಿಸಿ, ಗುತ್ತಿಗೆದಾರರು ವಾಹನಗಳು ಭಾರ ಹೊರುವ ಕುರಿತಂತೆ ಆರ್ ಟಿ ಒ ಕಚೇರಿಯಿಂದ ನೀಡುವ ಪರ್‍ಮಿಟ್ ಹೊಂದಿರಬೇಕು. ಸಾಗಣಿಕೆಯ ವಾಹನದಲ್ಲಿ ಹೆಚ್ಚುವರಿ ಭಾರವನ್ನು ಹೇರುವಂತಿಲ್ಲ. ಈ ರೀತಿ ಮಾಡಿದರೆ ರಸ್ತೆ, ಪಾದಚಾರಿಗಳು, ವಾಹನ ಚಾಲಕರು ಸೇರಿದಂತೆ ಎಲ್ಲರಿಗೆ ತೊಂದರೆಯಾಗುವ ಕಾರಣ ಹೆಚ್ಚುವರಿ ಲೋಡ್ ಹಾಕಬಾರದು ಎಂದರು.


ಗಣಿ ಮಾಡುವ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಕೆ ಕಡ್ಡಾಯ. ಗಣಿಗಾರಿಕೆ ಪ್ರದೇಶದ ಪ್ರವೇಶ, ನಿರ್ಗಮನ, ಗಣಿ ಸ್ಥಳ, ಸ್ಟೋರೇಜ್ ಪ್ರದೇಶಗಳಲ್ಲಿ ಸಿಸಿ ಟಿವಿ ಅಳವಡಿಸಬೇಕು. ಸಿಸಿಟಿವಿ ಅಳವಡಿಕೆಯಿಂದ ಸ್ಥಳದಲ್ಲಿ ಏನಾದರೂ ದುರ್ಘಟನೆಗಳು ಸಂಭವಿಸಿದರೆ ಪೊಲೀಸರಿಗೆ ತನಿಖೆ ನಡೆಸಲು ಅನುಕೂಲ. ಕರ್ನಾಟಕ ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಅನ್ವಯ ಎಲ್ಲೆಡೆ ಸಿಸಿಟಿವಿ ಅಳವಡಿಸಬೇಕು. ಸಿಸಿಟಿವಿಯ ಸಹಾಯದಿಂದ ನಡೆದ ಘಟನೆಗಳ ಬಗ್ಗೆ ಸಂರ್ಪೂಣವಾದ ಮಾಹಿತಿ ಹಾಗೂ ತನಿಖೆಗೆ ಬೇಕಾದ ಮೂಲಗಳನ್ನು ಪಡೆಯಬಹುದು. ಕೇವಲ ಕ್ವಾರಿಯಲ್ಲಿ ಮಾತ್ರವಲ್ಲದೇ, ಆಫೀಸ್, ಮನೆ, ದೇವಸ್ಥಾನಗಳಲ್ಲಿಯೂ ಕೂಡ ಸಿಸಿಟಿವಿಯನ್ನು ಅಳವಡಿಸಿಕೊಳ್ಳಬೇಕು.”

| ಹನುಮಂತರಾಯ, ಎಸ್‍ಪಿ


ಜಿಲ್ಲೆಯಲ್ಲಿ ಬ್ಲಾಸ್ಟಿಂಗ್ ಲೈಸೆನ್ಸ್ ಪಡೆದ 10 ಕ್ವಾರಿಗಳಿಗೆ ಇದುವರೆಗೆ ಕ್ವಾರಿಗಳಲ್ಲಿ ಸ್ಪೋಟಕ್ಕೆ ಮುನ್ನ ಪೊಲೀಸ್ ಮತ್ತು ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆಯೇ ಎಂದು ಎಸ್‍ಪಿಯವರು ಪ್ರಶ್ನಿಸಿ, ಅಧಿಕಾರಿಗಳನ್ನೂ ವಿಚಾರಿಸಿದರು. ಮಾಲೀಕರು ಈ ಬಗ್ಗೆ ತಮಗೆ ತಿಳಿದಿರಲಿಲ್ಲ ಎಂದು ಉತ್ತರಿಸಿದಾಗ, ನಿಮಗೆ ಎಲ್ಲ ತಿಳಿದಿದೆ. ಆದರೂ ಮನಸ್ಸಿಗೆ ಬಂದ ಹಾಗೆ ಮಾಡ್ತಿದ್ದೀರಿ. ಆದ ಕಾರಣ ನಿಮ್ಮ ಲೈಸೆನ್ಸ್‍ನ್ನು ಏಕೆ ರದ್ದುಪಡಿಸಬಾರದೆಂದು ನೋಟಿಸ್ ನೀಡಲಾಗುವುದು ಎಂದರು.

ಸದ್ಯಕ್ಕೆ ಲೈಸೆನ್ಸ್ ಇಲ್ಲದವರ ಚಟುವಟಿಕೆಯನ್ನು ಗಣಿ ಇಲಾಖೆಯಿಂದ ನಿಲ್ಲಿಸಲಾಗಿದ್ದು, ಲೈಸೆನ್ಸ್ ಪಡೆದ ನಂತರವೇ ತಮ್ಮ ಚಟುವಟಿಕೆ ಆರಂಭಿಸಬೇಕು. ಲೈಸೆನ್ಸ್ ಪಡೆಯಲು ಅಗತ್ಯವಾದ ಎನ್‍ಓಸಿ ಯನ್ನು ಎಸ್‍ಪಿ ಮತ್ತು ಡಿಸಿ ಕಚೇರಿಯಿಂದ ವಿಳಂಬವಿಲ್ಲದೇ ತಕ್ಷಣ ನೀಡಲಾಗುವುದು.

ಹಾಗೂ ಗಣಿ ಇಲಾಖೆ ಲೈಸೆನ್ಸ್ ಪಡೆಯುವ ಕುರಿತು ಮಾರ್ಗದರ್ಶನ ಮಾಡುವುದು. ಮಾಲೀಕರೆಲ್ಲ ಸೇರಿ ಒಂದು ವಾಟ್ಸಾಪ್ ಗ್ರೂಪ್ ಮಾಡಿಕೊಂಡು ಮಾಹಿತಿ ಹಂಚಿಕೆ ಮತ್ತು ಇತರೆ ಸಹಕಾರ ಪಡೆದುಕೊಳ್ಳಬೇಕು. ಪೊಲೀಸ್ ಇಲಾಖೆ ಸಂಪರ್ಕದಲ್ಲಿದ್ದು ನಿಯಮಗಳನ್ನು ಅನುಸರಿಸಬೇಕು ಎಂದರು.

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಅವಘಡ ಎಲ್ಲಿಯಾದರೂ ಸಂಭವಿಸಬಹುದು. ಶಿವಮೊಗ್ಗದ ಹುಣಸೋಡಿನಲ್ಲಿ ನಡೆದ ಸ್ಫೋಟಕ ಅವಘಡದಲ್ಲಿ ಎಕ್ಸ್‍ಪ್ಲೋಸಿವ್ ರೂಲ್ಸ್ ಹಾಗೂ ಎಕ್ಸ್‍ಪ್ಲೋಸಿವ್ ಕಾಯ್ದೆಯ ನಿಯಮಾವಳಿಗಳನ್ನು ಎಲ್ಲೂ ಅನುಸರಿಸಿಲ್ಲ.

ಎಲ್ಲ ನಿಯಮಾವಳಿ ಗಾಳಿಗೆ ತೂರಿದ ಕಾರಣ ಆ ದುರಂತ ಸಂಭವಿಸಿದ್ದು, ಸ್ಪೋಟಕ ತುಂಬಿದ ವಾಹನಗಳು ಚಿತ್ರದುರ್ಗ-ದಾವಣಗೆರೆ ಮೂಲಕ ಹೆಬ್ಬಾಳು ಟೋಲ್‍ನಲ್ಲಿ ಹಾದು ಹೋಗಿವೆ. ಸ್ಪೋಟಕ ವಾಹನಗಳ ನಡುವಿನ ಅಂತರ ಕೂಡ ನಿರ್ವಹಿಸಲಾಗಿಲ್ಲ. ಜೊತೆ ಜೊತೆಗೇ ತೆರಳಿವೆ. ಅಕಸ್ಮಾತ್ ಇಲ್ಲಿ ಸ್ಪೋಟ ಆಗಿದ್ದರೂ ಯತೇಚ್ಚವಾಗಿ ಹಾನಿಯಾಗುತ್ತಿತ್ತು.

ಆದ ಕಾರಣ ಯಾವುದೇ ಕ್ವಾರಿ ಮಾಲೀಕರು ಅಧಿಕೃತವಾಗಿ ಲೈಸೆನ್ಸ್ ಪಡೆದು, ಕಾಯ್ದೆಯಲ್ಲಿನ ಎಲ್ಲ ನಿಯಮಾವಳಿಗಳನ್ನು ಅನುಸರಿಸಿ ತಮ್ಮ ಚಟುವಟಿಕೆ ನಡೆಸಬೇಕು. ಲೈಸೆನ್ಸ್ ಪಡೆದ ಮಾಲೀಕರು ಸ್ಫೋಟಕ್ಕೂ ಮುನ್ನ ಸ್ಥಳೀಯ ಪೊಲೀಸ್ ಠಾಣೆಗೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಗಮನಕ್ಕೆ ತರಬೇಕು. ಪೊಲೀಸರ ಸಮ್ಮುಖದಲ್ಲಿ ಸ್ಪೋಟ ನಡೆಯಬೇಕು ಎಂದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೋದಂಡರಾಮಯ್ಯ ಮಾತನಾಡಿ, ಈಗಾಗಲೇ ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಎರಡು ಬಾರಿ ಕ್ವಾರಿ ಮತ್ತು ಕ್ರಷರ್‍ಗಳಿಗೆ ತೆರಳಿ ಪರಿಶೀಲನೆ ನಡೆಸಿ ವರದಿ ತಯಾರಿಸಲಾಗಿದೆ. ಕೆಲಸ ಮಾಡದೇ ಇರುವ ಐಡಲ್ ಕ್ವಾರಿಗಳಿಗೆ 30 ದಿನಗಳ ನೋಟಿಸ್ ನೋಡಿ ಅವಕಾಶ ನೀಡಲಾಗುವುದು.

ಆದಾಗ್ಯೂ ಅವರು ಕ್ವಾರಿ ಕಾರ್ಯಾರಂಭಿಸದಿದ್ದರೆ ಕಲ್ಲುಗಣಿ ಗುತ್ತಿಗೆಯನ್ನು ರದ್ದುಪಡಿಸಲಾಗುವುದು. ಕಲ್ಲುಗಣಿ ಸುರಕ್ಷತೆ ಮತ್ತು ಅನಧಿಕೃತ ಗಣಿಗಾರಿಕೆ ತಡೆ ಮಾಸಿಕ ಸಪ್ತಾಹದ ಅಂಗವಾಗಿ ನಮ್ಮ ಭೂವಿಜ್ಞಾನಿಗಳು ಮತ್ತು ಸಿಬ್ಬಂದಿ ಪ್ರತಿದಿನ ಕ್ವಾರಿಗಳಿಗೆ ತೆರಳಿ ಕಲ್ಲುಗಣಿ ಸುರಕ್ಷತೆ, ಗಡಿ ಪ್ರಾಂತ್ಯ, ತಡೆಗೋಡೆ ನಿರ್ಮಾಣ ಸೇರಿದಂತೆ ಇನ್ನಿತರೆ ನಿಯಮಾವಳಿಗಳ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ ಎಂದರು.

ಸಭೆಯಲ್ಲಿ ದಾವಣಗೆರೆ ಉಪವಿಭಾಗಾರಿ ಮಮತಾ ಹೊಸಗೌಡರ್, ತಾಲ್ಲೂಕುಗಳ ತಹಶೀಲ್ದಾರರು, ಡಿವೈಎಸ್‍ಪಿಗಳು, ಸಿಪಿಐ ಮತ್ತು ಇತರೆ ಸಿಬ್ಬಂದಿ ಹಾಗೂ ಕ್ರಷರ್ ಮತ್ತು ಕ್ವಾರಿಗಳ ಮಾಲೀಕರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending