Connect with us

ದಿನದ ಸುದ್ದಿ

ದಾವಣಗೆರೆ ದುಗ್ಗಮ್ಮನ ದೇವಸ್ಥಾನದ ಬಳಿ ಸ್ಪೋಟಕ ಪತ್ತೆ ; ಪ್ರಕರಣ ದಾಖಲು : ಎಸ್ ಪಿ ಹನುಮಂತರಾಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ : ಪಿಪಿಟಿ ಪ್ರದರ್ಶನದ ಮೂಲಕ ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರಿಗೆ ಎಕ್ಸ್‍ಪ್ಲೋಸಿವ್ ಕಾಯ್ದೆ, ಸಬ್ಸ್‍ಟೆನ್ಸ್ ಕಾಯ್ದೆ ಹಾಗೂ ಎಕ್ಸ್‍ಪ್ಲೋಸಿವ್ ರೂಲ್ಸ್ 2008 ರ ಬಗ್ಗೆ ವಿವರವಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ತಿಳಿಸಿದರು.

ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಕಲ್ಲುಗಣಿ ಸುರಕ್ಷತೆ ಮತ್ತು ಅನಧಿಕೃತ ಗಣಿಗಾರಿಕೆ ತಡೆ ಮಾಸಿಕ ಸಪ್ತಾಹದ ಅಂಗವಾಗಿ ಬುಧವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆ ವತಿಯಿಂದ ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಮಾಲೀಕರು ಕಡ್ಡಾಯವಾಗಿ ಅನುಸರಿಸಬೇಕಾದ ಸುರಕ್ಷತಾ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದ ಅವರು ಶಿವಮೊಗ್ಗದ ಹುಣಸೋಡಿನಲ್ಲಿ ಸ್ಫೋಟ ಸಂಭವಿಸಲು ಕಾರಣ ಇದ್ಯಾವ ನಿಯಮಗಳನ್ನು ಪಾಲಿಸದೇ ಇರುವುದಾಗಿದ್ದು, ಸ್ಪೋಟಕಗಳ ಬಳಕೆಯಲ್ಲಿ ನಿರ್ಲಕ್ಷ್ಯದಿಂದಾಗಿ ಸಾವುನೋವಿಗೆ ಕಾರಣವಾಗಿದ್ದು, ಈ ಪ್ರಕರಣದ ಕುರಿತು ತನಿಖೆ ಜಾರಿಯಲ್ಲಿದೆ ಎಂದರು.

ದಾವಣಗೆರೆ ನಗರದಲ್ಲಿಯೇ ದುಗ್ಗಮ್ಮನ ಜಾತ್ರೆ ತರುವಾಯ ದೇವಸ್ಥಾನದ ಸುಮಾರು 300 ಮೀಟರ್ ಅಂತರದಲ್ಲಿ ಹಂಚಿನ ಗೋದಾಮುವೊಂದರಲ್ಲಿ ದೊಡ್ಡ ಪ್ರಮಾಣದ ಸ್ಪೋಟಕವನ್ನು ಸಂಗ್ರಹಿಸಿರುವುದನ್ನು ಪತ್ತೆ ಹಚ್ಚಿ ಸೀಜ್ ಮಾಡಿ ಪ್ರಕರಣ ದಾಖಲಿಸಲಾಗಿದೆ. ಹಾಗೂ ಆಜಾದ್ ನಗರದ ಕಟ್ಟಡದ ಬೇಸ್‍ಮೆಂಟ್‍ನಲ್ಲಿ ಸಂಗ್ರಹಿಸಿಡಲಾಗಿದ್ದ ಸ್ಪೋಟಕವನ್ನು ಸೀಜ್ ಮಾಡಿ ಸಂಬಂಧಿಸಿದವರನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಲೈಸೆನ್ಸ್‍ನ್ನು ಕೂಡ ನಿಯಮಾನುಸಾರ ನಿಲಂಬನೆಯಲ್ಲಿಡಲಾಗಿದೆ.

ಕಾಡಜ್ಜಿ ಬಳಿ ಕೂಡ ಸ್ಪೋಟಕ ಸೀಜ್ ಮಾಡಿ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ ಎಂದ ಅವರು ಸ್ಪೋಟಕಗಳ ಬಗ್ಗೆ ಅತಿ ಜಾಗರೂಕರಾಗಿ ನಿಯಮ ಪಾಲಿಸದಿದ್ದರೆ ಅವಘಡಕ್ಕೆ ಕಾರಣರಾಗುತ್ತೀರೆಂದು ಎಚ್ಚರಿಕೆ ನೀಡಿದರು.

ರೈತ ಮುಖಂಡರಾದ ಬಲ್ಲೂರು ರವಿಕುಮಾರ್ ಮಾತನಾಡಿ ಕ್ರಷರ್‍ಗಳಿಂದ ಬರುವ ಗಾಡಿಗಳು ಅತೀ ತೂಕ ಹೊತ್ತು ಓಡಾಡುತ್ತಿದ್ದು, ಇದರಿಂದ ಗ್ರಾಮೀಣ ರಸ್ತೆಗಳು ಹಾಳಾಗುತ್ತಿವೆ. ಈ ಬಗ್ಗೆ ಕ್ರಮ ವಹಿಸುವಂತೆ ಮನವಿ ಮಾಡಿದರು.

ಎಸ್‍ಪಿಯವರು ಪ್ರತಿಕ್ರಿಯಿಸಿ, ಗುತ್ತಿಗೆದಾರರು ವಾಹನಗಳು ಭಾರ ಹೊರುವ ಕುರಿತಂತೆ ಆರ್ ಟಿ ಒ ಕಚೇರಿಯಿಂದ ನೀಡುವ ಪರ್‍ಮಿಟ್ ಹೊಂದಿರಬೇಕು. ಸಾಗಣಿಕೆಯ ವಾಹನದಲ್ಲಿ ಹೆಚ್ಚುವರಿ ಭಾರವನ್ನು ಹೇರುವಂತಿಲ್ಲ. ಈ ರೀತಿ ಮಾಡಿದರೆ ರಸ್ತೆ, ಪಾದಚಾರಿಗಳು, ವಾಹನ ಚಾಲಕರು ಸೇರಿದಂತೆ ಎಲ್ಲರಿಗೆ ತೊಂದರೆಯಾಗುವ ಕಾರಣ ಹೆಚ್ಚುವರಿ ಲೋಡ್ ಹಾಕಬಾರದು ಎಂದರು.


ಗಣಿ ಮಾಡುವ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಕೆ ಕಡ್ಡಾಯ. ಗಣಿಗಾರಿಕೆ ಪ್ರದೇಶದ ಪ್ರವೇಶ, ನಿರ್ಗಮನ, ಗಣಿ ಸ್ಥಳ, ಸ್ಟೋರೇಜ್ ಪ್ರದೇಶಗಳಲ್ಲಿ ಸಿಸಿ ಟಿವಿ ಅಳವಡಿಸಬೇಕು. ಸಿಸಿಟಿವಿ ಅಳವಡಿಕೆಯಿಂದ ಸ್ಥಳದಲ್ಲಿ ಏನಾದರೂ ದುರ್ಘಟನೆಗಳು ಸಂಭವಿಸಿದರೆ ಪೊಲೀಸರಿಗೆ ತನಿಖೆ ನಡೆಸಲು ಅನುಕೂಲ. ಕರ್ನಾಟಕ ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಅನ್ವಯ ಎಲ್ಲೆಡೆ ಸಿಸಿಟಿವಿ ಅಳವಡಿಸಬೇಕು. ಸಿಸಿಟಿವಿಯ ಸಹಾಯದಿಂದ ನಡೆದ ಘಟನೆಗಳ ಬಗ್ಗೆ ಸಂರ್ಪೂಣವಾದ ಮಾಹಿತಿ ಹಾಗೂ ತನಿಖೆಗೆ ಬೇಕಾದ ಮೂಲಗಳನ್ನು ಪಡೆಯಬಹುದು. ಕೇವಲ ಕ್ವಾರಿಯಲ್ಲಿ ಮಾತ್ರವಲ್ಲದೇ, ಆಫೀಸ್, ಮನೆ, ದೇವಸ್ಥಾನಗಳಲ್ಲಿಯೂ ಕೂಡ ಸಿಸಿಟಿವಿಯನ್ನು ಅಳವಡಿಸಿಕೊಳ್ಳಬೇಕು.”

| ಹನುಮಂತರಾಯ, ಎಸ್‍ಪಿ


ಜಿಲ್ಲೆಯಲ್ಲಿ ಬ್ಲಾಸ್ಟಿಂಗ್ ಲೈಸೆನ್ಸ್ ಪಡೆದ 10 ಕ್ವಾರಿಗಳಿಗೆ ಇದುವರೆಗೆ ಕ್ವಾರಿಗಳಲ್ಲಿ ಸ್ಪೋಟಕ್ಕೆ ಮುನ್ನ ಪೊಲೀಸ್ ಮತ್ತು ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆಯೇ ಎಂದು ಎಸ್‍ಪಿಯವರು ಪ್ರಶ್ನಿಸಿ, ಅಧಿಕಾರಿಗಳನ್ನೂ ವಿಚಾರಿಸಿದರು. ಮಾಲೀಕರು ಈ ಬಗ್ಗೆ ತಮಗೆ ತಿಳಿದಿರಲಿಲ್ಲ ಎಂದು ಉತ್ತರಿಸಿದಾಗ, ನಿಮಗೆ ಎಲ್ಲ ತಿಳಿದಿದೆ. ಆದರೂ ಮನಸ್ಸಿಗೆ ಬಂದ ಹಾಗೆ ಮಾಡ್ತಿದ್ದೀರಿ. ಆದ ಕಾರಣ ನಿಮ್ಮ ಲೈಸೆನ್ಸ್‍ನ್ನು ಏಕೆ ರದ್ದುಪಡಿಸಬಾರದೆಂದು ನೋಟಿಸ್ ನೀಡಲಾಗುವುದು ಎಂದರು.

ಸದ್ಯಕ್ಕೆ ಲೈಸೆನ್ಸ್ ಇಲ್ಲದವರ ಚಟುವಟಿಕೆಯನ್ನು ಗಣಿ ಇಲಾಖೆಯಿಂದ ನಿಲ್ಲಿಸಲಾಗಿದ್ದು, ಲೈಸೆನ್ಸ್ ಪಡೆದ ನಂತರವೇ ತಮ್ಮ ಚಟುವಟಿಕೆ ಆರಂಭಿಸಬೇಕು. ಲೈಸೆನ್ಸ್ ಪಡೆಯಲು ಅಗತ್ಯವಾದ ಎನ್‍ಓಸಿ ಯನ್ನು ಎಸ್‍ಪಿ ಮತ್ತು ಡಿಸಿ ಕಚೇರಿಯಿಂದ ವಿಳಂಬವಿಲ್ಲದೇ ತಕ್ಷಣ ನೀಡಲಾಗುವುದು.

ಹಾಗೂ ಗಣಿ ಇಲಾಖೆ ಲೈಸೆನ್ಸ್ ಪಡೆಯುವ ಕುರಿತು ಮಾರ್ಗದರ್ಶನ ಮಾಡುವುದು. ಮಾಲೀಕರೆಲ್ಲ ಸೇರಿ ಒಂದು ವಾಟ್ಸಾಪ್ ಗ್ರೂಪ್ ಮಾಡಿಕೊಂಡು ಮಾಹಿತಿ ಹಂಚಿಕೆ ಮತ್ತು ಇತರೆ ಸಹಕಾರ ಪಡೆದುಕೊಳ್ಳಬೇಕು. ಪೊಲೀಸ್ ಇಲಾಖೆ ಸಂಪರ್ಕದಲ್ಲಿದ್ದು ನಿಯಮಗಳನ್ನು ಅನುಸರಿಸಬೇಕು ಎಂದರು.

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಅವಘಡ ಎಲ್ಲಿಯಾದರೂ ಸಂಭವಿಸಬಹುದು. ಶಿವಮೊಗ್ಗದ ಹುಣಸೋಡಿನಲ್ಲಿ ನಡೆದ ಸ್ಫೋಟಕ ಅವಘಡದಲ್ಲಿ ಎಕ್ಸ್‍ಪ್ಲೋಸಿವ್ ರೂಲ್ಸ್ ಹಾಗೂ ಎಕ್ಸ್‍ಪ್ಲೋಸಿವ್ ಕಾಯ್ದೆಯ ನಿಯಮಾವಳಿಗಳನ್ನು ಎಲ್ಲೂ ಅನುಸರಿಸಿಲ್ಲ.

ಎಲ್ಲ ನಿಯಮಾವಳಿ ಗಾಳಿಗೆ ತೂರಿದ ಕಾರಣ ಆ ದುರಂತ ಸಂಭವಿಸಿದ್ದು, ಸ್ಪೋಟಕ ತುಂಬಿದ ವಾಹನಗಳು ಚಿತ್ರದುರ್ಗ-ದಾವಣಗೆರೆ ಮೂಲಕ ಹೆಬ್ಬಾಳು ಟೋಲ್‍ನಲ್ಲಿ ಹಾದು ಹೋಗಿವೆ. ಸ್ಪೋಟಕ ವಾಹನಗಳ ನಡುವಿನ ಅಂತರ ಕೂಡ ನಿರ್ವಹಿಸಲಾಗಿಲ್ಲ. ಜೊತೆ ಜೊತೆಗೇ ತೆರಳಿವೆ. ಅಕಸ್ಮಾತ್ ಇಲ್ಲಿ ಸ್ಪೋಟ ಆಗಿದ್ದರೂ ಯತೇಚ್ಚವಾಗಿ ಹಾನಿಯಾಗುತ್ತಿತ್ತು.

ಆದ ಕಾರಣ ಯಾವುದೇ ಕ್ವಾರಿ ಮಾಲೀಕರು ಅಧಿಕೃತವಾಗಿ ಲೈಸೆನ್ಸ್ ಪಡೆದು, ಕಾಯ್ದೆಯಲ್ಲಿನ ಎಲ್ಲ ನಿಯಮಾವಳಿಗಳನ್ನು ಅನುಸರಿಸಿ ತಮ್ಮ ಚಟುವಟಿಕೆ ನಡೆಸಬೇಕು. ಲೈಸೆನ್ಸ್ ಪಡೆದ ಮಾಲೀಕರು ಸ್ಫೋಟಕ್ಕೂ ಮುನ್ನ ಸ್ಥಳೀಯ ಪೊಲೀಸ್ ಠಾಣೆಗೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಗಮನಕ್ಕೆ ತರಬೇಕು. ಪೊಲೀಸರ ಸಮ್ಮುಖದಲ್ಲಿ ಸ್ಪೋಟ ನಡೆಯಬೇಕು ಎಂದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೋದಂಡರಾಮಯ್ಯ ಮಾತನಾಡಿ, ಈಗಾಗಲೇ ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಎರಡು ಬಾರಿ ಕ್ವಾರಿ ಮತ್ತು ಕ್ರಷರ್‍ಗಳಿಗೆ ತೆರಳಿ ಪರಿಶೀಲನೆ ನಡೆಸಿ ವರದಿ ತಯಾರಿಸಲಾಗಿದೆ. ಕೆಲಸ ಮಾಡದೇ ಇರುವ ಐಡಲ್ ಕ್ವಾರಿಗಳಿಗೆ 30 ದಿನಗಳ ನೋಟಿಸ್ ನೋಡಿ ಅವಕಾಶ ನೀಡಲಾಗುವುದು.

ಆದಾಗ್ಯೂ ಅವರು ಕ್ವಾರಿ ಕಾರ್ಯಾರಂಭಿಸದಿದ್ದರೆ ಕಲ್ಲುಗಣಿ ಗುತ್ತಿಗೆಯನ್ನು ರದ್ದುಪಡಿಸಲಾಗುವುದು. ಕಲ್ಲುಗಣಿ ಸುರಕ್ಷತೆ ಮತ್ತು ಅನಧಿಕೃತ ಗಣಿಗಾರಿಕೆ ತಡೆ ಮಾಸಿಕ ಸಪ್ತಾಹದ ಅಂಗವಾಗಿ ನಮ್ಮ ಭೂವಿಜ್ಞಾನಿಗಳು ಮತ್ತು ಸಿಬ್ಬಂದಿ ಪ್ರತಿದಿನ ಕ್ವಾರಿಗಳಿಗೆ ತೆರಳಿ ಕಲ್ಲುಗಣಿ ಸುರಕ್ಷತೆ, ಗಡಿ ಪ್ರಾಂತ್ಯ, ತಡೆಗೋಡೆ ನಿರ್ಮಾಣ ಸೇರಿದಂತೆ ಇನ್ನಿತರೆ ನಿಯಮಾವಳಿಗಳ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ ಎಂದರು.

ಸಭೆಯಲ್ಲಿ ದಾವಣಗೆರೆ ಉಪವಿಭಾಗಾರಿ ಮಮತಾ ಹೊಸಗೌಡರ್, ತಾಲ್ಲೂಕುಗಳ ತಹಶೀಲ್ದಾರರು, ಡಿವೈಎಸ್‍ಪಿಗಳು, ಸಿಪಿಐ ಮತ್ತು ಇತರೆ ಸಿಬ್ಬಂದಿ ಹಾಗೂ ಕ್ರಷರ್ ಮತ್ತು ಕ್ವಾರಿಗಳ ಮಾಲೀಕರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.

ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending