Connect with us

ಲೈಫ್ ಸ್ಟೈಲ್

EyeballTattoo, ScrelalTattoo ಎಲ್ಲಾ ಓಕೆ,  ಕಣ್ಣು ಗುಡ್ಡೆಗೂ ಟಾಟೂ ಬೇಕೇ..!?

Published

on

  • ಚಿತ್ರಶ್ರೀ ಹರ್ಷ

ದಿನೇ ದಿನೇ ಯುವಪೀಳಿಗೆ ಯಲ್ಲಿ ಟಾಟು ಕ್ರೆಜ್ ಹೆಚ್ಚುತಿರುವುದು ಹೊಸದೆನಲ್ಲ. ಈಗಂತೂ ಯುವಕರ ಮೈಮೇಲೆ ಒಂದೆರಡಾದರೂ ಟಾಟು ಇರುವುದು ಮಾಮೂಲಾಗಿ ಬಿಟ್ಟಿದೆ. 24ರ ಹರೆಯದ  ಆಸ್ಟ್ರೇಲಿಯಾ ದ ಅಂಬುರ್ ಲುಕ್ #AmburLuke , ಎಂಬ ಈಕೆ ,  ಸದ್ಯ ಸೋಶಿಯಲ್ ಮೀದಿಯದಲ್ಲಿ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಗುಥಿದ್ದಾರೆ. ವಿಶಿಷ್ಟತೆ ಇರುವುದು ಈಕೆಯ ಟಾಟೂ ಕ್ರೆಜ್ ನಲ್ಲೇ.  ತನ್ನ 14 ನೇ ವಯಸ್ಸಿಗೇ,ಟಾಟೂ ಗೀಳು  ಮೈ ಗಂಟಿಸಿಕೊಂಡಿದ ಈಕೆ ಮಾಡಿದ್ದು ಮಾತ್ರ ಯಾರೂ ಊಹಿಸಲಾಗದ ಕೆಲಸ.

https://www.instagram.com/p/B7s8cV-IVOx/?utm_source=ig_web_copy_link

ಕಳೆದ ಒಂದು ದಶಕದಲ್ಲಿ ತನ್ನ ಇಡೀ ದೇಹವನ್ನ ಟಾಟೂವಿನಿಂದ ಮುಚ್ಚಿರುವ ಈಕೆ , ನವೊಂಬರ್ 2019 ರಲ್ಲಿ ಮಥೊಂದು (ದುಸ್ಸಾಹಸಕ್ಕೆ ! )ದೊಡ್ಡ ಸಾಹಸಕ್ಕೆ ಕೈ ಹಾಕಿಯೇಬಿಟ್ಟಳು. ಇದನ್ನ ಸಾಹಸ ಅನ್ನಬೆಕೊ , ಹುಚ್ಛುತನ ಅನ್ನಬೇಕೋ ತಿಳಿಯುತ್ತಿಲ್ಲ. ಕೈ,ಕಾಲು, ಸೊಂಟ, ಕತ್ತು,ಬೆನ್ನು, ಒಕ್ಕಳು , ಬೆರಳುಗಳ ಮೇಲೆ ಟಾಟೂ ಹಾಕಿಸಿಕೊಳ್ಳುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಮೈ ತುಂಬಾ ಬಣ್ಣದ ಟಾಟೂ ಗೀಚಿಸಿಕೊಳ್ಳುವ ಖಯಾಲಿಯನ್ನ ಬೇಕಾದರೂ ಫ್ಯಾಷನ್ ಎಂದು ಒಪ್ಪಬಹುದು. ಆದರೆ, “ಅತಿರೇಕಕ್ಕೆ ಮತಿ ಕೇಡು ” ಎಂಬ ನಾನ್ನುಡಿ ನೆನಪಿಸುವ ಹಾಗಿದೆ ಈಕೆಯ ಇತ್ತೀಚಿನ ಟಾಟೂ ಕ್ರೇಜ್!

https://www.instagram.com/p/B7e1MD_D0Jk/?utm_source=ig_web_copy_link

ನವೆಂಬರ್ 2019ರಲ್ಲಿ ಅಂಬರ್ ತನ್ನ ಕಣ್ಣು ಗುಡ್ಡೆಯ ಕಲರ್ ಟಾಟೂ ರಚಿಸುವ (ದು) ಸಾಹಸ ಮಾಡಿಯೇ ಬಿಟ್ಟಳು. ಕಣ್ಣು ಗುಡ್ಡೆ ಗೆ ನೀಲಿ ( turquoise) ಬಣ್ಣ ತುಂಬಿಸಿದ್ದು ತನ್ನನ್ನು ತಾನು #BlueEyeWhiteDragon “ಬ್ಲೂ ಐ ವೈಟ್ ಡ್ರಾಗನ್” ಎಂದು ತನ್ನ ಇಂಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾಳೆ ! ತನ್ನ ಇಡೀ ದೇಹವನ್ನು  200 ಟಾಟೂ ವಿನಿಂದ ಮುಚ್ಚಿ ಕೊಂಡಿರುವ ಈ ಹುಡುಗಿ,  #bodymodification ಹುಚ್ಚಿಗೆ ಬಿದ್ದಿದ್ದು, ಸೀಳು ನಾಲಿಗೆ,  ಕಿವಿ ತಿರುವಿಕೆ , ಮುಖದ ಟಾಟೂ, ಡರ್ಮಲ್ ಜಿವೆಲರಿ ಟ್ರೆಂಡ್ ಗಳನ್ನು ಮಾಡಿಸಿಕೊಂಡಿದ್ದಾಳೆ. ಇದ್ದೆಲ್ಲಕ್ಕೂ ಬರೋಬರ್ರಿ $26000 ಖರ್ಚು ಮಾಡಿದ್ಲಾಳೆ ಏ ಹುಡುಗಿ!

https://www.instagram.com/p/B6m7e2EDJfH/?utm_source=ig_web_copy_link

ಕಣ್ಣು ಗುಡ್ಡೆಯ ಬಿಳಿಯ ಭಾಗವನ್ನು ಟಾಟೂ ಇಂಕ್ ನಿಂದ ಕಲರ್ ಮಾಡುವ ಈ ಟ್ರೆಂಡ್ ಅಷ್ಟೇ ಅಪಾರಕಾರಿಯೂ ಹೌದು ! 40 ನಿಮಿಷಗಳ ಕಾಲ ನಡೆದ ಈ ಟಾಟೂ ಕಾಲರಿಂಗ್ ಸರಿ ಹೋಗದ ಕಾರಣ ಈಕೆ ಮೂರು ತಿಂಗಳು ಗಳ ಕಾಲ ಕಣ್ಣು ಕಳೆದು ಕೊಂಡು ಕುರುಡತ್ವಕ್ಕೆ ಕಾಲಿಡಬೇಕಾಯಿತು ! ಈಕೆ ಹೇಳಿದ್ದೇನೆಂದರೆ

” ನನಗೆ ಟಾಟೂ ರಚಿಸಿದಾತ ನಾಲ್ಕು ಬಾರಿ ನನ್ನ ಕಣ್ಣು ಗುಡ್ಡೆಯ ಪದರಕ್ಕೆ ಇಂಕ್ ಇಂಜೆಕ್ಟ್ ಮಾಡಿದ, ಇದರ ನೋವು ಒಂದೇ ಬಾರಿಗೆ ಒಡೆದ ಗಾಜನ್ನು ನನ್ನ ಕಣ್ಣಿಗೆ ತರುಕಿದಾಗ ಆಗುವಷ್ಟು ಉರಿ, ನೋವು ಉಂಟಾಯಿತು.  ಆತ ತುಂಬಾ ಜೋರಾಗಿ ನನ್ನ ಗುಡ್ಡೆಗೆ ಇಂಜೆಕ್ಟ್ ಮಾಡಿದ್ದರಿಂದ ನಾನು ಮೂರು ತಿಂಗಳು ಕುರುಡತ್ವಕ್ಕೆ ಕಾಲಿಡಬೇಕಾಯಿತು . ಆದರೂ ನಾನು ಟಾಟೂ ರಚಿಸಿಕೊಂಡಿದ್ದಕ್ಕೆ ಯಾವುದೇ ಪಶ್ಚಾತ್ತಾಪ ಇಲ್ಲ. ಇದು ನನ್ನ ಜೀವನದ ದೊಡ್ಡ ಅನುಭವ. ನಾನು ಇದನ್ನು ಸಂಭ್ರಮಿಸುತ್ತಿದ್ದೇನೆ ” ಎಂದು ನುಡಿದಿದ್ದಾರೆ 24 ರ ಹರೆಯದ  ಟಾಟೂ ಪ್ರಿಯೆ  ಅಂಬೂರ್ .

|BlueEyeWhiteDragon ಅಂಬೂರ್ ಲೂಕ್

ScrelalTattoo ಕಣ್ಣು ಗುಡ್ಡೆಯ ಟಾಟೂ!

ಕಣ್ಣಲ್ಲಿ,  ಕಣ್ಣು ಗುಡ್ಡೆಯ ಬಿಳಿಯ ಭಾಗವನ್ನು ಟಾಟೂ ಕಲರ್ ಮೂಲಕ ಬದಲಾಯಿಸುವ ಪರಿ ಹುಟ್ಟಿಕೊಂಡಿದ್ದು , ಸಿರಿಂಜ್ ನಲ್ಲಿ ಬಣ್ಣ ತುಂಬಿ,  ಕಣ್ಣು ಗುಡ್ಡೆಯ ಮ್ಲ್ಪದರಕ್ಕೆ ಇಂಜೆಕ್ಟ್ ಮಾಡಲಾಗುತ್ತದೆ ! ಇದರಿಂದ ಬಿಳಿಯ ಕಣ್ಣು ಗುಡ್ಡೆಯ ಭಾಗಕ್ಕೆ ನಿಮಗಿಷ್ಟವಾದ ಬಣ್ಣ ತುಂಬ ಬಹುದಾಗಿದೆ. ಪಾಶ್ಚಾತ್ಯ ರಾಷ್ಟ್ರ ಗಳಲ್ಲಿ ಈ ರೀತಿಯ ಪ್ರಯೋಗಗಳಿಗೇನೂ ಕಡಿಮೆ ಇಲ್ಲ.  ಕೆಂಪು,  ನೀಲಿ,ಕಪ್ಪು, ಹಸಿರು, ನೇರಳೇ ಬಣ್ಣದ ಕಣ್ಣು ಗುಡ್ಡೆಯ ಟಾಟೂ ಮಾಡಿಸಿಕೊಂಡವರು ಬಹಳಷ್ಟು ಮಂದಿ ಇದ್ದಾರೆ.

https://www.instagram.com/p/B6QxNhLBFsi/?utm_source=ig_web_copy_link

#EyeballTattoo ಕಣ್ಣು ಗುಡ್ಡೆಯ  ಒಳಗೆ ಟಾಟೂ ಡಿಸೈನಿಂಗ್ ಕ್ರೇಜ್ !

ಇತ್ತೀಚಿನ ಆಧುನಿಕ ಫ್ಯಾಷನ್ ಜಗತ್ತಿನಲ್ಲಿ ಚಿತ್ರ ವಿಚಿತ್ರ ಫ್ಯಾಷನ್ ನದ್ದೇ ಪರ್ವ ಕಾಲ.ಕಣ್ಣು ಗುಡ್ಡೆಯ ಬಿಳಿಯ ಭಾಗದಲ್ಲಿ ಸ್ಟಾರ್,  ಹಾರ್ಟ್,  ಲವ್ , ಹೆಸರು, ಕರೆಸಿಕೊಳ್ಳುವ ಟ್ರೆಂಡ್ ಒಂದು ಶುರುವಾಗಿದೆ.  ಬಹಳ ಭಯಾನಕ ಹಾಗೂ ವೈದ್ಯಕೀಯ ಲೋಕದಲ್ಲಿ ದೊಡ್ಡ ಪ್ರಮಾಣದಲ್ಲಿ ಚರ್ಚೆ ಗೆ ಸಾಕ್ಷಿ ಯಾಗಿದೆ.

ಕಣ್ಣು ದೇಹದಲ್ಲಿ ಬಹಳ ಸೂಕ್ಷ್ಮವಾದ ಭಾಗ. ಹೊರ ಜಗತ್ತಿನ ಬಣ್ಣ ವನ್ನು ನಾವು ನೋಡುವುದೇ ಕಣ್ಣುಗಳಿಂದ . ಕಣ್ಣು ಗುಡ್ಡೆಯ ಒಳಗೆ ಟಾಟೂ ಮಾಡಿಸುವುದು , ಟಾಟೂ ಇಂಕ್  ಇಂಜೆಕ್ಟ್ ಮಾಡುವುದು ಅದೆಷ್ಟರಮಟ್ಟಿಗೆ  ವೈದ್ಯಕೀಯ ವಾಗಿ
ಸರಿ ಎಂಬ ಚರ್ಚೆ ಗಳು ನಡೆಯುತ್ತದೆ ಇದೆ. ಇದರ ನಡುವೆಯೇ #EyeballTattoo ಕ್ರೇಜ್ ಜನರಲ್ಲಿ ಹೆಚ್ಚುತ್ತಲೇ ಇದೆ!

https://www.instagram.com/p/Bz-lopNAqUh/?utm_source=ig_web_copy_link

ಭಾರತಕ್ಕೂ ಕಾಲಿಟ್ಟ ScrelalTattoo

https://www.instagram.com/p/BZpWPgQHmwY/?utm_source=ig_web_copy_link

ದಿಲ್ಲಿ ಯ ಟಾಟೂ ಆರ್ಟಿಸ್ಟ್ ,  ಕರಣ್ ಕಿಂಗ್ ,ತನ್ನ ಕಣ್ಣು ಗುಡ್ಡೆಗೆ ಕಪ್ಪು ಇಂಕ್ ಇಂಜೆಕ್ಟ್ ಮಾಡಿಸಿಕೊಂಡು 2017 ರಲ್ಲಿ ಭಾರೀ ಚರ್ಚೆ ಗೆ ಗ್ರಾಸವಾಗಿದ್ದರು .

ScrelalTattooFailures ವೈಫಲ್ಯಗಳನ್ನು ಕಂಡುಕೊಳ್ಳುವ ಕಣ್ಣು ಗುಡ್ಡೆಯ ಟಾಟೂ ಕ್ರೇಜ್!

https://www.instagram.com/p/BO2xlPlF_d1/?utm_source=ig_web_copy_link

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಹೆಸರಲ್ಲೇ ಕಲೆ ಬೆರತಿರುವವಳು ನಾನು ಚಿತ್ರಶ್ರೀ ಹರ್ಷ. ವೃತ್ತಿಯಲ್ಲಿ ಉಪನ್ಯಾಸಕಿ. ಹುಟ್ಟಿದ್ದು ಬೆಳೆದದ್ದು ಬೆಂಗಳೂರಿನಲ್ಲಿ. ಬೆಂಗಳೂರು ವಿಶ್ವವಿದ್ಯಾಲಯದ ದ M.A Economics ಪದವೀಧರೆ. M.phil ಕೂಡ ಮುಗಿದಿದ್ದು ಬಿ.ಬಿ.ಎಂ.ಪಿ ಕಾಲೇಜಿನಲ್ಲಿ ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಫ್ಯಾಷನ್ ಸೆಳೆತ ಚಿಕ್ಕಂದಿನಿಂದಲೂ ಇದ್ದೇ ಇತ್ತು. ಅದಕ್ಕೆ ತಕ್ಕಂತೆ ಫ್ಯಾಷನ್ ಲೋಕವೂ ಕೈ ಬೀಸಿ ಕರೆಯುತ್ತಿತ್ತು. ಬಾಲ್ಯದ ಆಸೆ ಈಗ ಈಡೇರಿದೆ. ಫ್ಯಾಷನ್ ಲೋಕದಲ್ಲಿ "ನೈಲ್ ಆರ್ಟ್ ಸ್ಪೆಷಲಿಸ್ಟ" ಎಂಬ ಬಿರದು ನನ್ನದಾಗಿದೆ. ಹಲವಾರು ಖಾಸಗಿ ವಾಹಿನಿಗಳಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದು, ಸಂಯುಕ್ತ ಕರ್ನಾಟಕ ಹಾಗೂ ಕರ್ಮವೀರ ಪತ್ರಿಕೆ ಗಳಿಗೆ ಫ್ಯಾಷನ್ ಲೇಖನ ಬರೆಯುತ್ತಿದ್ದೇನೆ. ಬ್ಯೂಟಿ ಟ್ರೆಂಡ್ ಹಾಗೂ ನೈಲ್ ಆರ್ಟ್ ನಲ್ಲಿ ವಿನೂತನ ಹಾಗೂ ಟ್ರೆಂಡೀ ಲುಕ್ ಸೃಷ್ಟಿಸುವುದು ನನ್ನ ಹವ್ಯಾಸ. ಹಲವಾರು ಕವನಗಳನ್ನು ಬರೆದಿದ್ದು, ಪ್ರತಿಷ್ಠಿತ ದಿನಪತ್ರಿಕೆ ಗಳಲ್ಲಿ ಪ್ರಕಟವಾಗಿದೆ.

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

Trending