ದಿನದ ಸುದ್ದಿ
ರೈತ ದಿನಾಚರಣೆ ದಿನವೇ ರೈತ ಆತ್ಮಹತ್ಯೆಗೆ ಶರಣು
ಸುದ್ದಿದಿನ,ಮಂಡ್ಯ : ಮದ್ದೂರು ತಾಲ್ಲೂಕಿನ ಬಿದರಹಳ್ಳಿ ಗ್ರಾಮದ ಮಾದಯ್ಯ(58) ಎಂಬ ರೈತ ಕೈಯಲ್ಲಿ ಡೆತ್ ನೋಟ್ ಹಿಡಿದು ಕೊಂಡು ತನ್ನ ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾನಾಗಿದ್ದಾನೆ
ಸುಮಾರು ಎರಡು ಎಕರೆ ಜಮೀನಿದ್ದು ಕಬ್ಬು ಭತ್ತ ಬೆಳೆಯುತ್ತಿದ್ದರು ಬೆಳೆಗೆ ಸರಿಯಾದ ಬೆಲೆ ಸಿಗದ ಪರಿಣಾಮ ಸುಮಾರು 4 ಲಕ್ಷ ರೂಪಾಯಿ ಸಾಲ ಇತ್ತು ಎಂದು ತಿಳಿದು ಬಂದಿದೆ.ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.ಕೆ.ಎಂ. ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401