ದಿನದ ಸುದ್ದಿ
ರೈತರ ಬರಪರಿಹಾರ ಹಣವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡುವಂತಿಲ್ಲ
ಸುದ್ದಿದಿನ ಡೆಸ್ಕ್ : ರೈತರ ಬ್ಯಾಂಕ್ ಖಾತೆಗೆ ಬರುವ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ಸೂಚನೆ ನೀಡಿದ್ದಾರೆ.
ಬರ ಪರಿಹಾರದ ಮೊತ್ತವನ್ನು ಬ್ಯಾಂಕ್ ಅಧಿಕಾರಿಗಳು ಸಾಲ ರೂಪದಲ್ಲಿ ಕಡಿತಗೊಳಿಸುತ್ತಿರುವುದಾಗಿ ಕೆಲ ರೈತರು ದೂರು ನೀಡಿದ್ದಾರೆ.
ಈ ನಿಟ್ಟಿನಲ್ಲಿ ಪ್ರಕೃತಿ ವಿಕೋಪದಡಿ ಸಂದಾಯವಾಗುವ ಹಣವನ್ನು ರೈತರ ಸಾಲದ ಖಾತೆಗೆ ಜಮಾ ಮಾಡುವಂತಿಲ್ಲವೆಂದು ಸರ್ಕಾರದ ಸ್ಪಷ್ಟ ನಿರ್ದೇಶನವಿದೆ. ಈ ರೀತಿ ಮಾಡಿದಲ್ಲಿ ಸರ್ಕಾರದ ನಿದರ್ಶನ ಉಲ್ಲಂಘಿಸಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243