ನೆಲದನಿ

ರೈತ ಹೋರಾಟಗಾರ `ಸಹಜಾನಂದ ಸರಸ್ವತಿ’

Published

on

ತ್ತರಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ 22 ಫೆಬ್ರವರಿ 1889 ರಂದು ಜನಿಸಿ, ಜೂನ್ 26,1950 ರಂದು ನಿಧನರಾದ ಸಹಜಾನಂದ್ ಸರಸ್ವತಿ ಅವರ ನಿಜವಾದ ಹೆಸರು ನವರಂಗ್ ರೈ. ಹೋರಾಟ ಮನೋಭಾವದ ಸಹಜಾನಂದರು ಬಹುಮುಖ ಪ್ರತಿಭೆ. ಕ್ರಾಂತಿಕಾರಿ ರೈತ ನಾಯಕ, ಇತಿಹಾಸಕಾರ, ದಾರ್ಶನಿಕ, ಬರಹಗಾರ. ಅವರ ಮುಖ್ಯ ಬರಹ-ಕೃತಿ ಬಿಹಾರವನ್ನು ಕೇಂದ್ರೀಕರಿಸಿದೆ. ಅವರು ಬಿಹ್ತಾದಲ್ಲಿ ಆಶ್ರಮವನ್ನು ಸ್ಥಾಪಿಸಿದ್ದರು ಮತ್ತು ಅಲ್ಲಿಂದ ತಮ್ಮ ವೃದ್ದಾಪ್ಯದ ದಿನಗಳಲ್ಲಿ ತಮ್ಮ ಹೆಚ್ಚಿನ ಕಾರ್ಯಗಳನ್ನು ನಿರ್ವಹಿಸಿದರು.

ಸಹಜಾನಂದರು 1929ರಲ್ಲಿ ಬಿಹಾರ ಪ್ರಾಂತೀಯ ಕಿಸಾನ್ ಸಭೆಯನ್ನು (ಬಿಪಿಕೆಎಸ್) ರಚಿಸಿದರು. ಜಮೀನ್ದಾರರಿಂದ ಭೂ ಹಿಡುವಳಿ ಕುರಿತಾಗಿ ರೈತರ ಮೇಲೆ ನಡೆಯುತ್ತಿದ್ದ ದಾಳಿಗಳ ವಿರುದ್ಧ ರೈತರ ಕುಂದುಕೊರತೆಗಳನ್ನು ಒಟ್ಟುಗೂಡಿಸುವ ಸಲುವಾಗಿ ಈ ಸಂಘಟನೆ-ಹೋರಾಟವನ್ನು ಅವರು ಆರಂಭಿಸಿದರು. ಆ ಮೂಲಕ ಭಾರತದಲ್ಲಿ ರೈತರ ಚಳುವಳಿಗಳಿಗೆ ನಾಂದಿ ಹಾಡಿದರು.

ಕ್ರಮೇಣ ರೈತ ಚಳುವಳಿ ತೀವ್ರಗೊಂಡಿತು ಮತ್ತು ಭಾರತದ ಉಳಿದ ಭಾಗಗಳಿಗೆ ಹರಡಿತು. ಇದು 1936 ರಲ್ಲಿ ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ರಚನೆಗೆ ಕಾರಣವಾಯಿತು, ಅವರು ಅದರ ಮೊದಲ ಅಧ್ಯಕ್ಷರಾಗಿ ಆಯ್ಕೆಯಾದರು. ಕಿಸಾನ್ ಪ್ರಣಾಳಿಕೆ ಜಮೀನ್ದಾರಿ ವ್ಯವಸ್ಥೆಯನ್ನು ರದ್ದುಪಡಿಸಬೇಕು ಮತ್ತು ಗ್ರಾಮೀಣ ಸಾಲಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿತು. ಆ ಜಮೀನ್ದಾರರನ್ನು ಬ್ರಿಟಿಷ್ ಸರ್ಕಾರ ಆದಾಯ ಸಂಗ್ರಹಕ್ಕಾಗಿ ನೇಮಕ ಮಾಡಿಕೊಂಡಿತ್ತು.

ಇದನ್ನೂ ಓದಿ | ಕ್ರಾಂತಿಕಾರಿ ರೈತ ಹೋರಾಟದ ಸ್ಫೂರ್ತಿಯ ಚಿಲುಮೆ `ಅಜಿತ್ ಸಿಂಗ್

ಭೂ ಮಾಲೀಕತ್ವವನ್ನು ಉಳಿಸಲು ಮತ್ತು ರೈತರ ಉಳುಮೆಯ ಹಕ್ಕುಗಳನ್ನು ಉಳಿಸಿಕೊಳ್ಳಲು ನಡೆದ ಈ ಚಳುವಳಿ, ಬಿಹಾರ ಮತ್ತು ಯುನೈಟೆಡ್ ಪ್ರಾಂತ್ಯದ ಕಾಂಗ್ರೆಸ್ ಸರ್ಕಾರಗಳೊಂದಿಗೆ ಸಂಘರ್ಷ ಎದುರಿಸಬೇಕಾಗಿತು.

ಸಹಜಾನಂದ ಸರಸ್ವತಿ 1937-1938ರಲ್ಲಿ ಬಿಹಾರದಲ್ಲಿ ಬಕಾಶ್ತ್ ಚಳವಳಿಯನ್ನು ಸಂಘಟಿಸಿ ಮುನ್ನಡೆಸಿದರು. ಬಕಾಶ್ತ್ ಎಂದರೆ ಸ್ವಯಂ-ಕೃಷಿ, ಸ್ವಯಂ ಉಳುಮೆ. ಈ ಆಂದೋಲನವು ಜಮೀನ್ದಾರರ ಬಕಾಶ್ತ್ ಜಮೀನುಗಳಿಂದ ಟೆನೆಂಟ್‌ಗಳನ್ನು ಹೊರಹಾಕುವುದರ ವಿರುದ್ಧವಾಗಿತ್ತು. ಇದು ಬಿಹಾರ ಹಿಡುವಳಿ ಕಾಯ್ದೆ ಮತ್ತು ಬಕಾಶ್ತ್ ಭೂ ತೆರಿಗೆಯನ್ನು ಅಂಗೀಕರಿಸಲು ಕಾರಣವಾಯಿತು. ಕ್ವಿಟ್ ಇಂಡಿಯಾ ಚಳವಳಿಯ ಸಂದರ್ಭದಲ್ಲಿ ಸಹಜಾನಂದರನ್ನು ಬಂಧಿಸಲಾಗಿತ್ತು.

(ಕೃಪೆ : Mass Media Foundation)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version