ದಿನದ ಸುದ್ದಿ
ದಾವಣಗೆರೆ | ಸಿಎಂ ಯಡಿಯೂರಪ್ಪ ಫೋಟೋ ಗೆ ಚಪ್ಪಲಿಯಿಂದ ಹೊಡೆಯುವುದರ ಮೂಲಕ ರೈತ ಸಂಘಟನೆಗಳ ಆಕ್ರೋಶ : ವಿಡಿಯೋ ನೋಡಿ
ಸುದ್ದಿದಿನ, ದಾವಣಗೆರೆ : ಎಪಿಎಂಸಿ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧ ಬಂದ್ ಹಿನ್ನೆಲೆ ಸೋಮವಾರ ನಗರದಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡಿಸಿದವು.
ಸಿಎಂ ಯಡಿಯೂರಪ್ಪ ಅವರ ಫೋಟೋಗೆ ಚಪ್ಪಲಿಯಿಂದ ಹೊಡೆಯುವುದರ ಮೂಲಕ ರೈತ ವಿರೋಧಿ ಕಾಯ್ದೆಗಳ ತಿದ್ದುಪಡಿ ಕಾಯ್ದೆಗಳನ್ನು ಜಾರಿಗೆ ತರದಂತೆ ಒತ್ತಾಯಿಸಿ ಘೋಷಣೆ ಕೂಗುವುದರ ಮೂಲಕ ಕೋಡಿಹಳ್ಳಿ ಚಂದ್ರಶೇಖರ್ ಬಣವು ಆಕ್ರೋಶ ವ್ಯಕ್ತಪಡಿಸುತ್ತ ಪ್ರತಿಭಟನೆ ನಡೆಸಿದವು.
ಹಾಗೇ ಸಿಎಂ ಯಡಿಯೂರಪ್ಪ ಪ್ರತಿಕೃತಿ ದಹಿಸಿ
ನಗರದ ಗುಂಡಿ ವೃತ್ತದಲ್ಲಿ ಬಿಎಸ್ವೈ ಪ್ರತಿಕೃತಿ ದಹಿಸಿ ಹುಚ್ಚವ್ವನಹಳ್ಳಿ ಮಂಜುನಾಥ ಬಣದ ರೈತ ಸಂಘದಿಂದ ಪ್ರತಿಭಟನೆ ನಡೆಸಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.
ವಿಡಿಯೋ ನೋಡಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243