ಲೈಫ್ ಸ್ಟೈಲ್
‘ಫ್ಯಾಟ್ ಈಸ್ ಬ್ಯೂಟಿ’ ವಿದ್ಯಾಬಾಲನ್ ಬ್ಯೂಟಿ ಸೀಕ್ರೇಟ್…!
![](https://suddidina.com/wp-content/uploads/2018/06/Vidyabalana-suddidina1.jpg)
ಹಲೋ… ತುಮಾರಿ ಸುಲು….! ಎಂಟರ್ಟೈನ್ಮೆಂಟ್ ಎಂಟರ್ಟೈನ್ಮೆಂಟ್ ಎಂಟರ ಟೈನ್ಮೆಂಟ್..! ಈ ಡೈಲಾಗ್ ಕೇಳಿದ್ರೆ ಸಾಕು ಥಟ್ಟನೇ ನೆನಪಾಗೋದು ಬಾಲಿವುಡ್ನ ಸೀರೆ ಸುಂದರಿ ವಿದ್ಯಾ ಬಾಲನ್…! ಚೆಂದದ ಸೀರೆಯುಟ್ಟು , ಆಕರ್ಷಕವಾಗಿ ಕಾಣುವ ಮುದ್ದು ಬೊಂಬೆ..! ಇತ್ತಿಚ್ಚೆಗೆ ಸ್ವಲ್ಪ ದಪ್ಪಗಾಗಿರುವ ವಿದ್ಯಾ ಬಾಲನ್…! ದಪ್ಪ ಇದ್ರೂ ಬ್ಯೂಟಿಫುಲ್ ಆಗಿರಬಹುದು ಅನ್ನೋದನ್ನ ತೋರಿಸಿಕೊಟ್ಟವರು. ಹಾಗಾದ್ರೆ ವಿದ್ಯಾ ಫ್ಯಾಟ್ ಇದ್ರೂ ಬ್ಯೂಟಿಫುಲ್ ಆಗಿ, ಹೆಲ್ದಿಯಾಗಿ ಕಾಣೋದಕ್ಕೆ ಏನೆಲ್ಲಾ ಮಾಡ್ತಾರೆ ಗೊತ್ತಾ..?
ವಿದ್ಯಾ ಬಾಲನ್ ದಕ್ಷಿಣದಿಂದ ಉತ್ತರಕ್ಕೆ ಹಾರಿದ ಸುಂದರಿ…! ಡಿಂಪಲ್ ನಗುವಿನಲ್ಲೇ ಸೆಳೆದ ಸುಂದರಿ…! ವುಮೆನ್ ಸೆಂಟ್ರಿಕ್ ಪಾತ್ರಗಳಲ್ಲೇ ಹೆಚ್ಚು ಗುರುತಿಸಿಕೊಂಡ ಬೆಡಗಿ ವಿದ್ಯಾಬಾಲನ್… ಆರಂಭದಿಂದಲೂ ತನ್ನದೇ ವಿಶಿಷ್ಟ ಸ್ಟೈಲ್ ಫಾಲೋ ಮಾಡ್ತಿರುವ ವಿದ್ಯಾ ಸಾಕಷ್ಟು ಮಹಿಳೆಯರಿಗೆ ಸ್ಪೂರ್ತಿ…!
ಡರ್ಟಿ ಪಿಕ್ಚರ್ ಮೂಲಕ ಸ್ವಲ್ಪ ದಪ್ಪಗಾದ ನಟಿ, ಸಣ್ಣ ಆಗೋದ್ರ ಬಗ್ಗೆ ಯೋಚ್ನೆ ಮಾಡಿದ್ರೂ ಸಹ ಝೀರೋ ಸೈಜ್ಗೆ ಮಾರು ಹೋಗಿಲ್ಲ. ಬದಲಿಗೆ ಫ್ಯಾಟ್ ಇಸ್ ಬ್ಯೂಟಿ ಅಂತಿದ್ದಾರೆ. ಅಷ್ಟೇ ಅಲ್ಲದೇ ದಪ್ಪ ಇದ್ದುಕೊಂಡೇ ಬಿಗ್ ಬಜೆಟ್ ಸಿನಿಮಾಗಳಲ್ಲಿ ಅಭಿನಯಿಸುತ್ತಾ ಹಿಟ್ ಚಿತ್ರಗಳನ್ನು ಕೊಡುತ್ತಲೇ ಬಂದಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾ ಬಾಲನ್ ನಾವು ದಪ್ಪ ಎಂದು ಕೊರಗುವ ಹೆಣ್ಣು ಮಕ್ಕಳಿಗೆ ಚಿಯರ್ ಅಪ್ ಲೇಡೀಸ್ ಅಂತಿದ್ದಾರೆ.
ಈಗಾಗಲೇ ವಿದ್ಯಾ ಲಿಟಲ್ ಫ್ಯಾಟ್ ಅನ್ನಿಸುತ್ತಿದ್ರೂ, ಆರೋಗ್ಯದ ಬಗ್ಗೆ ಕಾಳಜಿ ವಹಿಸ್ತಾರೆ. ಈ ಹಿನ್ನೆಲೆಯಲ್ಲಿ ಹೆಚ್ಚೆಚ್ಚು ಡಯೆಟ್ ಮಾಡದೇ ಹಣ್ಣು-ತರಕಾರಿಗಳಲ್ಲೇ ಹೆಲ್ದಿ ಡಯೆಟ್ ಸರಿ ದೂಗಿಸುತ್ತಿದ್ದಾರೆ . ಹೌದು…! ನೀವು ದಪ್ಪ ಇದ್ದರೂ ಸಹ ಆರೋಗ್ಯದ ದೃಷ್ಟಿಯಿಂದ ಕೆಲವೊಂದು ಡಯೆಟ್ಗಳನ್ನು ಅನುಸರಿಸಲೇಬೇಕು. ಆಗ ಮಾತ್ರ ಬೊಜ್ಜಿನಿಂದ ಉಂಟಾಗುವ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುವುದಿಲ್ಲ ಇದನ್ನೇ ವಿದ್ಯಾ ಬಾಲನ್ ಹೇಳ್ತಿರೋದು.
ಇನ್ನೂ ಇದೇ ಹಿನ್ನೆಲೆಯಲ್ಲಿ ನೋಡೋದಾದ್ರೆ, ವಿದ್ಯಾ ಡಯೆಟ್ಗಿಂತ ಹೆಚ್ಚು ನಿದ್ದೆಗೆ ಪ್ರಾಮುಖ್ಯತೆ ಕೊಡ್ತಾರೆ. ಆದ್ದರಿಂದ ಪ್ರತಿನಿತ್ಯ 8 ಗಂಟೆ ತಪ್ಪದೇ ನಿದ್ದೆ ಮಾಡ್ತಾರಂತೆ. ಇನ್ನೂ ವಾರದಲ್ಲಿ 4-5 ದಿನ ತಪ್ಪದೇ ವರ್ಕ್ ಔಟ್ ಮಾಡ್ತಾರಂತೆ ವಿದ್ಯಾ. ತುಂಬಾ ಸಣ್ಣಾಗಲೂ ಇಷ್ಟವಿಲ್ಲದ ವಿದ್ಯಾ, ದೇಹದಲ್ಲಿ ಅನಗತ್ಯವಾಗಿ ಸಂಗ್ರವಾಗಿರುವ ಬ್ಯಾಡ್ ಫ್ಯಾಟ್ ಕರಿಸುವ ಕಡೆ ಮಾತ್ರ ಹೆಚ್ಚು ಫೊಕಸ್ ಮಾಡ್ತಾರೆ. ಅಂದ್ರೆ ಮುಖದ ಭಾಗದಲ್ಲಿ ಹೆಚ್ಚು ಕೊಬ್ಬು ಶೇಖರಣೆಯಾಗದಂತೆ ನೋಡಕೊಳ್ತಾರೆ ವಿದ್ಯಾ.
ಇನ್ನೂ ತಪ್ಪದೇ ತಮ್ಮ ಜಿಮ್ ಟ್ರೈನರ್ ಸಹಾಯ ಪಡೆದು ಬೆಂಡಿಂಗ್, ಕಿಕ್ಕಿಂಗ್, ಜಂಪಿಂಘ್, ಟ್ವಿಸ್ಟಿಂಗ್ನಂಥ ವರ್ಕ್ಔಟ್ ತಪ್ಪದೇ ಮಾಡ್ತಾರೆ. ಇನ್ನು ಇದನ್ನು ವಾರದಲ್ಲಿ 4-5 ಬಾರಿ ಅನುಸರಿಸ್ತಾರೆ. ಅಲ್ಲದೇ ವಿದ್ಯಾ ಮನೆಯಲ್ಲಿಯೇ ಕಾರ್ಡಿಯೋ ಮಾಡ್ತಾರಂತೆ. ಇನ್ನೂ ತಮ್ಮ ಡಯೆಟಿಷಿಯನ್ ಮಾರ್ಗದರ್ಶನದಲ್ಲಿ ಸೂಕ್ತ ಡಯೆಟ್ ಕೂಡ ಅನುಸರಿಸ್ತಾರೆ ಚಬ್ಬಿ ಸುಂದರಿ. ಈ ಹಿನ್ನೆಲೆಯಲ್ಲಿ ಪ್ರತಿ ಎರಡು ಗಂಟೆಗೊಮ್ಮೆ ತಿನ್ನುವ ಅಭ್ಯಾಸವಿದೆಯಂತೆ. ಇದು ದೇಹದ ಮೆಟಬೋಲಿಸಂ ಹೆಚ್ಚು ಮಾಡುತ್ತದಂಥೆ. ಇನ್ನೂ ವಿದ್ಯಾ ತ್ವಚೆ ಹೆಚ್ಚು ಗ್ಲೋಯಿಂಗ್ ಆಗಿರುವುದಲ್ಲದೇ ತಾರುಣ್ಯ ಪೂರ್ಣವಾಗಿದೆ ಇದಕ್ಕೆ ವಿದ್ಯಾ ಸಸ್ಯಾಹಾರ ತೆಗೆದುಕೊಳ್ಳುವುದೇ ಕಾರಣವಂತೆ. ಮೊಟ್ಟೆಯನ್ನೂ ಸಹ ಸೇವಿಸೋಲ್ಲವಂತೆ.
ರೋಟಿ ಮತ್ತು ಸಬ್ಝಿ ಜೊತೆಗೆ ಅನ್ನ ಸೇವಿಸುವುದಿಲ್ಲ. ಸೇಬು ಮತ್ತು ಕಿತ್ತಳೆ ಒಟ್ಟಿಗೆ ಸೇವಿಸೋದಿಲ್ಲವಂತೆ. ಅಲ್ಲದೇ ಹೆಚ್ಚು ಚಾಕೋಲೇಟ್ ತಿಂತಾರೆ. ಅಲ್ಲದೇ ಹೆಚ್ಚು ನೀರು ಕುಡಿಯುತ್ತಾರಂತೆ ವಿದ್ಯಾ. ಇನ್ನೂ ವಿದ್ಯಾ ಬಾಲನ್ ಆದಷ್ಟು ನ್ಯಾಚುರಲ್ ಫುಡ್ಗಳನ್ನೇ ಹೆಚ್ಚು ಪ್ರಿಫರ್ ಮಾಡ್ತಾರೆ. ಜೊತೆಗೆ ಮೈದಾ ಹಿಟ್ಟಿನ ಪದಾರ್ಥಗಳನ್ನು ಸೇವಿಸುವುದಿಲ್ಲವಂತೆ. ಇನ್ನೂ ಆದಷ್ಟು ತರಕಾರಿ ಜ್ಯೂಸ್ಗಳನ್ನು ಹೆಚ್ಚೆಚ್ಚು ಕುಡಿಯುತ್ತಾರಲ್ಲದೇ, ಹಣ್ನಿನ ಜ್ಯೂಸ್ ಬದಲಿಗೆ ಹಣ್ಣನ್ನು ಹೆಚ್ಚು ಸೇವಿಸುತ್ತಾರಂತೆ. ಸಿಹಿ ತಿನ್ನುವದರ ಬದಲಿಗೆ, ಡ್ರೈ ಫ್ರೂಟ್ಸ್ ಸೇವಿಸುತ್ತಾರಲ್ಲದೇ, ಮಸಾಲೆ ಟೀ ಮಿಸ್ ಮಾಡಲು ಮನಸು ಬರುವುದಿಲ್ಲವಂತೆ.
ಹೀಗೆ ವಿದ್ಯಾ ತಮ್ಮ ಡಯೆಟ್ನಲ್ಲಿ ಆರೋಗ್ಯಕ್ಕೆ ಪೂರಕವಾದ ಆಹಾರಗಳನ್ನಷ್ಟೇ ಹೆಚ್ಚು ಸೇವಿಸುತ್ತಾರಲ್ಲದೇ, ಸರಿಯಾದ ಸಮಯಕ್ಕೆ ತಪ್ಪದೇ ಡಯೆಟ್ ಫಾಲೋ ಮಾಡ್ತಾರೆ. ಇದೇ ಕಾರಣಕ್ಕೆ ವಿದ್ಯಾ ಫ್ಯಾಟ್ ಇದ್ರೂ ಹೆಲ್ದಿ ಇದ್ದಾರಂತೆ. ಫ್ಯಾಟ್ ಇಸ್ ಬ್ಯೂಟಿ ಅನ್ನೋದು ವಿದ್ಯಾ ಸ್ಟೈಲ್ ಸ್ಟೇಟ್ಮೆಂಟ್.
ಫ್ಯಾಟ್ ಇಸ್ ಬ್ಯೂಟಿ ಅನ್ನುತ್ತಲೇ ದಪ್ಪ ಎಂದು ಕೀಳರಿಮೆ ಅನುಭವಿಸುವವರಿಗೆ ವಿದ್ಯಾ ಹೀಗೆ ಮಾದರಿಯಾಗಿದ್ದಾರೆ. ಆ ಮೂಲಕ ಝೀರೋ ಸೈಜ್ ಹ್ಯಾಂಗ್ ಓವರ್ಗೆ ಬ್ರೇಕ್ ಹಾಕಿದ್ದಾರೆ. ಇದಿಷ್ಟೇ ಅಲ್ಲ ವಿದ್ಯಾ ಬಾಲನ್ ಸೀರೆಗಳಲ್ಲೂ ಸಾಕಷ್ಟು ವಿಶೇಷತೆಗಳಿವೆ. ವಿದ್ಯಾ ಬಾಲನ್ ಅಂದ ಕೂಡಲೇ ಕಣ್ನ ಮುಂದೆ ಬರೋದು ಚೆಂದನೆಯ ಸೀರೆಗಳು. ಟ್ರೆಡಿಷನಲ್ ಲುಕ್ನಲ್ಲೇ ಕಂಗೋಳಿಸುವ ವಿದ್ಯಾರನ್ನು ನೋಡಿ ಇಂಥದ್ದೇ ಸೀರೆಗಳನ್ನೇ ಉಡಬೇಕು ಎನ್ನುವಷ್ಟು ಪ್ರಭಾವಿಸುವ ಸ್ಟೈಲ್ ಐಕಾನ್ ವಿದ್ಯಾ. ಅಷ್ಟೇ ಅಲ್ಲದೇ ಪ್ಲಸ್ ಸೈಜ್ ಮಹಿಳೆಯರಿಗೆ ಸಾಕಷ್ಟು ಟಿಪ್ಸ್ಗಳನ್ನು ಅವರ ಸ್ಟೈಲ್ ಮೂಲಕ ಹೇಳಿದ್ದಾರೆ.
ಅದರ ವಿವರಗಳು ನಾಳಿನ ಸಂಚಿಕೆಯಲ್ಲಿ, ನಿರೀಕ್ಷಿಸಿ..!
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!
![](https://suddidina.com/wp-content/uploads/2024/07/coconut_oil_benefits_suddidina.jpg)
ಆರೋಗ್ಯಕರ ಆಹಾರ ಮತ್ತು ನೈಸರ್ಗಿಕ ಚಿಕಿತ್ಸೆಯಲ್ಲಿ ತೆಂಗಿನ ಎಣ್ಣೆಯು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಆರೋಗ್ಯದ ದೃಷ್ಟಿಯಿಂದ ತೆಂಗಿನ ಎಣ್ಣೆಗಳಲ್ಲಿ ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆ ಅತಿ ಉತ್ತಮ. ಇದನ್ನು ಕೊಬ್ಬರಿ (ಒಣಗಿದ ತೆಂಗಿನಕಾಯಿ) ಯಿಂದ ಮಾಡಲಾಗುತ್ತದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ದೈನಂದಿನ ಜೀವನದಲ್ಲಿ ತೆಂಗಿನ ಎಣ್ಣೆ ಉಪಯೋಗಿಸಿ ಅದರ ಪ್ರಯೋಜನಗಳನ್ನು ಪಡೆಯಿರಿ :
ತೆಂಗಿನೆಣ್ಣೆಯಲ್ಲಿ ಲಾರಿಕ್ ಆಮ್ಲದಂಶವನ್ನು ಹೊಂದಿರುತ್ತದೆ. ತೆಂಗಿನೆಣ್ಣೆಯ ಬಳಕೆಯಿಂದ ಶಕ್ತಿ ದೊರಕುತ್ತದೆ ಮತ್ತು ತೂಕ ನಿರ್ವಹಣೆಯಲೂ ಸಹಾಯಮಾಡುತ್ತದೆ.
ಹೃದಯದ ಆರೋಗ್ಯ: ತೆಂಗಿನ ಎಣ್ಣೆಯನ್ನು ಸೇವಿಸುವುದರಿಂದ HDL (ಉತ್ತಮ) ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವ ಮೂಲಕ ಲಿಪಿಡ್ ಆರೋಗ್ಯವನ್ನು ಸುಧಾರಿಸಬಹುದು ಎಂದು ಕೆಲವು ಅಧ್ಯಯನಗಳು ಸಾಬೀತುಪಡಿಸಿದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.
ಜೀರ್ಣಕಾರಿ ಆರೋಗ್ಯ: ತೆಂಗಿನ ಎಣ್ಣೆಯು ಕೊಬ್ಬು-ಕರಗಬಲ್ಲ ಜೀವಸತ್ವಗಳು ಮತ್ತು ಖನಿಜಗಳ ಹೀರಿಕೊಳ್ಳುವಿಕೆಯನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಇರಿಟಬಲ್ ಬೋವೆಲ್ ಸಿಂಡ್ರೋಮ್ (IBS) ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಉರಿಯೂತದ ಗುಣಲಕ್ಷಣಗಳು: ತೆಂಗಿನ ಎಣ್ಣೆಯು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಚರ್ಮ ಮತ್ತು ಕೂದಲ ರಕ್ಷಣೆ: ತೆಂಗಿನೆಣ್ಣೆ ತಿನ್ನುವುದರಿಂದ ಆರೋಗ್ಯಕರ ಚರ್ಮ ಮತ್ತು ಕೂದಲನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಅಗತ್ಯವಾದ ಪೋಷಕಾಂಶಗಳು ಮತ್ತು ತೇವಾಂಶವನ್ನು ಒದಗಿಸುತ್ತದೆ. ತೆಂಗಿನ ಎಣ್ಣೆಯು ನಿಮ್ಮ ಕೂದಲಿಗೆ ಆಳವಾಗಿ ತೂರಿಕೊಂಡು, ಒಳಗಿನಿಂದ ಅವುಗಳನ್ನು ಪೋಷಿಸುತ್ತದೆ ಮತ್ತು ಆರೋಗ್ಯವನ್ನು ಹೊರಸೂಸುವ ನೈಸರ್ಗಿಕ ಹೊಳಪನ್ನು ನೀಡುತ್ತದೆ. ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆಯ ಪೋಷಕಾಂಶಗಳು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಅದೇ ಸಮಯದಲ್ಲಿ ಕೂದಲು ಒಡೆಯುವಿಕೆ ಮತ್ತು ವಿಭಜಿತ ತುದಿಗಳನ್ನು ತಡೆಯುತ್ತದೆ.
ರೋಗನಿರೋಧಕ ಬೆಂಬಲ: ತೆಂಗಿನೆಣ್ಣೆಯು ಲಾರಿಕ್ ಆಮ್ಲ ಮತ್ತು ಕ್ಯಾಪ್ರಿಲಿಕ್ ಆಮ್ಲವನ್ನು ಹೊಂದಿರುತ್ತದೆ, ಇದು ರೋಗನಿರೋಧಕ-ಉತ್ತೇಜಿಸುವ ಗುಣಲಕ್ಷಣಗಳನ್ನು ಹೊಂದಿದೆ ಮತ್ತು ದೇಹವು ಸೋಂಕುಗಳಿಂದ ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ.
ತೂಕ ನಿರ್ವಹಣೆ: ತೆಂಗಿನ ಎಣ್ಣೆಯು ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ಸಮತೋಲಿತ ಆಹಾರದಲ್ಲಿ ಬಳಸಿದಾಗ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.
ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು: ತೆಂಗಿನಕಾಯಿಯಲ್ಲಿ ಲಾರಿಕ್ ಆಮ್ಲವಿದೆ ಆದ್ದರಿಂದ ಇದು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು ಅದು ಬ್ಯಾಕ್ಟೀರಿಯಾ, ವೈರಸ್ಗಳು ಮತ್ತು ಶಿಲೀಂಧ್ರಗಳಿಂದ ಉಂಟಾಗುವ ಸೋಂಕನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೋಲ್ಡ್ ಪ್ರೆಸ್ಡ್ ಕೊಬ್ಬರಿ ಎಣ್ಣೆ ನಿಮ್ಮ ಅಡಿಗೆ ಮನೆಯ ಸಂಗಾತಿಯಾಗಲಿ.ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
![](https://suddidina.com/wp-content/uploads/2024/05/runadagani_autobiography_rudrappahanagawadi_suddidina.jpg)
- ರುದ್ರಪ್ಪ ಹನಗವಾಡಿ
ಇದೆಲ್ಲ ಹೊರಗಿನದಾದರೆ ನಮ್ಮ ವಿಭಾಗದಲ್ಲಿ ಸ್ವಲ್ಪ ಬದಲಾವಣೆಗಳಾಗಿದ್ದವು. ನಮ್ಮ ಜೊತೆಗಿದ್ದ ಡಾ. ಕೆ.ಎಂ. ನಾಯ್ಡು ಅವರು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದ ಹೊಸ ಸ್ನಾತಕೋತ್ತರ ಕೇಂದ್ರಕ್ಕೆ ಮುಖ್ಯಸ್ಥರಾಗಿ ಆಯ್ಕೆಯಾಗಿ ಹೋಗಿದ್ದರು.
ನಾನು ಎಂ.ಎ. ಓದುವಾಗ ನನಗೆ ಪ್ರಾಧ್ಯಾಪಕರಾಗಿದ್ದ ಡಾ. ಬಿ.ಎಸ್. ಶ್ರೀಕಂಠಾರಾಧ್ಯರು ಇಲಾಖೆಗೆ ಮುಖ್ಯಸ್ಥರಾಗಿ ಬಂದಿದ್ದರು. ನನ್ನ ಬಗ್ಗೆ ನಮ್ಮ ವಿಭಾಗದಲ್ಲಿ ಮತ್ತು ಮೈಸೂರಿನ ಗಂಗೋತ್ರಿ ವಿಭಾಗದಲ್ಲಿ ನಾನು ಮದುವೆಯಾಗಿರುವ ಬಗ್ಗೆ ಅಸಮಾಧಾನವಿತ್ತು. ಅದನ್ನೆಲ್ಲ ತಲೆಯಲ್ಲಿ ತುಂಬಿಕೊಂಡು ಬಂದಿದ್ದ ಬಿಎಸ್ಎಸ್ ಗುರುಗಳು ಕೂಡ ನನ್ನ ಬಗ್ಗೆ ಅಸಮಾಧಾನಗೊಂಡವರಂತೆ ತೋರುತ್ತಿದ್ದರು.
ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶ್ರೀಕಂಠಾರಾಧ್ಯರು ಅಧ್ಯಾಪಕರೆಲ್ಲರಿಗೂ ತೆಗೆದುಕೊಳ್ಳುವ ತರಗತಿಗಳ ವೇಳಾಪಟ್ಟಿ ತಯಾರಿಸಿಕೊಟ್ಟಿದ್ದರು. ನನಗೆ ಆಶ್ಚರ್ಯವಾಗುವಂತೆ ನನಗೆ ಯಾವುದೇ ಸಾಮಾನ್ಯ ತರಗತಿಗೆ ಪಾಠ ಮಾಡುವ ಅವಕಾಶವಿರದಂತೆ ತರಗತಿಗಳನ್ನು ಹಂಚಿಕೆ ಮಾಡಿದ್ದರು. ಐಚ್ಛಿಕವಾಗಿದ್ದ ಎರಡು ವಿಷಯಗಳಾದ ಪ್ರಾದೇಶಿಕ ಅರ್ಥಶಾಸ್ತ್ರ ಮತ್ತು ಕೃಷಿ ಅರ್ಥಶಾಸ್ತ್ರಗಳನ್ನು ಹಂಚಿಕೆ ಮಾಡಿ ಮುಗಿಸಿದ್ದರು. ನನಗೆ ವಿದ್ಯಾ ಗುರುಗಳು ಹೆಚ್ಚು ಸಲಿಗೆ ಇಲ್ಲದೆ ಇದ್ದ ಅವರೊಡನೆ ಇದು ಸರಿ ಇಲ್ಲ. ಇದನ್ನು ಸರಿಯಾಗಿ ಹಂಚಿಕೆಯಾಗಬೇಕೆಂದು ನನ್ನ ಅಸಮಾಧಾನ ತೋರಿ ಅವರ ಟೇಬಲ್ ಮೇಲೆ ತಾತ್ಸಾರದಿಂದಲೇ ಆದೇಶದ ಪ್ರತಿಯನ್ನು ಬಿಟ್ಟು ಬಂದಿದ್ದೆ. ಅತ್ಯಂತ ಮಿತಭಾಷಿ, ಸರಳ ಮತ್ತು ಆಳ ಅಧ್ಯಯನದಿಂದ ಗಳಿಸಿದ ಗಂಭೀರತೆಯಲ್ಲಿದ್ದ ಅವರಿಗೆೆ ನನ್ನ ಬಗ್ಗೆ, ನಾನು ಮದುವೆಯಾದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಕಟ್ಟಿ ಅವರಿಗೆ ಹೇಳಿ ನನಗೆ ಈ ರೀತಿಯ ಅನಾದರಣೆ ತೋರಿಸುವಂತೆ ನಮ್ಮವರೇ ಆಗಿದ್ದ ಕೆಲವು ಅಧ್ಯಾಪಕರು ಹೊಸಬರಾಗಿ ಬಂದಿದ್ದ ಇವರಿಗೆ ಹೇಳಿದ್ದರು.
ಆರಾಧ್ಯರೂ ಕೂಡ ಮೈಸೂರಿನ ಗಂಗೋತ್ರಿಯಲ್ಲಿ ಪಾಠ ಮಾಡುತ್ತಿದ್ದವರು, ಅಲ್ಲಿಯೇ ಪ್ರಾಧ್ಯಾಪಕರಾಗಬೇಕಾಗಿದ್ದವರನ್ನು ಬಿಆರ್ಪಿಗೆ ಒಬ್ಬ ಹಿರಿಯ ಪ್ರಾಧ್ಯಾಪಕರು ಬೇಕೆಂಬ ನೆಪವೊಡ್ಡಿ ಅವರನ್ನು ವರ್ಗಾವಣೆ ಮಾಡಿ ಇಲ್ಲಿಗೆ ಕಳಿಸಿದ್ದರು. ಇಲ್ಲಿಗೆ ಬರುವ ಬಗ್ಗೆ ಮನಸ್ಸಿಲ್ಲದ ಕಾರಣ ಅಸಮಾಧಾನವೂ ಅವರಲ್ಲಿ ಮನೆಮಾಡಿತ್ತು. ಬಂದಾಕ್ಷಣ ಇಲ್ಲಿನವರ ಚಾಡಿ ಮಾತು ಕೇಳಿ ನನ್ನ ಬಗ್ಗೆ ಈ ರೀತಿ ನಡೆದುಕೊಂಡಿದ್ದರು. ಆ ನಂತರ ಎಲ್ಲರೂ ಚರ್ಚಿಸಿ ಸಮಾನ ವಿಷಯಗಳ ಮತ್ತು ತರಗತಿಗಳನ್ನು ಹಂಚಿಕೆ ಮಾಡಿಕೊಂಡು ಎಂದಿನಂತೆ ತರಗತಿಗಳು ನಡೆಯಲಾರಂಭಿಸಿದವು. ಪ್ರಾರಂಭದಲ್ಲಿ ಆಗಿದ್ದ ನನ್ನ ಮತ್ತು ನನ್ನ ಗುರುಗಳಾಗಿದ್ದ ಶ್ರೀಕಂಠಾರಾಧ್ಯರ ನಡುವೆ ನಡೆದ ಸಣ್ಣ ಅಸಮಾಧಾನ ಕರಗಿ ಎಂದಿನ ಲವಲವಿಕೆಯಿಂದ ವಿಭಾಗದಲ್ಲಿ ಚಟುವಟಿಕೆಗಳು ಪ್ರಾರಂಭವಾದವು. ( ಸುದ್ದಿದಿನ.ಕಾಂ|ವಾಟ್ಸಾಪ್|9980346243)
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಮಕ್ಕಳಿಗೆ ದೈನಂದಿನ ಆಹಾರದಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಸೇರಿಸಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ .ಪಿ ಗಡಾದ್ ಸಲಹೆ
![](https://suddidina.com/wp-content/uploads/2024/07/Health_Tips_suddidina.jpg)
ಸುದ್ದಿದಿನ,ಕುಂದಾಪುರ: ದೈನಂದಿನ ಆಹಾರ ಪದ್ಧತಿಯಲ್ಲಿ ತರಕಾರಿ ಹಣ್ಣುಗಳನ್ನು ಸೇರಿಸುವುದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯ ಇರುವ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ತಾಯಂದಿರಿಗೆ ಡಾ. ಐ .ಪಿ ಗಡಾದ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಉಡುಪಿ ಜಿಲ್ಲೆ ಇವರು ತಮ್ಮ ಉದ್ಘಾಟನಾ ನುಡಿಗಳಿಂದ ಮನವಿ ಮಾಡಿದರು.
ನಮ್ಮ ಪಿ.ಜಿ.ಡಿ.ಎಚ್.ಪಿ.ಇ 7ನೇ ತಂಡದ ಪ್ರಶಿಕ್ಷಣಾರ್ಥಿ ಶ್ರೀಮತಿ ವೃಂದಾ.ಬಿ.ತಾಮಸೆ ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಅಪೌಷ್ಟಿಕತೆಯ ಕುರಿತು ಸಂಶೋಧನಾತ್ಮಕ ಅಧ್ಯಯನವನ್ನು ಮಾಡಿ ಗ್ರಾಮದ ಎಲ್ಲಾ ಮಕ್ಕಳು ಮತ್ತು ತಾಯಂದಿರನ್ನು ಬೃಹತ್ ಮಹಾ ಮೇಳದ ಮೂಲಕ ಈ ಸಭಾಂಗಣದ ಕಾರ್ಯಕ್ರಮಕ್ಕೆ ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ರೋಟರಿ ಕ್ಲಬ್ ಸ್ಥಳೀಯ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಕ್ಷಣ ಇಲಾಖೆ ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದ್ದಾರೆ ಇವರೆಲ್ಲರಿಗೂ ತಮ್ಮ ಧನ್ಯವಾದಗಳನ್ನು ಡಾ. ಮಂಜುನಾಥ್ ಜೆ .ಎ .ಉಪನ್ಯಾಸಕರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಇವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಶುಭ ಹಾರೈಸಿದರು.
ಮಳೆಗಾಲದಲ್ಲಿ ಮನೆಯ ಅಕ್ಕಪಕ್ಕದಲ್ಲಿ ನೀರು ನಿಲ್ಲುವುದು ಸಹಜ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಮತ್ತು ಮಲೇರಿಯದಂತಹ ಕಾಯಿಲೆಗಳು ಬರುತ್ತವೆ ಹಾಗಾಗಿ ಮಳೆಯ ನೀರು ನಿಲ್ಲದಂತೆ ಹರಿದು ಹೋಗುವ ಹಾಗೆ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ತಿಳಿಸುತ್ತಾ ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ನ ಉಪಾಧ್ಯಕ್ಷರು ಶುಭ ಕೋರಿದರು.
ಅಂಗನವಾಡಿಗಳ ಮೂಲಕ ಅಪೌಷ್ಟಿಕ ಮಕ್ಕಳ ದತ್ತು ಪಡೆಯುವ ಯೋಜನೆಯನ್ನು ಅಗತ್ಯತೆ ಇರುವ ಕುಟುಂಬಗಳು ಪಡೆದುಕೊಳ್ಳಬೇಕು ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ರಾಷ್ಟ್ರಧ್ವಜದ ತ್ರಿವರಣವುಳ್ಳ ಹಣ್ಣು ಹಂಪಲು ತರಕಾರಿ ಸೊಪ್ಪು ಬೇಳೆ ಕಾಳುಗಳು ಹಾಲು ಮೊಟ್ಟೆ ಮೀನು ಮಾಂಸ ಹೀಗೆ ಸಮತೋಲನ ಆಹಾರವನ್ನು ರೂಡಿಸಿಕೊಳ್ಳುವಂತೆ ಕುಂದಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಉಮೇಶ್ ಟಿ ಎಂ ಕರೆ ನೀಡಿದರು.
ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಡ್ರೈಡೇ ಕಾರ್ಯಕ್ರಮ ಪ್ರಾರಂಭವಾಗಿದ್ದು ಮನೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರು ತುಂಬಿಟ್ಟುಕೊಳ್ಳುವ ಪರಿಕರಗಳನ್ನು ಸಂಪೂರ್ಣ ಖಾಲಿ ಮಾಡಿ ಹೊಸದಾಗಿ ನೀರನ್ನು ತುಂಬಿಸಿಕೊಳ್ಳಬೇಕೆಂದು ಉಡುಪಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಶಶಿಧರ್ ಅವರು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸ್ಥಳೀಯ ಸರ್ಕಾರೇತರ ಸಂಸ್ಥೆ ರೋಟರಿ ಕ್ಲಬ್ನ ಅಧ್ಯಕ್ಷ ಶ್ರೀ ಸತೀಶ್ ಎಂ ನಾಯಕ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ಆರೋಗ್ಯ ಇಲಾಖೆ ಆಯೋಜಿಸುತ್ತಿರುವ ಹಲವಾರು ಕಾರ್ಯಕ್ರಮಗಳಲ್ಲಿ ರೋಟರಿ ಕ್ಲಬ್ ದೇಶಾದ್ಯಂತ ಸಹಕಾರ ನೀಡುತ್ತಿದೆ ಇದೇ ರೀತಿಯಾಗಿ ನಾವು ಸಹ ಮಕ್ಕಳು ಮತ್ತು ತಾಯಂದಿರಿಗೆ ಲಘುಉಪಹಾರ ವ್ಯವಸ್ಥೆ ಮಾಡಿದ್ದೇವೆ ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮ ಸಹಕಾರ ನೀಡುವುದಾಗಿ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮಕ್ಕಳ ದೈಹಿಕ ಬೆಳವಣಿಗೆಗಾಗಿ ಅಪೌಷ್ಟಿಕತೆ ಪ್ರಮಾಣ ತಿಳಿಯಲು ಮೌಲ್ಯಮಾಪನ ಮಾಡಬೇಕಾಗುತ್ತದೆ ತೋಳಿನ ಮಧ್ಯಭಾಗದ ಸುತ್ತಳತೆ 11.5 cm ಗಿಂತ ಕಡಿಮೆ ಇರುವ ಮಕ್ಕಳನ್ನು ಅಪೌಷ್ಟಿಕ ಮಕ್ಕಳೆಂದು ಗುರುತಿಸಿ ಅವರಿಗೆ ಹೆಚ್ಚಿನ ಪೌಷ್ಟಿಕ ಆಹಾರ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನೀಡುವ ಅವಶ್ಯಕತೆ ಇದೆ. ಅಪೌಷ್ಟಿಕತೆಯು ದೇಹದ ಪ್ರಮುಖ ಅಂಗಗಳ ಕಾರ್ಯಕ್ಕೆ ಹಾನಿ ಉಂಟುಮಾಡುತ್ತದೆ ಹಾಗೂ ಪೌಷ್ಟಿಕಾಂಶದ ಕೊರತೆಯಿಂದ ಉಂಟಾಗುವ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಹಾಗಾಗಿ ಪೌಷ್ಟಿಕ ಸಮತೋಲಿತ ಆಹಾರವನ್ನು ಉಪಯೋಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳುತ್ತಾ ನಮ್ಮ ಜಿಲ್ಲೆಯ ತಾಯಂದಿರಿಗೆ ಆರೋಗ್ಯಕ್ಕೆ ಸಂಬAಧಪಟ್ಟ ಹಾಗೆ ಜ್ಞಾನ ಹೆಚ್ಚಿದ್ದು, ಆದರೆ ಕಾರ್ಯರೂಪಕ್ಕೆ ತರುವಲ್ಲಿ ದೊಡ್ಡ ಪ್ರಮಾಣದ ಯಶಸ್ಸು ಇನ್ನೂ ಆಗಿಲ್ಲ ಅದಕ್ಕಾಗಿ ನಾವೆಲ್ಲರೂ ಅಪೌಷ್ಟಿಕತೆ ವಿರುದ್ಧ ಹೋರಾಡಲು ಇಲ್ಲಿ ಪ್ರಾತ್ಯಕ್ಷಿತೆಯ ಮೂಲಕ ತೋರಿಸಲಾಗಿರುವ ಆಹಾರಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳುವುದರೊಂದಿಗೆ ಕಾರ್ಯರೂಪಕ್ಕೆ ತರೋಣ ಎಂದು ತಮ್ಮ ಅಮೂಲ್ಯವಾದ ಮಾಹಿತಿಯಲ್ಲಿ ತಿಳಿಸುತ್ತಾ 0-19 ವರ್ಷದ ಒಳಗಿನ ಮಕ್ಕಳಿಗಾಗಿ ಸರ್ಕಾರದಿಂದ ಜಾರಿ ಇರುವ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಡಾ. ಪ್ರೇಮಾನಂದ.ಕೆ ತಾಲೂಕು ಆರೋಗ್ಯ ಅಧಿಕಾರಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.
ಇತ್ತೀಚಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಒಂದು ಅಥವಾ ಎರಡು ಮಕ್ಕಳ ಪಡೆಯುವವರ ಸಂಖ್ಯೆ ಅಧಿಕವಾಗಿದ್ದು ಈ ಮಕ್ಕಳ ಪಾಲನೆ ಪೋಷಣೆಗೆ ಎಲ್ಲಾ ಇಲಾಖೆಯವರು ಸಮನ್ವಯದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದು ಕೇವಲ ಮಕ್ಕಳಿಗೆ ಮಾತ್ರ ಪೌಷ್ಟಿಕ ಆಹಾರವನ್ನು ನೀಡುವುದಲ್ಲದೆ ತಾಯಂದಿರು ಕೂಡ ಸಮತೋಲಿತ ಪೌಷ್ಟಿಕ ಆಹಾರವನ್ನು ಗರ್ಭಿಣಿ ಅವಧಿಯಲ್ಲಿಯೇ ಸೇವಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ನಾಗರತ್ನ ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಟೇಶ್ವರ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಆರ್ ಶೇಟ್, ಜಿಲ್ಲಾ ಆರ್ ಸಿ.ಎಚ್ ಅಧಿಕಾರಿಗಳು ಡಾ.ಜೋತ್ನಾ ಸ್ಥಳೀಯ ಗ್ರಾಮ ಪಂಚಾಯತ್ನ ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯಕ್, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಶೋಭಾ, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ತಾಯಂದಿರು, ಮಕ್ಕಳು ಉಪಸ್ಥಿತರಿದ್ದರು ಹಾಗೂ ಈ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆಭಾಕಾರ್ಡ್ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಮಾಡಲಾಯಿತು.
ಶ್ರೀಮತಿ ವೃಂದಾ.ಬಿ.ತಾಮಸೆ ಪ್ರಶಿಕ್ಷಣಾರ್ಥಿ ಪಿ.ಪಿ.ಜಿ.ಡಿ.ಎಚ್.ಪಿ.ಇ ವಿಭಾಗ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಸ್ವಾಗತಿಸಿದರು. ಶ್ರೀಮತಿ ಭಾಗ್ಯಲಕ್ಷ್ಮಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕುಂದಾಪುರ ಕಾರ್ಯಕ್ರಮದ ನಿರೂಪಣೆ ಮಾಡಿ ಧನ್ಯವಾದ ಅರ್ಪಿಸಿದರು.ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!