ಲೈಫ್ ಸ್ಟೈಲ್
ಸೆಲಿಬ್ರಿಟಿ ಗಳ Fathers Day..ಹೀಗಿತ್ತು…ನೋಡಿ..!
ಅಪ್ಪ ಅನ್ನೋ ಈ ಎರಡಕ್ಷರದ ಪದದಲ್ಲಿ ಇಡೀ ಭೂಮಂಡಲವೇ ಅಡಗಿದೆ. ಜನ್ಮದಾತ ಅಪ್ಪ..ಬಿಸಿಲು-ಮಳೆ-ಗಾಳಿ ಲೆಕ್ಕಿಸದೆ ಜೀವಮಾನವಿಡೀ ತನ್ನ ಕುಟುಂಬ..ಮಕ್ಕಳಿಗಾಗಿ.. ಬೆವರು ಸುರಿಸುತ್ತಾನೆ. ತಾಯಿ ದೇವರಂತೆಯೇ ತಂದೆ…ಆದರ್ಶ ತೋರುವ ಮಾದರಿ ಮಾರ್ಗದರ್ಶಕನಾಗಿ ಜಿವನವಿಡೀ…ಕೈ ಹಿಡಿದು ನಡೆಸುವ ನಿತ್ಯ ದೈವ.
ಅಂಗಿಯ ಬೆವರಿನಲ್ಲೇ ಪ್ರೀತಿಯ ಕಂಪು ಸುಸುವ ಪ್ರೀತಿ ಪಾತ್ರ ತಂದೆಗೆ ಇಡೀ ಜನುಮ ಖುಣಿಯಾಗಿಬೇಕು. ಕೈಗೂಸನ್ನ ಹೆಗಲ ಮೇಲೆ ಹೊತ್ತು ತಿರುಗುವ ಈ ಮಹಾನುಭಾವನಿಗೆ ಅನಂತ ಅನಂತ ವಂದನೆಗಳು..
ಜೂನ್ 17 2018 ” ತಂದೆಯರ ದಿನಾಚರಣೆ “ಅಂಗವಾಗಿ ಇಡೀ ಮನುಕುಲವೇ ಈ ಮಹಾಮಹಾನುಭಾವನನ್ನ ..ಅವನ ತ್ಯಾಗ-ಪ್ರೀತಿ-ಮಮಕಾರವನ್ನ ಕೊಂಡಾಡುತ್ತಿದೆ.ಹಾಗಾದರೆ ಬನ್ನಿ, ಸೆಲಿಬ್ರಿಟಿಗಳು ಯಾವ ರೀತಿ ಈ ವಿಶೇಷ ದಿನವನ್ನು ಆಚರಿಸುತ್ತಿದ್ದಾರೆ…ಅನ್ನುವುದರ ಮಾಹಿತಿ ಇಲ್ಲಿದೆ…
ಕನ್ನಡ ಚಿತ್ರರಂಗದ ಚಾಲಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರು ತಂದೆಯರ ದಿನಾಚರಣೆ ಯಂದು ತಮ್ಮ ತಂದೆಯನ್ನು ನೆನೆದು ಸೋಷಿಯಲ್ ಮೀಡಿಯಾ ದಲ್ಲಿ ಈಗ ವೈರಲ್ ಆಗಿದೆ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.
ಅಪ್ಪ ಅಂದ್ರೆ ಸಾವಿರ ಆನೆಗಳ ಬಲ, ಮಕ್ಕಳ ಮೊದಲ ಹೀರೋ. ಎಲ್ಲರಿಗೂ ಅವರ ಋಣವನ್ನು ತೀರಿಸುವ ಅದೃಷ್ಟ ಸಿಗುವುದಿಲ್ಲ. ಅವರ ಮುಪ್ಪಿನಲ್ಲಿ ನೀವು ತಂದೆಯಾಗಿ ಅವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ಎಲ್ಲರಿಗೂ ಅಪ್ಪಂದಿರ ದಿನಾಚರಣೆಯ ಹಾರ್ಧಿಕ ಶುಭಾಷಯಗಳು pic.twitter.com/yogir5CF3o
— Darshan Thoogudeepa (@dasadarshan) June 17, 2018
ದಿನಕರ್ ತೂಗುದೀಪ ಅವರೂ ತಂದೆಯ ನೆನೆದು, ಅವರ ಭಾವಚಿತ್ರ ಶೇರ್ ಮಾಡಿ ಕೊಂಡಿದ್ದಾರೆ.
ನವರಸ ನಾಯಕ ಜಗ್ಗೇಶ್ ಅವರೂ ಸಹ ತಮ್ಮ ಪತ್ನಿಯ ಟ್ವೀಟ್ ಗೆ ಉತ್ತರಿಸುತ್ತ..ತಂದೆಯ ಮಹತ್ವವನ್ನು ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಜಗತಪಿತರಂ ಒಂದೆ ಪಾರ್ವತಿ ಪರಮೇಶ್ವರಂ..
ಗಣನಾಥ ಲೋಕಕ್ಕೆ ಹೇಳಿದ ಮೂಲ ಮಂತ್ರ ಇದೆ..ವಿಶ್ವದಲ್ಲಿ ತಂದೆತಾಯಿಯೇ ನಿಜ ದೇವರೆಂದು..
ಯಾರು ತಂದೆತಾಯಿಗೆ ಗೌರವಿಸಿ ಪೂಜಿಸುವುದಿಲ್ಲಾ ಅಂಥವರು ಎಷ್ಟೇ ಯತ್ನಿಸಿದರು ಯಾವ ಕಾರ್ಯದಲ್ಲು ಯಶಸ್ವಿಯಾಗುವುದಿಲ್ಲಾ.!
ತಂದೆತಾಯಿ ಇರುವ ಮಹನೀಯರೇ ಮೊದಲು ಅವರಿಗೆ ಶರಣಾಗಿ..!
ವಿಶ್ವನಿಮಗೆ ಶರಣಾಗುತ್ತದೆ.. https://t.co/EXoWwOqvMN— ನವರಸನಾಯಕ ಜಗ್ಗೇಶ್ (@Jaggesh2) June 17, 2018
ಕನ್ನಡ ಚಿತ್ರರಂಗದ ಹೆಸರಾಂತ ನಾಯಕ ನಟ ಶ್ರೀ ಮುರಳಿ… ತಮ್ಮ ಮಗನ ಮುದ್ದು ಉಡುಗೊರೆ.. ಚಿತ್ರ ವನ್ನು ಸೋಷಿಯಲ್ ಮೀಡಿಯಾ ದಲ್ಲಿ ಈಗ ವೈರಲ್ ಆಗಿದೆ ವೇರ್ ಮಾಡಿ ಕೊಂಡಿದ್ದಾರೆ..ಹಾಗೆಯೇ ಅವರ ತಂದೆಯೊಂದಿಗೆ ಚಿತ್ರ ಶೇರ್ ಮಾಡಿ ತಂದೆಯ ದಿನಾಚರಣೆಗೆ ಶುಭ ಕೋರಿದ್ದಾರೆ.
https://m.facebook.com/story.php?story_fbid=1033704706786778&id=230164010474189
ನಟಿ ಹರಿಪ್ರಿಯ ಅಗಲಿರುವ ಅವರ ತಂದೆಯ ನೆನೆದು..ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಎಂದು, ತಂದೆ ಯೊಂದಿಗಿನ ಅವರ ಚಿತ್ರ ಟ್ವೀಟ್ ಮಾಡಿದ್ದಾರೆ.
Miss u every single day daddy 😞 But today is d day I miss u the most,by seeing others post new pics with their dads 😒 But i will safely preserve the memories I spent with u and keep posting the same old pictures of ours 🤗 Happy fathers day to all the fathers out there 🙂 pic.twitter.com/krFNdegrQj
— HariPrriya (@HariPrriya6) June 17, 2018
ಕನ್ನಡದ ಬಿಗ್ ಬಾಸ್ ಖ್ಯಾತಿಯ ನಟಿ ನೀತೂಶೆಟ್ಟಿ ಅವರು ಸೋಷಿಯಲ್ ಮೀಡಿಯಾ ದಲ್ಲಿ ತಮ್ಮ ತಂದೆಯೊಂದಿಗೆ ಚಿತ್ರವನ್ನು ಹಂಚಿಕೊಂಡು ತಂದೆಗೆ ವಿಷ್ ಮಾಡಿದ್ದಾರೆ.
https://m.facebook.com/story.php?story_fbid=10214578265463794&id=1036268701
ಸಿಂಪಲ್ಲಾಗ್ ಒಂದು ಲವ್ ಸ್ಟೋರಿ ಖ್ಯಾತಿಯ ಶ್ವೇತ ಶ್ರೀವಾಸ್ತವ್ ಕೂಡಾ ಟ್ವೀಟ್ ಮಾಡಿದ್ದಾರೆ.
Happy Father's day, jaanu Amith Srivatsav !! #firstfathersday #ashmithasrivatsav — at JW Marriott Hotel Bengaluru https://t.co/mpGsN818OF
— Shwetha Srivatsav (@ShwethaSrivatsa) June 17, 2018
ಶಾರುಖ್ ಖಾನ್ ತಮ್ಮ ಮಗನ ಡ್ರಾಯಿಂಗ್ ಶೇರ್ ಮಾಡಿ ಸಂಭ್ರಮಿಸುತ್ತಿದ್ದಾರೆ.
ಖ್ಯಾತ ಕ್ರಿಕೆಟ್ ಪಟು ಸುರೇಶ್ ರೈನ್ ತಮ್ಮ ಮುದ್ದು ಮಗು ಬಿಡಿಸಿದ ಗ್ರೀಟಿಂಗ್ ಕಾರ್ಡ್ ಚಿತ್ರವನ್ನು ವೇರ್ ಮಾಡಿ ಕೊಂಡಿದ್ದಾರೆ..
ಅಮಿತಾಬ್ ಬಚ್ಚನ್ , ಆಲಿಯಾಭಟ್, ಸೊನಾಕ್ಷಿ ಸಿನ್ಹಾ…ಅನುಷ್ಕಾ ಶರ್ಮ..ಹೀಗೆ ಹಲವಾರು ಸೆಲಿಬ್ರಿಟಿ ಗಳು ತಂದೆಯರ ದಿನಾಚರಣೆ ಯನ್ನು ವಿಶೇಷವಾಗಿ ಆಚರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ3 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ24 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


