Connect with us

ಲೈಫ್ ಸ್ಟೈಲ್

ಸೆಲಿಬ್ರಿಟಿ ಗಳ Fathers Day..ಹೀಗಿತ್ತು…ನೋಡಿ..!

Published

on

ಪ್ಪ ಅನ್ನೋ ಈ ಎರಡಕ್ಷರದ ಪದದಲ್ಲಿ ಇಡೀ ಭೂಮಂಡಲವೇ ಅಡಗಿದೆ. ಜನ್ಮದಾತ ಅಪ್ಪ..ಬಿಸಿಲು-ಮಳೆ-ಗಾಳಿ ಲೆಕ್ಕಿಸದೆ ಜೀವಮಾನವಿಡೀ ತನ್ನ ಕುಟುಂಬ..ಮಕ್ಕಳಿಗಾಗಿ.. ಬೆವರು ಸುರಿಸುತ್ತಾನೆ. ತಾಯಿ ದೇವರಂತೆಯೇ ತಂದೆ…ಆದರ್ಶ ತೋರುವ ಮಾದರಿ ಮಾರ್ಗದರ್ಶಕನಾಗಿ ಜಿವನವಿಡೀ…ಕೈ ಹಿಡಿದು ನಡೆಸುವ ನಿತ್ಯ ದೈವ.

ಅಂಗಿಯ ಬೆವರಿನಲ್ಲೇ ಪ್ರೀತಿಯ ಕಂಪು ಸುಸುವ ಪ್ರೀತಿ ಪಾತ್ರ ತಂದೆಗೆ ಇಡೀ ಜನುಮ ಖುಣಿಯಾಗಿಬೇಕು. ಕೈಗೂಸನ್ನ ಹೆಗಲ ಮೇಲೆ ಹೊತ್ತು ತಿರುಗುವ ಈ ಮಹಾನುಭಾವನಿಗೆ ಅನಂತ ಅನಂತ ವಂದನೆಗಳು..

ಜೂನ್ 17 2018 ” ತಂದೆಯರ ದಿನಾಚರಣೆ “ಅಂಗವಾಗಿ ಇಡೀ ಮನುಕುಲವೇ ಈ ಮಹಾಮಹಾನುಭಾವನನ್ನ ..ಅವನ ತ್ಯಾಗ-ಪ್ರೀತಿ-ಮಮಕಾರವನ್ನ ಕೊಂಡಾಡುತ್ತಿದೆ.ಹಾಗಾದರೆ ಬನ್ನಿ, ಸೆಲಿಬ್ರಿಟಿಗಳು ಯಾವ ರೀತಿ ಈ ವಿಶೇಷ ದಿನವನ್ನು ಆಚರಿಸುತ್ತಿದ್ದಾರೆ…ಅನ್ನುವುದರ ಮಾಹಿತಿ ಇಲ್ಲಿದೆ…

ಕನ್ನಡ ಚಿತ್ರರಂಗದ ಚಾಲಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರು ತಂದೆಯರ ದಿನಾಚರಣೆ ಯಂದು ತಮ್ಮ ತಂದೆಯನ್ನು ನೆನೆದು ಸೋಷಿಯಲ್ ಮೀಡಿಯಾ ದಲ್ಲಿ ಈಗ ವೈರಲ್ ಆಗಿದೆ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.

ದಿನಕರ್ ತೂಗುದೀಪ ಅವರೂ ತಂದೆಯ ನೆನೆದು, ಅವರ ಭಾವಚಿತ್ರ ಶೇರ್ ಮಾಡಿ ಕೊಂಡಿದ್ದಾರೆ.

ನವರಸ ನಾಯಕ ಜಗ್ಗೇಶ್ ಅವರೂ ಸಹ ತಮ್ಮ ಪತ್ನಿಯ ಟ್ವೀಟ್ ಗೆ ಉತ್ತರಿಸುತ್ತ..ತಂದೆಯ ಮಹತ್ವವನ್ನು  ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಕನ್ನಡ ಚಿತ್ರರಂಗದ ಹೆಸರಾಂತ ನಾಯಕ ನಟ ಶ್ರೀ ಮುರಳಿ… ತಮ್ಮ ಮಗನ ಮುದ್ದು ಉಡುಗೊರೆ.. ಚಿತ್ರ ವನ್ನು ಸೋಷಿಯಲ್ ಮೀಡಿಯಾ ದಲ್ಲಿ ಈಗ ವೈರಲ್ ಆಗಿದೆ ವೇರ್ ಮಾಡಿ ಕೊಂಡಿದ್ದಾರೆ..ಹಾಗೆಯೇ ಅವರ ತಂದೆಯೊಂದಿಗೆ ಚಿತ್ರ ಶೇರ್ ಮಾಡಿ ತಂದೆಯ ದಿನಾಚರಣೆಗೆ ಶುಭ ಕೋರಿದ್ದಾರೆ.

https://m.facebook.com/story.php?story_fbid=1033704706786778&id=230164010474189

ನಟಿ ಹರಿಪ್ರಿಯ ಅಗಲಿರುವ ಅವರ ತಂದೆಯ ನೆನೆದು..ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಎಂದು, ತಂದೆ ಯೊಂದಿಗಿನ ಅವರ ಚಿತ್ರ ಟ್ವೀಟ್ ಮಾಡಿದ್ದಾರೆ.

ಕನ್ನಡದ ಬಿಗ್ ಬಾಸ್ ಖ್ಯಾತಿಯ ನಟಿ ನೀತೂಶೆಟ್ಟಿ ಅವರು ಸೋಷಿಯಲ್ ಮೀಡಿಯಾ ದಲ್ಲಿ ತಮ್ಮ  ತಂದೆಯೊಂದಿಗೆ ಚಿತ್ರವನ್ನು  ಹಂಚಿಕೊಂಡು ತಂದೆಗೆ ವಿಷ್ ಮಾಡಿದ್ದಾರೆ.

https://m.facebook.com/story.php?story_fbid=10214578265463794&id=1036268701

ಸಿಂಪಲ್ಲಾಗ್ ಒಂದು ಲವ್ ಸ್ಟೋರಿ ಖ್ಯಾತಿಯ ಶ್ವೇತ ಶ್ರೀವಾಸ್ತವ್ ಕೂಡಾ ಟ್ವೀಟ್ ಮಾಡಿದ್ದಾರೆ.

ಶಾರುಖ್ ಖಾನ್ ತಮ್ಮ ಮಗನ ಡ್ರಾಯಿಂಗ್ ಶೇರ್ ಮಾಡಿ ಸಂಭ್ರಮಿಸುತ್ತಿದ್ದಾರೆ.

ಖ್ಯಾತ ಕ್ರಿಕೆಟ್ ಪಟು ಸುರೇಶ್ ರೈನ್ ತಮ್ಮ ಮುದ್ದು ಮಗು ಬಿಡಿಸಿದ ಗ್ರೀಟಿಂಗ್ ಕಾರ್ಡ್ ಚಿತ್ರವನ್ನು ವೇರ್ ಮಾಡಿ ಕೊಂಡಿದ್ದಾರೆ..

ಅಮಿತಾಬ್ ಬಚ್ಚನ್ , ಆಲಿಯಾಭಟ್, ಸೊನಾಕ್ಷಿ ಸಿನ್ಹಾ…ಅನುಷ್ಕಾ ಶರ್ಮ..ಹೀಗೆ ಹಲವಾರು ಸೆಲಿಬ್ರಿಟಿ ಗಳು ತಂದೆಯರ ದಿನಾಚರಣೆ ಯನ್ನು ವಿಶೇಷವಾಗಿ ಆಚರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ, ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ.

ತರಬೇತಿ ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ತರಬೇತಿ ವಸತಿಯುತವಾಗಿದ್ದು, ಉಚಿತ ಊಟ, ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಗೆ ಸಂಪರ್ಕಿಸಬಹುದು ಎಂದು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅತ್ಮಕತೆ | ನೀರು ಸಾಬರೂ – ಎಸಿ ಮದನಗೋಪಾಲರೂ..

Published

on

  • ರುದ್ರಪ್ಪ ಹನಗವಾಡಿ

ಮಧ್ಯೆ ನಂಜನಗೂಡು ಪಕ್ಕದ ತಾಲ್ಲೂಕಾದ ಗುಂಡ್ಲುಪೇಟೆಯಿಂದ ರಾಜಕಾರಣಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರು ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬೋರ್‌ವೆಲ್ ತೆಗೆಸಿ ಗ್ರಾಮೀಣ ಜನರಿಗೆ ಸ್ವಚ್ಛ ಕುಡಿಯುವ ನೀರು ಕೊಡುವಲ್ಲಿ ಯಶಸ್ವಿಯಾಗಿದ್ದರು. ಜನಪರ ಮಂತ್ರಿಗಳೂ ಆಗಿದ್ದರು.

ಗುಂಡ್ಲುಪೇಟೆಯಲ್ಲಿ ಭೂಸ್ವಾಧೀನ ಪ್ರಕರಣದಲ್ಲಿ ತಮ್ಮ ಸಂಬಂಧಿಕರೊಬ್ಬರ ಜಮೀನಿಗೆ ತಿರುಗಾಡಲು ದಾರಿಗಾಗಿ ಭೂಸ್ವಾಧೀನಪಡಿಸಲು ಹಿಂದಿನ ಎಸಿ ಅವರ ಅಳಿಯಂದಿರೇ ಆಗಿದ್ದ ಎಸ್.ಎ. ಸಾದಿಕ್ ಅವರು ಭೂಸ್ವಾಧೀನಕ್ಕಾಗಿ ಪ್ರಸ್ತಾವನೆಯನ್ನು ರ‍್ಕಾರಕ್ಕೆ ಸಲ್ಲಿಸಿದ್ದರು. ಆದರೆ ಪುನಃ ಅದು ವಿಚಾರಣೆಗೆ ಬಂದಾಗ ಈ ಭೂಸ್ವಾಧೀನವು ಸಾರ‍್ವಜನಿಕರ ಹಿತ ಕಾಯುತ್ತಿಲ್ಲವೆಂದು ಮದನ್ ಗೋಪಾಲ್ ಅವರು ಆ ಪ್ರಸ್ತಾವನೆಯನ್ನು ರದ್ದುಗೊಳಿಸಲು ಸರ‍್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ಭೂಸ್ವಾಧೀನ ಪ್ರಕರಣವನ್ನು ಮಂತ್ರಿಗಳ ಸಲಹೆ ಮೇರೆಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದು, ನಂತರ ಅದನ್ನು ಕೈಬಿಟ್ಟ ಬಗ್ಗೆ ನಜೀರ್ ಸಾಬ್ ಅವರು ಎಸಿ ಮದನ್ ಗೋಪಾಲ್ ಮೇಲೆ ಕೆಂಡಾಮಂಡಲವಾಗಿದ್ದರು. ಎಷ್ಟೇ ಅನುಭವೀ, ನಿಸ್ಪೃಹ ರಾಜಕಾರಣಿಯಾಗಿದ್ದರೂ ನಜೀರ್ ಸಾಬ್ ಅವರು ತಾವು ಹೇಳಿದ ಕೆಲಸ ಮಾಡದ ನೌಕರ ಎಸಿ ಮದನ್ ಗೋಪಾಲ್ ಮೇಲೆ ಕಂದಾಯ ಮಂತ್ರಿ ಮತ್ತು ಜಿಲ್ಲಾಧಿಕಾರಿಗಳ ಎದುರು ತಮ್ಮ ಅಸಮಾಧಾನವನ್ನು ಹೊರಹಾಕಿ ಕೂಗಾಡಿದ್ದರು.

ಇದೇ ಕಾರಣಕ್ಕಾಗಿ ಮದನ್ ಗೋಪಾಲ್ ಅವರನ್ನು ಕೆಲವೇ ದಿನಗಳಲ್ಲಿ ನಂಜನಗೂಡು ಉಪ ವಿಭಾಗದಿಂದ ಬೇರೆಡೆಗೆ ರ‍್ಗಾವಣೆ ಕೂಡ ಮಾಡಲಾಗಿತ್ತು. ಅವರ ವರ್ಗಾವಣೆಯನ್ನು ವಿರೋಧಿಸಿ ಸರ‍್ವಜನಿಕರು, ನಂಜಗೂಡು, ಗುಂಡ್ಲುಪೇಟೆಗಳಲ್ಲಿ ಯಶಸ್ವಿ ಬಂದ್ ಮಾಡಿ ಪ್ರತಿಭಟಿಸಿದ್ದರು. ಅವರ ವರ‍್ಗಾವಣೆ ಆಗಿ ನಂತರ ಮೂರು ತಿಂಗಳಲ್ಲಿ ಯೋಗೇಂದ್ರ ತ್ರಿಪಾಠಿ ಬಂದರು. ಈ ನಡುವೆ ನಾನು, ನಂತರ ಮಂಜುನಾಥ್ ನಾಯಕ್ ಹಾಗೂ ಶಿಕ್ಷಣರ‍್ಥಿ ಎಸಿಯಾಗಿದ್ದ ಕೆ. ಶಿವರಾಂ ಅವರು ಸುಮಾರು ಮೂರು ತಿಂಗಳ ಕಾಲ ಚಾರ್ಜ್ನಲ್ಲಿದ್ದೆವು. ಮದನ್ ಗೋಪಾಲ್ ಅವರು ವೈಯಕ್ತಿಕವಾಗಿ ಕಷ್ಟಪಟ್ಟು ದುಡಿಯುವ ವ್ಯಕ್ತಿಯಾಗಿದ್ದರು. ಆದರೆ ಚುನಾಯಿತ ಪ್ರತಿನಿಧಿಗಳ ಜೊತೆ ಅತಿರೇಕದ ನೇರ ನೇರ ಹಣಾಹಣಿ ಮಾಡಿಕೊಂಡು ಅವರು ಮಾಡುತ್ತಿದ್ದ ಒಳ್ಳೆಯ ಕೆಲಸಗಳು ಹಿನ್ನೆಲೆಗೆ ಸರಿಯುತ್ತಿದ್ದವು.

ಯೋಗೇಂದ್ರ ತ್ರಿಪಾಠಿಯವರು ಬರುವ ವೇಳೆಗಾಗಲೇ ನನ್ನ ನಂಜನಗೂಡು ತಾಲ್ಲೂಕ್ ಆಡಳಿತದಲ್ಲಿ ಒಂದು ವರ‍್ಷಕ್ಕೂ ಹೆಚ್ಚು ಸಮಯ ಕಳೆದಿದ್ದೆ. ಹಾಗಾಗಿ ತ್ರಿಪಾಠಿಯವರ ಜೊತೆ ಕೆಲಸ ಕಾರ‍್ಯಗಳು ಸಲೀಸಾಗಿ ಸಾಗುತ್ತಿದ್ದವು. ಈ ಮೊದಲು ಎಸಿ ಶಿಕ್ಷಣರ‍್ಥಿಯಾಗಿದ್ದ ಕೆ. ಶಿವರಾಂ ಅವರು ಅನೇಕ ಮೌಖಿಕ ಆದೇಶಗಳನ್ನು ಹೇಳಿ ಮಾಡುವಂತೆ ನನಗೆ ನಿರ‍್ದೇಶನ ನೀಡುತ್ತಿದ್ದರು. ನಾನು ಖುದ್ದು ಭೇಟಿ ಮಾಡಿ ಅವರು ಹೇಳಿದ ಕೆಲಸಗಳನ್ನು ಮಾಡಲಿಕ್ಕಾಗದ ಕಾರಣದ ವಿವರ ನೀಡಿದರೂ ಸಮಾಧಾನಗೊಳ್ಳದೆ, ಜನರೆದುರಿಗೆ ಎಸಿ ಮಾಡಲು ಹೇಳಿದರೂ ತಹಸೀಲ್ದಾರ್ ಮಾಡದೆ ತಮ್ಮ ವಿರುದ್ಧವಿದ್ದಾರೆಂಬ ಆಭಾವನೆ ಬರುವಂತೆ ನಡೆದುಕೊಳ್ಳುತಿದ್ದರು. ಅವರಿನ್ನೂ ಶಿಕ್ಷಣರ‍್ಥಿಗಳಾಗಿದ್ದರೂ ಆಗಲೇ ತನಗೆಲ್ಲ ಗೊತ್ತು ಎಂಬ ಅಹಂನಿಂದ ವರ‍್ತಿಸುತ್ತಿದ್ದ ಕಾರಣ ಬಹುಬೇಗ ನನ್ನ ಅವರ ನಡುವೆ ವಿಶ್ವಾಸದ ಕೊರತೆಯಾಗಿ, ಏನಾದರೂ ಮಾಡಬೇಕೆಂದರೆ ಲಿಖಿತ ಆದೇಶ ಕಳಿಸಲು ಅವರ ಮ್ಯಾನೇಜರ್ ಅವರಿಗೆ ನಾನು ದೂರವಾಣಿ ಮುಖಾಂತರ ಹೇಳುತ್ತಿದ್ದೆ. ಆ ನಂತರ ಮತ್ತೆ ಕೆಲವು ದಿನಗಳಲ್ಲಿ ಅವರನ್ನು ಬೇರೆ ತಾಲ್ಲೂಕಿಗೆ ತರಬೇತಿಗಾಗಿ ಕಳಿಸಿದ ಕಾರಣ ನನ್ನ ಮನಸ್ತಾಪ ಅಲ್ಲಿಗೆ ಮುಗಿದಿತ್ತು. ಆದರೆ ಮುಂದೆ ಅನೇಕ ಬಾರಿ ಅವರೊಡನೆ ಒಡನಾಡುವ ಸಂರ‍್ಭದಲ್ಲಿ ಇದ್ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಸರಳವಾಗಿ ನಡೆಸಿಕೊಂಡ ಕಾರಣದಿಂದಾಗಿ ಅವರ ಬಗ್ಗೆ ನನ್ನಲ್ಲಿದ್ದ ಕಹಿ ಕರಗಿ ಸಹಜತೆ ಮೂಡಿದೆ.

ನನ್ನ ಕಛೇರಿ ಕೆಲಸಗಳ ಜೊತೆ ಆಚರಿಸುತ್ತಿದ್ದ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ಮೈಸೂರಿನ ಸಮಾಜವಾದಿ ಗೆಳೆಯರ ಜೊತೆ ಚರ್ಚಿಸಿ ಡಾ. ಎಲ್. ಬಸವರಾಜ್, ಸುಜನಾ, ಕೆ.ಎಸ್. ಭಗವಾನ್, ಕೆ. ರಾಮದಾಸ್ ಅವರನ್ನು ಕರೆಸಿ ನಮ್ಮ ತಾಲ್ಲೂಕಿನಲ್ಲಿ ಭಾಷಣ ಮಾಡಿಸುತ್ತಿದ್ದೆ. ಡಿಎಸ್‌ಎಸ್, ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಅನೇಕ ಮಿತ್ರರು ನನ್ನ ಒಡನಾಟದಲ್ಲಿದ್ದರು.

ಈಗ ಹೆಸರಾಂತ ಸಾಹಿತಿ ಮತ್ತು ನನ್ನ ಮಿತ್ರನಾಗಿದ್ದ ಮಾದೇವನ ಊರಾದ ದೇವನೂರಿಗೂ ಹೋದಾಗ ಅವರ ಮನೆಗೂ ಹೋಗಿ ಬಂದಿದ್ದೆ. ಕೃಷ್ಣಪ್ಪ – ಇಂದಿರಾ ಅವರು ಮಕ್ಕಳಾದ ಶಾಲಿನಿ, ಸೀಮಾ ಅವರುಗಳ ಜೊತೆ ನಂಜನಗೂಡಿಗೆ ಬಂದು ಉಳಿದು ನಂಜುಂಡೇಶ್ವರ ದೇವಸ್ಥಾನದ ಹಬ್ಬದಲ್ಲಿ ಭಾಗವಹಿಸಿದ ನೆನಪು ಈಗಲೂ ಹಸಿರಾಗಿದೆ.

ಡಿಎಸ್‌ಎಸ್‌ನ ರಾಜ್ಯ ಮಟ್ಟದ ಕಲಿಕಾ ಸಮಾವೇಶವನ್ನು (study camp ) ನಂಜನಗೂಡು ತಾಲ್ಲೂಕಿನಲ್ಲಿನ ವಿದ್ಯಾಪೀಠದಲ್ಲಿ ಕೃಷ್ಣಪ್ಪನವರು ಸುಮಾರು ಒಂದು ವಾರದ ಕಾಲ ನಡೆಸಿದ್ದರು. ಆಗ ರಾಜ್ಯದ ಮೂಲೆಮೂಲೆಗಳಿಂದ ಬಂದು ಡಿಎಸ್‌ಎಸ್‌ನ ಹೋರಾಟದ ರೂಪುರೇಷೆಗಳನ್ನು ಚರ್ಚಿಸುತ್ತಿದ್ದುದನ್ನು ನಾನು ಭಾಗವಹಿಸದಿದ್ದರೂ ತಿಳಿದುಕೊಳ್ಳುತ್ತಿದ್ದೆ.

ಡಿಎಸ್‌ಎಸ್‌ನ ಅಂದಿನ ಬಹುತೇಕ ರ‍್ಚೆಗಳು ರ‍್ಕಾರದ ನಿಷ್ಕಿçಯತೆ, ದಲಿತ ಶಾಸಕರುಗಳ ಗುಲಾಮಿತನ, ದಲಿತರ ಮೇಲಿನ ದರ‍್ಜನ್ಯ, ದಲಿತರ ಕರ‍್ಯಕ್ರಮಗಳಲ್ಲಿನ ನಿಧಾನಗತಿ ಅನುಷ್ಠಾನ, ಇಂತಹವೇ ರ‍್ಚೆಯಾಗುತ್ತಿದ್ದವು. ಅಂತಹ ಸಂಘಟನೆಗೆ ತಹಸೀಲ್ದಾರನಾಗಿ ಭಾಗಿಯಾಗುವುದು, ಸಹಕಾರ ನೀಡುವುದು ಸರಿಯಲ್ಲವೆಂದು ನನಗೆ ನಮ್ಮ ಹಿರಿಯ ಸಿಬ್ಬಂದಿ ಹೇಳುತ್ತಿದ್ದರೂ ನಾನು ನನ್ನ ಇತರೆ ಸಾಮಾನ್ಯ ಕೆಲಸಗಳಲ್ಲಿ ಹಿಂದೆ ಬೀಳದೆ ಮತ್ತು ಇತರೆ ಸಾರ‍್ವಜನಿಕರಲ್ಲೂ ಯಾವುದೇ ತಗಾದೆ ಬಾರದಂತೆ ಕೆಲಸ ನಿರ‍್ವಹಿಸಿದ್ದರಿಂದ ಬೇರಾರೂ ಆಕ್ಷೇಪಿಸುತ್ತಿರಲಿಲ್ಲ. ಆದರೆ ಆಗ ನಂಜನಗೂಡಿನವರೇ ಆಗಿದ್ದ ಡಿಎಸ್‌ಎಸ್‌ನಲ್ಲಿ ಇದ್ದವನೊಬ್ಬ ಮಾದೇವ, ಕೃಷ್ಣಪ್ಪನವರನ್ನು ವೈಯಕ್ತಿಕವಾಗಿ ದ್ವೇಷಿಸುವ ಮನಸ್ಸಿನ ವ್ಯಕ್ತಿ. ನಮ್ಮ ಕಛೇರಿಯ ಸರ‍್ವೆಯರ್ ನೌಕರನನ್ನು ಸಹಾಯ ಪಡೆದು, ನಮ್ಮ ಕಛೇರಿಯ ಬಗ್ಗೆ ಕರಪತ್ರ ಹಾಕಿ `ಭ್ರಷ್ಟಾಚಾರದ ಕೂಪ ತಾಲ್ಲೂಕು ಕಛೇರಿ’ ಎಂದೆಲ್ಲ ದೂರಿದ್ದರು. ಆದರೆ ಅದಕ್ಕೆಲ್ಲ ಕುಮ್ಮಕ್ಕು ಕೊಟ್ಟವನು ನನ್ನ ಕಛೇರಿಯ ಸರ‍್ವೆಯರ್ ಸಂಬಂಧಿ ಡಿ.ಎಸ್.ಎಸ್.ನಲ್ಲಿಯೇ ಇದ್ದವನೊಬ್ಬ ಎಂದು ನನಗೆ ತಿಳಿದು ಬಂತು.

ಜೊತೆಗೆ ನಮ್ಮ ಕಚೇರಿಯ ರ‍್ವೇಯರ್ ದೈನಂದಿನ ಕೆಲಸದಲ್ಲಿ ನಿರ‍್ಲಕ್ಷ್ಯ ತೋರುತ್ತಿದ್ದ ಕಾರಣದಿಂದ ನಾನು ಮೊದಲೇ ಅವನನ್ನು ಅಮಾನತ್ತುಗೊಳಿಸಿದ್ದೆ. ಆ ಕಾರಣ ಅವನು ನನ್ನ ಬಗ್ಗೆ ಮೊದಲೇ ಅಸಮಾಧಾನಗೊಂಡಿದ್ದ. ನಂತರದ ದಿನಗಳಲ್ಲಿ ನಾನೇನೂ ಹೇಳದಿದ್ದರೂ ಕರಪತ್ರ ಹಾಕಿದ ಬಗ್ಗೆ ಬಂದು ತನ್ನ ನಡವಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ. ಇದಕ್ಕೆಲ್ಲ ತನ್ನ ಭಾವ ಡಿಎಸ್‌ಎಸ್‌ನಲ್ಲಿರುವವನು ಕಾರಣ ಎಂದು ಹೇಳಿ ನನಗೆ ದಂಗುಬಡಿಸಿದ್ದ. ಇಂತಹ ವಿಷಯಗಳನ್ನೆಲ್ಲ ನಿಭಾಯಿಸುವ ಅನುಭವ ನನಗೆ ಇದ್ದುದರಿಂದ ಮತ್ತೇನು ಅದು ಬೆಳೆಯಲಿಲ್ಲ.

ನಂಜನಗೂಡಿನಲ್ಲಿ ನಾನಿರುವಾಗ ಪೋಲೀಸ್ ಇಲಾಖೆಯಲ್ಲಿ ಡಿ.ವೈ.ಎಸ್.ಪಿಯಾಗಿ ಪಿ.ಹೆಚ್. ರಾಣೆ, ಇಬ್ಬರು ಇನ್ಸ್ಪೆಕ್ಟರ್ ಮತ್ತು ನಾಲ್ಕು-ಐದು ಜನ ಸಬ್ ಇನ್ಸ್ಪೆಕ್ಟರ್‌ಗಳು ಇದ್ದರು. ನಾವೆಲ್ಲ ಊರಿನಲ್ಲಿರುವ ಯಾವುದೇ ಪ್ರತಿಷ್ಠಿತ ಮನರಂಜನೆಯ ಕ್ಲಬ್‌ಗಳಿಗೆ ಹೋಗುತ್ತಿರಲಿಲ್ಲ. ಅದರ ಬದಲು, ಪೋಲೀಸ್ ಸ್ಟೇಷನ್ ಬಳಿ ಇದ್ದ ವಿಶಾಲವಾದ ಮೈದಾನದಲ್ಲಿ ಬೆಳಗಿನ ಜಾವದಲ್ಲಿ ಬ್ಯಾಟ್‌ಮಿಂಟನ್, ಷಟಲ್ ಕಾಕ್ ಆಟ ಪ್ರಾರಂಭಿಸಿದ್ದೆವು. ಅಲ್ಲಿಗೆ ಕಂದಾಯ ಇಲಾಖೆಯಲ್ಲಿನ ವಿಎ, RI & ಸಬ್ ಇನ್ಸ್ಸ್ಪೆಕ್ರ‍್ಸ್ ಮತ್ತು ನನ್ನ ಬಿ.ಎ. ತರಗತಿಯ ಕ್ಲಾಸ್ ಮೇಟ್ ಆಗಿದ್ದ ನರಸಿಂಹಸ್ವಾಮಿ ಸೇರಿ ಒಂದೆರಡು ಘಂಟೆಗಳ ಕಾಲ ಆಟದಲ್ಲಿ ಕಳೆಯುತ್ತಿದ್ದೆವು. ಆಗಲೇ ತಾಲ್ಲೂಕಿನಲ್ಲಿನ ಸಮಸ್ಯೆಗಳನ್ನು ಸಾಂಧರ‍್ಭಿಕವಾಗಿ ಚರ‍್ಚಿಸಿ, ಶಾಂತಿ ಕಾಪಾಡಲು ಬೇಕಾದ ಕ್ರಮವಾಗಿ ಕೆಲವರನ್ನು ಒಂದೆರಡು ವಾರಗಳ ಕಾಲ ಸಬ್ ಜೈಲಿಗೆ ಕಳಿಸಲು ಕೋರುತ್ತಿದ್ದರು. ಇಲ್ಲವೇ ಪ್ರತಿ ವಾರವೂ ಹಾಜರಿರಲು ನೋಟಿಸ್ ನೀಡಿ ಬಾರದಿದ್ದಾಗ ದಸ್ತಗಿರಿ ಮಾಡಿ ತರಲು ನನ್ನಿಂದ ಅದೇಶ ಪಡೆದು ಕರೆತರುತ್ತಿದ್ದರು. ನಂತರ ವಿಚಾರಣೆ ಮಾಡಿ, ಒಳ್ಳೆಯ ನಡೆವಳಿಕೆಯ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡುತ್ತಿದ್ದೆವು. ಇನ್ನು ಕೆಲವು ಭಾರಿ ಈ ಎಲ್ಲ ಅಖPಅ 107 ಪ್ರಕರಣದಲ್ಲಿದ್ದ ಆಪಾದಿತರನ್ನು, ಗ್ರಾಮ ಸಹಾಯಕರನ್ನು ಒಟ್ಟುಗೂಡಿಸಿ ನಮ್ಮ ಕಛೇರಿಯ ಆವರಣದಲ್ಲಿದ್ದ ಜಾಗದಲ್ಲಿ ಗಿಡ ನೆಡಲು ಬೇಕಾದ ಗುಂಡಿ ತೆಗೆಯಲು ತೊಡಗಿಸಿ ದಿನದ ಕೊನೆಯಲ್ಲಿ ಕೇಸು ಕರೆದು ಕೇಸನ್ನು ಮುಂದೂಡುತ್ತಿದ್ದೆನು. ಹೀಗಾಗಿ ತಾಲ್ಲೂಕಿನಲ್ಲಿ, ಜಾತಿ ಜಗಳಗಳಾಗಲೀ, ದೊಂಬಿಗಳಾಗಲೀ ಮಾಡಲು ಪುಂಡ ಪೋಕರಿಗಳಿಗೆ ಅವಕಾಶವಿರುತ್ತಿರಲಿಲ್ಲ.

ತಾಲ್ಲೂಕು ಮಟ್ಟದ ನಾಯಕರು

1986ರ ನಂತರ ಶಾಸಕರುಗಳ ಜೊತೆ ಜಿಲ್ಲಾ ಪರಿಷತ್ ಚುನಾವಣೆಗಳು ಮುಕ್ತಾಯಗೊಂಡು ತಾಲ್ಲೂಕುಮಟ್ಟದಲ್ಲಿ ಹೆಜ್ಜಿಗೆ ರಾಮಯ್ಯ, ದೇವನೂರ ಸಿದ್ದಪ್ಪ, ಬಸವರಾಜ್, ಕಳಲೆ ಸಿದ್ದ ನಾಯಕ್, ಶಶಿಕಲಾ ನಾಗರಾಜ್ ಮತ್ತು ಶಶಿಕಲಾ ಬಾಲರಾಜ್ ಜೊತೆಗೆ ನಂಜನಗೂಡು ಟೌನ್‌ನಲ್ಲಿ ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷರೂ ಇರುತ್ತಿದ್ದರು. ಇವರೆಲ್ಲ ಸಣ್ಣಪುಟ್ಟ ಕೆಲಸಗಳಿಗೆ ಶಿಫಾರಸ್ಸು ಮಾಡಲು ತಾಲ್ಲೂಕು ಕಛೇರಿಗೆ ಬರುತ್ತಿದ್ದರು. ಆಗುವ ಕೆಲಸ ಮಾಡುವುದರಲ್ಲಿ ವಿಳಂಬವಾಗದಂತೆ, ಆಗದಿರುವ ಕೆಲಸಗಳಿಗೂ ನನ್ನ ಮಟ್ಟದಲ್ಲೇ ಅವರಿಗೆ ವಿವರಿಸಿ ಹೇಳುತ್ತಿದ್ದೆ. ಅವರುಗಳು ಒಮ್ಮೊಮ್ಮೆ ಅದೇ ವಿಷಯಗಳನ್ನು ಶಾಸಕರುಗಳ ಹತ್ತಿರವೂ ಪ್ರಸ್ತಾಪಿಸಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು. ನನ್ನ ವಿವರಣೆ ಶಾಸಕರುಗಳಿಗೂ ಅದೇ ಆಗಿರುತ್ತಿತ್ತು. ಹಾಗಾಗಿ ಆಗುವ ಕೆಲಸಗಳಿಗೆ ಯಾವ ಶಿಫಾರಸ್ಸು ತಂದರೂ ಆಗುವುದಿಲ್ಲ ಎಂಬ ನಂಬಿಕೆ ಅವರಿಗೆಲ್ಲ ತಿಳಿದು ಬಂದಿತ್ತು.

ಗೃಹಮಂತ್ರಿಯಾಗಿದ್ದ ರಾಚಯ್ಯನವರು ಕರ‍್ನಾಟಕ ಕಂಡ ಹಿರಿಯ ಸಜ್ಜನ ರಾಜಕಾರಣಿ. ಅವರು ತಾಲ್ಲೂಕಿನಲ್ಲಿ ಪ್ರವಾಸ ಇರುವಾಗ, `ಇತರೆ ಇಬ್ಬರು ಶಾಸಕರುಗಳು ಯುವಕರಾಗಿದ್ದ ಕಾರಣ ಏನಾದರೂ ನಿನ್ನಿಂದ ತಪ್ಪು ಮಾಡಿಸಿ, ಮುಂದೆ ನೀನಿನ್ನು ಎಸಿ, ಡಿಸಿ ಆಗಬೇಕಾದವನು, ಎಚ್ಚರದಿಂದ ಕೆಲಸ ನರ‍್ವಹಿಸಬೇಕೆಂದು’ ಸಲಹೆ ನೀಡುತ್ತಿದ್ದರು. ನನಗಿಂತ ವಯಸ್ಸಿನಲ್ಲಿ, ಅನುಭವದಲ್ಲಿ ಸುಮಾರು 20 ವರ‍್ಷಗಳ ಅಂತರವಿದ್ದ ಅವರ ಮಾತು ನನಗೆ ನಿಜವಾದ ಕಳಕಳಿಯಿಂದ ಕೂಡಿದ ಮಾತಾಗಿತ್ತು. ಅವರಿಗೆ ಜನರಿಗೆ ಒಳ್ಳೆಯ ಆಡಳಿತ ನೀಡಿದರೆ ಸಾಕಾಗಿತ್ತು. ಮತ್ತಾವ ಒಳ ಒಪ್ಪಂದಗಳ ಮಾತು ಅವರ ಆಡಳಿತದಲ್ಲಿ ಸುಳಿಯುತ್ತಿರಲಿಲ್ಲ.

ಕಂದಾಯ ನೌಕರರ ದಿನಾಚರಣೆ

ವಿಧಾನಸಭೆ ಚುನಾವಣೆ ಆಗಿ ಮೂರು ರ‍್ಷವಾಗಿತ್ತು. ಜಿಲ್ಲಾ ಪರಿಷತ್ ಆಗತಾನೆ ಚುನಾವಣೆಗಳಾಗಿ ಹೊಸ ಸದಸ್ಯರುಗಳು ಆಯ್ಕೆಯಾಗಿದ್ದರು. ಮಾಮೂಲಿ ಕಂದಾಯ ಮತ್ತು ತಾಲ್ಲೂಕು ದಂಡಾಧಿಕಾರಿಯ ಕೆಲಸಗಳನ್ನು ಬಿಟ್ಟರೆ ಮತ್ತಾವ ಒತ್ತಡದ ಕೆಲಸಗಳು ಇರಲಿಲ್ಲ. ಹೀಗಿರುವಾಗ ಕಂದಾಯ ಅಧಿಕಾರಿಗಳು ರ‍್ಷಪರ‍್ತಿ ದುಡಿತದಲ್ಲೇ ಇದ್ದು, ಕಲೆ ಸಂಸ್ಕೃತಿ, ಸಂಗೀತದ ಬಗ್ಗೆ ಮುಖ ಮಾಡುವುದೇ ಇಲ್ಲ. ಈ ಬಗ್ಗೆ ನಾವ್ಯಾಕೆ ಇಡೀ ಜಿಲ್ಲೆಯ ನೌಕರರನ್ನು ಒಳಗೊಂಡಂತೆ 1-2ದಿನ ನಮ್ಮ ಕಂದಾಯ ನೌಕರರ ದಿನಾಚರಣೆ ಆಚರಿಸಬಾರದು ಎಂದು ನಮ್ಮ ಎಸಿ ತ್ರಿಪಾಠಿಯವರ ಜೊತೆ ಚರ‍್ಚಿಸಿ, ನಂತರ ಡಿಸಿಗೂ ಹೇಳಿದೆ.

ಎಲ್ಲ ತಹಸೀಲ್ದಾರ್ ಮಿತ್ರರೊಡನೆ ಕೂಡ ಮೌಖಿಕವಾಗಿ ಚರ‍್ಚಿಸಿ ಅವರ ಸಹಕಾರವನ್ನು ಕೋರಿದೆ. ಅದರಂತೆ, ವಿವಿಧ ಆಟಗಳ ಸ್ಪರ್ಧೆ, ಹಾಡುಗಾರಿಕೆ, ಕೊನೆಯ ದಿನದಲ್ಲಿ ಮಹಾಭಾರತದ ಕುರುಕ್ಷೇತ್ರದ ನಾಟಕ ಎಂದೆಲ್ಲ ತಯಾರಿಗಳು ನಡೆದವು. ಹುಣಸೂರು, ಮೈಸೂರು ಮತ್ತು ನಂಜನಗೂಡು ಉಪ ವಿಭಾಗಗಳ ಉಪ ವಿಭಾಗಾಧಿಕಾರಿಗಳು, ಎಲ್ಲಾ ತಾಲ್ಲೂಕು ತಹಸೀಲ್ದಾರರು, ವಿಎ, ಆರ್‌ಐ ಹಾಗೂ ಕಛೇರಿ ಸಿಬ್ಬಂದಿ ಎಲ್ಲರೂ ಎಲ್ಲ ಆಟ ಪಾಠಗಳಲ್ಲಿ ಭಾಗವಹಿಸಿದ್ದರು. ಆಟಗಳಲ್ಲಿ ಕಬಡ್ಡಿ, ಬ್ಯಾಟ್ ಮಿಂಟನ್, ಷಟಲ್ ಕಾಕ್, ವಾಲಿಬಾಲ್, ಚೆಸ್ ಹೀಗೆಲ್ಲ ಸ್ರ‍್ಧೆಗಳನ್ನು ನರ‍್ವಹಿಸಲು ಎಇಓ ಅವರನ್ನು ಸಂರ‍್ಕಿಸಿ ಒಬ್ಬ ಕ್ರೀಡಾ ಅಧಿಕಾರಿಯನ್ನು ಕೋರಿದ್ದೆ. ಅವರು ಎಲ್ಲಾ ಕ್ರೀಡೆಗಳನ್ನು ವ್ಯವಸ್ಥೆಗೊಳಿಸಿ, ಆಡಿಸಿ ಬಹುಮಾನಿತರ ಪಟ್ಟಿ ನೀಡಿದ್ದರು. ನಿಯಮಿತ ಅಭ್ಯಾಸಗಳು ಇಲ್ಲದ ಆಟಗಾರರೊಬ್ಬರು ಕಬ್ಬಡಿ ಆಟದಲ್ಲಿ ಬಿದ್ದು ಅವರ ಕೈ ಮುರಿದಿತ್ತು. ಸದ್ಯ ಅವರನ್ನು ನಂಜನಗೂಡಿನಲ್ಲಿಯೇ ಉಪಚರಿಸಿ ಸುಧಾರಿಸುವಂತಾಯಿತು.

ಈ ಸಮಾರಂಭಕ್ಕೆ ಮೊದಲ ದಿನ ಎಲ್ಲಾ ಸ್ಪರ್ಧೆಗಳನ್ನು ನಡೆಸಿ ಎರಡನೇ ದಿನ ಸಮಾರೋಪ ಸಮಾರಂಭ ಮತ್ತು ನಾಟಕವಿತ್ತು. ಆಗ ಮೈಸೂರು ವಿಭಾಗಕ್ಕೆ ವಿಭಾಗಾಧಿಕಾರಿಗಳಾಗಿದ್ದ ನೀಲಕಂಠರಾಜು, ಡಿಸಿ ವಿ.ಪಿ. ಬಳಿಗಾರ್, ಹುಣಸೂರು ಎಸಿಯಾಗಿದ್ದ ಶಿವಲಿಂಗಮರ‍್ತಿ, ಮೈಸೂರು ಎಸಿ ಈಶ್ವರ್ ನಮ್ಮ ಎಸಿ ಯೋಗೇಂದ್ರ ತ್ರಿಪಾಠಿ ಎಲ್ಲ ಸಂತೋಷದಿಂದ ಭಾಗವಹಿಸಿದ್ದರು. ನಮ್ಮಲ್ಲಿದ್ದ 80 ಜನ ಗ್ರಾಮ ಸಹಾಯಕರಿಗೆ ವಿಶೇಷವಾದ ಸಮವಸ್ತ್ರ ಹೊಲಿಸಿ ಹೊಸ ಬೂಟುಗಳನ್ನು ಕೊಡಿಸಿ, ಅವರಿಗೆ ಪೋಲೀಸ್ ಪೇದೆಗಳಂತೆ ತರಬೇತಿಯನ್ನು ನೀಡಲು ನಮಲ್ಲಿಯೇ ಇದ್ದ ಕಸಬಾ ವಿಎ – ರಾಧಾಕೃಷ್ಣನಿಗೆ ಜವಾಬ್ದಾರಿ ನೀಡಿದ್ದೆ. ರಾಧಾಕೃಷ್ಣ VA ಆಗಿದ್ದರೂ ಒಬ್ಬ DSPಯಂತೆ ಪೊಲೀಸ್ ನಡವಳಿಕೆಗಳನ್ನು ರೂಢಿಸಿಕೊಂಡಿದ್ದ. ಅವನ ಕೆಳಗೆ ತರಬೇತಿಗೊಂಡ ನಮ್ಮ ಗ್ರಾಮ ಸಹಾಯಕರು ಶಿಸ್ತಿನ ಪೊಲೀಸ್ ಪೇದೆಗಳಂತೆ ನಡೆದುಕೊಳ್ಳುತ್ತಿದ್ದರು.

ಸಮಾರಂಭ ಪ್ರಾರಂಭವಾಗುವ ಮುನ್ನ ನಮ್ಮ ಗ್ರಾಮ ಸಹಾಯಕರೆಲ್ಲ ಒಟ್ಟಿಗೆ ಸಮವಸ್ತ್ರದಲ್ಲಿದ್ದು, ಪೋಲೀಸ್ ಇಲಾಖೆ ನೀಡುವ ‘ಗಾರ್ಡ್ ಆಫ್ ಆನರ್’ನಂತೆ ಎಲ್ಲ ಅತಿಥಿಗಳಿಗೂ ಗೌರವ ವಂದನೆ ನೀಡಿದಾಗ ‘you have summoned police personnel also here’ ಎಂದು ಡಿವಿಸಿ ಉದ್ಘಾರ ತೆಗೆದರು. ‘ನೋ ಸರ್, ಇವರೆಲ್ಲ ನಮ್ಮ ತಾಲ್ಲೂಕಿನ ಗ್ರಾಮ ಸಹಾಯಕರು’ ಎಂದಾಗ ಅವರು ಅಚ್ಚರಿ ವ್ಯಕ್ತಪಡಿಸಿ, ಪ್ರಶಂಸೆ ಕೂಡ ಮಾಡಿದ್ದರು. ಇಂತಹ ಕಂದಾಯ ದಿನಾಚರಣೆಯನ್ನು ನಾನು ಆಯೋಜಿಸಲು ಮುಂದಾಗಿದ್ದಕ್ಕೆ, ನರ‍್ವಹಿಸಿದ್ದಕ್ಕೆ ಡಿವಿಸಿ ಮೊದಲ್ಗೊಂಡು ಎಲ್ಲರೂ ಆಗ ನನ್ನನ್ನು ಪ್ರಶಂಸಿದರು.

ಎಲ್ಲರಿಗಿಂತಲೂ ಹೆಚ್ಚಾಗಿ ನಮ್ಮ ಎಸಿ ಯಾಗಿದ್ದ ತ್ರಿಪಾಠಿ ಅವರು ತುಂಬಾ ಖುಷಿಯಲ್ಲಿದ್ದರು. ಜೊತೆಗೆ ನಮ್ಮ ತಾಲ್ಲೂಕಿನ ಎಲ್ಲಾ ಸಿಬ್ಬಂದಿ ನಾವೆಲ್ಲ ಒಂದು ಕುಟುಂಬ ಎಂಬ ಭಾವನೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಏನು ಬೇಕಾದರೂ ಸಾಧಿಸಬಹುದೆಂಬ ಸದ್ಭಾವನೆ ಮೂಡುವಂತಾಗಿತ್ತು. ಕೊನೆಯಲ್ಲಿ ಕಲಿತು ಪ್ರರ‍್ಶಿಸಿದ ನಾಟಕದ ಪ್ರಥಮ ದೃಶ್ಯದಲ್ಲಿ ನಾನು ಕೃಷ್ಣನ ಪಾತ್ರಧಾರಿಯಾಗಿ ಹಾಡೊಂದನ್ನು ಹಾಡಿ ಪ್ರಾರಂಭವಾಗುವಂತೆ ನಾಟಕದ ನರ‍್ದೇಶನ ಮಾಡಿದ್ದ ಮೇಷ್ಟರು ವ್ಯವಸ್ಥೆ ಮಾಡಿದ್ದರು. ನಾನು ಕೃಷ್ಣನ ಪಾತ್ರದ ಪೋಷಾಕಿನಲ್ಲಿ ಹಾಡಿ ಸಂತೋಷಪಟ್ಟಿದ್ದು ಈಗ 35 ವರ‍್ಷಗಳ ನಂತರವೂ ಹಸಿರಾಗಿದೆ.(ಬರಹ:ರುದ್ರಪ್ಪ ಹನಗವಾಡಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ...

ದಿನದ ಸುದ್ದಿ19 hours ago

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್...

ದಿನದ ಸುದ್ದಿ20 hours ago

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ...

ದಿನದ ಸುದ್ದಿ21 hours ago

ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ...

ದಿನದ ಸುದ್ದಿ22 hours ago

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ

ಸುದ್ದಿದಿನಡೆಸ್ಕ್:ಭಾರತದ 6 ಮಹತ್ವದ ಐತಿಹಾಸಿಕ ಸ್ಥಳಗಳು ಹಾಗೂ ಹೆಗ್ಗುರುತುಗಳು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ, ಸೇರ್ಪಡೆಗೊಂಡಿವೆ. ಇತ್ತೀಚೆಗೆ ಚಕ್ರವರ್ತಿ ಅಶೋಕನ ಶಿಲಾ ಶಾಸನಗಳು ಈ...

ದಿನದ ಸುದ್ದಿ2 days ago

ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್

ಸುದ್ದಿದಿನ,ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ 171 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಹಾಗೂ 410 ಉಪ ಮಾರುಕಟ್ಟೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ತಿಗೆ ಇಂದು ತಿಳಿಸಿದರು....

ದಿನದ ಸುದ್ದಿ3 days ago

ಕವಿತೆ | ಮತ್ತಿನ ಕುಣಿಕೆ

ಗುರು ಸುಳ್ಯ ನಿದೆರೆಗೆ ದೂಡದ ಮದಿರೆಯ ಅನುಭವ ಸದಾ ಸಂಕಟಗಳ ಹೆರುವ ಮತ್ತಿನ ಕುಣಿಕೆ ನನ್ನ ಮಡಿಲ ಮೇಲೆ ನನ್ನದೇ ಒಡಲು ಮಲಗಿರಲು ಮಲಗಲು ಹಂಬಲಿಸುವ ಮಗುವಿನ...

ದಿನದ ಸುದ್ದಿ4 days ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ5 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ6 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

Trending