ದಿನದ ಸುದ್ದಿ
ಕೋವಿಡ್ ಸೋಂಕು ಭೀತಿ ; ನಾಳೆ ಮುಖ್ಯಮಂತ್ರಿಗಳೊಂದಿಗೆ ಮೋದಿ ವಿಡಿಯೋ ಸಂವಾದ
ಸುದ್ದಿದಿನ ಡೆಸ್ಕ್ : ದೇಶದ ಕೆಲ ರಾಜ್ಯಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಸಂವಾದ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆಯಿಂದ ವೀಡಿಯೊ ಕಾನ್ಫರೆನ್ಸ್ನಲ್ಲಿ ಭಾಗಿಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತ್ ಕಚೇರಿಯಲ್ಲಿ ವೀಡಿಯೊ ಕಾನ್ಫರೆನ್ಸ್ಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243