Connect with us

ದಿನದ ಸುದ್ದಿ

ಬೀಜೋಪಚಾರ ಹಾಗೂ ಬೀಜಾಮೃತ ಬಳಕೆ : ರೈತರಿಗೆ ಸಲಹೆ

Published

on

ಸುದ್ದಿದಿನ,ದಾವಣಗೆರೆ : ಮುಂಗಾರು ಹಂಗಾಮು ಪ್ರಾರಂಭಗೊಂಡಿದ್ದು, ರೈತರು ಮುಂಗಾರು ಬೆಳೆ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿತ್ತನೆ ಬೀಜದಲ್ಲಿ ಬೀಜೋಪಚಾರ ಕೈಗೊಳ್ಳಲು ಹಾಗೂ ಬೀಜಾಮೃತ ಬಳಕೆ ಮಾಡುವಂತೆ ಕೃಷಿ ಇಲಾಖೆಯು ರೈತರಿಗೆ ಸಲಹೆ ನೀಡಿದೆ.

ಅಧಿಕ ಇಳುವರಿ ಪಡೆಯಲು ಉತ್ತಮ ಬೀಜದ ಕೊಡುಗೆ ಅಪಾರವಾಗಿದೆ. ಬೆಳೆಯುವ ಸಿರಿ ಮೊಳೆಕೆಯಲ್ಲಿ ಎಂಬ ನಾಡ್ನುಡಿಯಂತೆ ಉತ್ತಮ ಇಳುವರಿ ಪಡೆಯುವಲ್ಲಿ ಆರೊಗ್ಯವಂತ ಸಸಿಗಳ ಪಾತ್ರ ಪ್ರಮುಖವಾಗಿದೆ. ಆದ್ದರಿಂದ ಮಣ್ಣಿನಿಂದ ಹಾಗೂ ಬೀಜದಿಂದ ಹರಡುವ ರೋಗಗಳನ್ನು ತಡೆಗಟ್ಟಲು, ಸಾರಜನಕ ಮತ್ತು ರಂಜಕ ಪೋಷಕಾಂಶಗಳ ಲಭ್ಯತೆಯನ್ನು ಹೆಚ್ಚಿಸಲು ಬೀಜೋಪಚಾರ ಅವಶ್ಯಕ. ಮುಸುಕಿನಜೋಳ, ಶೇಂಗಾ, ತೊಗರಿ ಜಿಲ್ಲೆಯ ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾಗಿದ್ದು ಬಿತ್ತನೆ ಕೈಗೊಳ್ಳುವ ಮುನ್ನ ರೈತಬಾಂಧವರು ಕೆಲವು ತಾಂತ್ರಿಕತೆಗಳನ್ನು ಅನುಸರಿಸಬೇಕು.

ಮುಸುಕಿನಜೋಳದ ಬೆಳೆಯಲ್ಲಿ ಎಕರೆಗೆ ಬೇಕಾಗುವ ಬಿತ್ತನೆ ಬೀಜಕ್ಕೆ 200 ಗ್ರಾಂ ಅಝೋಸ್ಪೈರಿಲಂ ಮತ್ತು 200 ಗ್ರಾಂ ರಂಜಕ ಕರಗಿಸುವ ಜೀವಾಣು ಗೊಬ್ಬರದೊಂದಿಗೆ ಬೀಜಪೋಚಾರ ಮಾಡಬೇಕು. ಬೂಜು ರೋಗ ಅಥವಾ ಕೇದಿಗೆ ರೋಗ ಕಂಡುಬರುವ ಪ್ರದೇಶದಲ್ಲಿ ಮೆಟಲಾಕ್ಸಿಲ್+ಮ್ಯಾಂಕೋಜೆಬ್ ಮಿಶ್ರಣವನ್ನು 3 ಗ್ರಾಂ ನಂತೆ ಪ್ರತಿ ಕಿ.ಗ್ರಾಂ ಬೀಜಕ್ಕೆ ಬೆರೆಸಿ ಬೀಜೋಪಚಾರ ಮಾಡಬೇಕು.

ನೆಲಗಡಲೆ ಬಿತ್ತನೆ ಮಾಡುವ ಮೊದಲು ಪ್ರತಿ ಕಿ.ಗ್ರಾಂ ನೆಲಗಡಲೆ ಬೀಜಕ್ಕೆ 5 ಗ್ರಾಂ ಟ್ರೈಕೋಡರ್ಮ ವಿರಿಡೆ ಅಥವ 2.5 ಗ್ರಾಂ ಥೈರಾಮ್‍ನ್ನು ಬೆರೆಸಿ, ನೆರಳಿನಲ್ಲಿ ಒಣಗಿಸಬೇಕು, ನಂತರ ಒಂದು ಎಕರೆ ಬಿತ್ತನೆ ಬೀಜಕ್ಕೆ 150 ಗ್ರಾಂ ರೈಜೋಬಿಯಂ ಮತ್ತು 400 ಗ್ರಾಂ ಪಿ.ಎಸ್.ಬಿ ಜೈವಿಕ ಗೊಬ್ಬರಗಳನ್ನು ಅಂಟು ದ್ರಾವಣ ಬಳಸಿ ಉಪಚರಿಸಿ ಬಿತ್ತನೆಗೆ ಬಳಸಬೇಕು. ಗೊಣ್ಣೆ ಹುಳುವಿನ ಬಾಧೆ ಇದ್ದಲ್ಲಿ ಪ್ರತಿ ಕಿ.ಗ್ರಾಂ ಬಿತ್ತನೆ ಬೀಜಕ್ಕೆ 10 ಮಿ.ಲೀ ಕ್ಲೊರೋಫೈರಿಫಾಸ್ 20 ಇ.ಸಿ ಯನ್ನು ಬೀಜಕ್ಕೆ ಹಾನಿಯಾಗದಂತೆ ಲೇಪಿಸಿ ಬಿತ್ತನೆ ಮಾಡಬೇಕು.

ಕತ್ತು ಕೊಳೆ ರೋಗದ ನಿರ್ವಹಣೆಗೆ ಪ್ರತಿ ಕಿ. ಗ್ರಾಂ ಬಿತ್ತನೆ ಬೀಜಕ್ಕೆ 2 ಗ್ರಾಂ ಕಾರ್ಬೆಂಡಜಿಂ ಅಥವಾ ಕ್ಯಾಪ್ಟಾನ್ ನ್ನು ಬೀಜೋಪಚಾರ ಮಾಡಿ ಬಿತ್ತುವುದು ಸೂಕ್ತ.

ರಾಗಿ ಬೆಳೆಯಲ್ಲಿ ಕಂಡುಬರುವ ಬೆಂಕಿ ರೋಗ/ ಇಳುಕು ರೋಗ ಮತ್ತು ಕಂದು ಚುಕ್ಕೆ ರೋಗದ ಹತೋಟಿಗೆ ಪ್ರತಿ ಕಿ.ಗ್ರಾಂ ಬಿತ್ತನೆ ಬೀಜಕ್ಕೆ 2 ಗ್ರಾಂ. ಕಾರ್ಬೆಂಡಜಿಂ ನಿಂದ ಉಪಚಾರ ಮಾಡಿ ಬಿತ್ತನೆ ಮಾಡಬೇಕು.

ಇದನ್ನೂ ಓದಿ | ಭವಿಷ್ಯನಿಧಿ 2ನೇ ಬಾರಿ ಮುಂಗಡ ಹಣ ಪಡೆಯಲು ಅವಕಾಶ 

ದ್ವಿದಳ ಬೆಳೆಗಳಾದ ತೊಗರಿ, ಹೆಸರು, ಉದ್ದು, ಅವರೆ ಇತರೆ ದ್ವಿದಳ ಧಾನ್ಯಗಳನ್ನು ಬಿತ್ತುವ ಮೊದಲು 200 ಗ್ರಾಂ ರೈಜೋಬಿಯಂ ಮತ್ತು 200 ಗ್ರಾಂ ರಂಜಕ ಕರಗಿಸುವ ಜೀವಾಣು ಗೊಬ್ಬರದೊಂದಿಗೆ ಬೀಜಪೋಚಾರ ಮಾಡಬೇಕು. ತೊಗರಿ ಬೆಳೆಯಲ್ಲಿ ಸೊರಗು ರೋಗದ ಹತೋಟಿಗೆ ಪ್ರತಿ ಕಿ. ಗ್ರಾಂ ಬಿತ್ತನೆ ಬೀಜಕ್ಕೆ 5 ಗ್ರಾಂ ಟ್ರೈಕೋಡರ್ಮ ವಿರಿಡೆ ಅಥವಾ 2 ಗ್ರಾಂ ಕಾರ್ಬೆಂಡಜಿಂ ಅನ್ನು ಬೀಜೋಪಚಾರ ಮಾಡಿ ಬಿತ್ತಬೇಕು.

ಬೀಜಾಮೃತ ತಯಾರಿಕೆಗೆ 20 ಲೀ. ನೀರು, 5 ಕೆ.ಜಿ. ದೇಸಿ ಹಸುವಿನ ಸಗಣಿ, 5 ಲೀಟರ್ ದೇಸಿ ಹಸುವಿನ ಗಂಜಲ, 50 ಗ್ರಾಂ ಸುಣ್ಣ, ಒಂದು ಬೊಗಸೆ ಜಮೀನಿನ ಫಲವತ್ತಾದ ಮಣ್ಣು ಬಳಸಬೇಕು. ಬಿತ್ತನೆ ಹಿಂದಿನ ದಿನ ತೆಳುವಾದ ಹತ್ತಿ ಬಟ್ಟೆಯಲ್ಲಿ 5 ಕೆ. ಜಿ. ಸಗಣಿಯನ್ನು ಕಟ್ಟಿ, 20 ಲೀ. ನೀರಿರುವ ಪ್ಲಾಸ್ಟಿಕ್ ಬಕೆಟ್ / ಡ್ರಮ್‍ನಲ್ಲಿ ತೂಗುಬಿಡಬೇಕು.

ಒಂದು ಲೀ. ನೀರಿನಲ್ಲಿ 50 ಗ್ರಾಂ ಸುಣ್ಣವನ್ನು ಪ್ರತ್ಯೇಕವಾಗಿ ಬೆರೆಸಿ ತಿಳಿಯಾಗಲು ಬಿಡಬೇಕು. ಬಿತ್ತನೆ ಮಾಡುವ ದಿನ ಇಳಿಬಿಟ್ಟಿರುವ ಸಗಣಿ ಗಂಟನ್ನು ಚೆನ್ನಾಗಿ ಕಲಕಿಸಿ, ಐದಾರು ಬಾರಿ ಹಿಂಡಿ ತೆಗೆಯಬೇಕು. ಸುಣ್ಣದ ತಿಳಿ, ಗಂಜಲ ಹಾಗೂ ಮಣ್ಣನ್ನು ಸಗಣಿ ತಿಳಿಗೆ ಹಾಕಿ ಚೆನ್ನಾಗಿ ಕಲೆಸಿ, ನಂತರ ಬೀಜಗಳನ್ನು ಒಂದು ನಿಮಿಷ ಮಾತ್ರ ಬೀಜಾಮೃತದಲ್ಲಿ ಮುಳುಗಿಸಿ ತೆಗೆಯಬೇಕು. ನೆರಳಿನಲ್ಲಿ ಒಣಗಿಸಿ ತೇವ ಆರಿದ ನಂತರ ಬಿತ್ತನೆ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending