Connect with us

ದಿನದ ಸುದ್ದಿ

ಬೀಜೋಪಚಾರ ಹಾಗೂ ಬೀಜಾಮೃತ ಬಳಕೆ : ರೈತರಿಗೆ ಸಲಹೆ

Published

on

ಸುದ್ದಿದಿನ,ದಾವಣಗೆರೆ : ಮುಂಗಾರು ಹಂಗಾಮು ಪ್ರಾರಂಭಗೊಂಡಿದ್ದು, ರೈತರು ಮುಂಗಾರು ಬೆಳೆ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿತ್ತನೆ ಬೀಜದಲ್ಲಿ ಬೀಜೋಪಚಾರ ಕೈಗೊಳ್ಳಲು ಹಾಗೂ ಬೀಜಾಮೃತ ಬಳಕೆ ಮಾಡುವಂತೆ ಕೃಷಿ ಇಲಾಖೆಯು ರೈತರಿಗೆ ಸಲಹೆ ನೀಡಿದೆ.

ಅಧಿಕ ಇಳುವರಿ ಪಡೆಯಲು ಉತ್ತಮ ಬೀಜದ ಕೊಡುಗೆ ಅಪಾರವಾಗಿದೆ. ಬೆಳೆಯುವ ಸಿರಿ ಮೊಳೆಕೆಯಲ್ಲಿ ಎಂಬ ನಾಡ್ನುಡಿಯಂತೆ ಉತ್ತಮ ಇಳುವರಿ ಪಡೆಯುವಲ್ಲಿ ಆರೊಗ್ಯವಂತ ಸಸಿಗಳ ಪಾತ್ರ ಪ್ರಮುಖವಾಗಿದೆ. ಆದ್ದರಿಂದ ಮಣ್ಣಿನಿಂದ ಹಾಗೂ ಬೀಜದಿಂದ ಹರಡುವ ರೋಗಗಳನ್ನು ತಡೆಗಟ್ಟಲು, ಸಾರಜನಕ ಮತ್ತು ರಂಜಕ ಪೋಷಕಾಂಶಗಳ ಲಭ್ಯತೆಯನ್ನು ಹೆಚ್ಚಿಸಲು ಬೀಜೋಪಚಾರ ಅವಶ್ಯಕ. ಮುಸುಕಿನಜೋಳ, ಶೇಂಗಾ, ತೊಗರಿ ಜಿಲ್ಲೆಯ ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾಗಿದ್ದು ಬಿತ್ತನೆ ಕೈಗೊಳ್ಳುವ ಮುನ್ನ ರೈತಬಾಂಧವರು ಕೆಲವು ತಾಂತ್ರಿಕತೆಗಳನ್ನು ಅನುಸರಿಸಬೇಕು.

ಮುಸುಕಿನಜೋಳದ ಬೆಳೆಯಲ್ಲಿ ಎಕರೆಗೆ ಬೇಕಾಗುವ ಬಿತ್ತನೆ ಬೀಜಕ್ಕೆ 200 ಗ್ರಾಂ ಅಝೋಸ್ಪೈರಿಲಂ ಮತ್ತು 200 ಗ್ರಾಂ ರಂಜಕ ಕರಗಿಸುವ ಜೀವಾಣು ಗೊಬ್ಬರದೊಂದಿಗೆ ಬೀಜಪೋಚಾರ ಮಾಡಬೇಕು. ಬೂಜು ರೋಗ ಅಥವಾ ಕೇದಿಗೆ ರೋಗ ಕಂಡುಬರುವ ಪ್ರದೇಶದಲ್ಲಿ ಮೆಟಲಾಕ್ಸಿಲ್+ಮ್ಯಾಂಕೋಜೆಬ್ ಮಿಶ್ರಣವನ್ನು 3 ಗ್ರಾಂ ನಂತೆ ಪ್ರತಿ ಕಿ.ಗ್ರಾಂ ಬೀಜಕ್ಕೆ ಬೆರೆಸಿ ಬೀಜೋಪಚಾರ ಮಾಡಬೇಕು.

ನೆಲಗಡಲೆ ಬಿತ್ತನೆ ಮಾಡುವ ಮೊದಲು ಪ್ರತಿ ಕಿ.ಗ್ರಾಂ ನೆಲಗಡಲೆ ಬೀಜಕ್ಕೆ 5 ಗ್ರಾಂ ಟ್ರೈಕೋಡರ್ಮ ವಿರಿಡೆ ಅಥವ 2.5 ಗ್ರಾಂ ಥೈರಾಮ್‍ನ್ನು ಬೆರೆಸಿ, ನೆರಳಿನಲ್ಲಿ ಒಣಗಿಸಬೇಕು, ನಂತರ ಒಂದು ಎಕರೆ ಬಿತ್ತನೆ ಬೀಜಕ್ಕೆ 150 ಗ್ರಾಂ ರೈಜೋಬಿಯಂ ಮತ್ತು 400 ಗ್ರಾಂ ಪಿ.ಎಸ್.ಬಿ ಜೈವಿಕ ಗೊಬ್ಬರಗಳನ್ನು ಅಂಟು ದ್ರಾವಣ ಬಳಸಿ ಉಪಚರಿಸಿ ಬಿತ್ತನೆಗೆ ಬಳಸಬೇಕು. ಗೊಣ್ಣೆ ಹುಳುವಿನ ಬಾಧೆ ಇದ್ದಲ್ಲಿ ಪ್ರತಿ ಕಿ.ಗ್ರಾಂ ಬಿತ್ತನೆ ಬೀಜಕ್ಕೆ 10 ಮಿ.ಲೀ ಕ್ಲೊರೋಫೈರಿಫಾಸ್ 20 ಇ.ಸಿ ಯನ್ನು ಬೀಜಕ್ಕೆ ಹಾನಿಯಾಗದಂತೆ ಲೇಪಿಸಿ ಬಿತ್ತನೆ ಮಾಡಬೇಕು.

ಕತ್ತು ಕೊಳೆ ರೋಗದ ನಿರ್ವಹಣೆಗೆ ಪ್ರತಿ ಕಿ. ಗ್ರಾಂ ಬಿತ್ತನೆ ಬೀಜಕ್ಕೆ 2 ಗ್ರಾಂ ಕಾರ್ಬೆಂಡಜಿಂ ಅಥವಾ ಕ್ಯಾಪ್ಟಾನ್ ನ್ನು ಬೀಜೋಪಚಾರ ಮಾಡಿ ಬಿತ್ತುವುದು ಸೂಕ್ತ.

ರಾಗಿ ಬೆಳೆಯಲ್ಲಿ ಕಂಡುಬರುವ ಬೆಂಕಿ ರೋಗ/ ಇಳುಕು ರೋಗ ಮತ್ತು ಕಂದು ಚುಕ್ಕೆ ರೋಗದ ಹತೋಟಿಗೆ ಪ್ರತಿ ಕಿ.ಗ್ರಾಂ ಬಿತ್ತನೆ ಬೀಜಕ್ಕೆ 2 ಗ್ರಾಂ. ಕಾರ್ಬೆಂಡಜಿಂ ನಿಂದ ಉಪಚಾರ ಮಾಡಿ ಬಿತ್ತನೆ ಮಾಡಬೇಕು.

ಇದನ್ನೂ ಓದಿ | ಭವಿಷ್ಯನಿಧಿ 2ನೇ ಬಾರಿ ಮುಂಗಡ ಹಣ ಪಡೆಯಲು ಅವಕಾಶ 

ದ್ವಿದಳ ಬೆಳೆಗಳಾದ ತೊಗರಿ, ಹೆಸರು, ಉದ್ದು, ಅವರೆ ಇತರೆ ದ್ವಿದಳ ಧಾನ್ಯಗಳನ್ನು ಬಿತ್ತುವ ಮೊದಲು 200 ಗ್ರಾಂ ರೈಜೋಬಿಯಂ ಮತ್ತು 200 ಗ್ರಾಂ ರಂಜಕ ಕರಗಿಸುವ ಜೀವಾಣು ಗೊಬ್ಬರದೊಂದಿಗೆ ಬೀಜಪೋಚಾರ ಮಾಡಬೇಕು. ತೊಗರಿ ಬೆಳೆಯಲ್ಲಿ ಸೊರಗು ರೋಗದ ಹತೋಟಿಗೆ ಪ್ರತಿ ಕಿ. ಗ್ರಾಂ ಬಿತ್ತನೆ ಬೀಜಕ್ಕೆ 5 ಗ್ರಾಂ ಟ್ರೈಕೋಡರ್ಮ ವಿರಿಡೆ ಅಥವಾ 2 ಗ್ರಾಂ ಕಾರ್ಬೆಂಡಜಿಂ ಅನ್ನು ಬೀಜೋಪಚಾರ ಮಾಡಿ ಬಿತ್ತಬೇಕು.

ಬೀಜಾಮೃತ ತಯಾರಿಕೆಗೆ 20 ಲೀ. ನೀರು, 5 ಕೆ.ಜಿ. ದೇಸಿ ಹಸುವಿನ ಸಗಣಿ, 5 ಲೀಟರ್ ದೇಸಿ ಹಸುವಿನ ಗಂಜಲ, 50 ಗ್ರಾಂ ಸುಣ್ಣ, ಒಂದು ಬೊಗಸೆ ಜಮೀನಿನ ಫಲವತ್ತಾದ ಮಣ್ಣು ಬಳಸಬೇಕು. ಬಿತ್ತನೆ ಹಿಂದಿನ ದಿನ ತೆಳುವಾದ ಹತ್ತಿ ಬಟ್ಟೆಯಲ್ಲಿ 5 ಕೆ. ಜಿ. ಸಗಣಿಯನ್ನು ಕಟ್ಟಿ, 20 ಲೀ. ನೀರಿರುವ ಪ್ಲಾಸ್ಟಿಕ್ ಬಕೆಟ್ / ಡ್ರಮ್‍ನಲ್ಲಿ ತೂಗುಬಿಡಬೇಕು.

ಒಂದು ಲೀ. ನೀರಿನಲ್ಲಿ 50 ಗ್ರಾಂ ಸುಣ್ಣವನ್ನು ಪ್ರತ್ಯೇಕವಾಗಿ ಬೆರೆಸಿ ತಿಳಿಯಾಗಲು ಬಿಡಬೇಕು. ಬಿತ್ತನೆ ಮಾಡುವ ದಿನ ಇಳಿಬಿಟ್ಟಿರುವ ಸಗಣಿ ಗಂಟನ್ನು ಚೆನ್ನಾಗಿ ಕಲಕಿಸಿ, ಐದಾರು ಬಾರಿ ಹಿಂಡಿ ತೆಗೆಯಬೇಕು. ಸುಣ್ಣದ ತಿಳಿ, ಗಂಜಲ ಹಾಗೂ ಮಣ್ಣನ್ನು ಸಗಣಿ ತಿಳಿಗೆ ಹಾಕಿ ಚೆನ್ನಾಗಿ ಕಲೆಸಿ, ನಂತರ ಬೀಜಗಳನ್ನು ಒಂದು ನಿಮಿಷ ಮಾತ್ರ ಬೀಜಾಮೃತದಲ್ಲಿ ಮುಳುಗಿಸಿ ತೆಗೆಯಬೇಕು. ನೆರಳಿನಲ್ಲಿ ಒಣಗಿಸಿ ತೇವ ಆರಿದ ನಂತರ ಬಿತ್ತನೆ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending