ದಿನದ ಸುದ್ದಿ
ದಂಡಿನ ಮಾರಿಯಮ್ಮ ಮಹಾತ್ಮೆ..!
ಸುದ್ದಿದಿನ, ಶಿವಮೊಗ್ಗ : ವರ್ಷದ ಪ್ರಾರಂಭದಲ್ಲಿ ಮೂದಲ ತಿಂಗಳು ಈ ಜಿಲ್ಲೆಯ ಸುತ್ತ ಮುತ್ತ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಈ ದೇವಿಯದೆ ಭರ್ಜರಿ ಉತ್ಸವ, ಎಲ್ಲೆಂದರಲ್ಲಿ ದೇವಿಯ ಭಕ್ತಿ ಪರಾಕಾಷ್ಠೆಯಲ್ಲಿ ಮುಳುಗಿದ ಭಕ್ತ ಸಾಗರ. ದೇವಿಯ ಜಾತ್ರೆ ಬಂತು ಅಂದರೆ ಸಾಕು ಗ್ರಾಮಗಳು ಶೃಂಗಾರದಲ್ಲಿ , ಭಕ್ತನಂದನದಲ್ಲಿ ಮುಳಿಗಿಹೋಗಿರುತ್ತೆ. ದೇವಿಯ ಹಬ್ಬಕ್ಕೆ ಊರು ಟಾರುಗಳೆಲ್ಲ ಬಣ್ಣ ಬಣ್ಣದಿಂದ ಅಲಂಕಾರದಿಂದ ವಧುವಣಗಿತ್ತಿಯಂತೆ ಜಗಮಗಿಸುತಿರುತ್ತದೆ.
ಅಬಬ್ಬ ಇಷ್ಟೊಂದೆಲ್ಲ ಪೀಠಿಕೆ ಹಾಕ್ತಿದಿರಾ ಅಷ್ಟಕ್ಕೂ ಯಾವ ದೇವಿ ಏನಿದೆ ಅಂತಹ ಶಕ್ತಿ, ಅಷ್ಟಕ್ಕೂ ದೇವಿ ಉತ್ಸವ ಎಲ್ಲಿ ಅನ್ಕೊಂಡ್ರಾ ಹಾಗಾದ್ರೆ ಈ ಸ್ಟೋರಿ ನೋಡಿ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕಲ್ಪನಹಳ್ಳಿ ಗ್ರಾಮದಲ್ಲಿ ತಲ ತಲಾಂತರಗಳಿಂದ ಹಲವಾರು ಧಾರ್ಮಿಕ ಪೂಜಾ ಕೈಂಕರ್ಯಗಳ ವಿಧಿವಿಧಾನಗಳಿಗೆ ಸಾಕ್ಷಿಯಾಗಿರುವ ಐತಿಹಾಸಕ ಹಿನ್ನೆಲೆಯನ್ನು ಹೂಂದಿರುವ ಶ್ರೀ ದಂಡಿನ ಮಾರಿಯಮ್ಮ ಜಾತ್ರೆ ಗ್ರಾಮದಲ್ಲಿ ಎರಡು ವರ್ಷಕ್ಕೊಂದುಸಾರಿ ನಡೆಯುವ ಅಧೋರಿ ಮೆರವಣಿಗೆಗೆ ಸಾಕ್ಷಿಯಾಗಿದೆ. ಬೇಡಿದ ಬಯಕೆಗಳನ್ನು ಹರಕೆಗಳನ್ನು ಇಡೇರಿಸುವ ಶಕ್ತಿಮಾತೆ ಈ ದೇವತೆ. ಮೂರು ದಿನಗಳ ಕಾಲ ನಡೆಯುವ ಈ ಮಾರಿಯಮ್ಮನ ದರ್ಶನಪಡೆಯೊಕ್ಕೆ ಭಕ್ತಸಾಗರವೇ ಹರಿದು ಬಂದಿದೆ.
ವಿಶೇಷ ಅಂದ್ರೆ ದೇವಿಯ ಮೂರ್ತಿಯನ್ನು ಗ್ರಾಮದ ರಾಜ ಬೀದಿಯಲ್ಲಿ ಮೆರವಣಿಗೆ ಹೋಗುವ ಮುನ್ನ ದೇವಿಯನ್ನು ಅಲಂಕಾರ ಮಾಡಿ ದೃಷ್ಟಿ ತೆಗೆಯುತ್ತಾರೆ. ಆಶ್ಚರ್ಯ ಎಂದ್ರೆ ದೃಷ್ಟಿ ತೆಗೆಯಬೇಕಾದ್ರೆ ಕನ್ನಡಿಯೇ ಹೂಡೆದುಹೋಗುತ್ತಂತೆ ಅಷ್ಟೊಂದು ಸುಂದಾರವಾಗಿ ಅಲಂಕಾರ,ಶೃಂಗಾರ ಗೊಂಡಿರುವ ಆಭರಣ ಸುಂದರಿ ಈ ಗ್ರಾಮ ದೇವತೆ..ಮೆರವಣಿಗೆಯಲ್ಲಿ ಡೋಳ್ಳು ಕುಣಿತ, ತಮಟೆ ವಾದ್ಯ, ಬೊಂಬೆ ಆಟ,ಕೀಲ್ ಕುದುರೆ ಕುಣಿತ,ಫಲ ಪಂದ್ಯ,ಚಾಟಿ ಎಟಿನ ಹರಕೆ ಕುಣಿತ,ಪರಶುರಾಮ ನೃತ್ಯ ,ಚಂಡೆ ವಾದ್ಯ,ಹೀಗೆ ಹಲವಾರು ಸಾಂಸ್ಕೃತಿಕಕಾರ್ಯಕ್ರಮಗಳೂಂದಿಗೆ ಗ್ರಾಮದ ರಾಜ ಬೀದಿಯಲ್ಲಿ ಗರ್ಭ ಗುಡಿಯವರೆಗು ಮೆರವಣಿಗೆ ಸಾಗಿತ್ತು.
ಇನ್ನು ಗ್ರಾಮದ ಒಳಿತಿಗಾಗಿ ಗ್ರಾಮದಲ್ಲಿ ಬಡವರು ಶ್ರೀಮಂತರೆನ್ನದೆ ಪ್ರತಿ ಕುಟುಂಬವರ್ಗಗಳು ಗ್ರಾಮ ದೇವತೆಯ ಭಕ್ತಿ ಪರಾಕಟಾಕ್ಷೆಯಲ್ಲಿ ಪಾತ್ರರಾಗಿದ್ದು ವಿಶೇಷ. ಇನ್ನು ದೇವಿಯನ್ನು ನೋಡಲು ಹಲವಾರು ಭಾಗಗಳಿಂದ ಭಕ್ತ ಸಾಗರ ಹರಿದು ಬಂದಿತ್ತು.. ನೀವು ಸಹ ಒಂದು ಬಾರಿ ಶ್ರೀ ದಂಡಿನ ಮಾರಿಯಮ್ಮನ ದರ್ಶನ ಪಡೆದು ಪುನಿತರಾಗಿ.
ಸುದ್ದಿದಿನ.ಕಾ|ವಾಟ್ಸಾಪ್|9986715401
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!