ದಿನದ ಸುದ್ದಿ
ಗುತ್ತಿಗೆ ನೌಕರರ ವೇತನ ಹಾಗೂ ಉದ್ಯೋಗ ಭದ್ರತೆಗಾಗಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ
ಸುದ್ದಿದಿನ ಡೆಸ್ಕ್ | ಸರ್ಕಾರವು ಈಗಾಗಲೇ ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಗೂಳಪಡುವ ಎಲ್ಲಾ ಸಂಸ್ಥೆಗಳ ಸಮೂಹ ಸಿ ವೃಂದದ ಗುತ್ತಿಗೆ ಆಧಾರದ ನೌಕರರನ್ನು ಒಂದು ಬಾರಿಯ ಕ್ರಮವಾಗಿ ಖಾಯಂಗೊಳಿಸಲು ಸರ್ಕಾರದ ಆದೇಶ ಸಂಖ್ಯೆ ಅಕುಕ 167 ಎಂಪಿಎಸ್ 2012 ದಿನಾಂಕ 14, 02, 2013 ರಲ್ಲಿ ಆದೇಶ ನೀಡಿತ್ತು. ಆದರೇ ಸದರಿ ಆದೇಶವನ್ನು ಸರ್ಕಾರದ ಸುತ್ತೂಲೆ ಸಂಖ್ಯೆ ಅಕುಕ 167 ಎಂಪಿಎಸ್ 2012 ದಿನಾಂಕ 3.9.2013 ರಲ್ಲಿ ಹಿಂಪಡೆಯಲಾಯಿತು ಪ್ರಸ್ತುತ ಸರ್ಕಾರ ಪತ್ರ ಸಂಖ್ಯೆ ಅಕುಕ 137 ಎಂಪಿಎಸ್ 2013 ದಿನಾಂಕ O6, ೦1.2014 ರಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಸ್ವಾಯತ್ತ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಮೂಹ ಸಿ ವೃಂದದ ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ಖಾಯಂಗೊಳಿಸಲು ಮೆರಿಟ್ ಮತ್ತು ರೋಸ್ಟರ್ ಹಾಗೂ ಮೀಸಲಾತಿಯನ್ನು ಪಾಲಿಸಾಲಾಗಿದೆಯೆ ಎಂಬ ಮಾಹಿತಿ ಯನ್ನು ನೀಡಲು ಕೋರಲಾಗಿತ್ತು. ಅದರಂತೆ ಈ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಮೂಹ ಸಿವೃಂದದ ಬೋದಕೇತರ ನೌಕರರ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು.
ಈ ಮೇಲ್ಕಂಡಎಲ್ಲಾ ಅಂಶಗಳನ್ನು ತಮ್ಮ ಅವಗಾಹನೆಗೆ ತರುತ್ತಾ ನಮ್ಮ ಪ್ರಮಾಣಿಕ ಸೇವೆಯನ್ನು ಗಣನೆಗೆ ತೆಗೆದುಕೊಂಡು. ಈ ಸಂಸ್ಥೆಯಲ್ಲಿಯೇ ಖಾಲಿ ಇರುವ. ಹುದ್ದೆಗಳಲ್ಲಿ ನಮ್ಮಆರ್ಹತೆ ಹಾಗೂ ನಿರತ ಸೇವೆಯನ್ನು ಪರಿಗಣಿಸಿ ನಮ್ಮನ್ನು ಒಂದು ಬಾರಿಯ ಕ್ರಮವಾಗಿ ಖಾಯಂ ಗೊಳಿಸಲು ಸರ್ಕಾರದಿಂದ ಸೂಕ್ತ ಆದೇಶ ವನ್ನು ಹೊರಡಿಸುವಂತೆ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಸಮೂಹ ಸಿ ವೃಂದದವರು ಗುತ್ತಿಗೆ ನೌಕರರು ಮನವಿಯನ್ನು ಸಲ್ಲಿಸಿದ್ದಾರೆ.
ಹೋರಾಟಕ್ಕೆ ಕರೆ
ಉದ್ಯೋಗಕ್ಕಾಗಿ ಯುವಜನರು ಆಂದೋಲನದ ಭಾಗವಾಗಿರುವ’ಕರ್ನಾಟಕ ರಾಜ್ಯ ಸರ್ಕಾರೀ ಗುತ್ತಿಗೆ ನೌಕರರ ಒಕ್ಕೂಟ’ವು ಗುತ್ತಿಗೆ ನೌಕರರ ಸೇವಾ ಭದ್ರತೆ ಮತ್ತು ಸಮಾನ ವೇತನದ ಹಕ್ಕಿಗಾಗಿ ಹಂತ ಹಂತವಾಗಿ ಮತ್ತು ವ್ಯವಸ್ಥಿತವಾಗಿ ಹೋರಾಟವನ್ನು ವಿಸ್ತರಿಸುತ್ತಿರುವುದು ನಿಮಗೆ ತಿಳಿದೇ ಇದೆ.
ಕಳೆದ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಗಮನ ಸೆಳೆಯಲು ‘ಉದ್ಯೋಗ ಭದ್ರತೆಗೇ ಓಟು’ ಆಂದೋಲನ ರೂಪಿಸಿದುದರ ಫಲವಾಗಿ ಜೆಡಿಎಸ್ ಪಕ್ಷ ಹಾಗೂ ಕೆಲವು ಎಂ.ಎಲ್.ಎ ಅಭ್ಯರ್ಥಿಗಳು ಇದರ ಪರವಾಗಿ ನಿಲ್ಲುವುದಾಗಿ ಚುನಾವಣಾ ಪೂರ್ವದಲ್ಲಿ ಘೋಷಿಸಿದರು.
ಚುನಾವಣಾ ಪೂರ್ವ ಭರವಸೆಯಾದ ರೈತರ ಸಾಲಮನ್ನಾದ ಕುರಿತಾಗಿ ಗಮನ ಹರಿಸುತ್ತಿರುವ ರಾಜ್ಯ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿಗಳು ಇದರ ಬಗ್ಗೆ ಮಾತ್ರ *ಇನ್ನೂ ಸಮಯ ಕೊಡಿ* ಎನ್ನುತ್ತಿದ್ದಾರೆ. ಆದರೆ, ಕೆಲವು ಇಲಾಖೆಗಳಲ್ಲಿ ಗುತ್ತಿಗೆ ನೌಕರರನ್ನು ಕಿತ್ತು ಹಾಕುತ್ತಿರುವ ಮತ್ತು 4-5 ತಿಂಗಳ ವೇತನವನ್ನೇ ಬಿಡುಗಡೆ ಮಾಡದೇ ಇರುವುದನ್ನು ಗಮನಕ್ಕೆ ತಂದರೂ ಕ್ರಮ ತೆಗೆದುಕೊಳ್ಳದೇ ಇರುವುದರಿಂದ ನಮಗೆ ವಿಶ್ವಾಸ ಹುಟ್ಟುತ್ತಿಲ್ಲ. ಹೀಗಾಗಿ 2ನೇ ಅಧಿವೇಶನದ ಹೊತ್ತಿಗೆ ಬೃಹತ್ ಸಂಖ್ಯೆಯಲ್ಲಿ ಮುತ್ತಿಗೆ ಹಾಕಲಾಗುವುದೆಂದು ಮಾರ್ಚ್ 25ರಂದೇ ನಾವು ಘೋಷಿಸಿದ್ದೆವು. ಅದಕ್ಕೆ ತಯಾರಿಯು ವ್ಯವಸ್ಥಿತವಾಗಿ ನಡೆದಿದೆ. ಎಲ್ಲಾ ಜಿಲ್ಲೆಗಳಲ್ಲಿ ಜವಾಬ್ದಾರಿ ವ್ಯಕ್ತಿಗಳು ನಿಯೋಜಿತರಾಗಿದ್ದಾರೆ, ಸದಸ್ಯತ್ವ ನೋಂದಣಿ ನಡೆಯುತ್ತಿದೆ.
ಆದರೆ, ಈ ಸದ್ಯ 5-6 ತಿಂಗಳು ವೇತನ ಸಿಗದೇ ಇರುವ ಹಾಗೂ ಈಗಲೇ ಕೆಲಸ ಕಳೆದುಕೊಳ್ಳುವ ಅಭದ್ರತೆಯಲ್ಲಿರುವ (ಈಗಾಗಲೇ ಕಳೆದುಕೊಂಡಿರುವ) ನೌಕರ ಬಂಧುಗಳ ಜೊತೆಗೆ ನಿಲ್ಲಬೇಕಾದ್ದು ನಮ್ಮ ಕರ್ತವ್ಯ. ಅಂತಹ ಗುತ್ತಿಗೆ ನೌಕರರು ಇದೇ ಆಗಸ್ಟ್ 20ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ಯೋಜಿಸಿದ್ದಾರೆ. ವೇತನವಿಲ್ಲದಿರುವುದರಿಂದ ‘ಊಟದ ವ್ಯವಸ್ಥೆ ಮಾಡಿಕೊಳ್ಳದೇ’ ಸತ್ಯಾಗ್ರಹ ಮಾಡುವುದಾಗಿ ಘೋಷಿಸಿದ್ದಾರೆ. ಅವರ ಪರವಾಗಿ ನಿಲ್ಲುವುದು ನಮ್ಮ ಕರ್ತವ್ಯ. ಯಾವ ಇಲಾಖೆಗಳವರು ವೇತನವಿಲ್ಲದೇ, ಕೆಲಸ ಕಳೆದುಕೊಳ್ಳುವ ಸಮಸ್ಯೆಯಲ್ಲಿದ್ದಾರೋ ಅವರು ಶಾಮಿಯಾನ, ಧ್ವನಿವರ್ಧಕ ಮತ್ತಿತರ ವ್ಯವಸ್ಥೆಗೆ (ಮಳೆ ಬರುವ ಸಾಧ್ಯತೆ ಇರುವುದರಿಂದ ಶೀಟ್ ಟೆಂಟೇ ಹಾಕಬೇಕು) ಇಲಾಖೆಯೊಂದಕ್ಕೆ 25,000 ರೂಅನ್ನು ಸಂಗ್ರಹ ಮಾಡಿಕೊಡುತ್ತಾರೆ. (ಆಯಾ ಇಲಾಖೆಯವರೂ ಇದನ್ನು ಗಮನಿಸಬೇಕು).
ಉಳಿದಂತೆ, ಮಿಕ್ಕ ಇಲಾಖೆಗಳ/ಜಿಲ್ಲೆಗಳ ಗುತ್ತಿಗೆ ನೌಕರರು ಒಂದೊಂದು ದಿನದ ಊಟದ ವ್ಯವಸ್ಥೆಯನ್ನು ಮಾಡಬೇಕೆಂದು ಕೋರುತ್ತೇವೆ. ಒಂದು ವೇಳೆ 4-5 ದಿನದಲ್ಲಿ ಇದು ಬಗೆಹರಿಯದೇ ಇದ್ದರೆ, ಸತ್ಯಾಗ್ರಹಿಗಳು ಉಪವಾಸ ಸತ್ಯಾಗ್ರಹವನ್ನೇ ಮಾಡಬೇಕಾಗುತ್ತದೆ; ಆಗ ಉಳಿದ ಇಲಾಖೆಗಳ ನೌಕರರು ಬೆಂಬಲಿಸಿ ಬೆಂಗಳೂರಿಗೆ ಬರಬೇಕಾಗುತ್ತದೆ.
ಬನ್ನಿ, 2ನೇ ಅಧಿವೇಶನದ ಬೃಹತ್ ಹೋರಾಟಕ್ಕೆ ಮುಂಚಿತವಾಗಿ ನಮ್ಮ ಗುತ್ತಿಗೆ ನೌಕರ ಬಂಧುಗಳ ತಕ್ಷಣದ ಸಮಸ್ಯೆಯ ಸಂದರ್ಭದಲ್ಲಿ ಜೊತೆಯಾಗೋಣ.
ಕರ್ನಾಟಕ ಸರ್ಕಾರೀ ಗುತ್ತಿಗೆ ನೌಕರರ ಒಕ್ಕೂಟ
ಸಂಪರ್ಕ: ಕಚೇರಿ ಉಸ್ತುವಾರಿ – ಚಂದನ್ ಕುಮಾರ್ : 9972756667

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ7 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ6 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

