ದಿನದ ಸುದ್ದಿ
ತತಕ್ಷಣ ಕೆರೆಗಳಿಗೆ ನೀರು ತುಂಬಿಸಿ: ಸಿ.ಎಸ್.ಪುಟ್ಟರಾಜು
ಸುದ್ದಿದಿನ,ಮಂಡ್ಯ: ವಿಶ್ವೇಶ್ವರಯ್ಯ ನಾಲೆ ಹಾಗೂ ಹೇಮಾವತಿ ನಾಲೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳನ್ನು ತತಕ್ಷಣದಲ್ಲಿ ತುಂಬಿಸಲು ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಣ್ಣ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದ್ದಾರೆ.
ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನೀರಾವರಿ ಇಲಾಖೆ ಹಾಗೂ ಇಂಧನ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದೆಲ್ಲೆಡೆ ಉತ್ತಮ ಮಳೆಯಾದರೂ ಕಾವೇರಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕೊನೆ ಭಾಗದ ಕೆರೆಗಳು ತುಂಬದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಿಷಯವಾಗಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸದಂತಾಗಿದೆ ಎಂದರು.
ಕೃಷಿ ಚಟುವಟಿಕೆಗೆ, ನೀರೇ ಜೀವಾಳವಾಗಿದ್ದು, ಮಂಡ್ಯ ಜಿಲ್ಲೆಯ ರೈತರಿಗೆ ನೀರಿಗೆ ಸಂಬಂಧಿಸಿದಂತೆ ಯಾವುದೇ ತೊಂದರೆಗೊಳಗಾಗಬಾರದು. ನೀರಾವರಿ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕಿದ್ದು, ನಿರ್ಲಕ್ಷ್ಯ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿದ್ರ್ಯಾಕ್ಷಿಣ್ಯವಾಗಿ ಕ್ರಮವಹಿಸಲು ಮುಂದಾಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಾಲೆಗಳ ನಿರ್ಮಾಣಕ್ಕೆ ರೈತರಿಂದ ಪಡೆದಿರುವ ಭೂಮಿಗೆ ಪರಿಹಾರ ನೀಡಿಲ್ಲವೆಂದು ರೈತರಿಂದ ದೂರುಗಳು ಕೇಳಿಬಂದಿವೆ. ಅಭಿವೃದ್ಧಿ ಕಾರ್ಯಕ್ಕೆಂದು ರೈತರು ನೀಡಿರುವ ಭೂಮಿಗೆ ತತಕ್ಷಣದಲ್ಲಿ ಕಾವೇರಿ ನೀರಾವರಿ ನಿಗಮವು ಪರಿಹಾರವನ್ನು ಒದಗಿಸಬೇಕು. ಇಲ್ಲದಿದ್ದಲ್ಲಿ ಮುಂದೆ ಕೈಗೊಳ್ಳಬೇಕಾಗುವ ಅಭಿವೃದ್ಧಿ ಕೆಲಸಗಳಿಗೆ ರೈತರು ಭೂಮಿಕೊಡಲು ಮುಂದಾಗುವುದಿಲ್ಲ. ವಿಷಯದ ಸೂಕ್ಷ್ಮತೆ ಅರಿತು ಅಧಿಕಾರಿಗಳು ಬಹಳ ಎಚ್ಚರ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ನೀರನ್ನು ನಿರ್ವಹಣೆ ಮಾಡುವ ಸವಡೆಗಳಿಗೆ ಸರಿಯಾಗಿ ಪತ್ರಿ ತಿಂಗಳು ಸಂಬಳವಾಗುತ್ತಿಲ್ಲ. ಕೋರ್ಟ್ ಆದೇಶವಿದ್ದರೂ ಕೆಲಸಕ್ಕೆ ಸರಿಯಾದ ಸಮಾನ ವೇತನ ನೀಡದಿರುವ, ಇತರೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತ ಬರುತ್ತಿದ್ದಾರೆ ಎಂದು ಸವಡೆಗಳು ಅಳಲನ್ನು ತೋಡಿಕೊಂಡಿದ್ದಾರೆ ಎಂದ ಸಚಿವರು, ಯಾವುದೇ ಕಾರಣಕ್ಕೂ ರೈತರು ತೊಂದರೆ ಅನುಭವಿಸಬಾರದು. ನೀರು ನಿರ್ವಹಣೆ ಮಾಡುವುದು ಸವಡೆಗಳ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಸವಡೆಗಳ ಸಮಸ್ಯೆಗಳನ್ನು ಅರಿತಿರುವುದರಿಂದ, ಸದ್ಯದಲ್ಲೇ ಅವರ ಸಮಸ್ಯೆಯನ್ನು ಮುಖ್ಯಮಂತ್ರಿಗಳು ಹಾಗೂ ಬಾರಿ ನೀರಾವರಿ ಸಚಿವರ ಗಮನಕ್ಕೆ ತಂದು, ಸವಡೆಗಳ ಸಮಸ್ಯೆಗಳಿಗೆ ಪರಿಹಾರ ಕೊಡಿಸಲಾಗುವುದು ಎಂದು ಹೇಳಿದರು.
ರೈತರಿಗೆ ವಿದ್ಯುತ್ ಬಹಳ ಅವಶ್ಯಕವಾಗಿದ್ದು, ಸೆಸ್ಕ್ ಅಧಿಕಾರಿಗಳು ಶಾಸಕರುಗಳೊಂದಿಗೆ ಚರ್ಚಿಸಿ, ವಿಧಾನಸಭಾ ಕ್ಷೇತ್ರವಾರು ಬೇಕಾಗುವ ಸಬ್ ಸ್ಟೇಷನ್ಗಳ ಪಟ್ಟಿಯನ್ನು ಸಿದ್ಧಪಡಿಸಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಶೀಘ್ರ ಸಲ್ಲಿಸಬೇಕು. ರೈತರಿಗೆ ವಿದ್ಯುತ್ ಸರಬರಾಜಿನಲ್ಲಿ ಕೊರತೆಯಾಗಬಾರದು ಎಂದು ಹೇಳಿದ ಸಚಿವರು ಗ್ರಾಮಾಂತರ ಪ್ರದೇಶದಲ್ಲಿ ರಾತ್ರಿಯ ವೇಳೆ ಹೆಚ್ಚಿನ ಸಮಯ ವಿದ್ಯುತ್ ಸರಬರಾಜು ಮಾಡುತ್ತಿರುವುದರಿಂದ, ರೈತರು ರಾತ್ರಿಯ ವೇಳೆ ನಿದ್ರಿಸದೆ ವಿದ್ಯುತ್ಗಾಗಿ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಸೆಸ್ಕ್ ಅಧಿಕಾರಿಗಳು ನಿರಂತರ ವಿದ್ಯುತ್ ಸರಬರಾಜು ಮಾಡಲು ಅನುಕೂಲವಾಗುವಂತೆ ಮುಂದಿನ 25 ವರ್ಷವನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ಯೋಜನೆಯನ್ನು ರೂಪಿಸಿ ವರದಿಯನ್ನು ಸಲ್ಲಿಸಲು ತಿಳಿಸಿದರು.
ಮಂಡ್ಯ ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶವನ್ನು ಗಮನದಲ್ಲಿಟ್ಟುಕೊಂಡು, ಸೆಸ್ಕ್ ಅಧಿಕಾರಿಗಳು ವಿಶೇಷ ಯೋಜನೆಯನ್ನು ಸಿದ್ಧಪಡಿಸಬೇಕು. ಇಂಧನ ಖಾತೆ ಮುಖ್ಯಮಂತ್ರಿಯವರ ಬಳಿ ಇರುವುದರಿಂದ, ರೈತರ ಹಿತದೃಷ್ಟಿಯಿಂದ ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸಲು ತುಂಬ ಸಮಯಾವಕಾಶ ಬೇಕಾಗುವುದಿಲ್ಲ. ಮುಂದಿನ ದಿನಗಳಲ್ಲಿ ಟ್ರಾನ್ಸ್ಫಾರ್ಮರ್ಸ್, ವಿದ್ಯುತ್ ಕಂಬ ಅಥವಾ ಯಾವುದೇ ವಸ್ತುಗಳ ಕೊರತೆ ನೆಪವನ್ನು ಸೆÀಸ್ಕ್ ಅಧಿಕಾರಿಗಳು ನೀಡದೆ, ನಿರಂತರ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಇಂಧನ ಇಲಾಖೆಯಲ್ಲಿ ಕಾರ್ಯೋನ್ಮಖರಾಗಬೇಕು ಎಂದು ತಿಳಿಸಿದರು.
ಶಾಸಕರುಗಳಾದ ಎಂ.ಶ್ರೀನಿವಾಸ್, ಅನ್ನದಾನಿ, ಸುರೇಶ್ಗೌಡ, ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಎನ್.ಅಪ್ಪಾಜಿಗೌಡ ಹಾಗೂ ಕೆ.ಟಿ.ಶ್ರೀಂಠೇಗೌಡ ಅವರುಗಳು ಮಾತನಾಡಿ ಮಂಡ್ಯ ಜಿಲ್ಲೆಯಲ್ಲಿರುವ ಬಹಳಷ್ಟು ನಾಲೆಗಳು ಇದ್ದೂ ಇಲ್ಲದಂತಾಗಿದೆ. ನಾಲೆಗಳಲ್ಲಿ ಗಿಡಗಂಟೆಗಳು ಬೆಳೆದುನಿಂತಿದ್ದು , ಹೂಳು ನಾಲೆಗಳನ್ನು ಆವರಿಸಿಕೊಂಡಿದೆ. ಮೊದಲು ಗಿಡÉಗಂಟೆಗಳು ಹಾಗೂ ಹೂಳನ್ನು ತೆರವುಗೊಳಿಸಬೇಕು. ನಾಲೆಗಳಿಗೆ ಸರಾಗವಾಗಿ ನೀರು ಬರದಿರಲು ಇದು ಒಂದು ಮುಖ್ಯ ಕಾರಣವಾಗಿದ್ದು, ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು ಒಮ್ಮತದಲ್ಲಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪ್ರಸನ್ನ, ಅಧೀಕ್ಷಕ ಇಂಜಿನಿಯರ್ ಅಮರ್ನಾಥ್,ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯನಿರ್ವಾಹಣಾಧಿಕಾರಿ ಯಾಲಕ್ಕಿಗೌಡ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ10 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ9 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

