ದಿನದ ಸುದ್ದಿ
ತತಕ್ಷಣ ಕೆರೆಗಳಿಗೆ ನೀರು ತುಂಬಿಸಿ: ಸಿ.ಎಸ್.ಪುಟ್ಟರಾಜು
ಸುದ್ದಿದಿನ,ಮಂಡ್ಯ: ವಿಶ್ವೇಶ್ವರಯ್ಯ ನಾಲೆ ಹಾಗೂ ಹೇಮಾವತಿ ನಾಲೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳನ್ನು ತತಕ್ಷಣದಲ್ಲಿ ತುಂಬಿಸಲು ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಣ್ಣ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದ್ದಾರೆ.
ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನೀರಾವರಿ ಇಲಾಖೆ ಹಾಗೂ ಇಂಧನ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದೆಲ್ಲೆಡೆ ಉತ್ತಮ ಮಳೆಯಾದರೂ ಕಾವೇರಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕೊನೆ ಭಾಗದ ಕೆರೆಗಳು ತುಂಬದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಿಷಯವಾಗಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸದಂತಾಗಿದೆ ಎಂದರು.
ಕೃಷಿ ಚಟುವಟಿಕೆಗೆ, ನೀರೇ ಜೀವಾಳವಾಗಿದ್ದು, ಮಂಡ್ಯ ಜಿಲ್ಲೆಯ ರೈತರಿಗೆ ನೀರಿಗೆ ಸಂಬಂಧಿಸಿದಂತೆ ಯಾವುದೇ ತೊಂದರೆಗೊಳಗಾಗಬಾರದು. ನೀರಾವರಿ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕಿದ್ದು, ನಿರ್ಲಕ್ಷ್ಯ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿದ್ರ್ಯಾಕ್ಷಿಣ್ಯವಾಗಿ ಕ್ರಮವಹಿಸಲು ಮುಂದಾಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಾಲೆಗಳ ನಿರ್ಮಾಣಕ್ಕೆ ರೈತರಿಂದ ಪಡೆದಿರುವ ಭೂಮಿಗೆ ಪರಿಹಾರ ನೀಡಿಲ್ಲವೆಂದು ರೈತರಿಂದ ದೂರುಗಳು ಕೇಳಿಬಂದಿವೆ. ಅಭಿವೃದ್ಧಿ ಕಾರ್ಯಕ್ಕೆಂದು ರೈತರು ನೀಡಿರುವ ಭೂಮಿಗೆ ತತಕ್ಷಣದಲ್ಲಿ ಕಾವೇರಿ ನೀರಾವರಿ ನಿಗಮವು ಪರಿಹಾರವನ್ನು ಒದಗಿಸಬೇಕು. ಇಲ್ಲದಿದ್ದಲ್ಲಿ ಮುಂದೆ ಕೈಗೊಳ್ಳಬೇಕಾಗುವ ಅಭಿವೃದ್ಧಿ ಕೆಲಸಗಳಿಗೆ ರೈತರು ಭೂಮಿಕೊಡಲು ಮುಂದಾಗುವುದಿಲ್ಲ. ವಿಷಯದ ಸೂಕ್ಷ್ಮತೆ ಅರಿತು ಅಧಿಕಾರಿಗಳು ಬಹಳ ಎಚ್ಚರ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ನೀರನ್ನು ನಿರ್ವಹಣೆ ಮಾಡುವ ಸವಡೆಗಳಿಗೆ ಸರಿಯಾಗಿ ಪತ್ರಿ ತಿಂಗಳು ಸಂಬಳವಾಗುತ್ತಿಲ್ಲ. ಕೋರ್ಟ್ ಆದೇಶವಿದ್ದರೂ ಕೆಲಸಕ್ಕೆ ಸರಿಯಾದ ಸಮಾನ ವೇತನ ನೀಡದಿರುವ, ಇತರೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತ ಬರುತ್ತಿದ್ದಾರೆ ಎಂದು ಸವಡೆಗಳು ಅಳಲನ್ನು ತೋಡಿಕೊಂಡಿದ್ದಾರೆ ಎಂದ ಸಚಿವರು, ಯಾವುದೇ ಕಾರಣಕ್ಕೂ ರೈತರು ತೊಂದರೆ ಅನುಭವಿಸಬಾರದು. ನೀರು ನಿರ್ವಹಣೆ ಮಾಡುವುದು ಸವಡೆಗಳ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಸವಡೆಗಳ ಸಮಸ್ಯೆಗಳನ್ನು ಅರಿತಿರುವುದರಿಂದ, ಸದ್ಯದಲ್ಲೇ ಅವರ ಸಮಸ್ಯೆಯನ್ನು ಮುಖ್ಯಮಂತ್ರಿಗಳು ಹಾಗೂ ಬಾರಿ ನೀರಾವರಿ ಸಚಿವರ ಗಮನಕ್ಕೆ ತಂದು, ಸವಡೆಗಳ ಸಮಸ್ಯೆಗಳಿಗೆ ಪರಿಹಾರ ಕೊಡಿಸಲಾಗುವುದು ಎಂದು ಹೇಳಿದರು.
ರೈತರಿಗೆ ವಿದ್ಯುತ್ ಬಹಳ ಅವಶ್ಯಕವಾಗಿದ್ದು, ಸೆಸ್ಕ್ ಅಧಿಕಾರಿಗಳು ಶಾಸಕರುಗಳೊಂದಿಗೆ ಚರ್ಚಿಸಿ, ವಿಧಾನಸಭಾ ಕ್ಷೇತ್ರವಾರು ಬೇಕಾಗುವ ಸಬ್ ಸ್ಟೇಷನ್ಗಳ ಪಟ್ಟಿಯನ್ನು ಸಿದ್ಧಪಡಿಸಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಶೀಘ್ರ ಸಲ್ಲಿಸಬೇಕು. ರೈತರಿಗೆ ವಿದ್ಯುತ್ ಸರಬರಾಜಿನಲ್ಲಿ ಕೊರತೆಯಾಗಬಾರದು ಎಂದು ಹೇಳಿದ ಸಚಿವರು ಗ್ರಾಮಾಂತರ ಪ್ರದೇಶದಲ್ಲಿ ರಾತ್ರಿಯ ವೇಳೆ ಹೆಚ್ಚಿನ ಸಮಯ ವಿದ್ಯುತ್ ಸರಬರಾಜು ಮಾಡುತ್ತಿರುವುದರಿಂದ, ರೈತರು ರಾತ್ರಿಯ ವೇಳೆ ನಿದ್ರಿಸದೆ ವಿದ್ಯುತ್ಗಾಗಿ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಸೆಸ್ಕ್ ಅಧಿಕಾರಿಗಳು ನಿರಂತರ ವಿದ್ಯುತ್ ಸರಬರಾಜು ಮಾಡಲು ಅನುಕೂಲವಾಗುವಂತೆ ಮುಂದಿನ 25 ವರ್ಷವನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ಯೋಜನೆಯನ್ನು ರೂಪಿಸಿ ವರದಿಯನ್ನು ಸಲ್ಲಿಸಲು ತಿಳಿಸಿದರು.
ಮಂಡ್ಯ ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶವನ್ನು ಗಮನದಲ್ಲಿಟ್ಟುಕೊಂಡು, ಸೆಸ್ಕ್ ಅಧಿಕಾರಿಗಳು ವಿಶೇಷ ಯೋಜನೆಯನ್ನು ಸಿದ್ಧಪಡಿಸಬೇಕು. ಇಂಧನ ಖಾತೆ ಮುಖ್ಯಮಂತ್ರಿಯವರ ಬಳಿ ಇರುವುದರಿಂದ, ರೈತರ ಹಿತದೃಷ್ಟಿಯಿಂದ ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸಲು ತುಂಬ ಸಮಯಾವಕಾಶ ಬೇಕಾಗುವುದಿಲ್ಲ. ಮುಂದಿನ ದಿನಗಳಲ್ಲಿ ಟ್ರಾನ್ಸ್ಫಾರ್ಮರ್ಸ್, ವಿದ್ಯುತ್ ಕಂಬ ಅಥವಾ ಯಾವುದೇ ವಸ್ತುಗಳ ಕೊರತೆ ನೆಪವನ್ನು ಸೆÀಸ್ಕ್ ಅಧಿಕಾರಿಗಳು ನೀಡದೆ, ನಿರಂತರ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಇಂಧನ ಇಲಾಖೆಯಲ್ಲಿ ಕಾರ್ಯೋನ್ಮಖರಾಗಬೇಕು ಎಂದು ತಿಳಿಸಿದರು.
ಶಾಸಕರುಗಳಾದ ಎಂ.ಶ್ರೀನಿವಾಸ್, ಅನ್ನದಾನಿ, ಸುರೇಶ್ಗೌಡ, ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಎನ್.ಅಪ್ಪಾಜಿಗೌಡ ಹಾಗೂ ಕೆ.ಟಿ.ಶ್ರೀಂಠೇಗೌಡ ಅವರುಗಳು ಮಾತನಾಡಿ ಮಂಡ್ಯ ಜಿಲ್ಲೆಯಲ್ಲಿರುವ ಬಹಳಷ್ಟು ನಾಲೆಗಳು ಇದ್ದೂ ಇಲ್ಲದಂತಾಗಿದೆ. ನಾಲೆಗಳಲ್ಲಿ ಗಿಡಗಂಟೆಗಳು ಬೆಳೆದುನಿಂತಿದ್ದು , ಹೂಳು ನಾಲೆಗಳನ್ನು ಆವರಿಸಿಕೊಂಡಿದೆ. ಮೊದಲು ಗಿಡÉಗಂಟೆಗಳು ಹಾಗೂ ಹೂಳನ್ನು ತೆರವುಗೊಳಿಸಬೇಕು. ನಾಲೆಗಳಿಗೆ ಸರಾಗವಾಗಿ ನೀರು ಬರದಿರಲು ಇದು ಒಂದು ಮುಖ್ಯ ಕಾರಣವಾಗಿದ್ದು, ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು ಒಮ್ಮತದಲ್ಲಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪ್ರಸನ್ನ, ಅಧೀಕ್ಷಕ ಇಂಜಿನಿಯರ್ ಅಮರ್ನಾಥ್,ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯನಿರ್ವಾಹಣಾಧಿಕಾರಿ ಯಾಲಕ್ಕಿಗೌಡ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.
ಸೇವೆಯನ್ನು ಈ ಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.
ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಶಿಷ್ಯ ವೇತನ ನೀಡಲಾಗುವುದು. ತರಬೇತಿಯು 2026 ರ ಜನವರಿಯಿಂದ ಡಿಸೆಂಬರ್ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.
ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದಿರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ6 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
-
ದಿನದ ಸುದ್ದಿ3 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ2 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ2 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ2 hours agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

