Connect with us

ದಿನದ ಸುದ್ದಿ

ತತಕ್ಷಣ ಕೆರೆಗಳಿಗೆ ನೀರು ತುಂಬಿಸಿ: ಸಿ.ಎಸ್.ಪುಟ್ಟರಾಜು

Published

on

ಸುದ್ದಿದಿನ,ಮಂಡ್ಯ: ವಿಶ್ವೇಶ್ವರಯ್ಯ ನಾಲೆ ಹಾಗೂ ಹೇಮಾವತಿ ನಾಲೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳನ್ನು ತತಕ್ಷಣದಲ್ಲಿ ತುಂಬಿಸಲು ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಣ್ಣ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದ್ದಾರೆ.

ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನೀರಾವರಿ ಇಲಾಖೆ ಹಾಗೂ ಇಂಧನ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದೆಲ್ಲೆಡೆ ಉತ್ತಮ ಮಳೆಯಾದರೂ ಕಾವೇರಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕೊನೆ ಭಾಗದ ಕೆರೆಗಳು ತುಂಬದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಿಷಯವಾಗಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸದಂತಾಗಿದೆ ಎಂದರು.

ಕೃಷಿ ಚಟುವಟಿಕೆಗೆ, ನೀರೇ ಜೀವಾಳವಾಗಿದ್ದು, ಮಂಡ್ಯ ಜಿಲ್ಲೆಯ ರೈತರಿಗೆ ನೀರಿಗೆ ಸಂಬಂಧಿಸಿದಂತೆ ಯಾವುದೇ ತೊಂದರೆಗೊಳಗಾಗಬಾರದು. ನೀರಾವರಿ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕಿದ್ದು, ನಿರ್ಲಕ್ಷ್ಯ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿದ್ರ್ಯಾಕ್ಷಿಣ್ಯವಾಗಿ ಕ್ರಮವಹಿಸಲು ಮುಂದಾಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಾಲೆಗಳ ನಿರ್ಮಾಣಕ್ಕೆ ರೈತರಿಂದ ಪಡೆದಿರುವ ಭೂಮಿಗೆ ಪರಿಹಾರ ನೀಡಿಲ್ಲವೆಂದು ರೈತರಿಂದ ದೂರುಗಳು ಕೇಳಿಬಂದಿವೆ. ಅಭಿವೃದ್ಧಿ ಕಾರ್ಯಕ್ಕೆಂದು ರೈತರು ನೀಡಿರುವ ಭೂಮಿಗೆ ತತಕ್ಷಣದಲ್ಲಿ ಕಾವೇರಿ ನೀರಾವರಿ ನಿಗಮವು ಪರಿಹಾರವನ್ನು ಒದಗಿಸಬೇಕು. ಇಲ್ಲದಿದ್ದಲ್ಲಿ ಮುಂದೆ ಕೈಗೊಳ್ಳಬೇಕಾಗುವ ಅಭಿವೃದ್ಧಿ ಕೆಲಸಗಳಿಗೆ ರೈತರು ಭೂಮಿಕೊಡಲು ಮುಂದಾಗುವುದಿಲ್ಲ. ವಿಷಯದ ಸೂಕ್ಷ್ಮತೆ ಅರಿತು ಅಧಿಕಾರಿಗಳು ಬಹಳ ಎಚ್ಚರ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ನೀರನ್ನು ನಿರ್ವಹಣೆ ಮಾಡುವ ಸವಡೆಗಳಿಗೆ ಸರಿಯಾಗಿ ಪತ್ರಿ ತಿಂಗಳು ಸಂಬಳವಾಗುತ್ತಿಲ್ಲ. ಕೋರ್ಟ್ ಆದೇಶವಿದ್ದರೂ ಕೆಲಸಕ್ಕೆ ಸರಿಯಾದ ಸಮಾನ ವೇತನ ನೀಡದಿರುವ, ಇತರೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತ ಬರುತ್ತಿದ್ದಾರೆ ಎಂದು ಸವಡೆಗಳು ಅಳಲನ್ನು ತೋಡಿಕೊಂಡಿದ್ದಾರೆ ಎಂದ ಸಚಿವರು, ಯಾವುದೇ ಕಾರಣಕ್ಕೂ ರೈತರು ತೊಂದರೆ ಅನುಭವಿಸಬಾರದು. ನೀರು ನಿರ್ವಹಣೆ ಮಾಡುವುದು ಸವಡೆಗಳ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಸವಡೆಗಳ ಸಮಸ್ಯೆಗಳನ್ನು ಅರಿತಿರುವುದರಿಂದ, ಸದ್ಯದಲ್ಲೇ ಅವರ ಸಮಸ್ಯೆಯನ್ನು ಮುಖ್ಯಮಂತ್ರಿಗಳು ಹಾಗೂ ಬಾರಿ ನೀರಾವರಿ ಸಚಿವರ ಗಮನಕ್ಕೆ ತಂದು, ಸವಡೆಗಳ ಸಮಸ್ಯೆಗಳಿಗೆ ಪರಿಹಾರ ಕೊಡಿಸಲಾಗುವುದು ಎಂದು ಹೇಳಿದರು.

ರೈತರಿಗೆ ವಿದ್ಯುತ್ ಬಹಳ ಅವಶ್ಯಕವಾಗಿದ್ದು, ಸೆಸ್ಕ್ ಅಧಿಕಾರಿಗಳು ಶಾಸಕರುಗಳೊಂದಿಗೆ ಚರ್ಚಿಸಿ, ವಿಧಾನಸಭಾ ಕ್ಷೇತ್ರವಾರು ಬೇಕಾಗುವ ಸಬ್ ಸ್ಟೇಷನ್‍ಗಳ ಪಟ್ಟಿಯನ್ನು ಸಿದ್ಧಪಡಿಸಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಶೀಘ್ರ ಸಲ್ಲಿಸಬೇಕು. ರೈತರಿಗೆ ವಿದ್ಯುತ್ ಸರಬರಾಜಿನಲ್ಲಿ ಕೊರತೆಯಾಗಬಾರದು ಎಂದು ಹೇಳಿದ ಸಚಿವರು ಗ್ರಾಮಾಂತರ ಪ್ರದೇಶದಲ್ಲಿ ರಾತ್ರಿಯ ವೇಳೆ ಹೆಚ್ಚಿನ ಸಮಯ ವಿದ್ಯುತ್ ಸರಬರಾಜು ಮಾಡುತ್ತಿರುವುದರಿಂದ, ರೈತರು ರಾತ್ರಿಯ ವೇಳೆ ನಿದ್ರಿಸದೆ ವಿದ್ಯುತ್‍ಗಾಗಿ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಸೆಸ್ಕ್ ಅಧಿಕಾರಿಗಳು ನಿರಂತರ ವಿದ್ಯುತ್ ಸರಬರಾಜು ಮಾಡಲು ಅನುಕೂಲವಾಗುವಂತೆ ಮುಂದಿನ 25 ವರ್ಷವನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ಯೋಜನೆಯನ್ನು ರೂಪಿಸಿ ವರದಿಯನ್ನು ಸಲ್ಲಿಸಲು ತಿಳಿಸಿದರು.

ಮಂಡ್ಯ ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶವನ್ನು ಗಮನದಲ್ಲಿಟ್ಟುಕೊಂಡು, ಸೆಸ್ಕ್ ಅಧಿಕಾರಿಗಳು ವಿಶೇಷ ಯೋಜನೆಯನ್ನು ಸಿದ್ಧಪಡಿಸಬೇಕು. ಇಂಧನ ಖಾತೆ ಮುಖ್ಯಮಂತ್ರಿಯವರ ಬಳಿ ಇರುವುದರಿಂದ, ರೈತರ ಹಿತದೃಷ್ಟಿಯಿಂದ ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸಲು ತುಂಬ ಸಮಯಾವಕಾಶ ಬೇಕಾಗುವುದಿಲ್ಲ. ಮುಂದಿನ ದಿನಗಳಲ್ಲಿ ಟ್ರಾನ್ಸ್‍ಫಾರ್ಮರ್ಸ್, ವಿದ್ಯುತ್ ಕಂಬ ಅಥವಾ ಯಾವುದೇ ವಸ್ತುಗಳ ಕೊರತೆ ನೆಪವನ್ನು ಸೆÀಸ್ಕ್ ಅಧಿಕಾರಿಗಳು ನೀಡದೆ, ನಿರಂತರ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಇಂಧನ ಇಲಾಖೆಯಲ್ಲಿ ಕಾರ್ಯೋನ್ಮಖರಾಗಬೇಕು ಎಂದು ತಿಳಿಸಿದರು.

ಶಾಸಕರುಗಳಾದ ಎಂ.ಶ್ರೀನಿವಾಸ್, ಅನ್ನದಾನಿ, ಸುರೇಶ್‍ಗೌಡ, ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಎನ್.ಅಪ್ಪಾಜಿಗೌಡ ಹಾಗೂ ಕೆ.ಟಿ.ಶ್ರೀಂಠೇಗೌಡ ಅವರುಗಳು ಮಾತನಾಡಿ ಮಂಡ್ಯ ಜಿಲ್ಲೆಯಲ್ಲಿರುವ ಬಹಳಷ್ಟು ನಾಲೆಗಳು ಇದ್ದೂ ಇಲ್ಲದಂತಾಗಿದೆ. ನಾಲೆಗಳಲ್ಲಿ ಗಿಡಗಂಟೆಗಳು ಬೆಳೆದುನಿಂತಿದ್ದು , ಹೂಳು ನಾಲೆಗಳನ್ನು ಆವರಿಸಿಕೊಂಡಿದೆ. ಮೊದಲು ಗಿಡÉಗಂಟೆಗಳು ಹಾಗೂ ಹೂಳನ್ನು ತೆರವುಗೊಳಿಸಬೇಕು. ನಾಲೆಗಳಿಗೆ ಸರಾಗವಾಗಿ ನೀರು ಬರದಿರಲು ಇದು ಒಂದು ಮುಖ್ಯ ಕಾರಣವಾಗಿದ್ದು, ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು ಒಮ್ಮತದಲ್ಲಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪ್ರಸನ್ನ, ಅಧೀಕ್ಷಕ ಇಂಜಿನಿಯರ್ ಅಮರ್‍ನಾಥ್,ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯನಿರ್ವಾಹಣಾಧಿಕಾರಿ ಯಾಲಕ್ಕಿಗೌಡ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಪಿ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನಾಗರಾಜ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಗಳೂರು | ಸಿಡಿಲು ಬಡಿದು ಇಬ್ಬರು ರೈತರು ಸಾವು

Published

on

ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಬಂದ ಕಾರಣ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ; ನಾಡಿದ್ದು ವಿಧ್ಯುಕ್ತ ಚಾಲನೆ

Published

on

ಸುದ್ದಿದಿನ, ಬೆಂಗಳೂರು : ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.

ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಇದೇ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದೆ.

ಈ ಯೋಜನೆಗೆ ರಾಜ್ಯಾದ್ಯಂತ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಯೋಜನೆಗೆ ಏಕಕಾಲಕ್ಕೆ ಚಾಲನೆ ನೀಡಲಿದ್ದು, ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲಾ ವರ್ಗಗಳ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್‌ಗಳನ್ನು ಹೊರತುಪಡಿಸಿ ಇತರ ಎಲ್ಲಾ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುವುದು. ಇದರಿಂದ ಶೇಕಡ 94 ರಷ್ಟು ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬಸ್‌ಗಳಲ್ಲಿ ಶೇ. 50 ರಷ್ಟು ಆಸನಗಳನ್ನು ಪುರುಷರಿಗೆ ಮೀಸಲಿರಿಸಲಾಗುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ17 hours ago

ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2023-24 ನೇ ಸಾಲಿನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ...

ದಿನದ ಸುದ್ದಿ18 hours ago

ಜಗಳೂರು | ಸಿಡಿಲು ಬಡಿದು ಇಬ್ಬರು ರೈತರು ಸಾವು

ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಜಮೀನಿನಲ್ಲಿ ಕೆಲಸ...

ದಿನದ ಸುದ್ದಿ1 day ago

ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ; ನಾಡಿದ್ದು ವಿಧ್ಯುಕ್ತ ಚಾಲನೆ

ಸುದ್ದಿದಿನ, ಬೆಂಗಳೂರು : ಸರ್ಕಾರದ ಗ್ಯಾರಂಟಿ ಘೋಷಣೆಗಳಲ್ಲೊಂದಾದ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿದ್ದು ವಿಧ್ಯುಕ್ತ...

ದಿನದ ಸುದ್ದಿ1 day ago

ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಹೆಚ್ಚು ಅರ್ಜಿಗಳ ನಿರೀಕ್ಷೆ : ಸಚಿವ ಕೃಷ್ಣ ಬೈರೇಗೌಡ

ಸುದ್ದಿದಿನ, ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಡಿ 1 ಕೋಟಿ 30 ಲಕ್ಷ ಅರ್ಜಿಗಳು ಬರುವ ನಿರೀಕ್ಷೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

ದಿನದ ಸುದ್ದಿ2 days ago

ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...

ದಿನದ ಸುದ್ದಿ2 days ago

ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ...

ದಿನದ ಸುದ್ದಿ3 days ago

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ...

ದಿನದ ಸುದ್ದಿ3 days ago

ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ...

ದಿನದ ಸುದ್ದಿ3 days ago

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ...

ದಿನದ ಸುದ್ದಿ3 days ago

ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡಲು ಒತ್ತಾಯ

ಸುದ್ದಿದಿನ ಡೆಸ್ಕ್ : ಆರ್ಥಿಕತೆಯಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ...

Trending