Connect with us

ಲೈಫ್ ಸ್ಟೈಲ್

ಗುಮ್ಮಟನಗರಿಯಲ್ಲೊಂದು ಸುಂದರ ‘ಮತ್ಸ್ಯಲೋಕ’..!

Published

on

ಫೋಟೋ : ಕಾಂಚನಾ ಬಸವರಾಜ ಪೂಜಾರಿ

ನುಷ್ಯನ ಬುದ್ಧಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಉಪಯೋಗಿಸುವ ಮೀನುಗಳು ಇದೀಗ ಗುಮ್ಮಟನಗರಿಯ ಜನರನ್ನು ರಂಜಿಸುವ ಅಲಂಕಾರಿಕ ವಸ್ತುವಾಗಿಯು ಪರಿವರ್ತನೆಯಾಗಿವೆ. ಹೌದು ಮೀನು ಪ್ರೀಯರನ್ನು ಕೈ ಬೀಸಿ ಕರೆಯಲೆಂದೆ ಮತ್ಸ್ಯಲೊಂಕದಿಂದ ಮತ್ಸ್ಯಕನ್ಯೆಯರು ಧರೆಗಿಳಿದು ಬಂದು ಗುಮ್ಮಟನಗರಿಯಲ್ಲಿ ಮತ್ಸ್ಯಲೋಕವನ್ನೆ ಸೃಷ್ಠಿಸಿದ್ದಾರೆ.

ವಿಜಯಪುರದ ಡಾ. ಬಿ.ಆರ್.ಅಂಬೇಡ್ಕರ ಕ್ರಿಡಾಂಗಣ ಅಮೀಪದ ಆನ್-ಲೈನ್ ಟ್ರೇಂಡಿಂಗ್ ಸಂಕೀರ್ಣದ ಆವರಣದಲ್ಲಿ ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ಬೃಹತ್ ಮತ್ಸ್ಯ ಮೇಳ 2020”ಯಲ್ಲಿ ನೋಡುಗರ ಕಣ್ಣಿಗೆ ಸಂಭ್ರಮವನ್ನು ಆನಂದಿಸುವಂತೆ ಹಬ್ಬವನ್ನುಂಟು ಮಾಡಿದ್ದವು.

ಮತ್ಸ್ಯ ಮೇಳಕ್ಕೆ ಕೊನೆಯದಿನವಾದ ಜ.14ರಂದು ಜನರಿಂದ ಉತ್ತಮವಾದ ರೀತಿಯಲ್ಲಿ ಸ್ಪಂದನೆ ದೊರೆತಿದೆ. ಹೌದು ಬೆಳಗಿನಿಂದಲೆ ಮತ್ಸ್ಯಕನ್ಯೆಯರನ್ನು ನೋಡಲೆಂದು ಜನರು ತಂಡೊಪ ತಂಡವಾಗಿ ಆಗಮಿಸಿದರು.

ತರಹೇವಾರಿ ಮೀನು

ಮಿಲ್ಕ್ ಮಾರ್ಫ್, ಗ್ರೀನ್‍ಸ್ಕೇಟ್, ರೋಜಿ ಬಾರ್ಬ್, ಪೆನ್ಸಿಲ್ ಟೆಟ್ರಾ, ಪಫರ್, ನಿಯೋನ್ ಟೆಟ್ರಾ, ಸಿಂಗಾಪುರ್ ಗಪ್ಪಿ, ಟೆಟ್ರಾ, ಚೆರ್ರಿ ಬಾರ್ಬ್, ವೆನಿಲ್ಲಾ ಕಾರ್ಫ್, ಹಾಕಿ ಸ್ಟಿಕ್ ಟೆಟ್ರಾ, ಸರ್ಪೆಟೆಟ್ರಾ, ಕೊಯಿಕಾರ್ಪ್, ಆರೆಂಜ್ ಕೊಯಿ, ಆಲ್‍ಬಿನೋ ಗೌರಾಮಿ ಹೆಡ್‍ಗೋಲ್ಡ್, ನಿಯೋನ್ ಟೆಟ್ರಾ, ಗಪ್ಪಿ ಮೀನು, ಆರೇಟಿಸ್, ತಿಲಾಪಿಯ್, ಕಪ್ಪು ಮೋಲಿ.

ಕ್ಲೌನ್ ಬಾರ್ಬ್, ಟೈಗರ್ ಶಾರ್ಕ್, ಸಿಲ್ವರ್ ಶಾರ್ಕ್, ಟೈಗರ್ ಬಾರ್ಬ್, ಕತ್ತಿ ಬಾಲದ ಮೀನು, ಆಲ್ಬಿನೋ ಕ್ಯಾಟ್ ಫಿಶ್, ಸಕ್ಕರ್ ಮೌತ್ ಕ್ಯಾಟ್ ಫಿಶ್, ನೀಲಿ ಮತ್ತು ಹಳದಿ ಮಾಫ, ಬಿಳಿ ಮೋಲಿ, ಗೋಲ್ಡ್ ಫಿಶ್, ಟೈಗರ್ ಬಾರ್ಬ, ಅಲ್ಬನೋ ಶಾರ್ಕ್, ಏಂಜಲ್ ಫಿಶ್(ಗಂಧರ್ವ ಮೀನು).

ಅಬ್ಬಾ ಈ ಮೀನುಗಳ ಹೆಸರು ಹೇಳುವಷ್ಟರಲ್ಲಿ ನನಗೆ ಸುಸ್ತಾಯಿತುರಿ. ಹೀಗೆ ಅನೇಕ ತಳಿಯ ನೂರಕ್ಕೂ ಹೆಚ್ಚು ಬಗೆಯ ದೇಶ-ವಿದೇಶಿಯ ಮೀನುಗಳು ಇಲ್ಲಿ ಒಂದೆ ಸೂರಿನ ಅಡಿಯಲ್ಲಿ ಸೇರಿ ಕಿರಿಯರಿಂದ ಹಿಡಿದು ಹಿರಿಯರವರೆಗೂ ಕೈಬೀಸಿ ಕರೆದು ರಂಜಿಸುತ್ತಿದ್ದವು. ಅಷ್ಟೇ ಅಲ್ಲದೆ ಇವುಗಳಲ್ಲಿ ಮನೆಯಲ್ಲಿ ಸಾಕುವಂತಹ ಮೀನುಗಳು ಸಹ ಪ್ರದರ್ಶನಕ್ಕೆ ಇಡಲಾಗಿತ್ತು.

ಈ ಸುಂದರ ಮೀನುಗಳುಗಳಲ್ಲಿ ವಿಶ್ವ ಪ್ರಸಿದ್ಧಿ ಹೊಂದಿರುವ, ಹಾಗೂ ಅಧಿಕ ಬೆಲೆ ಹೊಂದಿರುವ ಅರವಾನ ಮತ್ತು ಫ್ಲವರ್ ಹಾರನ್ ಮೀನುಗಳನ್ನು ಎಲ್ಲರ ಗಮನ ಸೆಳೆದವು. ಆದರೆ ಇನ್ನೂ ಕೆಲವು ಬೆಲೆಗಳ ಮೂಲಕ ಹುಬ್ಬೆರುಸುವಂತೆ ಮಾಡಿದ್ದವು. ಅವುಗಳಲ್ಲಿ ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು ಎಂಬಂತೆ ಒಂದು ಸೆ.ಮೀ ಅಳತೆಯ ‘ಡೈಮಂಡ್ ಸ್ಟ್ರಿಂಗ್ ರೆ’ಗೆ ಒಂದು ಲಕ್ಷ ರೂ.

ಇದೆ, ಅದೇ ಐದು ಸೆ.ಮೀ ಗೆ ಐದು ಲಕ್ಷ ರೂ ಇದೆ, ಅದೆ ಒಂದುವರೆ ಕೆ.ಜಿ 20ಲಕ್ಷ ರೂ ಇದೆ. ‘ಅಲಿಗೇಟರ್‍ಗಾರ್’ ಎಂಬ ಮೀನಿಗೆ 2 ಲಕ್ಷ ರೂ, ‘ಲಿಯೋ ಪಾರ್ಡ್ ಡಿಸ್ಕಸ್’ ಮೀನಿಗೆ 1ಲಕ್ಷ ರೂ, ಚೀನಾದ ವಾಸ್ತುಮೀನು ‘ಪ್ಲವರ್ ಹಾರ್ನ್’ ಬೆಲೆ 70 ಸಾವಿರ ರೂ, ಹೀಗೆ ಅನೇಕ ಮೀನುಗಳು ಬೆಲೆಗಳ ಮೂಲಕ ಜನರನ್ನು ಆಕರ್ಷಣೆ ಮಾಡಿದವು ಇನ್ನು ಕೆಲವು ರಂಗು ರಂಗಾದ ಬಣ್ಣದಿಂದ ಮಕ್ಕಳನ್ನು ಆಕರ್ಷಣೆ ಮಾಡಿದವು. ಇದರ ಜೊತೆಗೆ ಮಕ್ಕಳು ಆಟವಾಡುತ್ತಾ ನಕ್ಕು ನಲಿದರು, ಹಾಗೂ ಯುವಜನರು ಸೆಲ್ಫಿ ಕ್ಲಿಕಿಸಿ ಸಂಭ್ರಮಿಸಿದರು.

ಜಿಲ್ಲೆಯ ಮೀನುಗಾರಿಕೆ ಇಲಾಖೆಯ ಯೋಜನೆಗಳು

  • ಮೀನುಗಾರಿಕೆ ಮೂಲಭೂತ ಸೌಲಭ್ಯಗಳ ನಿರ್ಮಾಣ ಮತ್ತು ನಿರ್ವಹಣೆ.
  • ಸಾರ್ವಜನಿಕ ವೀಕ್ಷಣೆಗಾಗಿ ಮುದ್ದು ಮೀನು ಸಂಗ್ರಹಾಲಯ ನಿರ್ವಹಣೆ.
  • ಉಚಿತ ಮೀನುಮರಿಗಳ ಹಂಚಿಕೆಯಿಂದ ರೈತರ ಸ್ವಂತ ಜಮೀನುಗಳಲ್ಲಿ ಸಣ್ಣ ಪ್ರಮಾಣದ ಜಲ ಮೂಲಗಳಲ್ಲಿ ಮೀನು ಉತ್ಪಾದನೆಗೆ ಉತ್ತೇಜನೆ ಮಾಡುವುದು.
  • ಮೀನು ಬಲೆ ಮತ್ತು ಹರಿಗೋಲನ್ನು ಉಚಿತವಾಗಿ ನೀಡುವುದು.
  • ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ರೂಪದಲ್ಲಿ ಮೀನು ಮಾರಾಟ ಸಲಕರಣೆ ವಿತರಣೆ
  • ಕೆರೆಗಳಲ್ಲಿ ಬಿತ್ತನೆ ಮಾಡುವ ಮೀನುಮರಿಗಳಿಗೆ ಸಹಾಯಧನ
  • ನಿರ್ವಸತಿ ಮೀನುಗಾರರಿಗೆ ಮತ್ಸ್ಯ ಆಶ್ರಯ ಯೋಜನೆಯ ಅಡಿಯಲ್ಲಿ ವಸತಿ ಹೊಂದಲು ಧನ ಸಹಾಯ ಕಲ್ಪಸುವುದು
  • ಜಲಾಶಯ ಮತ್ತು ನದಿ ಮೀನುಗಾರರಿಗೆ ಜೀವ ರಕ್ಷಕ ಸಾಧನಗಳ ವಿತರಣೆ
  • ಸ್ವಂತ ಜಮೀನಿನಲ್ಲಿ ದೊಡ್ಡ ಪ್ರಮಾಣದ ಕೃಷಿ ಹೊಂಡಗಳನ್ನು ನಿರ್ಮಿಸಿ ಸುಧಾರಿತ ಮೀನುಗಾರಿಕೆ ಮಾಡಲು ಸಹಾಯಧನ ಕಲ್ಪಿಸುವುದು
  • ರಾಷ್ಟ್ರೀ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ನೆರವಿಂದ ಜಲಾಶಯಗಳ ಮೀನುಗಾರಿಕೆ ಅಭಿವೃದ್ಧಿ ಹಾಗೂ ತರಬೇತಿ, ವಿಸ್ತರಣೆ ಮತ್ತು ಸಂಶೋಧನೆ ನಡೆಸುವುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 08352-255734
ಮೀನುಗಾರಿಕೆ ಸಹಾಯಕ ನಿರ್ದೇಶಕ ವಿಜಯಪುರ: 9480822974
ಮೀನುಗಾರಿಕೆ ಸಹಾಯಕ ನಿರ್ದೇಶಕ ಮುದ್ದೇಬಿಹಾಳ: 9480822975

ಅಭಿಪ್ರಾಯಗಳು

  • ಈ ಮೀನುಗಳನ್ನು ದೇಶ ವಿದೇಶಗಳಿಂದ ತರಲಾಗಿದೆ. ಸಾರ್ವಜನಿಕರಿಂದ ಉತ್ತಮ ರೀತಿಯಲ್ಲಿ ಪ್ರತಿಕ್ರೀಯೆ ಸಿಕ್ಕಿದೆ. ಮೀನುಗಳನ್ನು ಶಿವಮೊಗ್ಗ, ಮೈಸುರು, ಬೆಂಗಳೂರು, ಮಂಗಳೂರು, ಅಮೇರಿಕಾ, ಆಸ್ಟ್ರೇಲಿಯಾ, ಹೀಗೆ ಅನೇಕ ದೇಶಗಳಿಂದ ಲಕ್ಷಾಂತರ ಹಣ ಬಂಡವಾಳ ಹಾಕಿ ಇವುಗಳನ್ನು ಇಲ್ಲಿವರೆಗೆ ಆಮ್ಲಜನಕದ ಸಹಾಯದಿಂದ ತಂದಿದ್ದೇವೆ.

| ದಯಾನಂದ ಬಜೆಂತ್ರಿ
ಕ್ಷೇತ್ರಪಾಲಕ ಮೀನುಗಾರಿಗೆ ಇಲಾಖೆ ವಿಜಯಪುರ

  • ನಾನು ಈ ರೀತಿಯ ಮೀನುಗಳನ್ನು ವಿದೇಶದಲ್ಲಿ ನೋಡಿದ್ದೆ. ಅಂಟ್ಲಾಟಿಕಾದಲ್ಲಿ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಜಲವಿಹಾರಕ್ಕೆ ಹೋದಾಗ ಕೈಯಲ್ಲಿ ಹಿಡಿದ್ದು ಸಂಭ್ರಮ ಪಟ್ಟಿದೆ. ಈಗ ಅದೆ ಅನುಭವ ಇಲ್ಲಿ ಮತ್ತೊಂದು ಬಾರಿ ಅನುಭವಿಸಿದೆ. ಮೀನುಗಾರಿಕೆ ಇಲಾಖೆಯವರು ಇಂತಹ ದೊಡ್ಡ ಪ್ರಮಾಣದಲ್ಲಿ ಮತ್ಸ್ಯ ಮೇಳ ಏರ್ಪಡಿಸಿರುವುದರಿಂದ ಎಲ್ಲರ ಜ್ಞಾನವು ಹೆಚ್ಚಿಸಿಕೊಳ್ಳಬಹುದು, ಹಾಗೂ ಮೀನುಗಳಲ್ಲಿ ಎಷ್ಟು ವಿಧಗಳು ಇದೆ ಎಂಬುದು ತಿಳಿದು ತಮ್ಮ ಮಕ್ಕಳಿಗೆ ತಿಳಿಸುವಲ್ಲಿ ಅನುಕೂಲವಾಗಿದೆ.

|ಶೋಭಾ ನಾಯಕ (ಸಾರ್ವಜನಿಕರು)

ಕಾಂಚನಾ ಬಸವರಾಜ ಪೂಜಾರಿ
3ನೇ ಸೇಮಿಸ್ಟರ್ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಕರ್ನಾಟಕ ರಾಜ್ಯ ಅಕ್ಕಮಾಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ
ವಿಜಯಪುರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending