ದಿನದ ಸುದ್ದಿ

ದಾವಣಗೆರೆ | ಮೀನು ಕೃಷಿ ಕೊಳ ನಿರ್ಮಾಣಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ :ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಯ ಎಲ್ಲಾ ವೃತ್ತಿಪರ ಮೀನುಗಾರರಿಗೆ ಜಿ.ಪಂ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಜಮೀನಿನಲ್ಲಿ ಕನಿಷ್ಠ 2000 ಚ.ಮೀ ಮೀನು ಕೃಷಿ ಕೈಗೊಳ್ಳಲು ಕೊಳ ನಿರ್ಮಾಣಕ್ಕೆ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಮೀನು ಮಾರಾಟ ಮತ್ತು ಮತ್ಸ್ಯವಾಹಿನಿಗೆ ಸಹಾಯ ಮತ್ತು ರಾಜ್ಯವಲಯ ಯೋಜನೆಗಳಾದ ಮೀನುಗಾರಿಕೆ ಸಲಕರಣೆ ಕಿಟ್ ಗೆ ಸಹಾಯ, ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನು ಉತ್ಪಾದನೆ ಹೆಚ್ಚಿಸಲು ಮತ್ಸ್ಯಕೃಷಿ ಆಶಾಕಿರಣ ಯೋಜನೆ ಮತ್ತು ಸೀಗಡಿ ಮತ್ತು ಹಿನ್ನೀರು ಮೀನುಕೃಷಿ ಪ್ರೋತ್ಸಾಹ ಕಾರ್ಯಕ್ರಮ ಮತ್ತು ಮೀನುಗಾರರ ಸಹಕಾರ ಸಂಘಗಳಿಗೆ ಹಾಗೂ ವೈಯಕ್ತಿಕ ಮೀನು ಕೃಷಿಕರಿಗೆ ಮೀನುಮರಿ ಖರೀದಿಗೆ ಸಹಾಯ ಯೋಜನೆಯಡಿ ಸಹಾಯ ಮುಂತಾದ ಯೋಜನೆಗಳ ಕುರಿತಾದ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಿ ಪಡೆಯಬಹುದೆಂದು ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕರಾದ ಗಣೇಶ್.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version