Connect with us

ದಿನದ ಸುದ್ದಿ

ನಿರುದ್ಯೋಗ ಮತ್ತು ಮೋದಿಯ ‘ಫಿಟ್ ಇಂಡಿಯಾ’ ಚಳವಳಿ

Published

on

  • ಸೋಮನಗೌಡ.ಎಸ್.ಎಂ.ಕಟ್ಟಿಗೆಹಳ್ಳಿ

ಪ್ರಧಾನಿಮೋದಿ ಅವರು ಫಿಟ್ ಇಂಡಿಯಾ ಚಳವಳಿಗೆಚಾಲನೆ ನೀಡಲಿದ್ದಾರೆ ಎಂದು ನಿರೂಪಕಿ ಹೇಳುತ್ತಿದ್ದಂತೆಒಮ್ಮೆಲೆ ನನಗೆ ಕೇಳಿಸಿದ್ದು ‘ಕ್ವಿಟ್ ಇಂಡಿಯಾ’ ಚಳವಳಿನಾ’ಎಂದು! ಅನಂತರ ದಿಟ್ಟಿಸಿ ಸೂಕ್ಷ್ಮವಾಗಿಟಿವಿ ನೋಡಿದಾಗ ಮೋದಿ ಅವರು ‘ಸದೃಢ ಭಾರತ ಸಶಕ್ತಭಾರತ’ಕ್ಕೆ ದೈಹಿಕ ಚಟುವಟಿಕೆ ಮತ್ತು ಕ್ರೀಡೆಗಳಲ್ಲಿಎಲ್ಲರೂ ತೊಡಗಿಕೊಳ್ಳಿ ಎಂದು ಹೇಳುವ ಸಾರವೇ ಫಿಟ್ಇಂಡಿಯಾ ಚಳವಳಿ ಎಂದಾಗ ಅರ್ಥವಾಯಿತು.

‘ಹಮ್ ಫಿಟ್, ತೋ ಇಂಡಿಯಾ ಫಿಟ್’ ಹ್ಯಾಶ್ಟ್ಯಾಗ್‍ನಲ್ಲಿ ಕಳೆದ ವರ್ಷ ಕೇಂದ್ರದ ಕ್ರೀಡಾ ಸಚಿವರಾಜವರ್ಧನ ಸಿಂಗ್ ರಾಥೋಡ್ (ಈಗ ಮಾಜಿ) ಟ್ಟೀಟರ್‍ನಲ್ಲಿ ಫಿಟ್‍ನೆಸ್ ಸವಾಲೆಸೆದಿದ್ದರು. ಇದಕ್ಕೆಕ್ರೀಡಾಪಟುಗಳು, ಸಿನಿಮಾ ತಾರೆಯರು ಸವಾಲುಸ್ವೀಕರಿಸಿ ಯೋಗ, ಜಿಮ್, ಕಚೇರಿಯಲ್ಲೇ ವ್ಯಾಯಾಮಮಾಡಿ ಸಶಕ್ತ ಭಾರತಕ್ಕೆ ನಾವು ಬದ್ಧ ಎಂದು ಸಾಮಾಜಿಕಜಾಲತಾಣಗಳಲ್ಲಿ ಪ್ರಚಾರಗಿಟ್ಟಸಿಕೊಂಡಿದ್ದರು.

1942 ಆಗಸ್ಟ್ 8 ರಂದು ಕ್ರಿಪ್ಸ್ ಶಿಫಾರಸ್ಸುಗಳನ್ನುತಿರಸ್ಕರಿಸಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಬಾಂಬೆಯಗೋವಳಿ ಮೈದಾನದಲ್ಲಿ ಸಭೆ ಸೇರಿ ‘ಭಾರತ ಬಿಟ್ಟುತೊಲಗಿ’ ಠರಾವನ್ನು ಅಂಗೀಕರಿಸಿತ್ತು. ಮಹಾತ್ಮಗಾಂಧಿಯವರು ‘ಬ್ರಿಟೀಷರು ತಕ್ಷಣ ಭಾರತ ಬಿಟ್ಟುತೊಲಗಿ. ಇಲ್ಲವಾದರೆ ಕಾನೂನು ಭಂಗ ಚಳವಳಿಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.ಭಾರತೀಯರಿಗೆ ‘ಮಾಡು ಇಲ್ಲವೇ ಮಡಿ’ ಎಂಬ ಕರೆನೀಡಿದ್ದರು.ಗಾಂಧೀಜಿಯವರು ಗುಜರಾತ್ ರಾಜ್ಯದವರು. ಈಗಪ್ರಧಾನಿ ಮೋದಿಯವರು ಕೂಡಾ ಗುಜರಾತ್ರಾಜ್ಯದವರೇ.‘ಕ್ವಿಟ್ ಇಂಡಿಯಾ’ ಚಳವಳಿಆರಂಭವಾಗಿದ್ದು 1942 ಆಗಸ್ಟ್ 8 ರಂದು.‘ಫಿಟ್ಇಂಡಿಯಾ’ ಚಳವಳಿ ಆರಂಭವಾಗಿದ್ದು 2019 ಆಗಸ್ಟ್29ರಂದು. ಆಗ ಭಾರತಕ್ಕೆ ಅಂಟಿದ್ದ ಬ್ರಿಟೀಷ್ ರೋಗತೊಳೆಯಲು ಕರೆ ನೀಡಿದ್ದು ಕ್ವಿಟ್ ಇಂಡಿಯಾ ಚಳವಳಿ.ಈಗ ಮೋದಿ ಅವರು ಸದೃಢ ಭಾರತ ಕಟ್ಟಲು ಫಿಟ್ಇಂಡಿಯಾ ಚಳವಳಿಗೆ ಕರೆ ನೀಡಿದ್ದಾರೆ.

ಕುಸಿಯುತ್ತಿರುವ ಆರ್ಥಿಕತೆಯಿಂದ ದೇಶತಲ್ಲಣಗೊಂಡಿದೆ. ಉದ್ಯೋಗಗಳು ಮರೀಚಿಕೆಯಾಗಿ. ಯುವಜನತೆ ಉದ್ಯೋಗವಿಲ್ಲದೇ ಬೀದಿಗೆ ಬಿದ್ದಿದ್ದಾರೆ. ಈದೇಶದ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ. ಆರೋಗ್ಯ, ಬಡತನ, ಹಸಿವು, ದಾರಿದ್ರ್ಯ ಎಲ್ಲೆಲ್ಲೂ ಜೀವಂತವಾಗಿರುವಕಾಲದಲ್ಲಿ ಇಂಡಿಯಾ ‘ಫಿಟ್ ಇಂಡಿಯಾ’ ಆಗಿದೆಯೇ? ಎಂದು ಮೊದಲು ಪ್ರಧಾನಿಯವರು ಮನಗಾಣಬೇಕು.
ಸ್ವಾತಂತ್ರ್ಯ ಬಂದು 73 ವರ್ಷಗಳೇ ಕಳೆದಿವೆ. ಐತಿಹಾಸಿಕಕೆಂಪುಕೋಟೆಯಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರಮೋದಿಯವರು ಈದೇಶದ ಬಡತನ ನಿವಾರಣೆ ಬಗ್ಗೆ, ಪರಿಸರ ರಕ್ಷಣೆಯ ಬಗ್ಗೆ ಮಾತನಾಡಿದ್ದರು.

2017ರಜುಲೈ 18ರಂದು ಕರ್ನಾಟಕದ ಗೋಕರ್ಣದ ದಲಿತಕುಟುಂಬದ ಮೂವರು ಹಸಿವಿನಿಂದ ಸತ್ತರು. ಕಳೆದಎರಡು ತಿಂಗಳ ಹಿಂದೆ ಆಂಧ್ರಪ್ರದೇಶದಲ್ಲಿ ಹಸಿವನ್ನುತಾಳಲಾರದೇ ಮಣ್ಣು ತಿಂದು ಇಬ್ಬರು ಮಕ್ಕಳುಮೃತಪಟ್ಟರು. ಈ ಸುದ್ದಿ ಇಡೀ ದೇಶದ ಹಸಿವು ಎಂಬಅಂಟು ಜಾಢ್ಯಕ್ಕೆ ಹಿಡಿದ ಕನ್ನಡಿ. ಆಹಾರದ ಹಕ್ಕುಅಭಿಯಾದನ ಭಾಗವಾಗಿ ಹಲವು ಸ್ವಯಂ ಸೇವಾಸಂಸ್ಥೆಗಳು ಸಿದ್ಧಪಡಿಸಿದ ಅಧ್ಯಯನ ವರದಿಯ ಪ್ರಕಾರ2015-2019ರವರೆಗೆ ಹಸಿವಿನಿಂದ ಸತ್ತವರ ಸಂಖ್ಯೆ 58. (ಜಾರ್ಖಂಡ್-16, ಉತ್ತರಪ್ರದೇಶ-16, ಒಡಿಶಾ-10, ಕರ್ನಾಟಕ-3, ದೆಹಲಿ-3, ಬಿಹಾರ-3, ಛತ್ತಿಸ್‍ಗಡ-3, ಆಂಧ್ರ-2 ರಾಜಸ್ಥಾನ-1, ಪ.ಬಂಗಾಳ-1) ಇದನ್ನುಮೊದಲು ಸರಿಪಡಿಸಿ ದಿಟ್ಟಕ್ರಮ ಕೈಗೊಂಡರೆ ಅದೇಅಲ್ಲವೇ ಫಿಟ್ ಇಂಡಿಯಾ?

2019 ಲೋಕಸಭೆಯ ಚುನಾವಣಾ ಆದ್ಯತಾವಿಷಯವಾಗಿ ಪ್ರಚಾರ ಮಾಡಿ,2ನೇ ಬಾರಿಗೆ ಆಡಳಿತಕ್ಕೆಬಂದ ಪ್ರಧಾನಿ ಮೋದಿ ಅವರ ಎನ್‍ಡಿಎ-2.0 ಸರ್ಕಾರಯುವಜನರಿಗೆ ಕೊಟ್ಟ ಉದ್ಯೋಗ ಭರವಸೆಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಉದ್ಯೋಗಕಳೆದುಕೊಂಡು ಬೀದಿಗೆ ಬಂದಿರುವ ನಿರುದ್ಯೋಗಿಗಳಸಂಖ್ಯೆ ದಿನೇ ದಿನೇ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಆಟೊಮೊಬೈಲ್ ಕ್ಷೇತ್ರ, ಜವಳಿ ಕ್ಷೇತ್ರ ಹೀಗೆ ಎಲ್ಲೆಲ್ಲೂಉದ್ಯೋಗ ಕಳೆದುಕೊಂಡು ಅಭದ್ರರಾಗಿದ್ದಾರೆ. ಪ್ರಧಾನಿಮೋದಿ ಅವರ ಎನ್‍ಡಿಎ-1 ಸರ್ಕಾರ ಕಳೆದ 5 ವರ್ಷಗಳಲ್ಲಿ ಪ್ರಮುಖ ಯೋಜನೆಗಳ ಮೂಲಕಸೃಷ್ಟಿಯಾಗಿರುವ ಉದ್ಯೋಗ 27.5ರಷ್ಟು.

2022ರೊಳಗೆ‘ಮೇಕ್ ಇನ್ ಇಂಡಿಯಾ’ ಯೋಜನೆಯೊಂದರಲ್ಲೇ 10 ಕೋಟಿ ಉದ್ಯೋಗ ನೀಡುವ ಭರವಸೆಯನ್ನು ಕೇಂದ್ರನೀಡಿತ್ತು. ಆದರೆ ಸೃಷ್ಟಿಯಾದ ಉದ್ಯೋಗಸಾಸಿವೆಯಷ್ಟು. ಅತಿವೃಷ್ಠಿ-ಅನಾವೃಷ್ಠಿಗಳಿಂದಕೃಷಿರಂಗದಲ್ಲೂ ಉದ್ಯೋಗ ಪ್ರಮಾಣ ಕುಂಠಿತವಾಗಿದೆ.ದ್ವಿದಳ ದಾನ್ಯಗಳ ಉತ್ಪಾದನೆ ಕಡಿಮೆಯಾಗಿ ಬೆಲೆಗಳುಗಗನಕ್ಕೇರುತ್ತಿವೆ.ದುಡಿಯುವ ಯುವಜನರಿಗೆಉದ್ಯೋಗ ಭದ್ರತೆಕೊಟ್ಟರೆ ಅಲ್ಲವೇ ಫಿಟ್ಇಂಡಿಯಾವಾಗೋದು. ಮೊಣಕೈಗೆ ಬೆಣ್ಣೆ ಹಚ್ಚಿ ತಿನ್ನಿಎನ್ನುವಂತಾಗಿದೆ ಯುವಜನರ ಪಾಡು.

ಸದಾಅಭದ್ರತೆಯಲ್ಲೇ ಬದುಕುವ ಜನತೆ ಆರ್ಥಿಕವಾಗಿಸದೃಢವಾಗದಿದ್ದರೆ ‘ಫಿಟ್ ಇಂಡಿಯಾ’ ಚಳವಳಿಹಾಸ್ಯಾಸ್ಪದವೆನ್ನಿಸುತ್ತದೆ.ಲಿಂಗಾನುಪಾತ ಪ್ರಮಾಣ ಕಳವಳಕಾರಿಯಾಗಿದೆ. ಭಾರತದಲ್ಲಿ ಹೆಣ್ಣುಮಕ್ಕಳ ಪ್ರಮಾಣ ಗಮನಾರ್ಹವಾಗಿಇಳಿಮುಖವಾಗಿದೆ ಎಂದು ಭಾರತೀಯ ರಿಜಿಸ್ಟ್ರಾರ್ಜನರಲ್ ಸಿದ್ಧಪಡಿಸಿದ ಅಂಕಿಅಂಶಗಳುಬೆಚ್ಚಿಬೀಳಿಸುವಂತಹದ್ದು. ಕರ್ನಾಟಕದಲ್ಲಿ 2007 ರಲ್ಲಿ1004ರಷ್ಟಿದ್ದ ಲಿಂಗಾನುಪಾತ 2016ರ ವೇಳೆಗೆ 896ಕ್ಕೆಕುಸಿದಿದೆ. ಆಂಧ್ರ, ತಮಿಳುನಾಡು, ತೆಲಂಗಾಣರಾಜ್ಯಗಳಲ್ಲಿ ಶಿಶುಮರಣ ಪ್ರಮಾಣ ಇಳಿಕೆಯಾಗಿದ್ದರುಲಿಂಗಾನುಪಾತದ ಪ್ರಮಾಣ ಹೆಚ್ಚಾಗುತ್ತಲೇ ಇದೆ. ವಿಶ್ವಆರ್ಥಿಕ ವೇದಿಕೆ ಪ್ರಕಟಿಸಿರುವ ಜಾಗತಿಕ ಲಿಂಗತ್ವಅಸಮಾನತೆ ಸೂಚ್ಯಾಂಕದಲ್ಲಿ ಭಾರತವು 21ನೇಸ್ಥಾನದಲ್ಲಿದೆ. ಆರ್ಥಿಕ ಚಟುವಟಿಕೆ, ಉದ್ಯೋಗ, ಆರೋಗ್ಯ ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆವಿಚಾರದಲ್ಲಿ ಭಾರತದ ಮುಂದೆ ಬಹುದೊಡ್ಡ ಸವಾಲುಇದೆ. ರಾಜಕೀಯ ಅಧಿಕಾರ, ಆರೋಗ್ಯ ಜೀವನ ನಿರೀಕ್ಷೆಮತ್ತು ಸಾಕ್ಷರತೆಯ ವಿಚಾರದಲ್ಲಿ ಲಿಂಗ ಸಮಾನತೆಹೆಚ್ಚಿರುವುದೇ ಜಾಗತಿಕ ಸೂಚ್ಯಾಂಕದಲ್ಲಿ ಭಾರತದ ಸ್ಥಾನಕುಸಿಯಲು ಕಾರಣ. ಮೊದಲು ಇಂತಹ ವಿಚಾರದಲ್ಲಿದೇಶ ಫಿಟ್ ಆಗಿದ್ದರೆ ಮಾತ್ರ ಸದೃಢ ಭಾರತವಾಗಲುಸಾಧ್ಯವಲ್ಲವೇ?

ತಾಯಂದಿರ ಮರಣ ಪ್ರಮಾಣ ಹೆಚ್ಚುತ್ತಲೇ ಇದೆ. ಹೆರಿಗೆಸಮಯದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಹುಟ್ಟಿನ ಕೆಲವೇಹೊತ್ತಿನಲ್ಲಿ ಶಿಶುಗಳ ಸಂಖ್ಯೆ ಎಷ್ಟು ಎಂದುರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸಿಕ್ಕ ಉತ್ತರಉಬ್ಬೇರಿಸುವಂತಿತ್ತು. ಅಸ್ಸಾಂ- ಉತ್ತರಪ್ರದೇಶ, ರಾಜಸ್ಥಾನ, ಒಡಿಶಾ, ಮಧ್ಯಪ್ರದೇಶ, ಛತ್ತಿಸ್‍ಗಡ, ಬಿಹಾರ,ಪಂಜಾಬ್‍ಗಳಲ್ಲಿ ಪ್ರತಿ ಒಂದು ಸಾವಿರಕ್ಕೆ 167 ಗರ್ಭಿಣಿಯರು-ಬಾಣಂತಿಯರು ಸಾವನ್ನಪ್ಪಿದ್ದಾರೆ. ಈದೇಶದಲ್ಲಿ 896 ರೋಗಿಗೆ ಒಬ್ಬ ವೈದ್ಯನಿದ್ದಾನೆ. ಹೀಗಾದರೆಹೇಗೆ ಫಿಟ್ ಇಂಡಿಯಾವಾಗಲು ಸಾಧ್ಯ?

ಇವಷ್ಟೇ ಅಲ್ಲ ಹೆಚ್ಚುತ್ತಿರುವ ವಾಯುಮಾಲಿನ್ಯ,ಜಲಮಾಲಿನ್ಯಗಳಿಂದ ದೇಶದಾದ್ಯಂತ ಕ್ಯಾನ್ಸರ್ ಪೀಡಿತರಸಂಖ್ಯೆ, ಹೃದಯರೋಗಿಗಳ ಸಂಖ್ಯೆ ಗಣನೀಯವಾಗಿಹೆಚ್ಚಾಗುತ್ತಿದೆ. ಪ್ರಕೃತಿಯ ಮೇಲೆ ಮಾನವನಸವಾರಿಯಿಂದ ಪರಿಸರ ಹಾಳಾಗಿ ಹೋಗುತ್ತಿದೆ. ಜಗತ್ತಿನಅನೇಕ ದೇಶಗಳನ್ನು ಸುತ್ತಿ ಬಂದಿರುವ ಪ್ರಧಾನಿಯವರುಭಾರತ ‘ಫಿಟ್ ಇಂಡಿಯಾ’ ಆಗಬೇಕು ಎಂಬ ಕನಸನ್ನುಒಪ್ಪೋಣ. ಮಾಧ್ಯಮಗಳಲ್ಲಿ ಬೊಬ್ಬೆ ಹಾಕಿದರೆ ಫಿಟ್ಇಂಡಿಯಾವಾಗದು.ಅದನ್ನು ಕಾರ್ಯರೂಪಕ್ಕೆತರಬೇಕಾದರೆ ಹಳಿತಪ್ಪಿರುವ ಅರ್ಥವ್ಯವಸ್ಥೆಯನ್ನುಸರಿಪರಿಸಬೇಕು. ಉದ್ಯೋಗ ಸೃಷ್ಟಿ, ಪರಿಸರಸಮತೋಲನ, ಆರೋಗ್ಯ ಹೀಗೆ ಎಲ್ಲಾ ಕ್ಷೇತ್ರಗಳುಅಭಿವೃದ್ಧಿ ಕಂಡು ಅದರ ಫಲ ಪ್ರತಿಯೊಬ್ಬ ನಾಗರಿಕನಮನೆಬಾಗಲಿಗೆ ಹೋದಾಗ ಮಾತ್ರವೇ ಫಿಟ್ಇಂಡಿಯಾವಾದೀತು. ಇವೆಲ್ಲದರಿಂದ ರೋಸಿ ಹೋದಯುವಜನತೆ ‘ಮೋದಿ ಕ್ವಿಟ್ ಇಂಡಿಯಾ’ ಎನ್ನವುದಕ್ಕೂಮೊದಲು ಜಾಗೃತರಾಗಿ. ಭಾರತವನ್ನು ಎಲ್ಲಾಅಂಶಗಳಿಂದಲೂ ಫಿಟ್ ಇಂಡಿಯಾ ಮಾಡಿ. ಆಗ ಎಲ್ಲವರ್ಗದ ಜನತೆಯೂ ‘ಫಿಟ್ ಇಂಡಿಯಾ’ ಚಳವಳಿಯನ್ನುಒಪ್ಪುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ2 days ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ3 days ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ4 days ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ5 days ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ5 days ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ5 days ago

ದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ...

ದಿನದ ಸುದ್ದಿ5 days ago

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ1 week ago

ಎಂನರೇಗಾ ಯೋಜನೆ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ...

ದಿನದ ಸುದ್ದಿ2 weeks ago

ಅಡ್ಡ ಬಂದ ನಾಯಿ ಉಳಿಸಲು ಹೋಗಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ

ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ...

Trending