ದಿನದ ಸುದ್ದಿ
ನಿರುದ್ಯೋಗ ಮತ್ತು ಮೋದಿಯ ‘ಫಿಟ್ ಇಂಡಿಯಾ’ ಚಳವಳಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/09/IMG_20190910_082430.jpg&description=ನಿರುದ್ಯೋಗ ಮತ್ತು ಮೋದಿಯ ‘ಫಿಟ್ ಇಂಡಿಯಾ’ ಚಳವಳಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/09/IMG_20190910_082430.jpg&description=ನಿರುದ್ಯೋಗ ಮತ್ತು ಮೋದಿಯ ‘ಫಿಟ್ ಇಂಡಿಯಾ’ ಚಳವಳಿ', 'pinterestShare', 'width=750,height=350'); return false;" title="Pin This Post">
- ಸೋಮನಗೌಡ.ಎಸ್.ಎಂ.ಕಟ್ಟಿಗೆಹಳ್ಳಿ
ಪ್ರಧಾನಿಮೋದಿ ಅವರು ಫಿಟ್ ಇಂಡಿಯಾ ಚಳವಳಿಗೆಚಾಲನೆ ನೀಡಲಿದ್ದಾರೆ ಎಂದು ನಿರೂಪಕಿ ಹೇಳುತ್ತಿದ್ದಂತೆಒಮ್ಮೆಲೆ ನನಗೆ ಕೇಳಿಸಿದ್ದು ‘ಕ್ವಿಟ್ ಇಂಡಿಯಾ’ ಚಳವಳಿನಾ’ಎಂದು! ಅನಂತರ ದಿಟ್ಟಿಸಿ ಸೂಕ್ಷ್ಮವಾಗಿಟಿವಿ ನೋಡಿದಾಗ ಮೋದಿ ಅವರು ‘ಸದೃಢ ಭಾರತ ಸಶಕ್ತಭಾರತ’ಕ್ಕೆ ದೈಹಿಕ ಚಟುವಟಿಕೆ ಮತ್ತು ಕ್ರೀಡೆಗಳಲ್ಲಿಎಲ್ಲರೂ ತೊಡಗಿಕೊಳ್ಳಿ ಎಂದು ಹೇಳುವ ಸಾರವೇ ಫಿಟ್ಇಂಡಿಯಾ ಚಳವಳಿ ಎಂದಾಗ ಅರ್ಥವಾಯಿತು.
‘ಹಮ್ ಫಿಟ್, ತೋ ಇಂಡಿಯಾ ಫಿಟ್’ ಹ್ಯಾಶ್ಟ್ಯಾಗ್ನಲ್ಲಿ ಕಳೆದ ವರ್ಷ ಕೇಂದ್ರದ ಕ್ರೀಡಾ ಸಚಿವರಾಜವರ್ಧನ ಸಿಂಗ್ ರಾಥೋಡ್ (ಈಗ ಮಾಜಿ) ಟ್ಟೀಟರ್ನಲ್ಲಿ ಫಿಟ್ನೆಸ್ ಸವಾಲೆಸೆದಿದ್ದರು. ಇದಕ್ಕೆಕ್ರೀಡಾಪಟುಗಳು, ಸಿನಿಮಾ ತಾರೆಯರು ಸವಾಲುಸ್ವೀಕರಿಸಿ ಯೋಗ, ಜಿಮ್, ಕಚೇರಿಯಲ್ಲೇ ವ್ಯಾಯಾಮಮಾಡಿ ಸಶಕ್ತ ಭಾರತಕ್ಕೆ ನಾವು ಬದ್ಧ ಎಂದು ಸಾಮಾಜಿಕಜಾಲತಾಣಗಳಲ್ಲಿ ಪ್ರಚಾರಗಿಟ್ಟಸಿಕೊಂಡಿದ್ದರು.
1942 ಆಗಸ್ಟ್ 8 ರಂದು ಕ್ರಿಪ್ಸ್ ಶಿಫಾರಸ್ಸುಗಳನ್ನುತಿರಸ್ಕರಿಸಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಬಾಂಬೆಯಗೋವಳಿ ಮೈದಾನದಲ್ಲಿ ಸಭೆ ಸೇರಿ ‘ಭಾರತ ಬಿಟ್ಟುತೊಲಗಿ’ ಠರಾವನ್ನು ಅಂಗೀಕರಿಸಿತ್ತು. ಮಹಾತ್ಮಗಾಂಧಿಯವರು ‘ಬ್ರಿಟೀಷರು ತಕ್ಷಣ ಭಾರತ ಬಿಟ್ಟುತೊಲಗಿ. ಇಲ್ಲವಾದರೆ ಕಾನೂನು ಭಂಗ ಚಳವಳಿಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.ಭಾರತೀಯರಿಗೆ ‘ಮಾಡು ಇಲ್ಲವೇ ಮಡಿ’ ಎಂಬ ಕರೆನೀಡಿದ್ದರು.ಗಾಂಧೀಜಿಯವರು ಗುಜರಾತ್ ರಾಜ್ಯದವರು. ಈಗಪ್ರಧಾನಿ ಮೋದಿಯವರು ಕೂಡಾ ಗುಜರಾತ್ರಾಜ್ಯದವರೇ.‘ಕ್ವಿಟ್ ಇಂಡಿಯಾ’ ಚಳವಳಿಆರಂಭವಾಗಿದ್ದು 1942 ಆಗಸ್ಟ್ 8 ರಂದು.‘ಫಿಟ್ಇಂಡಿಯಾ’ ಚಳವಳಿ ಆರಂಭವಾಗಿದ್ದು 2019 ಆಗಸ್ಟ್29ರಂದು. ಆಗ ಭಾರತಕ್ಕೆ ಅಂಟಿದ್ದ ಬ್ರಿಟೀಷ್ ರೋಗತೊಳೆಯಲು ಕರೆ ನೀಡಿದ್ದು ಕ್ವಿಟ್ ಇಂಡಿಯಾ ಚಳವಳಿ.ಈಗ ಮೋದಿ ಅವರು ಸದೃಢ ಭಾರತ ಕಟ್ಟಲು ಫಿಟ್ಇಂಡಿಯಾ ಚಳವಳಿಗೆ ಕರೆ ನೀಡಿದ್ದಾರೆ.
ಕುಸಿಯುತ್ತಿರುವ ಆರ್ಥಿಕತೆಯಿಂದ ದೇಶತಲ್ಲಣಗೊಂಡಿದೆ. ಉದ್ಯೋಗಗಳು ಮರೀಚಿಕೆಯಾಗಿ. ಯುವಜನತೆ ಉದ್ಯೋಗವಿಲ್ಲದೇ ಬೀದಿಗೆ ಬಿದ್ದಿದ್ದಾರೆ. ಈದೇಶದ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ. ಆರೋಗ್ಯ, ಬಡತನ, ಹಸಿವು, ದಾರಿದ್ರ್ಯ ಎಲ್ಲೆಲ್ಲೂ ಜೀವಂತವಾಗಿರುವಕಾಲದಲ್ಲಿ ಇಂಡಿಯಾ ‘ಫಿಟ್ ಇಂಡಿಯಾ’ ಆಗಿದೆಯೇ? ಎಂದು ಮೊದಲು ಪ್ರಧಾನಿಯವರು ಮನಗಾಣಬೇಕು.
ಸ್ವಾತಂತ್ರ್ಯ ಬಂದು 73 ವರ್ಷಗಳೇ ಕಳೆದಿವೆ. ಐತಿಹಾಸಿಕಕೆಂಪುಕೋಟೆಯಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರಮೋದಿಯವರು ಈದೇಶದ ಬಡತನ ನಿವಾರಣೆ ಬಗ್ಗೆ, ಪರಿಸರ ರಕ್ಷಣೆಯ ಬಗ್ಗೆ ಮಾತನಾಡಿದ್ದರು.
2017ರಜುಲೈ 18ರಂದು ಕರ್ನಾಟಕದ ಗೋಕರ್ಣದ ದಲಿತಕುಟುಂಬದ ಮೂವರು ಹಸಿವಿನಿಂದ ಸತ್ತರು. ಕಳೆದಎರಡು ತಿಂಗಳ ಹಿಂದೆ ಆಂಧ್ರಪ್ರದೇಶದಲ್ಲಿ ಹಸಿವನ್ನುತಾಳಲಾರದೇ ಮಣ್ಣು ತಿಂದು ಇಬ್ಬರು ಮಕ್ಕಳುಮೃತಪಟ್ಟರು. ಈ ಸುದ್ದಿ ಇಡೀ ದೇಶದ ಹಸಿವು ಎಂಬಅಂಟು ಜಾಢ್ಯಕ್ಕೆ ಹಿಡಿದ ಕನ್ನಡಿ. ಆಹಾರದ ಹಕ್ಕುಅಭಿಯಾದನ ಭಾಗವಾಗಿ ಹಲವು ಸ್ವಯಂ ಸೇವಾಸಂಸ್ಥೆಗಳು ಸಿದ್ಧಪಡಿಸಿದ ಅಧ್ಯಯನ ವರದಿಯ ಪ್ರಕಾರ2015-2019ರವರೆಗೆ ಹಸಿವಿನಿಂದ ಸತ್ತವರ ಸಂಖ್ಯೆ 58. (ಜಾರ್ಖಂಡ್-16, ಉತ್ತರಪ್ರದೇಶ-16, ಒಡಿಶಾ-10, ಕರ್ನಾಟಕ-3, ದೆಹಲಿ-3, ಬಿಹಾರ-3, ಛತ್ತಿಸ್ಗಡ-3, ಆಂಧ್ರ-2 ರಾಜಸ್ಥಾನ-1, ಪ.ಬಂಗಾಳ-1) ಇದನ್ನುಮೊದಲು ಸರಿಪಡಿಸಿ ದಿಟ್ಟಕ್ರಮ ಕೈಗೊಂಡರೆ ಅದೇಅಲ್ಲವೇ ಫಿಟ್ ಇಂಡಿಯಾ?
2019 ಲೋಕಸಭೆಯ ಚುನಾವಣಾ ಆದ್ಯತಾವಿಷಯವಾಗಿ ಪ್ರಚಾರ ಮಾಡಿ,2ನೇ ಬಾರಿಗೆ ಆಡಳಿತಕ್ಕೆಬಂದ ಪ್ರಧಾನಿ ಮೋದಿ ಅವರ ಎನ್ಡಿಎ-2.0 ಸರ್ಕಾರಯುವಜನರಿಗೆ ಕೊಟ್ಟ ಉದ್ಯೋಗ ಭರವಸೆಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಉದ್ಯೋಗಕಳೆದುಕೊಂಡು ಬೀದಿಗೆ ಬಂದಿರುವ ನಿರುದ್ಯೋಗಿಗಳಸಂಖ್ಯೆ ದಿನೇ ದಿನೇ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಆಟೊಮೊಬೈಲ್ ಕ್ಷೇತ್ರ, ಜವಳಿ ಕ್ಷೇತ್ರ ಹೀಗೆ ಎಲ್ಲೆಲ್ಲೂಉದ್ಯೋಗ ಕಳೆದುಕೊಂಡು ಅಭದ್ರರಾಗಿದ್ದಾರೆ. ಪ್ರಧಾನಿಮೋದಿ ಅವರ ಎನ್ಡಿಎ-1 ಸರ್ಕಾರ ಕಳೆದ 5 ವರ್ಷಗಳಲ್ಲಿ ಪ್ರಮುಖ ಯೋಜನೆಗಳ ಮೂಲಕಸೃಷ್ಟಿಯಾಗಿರುವ ಉದ್ಯೋಗ 27.5ರಷ್ಟು.
2022ರೊಳಗೆ‘ಮೇಕ್ ಇನ್ ಇಂಡಿಯಾ’ ಯೋಜನೆಯೊಂದರಲ್ಲೇ 10 ಕೋಟಿ ಉದ್ಯೋಗ ನೀಡುವ ಭರವಸೆಯನ್ನು ಕೇಂದ್ರನೀಡಿತ್ತು. ಆದರೆ ಸೃಷ್ಟಿಯಾದ ಉದ್ಯೋಗಸಾಸಿವೆಯಷ್ಟು. ಅತಿವೃಷ್ಠಿ-ಅನಾವೃಷ್ಠಿಗಳಿಂದಕೃಷಿರಂಗದಲ್ಲೂ ಉದ್ಯೋಗ ಪ್ರಮಾಣ ಕುಂಠಿತವಾಗಿದೆ.ದ್ವಿದಳ ದಾನ್ಯಗಳ ಉತ್ಪಾದನೆ ಕಡಿಮೆಯಾಗಿ ಬೆಲೆಗಳುಗಗನಕ್ಕೇರುತ್ತಿವೆ.ದುಡಿಯುವ ಯುವಜನರಿಗೆಉದ್ಯೋಗ ಭದ್ರತೆಕೊಟ್ಟರೆ ಅಲ್ಲವೇ ಫಿಟ್ಇಂಡಿಯಾವಾಗೋದು. ಮೊಣಕೈಗೆ ಬೆಣ್ಣೆ ಹಚ್ಚಿ ತಿನ್ನಿಎನ್ನುವಂತಾಗಿದೆ ಯುವಜನರ ಪಾಡು.
ಸದಾಅಭದ್ರತೆಯಲ್ಲೇ ಬದುಕುವ ಜನತೆ ಆರ್ಥಿಕವಾಗಿಸದೃಢವಾಗದಿದ್ದರೆ ‘ಫಿಟ್ ಇಂಡಿಯಾ’ ಚಳವಳಿಹಾಸ್ಯಾಸ್ಪದವೆನ್ನಿಸುತ್ತದೆ.ಲಿಂಗಾನುಪಾತ ಪ್ರಮಾಣ ಕಳವಳಕಾರಿಯಾಗಿದೆ. ಭಾರತದಲ್ಲಿ ಹೆಣ್ಣುಮಕ್ಕಳ ಪ್ರಮಾಣ ಗಮನಾರ್ಹವಾಗಿಇಳಿಮುಖವಾಗಿದೆ ಎಂದು ಭಾರತೀಯ ರಿಜಿಸ್ಟ್ರಾರ್ಜನರಲ್ ಸಿದ್ಧಪಡಿಸಿದ ಅಂಕಿಅಂಶಗಳುಬೆಚ್ಚಿಬೀಳಿಸುವಂತಹದ್ದು. ಕರ್ನಾಟಕದಲ್ಲಿ 2007 ರಲ್ಲಿ1004ರಷ್ಟಿದ್ದ ಲಿಂಗಾನುಪಾತ 2016ರ ವೇಳೆಗೆ 896ಕ್ಕೆಕುಸಿದಿದೆ. ಆಂಧ್ರ, ತಮಿಳುನಾಡು, ತೆಲಂಗಾಣರಾಜ್ಯಗಳಲ್ಲಿ ಶಿಶುಮರಣ ಪ್ರಮಾಣ ಇಳಿಕೆಯಾಗಿದ್ದರುಲಿಂಗಾನುಪಾತದ ಪ್ರಮಾಣ ಹೆಚ್ಚಾಗುತ್ತಲೇ ಇದೆ. ವಿಶ್ವಆರ್ಥಿಕ ವೇದಿಕೆ ಪ್ರಕಟಿಸಿರುವ ಜಾಗತಿಕ ಲಿಂಗತ್ವಅಸಮಾನತೆ ಸೂಚ್ಯಾಂಕದಲ್ಲಿ ಭಾರತವು 21ನೇಸ್ಥಾನದಲ್ಲಿದೆ. ಆರ್ಥಿಕ ಚಟುವಟಿಕೆ, ಉದ್ಯೋಗ, ಆರೋಗ್ಯ ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆವಿಚಾರದಲ್ಲಿ ಭಾರತದ ಮುಂದೆ ಬಹುದೊಡ್ಡ ಸವಾಲುಇದೆ. ರಾಜಕೀಯ ಅಧಿಕಾರ, ಆರೋಗ್ಯ ಜೀವನ ನಿರೀಕ್ಷೆಮತ್ತು ಸಾಕ್ಷರತೆಯ ವಿಚಾರದಲ್ಲಿ ಲಿಂಗ ಸಮಾನತೆಹೆಚ್ಚಿರುವುದೇ ಜಾಗತಿಕ ಸೂಚ್ಯಾಂಕದಲ್ಲಿ ಭಾರತದ ಸ್ಥಾನಕುಸಿಯಲು ಕಾರಣ. ಮೊದಲು ಇಂತಹ ವಿಚಾರದಲ್ಲಿದೇಶ ಫಿಟ್ ಆಗಿದ್ದರೆ ಮಾತ್ರ ಸದೃಢ ಭಾರತವಾಗಲುಸಾಧ್ಯವಲ್ಲವೇ?
ತಾಯಂದಿರ ಮರಣ ಪ್ರಮಾಣ ಹೆಚ್ಚುತ್ತಲೇ ಇದೆ. ಹೆರಿಗೆಸಮಯದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಹುಟ್ಟಿನ ಕೆಲವೇಹೊತ್ತಿನಲ್ಲಿ ಶಿಶುಗಳ ಸಂಖ್ಯೆ ಎಷ್ಟು ಎಂದುರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸಿಕ್ಕ ಉತ್ತರಉಬ್ಬೇರಿಸುವಂತಿತ್ತು. ಅಸ್ಸಾಂ- ಉತ್ತರಪ್ರದೇಶ, ರಾಜಸ್ಥಾನ, ಒಡಿಶಾ, ಮಧ್ಯಪ್ರದೇಶ, ಛತ್ತಿಸ್ಗಡ, ಬಿಹಾರ,ಪಂಜಾಬ್ಗಳಲ್ಲಿ ಪ್ರತಿ ಒಂದು ಸಾವಿರಕ್ಕೆ 167 ಗರ್ಭಿಣಿಯರು-ಬಾಣಂತಿಯರು ಸಾವನ್ನಪ್ಪಿದ್ದಾರೆ. ಈದೇಶದಲ್ಲಿ 896 ರೋಗಿಗೆ ಒಬ್ಬ ವೈದ್ಯನಿದ್ದಾನೆ. ಹೀಗಾದರೆಹೇಗೆ ಫಿಟ್ ಇಂಡಿಯಾವಾಗಲು ಸಾಧ್ಯ?
ಇವಷ್ಟೇ ಅಲ್ಲ ಹೆಚ್ಚುತ್ತಿರುವ ವಾಯುಮಾಲಿನ್ಯ,ಜಲಮಾಲಿನ್ಯಗಳಿಂದ ದೇಶದಾದ್ಯಂತ ಕ್ಯಾನ್ಸರ್ ಪೀಡಿತರಸಂಖ್ಯೆ, ಹೃದಯರೋಗಿಗಳ ಸಂಖ್ಯೆ ಗಣನೀಯವಾಗಿಹೆಚ್ಚಾಗುತ್ತಿದೆ. ಪ್ರಕೃತಿಯ ಮೇಲೆ ಮಾನವನಸವಾರಿಯಿಂದ ಪರಿಸರ ಹಾಳಾಗಿ ಹೋಗುತ್ತಿದೆ. ಜಗತ್ತಿನಅನೇಕ ದೇಶಗಳನ್ನು ಸುತ್ತಿ ಬಂದಿರುವ ಪ್ರಧಾನಿಯವರುಭಾರತ ‘ಫಿಟ್ ಇಂಡಿಯಾ’ ಆಗಬೇಕು ಎಂಬ ಕನಸನ್ನುಒಪ್ಪೋಣ. ಮಾಧ್ಯಮಗಳಲ್ಲಿ ಬೊಬ್ಬೆ ಹಾಕಿದರೆ ಫಿಟ್ಇಂಡಿಯಾವಾಗದು.ಅದನ್ನು ಕಾರ್ಯರೂಪಕ್ಕೆತರಬೇಕಾದರೆ ಹಳಿತಪ್ಪಿರುವ ಅರ್ಥವ್ಯವಸ್ಥೆಯನ್ನುಸರಿಪರಿಸಬೇಕು. ಉದ್ಯೋಗ ಸೃಷ್ಟಿ, ಪರಿಸರಸಮತೋಲನ, ಆರೋಗ್ಯ ಹೀಗೆ ಎಲ್ಲಾ ಕ್ಷೇತ್ರಗಳುಅಭಿವೃದ್ಧಿ ಕಂಡು ಅದರ ಫಲ ಪ್ರತಿಯೊಬ್ಬ ನಾಗರಿಕನಮನೆಬಾಗಲಿಗೆ ಹೋದಾಗ ಮಾತ್ರವೇ ಫಿಟ್ಇಂಡಿಯಾವಾದೀತು. ಇವೆಲ್ಲದರಿಂದ ರೋಸಿ ಹೋದಯುವಜನತೆ ‘ಮೋದಿ ಕ್ವಿಟ್ ಇಂಡಿಯಾ’ ಎನ್ನವುದಕ್ಕೂಮೊದಲು ಜಾಗೃತರಾಗಿ. ಭಾರತವನ್ನು ಎಲ್ಲಾಅಂಶಗಳಿಂದಲೂ ಫಿಟ್ ಇಂಡಿಯಾ ಮಾಡಿ. ಆಗ ಎಲ್ಲವರ್ಗದ ಜನತೆಯೂ ‘ಫಿಟ್ ಇಂಡಿಯಾ’ ಚಳವಳಿಯನ್ನುಒಪ್ಪುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.
ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.
ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ6 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ10 hours agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ3 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ2 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

