ದಿನದ ಸುದ್ದಿ
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
ಸುದ್ದಿದಿನ, ಬೆಂಗಳೂರು : ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.
ಈ ಯೋಜನೆಗಳ ಜಾರಿ ಹೇಗೆ, ಫಲಾನುಭವಿಗಳ ಆಯ್ಕೆ ಮಾನದಂಡ, ಸರ್ಕಾರದ ಮೇಲೆ ಬೀಳಬಹುದಾದ ಆರ್ಥಿಕ ಹೊರೆ ಮುಂತಾದ ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಿ, ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243