ಲೈಫ್ ಸ್ಟೈಲ್
ಕಿವಿಗೆ ‘ಹೂ’ವಿಟ್ಟಳಾ ಸುಂದರಿ..!

ಕಿವಿ ಮೇಲೆ ಫ್ಲವರ್ ಕಮಾಲ್..!
ಸಾಮಾನ್ಯವಾಗಿ ಹೆಣ್ಣು ಮಕ್ಕಳಿಗೆ ಹೂ ಎಂದರೆ ಪಂಚಪ್ರಾಣ. ಬಣ್ಣ ಬಣ್ಣದ ಆಕರ್ಷಕ ಹೂಗಳು ಎಲ್ಲರ ಗಮನ ಸೆಳೆಯುತ್ತವೆ. ಹೆಣ್ಣು ಮಕ್ಕಳು ಮುಡಿಗೆ ಮಲ್ಲೆ, ಕನಕಾಂಬರ, ಜಾಜಿ, ಸೇವಂತಿ ಕುಡಿಯುವುದು ಸರ್ವೇಸಾಮಾನ್ಯ. ಹಿಂದೆಲ್ಲ ಹೆಣ್ಣು ಮಕ್ಕಳು ಸೈಡ್ ರೋಸ್ ಮುಡಿಯುತ್ತಿದ್ದರು.ಕಾಲ ಬದಲಾದಂತೆ ಹೆಣ್ಣು ಮಕ್ಕಳು ಹೂ ಮುಡಿಯುವುದನ್ನೇ ಮರೆತರೇನೋ ಅನ್ನುವಷ್ಟರಲ್ಲಿ ಹೆಂಗಳೆಯರ ಕಿವಿ ಮೇಲೆ ಫ್ಲವರ್ ಅರಳಿದೆ.
ಲೂಸ್ ವೆಟ್ ಹೇರ್ ಜೊತೆ ಸಮುದ್ರದ ಬಳಿ ಸಿಗುವ ಬಿಳಿ ಹೂಗಳನ್ನು ಕಿವಿಯ ಹಿಂಬದಿಯಲ್ಲಿ ಸಿಕ್ಕಿಸಿಕೊಂಡು ಫೋಟೋ ಕ್ಲಿಕ್ಕಿಸುವುದು ಈಗ ವೈರಲ್ ಆಗಿದೆ. ಬೀಚ್ ಫೋಟೋ ಶೂಟ್ ಗಳಲ್ಲಂತೂ ಕಿವಿ ಮೇಲೆ ಫ್ಲವರ್ ಅರಳಿದ ಮೇಲೇ ಕ್ಲಿಕ್ ಬಟನ್ ಒತ್ತುವುದು.
ಬಾಲಿವುಡ್, ಟಾಲಿವುಡ್, ಸ್ಯಾಂಡಲ್ ವುಡ್ ನ ನಟೀಮಣಿಯರೂ ಈ ಬೀಚ್ ಫ್ಲವರ್ ಗೆ ಫುಲ್ ಫಿದಾ ಆದಂತಿದೆ. ಅದಕ್ಕೆ ಸಾಕ್ಷಿ ಇಲ್ಲಿದೆ ನೋಡಿ.
ಪಂಚಭಾಷಾ ನಟಿ ಚಾರ್ಮೀ, ಇಲಿಯಾನಾ, ತ್ರಿಶಾ, ಕನ್ನಡ ದ ಅನುಶ್ರೀ, ಸಂಗೀತ, ರಾಧಿಕಾ ಪಂಡಿತ್ ರಮ್ಯಾ… ಹಲವಾರು ನಟಿಯರ ಕಿವಿಯ ಮೇಲೆ ಫ್ಲವರ್ ಅರಳಿದೆ.
ಸ್ವಿಮ್ಮಿಂಗ್ ಪೂಲ್, ಬೀಚ್ ಫೋಟೋ ಶೂಟ್ ಗಳ ಪ್ಲಾನ್ ನಿಮ್ಮದಾದಲ್ಲಿ ಕಿವಿಯ ಮೇಲಿನ ಫ್ಲವರ್ ಮರೆಯದಿರಿ.
ಲೈಫ್ ಸ್ಟೈಲ್
ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಪರಿಹಾರ ; ಮಿಸ್ ಮಾಡ್ದೆ ಓದಿ..!

- ಸಂಗಮೇಶ ಎನ್ ಜವಾದಿ
ಮನುಷ್ಯ ಆರೋಗ್ಯವಾಗಿ ಇರಬೇಕೆಂದರೆ,ದೇಹದ ಎಲ್ಲಾ ಭಾಗಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿರಬೇಕು. ಒಂದು ವೇಳೆ ದೇಹದ ಯಾವುದೋ ಭಾಗದಲ್ಲಿ ವ್ಯತ್ಯಾಸ ಉಂಟಾದರೆ,ಮನಸ್ಸಿಗೆ ಕಸವಿಸಿ ಯಾಗುವುದಂತು ನಿಜ,ಈ ಎಲ್ಲಾ ಕಾರಣಗಳು ಗಮನಿಸಿ ಮನುಷ್ಯನ ಅತಿ ಮುಖ್ಯವಾದ ಹೊಟ್ಟೆ ಗ್ಯಾಸ್ ಸಮಸ್ಯೆಯ ಪರಿಹಾರ ಕುರಿತು ಇಲ್ಲಿ ಬರೆಯಲು ಪ್ರಯತ್ನ ಮಾಡಿರುತ್ತೇವೆ.
ಹಾಗಾಗಿ ಕೆಲವೊಮ್ಮೆ ಮನುಷ್ಯನ ಮುಜುಗರಕ್ಕೆ ಎಡೆಮಾಡುವ ಗ್ಯಾಸ್ ಸಮಸ್ಯೆಯು ಹೊಟ್ಟೆಯಲ್ಲಿ ಸೆಳೆತ, ಹೊಟ್ಟೆ ಉಬ್ಬು, ಹೊಟ್ಟೆ ಭಾರ ಹಾಗೂ ಎದೆ ಉರಿಯಂತಹ ಸಮಸ್ಯೆಯನ್ನು ಹೆಚ್ಚಿಸುವುದು ಸೇರಿದಂತೆ ಜೀರ್ಣಕ್ರಿಯೆ ಸುಗಮವಾಗಿ ನೆರವೇರದೆ ಅನಿಲವು ಸಂಗ್ರಹವಾಗುವ ಸ್ಥಿತಿಯೇ ಹೊಟ್ಟೆ ಉಬ್ಬರ ಅಥವಾ ಗ್ಯಾಸ್ ಸಮಸ್ಯೆಗೆ ಕಾರಣವಾಗುತ್ತದೆ.ಹಾಗು ಇದಲ್ಲದೆ ಮನುಷ್ಯನ ಮನಸ್ಸು ಬಯಸಿದ ಊಟ-ತಿಂಡಿ ಸಿಕ್ಕಾಗ ಖುಷಿಯಿಂದ ಸೇವಿಸುತ್ತೇವೆ.
ಆದರೆ ಅದರ ಪರಿಣಾಮ ಹೊಟ್ಟೆಯಲ್ಲಿ ಗ್ಯಾಸ್ ತುಂಬುವ ಸಮಸ್ಯೆಯನ್ನು ಉಂಟುಮಾಡಬಹುದು. ಪದೇ ಪದೇ ಗಾಸ್ ಬಿಡುಗಡೆಯಾಗುವುದು, ಹೊಟ್ಟೆಯಲ್ಲಿ ನೋವು ಹಾಗೂ ಬಳಲಿಕೆ ಉಂಟಾಗುತ್ತದೆ. ಕೆಲವೊಮ್ಮೆ ಸಭೆ-ಸಮಾರಂಭಗಳ ನಡುವೆ ಇರುವಾಗ ಗ್ಯಾಸ್ ಸಮಸ್ಯೆಯು ಅಧಿಕವಾಗಿ ಕಾಡುವ ಸಾಧ್ಯತೆಗಳು ಇರುತ್ತವೆ. ಆಗ ಸಾಕಷ್ಟು ಇರುಸು-ಮುರಿಸು ಉಂಟಾಗುವುದು ಸಹಜ.
ಹೊಟ್ಟೆಯಲ್ಲಿರುವ ಗ್ಯಾಸ್ ಹೊರಗೆ ಹೋದರೆ ಅಷ್ಟು ಸಮಸ್ಯೆ ಎನಿಸದು. ಅದು ಹೊಟ್ಟೆಯಲ್ಲಿಯೇ ಉಳಿದುಕೊಂಡಾಗ ಸಮಸ್ಯೆ ಅಧಿಕವಾಗುವುದಂತು ಗ್ಯಾರಂಟಿ ಎನ್ನುವುದು ಸುಳ್ಳಲ್ಲ.ಹಾಗಾಗಿ ನಾವು ಸೇವಿಸುವ ದೈನಂದಿನ ಆಹಾರ ಸಮತೋಲನ ಹಾಗೂ ಆರೋಗ್ಯ ಪೂರ್ಣವಾಗಿರಬೇಕು. ಬೀನ್ಸ್, ಎಲೆಕೋಸು, ಕಡಲೆ, ಸಕ್ಕರೆ ಯ ಪದಾರ್ಥಗಳು ಹೆಚ್ಚಿನ ಕಾರ್ಬನ್ಗಳನ್ನು ಒಳಗೊಂಡಿರುತ್ತವೆ.
ಅವು ಹೊಟ್ಟೆಯಲ್ಲಿ ಸುಲಭವಾಗಿ ಜೀರ್ಣವಾಗುವುದಿಲ್ಲ. ಅವು ಕೊಲೋನ್ ಮೂಲಕ ಹಾದುಹೋಗುತ್ತವೆ. ಅಲ್ಲದೆ ಬಹಳಷ್ಟು ಬ್ಯಾಕ್ಟೀರಿಯಾಗಳಿಂದಲೂ ಕೂಡಿರುತ್ತದೆ. ಅವು ಹೆಚ್ಚು ಅನಿಲವನ್ನು ಬಿಡುಗಡೆ ಮಾಡುವುದರ ಮೂಲಕ ಅನಾರೋಗ್ಯ ಹಾಗೂ ಗ್ಯಾಸ್ ಸಮಸ್ಯೆಯನ್ನು ಸೃಷ್ಟಿಸುತ್ತವೆ.ಆದ್ದರಿಂದ ಇದನ್ನು ತಡೆಗಟ್ಟಲು ಹಲವಾರು ಕ್ರಮಗಳು ಇಂದಿನ (ಮನೆಗಳಲ್ಲಿ)ದಿನಗಳಲ್ಲಿ ಕಾಣುತ್ತೇವೆ.
ಈ ನಿಟ್ಟಿನಲ್ಲಿ ಗ್ಯಾಸ್ ಸಮಸ್ಯೆಗೆ ಪರಿಹಾರ, ಮನೆಮದ್ದು ಇದನ್ನು ನಾವು ಸರಿಯಾದ ರೀತಿಯಲ್ಲಿ ಬಳಕೆ ಮಾಡಿದರೆ ಖಂಡಿತಾ ಈ ಸಮಸ್ಯೆಗೆ ಮುಕ್ತಿ ಪಡೆಯಬಹುದು.
ಕ್ಯಾರಮ್ ಬೀಜ
ಓಂಕಾಳು ಅಥವಾ ಕ್ಯಾರಮ್ ಬೀಜದಲ್ಲಿ ಥೈಮೋಲ್ ಎಂಬ ಸಂಯುಕ್ತವಿದೆ. ಇದು ಜೀರ್ಣ ಕ್ರಿಯೆಗೆ ಸಹಾಯ ಮಾಡುವುದು. ಹೊಟ್ಟೆಯಲ್ಲಿ ಉಂಟಾಗುವ ಗ್ಯಾಸ್ ಸಮಸ್ಯೆಯನ್ನು ನಿವಾರಿಸಲು ಕ್ಯಾರಮ್ ಬೀಜವನ್ನು ಸೇವಿಸಬೇಕು. ನಿತ್ಯವೂ ಒಂದು ಬಾರಿ ಅರ್ಧಟೀ ಚಮಚ ಓಂಕಾಳನ್ನು ಜಗೆದು ನೀರನ್ನು ಕುಡಿಯಬಹುದು. ಇಲ್ಲವೇ ನೀರಿಗೆ ಸೇರಿಸಿ, ಕಷಾಯವನ್ನು ತಯಾರಿಸಿಯೂ ಕುಡಿಯಬಹುದು. ಈ ವಿಧಾನವು ಬಹುಬೇಗ ಆರೈಕೆಯನ್ನು ಮಾಡುವುದು.
ಜೀರಿಗೆ ನೀರು (ಉಗುರು ಬೆಚ್ಚಗಿನ ನೀರು)
ಗ್ಯಾಸ್ಟ್ರಿಕ್ ಅಥವಾ ಗ್ಯಾಸ್ ಸಮಸ್ಯೆಗೆ ಜೀರಿಗೆ ನೀರು ಕುಡಿಯುವುದು ಉತ್ತಮ ಮನೆಮದ್ದು. ಜೀರಾ ಅಥವಾ ಜೀರಿಗೆ ಜೀವಾಣು ಗ್ರಂಥಿಗಳನ್ನು ಉತ್ತೇಜಿಸುವ ಸಾರಭೂತ ತೈಲಗಳನ್ನು ಒಳಗೊಂಡಿರುತ್ತದೆ. ಇದು ಆಹಾರದ ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೆಚ್ಚುವರಿ ಅನಿಲದ ರಚನೆಯನ್ನು ತಡೆಯುತ್ತದೆ ಎಂದು ಎಂದು ತಜ್ಞರು ಹೇಳುತ್ತಾರೆ.
ಎರಡು ಕಪ್ ನೀರಿಗೆ ಒಂದು ಟೀ ಚಮಚ ಜೀರಿಗೆ ಸೇರಿಸಿ, 15-20 ನಿಮಿಷಗಳ ಕಾಲ ಚೆನ್ನಾಗಿ ಕುದಿಸಿ. ನಂತರ ಸ್ವಲ್ಪ ಕಾಲ ತಣಿಯಲು ಬಿಡಿ. ಊಟ ಆದ ನಂತರ ಈ ಜೀರಿಗೆ ನೀರನ್ನು ಸೇವಿಸಿ. ಆಗ ನಿಮ್ಮ ಹೊಟ್ಟೆಯಲ್ಲಿ ಗ್ಯಾಸ್ ತುಂಬುವ ಪ್ರಕ್ರಿಯೆಯನ್ನು ಸುಲಭವಾಗಿ ತಡೆಯಬಹುದು.
ಅಸಫೊಯೆಟಿಡಾ / ಇಂಗು
ಗ್ಯಾಸ್ ಸಮಸ್ಯೆಯಿಂದ ಬಳಲುವವರು ಅರ್ಧ ಟೀ ಚಮಚ ಇಂಗ್ ಅನ್ನು ಒಂದು ಲೋಟ ಮಜ್ಜಿಗೆಗೆ ಅಥವಾ ಉಗುರು ಬೆಚ್ಚಗಿನ ನೀರಿನಲ್ಲಿ ಸೇರಿಸಿ ಕುಡಿಯಬಹುದು. ಈ ವಿಧಾನದಿಂದ ಬಹುಬೇಗ ಗ್ಯಾಸ್ ಸಮಸ್ಯೆಯನ್ನು ನೀವು ನಿವಾರಿಸಿಕೊಳ್ಳಬಹುದು. ಇಂಗು ನಿಮ್ಮ ಹೊಟ್ಟೆಯಲ್ಲಿ ಹೆಚ್ಚುವರಿ ಅನಿಲವನ್ನು ಉತ್ಪಾದಿಸುವ ಕರುಳಿನ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ತಡೆಯುತ್ತದೆ.ಇಂಗು ವಾಯು ವಿರೋಧಿ ಆಗಿ ಕಾರ್ಯನಿರ್ವಹಿಸುತ್ತದೆ. ಆಯುರ್ವೇದದ ಪ್ರಕಾರ ದೇಹದ ವಾತ ದೋಶವನ್ನು ಸಮತೋಲನಗೊಳಿಸಲು ಇಂಗು ಸಹಾಯ ಮಾಡುತ್ತದೆ.
ಶುಂಠಿ
ಶುಂಠಿಯು ಆಯುರ್ವೇದದಲ್ಲಿ ಅತ್ಯುತ್ತಮ ಔಷಧಿ ಮೂಲ ಎಂದು ಗುರುತಿಸಲಾಗಿದೆ. ಇದು ವಿವಿಧ ಆರೋಗ್ಯ ಸಮಸ್ಯೆಗಳನ್ನು ಬಹುಬೇಗ ನಿವಾರಿಸುವುದು. ಗ್ಯಾಸ್ ಸಮಸ್ಯೆ ಅಥವಾ ಹೊಟ್ಟೆ ಉಬ್ಬರದ ಸಮಸ್ಯೆ ಹೊಂದಿರುವ ವ್ಯಕ್ತಿಗಳು ಶುಂಠಿಯ ಪರಿಹಾರ ಕಂಡುಕೊಳ್ಳಬಹುದು. ತಾಜಾ ಶುಂಠಿಯ ತುರಿಯನ್ನು ನಿಂಬೆ ರಸದೊಂದಿಗೆ ಸೇರಿಸಿ, ಸೇವಿಸಬೇಕು.
ಈ ಕ್ರಮವನ್ನು ಊಟದ ನಂತರ ಸೇವಿಸಿದರೆ ಉತ್ತಮ ಪರಿಹಾರ ನೀಡುವುದು. ಊಟದ ನಂತರ ಬೆಚ್ಚಗಿನ ಶುಂಠಿ ಚಹಾ ಸೇವಿಸುವುದರಿಂದಲೂ ಹೊಟ್ಟೆ ಉಬ್ಬರ ಗುಣಮುಖವಾಗುವುದು. ಶುಂಠಿ ನೈಸರ್ಗಿಕ ಕಾರ್ಮಿನೇಟಿವ್ ಆಗಿ ಕಾರ್ಯನಿರ್ವಹಿಸುತ್ತದೆ.
ನಿಂಬೆ ರಸ
ಮಾಂಸಹಾರ, ಸಮಾರಂಭಗಳ ಊಟ-ತಿಂಡಿಯಿಂದ ಹೊಟ್ಟೆಯಲ್ಲಿ ಗ್ಯಾಸ್ ತುಂಬುವುದು ಸಾಮಾನ್ಯ. ಅಂತಹ ಸಂದರ್ಭದಲ್ಲಿ ಒಂದು ಟೀ ಚಮಚ ನಿಂಬೆ ಸರಕ್ಕೆ ಅರ್ಧ ಟೀ ಚಮಚ ಅಡುಗೆ ಸೋಡವನ್ನು ಸೇರಿಸಿ, ಒಂದು ಕಪ್ ನೀರಿನಲ್ಲಿ ಬೆರೆಸಿ. ನಂತರ ಸೇವಿಸಿ. ಇದರಿಂದ ಗ್ಯಾಸ್ ಸಮಸ್ಯೆ ಬಗೆಹರಿಯುವುದು. ಊಟದ ನಂತರ ಈ ಕ್ರಮ ಅನುಸರಿಸಿದರೆ ಹೊಟ್ಟೆಯಲ್ಲಿ ಉತೊತ್ತಿಯಾಗುವ ಕಾರ್ಬನ್ ಡೈ ಆಕ್ಸೈಡ್ಅನ್ನು ದೇಹದ ಹೊರಗೆ ಹೋಗುವಂತೆ ಉತ್ತೇಜನ ನೀಡುತ್ತದೆ. ಜೊತೆಗೆ ಜೀರ್ಣಕ್ರಿಯೆ ಸುಲಭವಾಗುವಂತೆ ಮಾಡುವುದು.
ತ್ರಿಫಲ ಪುಡಿ
ಕುದಿಯುವ ನೀರಿಗೆ ಅರ್ಧ ಟೀ ಚಮಚ ತ್ರಿಫಲ ಪುಡಿಯನ್ನು ಸೇರಿಸಿ, 15 -20 ನಿಮಿಷ ಕುದಿಸಿ. ನಂತರ ಒಂದೆಡೆ ಇಡಿ. ಊಟದ ನಂತರ ತ್ರಿಫಲ ದ್ರಾವಣ ಅಥವಾ ನೀರನ್ನು ಕುಡಿಯಿರಿ. ಇದನ್ನು ಅತಿಯಾಗಿ ಕುಡಿದರೂ ಹೊಟ್ಟೆ ಉಬ್ಬರ ಉಂಟಾಗುವುದು. ಹಾಗಾಗಿ ಮಿತವಾದ ಸೇವನೆ ಮಾಡುವುದು ಉಚಿತ. ಅಲ್ಲದೆ ಸಮಸ್ಯೆಯೂ ನಿವಾರಣೆಯಾಗುವುದು. ಆಗಾಗ ಹೊಟ್ಟೆಯಲ್ಲಿ ಗ್ಯಾಸ್ ಅಥವಾ ಅನಿಲ ತುಂಬುವ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ಅದು ಸಾಮಾನ್ಯ ಸಂಗತಿಯಾಗಿರುತ್ತದೆ. ಇದು ನಮ್ಮಲ್ಲಿ ಹೆಚ್ಚಿನವರಿಗೆ ಸಂಭವಿಸುತ್ತದೆ. ಅದಕ್ಕಾಗಿ ಮನೆ ಮದ್ದು ಬಳಸಿದರೆ ಬಹುಬೇಗ ಶಮನವಾಗುವುದು.
ಆದರೆ ಈ ಸಮಸ್ಯೆ ನಿಯಮಿತವಾಗಿ ಬರುತ್ತಿದೆ ಅಥವಾ ಬಳಲುತ್ತಿದ್ದೀರಿ ಎಂದಾದರೆ ಇದು ಲ್ಯಾಕ್ಟೋಸ್ ಅಸಹಿಷ್ಣುತೆ, ಹಾರ್ಮೋನುಗಳ ಅಸಮತೋಲನ ಅಥವಾ ಕೆಲವು ರೀತಿಯ ಕರುಳಿನ ಅಡಚಣೆಯಂತಹ ಗಂಭೀರ ಅಸ್ವಸ್ಥತೆಯ ಸಂಕೇತವಾಗಿರ ಬಹುದು. ಮಾತ್ರೆಗಳನ್ನು ಹಾಕುವ ಬದಲು ನೈಸರ್ಗಿಕ ಪರಿಹಾರಗಳನ್ನು ಆಶ್ರಯಿಸುವುದು ಯಾವಾಗಲೂ ಒಳ್ಳೆಯದು. ಆದರೆ ಸಮಸ್ಯೆ ಮುಂದುವರಿದರೆ ನಿಮ್ಮ ವೈದ್ಯರನ್ನು ಭೇಟಿಯಾಗಿ ಸಮಸ್ಯೆಯ ಬಗ್ಗೆ ಪರಿಶೀಲನೆ ಹಾಗೂ ಚಿಕಿತ್ಸೆ ಪಡೆಯುವುದು ಸೂಕ್ತ.
ಕೊನೆಯ ಮಾತು
ಕೊಲೆಸ್ಟ್ರಾಲ್ ಮತ್ತು
ಮಸಾಲೆ ಪದಾರ್ಥಗಳನ್ನು ತಿನ್ನುವುದು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು ಜೊತೆಗೆ ವ್ಯಾಯಾಮ ಮಾಡುವುದು ಹಾಗ ಬೆಳಿಗ್ಗೆ ಎದ್ದ ಕೂಡಲೇ ಉಗುರು ಬೆಚ್ಚಗಿನ ನೀರು ಸೇವಿಸುವುದು ಅತ್ಯುತ್ತಮ ಎನ್ನಬಹುದಾಗಿದೆ.ಹೀಗೆ ನಾವು ನಮ್ಮ ಮನೆಯಲ್ಲಿ ಸೀಗುವ ಪದಾರ್ಥಗಳನ್ನು ಉಪಯೋಗಿಸಿಕೊಂಡು ಹೊಟ್ಟೆಯ ಗ್ಯಾಸ್ ಸಮಸ್ಯೆಯನ್ನು ತಡೆಗಟ್ಟಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಲೈಫ್ ಸ್ಟೈಲ್
ಪಕ್ಷಿ ಪರಿಚಯ | ಬೆಳ್ಗಣ್ಣ

- ಭಗವತಿ ಎಂ.ಆರ್, ಛಾಯಾಗ್ರಾಹಕಿ, ಕವಯಿತ್ರಿ
ಸದಾ ಚಟುವಟಿಕೆಯಿಂದ ಪುಟಿಯುವ ಹಳದಿ ಬಣ್ಣದ ಹಕ್ಕಿ ಬೆಳ್ಗಣ್ಣ. ಇದಕ್ಕೆ ಬಿಳಿಗಣ್ಣಿನ (Indian white-eye, Birds) ಚಿಟಗುಬ್ಬಿ ಎಂಬ ಮುದ್ದಾದ ಹೆಸರೂ ಇದೆ. ನೋಡಲು ಸಪೂರವಾಗಿದ್ದು, ಕಣ್ಣಿನ ಸುತ್ತ ಬಿಳಿಯ ಉಂಗುರವೇ ಇದರ ಆಕರ್ಷಣೆ. ಇವು ನೆಲದ ಮೇಲೆ ಕಾಣಿಸಿಕೊಳ್ಳುವುದು ಅಪರೂಪ. ಜೋಡಿಯಾಗಿ ಅಥವಾ ಗುಂಪುಗಳಲ್ಲಿ ಇರುತ್ತವೆ.
ಇವುಗಳ ಮುಖ್ಯ ಆಹಾರ ಕೀಟಗಳು. ಹಣ್ಣು, ಹೂವಿನ ಗಿಡಗಳಿರುವಲ್ಲಿ ಕೊಂಬೆಯಿಂದ ಕೊಂಬೆಗೆ ಹಾರುತ್ತಾ, ನೇತಾಡುತ್ತಾ ಇರುತ್ತವೆ. ಇವು ಗೂಡು ಬಟ್ಟಲಾಕಾರವಾಗಿದ್ದು, ತಿಳಿ ನೀಲಿ ಬಣ್ಣದ ಮೊಟ್ಟೆ ಇಡುತ್ತವೆ. ಸಾಧಾರಣವಾಗಿ ಎರಡರಿಂದ ಮೂರು ಮೊಟ್ಟೆಗಳನ್ನಿಡುತ್ತವೆ.
ಗೂಡು ಕಟ್ಟುವಾಗ ಬೇರೆ ಹಕ್ಕಿಗಳ ಗೂಡಿನ ವಸ್ತುಗಳನ್ನು ಇವು ಕದಿಯುತ್ತವೆ ಎಂದು ಪಕ್ಷಿತಜ್ಞರು ಹೇಳುತ್ತಾರೆ. ಹಸಿರು ಮಿಶ್ರಿತ ಹಳದಿ ಬಣ್ಣದ ಇವು ಗಿಡಗಳ ಮೇಲೆ ಕೂತದ್ದು, ಹಾರಿ ಹೋಗುವುದು ಗೊತ್ತಾಗುವುದೇ ಇಲ್ಲ. ಅಂಥ ಚುರುಕಿನ ಹಕ್ಕಿಗಳು ಇವು. ವಿಪರೀತ ಚಟುವಟಿಕೆಯ (Hyperactive) ಸ್ವಭಾವಕ್ಕೆ ಉತ್ತಮ ಉದಾಹರಣೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಲೈಫ್ ಸ್ಟೈಲ್
ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ

ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ12, 1863 – ಜುಲೈ 4,1902) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12 ರಂದು ರಾಷ್ಟ್ರೀಯ “ಯುವದಿನ“ವೆಂದು ಆಚರಿಸಲಾಗುತ್ತದೆ.
ದೇಶವನ್ನು ಮುನ್ನಡೆಸಲು ಸಶಕ್ತವಾದ ಯುವಪಡೆಯನ್ನು ನಿರ್ಮಿಸುವುದೇ ನನ್ನ ಗುರಿ ಎನ್ನುತ್ತಿದ್ದರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ; ಮಾನಸಿಕ, ದೈಹಿಕ, ಅಧ್ಯಾತ್ಮಿಕ, ನೈತಿಕ, ಸಾಮಾಜಿಕವಾಗಿ ಎಂದೂ ಶಕ್ತಿ ಕಳೆದುಕೊಳ್ಳಬಾರದು ಯುವಕರಿಗೆ ಕರೆ ನೀಡಿದ್ದರು. ಇಂದು ವಿವೇಕವಾಣಿಯ ಒಂದಿಷ್ಟು ಅಂಶ ನಮ್ಮ ಯುವ ಪೀಳಿಗೆಯ ತಲೆ ಒಳಗೆ ಹೊಕ್ಕರೆ, ಭಾರತೀಯ ಸಂಸ್ಕೃತಿಯ ಉಳಿಸಿ, ಬೆಳಸಲು ಸಾಧ್ಯವಾಗುತ್ತದೆ.
1985ರ ನಂತರ ಭಾರತದಲ್ಲಿ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬವನ್ನು “ರಾಷ್ಟ್ರೀಯ ಯುವ ದಿನ” ಎಂದು ಘೋಷಿಸಲಾಗಿದ್ದು, ಈಗಲೂ ಆಚರಣೆಯಲ್ಲಿದೆ ಎಂಬುದಷ್ಟೇ ಸಂತೋಷ. ಇಂದು ದೇಶದಾದ್ಯಂತ ಆಚರಣೆ ಜಾರಿಯಲ್ಲಿದ್ದು, ಶಾಲಾ, ಕಾಲೇಜು ಅಲ್ಲಲ್ಲಿ ಮೆರವಣಿಗೆ, ಪ್ರಬಂಧ ಸ್ಪರ್ಧೆ, ಭಾಷಣ, ಚರ್ಚಾಕೂಟದಲ್ಲಿ ಪಾಲ್ಗೊಂಡು ವಿವೇಕಾನಂದರರ ಸಂದೇಶ ಸಾರುವಲ್ಲಿ ತೊಡಗಿದ್ದಾರೆ.
ಸ್ವಾಮಿ ವಿವೇಕಾನಂದರು ತಮ್ಮ ಶಕ್ತಿಯುತ ವ್ಯಕ್ತಿತ್ವದ ಮೂಲಕ, ಅಪೂರ್ವ ವಾಗ್ಮೀಯತೆ ಹಾಗೂ ಪ್ರಚೋದನಾತ್ಮಕ ಬರವಣಿಗೆ ಮೂಲಕ ನಮ್ಮ ರಾಷ್ಟ್ರ ಚೇತವನ್ನು ಜಾಗೃತಗೊಳಿಸಿ, ಯುವಕರಲ್ಲಿ ನವೋತ್ಸಾಹವನ್ನು ಕೆರಳಿಸಿ, ಅವರಲ್ಲಿ ನಮ್ಮ ಸಂಸ್ಕೃತಿಯ ಬಗ್ಗೆ ಹೆಮ್ಮೆಯನ್ನು ಕುದುರಿಸಿ ಸ್ವತಂತ್ರ ನವ ಭಾರತ ನಿರ್ಮಾಣಕ್ಕೆ ಬುನಾದಿಯನ್ನು ಹಾಕಿದರು.
ವಿಶ್ವ ಪರ್ಯಟನೆ
ವಿವೇಕಾನಂದರು ಭಾರತದ ತತ್ವಜ್ಞಾನ, ಯೋಗ, ವೇದಾಂತ ಇವೆಲ್ಲವನ್ನು ಪಾಶ್ಚಿಮಾತ್ಯದೇಶಗಳಲ್ಲಿ ಪ್ರಚಾರ ಮಾಡಿದರು. ಅವರು ತಮ್ಮ ಗುರುಗಳ ಒಳ್ಳೆಯ ಮನೋಭಾವದ ಕಡೆಗೆ ವಾಲಿದರು. ಅವರು ಸನ್ಯಾಸಿಯಾಗಿ ದೇವರಸೇವೆ ಹೇಗೆ ಮಾಡಬಹುದೆಂದು ನಿರೂಪಿಸಿದರು. ಗುರು ರಾಮಕೃಷ್ಣರ ಮರಣಾ ನಂತರ ವಿವೇಕಾನಂದರು ಭಾರತ ಪ್ರವಾಸ ಕೈಗೊಂಡರು.
ಭಾರತದ ಉಪಖಂಡದಲ್ಲಿ ಬ್ರಿಟೀಷರ ಷರತ್ತುಗಳನ್ನು ಆಧ್ಯಯನ ಮಾಡಿದರು. ನಂತರ ಅವರು ಅಮೇರಿಕಾ ಪ್ರವಾಸ ಕೈಗೊಂಡರು. 1893ರಲ್ಲಿ ಚಿಕಾಗೋದಲ್ಲಿ ನಡೆದ ಸಮ್ಮೇಳನದಲ್ಲಿ ಭಾರತೀಯರ ಧಾರ್ಮಿಕತೆಯನ್ನು ಎತ್ತಿ ಹಿಡಿದರು. ವಿವೇಕಾನಂದರು ನೂರಕ್ಕು ಹೆಚ್ಚು ಖಾಸಗಿ ಹಿಂದೂಸಂಸ್ಥೆಗಳಲ್ಲಿ ತಮ್ಮ ವಿಚಾರಧಾರೆಯನ್ನು ಹರಿಸಿದರು. ದೇಶ ವಿದೇಶಗಳಲ್ಲಿ ಹಿಂದೂಧರ್ಮದ ತತ್ವವನ್ನು ಭೋಧಿಸಿದರು.
ಅವರು ಪ್ರಪಂಚದಾದ್ಯಂತ ಪ್ರಯಾಣ ಮಾಡಿ, ಅಲ್ಲಿನ ಭಕ್ತರನ್ನುದ್ದೇಶಿಸಿ ಮಾಡಿದ ಭಾಷಣಗಳನ್ನು ಒಟ್ಟುಗೂಡಿಸಿ ಬರೆಯಲ್ಪಟ್ಟ ಅವರ ನಾಲ್ಕು ಪುಸ್ತಕಗಳು ಹಿಂದೂ ಧರ್ಮದ ಯೋಗ ಸಿದ್ಧಾಂತವನ್ನು ತಿಳಿಯ ಬಯಸುವವರಿಗೆ, ಮೂಲಭೂತ ಪಠ್ಯಗಳೆಂದೇ ಪರಿಗಣಿತವಾಗಿವೆ.
ವಿವೇಕಾನಂದರ ನಂಬಿಕೆಗಳಲ್ಲಿ ಮುಖ್ಯವಾದುದು ನಮ್ಮಲ್ಲಿ ಎಲ್ಲರೂ ಮುಕ್ತರಾಗುವವರೆಗೆ ಯಾರೊಬ್ಬರೂ ಮುಕ್ತರಾಗಲಾರರೆಂಬುದು.
ವೈಯಕ್ತಿಕ ಮುಕ್ತಿಯ ಆಸೆಯನ್ನು ಬಿಟ್ಟು ಎಲ್ಲರ ಮುಕ್ತಿಗಾಗಿ ಶ್ರಮಿಸುವವನೇ ಅವರ ದೃಷ್ಟಿಯಲ್ಲಿ ಪ್ರಬುದ್ಧ ವ್ಯಕ್ತಿ. ವಿವೇಕಾನಂದರು, ಧರ್ಮ ಮತ್ತು ಸರ್ಕಾರ ದ ನಡುವೆ ಕಟ್ಟುನಿಟ್ಟಾದ ದೂರವಿಡುವಂತೆ ಮನವಿ ಮಾಡಿದರು. ಸಾಮಾಜಿಕ ಕಟ್ಟಲೆಗಳು ಧರ್ಮದ ಮೂಲಕ ರೂಪುಗೊಂಡಿರುತ್ತವೆಯಾದರೂ, ಸರ್ಕಾರಿ ಕೆಲಸಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಪ್ರಾಶಸ್ತ್ಯವಿರಬಾರದು ಎಂದು ಅವರ ನಂಬಿಕೆಯಾಗಿತ್ತು.
ಅವರ ಕಲ್ಪನೆಯ ಆದರ್ಶ ಸಮಾಜವೆಂದರೆ ಬ್ರಾಹ್ಮಣ ಜ್ಞಾನ, ಕ್ಷತ್ರಿಯ ಸಂಸ್ಕೃತಿ, ವೈಶ್ಯ ದಕ್ಷತೆ ಮತ್ತು ಶೂದ್ರರ ಸಮಾನತೆಯ ಮೇಲೆ ನಿಂತಿರುವಂಥ ಸಮಾಜ. ಯಾವುದೇ ಒಂದು ವರ್ಗದ ಪ್ರಾಶಸ್ತ್ಯ ಸಮಾಜದಲ್ಲಿ ಸಮಾನತೆಯನ್ನು ಹಾಳುಗೆಡವುತ್ತದೆ ಎಂಬುದು ಅವರ ಸಾಮಾಜಿಕ ದೃಷ್ಟಿ. ಆಳವಾಗಿ ಸಮಾಜವಾದಿಯಾಗಿದ್ದರೂ, ಧರ್ಮದ ಮೂಲಕ ಸಮಾಜವಾದವನ್ನು ಹೇರುವುದು ತಪ್ಪೆಂದೂ, ಸಮಾಜವಾದ ಎಂಬುದು ವೈಯಕ್ತಿಕವಾಗಿ ಸಂದರ್ಭ ಸರಿಯಿದ್ದಾಗ ಜನರು ಕೈಗೊಳ್ಳಬೇಕಾದ ನಿರ್ಧಾರವೆಂದೂ ಅವರ ದೃಷ್ಟಿ.
ಸ್ವದೇಶ ಮಂತ್ರ
ಹೋ ಜಂಬೂದ್ವೀಪದ ಮೂಲ ನಿವಾಸಿಗಳೇ, ಮರೆಯದಿರಿ, ನಿಮ್ಮ ಸ್ತ್ರೀಯರ ಆದರ್ಶ ಸೀತಾ, ಸಾವಿತ್ರಿ, ದಮಯಂತಿಯರು. ಮರೆಯದಿರಿ, ನೀವು ಪೂಜಿಸುವ ಜಗದೀಶ್ವರನು ತ್ಯಾಗಿಕುಲ ಚೂಡಾಮಣಿ, ಉಮಾವಲ್ಲಭ ಶಂಕರ. ಮರೆಯದಿರಿ, ನಿಮ್ಮ ವಿವಾಹ, ನಿಮ್ಮ ಐಶ್ವರ್ಯ, ನಿಮ್ಮ ಜೀವನ ಬರಿಯ ಇಂದ್ರಿಯ ಭೋಗಕ್ಕಲ್ಲ, ವ್ಯಕ್ತಿಗತ ಸುಖಕ್ಕಲ್ಲ. ಮರೆಯದಿರಿ, ನಿಮ್ಮ ಜನ್ಮವಿರುವುದೇ ಜಗನ್ಮಾತೆಯ ಅಡಿದಾವರೆಗಳಲ್ಲಿ ಬಲಿದಾನಕ್ಕಾಗಿ! ಮರೆಯದಿರಿ, ನಿಮ್ಮ ಸಾಮಾಜಿಕ ರಚನೆ ಅನಂತ ವಿಶ್ವವ್ಯಾಪಿ ಜಗಜ್ಜನನಿಯ ಕಾಂತಿಯನ್ನು ಪ್ರತಿಬಿಂಬಿಸುವುದಕ್ಕಾಗಿ ಇರುವುದು.
ಮರೆಯದಿರಿ, ಅಂತ್ಯಜರು, ಮೂಢರು, ದರಿದ್ರರು, ನಿರಕ್ಷರಕುಕ್ಷಿಗಳು, ಚಂಡಾಲರು ಮತ್ತು ಚಮ್ಮಾರರು – ಎಲ್ಲರೂ ನಿಮ್ಮ ರಕ್ತಬಂಧುಗಳಾದ ಸಹೋದರರು ! ವೀರಾತ್ಮರೇ, ಧೀರರಾಗಿ, ನೆಚ್ಚುಗೆಡದಿರಿ. ಭಾರತೀಯರು ನಾವು ಎಂದು ಹೆಮ್ಮೆ ತಾಳಿ. ಸಾರಿ ಹೇಳಿ, ಭಾರತೀಯರು ನಾವು, ಭಾರತೀಯರೆಲ್ಲ ನಮ್ಮ ಸಹೋದರರು.
ಸಾರಿ ಹೇಳಿ, ಮೂರ್ಖ ಭಾರತೀಯರೂ ನಮ್ಮ ಸಹೋದರರು, ಬ್ರಾಹ್ಮಣ ಭಾರತೀಯರೆಮ್ಮ ಸಹೋದರರು, ಪಂಚಮ ಭಾರತೀಯರೆಮ್ಮ ಸಹೋದರರು. ನೀವು ಒಂದು ಚಿಂದಿಬಟ್ಟೆಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದರೂ ಕೂಡ, ಅಭಿಮಾನಪೂರ್ವಕವಾಗಿ ದಿಕ್ತಟಗಳು ಅನುರಣಿತವಾಗುವಂತೆ ತಾರಸ್ವರದಿಂದ ಸಾರಿ ಹೇಳಿ “ಭಾರತೀಯರು ನಮ್ಮ ಸಹೋದರರು, ಭಾರತೀಯರು ನಮ್ಮ ಪ್ರಾಣ. ಭಾರತೀಯ ದೇವ ದೇವತೆಗಳೆಲ್ಲರೂ ನಮ್ಮ ದೇವರು.
ಭಾರತೀಯ ಸಮಾಜ, ನಮ್ಮ ಬಾಲ್ಯದ ತೊಟ್ಟಿಲು, ತಾರುಣ್ಯದ ನಂದನವನ, ವೃದ್ಧಪ್ಯದ ವಾರಾಣಸಿ”. ಸಹೋದರರೆ, ಹೀಗೆ ಸಾರಿ “ಭಾರತ ಭೂಮಿಯೆ ನಮ್ಮ ಪರಂಧಾಮ. ಭಾರತದ ಶುಭವೆ ನಮ್ಮ ಶುಭ.” ಹಗಲೂ ರಾತ್ರಿಯೂ ಇದು ನಿಮ್ಮ ಪ್ರಾರ್ಥನೆಯಾಗಲಿ, “ಹೇ ಗೌರೀನಾಥ, ಹೇ ಜಗನ್ಮಾತೆ, ಪೌರುಷವನ್ನು ಎಮಗೆ ದಯಪಾಲಿಸು. ಹೇ ಸರ್ವಶಕ್ತಿಶಾಲಿನಿ, ನಮ್ಮ ದೌರ್ಬಲ್ಯವನ್ನು ದಹಿಸು. ಕ್ಲೈಬ್ಯವನ್ನು ಹೋಗಲಾಡಿಸು. ನಮ್ಮ ಷಂಡತನವನ್ನು ಹೋಗಲಾಡಿಸಿ, ನಮ್ಮಲ್ಲಿ ವೀರತ್ವವನ್ನು ತುಂಬು.
ಚಿಕಾಗೋದಲ್ಲಿ ಒಬ್ಬ ಕ್ರಿಶ್ಚನ್ನ ಯುವಕರು ತಮ್ಮಗ್ರಂಥವನ್ನು ಭಗವದ್ಗೀತೆಯ ಕೆಳಗಿಟ್ಟು ತಮ್ಮಧರ್ಮ ಶ್ರೇಷ್ಠ ಎಂಬ ಮಂಡುವಾದ ಮಾಡಿದರು. ಆ ಪುಸ್ತಕ ಸರಿಸಿದ ವಿವೇಕಾನಂದರು ಕೆಳಗಿದ್ದ ಪುಸ್ತಕ ವನ್ನು ಕುರಿತು ಎಲ್ಲಾಧರ್ಮಗಳಿಗಿಂತ ಮೂಲ ಧರ್ಮ ನಮ್ಮಧರ್ಮ.ಎಲ್ಲಾ ಧರ್ಮವು ಒಂದೇ ಎಂದು ಹೇಳಿದರು.
ಸಹೋದರ-ಸಹೋದರಿಯರೇ ಎನ್ನುತ್ತಲೇ ನಮ್ಮ ತನ್ನೆಡೆಗೆ ಸೆಳೆಸಿಕೊಂಡು ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು, ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು. ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು 1893 ರಲ್ಲಿ ಚಿಕಾಗೊ ನಗರದಲ್ಲಿ ನಡೆದ ಪ್ರಪಂಚ ಮತಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ “ಅಮೆರಿಕದ ಸಹೋದರ ಸಹೋದರಿಯರೇ” ಎಂಬ ವಾಕ್ಯ ಚಿರಸ್ಮರಣೀಯವಾಗಿದೆ.
‘ವಿಶ್ವದ ಧರ್ಮಗಳ ಸಂಸತ್ತು’ ಸೆಪ್ಟೆಂಬರ್ 11, 1893 ರಂದು ವಿಶ್ವದ ಕೊಲಂಬಿಯನ್ ಪ್ರದರ್ಶನದ ಭಾಗವಾಗಿ ಈಗ ಚಿಕಾಗೋದ, “ಆರ್ಟ್ ಇನ್ಸ್ಟಿಟ್ಯೂಟ್ನ ಶಾಶ್ವತ ಸ್ಮಾರಕ ಕಲಾ ಭವನ” ದಲ್ಲಿ (ವಿಶ್ವದ ಕಾಂಗ್ರೆಸ್ ಸಹಾಯಕ ಕಟ್ಟಡ ಎಂದೂ ಗುರುತಿಸಲ್ಪಟ್ಟಿದೆ) ಪ್ರಾರಂಭವಾಯಿತು. ವಿವೇಕಾನಂದರು ಆ ದಿನ ತಮ್ಮ ಮೊದಲ ಉಪನ್ಯಾಸವನ್ನು ನೀಡಿದರು. ಇವರ ಸರದಿಯನ್ನು ತುಂಬಾ ಮುಂದೂಡುವಿಕೆಯ ನಂತರ ಮಧ್ಯಾಹ್ನದ ಹೊತ್ತಿಗೆ ಇವರ ಸರದಿ ಬಂದಿತು.
ಆರಂಭದಲ್ಲಿ ಅವರು ಆತಂಕಕ್ಕೊಳಗಾಗಿದ್ದರೂ, ಅವರು ಹಿಂದೂ ವಿದ್ಯಾ ದೇವತೆಯಾದ ಸರಸ್ವತಿಗೆ ನಮಸ್ಕರಿಸಿದರು, ಮತ್ತು ಅವರು ತಮ್ಮ ದೇಹದಲ್ಲಿ ಹೊಸ ಶಕ್ತಿಯನ್ನು ಪಡೆದುಕೊಂಡಿರವುದಾಗಿ ಭಾವಿಸಿದರು; ಯಾರೋ ಅಥವಾ ಇನ್ನೊಬ್ಬರು ತಮ್ಮ ದೇಹವನ್ನು ಆಕ್ರಮಿಸಿಕೊಂಡಿದ್ದಾರೆ ಎಂದು ಅವರು ಭಾವಿಸಿದರು- (ಅದು”ದಿ ಸೋಲ್ ಆಫ್ ಇಂಡಿಯಾ, ಋಷಿಯ ಪ್ರತಿಧ್ವನಿ, ರಾಮಕೃಷ್ಣರ ಧ್ವನಿ, ಪುನರುತ್ಥಾನಗೊಂಡ ಸಮಯದ ಚೈತನ್ಯದ ಮುಖವಾಣಿ”) ನಂತರ “ಸಿಸ್ಟರ್ಸ್ ಅಂಡ್ ಬ್ರದರ್ಸ್ ಆಫ್ ಅಮೆರಿಕಾ!” ಎಂದು ಸಂಬೋಧಿಸಿ ಮಾತು ಆರಂಭಿಸಿದರು.
ಈ ಮಾತುಗಳಿಗೆ ಅವರು ಅಲ್ಲಿದ್ದ ಏಳು ಸಾವಿರ ಜನಸಮೂಹದಿಂದ ‘ನಿಂತು ಚಪ್ಪಾಳೆಯ ಮೆಚ್ಚಗೆ ಸೂಚಿಸಿಸ ಗೌರವ’ ಪಡೆದರು, ಅದು ಎರಡು ನಿಮಿಷಗಳ ಕಾಲ ನಡೆಯಿತು. ಮೌನವನ್ನು ಪುನಃಸ್ಥಾಪಿಸಿದಾಗ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. “ವಿಶ್ವದ ಅತ್ಯಂತ ಪ್ರಾಚೀನ ವೈದಿಕ ಕ್ರಮ ಅನುಸರಿಸಿದ ಸನ್ಯಾಸಿಗಳ, ಜಗತ್ತಿಗೆ ಸಹಿಷ್ಣುತೆ ಮತ್ತು ಸಾರ್ವತ್ರಿಕ ಸ್ವೀಕಾರ ಎರಡನ್ನೂ ಕಲಿಸಿದ ಧರ್ಮದ ಪರವಾಗಿ ಅವರು ಯುವ ರಾಷ್ಟ್ರಗಳನ್ನು ಅಭಿನಂದಿಸಿದರು.!” (ಭಾರತಕ್ಕಿಂತ ಅವು ಕಿರಿಯ/ ಯುವ ರಾಷ್ಟ್ಟ್ರಗಳು)
ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು.
‘ಪೂರ್ವ ದೇಶದ ವಿಚಿತ್ರ ಧರ್ಮ’ ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು, ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ ‘ನ್ಯೂಯಾರ್ಕ್’ ಮತ್ತು ‘ಲಂಡನ್’ ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು.
ಇದರ ನಂತರ ಭಾರತಕ್ಕೆ ಮರಳಿ ರಾಮಕೃಷ್ಣ ಮಿಷನ್ ಅನ್ನು ಸ್ಥಾಪಿಸಿದರು. ಹಾಗೆಯೇ “ಆತ್ಮನೋ ಮೋಕ್ಷಾರ್ಥಂ ಜಗದ್ ಹಿತಾಯ ಚ” (ಸ್ವತಃ ಮೋಕ್ಷಕ್ಕಾಗಿ ಮತ್ತು ಜಗತ್ತಿನ ಹಿತಕ್ಕಾಗಿ) ಎಂಬ ತತ್ತ್ವವನ್ನೂ ಸ್ಥಾಪಿಸಿದರು. ಇದು ಈಗ ಭಾರತದ@ ಧಾರ್ಮಿಕ ಸಂಸ್ಥೆಗಳಲ್ಲಿ ಬಹಳ ಹೆಸರು ಮಾಡಿರುವ ಮತ್ತು ಗೌರವಿತ ಸಂಸ್ಥೆಯಾಗಿದೆ.
‘ಸ್ವಾಮಿ ವಿವೇಕಾನಂದ’ರು ದಿವಂಗತರಾದಾಗ ಕೇವಲ 39ವರ್ಷದವರಾಗಿದ್ದರು. ಯುವಕರಿಗೆ ದಾರಿ ದೀಪವಾಗಿದ್ದರು. ಸ್ವಾಮಿ ಅವರ ಭಾಷಣದ ಆಯ್ದ ಭಾಗ ಹೀಗಿದೆ:-“ನಾನು ಮಾಡಿರುವ ಅಲ್ಪ ಕಾರ್ಯ ಕೇವಲ ನನ್ನಲ್ಲಿರುವ ಶಕ್ತಿಯಿಂದಲ್ಲ. ನನ್ನ ಪರಮಮಿತ್ರ ಪ್ರಿಯತಮ ಮಾತೃಭೂಮಿಯಿಂದ ಹೊರಟ ಉತ್ತೇಜನ ಶುಭಾಶಯ ಆಶೀರ್ವಾದಗಳು”.
ಹೀಗೆ ಸ್ವಾಮೀಜಿ ಬಗ್ಗೆ ಬರೆಯುತ್ತಲೋದರೆ ಕೊನೆಯಿಲ್ಲವೇನೋ ಅನ್ನಿಸಿಬಿಡಬಹುದು ವಾ,,,ವ್ ಒಬ್ಬ ಮನುಷ್ಯ ಇಷ್ಟೇಲ್ಲಾ ಸಾಧನೆ ಮಾಡಲಿಕ್ಕೆ ಸಾಧ್ಯವ?ಎಂಬ ಪ್ರಶ್ನೆ ಮೂಡಿತ್ತಾದರು ಯುವಜನತೆಗೆ ಬಹು ಹತ್ತಿರದವರಾಗಬೇಕಾದರೆ ಇಂತಹ ವಿಶೇಷ ಚಿಂತನೆ, ಹಾಗೂ ರಾಷ್ಟ್ರ ಜಾಗೃತಿಯನ್ನು ಚೇತನಗೊಳ್ಳಿಸಿಕೊಳ್ಳುತ್ತಾ ಮಹಾತ್ಮರನ್ನು ಆದರ್ಶನೀಯವಾಗಿ ಸ್ವೀಕರಿಸಬೇಕು ಆಗ ನವಭಾರತ ನಿರ್ಮಾಣ,ಭವ್ಯಭಾರತದ ಸಂಸ್ಕೃತಿಗಳು ಅಜರಾಮರವಾಗಲು ಸಾಧ್ಯ.
–ಕಾರ್ತಿಕ ಆಚಾರ್ಯ.ಕೆ
ಅರೆ ವೈದ್ಯಕೀಯ ವಿದ್ಯಾರ್ಥಿ
ಎಂ.ಕಲ್ಲಹಳ್ಳಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!
-
ದಿನದ ಸುದ್ದಿ6 days ago
ಕೋವಿದ್ ಪ್ರಭಾವಳಿಯಲ್ಲಿ ಪ್ರಭುತ್ವದ ಕ್ರೌರ್ಯ
-
ಲೈಫ್ ಸ್ಟೈಲ್6 days ago
ಪಕ್ಷಿ ಪರಿಚಯ | ಬೆಳ್ಗಣ್ಣ
-
ದಿನದ ಸುದ್ದಿ6 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ದಿನದ ಸುದ್ದಿ7 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ಲೈಫ್ ಸ್ಟೈಲ್6 days ago
ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಪರಿಹಾರ ; ಮಿಸ್ ಮಾಡ್ದೆ ಓದಿ..!
-
ದಿನದ ಸುದ್ದಿ6 days ago
ದಲಿತರಿಗೆ ಪರ್ಯಾಯ ಸಂಸ್ಕೃತಿ ಇಲ್ಲವೆ..?
-
ದಿನದ ಸುದ್ದಿ6 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!