ರಾಜಕೀಯ

ಮೇವು ಹಗರಣ: ಶರಣಾಗುವಂತೆ ಲಾಲುಗೆ ಕೋರ್ಟ್ ಸೂಚನೆ

Published

on

ಸುದ್ದಿದಿನ ಡೆಸ್ಕ್: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಗುರುವಾರ ಆ.30ರಂದು ಜಾಖಂಡ್‍ನ ಉಚ್ಛ ನಾಯಾಲಕ್ಕೆ ಹಾಜರಾಗಿದ್ದಾರೆ. ಅನಾರೋಗ್ಯದ ಇಷ್ಟುದಿನ ಮುಂಬೈನ ಆಸ್ಪತ್ರೆವೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಈಚೆಗೆ ಮನೆಗೆ ತೆರಳಿದ್ದರು. ಮೇವು ಹರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ನೋಟಿಸ್ ನೀಡಿತ್ತು. ಈ ಸಂಬಂಧ ಲಾಲು ಪ್ರಸಾದ್ ಯಾದವ್ ಉಚ್ಛ ನಾಯಾಲಯಕ್ಕೆ ಹಾಜರಾಗಿ ವಿಚಾರಣೆಗೆ ಒಳಪಟ್ಟರು. ಈ ವೇಳೆ ನ್ಯಾಯಾಧೀಶರು ಪೊಲೀಸರಿಗೆ ಶರಣಾಗುವಂತೆ ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಮೇವು ಹಗರಣಕ್ಕೆ ಸಂಭಂಧಿಸಿದಂತೆ ರಾಂಚಿಯ ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರು ಅನಾರೋಗ್ಯದ ಕಾರಣ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಇದ್ದರು.

Leave a Reply

Your email address will not be published. Required fields are marked *

Trending

Exit mobile version